Category: ಸುದ್ದಿ

  • ಉಪ್ಪುಂದ :ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ವಿಮೆಯನ್ನು ಉಪಯೋಗಿಸಿಕೊಳ್ಳಿ – ಸಂಸದ ಬಿ.ವೈ.ರಾಘವೇಂದ್ರ

    ಉಪ್ಪುಂದ :ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ವಿಮೆಯನ್ನು ಉಪಯೋಗಿಸಿಕೊಳ್ಳಿ – ಸಂಸದ ಬಿ.ವೈ.ರಾಘವೇಂದ್ರ

    ಕುಂದಾಪುರ ಮಿರರ್ ಸುದ್ದಿ…

    ಉಪ್ಪುಂದ: ಗ್ರಾಮಿಣ ಭಾಗದ ಜನ ಆರ್ಥಿಕವಾಗಿ ತೀರಾ ಹಿಂದುಳಿದಿರುವುದನ್ನು ಗಮನಿಸಿದ ಪ್ರದಾನಿ ಮೋದಿ ಜನರ ಸಂಕ್ಷಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ವಿಮೆ ಜ್ಯಾರಿಗೆ ತಂದಿದ್ದು ಆಯುಷ್ಮಾನ್ ಯೋಜನೆಯಡಿಯಲ್ಲಿ ಪ್ರತೀ ವರ್ಷ ಬಿಪಿಎಲ್ ಕಾರ್ಡುದಾರರಿಗೆ 5 ಲಕ್ಷ ಹಾಗೂ ಎಪಿಎಲ್ ಕಾರ್ಡುದಾರರಿಗೆ 2 ಲಕ್ಷದಂತೆ ಉಚಿತ ಆರೋಗ್ಯ ಸೌಲಭ್ಯ ನೀಡುತ್ತಿದೆ. ಅಲ್ಲದೇ ಪ್ರತೀ ವರ್ಷ 22 ರೂಪಾಯಿ ಪಾವತಿಸಿದರೆ 2 ಲಕ್ಷದ ವರೆಗೆ ಆರೋಗ್ಯ ವಿಮಾ ಪಾಲಿಸಿಯನ್ನೂ ನೀಡುತ್ತಿದೆ. ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೆಂದ್ರ ಹೇಳಿದರು.

    ಅವರು ಉಪ್ಪುಂದದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳಲಾಗಿದ್ದ ಸಮೃದ್ಧ ಬೈಂದೂರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ರಾಷ್ಟ್ರೀಯ ಬಾಯಿ ಆರೋಗ್ಯ ಪಾಲಿಸಿ ಮತ್ತು ದಂತ ಭಾಗ್ಯ ಯೋಜನೆ, ಉಡುಪಿ ಜಿಲ್ಲೆ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಎ.ಜೆ.ದಂತ ವೈದ್ಯಕೀಯ ಮಹಾ ವಿದ್ಯಾಲಯ ಮಂಗಲೂರು ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಸಹಯೋಗೊಂದಿಗೆ ನಡೆದ ಉಚಿತ ದಂತ ಪಂಕ್ತಿ ಜೋಡಣಾ ಶಿಬಿರದ ಸಮಾರೋಪ ಸಮಾರಂದಲ್ಲಿ ಭಾಗವಹಿಸಿ ಮಾತನಾಡಿದರು.

    ಶಿಬಿರದಲ್ಲಿ ಸುಮಾರು 140 ಜನ ಶಿಬಿರಾರ್ಥಿಗಳು ಭಾಗವಹಿಸಿ ಉಚಿತ ದಂತ ಪಂಕ್ತಿಗಳನ್ನು ಪಡೆದುಕೊಂಡರು.
    ಸಭೆಯ ಅಧ್ಯಕ್ಷತೆಯನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ, ಬೈಂದೂರು ಸಮುದಾಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ್, ಮಂಗಲುರು ಎ.ಜೆ. ಇನ್ ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನ ಪ್ರೊಸ್ಥೋಡೋಂಟಿಕ್ಸ್ ನ ಮುಖ್ಯಸ್ಥೆ ಡಾ. ವಿದ್ಯಾ ಶೆಣೈ ಉಪಸ್ಥಿತರಿದ್ದರು. ಸಮೃದ್ಧ ಬೈಂದೂರು ಯೋಜನೆಯ ಶೋಧನ್ ಮಲ್ಪೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟೀ ಬಿ.ಎಸ್.ಸುರೇಶ್ ಶೆಟ್ಟಿ ಪ್ರಾಸ್ತಾವಿಸಿ ಸ್ವಾಗತಿಸಿದರು.

  • ಬೈಂದೂರು: ಇ-ಶ್ರಮ್ ಯೋಜನೆಯ ಸದುಪಯೋಗಪಡಿಸಿಕೊಳ್ಳಿ – ಕಾರ್ಮಿಕ ಸಮಾವೇಶದಲ್ಲಿ ಸಂಸದ ಬಿ.ವೈಆರ್

    ಬೈಂದೂರು: ಇ-ಶ್ರಮ್ ಯೋಜನೆಯ ಸದುಪಯೋಗಪಡಿಸಿಕೊಳ್ಳಿ – ಕಾರ್ಮಿಕ ಸಮಾವೇಶದಲ್ಲಿ ಸಂಸದ ಬಿ.ವೈಆರ್

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು: ಗ್ರಾಮಿಣ ಭಾಗದ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು ಎನ್ನುವ ದೃಷ್ಟಿಯಿಂದ ಕೇಂದ್ರ ಸರ್ಕಾರವು ಲಕ್ ಪತಿ ದೀದಿ ಯೋಜನೆ ಜ್ಯಾರಿಗೆ ತಂದಿದ್ದು, ಗ್ರಾಮೀಣ ಭಾಗದ 1 ಕೋಟಿ ಹೆಣ್ಮಕ್ಕಳಿಗೆ ತಲಾ 1 ಲಕ್ಷದ ಧನಸಹಾಯ ನೀಡಲಿದೆ. ಈ ಯೋಜನೆ ಮುಂದಿನ ದಿನಗಳಲ್ಲಿ ಅನುಷ್ಠಾನಗೊಳ್ಳಲಿದೆ. ಕಾರ್ಮಿಕ ವರ್ಗ ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

    ಸಮರ್ಥ ಭಾರತ ಸಮೃದ್ಧ ಬೈಂದೂರು ಘೋಷವಾಕ್ಯದಡಿ ಉಡುಪಿ ಜಿಲ್ಲಾ ಭಾರತೀಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ರಿ.) ಹಾಗೂ ಶ್ರಮ್ ಚಾರಿಟೇಬಲ್ ಟ್ರಸ್ಟ್(ರಿ.) ಇವರ ಜಂಟಿ ಆಶ್ರಯದಲ್ಲಿ ಬೈಂದೂರಿನ ಜೆ.ಎನ್.ಆರ್ ಕಲಾ ಮಂದಿರದಲ್ಲಿ “ಕಾರ್ಮಿಕರ ಸಮಾವೇಶ”ವನ್ನು ಉದ್ಘಾಟಿಸಿ ಮಾತನಾಡಿದರು.

    ಇದೇ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶ್ರಮಿಕ ವರ್ಗದ ಬಾಂಧವರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಹಾಗೂ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಜಾರಿಗೆ ತಂದಿರುವ ಬಹುಮಹತ್ವಾಕಾಂಕ್ಷೆ ಯೋಜನೆಯಾದ ಪಿ.ಎಂ. ವಿಶ್ವಕರ್ಮ ಯೋಜನೆಯ ಕುರಿತು ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ, ಶ್ರಮ್ ಚಾರಿಟೇಬಲ್ ಟ್ರಸ್ಟ್ ಸಂಚಾಲರಾದ ಮೋಹನ್ ಚಂದ್ರ ಅವರು, ಟ್ರಸ್ಟ್ ಅಧ್ಯಕ್ಷರಾದ ಸಂತೋಷ್ ಅವರು, ಪಿ. ಎಂ. ವಿಶ್ವಕರ್ಮ ಸಮಿತಿಯ ಅಧ್ಯಕ್ಷರಾದ ವಾರಿಜ, ಸಮೃದ್ಧ ಬೈಂದೂರು ಸಂಚಾಲಕ ಬಿ. ಎಸ್. ಸುರೇಶ್ ಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

  • ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿಜೂರು ಸರ್ಕಾರೀ ಶಾಲೆ ದತ್ತು ಘೋಷಣೆ

    ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿಜೂರು ಸರ್ಕಾರೀ ಶಾಲೆ ದತ್ತು ಘೋಷಣೆ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು: ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಮ್ಮೂರಿನ ಶಾಲೆಯನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಲಾಗಿದ್ದು, ದತ್ತು ಸ್ವೀಕಾರ ಸಮಾರಂಭ ಮಾ.5ರ ಸಂಜೆ ಗಂಟೆ 6ಕ್ಕೆ ಶಾಲಾ ಆವರಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಜರುಗಲಿದೆ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು.

    ಅವರು ಬೈಂದೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನಾನು ಕಲಿತ ಸರಕಾರಿ ಶಾಲೆಯನ್ನು ಉಳಿಸಿಕೊಳ್ಳಲು ಊರಿನವರ ಜೊತೆಗೂಡಿ ಮಾದರಿ ಶಾಲೆಯನ್ನಾಗಿ ರೂಪಿಸುವ ಉದ್ದೇಶ ಹೊಂದಿದ್ದು, ಇದಕ್ಕೆ ಶಾಲಾ ಎಸ್ಡಿಎಂಸಿ ಹಾಗೂ ಶಿಕ್ಷಕರೂ ಸಹಕಾರ ನೀಡುತ್ತಿದ್ದಾರೆ ಎಂದರು.

    ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ, ಮೂಲ ಸೌಕರ್ಯ ಒಳಗೊಂಡಂತೆ ಗುಣಮಟ್ಟದ ಶಿಕ್ಷಣ ನೀಡಲು ಚಿಂತನೆ ನಡೆಸಲಾಗಿದೆ. ಪ್ರಾರಂಭದಲ್ಲಿ ಹೊಸ ವಾಹನ ಖರೀದಿ, ಹೊಸ ಅತಿಥಿ ಶಿಕ್ಷಕರ ನೇಮಕಾತಿ ಮಾಡುವುದು, ಎಲ್ ಕೆಜಿ, ಯುಕೆಜಿ ತರಗತಿ ಆರಂಭಿಸುವುದು, ಕಂಪ್ಯೂಟರ್ ಶಿಕ್ಷಣ ನೀಡುವುದು, ಮಕ್ಕಳಿಗೆ ಸಂಗೀತ, ಭರತ ನಾಟ್ಯ, ಯಕ್ಷಗಾನ, ನಾಟಕ, ಡ್ರಾಯಿಂಗ್ ಕಲಿಕೆಗೆ ಆದ್ಯತೆ ನೀಡಲಾಗುವುದು. ವಿದ್ಯಾರ್ಥಿಗಳ ನೆನಪಿನ ಶಕ್ತಿ ಹೆಚ್ಚಿಸಲು ಏಕಾಗ್ರತೆಗಾಗಿ ಧ್ಯಾನ, ಆರೋಗ್ಯಕ್ಕಾಗಿ ಯೋಗ ತರಬೇತಿ ನೀಡುವುದು, ಅಧ್ಯಾಯನ ಕೇಂದ್ರ(ಲೈಬ್ರರಿ), ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ಸೇರಿದಂತೆ ಶಾಲೆಗೆ ಸರಕಾರದ ಸೌಲಭ್ಯಗಳನ್ನು ದೊರಕಿಸಿ ಕೊಡಲು ಪ್ರಯತ್ನಿಸುವುದು, ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ, ಶಿಕ್ಷಕರಿಗೆ ಸೂಕ್ತ ತರಬೇತುದಾರರಿಂದ ಮಾರ್ಗದರ್ಶನ ನೀಡುವುದು ಒಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ, ಕೌಶಲ್ಯಯುತ, ಮೌಲ್ಯ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಉತ್ತಮ ಚಿಂತನೆ ನಡೆಸಿ ಯೋಜನೆ ರೂಪಿಸಲಾಗಿದೆ ಎಂದರು.

    ಮಾ.5ರಂದು ಸಂಜೆ ಗಂಟೆ 6ಕ್ಕೆ ದತ್ತು ಸ್ವೀಕಾರ ಸಮಾರಂಭವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಬಿ.ವೈ ರಾಘವೇಂದ್ರ, ಅವಧೂತ ವಿನಯ ಗುರೂಜಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಬಿಎಂ ಸುಕುಮಾರ ಶೆಟ್ಟಿ, ಉದ್ಯಮಿ ಕೃಷ್ಣಮೂರ್ತಿ ಮಂಜ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶಿವದೂತ ಗುಳಿಗ ನಾಟಕ ಪ್ರದರ್ಶನ ಇರಲಿದೆ.
    ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಶಿಕ್ಷಕ ಮಂಜುನಾಥ ಬಿಜೂರು, ಹಳೆ ವಿದ್ಯಾರ್ಥಿಗಳಾದ ಶ್ರೀಧರ ಬಿಜೂರು, ತಿಮ್ಮಪ್ಪ ಬಿಜೂರು, ಟ್ರಸ್ಟ್ನ ನಾಗರಾಜ ಪಿ. ಯಡ್ತರೆ ಮೊದಲಾದವರು ಉಪಸ್ಥಿತರಿದ್ದರು.

  • ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

    ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

    ಕುಂದಾಪುರ ಮಿರರ್ ‌ಸುದ್ದಿ…

    ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

    ಮುಖ್ಯ ಅತಿಥಿಯಾಗಿ ನಿವೇದಿತಾ ಪ್ರೌಢಶಾಲೆಯ ಶಿಕ್ಷಕರಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಜೀವನದಲ್ಲಿ ಸಂಸ್ಕಾರಗಳನ್ನು ಅಳವಡಿಸಿ ಕೊಂಡು ತಮ್ಮ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

    ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಪೂರ್ವಿಯನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ರಾಗಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಗಣಿತ ಶಾಸ್ತ್ರ ಉಪನ್ಯಾಸಕಿ ಚೈತ್ರ ಪೂಜಾರಿ ಸ್ವಾಗತಿಸಿದರು, ಉಪನ್ಯಾಸಕಿ ನಿಧಿ ವಂದಿಸಿದರು, ಇಂಗ್ಲೀಷ್ ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.

  • ಕೋಟ ಪಂಚವರ್ಣಯ ರೈತರೆಡೆಗೆ ನಮ್ಮ ನಡಿಗೆ – 33ನೇ ಸಾಧಕ ಕೃಷಿಕರಾಗಿ ಉಮೇಶ್ ಕಾರ್ಕಡ ಆಯ್ಕೆ

    ಕೋಟ ಪಂಚವರ್ಣಯ ರೈತರೆಡೆಗೆ ನಮ್ಮ ನಡಿಗೆ – 33ನೇ ಸಾಧಕ ಕೃಷಿಕರಾಗಿ ಉಮೇಶ್ ಕಾರ್ಕಡ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಕೋಟ ಹೋಬಳಿಯ ವಿವಿಧ ಭಾಗಗಳ ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 33ರ ಸಂಭ್ರಮ ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಫೆ.27ರ ಸಂಜೆ.4.30ಗ ನಡೆಯಲಿದ್ದು ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಸಾಲಿಗ್ರಾಮದ ಉಮೇಶ್ ಕಾರ್ಕಡ ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿದ್ದಾರೆ.
    ಕೋಟ.ಫೆ.27 ರೈತರೆಡೆಗೆ
    ಕೋಟ ಪಂಚವರ್ಣಯ ರೈತರೆಡೆಗೆ ನಮ್ಮ ನಡಿಗೆ –33ನೇ ಸಾಧಕ ಕೃಷಿಕರಾಗಿ ಉಮೇಶ್ ಕಾರ್ಕಡ ಆಯ್ಕೆ
    ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಕೋಟ ಹೋಬಳಿಯ ವಿವಿಧ ಭಾಗಗಳ ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 33ರ ಸಂಭ್ರಮ ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಫೆ.27ರ ಸಂಜೆ.4.30ಗ ನಡೆಯಲಿದ್ದು ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಸಾಲಿಗ್ರಾಮದ ಉಮೇಶ್ ಕಾರ್ಕಡ ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿದ್ದಾರೆ.

  • ಪಾರಂಪಳ್ಳಿ – ಕಾಯಾಕಿಂಗ್ ಮೂಲಕ ಸಂವಿಧಾನ ಜಾಗೃತಿ

    ಪಾರಂಪಳ್ಳಿ – ಕಾಯಾಕಿಂಗ್ ಮೂಲಕ ಸಂವಿಧಾನ ಜಾಗೃತಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಇಲ್ಲಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಸೀತಾ ನದಿತಟದಲ್ಲಿ ಉಡುಪಿ ಎಡಿಸಿ ಮಮತಾ ದೇವಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ರಾಯಲ್ ಹಾಗೂ ಕುಂದಾಪುರ ಎ.ಸಿ ರಶ್ಮಿ ಕಾಯಾಕಿಂಗ್ ಮೂಲಕ ಸಂವಿಧಾನದ ಜಾಗೃತಿ ಮೊಳಗಿಸಿದರು.

    75 ಎಂದು ವಿವಿಧ ರೀತಿಯ ವಿನ್ಯಾಸಗೊಳಿಸಿದ ದೋಣಯ ಮೂಲಕ ವಿಹರಿಸಿ ಅಲ್ಲಿ ಅಳವಡಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಭಾರ್ಚನೆಗೈದು ಗೌರವ ಸಮರ್ಪಿಸಿದರು.

    ಈ ಸಂದರ್ಭದಲ್ಲಿ ಕುಂದಾಪುರ ಎ.ಸಿ ರಶ್ಮಿ ಮಾತನಾಡಿ ಸಾಲಿಗ್ರಾಮ ಕಾಯಾಕಿಂಗ್ ಪಾಯಿಂಟ್ ಮೂಲಕ ಸಾಕಷ್ಟು ಸಾಮಾಜಿಕ ಕಾರ್ಯಗಳು ,ಜಾಗೃತಿ ಆಂದೋಲನಗಳು ಪ್ರವಾಸಿಗರನ್ನು ವಿಶೇಷವಾಗಿ ಆಕರ್ಷಿಸುವಂತೆ ನಡೆಸುವ ಕಾರ್ಯಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ರಾಜ್ಯದಲ್ಲೆ ಮೊಟ್ಟ ಮೊದಲ ಬಾರಿಗೆ ನದಿಯ ಮೂಲಕ ಸಂವಿಧಾನ ಜಾಗೃತಿ ಮೊಳಗಿಸಿದ ಬಗ್ಗೆ ಅಧಿಕಾರಿವರ್ಗ ಹರ್ಷ ವ್ಯಕ್ತಪಡಿಸಿತು.

    ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖಾಧಿಕಾರಿ ಕುಮಾರ್, ತಹಶಿಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ,, ಪ್ರಪೇಶನರಿ ಐಪಿಎಸ್ ಅಧಿಕಾರಿ ಹರ್ಷಪ್ರೀಯಂವಧಾ, ಸಮಾಜ ಕಲ್ಯಾಣ ಇಲಾಖಾಧಿಕಾರಿ ಅನಿತಾ ಮದ್ಲೂರ್, ಕಾಯಾಕಿಂಗ್ ಮುಖ್ಯಸ್ಥರಾದ ಮಿಥುನ್ ಮೆಂಡನ್, ಲೋಕೇಶ್ ಮೆಂಡನ್, ವಿನಯ್ ಬಂಗೇರ, ಸಾಲಿಗ್ರಾಮ ಪಟ್ಟಣಪಂಚಾಯತ್ ಮುಖ್ಯಾಧಿಕಾರಿ ಶಿವ ಎಸ್ ನಾಯ್ಕ್ ಮತ್ತಿತರರು ಇದ್ದರು.

  • ಕುಂದಾಪುರ :ಫೆ.24 – ಆನೆಗುಡ್ಡೆಯಲ್ಲಿ ವಿಕಸನ – 2024 ಕಾರ್ಯಕ್ರಮ ಉದ್ಘಾಟನಾ ಸಮಾರಂಭ

    ಕುಂದಾಪುರ :ಫೆ.24 – ಆನೆಗುಡ್ಡೆಯಲ್ಲಿ ವಿಕಸನ – 2024 ಕಾರ್ಯಕ್ರಮ ಉದ್ಘಾಟನಾ ಸಮಾರಂಭ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕೊರ್ಗಿ ವಿಠಲ ಶೆಟ್ಟಿ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ (ರಿ.) ಕುಂಭಾಶಿ ಇದರ ಇದರ ೬ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ವಿಕಸನ – ೨೦೨೪ ಅಶಕ್ತ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ , ಸಾಧಕ ಕೃಷಿಕರಿಗೆ ಸಮ್ಮಾನ ಕಾರ್ಯಕ್ರಮವು ಫೆ ೨೪ ಶನಿವಾರದ ಸಂಜೆ ಗಂಟೆ ೪ಕ್ಕೆ ಆನೆಗುಡ್ಡೆ ಶ್ರೀ ವಿನಾಯಕ ಸ‘ಗೃಹದಲ್ಲಿ ಜರಗಲಿದೆ. ಕೊರ್ಗಿ ವಿಠಲ ಶೆಟ್ಟಿ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ (ರಿ.) ಕುಂಭಾಸಿ ಇದರ ಪ್ರವರ್ತಕ ಕೊರ್ಗಿ ವಿಠಲ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

    ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸಾಧಕ ಕೃಷಿಕರನ್ನು ಸಮ್ಮಾನಿಸಲಿದ್ದಾರೆ. ಕಾರ್ಯಕ್ರಮದಲ್ಲಿ ತೆಕ್ಕಟ್ಟೆ ಗ್ರಾಮ ಪಂಚಾಯತ್ ಇದರ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ , ಉದ್ಯಮಿ ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ ಕುಂದಾಪುರ, ಕುಂಭಾಶಿ ಗ್ರಾಮ ಪಂಚಾಯತ್ ಇದರ ಅಧ್ಯಕ್ಷ ಆನಂದ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ಕೆ. ಕೃಷ್ಣಪ್ರಸಾದ್ ಅಡ್ಯಂತಾಯ, ಕುಂದಾಪುರದ ಕ್ಷೇತ್ರ ಶಿಕ್ಷಣಾದಿಕಾರಿ ಶೋಭಾ ಎಸ್.ಶೆಟ್ಟಿ ಹಾಗೂ ಭವಾನಿ ವಿ.ಶೆಟ್ಟಿ ಅವರು ಭಾಗವಹಿಸಲಿದ್ದಾರೆ . ಸಂಜೆ ಅಂತರಾಷ್ಟ್ರೀಯ ಜಾದೂ ಪ್ರಶಸ್ತಿ ವಿಜೇತ ಜಾದೂಗಾರ ಪ್ರಕಾಶ್ ಹೆಮ್ಮಾಡಿ ಮತ್ತು ನೇತ್ರಾವತಿ ಹೆಮ್ಮಾಡಿ ಇವರಿಂದ ಜಾದೂ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

  • ಕಜ್ಕೆ : ಪುಣ್ಯಕ್ಷೇತ್ರಗಳಿಗೆ ಪಾದಸ್ಪರ್ಶ ಮಾಡಿದಾಗ ಪಾಪಕರ್ಮಗಳು ದೂರಾಗುತ್ತವೆ – ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿ

    ಕಜ್ಕೆ : ಪುಣ್ಯಕ್ಷೇತ್ರಗಳಿಗೆ ಪಾದಸ್ಪರ್ಶ ಮಾಡಿದಾಗ ಪಾಪಕರ್ಮಗಳು ದೂರಾಗುತ್ತವೆ – ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿ

    ಕಜ್ಕೆಯಲ್ಲಿ ನೂತನವಾಗಿ ನಿರ್ಮಾಣವಾದ ಶ್ರೀ ಅನ್ನಪೂರ್ಣೇಶ್ವರಿಯ ಶಿಲಾಮಯ ದೇವಸ್ಥಾನದ ಲೋಕಾರ್ಪಣೆಯ ಧಾರ್ಮಿಕ ಸಭಾ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…
    ಕಜ್ಕೆ :ಪುಣ್ಯಕ್ಷೇತ್ರಗಳಿಗೆ ಪಾದಸ್ಪರ್ಶ ಮಾಡಿದಾಗ ಪಾಪಕರ್ಮಗಳು ದೂರಾಗುತ್ತವೆ. ಪುಣ್ಯಸಂಪಾದನೆ ಜಗತ್ತಿನಲ್ಲಿಯೇ ಅತೀದೊಡ್ಡ ಸಂಪತ್ತು. ನಾವು ಪುಣ್ಯ ಸಂಪಾದನೆ ಮಾಡಬೇಕು. ದೇವರಿಗಿಂತ ಭಕ್ತರು ದೊಡ್ಡವರು. ಭಕ್ತರಿಗಿಂತ ಭಕ್ತಿ ದೊಡ್ಡದು. ಪ್ರತಿಯೊಬ್ಬ ಭಕ್ತರ ಹೃಧಯದಲ್ಲಿಯೂ ಭಕ್ತಿಯ ತಂಗಾಳಿ ಬೀಸಬೇಕು ಎಂದು ಹೇಳಿದ ಅವರು ಶಿವಸುಜ್ಞಾನ ತೀರ್ಥ ಶ್ರೀಗಳ ಸಂಕಲ್ಪ ಶಕ್ತಿ ಅದ್ಭುತವಾದುದು. ಅವರ ಭಕ್ತಿ ಸಂಕಲ್ಪದಿಂದ ಕಜ್ಕೆ ಎನ್ನುವುದು ಪುಣ್ಯ ಕ್ಷೇತ್ರವಾಗಿ ನಿರ್ಮಾಣವಾಗಿದೆ. ಸಾಕ್ಷತ್ ಹೊರನಾಡಿಗೆ ಹೋದ ಅನುಭವವೇ ಇಲ್ಲಿ ಆಗುತ್ತಿದೆ. ಮತ್ತೆ ಮತ್ತೆ ಕಜ್ಕೆ ಅನ್ನಪೂರ್ಣೇಶ್ವರಿಯ ದರ್ಶನಕ್ಕೆ ಬರುವ ಮನಸ್ಸಾಗುತ್ತಿದೆ ಎಂದು ಬೀದರ್ ಶಹಪುರದ ಶ್ರೀ ವಿಶ್ವಕರ್ಮ ಏಕದಂಡಗಿ ಮಠದ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಗಳು ಹೇಳಿದರು.

    ಕಜ್ಕೆಯಲ್ಲಿ ನೂತನವಾಗಿ ನಿರ್ಮಾಣವಾದ ಶ್ರೀ ಅನ್ನಪೂರ್ಣೇಶ್ವರಿಯ ಶಿಲಾಮಯ ದೇವಸ್ಥಾನದ ಲೋಕಾರ್ಪಣೆಯ ಅಂಗವಾಗಿ ಫೆ.21ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶಿರ್ವಚನ ನೀಡಿ ಮಾತನಾಡಿದರು.

    ಅಧ್ಯಕ್ಷತೆ ವಹಿಸಿದ ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ಅರೇಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿಯವರು ಅನ್ನಪೂರ್ಣೇಶ್ವರಿಯನ್ನು ಶ್ರದ್ಧಾಂತಃಕರಣ ಭಕ್ತಿಯಿಂದ ಆರಾಧಿಸುವುದರಿಂದ ಸಕಲ ಆಯುರಾರೋಗ್ಯ ಐಶ್ವರ್ಯ, ಮೋಕ್ಷದ ಮಾರ್ಗವೂ ಲಭಿಸುತ್ತದೆ. ಅಂಥಹ ಶಕ್ತಿ ಈ ಸಾನಿಧ್ಯಕ್ಕಿದೆ. ಇರುವೆಯೊಂದು ತನಗಿಂತ 30 ಪಟ್ಟು ಭಾರದ ವಸ್ತುವನ್ನು ಹೊತ್ತೊಯ್ಯುವಂತೆ ಇಲ್ಲಿ ಭಕ್ತರ ಮೂಲಕ ಆಶ್ಚರ್ಯಕರ ರೀತಿಯಲ್ಲಿ ದೇವಿ ಸೇವೆ ಮಾಡಿಸಿಕೊಂಡಿದ್ದಾಳೆ. ಎಲ್ಲವೂ ಅನ್ನಪೂರ್ಣೇಶ್ವರಿ, ಆಧಿಶಂಕರಚಾರ್ಯಾರ ಪೂರ್ಣಾನುಗ್ರಹವೇ ಕಾರಣ ಎಂದರು

    ಕೇಮಾರು ಶ್ರೀ ಸಾಂದೀಪನಿ ಸಾಧನಾಶ್ರಮದ ಶ್ರೀ ವಿಠಲದಾಸ ಮಹಾಸ್ವಾಮೀಜಿಗಳು ಆಶೀರ್ವಚನ ನೀಡಿ, ದೇವಸ್ಥಾನಗಳು ಆಧ್ಯಾತ್ಮಿಕ ದೀಪಸ್ತಂಭಗಳಿದ್ದಂತೆ. ಭವಸಾಗರದಲ್ಲಿ ಮುಳುಗಿರುವರಿಗೆ ರಕ್ಷೆ ನೀಡುವುದು ದೇವಸ್ಥಾನಗಳು. ಅಪ್ರತಿಮವಾದ ಭಗವಂತನ ನೋಡಲು ಪ್ರತಿಮೆಯೇ ಮಾಧ್ಯಮ. ಹಾಗಾಗಿ ಪ್ರತಿಮೆಗಳ ಮೂಲಕ ಭಗವಂತನ ಆರಾಧನೆ ಮಾಡುತ್ತೇವೆ. ಧನಾತ್ಮಕವಾದ ಶಕ್ತಿಯನ್ನು ದೇವಸ್ಥಾನಗಳು ನೀಡುತ್ತವೆ. ಮಠ ಮಂದಿರಗಳು ಭಕ್ತಿ, ಜ್ಞಾನದ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕೆ ಹೊರತು ವ್ಯಾಪಾರಿ ಕೇಂದ್ರಗಳಾಗಬಾರದು. ಹಿಂದೂ ಸಮಾಜಕ್ಕೆ ಪ್ರೇರಣೆ ನೀಡುವ ಕೇಂದ್ರಗಳು ಮಠ ಮಂದಿರಗಳಾಗಬೇಕು ಎಂದರು.
    ಸಾವಿತ್ರಿ ಪೀಠ, ವಡ್ನಾಳ್ ಮಹಾಸಂಸ್ಥಾನ ಮಠದ ಶ್ರೀ ಶಂಕರಾತ್ಮನಂದ ಸರಸ್ವತಿ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಕಜ್ಕೆ ಜ್ಞಾನ, ಭಕ್ತಿ, ಆದ್ಯಾತ್ಮಿಕತೆ ಕೇಂದ್ರ ಎನ್ನುವುದನ್ನು ನಿಸ್ಸಂದೇಹವಾಗಿ ಹೇಳಬಹುದು. ಕರಾವಳಿ ಭಾಗದಲ್ಲಿ ಶಕ್ತಿಯನ್ನು ಭಗವತಿಯ ರೂಪದಲ್ಲಿ ಆರಾಧಿಸುತ್ತಾರೆ. ಇಲ್ಲಿ ಅನ್ನಪೂರ್ಣೇಶ್ವರಿ ನೆಲೆ ನಿಂತು ಭಕ್ತರನ್ನು ಹರಸುತ್ತಿದ್ದಾಳೆ ಎಂದರು.

    ಬೆಂಗಳೂರು ದಕ್ಷಿಣ ಜಗದ್ಗುರು ಪೀಠದ ಶಿವಾನಂದಭಾರತಿ ಸ್ವಾಮೀಜಿ ಮಾತನಾಡಿ, ದೇವಸ್ಥಾನಗಳು ಜ್ಞಾನ ಪ್ರಸರಣ ಕೇಂದ್ರಗಳಾಗಬೇಕು. ಭಕ್ತಿಯ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಲು ದೇವಸ್ಥಾನಗಳು ಪೂರಕವಾಗುತ್ತದೆ ಎಂದರು.
    ಈ ಸಂದರ್ಭದಲ್ಲಿ ಜ್ಯೋತಿವೀದ್ವಾನ್ ಮತ್ತು ಜ್ಯೋತಿಷಿ ಕೆ.ಪಿ ಕುಮಾರಗುತ್ತು ತಂತ್ರಿಯವರು, ಕಾಂಗ್ರೆಸ್ ಮುಖಂಡರಾದ ಪ್ರಸಾದ ರಾಜ್ ಕಾಂಚನ್, ಎಸ್.ಕೆಎಫ್ ಎಲಿಗ್ಸೆರ್ ಆಡಳಿತ ನಿರ್ದೇಶಕ ಡಾ.ರಾಮಕೃಷ್ಣ ಆಚಾರ್, ಉದ್ಯಮಿ ವಿಠಲ್ ಬೆಳಂದೂರು,ಕಾಳಿಕಾಂಬಾ ದೇವಸ್ಥಾನ ಬಾರಕೂರು ಇದರ 2ನೇ ಮೊಕ್ತೇಸರ ಪ್ರವೀಣ ಆಚಾರ್ಯ, ಕಾಳಿಕಾಂಬಾ ದೇವಸ್ಥಾನ ಕಾರ್ಕಳ ಇದರ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ, ಹೋಟೆಲ್ ಉದ್ಯಮಿ ಬಾಲಕೃಷ್ಣ ಶೆಟ್ಟಿ ಬೆಳಗಾಂ, ವಸಂತ ಮುರಳಿ ಆಚಾರ್ಯ, ಡಾ.ಉಮೇಶ ಆಚಾರ್ಯ, ಅರೇಮಾದನಹಳ್ಳಿ ಶಾಖಾ ಮಠದ ಕಾರ್ಯಧ್ಯಕ್ಷ ಎಚ್ ರಾಜೇಶ್ ಆಚಾರ್ಯ ಮಠದಬೆಟ್ಟು,ಎಚ್.ಬಿ ಕುಮಾರ ಆಚಾರ್ಯ ಹಾಸನ, ಸಾಗರ ಕಾಳಿಕಾಂಬಾ ದೇವಸ್ಥಾನದ ರಮೇಶ, ಶಿವಮೊಗ್ಗ ಕಾಳಿಕಾರಮೇಶ್ವರಿ ದೇವಸ್ಥಾನದ ಸರ್ವೇಶ್ವರ ಆಚಾರ್ಯ, ಶಶಿಕಲಾ ಪ್ರಭಾಕರ ಆಚಾರ್ಯ ಅಲೆಯೂರು ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    ಕಾರ್ಯಕ್ರಮದಲ್ಲಿ ಸ್ಥಳದಾನಿಗಳಾದ ಕೃಷ್ಣಯ್ಯ ಶೆಟ್ಟಿ, ಶ್ರೀಧರ ಕಾಮತ್ ಅವರನ್ನು ಸನ್ಮಾನಿಸಲಾಯಿತು. ರಸ್ತೆಗೆ ಸ್ಥಳ ನೀಡಿದ ಕರಿಯ ನಾಯ್ಕ ಹಾಗೂ ವಾಸ್ತು ಶಿಲ್ಪಿ, ಶಿಲಾ ಶಿಲ್ಪಿ, ಕಾಷ್ಠ ಶಿಲ್ಪಿಗಳನ್ನು ಗೌರವಿಸಲಾಯಿತು. ಟಿ.ಜಿ ಆಚಾರ್ಯ ಹೆಬ್ರಿ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಕರುಣಾಕರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಕಾಶ ಆಚಾರ್ಯ ಕುಕ್ಕೆಹಳ್ಳಿ ಮತ್ತು ರಾಜೇಶ ಕುತ್ಯಾರು ಕಾರ್ಯಕ್ರಮ ನಿರ್ವಹಿಸಿದರು. ಉದಯ ಆಚಾರ್ಯ ಗೋಳಿಯಂಗಡಿ ವಂದಿಸಿದರು.

    ಅನಂತ ಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಶ್ರೀಗಳ ಉಪಸ್ಥಿತಿಯಲ್ಲಿ ಬ್ರಹ್ಮಶ್ರೀ ವಿಶ್ವನಾಥ ಪುರೋಹಿತರ ನೇತೃತ್ವದಲ್ಲಿ ಅನ್ನಪೂರ್ಣೇಶ್ವರಿ, ಗಣಪತಿ ದೇವರು ಹಾಗು ಆದಿಶಂಕರಾಚಾರ್ಯರ ಶಿಲಾಬಿಂಬ ಪ್ರತಿಷ್ಠೆ ಮತ್ತು ಮಹಾಕುಂಭಾಭಿಷೇಕ ನಡೆಯಿತು.

  • ಬೈಂದೂರು :ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಮಾಹಿತಿ ಕಾರ್ಯಕ್ರಮ ‘ಪುಷ್ಟಿ’ 2024

    ಬೈಂದೂರು :ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಮಾಹಿತಿ ಕಾರ್ಯಕ್ರಮ ‘ಪುಷ್ಟಿ’ 2024

    ಕುಂದಾಪುರ ಮಿರರ್ ಸುದ್ದಿ…

    ನಾವುಂದ :ಶುಭದಾ ಆಂಗ್ಲ ಮಾಧ್ಯಮ ಶಾಲೆ ನಾವುಂದದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್. ಎಸ್. ಎಲ್‌. ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಮಾಹಿತಿ ಕಾರ್ಯಕ್ರಮ ‘ಪುಷ್ಟಿ’ 2024 ಆಯೋಜಿಸಲಾಯಿತು.

    ಸಮರ್ಪಣಾ ಎಜುಕೇಶನಲ್ ಟ್ರಸ್ಟ್ (ರಿ)ಹೆಮ್ಮಾಡಿ ಇದರ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿ ಜೀವನದಲ್ಲಿ ಹತ್ತನೇ ತರಗತಿ ಪ್ರಮುಖವಾದ ಕಾಲಘಟ್ಟವಾಗಿದ್ದು ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಕಲಿಕೆ ಅತ್ಯುತ್ತಮವಾಗಬೇಕು ಓದುವ ಆಸಕ್ತಿ ದಿನದಿಂದ ದಿನಕ್ಕೆ ಹೆಚ್ಚಾಗಬೇಕು. ವಿದ್ಯಾರ್ಥಿಗಳೇ ಸಮಯ ವ್ಯರ್ಥ ಮಾಡದೇ ಓದಿ ಭವಿಷ್ಯ ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು. ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ಶಿಕ್ಷಕರಾದ ಕರುಣಾಕರ ಶೆಟ್ಟಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪರೀಕ್ಷಾ ಪೂರ್ವ ತಯಾರಿಯ ಕುರಿತು ಸಾಕಷ್ಟು ವಿಚಾರಗಳನ್ನು ತಿಳಿಸಿದರು. ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ರವಿದಾಸ್ ಶೆಟ್ಟಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

    ವಿದ್ಯಾರ್ಥಿಗಳು ಪ್ರಾರ್ಥಿಸಿ, ಜನತಾ ಕಾಲೇಜಿನ ಉಪನ್ಯಾಸಕರಾದ ಉಮೇಶ್ ನಾಯ್ಕ್ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

  • ಕುಂದಾಪುರ: ಜಿಲ್ಲಾ ಕೆಡಿಪಿ ಸದಸ್ಯರಾಗಿ ಗಂಗಾಧರ ಶೆಟ್ಟಿ ನಾಮನಿರ್ದೇಶನ

    ಕುಂದಾಪುರ: ಜಿಲ್ಲಾ ಕೆಡಿಪಿ ಸದಸ್ಯರಾಗಿ ಗಂಗಾಧರ ಶೆಟ್ಟಿ ನಾಮನಿರ್ದೇಶನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಕುಂದಾಪುರ ತಾಲೂಕಿನ ಆನಗಳ್ಳಿ ಗ್ರಾಮ ಪಂಚಾಯತ್ ನ ಹೇರಿಕುದ್ರು ನಡುಮನೆ ಗಂಗಾಧರ ಶೆಟ್ಟಿ ಅವರನ್ನು ನಾಮನಿರ್ದೇಶನಗೊಳಿಸಿ ರಾಜ್ಯ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

    ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ರಚಿಸಲಾದ ಉಡುಪಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಮಿತಿಗೆ ತಮ್ಮನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.