Category: ಸುದ್ದಿ

  • ಶ್ರೀ ವೀರೇಶ್ವರ ಸೇವಾ ಟ್ರಸ್ಟ್‌ನ ನೂತನ ಕಛೇರಿ ಉದ್ಘಾಟನೆ ಹಾಗೂ ಶವ ಸಂಸ್ಕರಿಸಿ ಇಡುವ ಫ್ರೀಜರ್ ಲೋಕಾರ್ಪಣೆ

    ಶ್ರೀ ವೀರೇಶ್ವರ ಸೇವಾ ಟ್ರಸ್ಟ್‌ನ ನೂತನ ಕಛೇರಿ ಉದ್ಘಾಟನೆ ಹಾಗೂ ಶವ ಸಂಸ್ಕರಿಸಿ ಇಡುವ ಫ್ರೀಜರ್ ಲೋಕಾರ್ಪಣೆ

    ಕುಂದಾಪುರ ಮಿರರ್ ಸುದ್ದಿ…

    ಗಂಗೊಳ್ಳಿ : ಗಂಗೊಳ್ಳಿಯ ಶ್ರೀ ವೀರೇಶ್ವರ ಸೇವಾ ಟ್ರಸ್ಟ್‌ನ ನೂತನ ಕಛೇರಿ ಉದ್ಘಾಟನೆ ಹಾಗೂ ಶವ ಸಂಸ್ಕರಿಸಿ ಇಡುವ ಫ್ರೀಜರ್ ಲೋಕಾರ್ಪಣೆ ಕಾರ್ಯಕ್ರಮ ಗಂಗೊಳ್ಳಿಯ ಬಂದರು ಬಸ್ ನಿಲ್ದಾಣದ ಸಮೀಪದ ಕಟ್ಟಡದಲ್ಲಿ ಶುಕ್ರವಾರ ನಡೆಯಿತು.

    ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ಅರ್ಚಕ ಜಿ.ರವೀಶ್ ಭಟ್ ಅವರು ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿ ಶ್ರೀ ವೀರೇಶ್ವರ ಸೇವಾ ಟ್ರಸ್ಟ್‌ನ ನೂತನ ಕಛೇರಿಯನ್ನು ಉದ್ಘಾಟಿಸಿದರು.

    ಇದೇ ಸಂದರ್ಭದಲ್ಲಿ ಶವ ಸಂಸ್ಕರಿಸಿ ಇಡುವ ಫ್ರೀಜರ್‍ನ್ನು ಲೋಕಾರ್ಪಣೆ ಮಾಡಲಾಯಿತು. ಹಿಂಜಾವೇ ಮುಖಂಡ ವಾಸುದೇವ ಗಂಗೊಳ್ಳಿ, ಯಶವಂತ ಗಂಗೊಳ್ಳಿ, ನವೀನ್ ಗಂಗೊಳ್ಳಿ, ಟ್ರಸ್ಟ್ ಅಧ್ಯಕ್ಷ ಅಕ್ಷಯ್, ಕಾರ್ತಿಕ್, ಪ್ರೀತೇಶ್, ಮೋಹನ್, ಮಹೇಶ್ ದಾಕಹಿತ್ಲು ಮೊದಲಾದವರು ಉಪಸ್ಥಿತರಿದ್ದರು.

  • ಪಾಂಡೇಶ್ಚರದಲ್ಲಿ ವಿಶಿಷ್ಟ ರೀತಿಯ ಬೇಸಿಗೆ ಶಿಬಿರ ಆಯೋಜನೆ, ಪುಟಾಣಿ ಮಕ್ಕಳ ಬೇಸಿಗೆ ಕಲರವ

    ಪಾಂಡೇಶ್ಚರದಲ್ಲಿ ವಿಶಿಷ್ಟ ರೀತಿಯ ಬೇಸಿಗೆ ಶಿಬಿರ ಆಯೋಜನೆ, ಪುಟಾಣಿ ಮಕ್ಕಳ ಬೇಸಿಗೆ ಕಲರವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಮಕ್ಕಳ ಭೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಸಹಕಾರಿಯಾಗಲಿದೆ ಎಂದು ಪಾಂಡೇಶ್ವರ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಲಾಕ್ಷಿ ಅಭಿಪ್ರಾಯಪಟ್ಟರು.

    ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಪಾಂಡೇಶ್ವರ, ಪಾಂಡೇಶ್ವರ ಗ್ರಾಮ ಪಂಚಾಯತ್ ಹಾಗೂ ಸಾಸ್ತಾನ ಮಹಿಳಾ ಮಂಡಲ ಪಾಂಡೇಶ್ವರ, ಸ್ನೇಹ ಸಂಜೀವಿನಿ ಒಕ್ಕೂಟ ಪಾಂಡೇಶ್ವರ, ಇವರ ಸಹಯೋಗದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನುದ್ದೇಶಿಸಿ ಮಾತನಾಡಿ ಸರಕಾರ ಮಕ್ಕಳ ಬೇಸಿಗೆ ರಜೆಗೆ ಪೂರಕವಾದ ವಾತಾವರಣವನ್ನು ಶಿಬಿರದ ಮೂಲಕ ನೀಡುತ್ತಿದೆ. ಮನೆಯಲ್ಲೆ ಕಾಲ ಕಳೆಯುವುದಕ್ಕಿಂತ ಶಿಬಿರದ ಮೂಲಕ ನಾನಾ ರೀತಿಯ ಚಟುವಟಿಕೆಗಳಲ್ಲಿ ಭಾಗಿಯಾಗಿ ಕ್ರೀಯಾಶೀಲತೆಯನ್ನು ಮೈಗೂಡಿಸಿಕೊಳ್ಳುವಂತ್ತಾಗುತ್ತದೆ ಈ ದಿಸೆಯಲ್ಲಿ ಇಲ್ಲಿನ ಶಿಬಿರ ಮತ್ತಷ್ಟು ವೈವಿಧ್ಯತೆ ತಾಣವಾಗಿ ಮೂಡಿಬರಲಿ ಎಂದು ಆಶಿಸಿದರು.

    ಶಿಬಿರವನ್ನು ಶಿಬಿರಾರ್ಥಿಗಳಿಂದ ಉದ್ಘಾಟಿಸಲಾಯಿತು.

    ಮುಖ್ಯ ಅಭ್ಯಾಗತರಾಗಿ ಸಾಸ್ತಾನ ಮಹಿಳಾ ಮಂಡಲದ ಅಧ್ಯಕ್ಷೆ ಸುಮಿತ್ರಾ ಸುಧಾಕರ್, ಸಂಜೀವಿನಿ ಮುಖ್ಯ ಬರಹಗಾರ ಉಷಾ ಗಣೇಶ, ಸಂಪನ್ಮೂಲ ವ್ಯಕ್ತಿಯಾಗಿ ಜ್ಞಾನೇಶ್ವರಿ ಉಡುಪ, ಉಪಸ್ಥಿತಿದ್ದರು.

    ಮಕ್ಕಳು ಕವನ ರಚನೆ, ಚುಕ್ಕಿ ರಂಗೋಲಿ, ಉಲ್ಲನ್ ಕ್ರಾಫ್ಟ್ ಮಾಡುವುದು ಸೇರಿದಂತೆ ವಿವಿಧ ರೀತಿಯ ಚಟುವಟಿಕೆಗಳನ್ನು ಶಿಬಿರಾರ್ಥಿಗಳಿಗೆ ನೀಡಲಾಯಿತು. 52 ಮಕ್ಕಳು ಶಿಬಿರದಲ್ಲಿ ಭಾಗಿಯಾದರು.

    ಗ್ರಂಥಾಲಯ ಮೇಲ್ವಿಚಾರಕಿ ಜ್ಯೋತಿ ನಿರೂಪಿಸಿ ಸ್ವಾಗತಿಸಿದರು. ಪಂಚಾಯತ್ ಕಾರ್ಯದರ್ಶಿ ವಿಜಯ ಭಂಡಾರಿ ಧನ್ಯವಾದಗೈದರು.

  • ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 11 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನದೊಂದಿಗೆ ಶೇ 100 ಫಲಿತಾಂಶ

    ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 11 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನದೊಂದಿಗೆ ಶೇ 100 ಫಲಿತಾಂಶ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ :ಶಿಕ್ಷಣ ಜೀವನದ ಸಂಪತ್ತು ಎನ್ನುವುದನ್ನು ಅರಿತ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿ, ಸದೃಢವಾದ, ಸುಸಂಸ್ಕೃತವಾದ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಬೇಕು ಎನ್ನುವ ಸದುದ್ದೇಶದಿಂದ ಅಭೂತಪೂರ್ವ ಜ್ಞಾನವನ್ನು ಧಾರೆಯೆರೆದು ಸೃಜನ ಶೀಲ ಶಿಕ್ಷಣದೊಂದಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿದ್ಯಾರ್ಥಿ ಪ್ರತಿಭೆಗಳನ್ನು ಬೆಳೆಸುತ್ತಿರುವ ಅತ್ಯಂತ ಉನ್ನತವಾದ ಶಿಕ್ಷಣ ಸಂಸ್ಥೆ.

    ಸಂಸ್ಥೆಯಲ್ಲಿ ವಿಜ್ಞಾನ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ಶಿಕ್ಷಣ ಕ್ರಮ ನೀಡಲಾಗುತ್ತಿದ್ದು, ವಿಜ್ಞಾನ ವಿಭಾಗದಲ್ಲಿ PCMB, PCMC ಮತ್ತು PCMS, ವಾಣಿಜ್ಯ ವಿಭಾಗದಲ್ಲಿ EBAC, EBAS ಕೋರ್ಸ್ ಗಳು ಲಭ್ಯ ವಿದೆ.

    ಕಾಲೇಜಿನ ವಿಶೇಷತೆಗಳು:
    *ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಚೇತೋಹಾರಿ ಶಿಕ್ಷಣ

    *ವಿದ್ಯಾರ್ಥಿಗಳಿಗೆ ವಿದ್ಯೆಯ ಸಿರಿಯಾಗಿ, ಪಠ್ಯ, ಪಠ್ಯಪೂರಕ ಹಾಗೂ ಪಠ್ಯೇತರ ಚಟುವಟಿಕೆ ಗಳ ಸರಸ್ವತಿಯ ಮಂದಿರ

    *ಸಾರ್ವಕಾಲಿಕ ದಾಖಲೆಯ ದ್ವಿತೀಯ ಪಿಯುಸಿ ಫಲಿತಾಂಶ

    *100% ಫಲಿತಾಂಶದ ನಿರೀಕ್ಷೆಯಲ್ಲಿ ಸತತ ಬೋಧನೆ

    * ಪರಿಣಿತ ತಜ್ಞರಿಂದ CET, NEET , JEE ಹಾಗೂ CA ಕೋರ್ಸ್ ಗಳಿಗೆ ಕಾಲೇಜು ಅವಧಿಯಲ್ಲಿ ತರಬೇತಿ

    *ವಿದ್ಯಾರ್ಥಿಗಳ ಜ್ಞಾನ ವರ್ಧನೆಗೆ ಗ್ರಂಥಾಲಯ ವ್ಯವಸ್ಥೆ

    *ವಿದ್ಯಾರ್ಥಿಗಳ ಜ್ಞಾನ ಕೌಶಲವನ್ನು ಗಟ್ಟಿ ಗೊಳಿಸಲು ಗುಣಮಟ್ಟದ ಮತ್ತು ಮೌಲ್ಯಯುತ ಶಿಕ್ಷಣ

    *ಸಂತಸದ ಕಲಿಕೆಗೆ ಉತ್ತಮ ಪರಿಸರ

    *ಬೋಧನೆಯಲ್ಲಿ ಆಧುನಿಕ ತಂತ್ರಜ್ಞಾನದ ಸಮರ್ಥ ಬಳಕೆ

    * ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ

    * ಪೋಷಕರ ಹಾಗೂ ಶಿಕ್ಷಕರ ನಿರಂತರ ಸಂಪರ್ಕ

    * ಸರಕಾರ ಮತ್ತು ಸಂಘ ಸಂಸ್ಥೆ ಗಳಿಂದ ದೊರೆಯುವ ವಿವಿಧ ವಿದ್ಯಾರ್ಥಿ ವೇತನ

    *ಪ್ರತಿಯೊಬ್ಬ ವಿದ್ಯಾರ್ಥಿಯ ಬಗ್ಗೆ ವೈಯಕ್ತಿಕ ಗಮನ ಮತ್ತು ಆಪ್ತ ಸಮಾಲೋಚನೆ

    *ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿ ಗಳಿಗೆ ಬೆಳಿಗ್ಗೆ ಮತ್ತು ಸಂಜೆ ವಿಶೇಷ ತರಗತಿ

    *ಕಲಿಕೆಯೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ Bussinss day, Industrial visit.

    * ಮಧ್ಯಾಹ್ನ ದ ಭೋಜನ ವ್ಯವಸ್ಥೆ. ಇನ್ನು ಹತ್ತು ಹಲವು ವಿಶೇಷತೆಗಳು..………

    ಸತತ ದಾಖಲೆಯ ಫಲಿತಾಂಶ :
    2023 – 24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆಯುವುದರ ಮೂಲಕ 11 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ ದೊರಕಿದೆ.

    ವಾಣಿಜ್ಯ ವಿಭಾಗದಲ್ಲಿ ವಿನಯ್ ಶ್ಯಾನುಭಾಗ್ 593 ಅಂಕದೊಂದಿಗೆ ರಾಜ್ಯಕ್ಕೆ 5ನೇ ಸ್ಥಾನ ಪಡೆದು ತಾಲೂಕಿಗೆ ಪ್ರಥಮ ಸ್ಥಾನ.

    ವಿಜ್ಞಾನ ವಿಭಾಗದಲ್ಲಿ ಶ್ರೀಲಕ್ಷ್ಮಿ ಹೆಬ್ಬಾರ್ 593 ಅಂಕದೊಂದಿಗೆ ರಾಜ್ಯಕ್ಕೆ 6 ನೇ ಸ್ಥಾನ ಪಡೆದು ತಾಲೂಕಿಗೆ ಪ್ರಥಮ ಸ್ಥಾನ.
    ಈ ಇಬ್ಬರು ವಿದ್ಯಾರ್ಥಿಗಳು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಪ್ರಥಮ ಸ್ಥಾನಿಗಳಾಗಿ ಅಭೂತಪೂರ್ವ ಸಾಧನೆ ಮೆರೆದಿದ್ದಾರೆ.

    ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಸಂಜನಾ ಹಾಗೂ ಮಾನ್ಯ 592 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 7 ನೇ rank, ಸುಜಯಾ ಎಚ್‌ ಮತ್ತು ಅನಿರುದ್ದ್‌ ಶೇಟ್‌ 591 ಅಂಕಗಳೊಂದಿಗೆ 8 ನೇ rank , ಪೂಜಾ ಕಾರಂತ 590 ಅಂಕಗಳೊಂದಿಗೆ 9ನೇ rank , ನಮ್ರತಾ 589 ಅಂಕಗಳೊಂದಿಗೆ 10 ನೇ rank ಪಡೆದಿರುತ್ತಾರೆ .

    ವಾಣಿಜ್ಯ ವಿಭಾಗದಲ್ಲಿ ಆಯೇಷಾ ಮುಸ್ಕಾನ್ ಮತ್ತು ಸಿಂಚನಾ 590 ಅಂಕಗಳೊಂದಿಗೆ 8ನೇ rank, ಶ್ರದ್ದಾ 588 ಅಂಕಗಳೊಂದಿಗೆ 10 ನೇ rank ಪಡೆದು ರಾಜ್ಯದ ಅಗ್ರ ಸ್ಥಾನಿಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

    229 ವಿದ್ಯಾರ್ಥಿಗಳು ಹಾಜರಾಗಿದ್ದು , ಡಿಸ್ಟಿಂಕ್ಷನ್‌ ನಲ್ಲಿ 182 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 47 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

    ಕಂಪ್ಯೂಟರ್‌ ಸೈನ್ಸ ನಲ್ಲಿ 20, ಸಂಸ್ಕ್ರತದಲ್ಲಿ 19, ಗಣಿತಶಾಸ್ತ್ರ ದಲ್ಲಿ 16, ರಸಾಯನ ಶಾಸ್ತ್ರ ದಲ್ಲಿ 07, ಲೆಕ್ಕಶಾಸ್ತ್ರ ದಲ್ಲಿ 05 ,ಕನ್ನಡದಲ್ಲಿ 04, ಸಂಖ್ಯಾಶಾಸ್ತ್ರದಲ್ಲಿ 03, ಜೀವಶಾಸ್ತ್ರದಲ್ಲಿ 03, ಅರ್ಥಶಾಸ್ತ್ರ ದಲ್ಲಿ 02 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕ ಪಡೆದಿದ್ದಾರೆ.

    2017 – 18 ರಿಂದ ನಮ್ಮ ಕಾಲೇಜು ರಾಜ್ಯ ಮಟ್ಟದಲ್ಲಿ ಇದುವರೆಗೆ 44 rank ಗಳನ್ನು ಪಡೆಯುವುದರ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಬಹು ದೊಡ್ಡ ಕ್ರಾಂತಿ ಮೂಡಿಸುತ್ತಿದೆ.

    ಕೇವಲ ಯಾಂತ್ರಿಕವಾಗಿ ಪಾಠ ಬೋಧಿಸುವ ಶಿಕ್ಷಕರಿಗಿಂತ, ವಿದ್ಯಾರ್ಥಿಗಳ ಬೆಳವಣಿಗೆಯ ವಿವಿಧ ಹಂತಗಳಲ್ಲಿ ಅವರ ಬಂಧನವನ್ನು ನೀಗಿಸಿ ವಿದ್ಯಾರ್ಥಿಗಳ ಕಷ್ಟದಲ್ಲಿ ಭಾಗಿಯಾಗಿ ಸಹಾಯ ಮಾಡುವ ಸ್ನೇಹಿತರಾಗಿ, ಜೀವನದ ನಿಜವಾದ ಮಾರ್ಗ ಕಂಡು ಕೊಳ್ಳಲು ಸಹಾಯ ಮಾಡುವ ಮಾರ್ಗದರ್ಶಕರಿರುವ ಸಂಸ್ಥೆ.

    ಸಾವಿರಾರು ವಿದ್ಯಾರ್ಥಿಗಳ ದಾರಿದೀಪವಾಗಿ ಅವಕಾಶಗಳ ಸ್ವರ್ಗ ವನ್ನು ಸೃಷ್ಟಿಸುತ್ತಿರುವ ಶ್ರೀ ವೆಂಕಟರಮಣ ವಿದ್ಯಾ ದೇಗುಲ.

  • ಕೋಡಿ ಬ್ಯಾರೀಸ್: ಸಿಬಿಎಸ್ಇನಲ್ಲಿ ತ್ರಿಷಾಗೆ 519 ಅಂಕ

    ಕೋಡಿ ಬ್ಯಾರೀಸ್: ಸಿಬಿಎಸ್ಇನಲ್ಲಿ ತ್ರಿಷಾಗೆ 519 ಅಂಕ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಸಿಬಿಎಸ್ಇ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ನ ತ್ರಿಷಾ ಎಂಬ ವಿದ್ಯಾರ್ಥಿನಿ 519 ಅಂಕಗಳನ್ನು ಪಡೆದಿದ್ದಾಳೆ.

    ಈ ಬಾರಿಯ ಸಿಬಿಎಸ್ಇ ಹತ್ತನೇ ತರಗತಿಯ ಪರೀಕ್ಷೆ ಬರೆದ ಒಟ್ಟು 37 ವಿದ್ಯಾರ್ಥಿಗಳ ಪೈಕಿ ತ್ರಿಷಾ, ಎಫ್ ಎಂ ಝಿಫಾನ್, ಶಾಂತಾಶ್ರೀ , ಕೆ ಬಿ ಅಸೀರ ಉನ್ನತ ದರ್ಜೆಯಲ್ಲಿ, 23 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕುಮಾರಿ ತ್ರಿಷಾ 519 ಅಂಕ ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ.

  • ಕೋಟ ಪಂಚವರ್ಣ ರೈತರೆಡೆಗೆ ನಮ್ಮ ನಡಿಗೆ 35ನೇ ಸಾಧಕ ಕೃಷಿಕರಾಗಿ ಪಾರಂಪಳ್ಳಿ ರಮೇಶ್ ಹೇರ್ಳೆ ಆಯ್ಕೆ

    ಕೋಟ ಪಂಚವರ್ಣ ರೈತರೆಡೆಗೆ ನಮ್ಮ ನಡಿಗೆ 35ನೇ ಸಾಧಕ ಕೃಷಿಕರಾಗಿ ಪಾರಂಪಳ್ಳಿ ರಮೇಶ್ ಹೇರ್ಳೆ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 35ರ ಸಂಭ್ರಮ, ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಮೇ.18ರ ಸಂಜೆ.4.30ಗ ನಡೆಯಲಿದ್ದು ಕೃಷಿ ಮತ್ತು ಹೈನುಗಾರಿಕೆ ಕೃಷಿ ಕಾಯಕದಲ್ಲಿ ವಿವಿಧ ಬಗೆಯ ವಿಶಿಷ್ಟ ಸಾಧನೆಗೈದ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಪಾರಂಪಳ್ಳಿ ರಮೇಶ್ ಹೇರ್ಳೆ ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿದ್ದಾರೆ.

  • ಹೆಬ್ರಿ :ಎಸ್‌.ಎಸ್‌.ಎಲ್‌.ಸಿ. ಫಲಿತಾಂಶ: ಹೆಬ್ರಿ ತಾಲೂಕಿಗೆ ಪ್ರಥಮ ಸಾಧಕಿಗೆ ಸನ್ಮಾನ

    ಹೆಬ್ರಿ :ಎಸ್‌.ಎಸ್‌.ಎಲ್‌.ಸಿ. ಫಲಿತಾಂಶ: ಹೆಬ್ರಿ ತಾಲೂಕಿಗೆ ಪ್ರಥಮ ಸಾಧಕಿಗೆ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ನಮ್ಮ ನಾಡ ಒಕ್ಕೂಟ (ರಿ)ಹೆಬ್ರಿ ಘಟಕದ ವತಿಯಿಂದ 2023-24ನೇ ಯ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ಆಂಗ್ಲ ಮಾಧ್ಯಮ ವಿಭಾಗದ ವಿದ್ಯಾರ್ಥಿನಿ ಹಾಗೂ ಹೆಬ್ರಿ ಮಠದ ಬೆಟ್ಟು ನಿವಾಸಿ ಅನ್ವರ್ ರಪೀ ಹಾಗೂ ಆಯಿಶಾ ಬಾನುರವರ ಪುತ್ರಿ ಶಿಫಾವ್ರವರಿಗೆ ಅಭಿನಂದನೆ ಕಾರ್ಯಕ್ರಮ ಹೆಬ್ರಿ ಅನ್ವರ್ ರಫಿಯವರ ಮನೆಯಲ್ಲಿ ಇತ್ತೀಚೆಗೆ ನಮ್ಮ ನಾಡ ಒಕ್ಕೂಟ ಹೆಬ್ರಿ ಘಟಕದ ಪ್ರದಾನ ಕಾರ್ಯದರ್ಶಿ ಅಬ್ದುಲ್ ಶುಕುರ್ ಬೆಳ್ವೆ ಯವರ ನೇತೃತ್ವದಲ್ಲಿ ನಡೆಯಿತು. 625 ರಲ್ಲಿ 612ಅಂಕ ( ಶೇ.97.92% ) ಪಡೆದು ವಿಶೇಷ ಸಾಧನೆ ಮಾಡಿ, ಹೆಬ್ರಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಹಿಂದಿ ಮತ್ತು ಸಮಾಜ ವಿಜ್ಞಾನದಲ್ಲಿ ೧೦೦ ಅಂಕ ಪಡೆದಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಹೆಬ್ರಿ ಘಟಕದ ಕೋಶಾಧಿಕಾರಿ ಅಬ್ದುಲ್ ಅಝೀಝ್ ಮುನೀಯಲ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅರಾಫತ್ ಅಲ್ಬಾಡಿ, ಜಿಲ್ಲಾ ಸಮಿತಿ ಸದಸ್ಯ ಮೊಹಮ್ಮದ್ ರಯನ್ ಹೆಬ್ರಿ ಘಟಕದ ಸದಸ್ಯ ಜಿಫ್ರಿ ಸಾಹೇಬ್ ಬೆಳ್ವೆ, ಸ್ಥಳೀಯರಾದ ಮುಸ್ತಾಫಾ , ಹಸನಬ್ಬ ಮೊದಲಾದವರು ಉಪಸ್ಥಿರಿದ್ದರು .ರಯನ್ ಕಿರಾತ ಪಠಿಸಿದರು, ಫಾರಿಸ್ ಸ್ವಾಗತಿಸಿದರು, ಜಾಸಿಮ್ ವಂದಿಸಿದರು ಅರಾಫತ್ ಕಾರ್ಯಕ್ರಮ ನಿರೂಪಿಸಿದರು.

  • ಕುಂದಾಪುರ :ಸರ್ಕಾರಿ ಪ್ರೌಢ ಶಾಲೆ ಕಾಳಾವರ ಎಸ್.ಎಸ್.ಎಲ್.ಸಿ “ಎ” ಶ್ರೇಣಿ ಫಲಿತಾಂಶ

    ಕುಂದಾಪುರ :ಸರ್ಕಾರಿ ಪ್ರೌಢ ಶಾಲೆ ಕಾಳಾವರ ಎಸ್.ಎಸ್.ಎಲ್.ಸಿ “ಎ” ಶ್ರೇಣಿ ಫಲಿತಾಂಶ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ :ಸರ್ಕಾರಿ ಪ್ರೌಢ ಶಾಲೆ ಕಾಳಾವರ ಎಸ್.ಎಸ್.ಎಲ್.ಸಿ “ಎ” ಶ್ರೇಣಿ ಫಲಿತಾಂಶ. ಒಟ್ಟು 47 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆ ಶೇಕಡಾ 97.87 ಫಲಿತಾಂಶ ಪಡೆದಿರುತ್ತದೆ. ದೀಕ್ಷಾ 603 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿರುತ್ತಾಳೆ. ವಿಶಿಷ್ಟ ಶ್ರೇಣಿಯಲ್ಲಿ ಒಟ್ಟು 13 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 25 ವಿದ್ಯಾರ್ಥಿಗಳು ಹಾಗೂ ಉಳಿದ 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಯು 85.11 ಗುಣಾತ್ಮಕ ಫಲಿತಾಂಶ ಹೊಂದಿ “ಎ” ಶ್ರೇಣಿ ಪಡೆದಿರುತ್ತದೆ.

  • ಕುಂದಾಪುರ :ಪರಿಸರ ಪ್ರೇಮಿ, ಸ್ತ್ರೀ ರೋಗ ತಜ್ಞ ಡಾ. ಹೆಚ್.ಎಸ್.ಮಲ್ಲಿ ನಿಧನ

    ಕುಂದಾಪುರ :ಪರಿಸರ ಪ್ರೇಮಿ, ಸ್ತ್ರೀ ರೋಗ ತಜ್ಞ ಡಾ. ಹೆಚ್.ಎಸ್.ಮಲ್ಲಿ ನಿಧನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕುಂದಾಪುರದ ಪ್ರಸಿದ್ಧ ವೈದ್ಯ, ಪರಿಸರ ಪ್ರೇಮಿ, ಪಕ್ಷಿ ತಜ್ಞ, ಯೆಡ್ತೆರೆ ನರ್ಸಿಂಗ್ ಹೋಂ ಮಾಲೀಕ, ರೊಟೇರಿಯನ್ ಡಾ. ಹೆಚ್. ಶುಭೋದ್ ಕುಮಾರ್ (ಹೆಚ್.ಎಸ್.ಮಲ್ಲಿ) ಮಲ್ಲಿ ವಯೋಸಹಜವಾಗಿ ಸೋಮವಾರ ರಾತ್ರಿ ನಿಧನರಾದರು.

    ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಡಾ. ಮಲ್ಲಿ, ಪರಿಸರ ಪ್ರೇಮಿಯಾಗಿದ್ದವರು. ಪಕ್ಷಿ ಸಂಕುಲ, ಪ್ರಕೃತಿ ನಿಸರ್ಗ ಸಾಮಾಜಿಕ ಸ್ವಾಸ್ತ್ಯದ ಕುರಿತು ಅಪಾರ ಕಾಳಜಿ ಹಾಗೂ ಕಳಕಳಿ ಹೊಂದಿದ್ದ ಅವರು, ಸಾಕಷ್ಟು ಅಧ್ಯಯನ ನಡೆಸಿ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಸ್ತ್ರೀ ರೋಗ ತಜ್ಞರಾಗಿಯೂ ಸೇವೆ ಸಲ್ಲಿಸಿದ್ದ ಡಾ. ಮಲ್ಲಿ, ರೋಟರಿ ಕ್ಲಬ್ ಸದಸ್ಯರಾಗಿವಿವಿಧ ಹುದ್ದೆಗಳನ್ನು ಅಲಂಕರಿಸಿ ಸಾಮಾಜಿಕ ಸೇವೆ ಮಾಡಿದ್ದಾರೆ. ಕುಂದಾಪುರದ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಉಚಿತವಾಗಿ ಸೇವೆ ಸಲ್ಲಿಸಿದ್ದಾರೆ.

    ಮೃತರು ಪತ್ನಿ, ಇಬ್ಬರು ವಿವಾಹಿತ ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಅವರ ‘ಮನೋರಮಾ’ ಮನೆಯಲ್ಲಿ ವೀಕ್ಷಿಸಿಲು ಸಂಜೆ 4 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

  • ಕುಂದಾಪುರ :ಬಿ. ಬಿ. ಹೆಗ್ಡೆ ಕಾಲೇಜು: ಪ್ರಶಸ್ತಿ ಪ್ರದಾನ ಕಾರ್ಯಕ್ರಮ

    ಕುಂದಾಪುರ :ಬಿ. ಬಿ. ಹೆಗ್ಡೆ ಕಾಲೇಜು: ಪ್ರಶಸ್ತಿ ಪ್ರದಾನ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮೇ 11, 2024ರಂದು ಕಾಲೇಜಿನ ಬಿ.ಎಮ್.ಎಸ್. ಕ್ರೀಡಾಂಗಣದ ತೆರೆದ ಸಭಾಂಗಣದಲ್ಲಿ ನಡೆಯಿತು.

    ಕಾಲೇಜಿನಲ್ಲಿ 2023-24 ಶೈಕ್ಷಣಿಕ ಸಾಲಿನಲ್ಲಿ ಹಮ್ಮಿಕೊಂಡ ವಿವಿಧ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಕುಂದಾಪುರದ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಆದರ್ಶ್ ಹೆಬ್ಬಾರ್‌ರವರು ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಅಭಿನಂದನೆ ಕೋರಿ ಪ್ರಶಸ್ತಿ ಪ್ರದಾನ ಮಾಡಿದರು.

    ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಯೋಗೀಶ್ ಶಾನುಭೋಗ್ ಹಾಗೂ ರೇಷ್ಮಾ ಶೆಟ್ಟಿಯವರು ಪ್ರಶಸ್ತಿ ವಿಜೇತರ ಪಟ್ಟಿ ವಾಚಿಸಿದರು.

    ಪ್ರಾಧ್ಯಾಪಕರಾದ ರಶ್ಮಿ ಗಾವಡಿ ವಂದಿಸಿ, ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿದರು. 2023-24 ಶೈಕ್ಷಣಿಕ ಸಾಲಿನ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಗ್ರ ಚಾಂಪಿಯನ್ ಆಗಿ ಅಂತಿಮ ಬಿಸಿಎ, ರನ್ನರ್ ಅಪ್ ಆಗಿ ಪ್ರಥಮ ಬಿಬಿಎ ಹಾಗೂ ತೃತೀಯ ಸ್ಥಾನವನ್ನು ದ್ವಿತೀಯ ಬಿಬಿಎ ಪಡೆದುಕೊಂಡಿತು.

  • ಕೋಟ :ಮನಸೆಳೆದ ಸುದರ್ಶನ ಗರ್ವಭಂಗ ಯಕ್ಷಗಾನ

    ಕೋಟ :ಮನಸೆಳೆದ ಸುದರ್ಶನ ಗರ್ವಭಂಗ ಯಕ್ಷಗಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟದ ಹಂದೆ ಶ್ರೀ ಮಹಾವಿಷ್ಣು ಶ್ರೀ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುವಾರ ನಡೆದ ಬೆಂಗಳೂರಿನ ಯಕ್ಷದೇಗುಲ ತಂಡದ ಸಂಯೋಜನೆಯಲ್ಲಿ ಮಧುಕುಮಾರ್ ಬೋಳೂರು ವಿರಚಿತ ಸುದರ್ಶನ ಗರ್ವಭಂಗ ಯಕ್ಷಗಾನ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಕೆ. ಮೋಹನ್ ನಿರ್ದೇಶನದಲ್ಲಿ ನಡೆದ ಯಕ್ಷಗಾನದಲ್ಲಿ ಹಿಮ್ಮೇಳದ ಭಾಗವತರಾಗಿ ಲಂಬೋದರ ಹೆಗಡೆ, ಮದ್ದಳೆ ವಾದನದಲ್ಲಿ ರಾಘವೇಂದ್ರ ಹೆಗಡೆ, ಚಂಡೆಯಲ್ಲಿ ಶಿವಾನಂದ ಕೋಟರವರು ಅದ್ಭುತವಾಗಿ ಕಾರ್ಯನಿರ್ವಹಿಸಿದರು.

    ಮುಮ್ಮೇಳದಲ್ಲಿ ಸುದರ್ಶನನಾಗಿ ಯುವ ಪ್ರತಿಭಾನ್ವಿತ ಕಲಾವಿದ ಉದಯ ಹೆಗಡೆ ಕಡಬಾಳ, ಶತ್ರು ಪ್ರಸೂದನನಾಗಿ ಯಕ್ಷಗಾನ ವಿದ್ವಾಂಸರಾದ ಸುಜಯೀಂದ್ರ ಹಂದೆ, ವಿಷ್ಣು ಮತ್ತು ಲಕ್ಷ್ಮೀ ಆಗಿ ಯುವ ಕಲಾವಿದರಾದ ಆದಿತ್ಯ ಭಟ್ ಮತ್ತು ಸ್ಫೂರ್ತಿ ಭಟ್, ದೇವೆಂದ್ರನಾಗಿ ಪ್ರಖ್ಯಾತ ಕಲಾವಿದ ತಮ್ಮಣ್ಣ ಗಾಂವ್ಕರ್‍ರವರು ನಿರ್ವಹಿಸಿದರು. ರಂಗದ ಹಿಂದೆ ರಾಜು ಪೂಜಾರಿ ಹಂದಟ್ಟು, ನಾಗರಾಜ ಪೂಜಾರಿ ಹಂದಟ್ಟು ಸಹಕಾರ ನೀಡಿದರು. ಎಲ್ಲ ಕಾರ್ಯಕ್ರಮದ ಸಂಯೋಜನೆಯನ್ನು ಕೋಟ ಸುದರ್ಶನ ಉರಾಳರು ನಿರ್ವಹಿಸಿದರು. ಒಟ್ಟಿನಲ್ಲಿ ಸುದರ್ಶನ ಗರ್ವಭಂಗ ಯಕ್ಷಗಾನ ಪ್ರದರ್ಶನ ಎಲ್ಲರಿಂದ ಮೆಚ್ಚುಗೆ ಪಡೆಯಿತು.