Category: ಸುದ್ದಿ

  • ಕುಂದಾಪುರ :ಜೆಇಇ ಮೈನ್ಸ್ 2ನೇ ಪ್ರವೇಶ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನದೊಂದಿಗೆ ಜಿಲ್ಲೆಯಲ್ಲಿಯೇ ವಿಶಿಷ್ಟ ಸಾಧನೆ ಮೆರೆದ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

    ಕುಂದಾಪುರ :ಜೆಇಇ ಮೈನ್ಸ್ 2ನೇ ಪ್ರವೇಶ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನದೊಂದಿಗೆ ಜಿಲ್ಲೆಯಲ್ಲಿಯೇ ವಿಶಿಷ್ಟ ಸಾಧನೆ ಮೆರೆದ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ 2ನೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ಜೆಇಇ ಮೈನ್ಸ್ 2024 ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಬಿ.ಆರ್ಚ್(99.744) ಪರ್ಸಂಟೈಲ್ ಪಡೆದು ಜಿಲ್ಲೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾಳೆ.

    ಜೆಇಇ 2ನೇ ಪ್ರವೇಶ ಪರೀಕ್ಷೆಯಲ್ಲಿ ಕ್ರಮವಾಗಿ ಪ್ರಣವ್ ಅಡಿಗ 95.33 ಪರ್ಸಂಟೈಲ್( 97.12) ಪರ್ಸಂಟೈಲ್(ಭೌತಶಾಸ್ತ್ರ)ಆದಿತ್ಯ ಸಿ.ಚಂದನ್ 95.97 ಪರ್ಸಂಟೈಲ್, ಆಕಾಶ್ ಹೆಬ್ಬಾರ್ 95.84, ಲಲನ್ ಪಿ. 93.15 ಪರ್ಸಂಟೈಲ್,ಪ್ರಜ್ವಲ್ ಎಸ್.ಪೂಜಾರಿ 93.02 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

    ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.

  • ಕುಂದಾಪುರ :ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ – ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಲಾವಣ್ಯ, ಕುಂದಾಪುರ, ಬೈಂದೂರು ತಾಲೂಕಿಗೆ ಪ್ರಥಮ ರ್ಯಾಂಕ್ ಹಾಗೂ 12 ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ್ಯಾಂಕ್

    ಕುಂದಾಪುರ :ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ – ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಲಾವಣ್ಯ, ಕುಂದಾಪುರ, ಬೈಂದೂರು ತಾಲೂಕಿಗೆ ಪ್ರಥಮ ರ್ಯಾಂಕ್ ಹಾಗೂ 12 ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ್ಯಾಂಕ್

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಲಾವಣ್ಯ592(ವಾಣಿಜ್ಯ ವಿಭಾಗ) ಕುಂದಾಪುರ ತಾಲೂಕಿಗೆ ಪ್ರಥಮ ರ್ಯಾಂಕ್,ಜಿಲ್ಲೆಗೆ ತ್ರತೀಯ ರ್ಯಾಂಕ್,ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದು ಸಾಧನೆ ಮಾಡುವುದರ ಮೂಲಕ ಒಟ್ಟು 12 ವಿದ್ಯಾರ್ಥಿಗಳು ಅತ್ಯದಿಕ ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿರುತ್ತಾರೆ.ಕ್ರಮವಾಗಿ ಲಾವಣ್ಯ 592(ವಾಣಿಜ್ಯ ವಿಭಾಗ),ಪ್ರತೀಕ್ಷಾ 589 (ವಾಣಿಜ್ಯ ವಿಭಾಗ),ಪ್ರಜ್ವಲ್ ಪೂಜಾರಿ 588 (ವಿಜ್ಞಾನ ವಿಭಾಗ),ಪವಿತ್ರಾ 588(ವಿಜ್ಞಾನ ವಿಭಾಗ),ಐಶ್ವರ್ಯ ವೈದ್ಯ 587(ವಿಜ್ಞಾನ ವಿಭಾಗ),ರಿಷಿಕಾ ಮೊಂಟೆರೋ 585(ವಿಜ್ಞಾನ ವಿಭಾಗ),ಪ್ರಜ್ವಲ್ ದೇವಾಡಿಗ 584 (ವಿಜ್ಞಾನ ವಿಭಾಗ),ಕ್ಷಮಾ ಪಡಿಯಾರ್ 582(ವಿಜ್ಞಾನ ವಿಭಾಗ),ದೀಪಿಕಾ 581(ವಿಜ್ಞಾನ ವಿಭಾಗ), ಸಿಂಧು 581(ವಾಣಿಜ್ಯ ವಿಭಾಗ), ಕೌಶಲ್ ಆಚಾರ್ಯ 580 (ವಾಣಿಜ್ಯ ವಿಭಾಗ),ಶ್ರೀಶ ಶೆಟ್ಟಿ 580(ವಿಜ್ಞಾನ ವಿಭಾಗ)
    ,ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

  • ಉಡುಪಿ :ಲೋಕಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನಡೆಸಲು ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ : ವಿದ್ಯಾ ಕುಮಾರಿ .ಕೆ

    ಉಡುಪಿ :ಲೋಕಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನಡೆಸಲು ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ : ವಿದ್ಯಾ ಕುಮಾರಿ .ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 2024ರ ಸಾರ್ವತ್ರಿಕ ಚುನಾವಣೆಯು ಶಾಂತಿಯುತವಾಗಿ ನಡೆಯಲು ಸಹಕರಿಸಿದ ಎಲ್ಲಾ ಅಭ್ಯರ್ಥಿಗಳಿಗೆ, ರಾಜಕೀಯ ಪಕ್ಷದವರಿಗೆ ,ಸಾರ್ವಜನಿಕರಿಗೆ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಸೇರಿದಂತೆ ಪ್ರತಿಯೊಬ್ಬರಿಗೂ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ . ಕೆ ರವರು ಕೃತಜ್ಞತೆ ಸಲ್ಲಿಸಿದ್ದಾರೆ.

  • ಕುಂದಾಪುರ :ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯ ಮಾಪನ – ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಅವಿಭಜಿತ ತಾಲೂಕಿನಲ್ಲಿ ಪ್ರಥಮ. 11 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ರ್ಯಾಂಕ್

    ಕುಂದಾಪುರ :ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯ ಮಾಪನ – ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಅವಿಭಜಿತ ತಾಲೂಕಿನಲ್ಲಿ ಪ್ರಥಮ. 11 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ರ್ಯಾಂಕ್

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಅವಿಭಜಿತ ತಾಲೂಕಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು, 11 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 ಸ್ಥಾನ ಪಡೆಯುವುದರ ಮೂಲಕ ಸಾಧನೆ ಮೆರೆದಿದೆ.

    ವಾಣಿಜ್ಯ ವಿಭಾಗದಲ್ಲಿ ವಿನಯ್ ಶ್ಯಾನುಭಾಗ್ 593 ಅಂಕದೊಂದಿಗೆ ರಾಜ್ಯಕ್ಕೆ 5ನೇ ಸ್ಥಾನ ಪಡೆದು ತಾಲೂಕಿಗೆ ಪ್ರಥಮ ಸ್ಥಾನ.

    ವಿಜ್ಞಾನ ವಿಭಾಗದಲ್ಲಿ ಶ್ರೀ ಲಕ್ಷ್ಮಿ ಹೆಬ್ಬಾರ್ 593 ಅಂಕದೊಂದಿಗೆ ರಾಜ್ಯಕ್ಕೆ 6 ನೇ ಸ್ಥಾನ ಪಡೆದು ತಾಲೂಕಿಗೆ ಪ್ರಥಮ ಸ್ಥಾನ.

    ಈ ಇಬ್ಬರು ವಿದ್ಯಾರ್ಥಿಗಳು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಅಭೂತಪೂರ್ವ ಸಾಧನೆ ಮೆರೆದಿದ್ದಾರೆ.

    ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಸಂಜನಾ ಹಾಗೂ ಮಾನ್ಯ 592 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 7 ನೇ ರ್ಯಾಂಕ್, ಸುಜಯಾ ಎಚ್‌ ಮತ್ತು ಅನಿರುದ್ದ್‌ ಶೇಟ್‌ 591 ಅಂಕಗಳೊಂದಿಗೆ 8ನೇ ರ್ಯಾಂಕ್, ಪೂಜಾ ಕಾರಂತ 590 ಅಂಕಗಳೊಂದಿಗೆ 9ನೇ ರ್ಯಾಂಕ್, ನಮ್ರತಾ 589 ಅಂಕಗಳೊಂದಿಗೆ 10 ನೇ ರ್ಯಾಂಕ್ ಪಡೆದಿರುತ್ತಾರೆ .

    ವಾಣಿಜ್ಯ ವಿಭಾಗದಲ್ಲಿ ಆಯೇಷಾ ಮುಸ್ಕಾನ್ ಮತ್ತು ಸಿಂಚನಾ 590 ಅಂಕಗಳೊಂದಿಗೆ 8ನೇ ರ್ಯಾಂಕ್, ಶ್ರದ್ದಾ 588 ಅಂಕಗಳೊಂದಿಗೆ 10 ನೇರ್ಯಾಂಕ್ ಪಡೆದು ರಾಜ್ಯದ ಅಗ್ರ ಸ್ಥಾನಿಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

    ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

  • ಕುಂದಾಪುರ :ಮತದಾನದ ಮೂಲಕ ಸಾಂವಿಧಾನಿಕ ಹಕ್ಕು ಪಡೆದುಕೊಳ್ಳಿ – ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ

    ಕುಂದಾಪುರ :ಮತದಾನದ ಮೂಲಕ ಸಾಂವಿಧಾನಿಕ ಹಕ್ಕು ಪಡೆದುಕೊಳ್ಳಿ – ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಮತ ಚಲಾಯಿಸುವುದೆಂದರೆ ಸರ್ಕಾರವನ್ನು ಪ್ರಶ್ನಿಸುವ ಮತ್ತು ನಮ್ಮ ಸಮಸ್ಯೆಗಳನ್ನು ಸರ್ಕಾರದ ಮುಂದಿಡಲು ನಮಗಿರುವ ನೈತಿಕ ಅವಕಾಶ ಎನ್ನುವುದನ್ನು ಪ್ರತಿಯೊಬ್ಬ ಮತದಾರ ಅರ್ಥಮಾಡಿಕೊಳ್ಳಬೇಕು ಎಂದು ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ್ ಸಂಸ್ಥೆಯ ಚೇರ್ಮನ್ ಹಾಗೂ ಆಡಳಿತ ನಿರ್ದೇಶಕ, ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು

    ಅವರು ತಮ್ಮ ತವರೂರಾದ ವಕ್ವಾಡಿಯ ಸರಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದರು. ಪ್ರತಿಯೊಬ್ಬರೂ ಮತದಾನಕ್ಕೆ ಮುಂಚೆ ಯೋಚಿಸಿ ಮತ ಚಲಾಯಿಸಿ. ಸುಭದ್ರ ಆಡಳಿತಕ್ಕೆ ಪ್ರತಿಯೊಬ್ಬರ ಮತವೂ ಅಗತ್ಯ. ಯಾರೂ ನಿರ್ಲಕ್ಷ್ಯ ಮಾಡದೇ ಮತದಾನ ಮಾಡಿ ಎಂದರು.

  • ಕೋಟ :ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತದಾನ

    ಕೋಟ :ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತದಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಲೋಕಸಭಾ ಸಭಾ ಚುನಾವಣೆಯ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ‌ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಮ್ಮ ಮತ ಕ್ಷೇತ್ರವಾದ ಕೋಟದ ದಲ್ಲಿರುವ ಕೋಟತಟ್ಟು ಗ್ರಾಮ ಪಂಚಾಯತ್ ನ ಮತಗಟ್ಟೆ ಸಂಖ್ಯೆ 165 ರಲ್ಲಿ ಬೆಳಿಗ್ಗೆ 7.30 ಗಂಟೆಗೆ ಮತದಾನ ಮಾಡಿದರು.

    ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಕೋಟ ಶ್ರೀನಿವಾಸ ಪೂಜಾರಿ, ಪತ್ನಿ ಶಾಂತ ಹಾಗೂ ಪುತ್ರಿ ಶೃತಿ ಅವರೊಂದಿಗೆ ಮತಗಟ್ಟೆಗೆ ಬಂದು ಮತದಾನ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಕ್ಷೇತ್ರದ ಜನತೆ ರಾಷ್ಟ್ರೀಯ ಐಕ್ಯತೆ ಮತ್ತು ಭದ್ರತೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಾರೆ ಆ ನಿಟ್ಟಿನಲ್ಲಿ ಅತ್ಯಂತ ಅಧಿಕ ಸಂಖ್ಯೆಯಲ್ಲಿ ಮತದಾರರು ನನ್ನ ಕೈ ಹಿಡಿಯುತ್ತಾರೆ ಎನ್ನುವ ಭರವಸೆ ಇದೆ ಎಂದರು.

  • ಕುಂದಾಪುರ :ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮತದಾನ

    ಕುಂದಾಪುರ :ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮತದಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಲೋಕಸಭಾ ಸಭಾ ಚುನಾವಣೆಯ ಎರಡನೇ ಹಂತದ‌ ಮತದಾನ ಇಂದು ಆರಂಭಗೊಂಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ‌ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ತಮ್ಮ ಸ್ವಗೃಹದ ಸಮೀಪದ ಕೊರ್ಗಿ ಶ್ರೀಮತಿ ಗಿರಿಜಾ ಚಂದ್ರಶೇಖರ ಹೆಗ್ಡೆ ಸರ್ಕಾರಿ ಹಿರಿಯ ಪ್ರ ಮತಗಟ್ಟೆ ಸಂಖ್ಯೆ 97ರಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು.

    ಸರತಿ ಸಾಲಿನಲ್ಲಿ ಮೊದಲ ಸರತಿಯಲ್ಲಿ‌ನಿಂತು ಮತದಾನ ಮಾಡಿದ ಕೆ. ಜಯಪ್ರಕಾಶ್ ಹೆಗ್ಡೆಯವರು ಮತಗಟ್ಟೆ ಸಂಖ್ಯೆ ರಲ್ಲಿ ಸಹೋದರಿಯರಾದ ಸರೋಜಿನಿ ಹೆಗ್ಡೆ ಹಾಗೂ ಶಶಿಕಲಾ ಹೆಗ್ಡೆ ಜೊತೆಗೆ ಬಂದು ಮತದಾನ ಮಾಡಿದರು.

    ಈ‌ ಸಂದರ್ಭ ಅವರು ಈ ಬಾರಿ ಉತ್ತಮ ವಾತಾವರಣವಿದ್ದು, ಮತದಾರರು ಕ್ಷೇತ್ರದಿಂದಡೆ ಬೆಂಬಲ ವ್ಯಕ್ತಪಡಿಸಿರುವುದು ಸಂತೋಷದೊಂದಿಗೆ ಅಲ್ಲದೆ ಈ ಚುನಾವಣೆಯಲ್ಲಿ ನಾನು ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದರು.

  • ಕುಂದಾಪುರ: ಬಡಗುತಿಟ್ಟಿನ ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

    ಕುಂದಾಪುರ: ಬಡಗುತಿಟ್ಟಿನ ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಬಡಗುತಿಟ್ಟಿನ ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

    ಪೆರ್ಡೂರು ಮೇಳದಲ್ಲಿ 28 ವರ್ಷಗಳಲ್ಲಿ ಕಾಲ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ ಅವರು, ಅದಕ್ಕೂ ಮುನ್ನ ಕೋಟ ಅಮೃತೇಶ್ವರಿ ಮೇಳದಲ್ಲಿ ಕೂಡಾ ಸೇವೆ ಸಲ್ಲಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳದ ರಂಗಂಮಚವೇರಿದವರು ಯಶಸ್ಸಿನ ಶಿಖರ ತಲುಪಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು.

    ಧಾರೇಶ್ವ ರ ಭಾಗವತರು ಎಂದೇ ಖ್ಯಾ ತರಾದ ಸುಬ್ರಹ್ಮಣ್ಯ ಧಾರೇಶ್ವರ ಸುಮಾರು 40 ವರ್ಷಗಳಿಂದ ಅನುಭವವುಳ್ಳರು. ಹಂಗಾರಕಟ್ಟೆ ಯಕ್ಷಗಾನ ಭಾಗವತಿಗೆ ಕೇಂದ್ರದಲ್ಲಿ ನಾರ್ಣಪ್ಪ ಉಪ್ಪೂರರ ಶಿಷ್ಯರಾಗಿದ್ದರೂಸುಬ್ರಹ್ಮಣ್ಯ ಧಾರೇಶ್ವರ ಅಮೃತೇಶ್ವರಿ ಯಕ್ಷಗಾನಮೇಳವನ್ನುಸೇರಿದ್ದು ಭಾಗವತರಾಗಿ ಅಲ್ಲ . ಎಲೆಕ್ಟ್ರಿ ಷಿಯನ್ ಆಗಿ. ಗೋಕರ್ಣದಲ್ಲಿ ಎಲೆಕ್ಟ್ರಿ ಕಲ್ ಅಂಗಡಿ ಇಟ್ಟು ಕೊಂಡಿದ್ದ , ನಾಟಕದ ಸಖ್ಯ ವನ್ನೂ ಹೊಂದಿದ್ದ ಸುಬ್ರಹ್ಮಣ್ಯ ಒಂದೆರಡು ಹಿಂದೂಸ್ತಾನಿ ರಾಗಗಳ ಪರಿಚಯವನ್ನೂ ಹೊಂದಿದ್ದರು. ಅದೇ ಅವರನ್ನು ಯಕ್ಷಗಾನ ರಂಗಕ್ಕೆ ಕರೆದು ತಂದಿತು.ಪ್ರಾಚಾರ್ಯ ನಾರಣಪ್ಪ ಉಪ್ಪೂರರ ಮೂಲಕ ರಂಗಸ್ಥಳದ ಮೇಲೇರಿದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು.ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳ ತಿರುಗಾಟ ನಿಲ್ಲಿಸಿದ್ದರು.

    ಪೆರ್ಡೂರು ಮೇಳದಲ್ಲಿ 28 ವರ್ಷಗಳಲ್ಲಿ ಕಾಲ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ ಅವರು, ಅದಕ್ಕೂ ಮುನ್ನ ಕೋಟ ಅಮೃತೇಶ್ವರಿ ಮೇಳದಲ್ಲಿ ಕೂಡಾ ಸೇವೆ ಸಲ್ಲಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳದ ರಂಗಂಮಚವೇರಿದವರು ಯಶಸ್ಸಿನ ಶಿಖರ ತಲುಪಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು.

  • ಪ್ರಾಮಿಸ್ಡ್ ನೇಷನ್’ ಪ್ರಧಾನಿಗೆ ಅರ್ಪಣೆ ಹುಬ್ಬಳ್ಳಿಯ ‘ಸೆನ್ಸ್ ಎಸೆನ್ಸ್’ ಸಂಸ್ಥೆಯಿಂದ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ

    ಪ್ರಾಮಿಸ್ಡ್ ನೇಷನ್’ ಪ್ರಧಾನಿಗೆ ಅರ್ಪಣೆ ಹುಬ್ಬಳ್ಳಿಯ ‘ಸೆನ್ಸ್ ಎಸೆನ್ಸ್’ ಸಂಸ್ಥೆಯಿಂದ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ

    ಕುಂದಾಪುರ ಮಿರರ್ ಸುದ್ದಿ…

    ಬೆಂಗಳೂರು :ದೇಶದ ಏಳು ಕೋಟಿ ಅಂಧರು, ದೃಷ್ಟಿದೋಷವಿದ್ದವರು ಪ್ರಧಾನಿ ನರೇಂದ್ರ ಮೋದಿಯವರ ಜೀವನ, ಕಾರ್ಯ ಮತ್ತು ನಾಯಕತ್ವದ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹುಬ್ಬಳ್ಳಿ ಮೂಲದ ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯು ಬ್ರೈಲ್ ಲಿಪಿಯಲ್ಲಿ ಸಿದ್ಧಪಡಿಸಿದ ‘ಎ ಪ್ರಾಮಿಸ್ಡ್ ನೇಷನ್ ಹಾನರೇಬಲ್ ಶ್ರೀ ನರೇಂದ್ರ ಮೋದಿ – ದ ಮೇಕರ್ ಆಫ್ ನ್ಯೂ ಇಂಡಿಯಾ’ ಎಂಬ ಪುಸ್ತಕವನ್ನು ಇತ್ತೀಚೆಗೆ ಪ್ರಧಾನಿಯವರಿಗೆ ಅರ್ಪಿಸಲಾಯಿತು.
    ಸೆನ್ಸ್ ಎಸೆನ್ಸ್ ಸಂಸ್ಥೆಯ ರುಷಾಲಿ ಭಂಡಾರಿ ಮತ್ತು ಯಶ್ವಿ ಭಂಡಾರಿ ಅವರು ಅತ್ಯಂತ ಕಾಳಜಿಯಿಂದ ಸಿದ್ಧಪಡಿಸಿದ ಈ ವಿಶೇಷ ಪುಸ್ತಕವನ್ನು ವಿಆರ್‌ಎಲ್ ಸಮೂಹ ಸಂಸ್ಥೆಯ ಸಹಯೋಗ ಮತ್ತು ಪ್ರಾಯೋಜಕತ್ವದಲ್ಲಿ ಹೊರತರಲಾಗಿದೆ. ದೇಶದ ಎರಡೂವರೆ ಲಕ್ಷ ಅಂಧ ಮಕ್ಕಳು ಹಾಗೂ ಕಣ್ಣಿನ ಸಮಸ್ಯೆ ಎದುರಿಸುತ್ತಿರುವ 7 ಕೋಟಿ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಈ ಪುಸ್ತಕದಿಂದ ಸಾಕಷ್ಟು ಮಾಹಿತಿ ಪಡೆದುಕೊಳ್ಳಬಹುದು.

    ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ವಿಆರ್‌ಎಲ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆನಂದ ಸಂಕೇಶ್ವರ, ವಾಣಿ ಆನಂದ ಸಂಕೇಶ್ವರ, ರುಷಾಲಿ, ಯಶ್ವಿ ಅವರು ಪುಸ್ತಕದ ಐದು ಪ್ರತಿಗಳನ್ನು ಅರ್ಪಿಸಿದರು.

    ಪುಸ್ತಕದ ಮುಖಪುಟ ವೀಕ್ಷಿಸಿ, ಒಳಪುಟಗಳನ್ನು ತಿರುವಿ ಹಾಕುತ್ತ ಅತ್ಯಂತ ಆಸಕ್ತಿಯಿಂದ ವಿವರಗಳನ್ನು ಕೇಳಿ ತಿಳಿದುಕೊಂಡ ಮೋದಿಯವರು, ಇದೊಂದು ವಿಶಿಷ್ಟ ಕೃತಿಯಾಗಿದೆ. ನಿಜಕ್ಕೂ ವಿಶೇಷ ಸಾಧನೆ ಮಾಡಿದ್ದೀರಿ ಎಂದು ಪ್ರಶಂಸಿಸಿದರು. ವಿಆರ್‌ಎಲ್ ಸಮೂಹ ಸಂಸ್ಥೆಯ ಬೆಂಬಲದಿಂದ ಪುಸ್ತಕ ಹೊರತರಲು ಸಾಧ್ಯವಾಯಿತು. ಇದನ್ನು ಅಂಧರ ಶಾಲೆಗಳಿಗೆ ತಲುಪಿಸಲಾಗಿದೆ. ಆಸಕ್ತ ಅಂಧರಿಗೆ ಲಭಿಸುವಂತೆ ಮಾಡಲಾಗಿದೆ. ನಮ್ಮ ದೇಶ ಮಾತ್ರವಲ್ಲ, ಅನ್ಯ ದೇಶಗಳ ಅಂಧರೂ ನಮ್ಮ ಪ್ರಧಾನಿಯವರ ಸಾಧನೆಗಳನ್ನು ತಿಳಿದುಕೊಳ್ಳಲು ಸಹಾಯ ಮಾಡುವ ಆಸೆಯಿದ್ದು, ವಿವಿಧ ದೇಶಗಳಿಗೆ ಪುಸ್ತಕವನ್ನು ತಲುಪಿಸುವ ಗುರಿ ಹೊಂದಿದ್ದೇವೆ ಎಂದು ರುಷಾಲಿ ಮತ್ತು ಯಶ್ವಿ ವಿವರಿಸಿದರು. ನಿಮ್ಮ ಗುರಿ ಒಳ್ಳೆಯದು ಹಾಗೂ ವಿಶಾಲವಾಗಿದೆ. ವಿಆರ್‌ಎಲ್ ಸಮೂಹ ಸಂಸ್ಥೆ ಇಂತಹ ಒಳ್ಳೆಯ ಪ್ರಯತ್ನವನ್ನು ಬೆಂಬಲಿಸಿ ಯಶಸ್ವಿಗೊಳಿಸಿರುವುದು ಅಭಿನಂದನಾರ್ಹ ಎಂದು ಪ್ರಧಾನಿಯವರು ಹೇಳಿದರು.

    ಡಾ. ಆನಂದ ಸಂಕೇಶ್ವರ ಅವರ ಕಾಳಜಿಯನ್ನು ಇದೇ ವೇಳೆ ಪ್ರಶಂಸಿಸಿದ ಮೋದಿಯವರು, ಬೇರೆ ಬೇರೆ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಲು ಪ್ರೋತ್ಸಾಹ ನೀಡುವ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ ಕುರಿತ ಈ ಪುಸ್ತಕವನ್ನು ಕೇಂದ್ರ ಗೃಹಮಂತ್ರಿ ಅಮಿತ್ ಷಾ ಅವರು ಕಳೆದ ಜನವರಿಯಲ್ಲಿ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು.

    ವಿಆರ್‌ಎಲ್ ಲಾಜಿಸ್ಟಿಕ್ ಲಿ. ವತಿಯಿಂದ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅಡಿಯಲ್ಲಿ ನಾವು ಆರೋಗ್ಯ, ಶಿಕ್ಷಣ, ಕ್ರೀಡಾ ಕ್ಷೇತ್ರಗಳಲ್ಲಿ ಹಲವು ಜನರ ಜೀವನದಲ್ಲಿ ಅರ್ಥಪೂರ್ಣ ಬದಲಾವಣೆಗೆ ಪ್ರಯತ್ನಿಸಿದ್ದೇವೆ. ಈ ಕೆಲಸಗಳ ಸಕಾರಾತ್ಮಕ ಪರಿಣಾಮಗಳ ಬಗ್ಗೆ ನಮಗೆ ಹೆಮ್ಮೆಯಿದೆ. ಸಮಾಜದ ಎಲ್ಲರ ಏಳಿಗೆಗೆ ಪೂರಕವಾಗಿ ನಮ್ಮ ಪ್ರಯತ್ನಗಳನ್ನು ಮುಂದುವರಿಸುತ್ತಲೇ ಇರುತ್ತೇವೆ. ಪ್ರಧಾನಿ ಅವರ ಜೀವನ ಸಾಧನೆ ಮತ್ತು ಅವರ ಕೈಂಕರ್ಯಗಳು ಅಂಧರಿಗೂ ಪ್ರೇರಣೆ ಆಗಲಿ ಎನ್ನುವ ಸದುದ್ದೇಶದಿಂದ ಈ ಪುಸ್ತಕ ಪ್ರಕಟಿಸಲು ನೆರವಾಗಿದ್ದೇವೆ. -ಡಾ. ಆನಂದ ಸಂಕೇಶ್ವರ ವ್ಯವಸ್ಥಾಪಕ ನಿರ್ದೇಶಕರು, ವಿಆರ್‌ಎಲ್ ಸಮೂಹ ಸಂಸ್ಥೆ

    ಉಷಾ ಕೃಷ್ಣಗೆ ಪುಸ್ತಕ ಕೊಡುಗೆ
    ಜೀವನದಲ್ಲಿ ಒಮ್ಮೆಯಾದರೂ ಮೋದಿ ಅವರನ್ನು ನೋಡಲೇಬೇಕೆಂದು ಹಂಬಲಿಸುತ್ತಿದ್ದ ಬೆಂಗಳೂರಿನ ಉಷಾ ಕೃಷ್ಣ ಅವರ ಕನಸು ಮೊನ್ನೆ ಈಡೇರಿತು. ಶೇ.99 ದೃಷ್ಟಿದೋಷ ಇರುವ ಉಷಾ ಅವರೊಂದಿಗೆ ಮಾತನಾಡುತ್ತಲೇ ವಿಮಾನದಿಂದ ‘ಎ ಪ್ರಾಮಿಸ್ಡ್ ನೇಷನ್’ ಬ್ರೈಲ್ ಪುಸ್ತಕವನ್ನು ತರಿಸಿ ಹಸ್ತಾಂತರಿಸಿ ವಿಆರ್‌ಎಲ್ ಸಂಸ್ಥೆಯ ಶ್ರಮ ತಮಗೆ ಸಹಾಯವಾಗಲಿ ಎಂದು ಶುಭ ಹಾರೈಸಿದ್ದಾರೆ.

  • ಕುಂದಾಪುರ :ಮರವಂತೆ ಬೀಚ್ ಸ್ವಚ್ಚತಾ ಕಾರ್ಯಕ್ರಮ

    ಕುಂದಾಪುರ :ಮರವಂತೆ ಬೀಚ್ ಸ್ವಚ್ಚತಾ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ರಾಷ್ಟ್ರೀಯ ಭೂ ದಿನದ ಅಂಗವಾಗಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಮಣಿಪಾಲದ ಮಾಹೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ಮರವಂತೆ ಬೀಚ್ ಸ್ವಚ್ಚತಾ ಕಾರ್ಯವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮರವಂತೆ ಕಡಲ ಕಿನಾರೆಯ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದರು. ಈ ಕಾರ್ಯದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.