Category: ಸುದ್ದಿ

  • ಕುಂದಾಪುರ :ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ದಿಗೆ ಸರ್ಕಾರ ಮನಸ್ಸು ಮಾಡಬೇಕು – ಸಚಿವ ಸತೀಶ್ ಜಾರಕಿಹೊಳಿ

    ಕುಂದಾಪುರ :ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ದಿಗೆ ಸರ್ಕಾರ ಮನಸ್ಸು ಮಾಡಬೇಕು – ಸಚಿವ ಸತೀಶ್ ಜಾರಕಿಹೊಳಿ

    ಕುಂದಾಪುರ ಮಿರರ್ ‌ಸುದ್ದಿ…

    ಕುಂದಾಪುರ: ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿದ್ದು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದ್ಯತೆ ನೀಡಬೇಕಾಗಿದೆ ಎಂದು ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

    ಅವರ ಕುಂದಾಪುರದ ಹೃದಯಭಾಗ ಶಾಸ್ತ್ರೀ ವೃತ್ತದ ಸಮೀಪ ನೂತನವಾಗಿ ತಲೆಎತ್ತಿದ ಹೊಟೇಲ್ ಯುವಮನೀಶ್ ಉದ್ಘಾಟಿಸಿ ಮಾತನಾಡಿದರು.

    ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿಗಳಿಗೆ ಅವಕಾಶವಿದ್ದರೆ ಸಾಲದು, ಅದನ್ನು ಗುರುತಿಸಿ ಆದ್ಯತೆ ನೀಡುವ ಇಚ್ಚಾಶಕ್ತಿ ತೋರಿದಲ್ಲಿ ಜಗತ್ತೇ ತಿರುಗಿನೋಡುವಂತಾಗುತ್ತದೆ ಎಂದರು.

    ದೀಪ ಬೆಳಗಿಸಿದ ಮಾಜೀ ಸಚಿವ ಬಾಲಚಂದ್ರ ಜಾರಕೀಹೊಳಿ ಮಾತನಾಡಿ, ಕಠಿಣ ಪರಿಶ್ರಮದಿಂದ ಮಾಡುವ ಯಾವುದೇ ಕೆಲಸಗಳು ಯಶಸ್ಸಾಗುತ್ತದೆ ಎಂದರು.

    ಗುಬ್ಬಲಗುಡ್ಡ ಕೆಂಪಯ್ಯ ಸ್ವಾಮಿ ಮಠ, ಘಟಪ್ರಭಾ ಇಲ್ಲಿನ ಮ.ನಿ.ಪ್ರ. ಡಾ| ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ಮಾಡುತ್ತಾ, ಯಾರು ತಾವು ಮಾಡುವ ಕಾಯಕವನ್ನು ಪ್ರೀತಿಸುತ್ತಾರೋ ಅವರು ಜೀವನದುದ್ದಕ್ಕೂ ಹೆಸರು ಮಾಡುತ್ತಾರೆ. ಅಂತಹಾ ವ್ಯಕ್ತಿತ್ವವನ್ನು ಉದಯಕುಮಾರ್ ಸಹೋದರರು ಹಾಗೂ ಜಯಶೀಲ್ ಶೆಟ್ಟಿ ಕುಟುಂಬ ಮಾಡುತ್ತಿದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಬೆಂಗಳೂರು- ಉಡುಪಿ- ಕುಂದಾಪುರ ಎಕ್ಸ್ ಪ್ರೆಸ್ ಕಾರೀಡಾರ್ ನಿರ್ಮಿಸುವ ಯೋಚನೆಯಿದ್ದು ಈ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಜೊತೆಗೆ ಅಧಿಕಾರಿಗಳನ್ನು ಸೇರಿಸಿ ಸಭೆ ನಡೆಸಲಾಗಿದೆ. ಅದೇ ರೀತಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಮೂಲಾಗ್ರ ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದರು.

    ಹಿಂದುಳಿದ ವರ್ಗಗಳ ಶಾಶ್ಚತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ. ಶ್ರೀನಿವಾಸ್, ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಮಾಜೀ ಶಾಸಕ ಕೆ. ಗೋಪಾಲ ಪೂಜಾರಿ, ಪತ್ರಕರ್ತ ವಿಶ್ವೇಶ್ವರ ಭಟ್, ರೆಡಿಸ್‌ಸನ್ ಬ್ಲೂ ಆರ್ಟಿಯಾ ಬೆಂಗಳೂರು ಇದರ ನಿರ್ದೇಶಕ ಕೆ. ನಾಗರಾಜ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪಾಲುದಾರರಾದ ಬಿ. ಉದಯಕುಮಾರ್ ಶೆಟ್ಟಿ, ಬಿ ವಿನಯಕುಮಾರ್ ಶೆಟ್ಟಿ, ಜಯಶೀಲ್ ಶೆಟ್ಟಿ, ಮನೀಶ್ ಜೆ ಶೆಟ್ಟಿ ಉಪಸ್ಥಿತರಿದ್ದರು.

    ಪಾಲುದಾರರಾದ ಬಿ. ಉದಯಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ಜಯಶೀಲ್ ಶೆಟ್ಟಿ ಸ್ವಾಗತಿಸಿದರು. ಪತ್ರಕರ್ತ ಕೆ.ಸಿ.ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

  • ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪತ್ರಕರ್ತರನ್ನು ಹೊರದಬ್ಬಿಸಿದ ಉಸ್ತುವಾರಿ ಸಚಿವೆ :ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

    ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪತ್ರಕರ್ತರನ್ನು ಹೊರದಬ್ಬಿಸಿದ ಉಸ್ತುವಾರಿ ಸಚಿವೆ :ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕುಂದಾಪುರದಲ್ಲಿ ಜ.27 ರಂದು ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ಕಾಂಗ್ರೆಸ್ ನಾಯಕರ ನಡೆಯಿಂದಾಗುತ್ತಿರುವ ಅಸಮಾಧಾನದ ವಿರುದ್ಧ ಕಾರ್ಯಕರ್ತರು ಮಾತನಾಡುತ್ತಿರುವ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಮಾಧ್ಯಮದವರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿ ಹೊರದಬ್ಬಿರುವುದನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ.

    ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರುಗಳ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದು ಸಭಾ ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ವೇದಿಕೆಯಿಂದ ಇಳಿದುಬಂದು ಮಾಧ್ಯಮದವರ ಕ್ಯಾಮೆರಾ ಚಿತ್ರೀಕರಣಕ್ಕೆ ಅಡ್ಡಗಟ್ಟಿ ತಳ್ಳಿದ್ದಾರೆ. ಇದರಿಂದ ಕೆಲ ಹೊತ್ತು ಸಂದಿಗ್ಧತೆ ವಾತಾವರಣ ಸೃಷ್ಟಿಯಾಯಿತು. ಇದೆಲ್ಲಾ ಘಟನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸಹಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಸಹಿತ ಎರಡು ಬ್ಲಾಕ್ ಕಾಂಗ್ರೆಸ್‌ನ ಮುಖಂಡರುಗಳು ದುರ್ವರ್ತನೆ ತೋರಿದ ಮುಖಂಡನನ್ನು ತಡೆಯುವ ಯಾವುದೇ ಪ್ರಯತ್ನ ಮಾಡದೇ ಮೂಕ ಪ್ರೇಕ್ಷಕರಾಗಿ ವರ್ತಿಸಿದ್ದಾರೆ. ಬಳಿಕ ಸಚವೆ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುವ ಮೊದಲಿಗೆ ಮಾಧ್ಯಮದವರನ್ನು ಹೊರಹೋಗಿ ಎಂದು ನೇರವಾಗಿ ಹೇಳುವ ಮೂಲಕ ಅವಮಾನ ಪಡಿಸಿ ಪತ್ರಿಕಾ ಸ್ವಾತಂತ್ರ್ಯಕ್ಕೆ ದಕ್ಕೆ ತಂದಿದ್ದಾರೆ.

    ಕುಂದಾಪುರದಲ್ಲಿ ನಡೆಯುವ ವಿವಿಧ ಪಕ್ಷಗಳ ಕಾರ್ಯಕ್ರಮದಲ್ಲಿ ಕುಂದಾಪುರ ಮಾಧ್ಯಮ ಮಿತ್ರರು ಸೌಹಾರ್ದಯುತವಾಗಿ ಭಾಗವಹಿಸಿ ಕಾರ್ಯಕ್ರಮದ ವರದಿ ಮಾಡುತ್ತಾ ಬಂದಿದ್ದು ಕಾಂಗ್ರೆಸ್ ಪಕ್ಷದ ಈ ದುರ್ವರ್ತನೆ ಪತ್ರಕರ್ತರ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಆದ್ದರಿಂದ ಈ ಘಟನೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ ಕಾರ್ಯಾಧ್ಯಕ್ಷ ಕೊಳ್ಕೆಬೈಲು ಕಿಶನ್ ಹೆಗ್ಡೆ ಹಾಗೂ ಎರಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಆಗ್ರಹಿಸಿದೆ.

  • ಕುಂದಾಪುರ :ಜ.27ಕ್ಕೆ ಯುಕ್ತಿ ಉಡುಪ ಮತ್ತು ಸುನಿಧಿ ಉಡುಪ ಅವರ ಭರತನಾಟ್ಯ ರಂಗಪ್ರವೇಶ

    ಕುಂದಾಪುರ :ಜ.27ಕ್ಕೆ ಯುಕ್ತಿ ಉಡುಪ ಮತ್ತು ಸುನಿಧಿ ಉಡುಪ ಅವರ ಭರತನಾಟ್ಯ ರಂಗಪ್ರವೇಶ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಇಲ್ಲಿನ ಬಳ್ಕೂರು ಗ್ರಾಮದ ಕೃಷಿಕ ದಂಪತಿಗಳಾದ ಬಿ. ರಾಘವ ಉಡುಪ ಮತ್ತು ಶ್ರೀಕಂಠಿ ಉಡುಪ (ಗೃಹಿಣಿ) ಅವರ ಮಕ್ಕಳಾದ ಯುಕ್ತಿ ಉಡುಪ ಮತ್ತು ಸುನಿಧಿ ಉಡುಪ ಇವರುಗಳ ಆರ್ರಂಗೆಟ್ರಂ (ರಂಗಪ್ರವೇಶ) ಕಾರ್ಯಕ್ರಮವು ಇದೇ ಜನವರಿ 27ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಸಂಜೆ4.30 ನಡೆಯಲಿದೆ ಎಂದು ಶ್ರೀ ರಾಘವ ಉಡುಪ ಅವರು ತಿಳಿಸಿದ್ದಾರೆ.

    ಯುಕ್ತಿ ಉಡುಪ ಅವರ ಪರಿಚಯ:
    ಬಿ. ರಾಘವ ಉಡುಪ ಮತ್ತು ಶ್ರೀಕಂಠಿ ಉಡುಪ ದಂಪತಿಗಳ ಪುತ್ರಿ ಯುಕ್ತಿ ಅವರು ತಮ್ಮ 12 ನೇ ವಯಸ್ಸಿನಲ್ಲಿ ಭರತನಾಟ್ಯ ಕಲಿಯಲು ಪ್ರಾರಂಭಿಸಿದರು ಮತ್ತು ನೃತ್ಯ ವಸಂತ ನಾಟ್ಯಾಲಯ ಕುಂದಾಪುರದ ನಿರ್ದೇಶಕರಾದ ಗುರು ವಿದುಷಿ ಪ್ರವಿತಾ ಅಶೋಕ್ ಅವರ ಮಾರ್ಗದರ್ಶನದಲ್ಲಿ ಭರತನಾಟ್ಯದಲ್ಲಿ ‘ವಿದ್ವತ್’ ಅನ್ನು ಅತ್ಯುತ್ತಮವಾಗಿ ಪೂರ್ಣಗೊಳಿಸಿದ್ದಾರೆ.

    ಶಿಕ್ಷಣ
    ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ಮತ್ತು ವಿಕೆಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ಕುಂದಾಪುರದ ಆರ್.ಎನ್.ಶೆಟ್ಟಿ ಪಿಯು ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ, ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಪದವಿ ಮತ್ತು ಪ್ರಸ್ತುತ ಮಂಗಳೂರಿನ ವಾಮಂಜೂರಿನ ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ ಓದುತ್ತಿದ್ದಾರೆ.

    ಸಾಧನೆಗಳು
    • ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೃತೀಯ ಸ್ಥಾನ
    • ಜಿಲ್ಲಾ ಮಟ್ಟದ ಕಲಾಶ್ರೀ ಪ್ರಶಸ್ತಿ ಲಭಿಸಿದೆ
    • ಬೆಂಗಳೂರಿನ ಗೋಪಿನಾಥದಾಸ್ ನ್ಯಾಸ ಅವರು ನಡೆಸಿದ ರಾಷ್ಟ್ರೀಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ರೋಲಿಂಗ್ ಶೀಲ್ಡ್ ಪಡೆದರು.
    • ವಿಶ್ವವಿದ್ಯಾನಿಲಯ ಮಟ್ಟದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಾದ ‘ನೃತ್ಯ ಪ್ರತಿಭಾ’ದಲ್ಲಿ ಪ್ರಥಮ ಸ್ಥಾನ ಮತ್ತು ತಮಿಳುನಾಡಿನ ಕಾರೈಕುಡಿಯ ಅಳಗಪ್ಪ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಮಟ್ಟಕ್ಕೆ ಆಯ್ಕೆಯಾದರು.
    • ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
    • ಪುತ್ತೂರು, ಎಂಐಟಿ, ಹಾಗೂ ಮಂಗಳೂರಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ.
    • ಇನ್ಸೈಟ್ ಫೌಂಡೇಶನ್, ಎನ್.ಜೆ ನಡೆಸಿದ ಅಂತರರಾಷ್ಟ್ರೀಯ ಜಾಗತಿಕ ಆನ್ಲೈನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
    • ಎಐಡಿಎ ಭಿಲಾಯ್ ನಡೆಸಿದ ಅಂತರರಾಷ್ಟ್ರೀಯ ಆನ್ಲೈನ್ ಭರತನಾಟ್ಯ ಸ್ಪರ್ಧೆಯಲ್ಲಿ ಎ ಗ್ರೇಡ್ ಮತ್ತು ಪ್ರಥಮ ಸ್ಥಾನ
    • ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಪ್ರಥಮ ಸ್ಥಾನ
    • ಭರತನಾಟ್ಯದಲ್ಲಿ ಕರ್ನಾಟಕ ರಾಜ್ಯ ಸಂಗೀತ ಮತ್ತು ನೃತ್ಯ ವಿದ್ಯಾರ್ಥಿವೇತನವನ್ನು ಪಡೆದರು.
    • ಬೆಂಗಳೂರಿನ ಅಂಗಿಕಾ ನೃತ್ಯೋತ್ಸವದಲ್ಲಿ ಪ್ರಥಮ ಸ್ಥಾನ
    • ಮಂಡ್ಯದಲ್ಲಿ ನಡೆದ ರಾಷ್ಟ್ರಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ‘ನಾಟ್ಯ ಸಮ್ಮೋಹಿನಿ’ ಬಿರುದು ಪಡೆದಿದ್ದಾರೆ.
    • ಮೈಸೂರಿನಲ್ಲಿ ನಡೆದ ಭಾರತೀಯ ನೃತ್ಯ ಕಲಾ ಪರಿಷತ್ತು ನಡೆಸಿದ ರಾಷ್ಟ್ರಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
    • ಉಡುಪಿಯಲ್ಲಿ ನಡೆದ ಸೃಷ್ಟಿ ನೃತ್ಯ ಕಲಾ ಕುಟೀರದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
    • ರಾಷ್ಟ್ರಮಟ್ಟದ ಭರತನಾಟ್ಯದಲ್ಲಿ ‘ಯುವಕಲಾ ಪ್ರಶಸ್ತಿ’ಯೊಂದಿಗೆ ಪ್ರಥಮ ಸ್ಥಾನ
    ಮಂಗಳೂರಿನ ಟೌನ್ಹಾಲ್ನಲ್ಲಿ ಶ್ರೀದೇವಿ ನೃತ್ಯಕೇಂದ್ರ ಆಯೋಜಿಸಿದ್ದ ನೃತ್ಯೋತ್ಸವ-2023 ಸ್ಪರ್ಧೆ
    • ವರ್ಲ್ಡ್ ಫೋರಮ್ ಆಫ್ ಆರ್ಟ್ ಅಂಡ್ ಕಲ್ಚರ್ ನಡೆಸಿದ ಅಂತರಾಷ್ಟ್ರೀಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಫೈನಲಿಸ್ಟ್ ಆಗಿ ಆಯ್ಕೆಯಾಗಿದ್ದಾರೆ- ಜಾಂಕೃತಿ ಎಂಬ ಪ್ರತಿಷ್ಠಿತ ವೇದಿಕೆಗಳಲ್ಲಿ ಏಕವ್ಯಕ್ತಿ ಪ್ರದರ್ಶನ ಸೇರಿದಂತೆ ಏಕವ್ಯಕ್ತಿ, ಮೂವರು ಮತ್ತುಗುಂಪು ಪ್ರದರ್ಶನಗಳನ್ನು ನೀಡಿದ್ದಾರೆ. ಯುವನೃತ್ಯಪ್ರತಿಭೋತ್ಸವ 2023-ಉಡುಪಿ, ಕರ್ನಾಟಕ ಕರಾವಳಿ ನೃತ್ಯಕಲಾಪರಿಷತ್ತು, ಮಂಗಳೂರು, ಶಿವಮೊಗ್ಗ ಪುಷ್ಪಾ ಪ್ರದರ್ಶನ ಕಲಾ ಕೇಂದ್ರ ಮತ್ತು ಗೋಪಿನಾಥದಾಸ್ ನ್ಯಾಸ, ಬೆಂಗಳೂರು ಇಲ್ಲಿ ಪ್ರದರ್ಶನ ನೀಡಿದ ಹೆಮ್ಮೆ ಇವರದು.
    ಅಲ್ಲದೇ
    ‘ನೃತ್ಯಭಿವಂದನಂ’ಕುಂದಾಪುರದ ನೃತ್ಯ ವಸಂತ ನಾಟ್ಯಾಲಯ ಕುಂದಾಫುರಮ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ, ಪುತ್ತೂರು ಆಯೋಜಿಸಿದ್ದ ‘ನೃತ್ಯಂತರಂಗ’ ಹೆಜ್ಜೆ ಗೆಜ್ಜೆ ನೃತ್ಯ ಅಕಾಡೆಮಿ, ಉಡುಪಿ ಆಯೋಜಿಸಿದ್ದ ‘ನೃತ್ಯಾಂಜಲಿ’
    ಉಡುಪಿಯ ಸೃಷ್ಠಿ ನೃತ್ಯ ಕಲಾ ಕುಟೀರ ಆಯೋಜಿಸಿದ್ದ ‘ನೃತ್ಯೋತ್ಸವ’ ಭಾಗವಹಿಸಿದ್ದಾರೆ. ಭಾರತದ ಹೆಸರಾಂತ ನೃತ್ಯಗಾರ ಕಾರ್ಯಾಗಾರಗಳಲ್ಲಿ ಭಾಗವಹಿಸಿದ್ದಾರೆ.

    ಸುನಿಧಿ ಉಡುಪ ಪರಿಚಯ:
    ಬಿ. ರಾಘವ ಉಡುಪ ಮತ್ತು ಶ್ರೀಮತಿ ಶ್ರೀಕಂಠಿ ಉಡುಪ ಅವರ ಇನ್ನೋರ್ವ ಪುತ್ರಿ ಸುನಿಧಿ ಉಡುಪ
    ನೃತ್ಯ ವಸಂತ ನಾಟ್ಯಾಲಯ ಕುಂದಾಪುರದ ನಿರ್ದೇಶಕರಾದ ಗುರು ವಿದುಷಿ ಪ್ರವಿತಾ ಅಶೋಕ್ ಅವರ ಮಾರ್ಗದರ್ಶನದಲ್ಲಿ 9 ವರ್ಷಗಳಿಂದ ಭರತನಾಟ್ಯವನ್ನು ಕಲಿಯುತ್ತಿದ್ದಾರೆ ಮತ್ತು ಭರತನಾಟ್ಯದಲ್ಲಿ ಶ್ರೇಷ್ಠತೆಯನ್ನು ಪೂರ್ಣಗೊಳಿಸಿದ್ದಾರೆ.

    ಶಿಕ್ಷಣ:
    ವಿಕೆಆರ್ ಆಚಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮುಗಿಸಿ, ಪ್ರಸ್ತುತ ಕುಂದಾಪುರದ ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಾರೆ.

    ಸಾಧನೆಗಳು
    • ಕಲ್ಚರಲ್ ಟ್ಯಾಲೆಂಟ್ ಸರ್ಚ್ ಸ್ಕಾಲರ್ಶಿಪ್ ಸ್ಕೀಮ್, ನವದೆಹಲಿಯ ಅಡಿಯಲ್ಲಿ ಭರತನಾಟ್ಯದಲ್ಲಿ ಸಿಸಿಆರ್ಟಿ ವಿದ್ಯಾರ್ಥಿವೇತನವನ್ನು ಪಡೆದಿದ್ದಾರೆ.
    • ಎಐಡಿಎ ಭಿಲಾಯ್ ನಡೆಸಿದ ಅಂತರರಾಷ್ಟ್ರೀಯ ಆನ್ಲೈನ್ ಭರತನಾಟ್ಯ ಸ್ಪರ್ಧೆಯಲ್ಲಿ ಎ ಗ್ರೇಡ್ ಮತ್ತು ಪ್ರಥಮ ಸ್ಥಾನ.
    • ನಾಟ್ಯನೂಪುರ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
    • ಮಯೂರಿ ನೃತ್ಯಾಲಯದಿಂದ ರಾಷ್ಟ್ರೀಯ ಮಟ್ಟದ ಆನ್ಲೈನ್ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
    • ಮೈಸೂರಿನ ಶ್ರೀ ದುರ್ಗಾ ನೃತ್ಯ ಅಕಾಡೆಮಿ ನಡೆಸಿದ ರಾಷ್ಟ್ರಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ
    • ಬೆಂಗಳೂರಿನ ಗೋಪಿನಾಥದಾಸ್ ನ್ಯಾಸ ನಡೆಸಿದ ರಾಷ್ಟ್ರಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
    • ಬೆಂಗಳೂರಿನಲ್ಲಿ ನಡೆದ ಶ್ರೀನಿವಾಸ ಕಲಾ ನಿಲಯ ನಡೆಸಿದ ‘ನೃತ್ಯ ಸಮಾಗಮ’ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
    • ಬೆಂಗಳೂರಿನ ಅಂಗಿಕಾ ನೃತ್ಯೋತ್ಸವದಲ್ಲಿ ಪ್ರಥಮ ಸ್ಥಾನ
    • ತಾಲೂಕು ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
    • ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಮಂಡಳಿ ನಡೆಸಿದ ಬೋರ್ಡ್ ಪರೀಕ್ಷೆಗಳಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಗಳಿಸಿದ್ದಾರೆ
    ಪ್ರತಿಷ್ಠಿತ ವೇದಿಕೆಗಳಲ್ಲಿ ಏಕವ್ಯಕ್ತಿ ಮತ್ತು ಗುಂಪು ಪ್ರದರ್ಶನಗಳನ್ನು ನೀಡಿದ್ದಾರೆ, ಭಾರತದ ಹೆಸರಾಂತ ನೃತ್ಯಗಾರರ ಕಾರ್ಯಾಗಾರಗಳಲ್ಲಿ ಭಾಗವಹಿಸಿದ್ದಾರೆ.

  • ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ  – ಸಿಎ ವಿದ್ಯಾರ್ಥಿಗಳಿಗೆ ನೂತನ ಬ್ಯಾಚ್ ಆರಂಭ

    ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ – ಸಿಎ ವಿದ್ಯಾರ್ಥಿಗಳಿಗೆ ನೂತನ ಬ್ಯಾಚ್ ಆರಂಭ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಸಿಎ/ಸಿಎಸ್ ಪರೀಕ್ಷೆಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ರಾಷ್ಟ್ರಮಟ್ಟದಲ್ಲಿ ರ‍್ಯಾಂಕ್ ಗಳನ್ನು ಪಡೆದ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಸಿಎ/ಸಿಎಸ್ ತರಬೇತಿ ಸಂಸ್ಥೆ ಶಿಕ್ಷ‌ ಪ್ರಭ ಅಕಾಡಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಂಸ್ಥೆಯು ಪದವಿ ಪೂರ್ಣಗೊಳಿಸಿದ ಮತ್ತು ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಹಾಗೂ ಸಿಎ ಫೌಂಡೇಶನ್ ವಿದ್ಯಾರ್ಥಿಗಳಿಗಾಗಿ ನೂತನ ಸಿಎ ಇಂಟರ್ಮೀಡಿಯೇಟ್ ಬ್ಯಾಚ್ ಆರಂಭಿಸುತ್ತಿದ್ದು ಫೆಬ್ರವರಿ 1ರಂದು ಮಾಹಿತಿ ಕಾರ್ಯಾಗಾರವನ್ನು ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರವ ಶಿಕ್ಷಪ್ರಭ ಅಕಾಡೆಮಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಸಿಎ ವಿದ್ಯಾರ್ಥಿಗಳ ಹೊಸ ಮಾದರಿ ಪಠ್ಯಕ್ರಮ:
    ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಗೆ ಎಂಟು ವಿಷಯಗಳಲ್ಲಿ ಪರೀಕ್ಷೆ ನಡೆಸುತ್ತಿತ್ತು ಆದರೆ ಮುಂದಿನ ಮೇ 2024ರಿಂದ ನಡೆಯುವ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯನ್ನು ಆರು ವಿಷಯಗಳಲ್ಲಿ ನಡೆಸುವ ನೂತನ ಪಠ್ಯಕ್ರಮವನ್ನು ಜಾರಿಗೆ ತಂದಿದ್ದು ಇದು ವಿದ್ಯಾರ್ಥಿಗಳಿಗೆ ಒಂದೇ ಪ್ರಯತ್ನದಲ್ಲಿ ಆರು ವಿಷಯ(ಸಬ್ಜೆಕ್ಟ್)ಗಳನ್ನು ತೇರ್ಗಡೆ ಹೊಂದಲು ಸಹಕಾರಿಯಾಗಲಿದೆ. ಸಿಎ ಅಂತಿಮ ಹಂತದ ಪರೀಕ್ಷೆಗೂ ಕೂಡ ಹೊಸ ಮಾದರಿ ಪಠ್ಯಕ್ರಮದ ಪ್ರಕಾರ ಆರು ವಿಷಯ(ಸಬ್ಜೆಕ್ಟ್)ಗಳ ಪರೀಕ್ಷೆಯಾಗಿರುತ್ತದೆ. ಹಿಂದಿನ ಮಾದರಿಯಲ್ಲಿ ವಿದ್ಯಾರ್ಥಿಗಳು ಎಂಟು ವಿಷಯ(ಸಬ್ಜೆಕ್ಟ್)ಗಳ ಪರೀಕ್ಷೆಯನ್ನು ಎದುರಿಸಬೇಕಾಗಿತ್ತು.

    ಅನುಭವಿ ಶಿಕ್ಷಕರ ವೃಂದ:
    ನೂತನವಾಗಿ ಆರಂಭವಾಗುವ ಸಿಎ ಇಂಟರ್ಮೀಡಿಯೇಟ್ ಬ್ಯಾಚ್‌ಗೆ ಶಿಕ್ಷ ಪ್ರಭ ಅಕಾಡೆಮಿಯಲ್ಲಿ ಅನುಭವಿ ಲೆಕ್ಕಪರಿಶೋಧಕರನ್ನು ಒಳಗೊಂಡಿರುವ ಶಿಕ್ಷಕರ ತಂಡ ತರಬೇತಿಯನ್ನು ನೀಡಲಿದ್ದು ಅಡ್ವಾನ್ಸ್ಡ್ ಅಕೌಂಟಿಂಗ್ ವಿಷಯಕ್ಕೆ ಸಿಎ ಸಂತೋಷ್ ಪ್ರಭು ಮತ್ತು ಪ್ರತಾಪಚಂದ್ರ ಶೆಟ್ಟಿ, ಕಾರ್ಪೊರೇಟ್ ಅಂಡ್‌ ಅದರ್‌ ಲಾ – ಸಿ ಎ ಅರುಣ್ ನಾಯಕ್ ಮತ್ತು ಸಿಎ ವಿಲಾಸ್‌ ಶೆಟ್ಟಿ, ಇನ್‌ಕಮ್ ಟ್ಯಾಕ್ಸ್ ಲಾ- ಸಿ ಎ ಅರುಣ್ ನಾಯಕ್, ಜಿಎಸ್‌ಟಿ- ಶ್ರೀಮತಿ ನೇಹಾ ಪ್ರಭು, ಕಾಸ್ಟ್ ಅಂಡ್ ಮ್ಯಾನೇಜ್‌ಮೆಂಟ್ ಅಕೌಂಟಿಂಗ್- ಸಿಎ ವಿಲಾಸ್‌ ಶೆಟ್ಟಿ, ಆಡಿಟಿಂಗ್ ಅಂಡ್ ಎಥಿಕ್ಸ್- ಸಿಎ ಸಂತೋಷ್ ಪ್ರಭು, ಫೈನಾನ್ಸಿಯಲ್ ಮ್ಯಾನೇಜ್‌ಮೆಂಟ್ ಅಂಡ್ ಸ್ಟ್ರ್ಯಾಟಜಿಕ್ ಮ್ಯಾನೇಜ್‌ಮೆಂಟ್- ಸಿಎ ನಾಗೇಂದ್ರ ಭಕ್ತ ಮತ್ತು ಸಿಎ ರಾಷ್ಟ್ರಿತ್‌ ಅವರುಗಳು ತರಬೇತುದಾರರಾಗಿ ಆಗಮಿಸಿ ಆಗಸ್ಟ್ 2024ರ ಒಳಗೆ ಸಿಎ ಇಂಟರ್ಮೀಡಿಯೇಟ್ ಎರಡು ಗ್ರೂಪ್ ನ ಆರು ವಿಷಯ(ಸಬ್ಜೆಕ್ಟ್)ಗಳ ತರಬೇತಿಯನ್ನು ನೀಡಿ ನವೆಂಬರ್ 2024ರ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲಿದ್ದಾರೆ.
    ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು ಒಂದು ಬ್ಯಾಚ್ ನಲ್ಲಿ ನಿಯಮಿತ ವಿದ್ಯಾರ್ಥಿಗಳು ಇರಲಿದ್ದು, ಪದವಿ ಪೂರ್ಣಗೊಳಿಸಿದ, ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಮತ್ತು ಸಿಎ ಫೌಂಡೇಶನ್ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಶಿಕ್ಷ ಪ್ರಭ ಅಕಾಡೆಮಿಯಲ್ಲಿ ಫೆಬ್ರವರಿ 1ರಂದು ನಡೆಯಲಿರುವ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದೆ ಹಾಗೂ ಆಸಕ್ತ ವಿದ್ಯಾರ್ಥಿಗಳು ನೂತನ ಬ್ಯಾಚ್‌ಗೆ ತಮ್ಮ ಹೆಸರನ್ನು ಸಂಸ್ಥೆಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳ ಬಹುದು.

    ಹೆಚ್ಚಿನ ಮಾಹಿತಿಗಾಗಿ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿಯ ಕಚೇರಿಗೆ ಭೇಟಿ ನೀಡಬಹುದಾಗಿದೆ ಅಥವಾ 996429175, 9845925983 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕೋಟ :ಪಂಚವರ್ಣ ಮಹಿಳಾ ಮಂಡಲದ 8ನೇ ಮಾಲಿಕೆ ಅರಿವು ನಿಮಗಿರಲಿ ನೆರವು

    ಕೋಟ :ಪಂಚವರ್ಣ ಮಹಿಳಾ ಮಂಡಲದ 8ನೇ ಮಾಲಿಕೆ ಅರಿವು ನಿಮಗಿರಲಿ ನೆರವು

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಾತೃಸಂಸ್ಥೆ ಕೋಟ ಪಂಚವರ್ಣ ಯುವಕ ಮಂಡಲದ ಸಹಯೋಗದೊಂದಿಗೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಪಾಂಡೇಶ್ವರ ಇದರ ಸಂಯೋಜನೆಯೊಂದಿಗೆ ಇದೇ ಜ.290ರಂದು ಸಾಮಾಜಿಕ ಕಾರ್ಯಕ್ರಮ ಹದಿಹರೆಯದವರ ಸಮಸ್ಯೆಗಳು ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ. 8ನೇ ಮಾಲಿಕೆ ಅರಿವು ನಿಮಗಿರಲಿ ನೆರವು ಶೀರ್ಷಿಕೆಯಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇಲ್ಲಿನ ಸಭಾಭವನದಲ್ಲಿ ಪೂರ್ವಾಹ್ನ 10-00ಕ್ಕೆ ಕಾರ್ಯಕ್ರಮ ಹಮ್ಮಿಕೊಂಡಿದೆ.

    ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಕಾರ್ಯಕರ್ತೆ ಪರಿಸರದ ಪ್ರಸಿದ್ಧ ವೈದ್ಯೆ ಡಾ.ವಾಣಿಶ್ರೀ ಐತಾಳ್ ಭಾಗವಹಿಸಲಿದ್ದಾರೆ ಎಂದು ಪಂಚವರ್ಣ ಮಹಿಳಾ ಮಂಡಲದ ಆಧ್ಯಕ್ಷೆ ಲಲಿತಾ ಗಿಳಿಯಾರು ತಿಳಿಸಿದ್ದಾರೆ.

  • ಕೋಟ :ರೈತರೆಡೆಗೆ ನಮ್ಮ ನಡಿಗೆ ವಿಶಿಷ್ಟ ಸಿಗಡಿ ಕೃಷಿ ಕಾಯಕ ಸಾಧಕ ಕೋಡಿ ಸದಾಶಿವ ಐತಾಳ್ ಆಯ್ಕೆ

    ಕೋಟ :ರೈತರೆಡೆಗೆ ನಮ್ಮ ನಡಿಗೆ ವಿಶಿಷ್ಟ ಸಿಗಡಿ ಕೃಷಿ ಕಾಯಕ ಸಾಧಕ ಕೋಡಿ ಸದಾಶಿವ ಐತಾಳ್ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಕೋಟ ಹೋಬಳಿಯ ವಿವಿಧ ಭಾಗಗಳ ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 32ರ ಸಂಭ್ರಮ ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಬರುವ ಜ.30ರ ಸಂಜೆ.4.30ಗ ನಡೆಯಲಿದ್ದು ಈ ಬಾರಿ ಕೃಷಿ ಮತ್ತು ಹೈನುಗಾರಿಕೆ ಹಾಗೂ ಸಿಗಡಿ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಕೋಡಿ ಕನ್ಯಾಣದ ಸದಾಶಿವ ಐತಾಳ್ ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿದ್ದಾರೆ.

  • ಕುಂದಾಪುರ :ಜಗತ್ತಿನ ಅತೀ ದೊಡ್ಡ ಸಂವಿಧಾನ ಅಂಬೇಡ್ಕರ್ ನೀಡಿದ್ದಾರೆ – ರಶ್ಮಿ ಎಸ್ ಆರ್

    ಕುಂದಾಪುರ :ಜಗತ್ತಿನ ಅತೀ ದೊಡ್ಡ ಸಂವಿಧಾನ ಅಂಬೇಡ್ಕರ್ ನೀಡಿದ್ದಾರೆ – ರಶ್ಮಿ ಎಸ್ ಆರ್

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ವಿಶ್ವದ ಬೇರೆ ಬೇರೆ ದೇಶಗಳಿಂದ ಉತ್ತಮವಾದುದನ್ನು ಎರವಲು ಪಡೆದು ಡಾ| ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ನಮ್ಮ ದೇಶದ ಸಂವಿಧಾನ ಜಗತ್ತಿನಲ್ಲಿಯೇ ದೊಡ್ಡ ಹಾಗೂ ಬಲಿಷ್ಠವಾದುದು. ನಮ್ಮಿಂದಾಗುವಂತಹ ಸಹಾಯವನ್ನು ದೇಶಕ್ಕೆ, ಸಮಾಜಕ್ಕೆ ಮಾಡೋಣ, ಬೀಚ್ ಸ್ವಚ್ಛತೆಯಂತಹ ಸಾಮಾಜಿಕ ಕೈಂಕರ್ಯದಲ್ಲಿ ಭಾಗಿಯಾಗೋಣ ಎಂದು ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತೆ ರಶ್ಮೀ ಎಸ್. ಆರ್. ಕರೆ ನೀಡಿದರು.

    ಅವರು ಶುಕ್ರವಾರ ಇಲ್ಲಿನ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಗಣರಾಜ್ಯೋತ್ಸವದ ಧ್ವಜಾರೋಹಣಗೈದು, ಪಥಸಂಚಲನೆಯ ಗೌರವರಕ್ಷೆ ಸ್ವೀಕರಿಸಿ ಮಾತನಾಡಿದರು.

    ಸ್ವಾತಂತ್ರ್ಯ ನಂತರ ಶೈಕ್ಷಣಿಕ, ಆರ್ಥಿಕ ಪ್ರಗತಿಯ ನಿಟ್ಟಿನಲ್ಲಿ ಭಾರತದ ಬೌಗೋಳಿಕತೆಗೆ ಅನುಗುಣವಾಗಿ ಇತರೆ ದೇಶಗಳಿಗಿಂತ ಭಿನ್ನವಾಗಿ ರೂಪಿಸಲಾಗಿದ್ದು, ಅದರಂತೆ ಒಬ್ಬ ವ್ಯಕ್ತಿಯ ಬೆಳವಣಿಗೆಯಿಂದ ದೇಶದ ಬೆಳವಣಿಗೆಯು ಸಾಧ್ಯ. ಅದಕ್ಕೆ ಸಂವಿಧಾನವೇ ಶಕ್ತಿಯಾಗಿದೆ. ರಾಜ್ಯ ಹಾಗೂ ಕೇಂದ್ರದ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಮೂಲಕ ದೇಶವನ್ನು ಪ್ರಗತಿ ಪಥದಲ್ಲಿ ಮುನ್ನಡೆಸೋಣ ಎಂದರು.

    ನಗರ ಠಾಣಾಧಿಕಾರಿಗಳಾದ ಪ್ರಸಾದ್ ಕುಮಾರ್ ಕಮಾಂಡ್ ನೀಡಿದರೆ, ವಿನಯ ಕೊರ್ಲಹಳ್ಳಿ ನೇತೃತ್ವದಲ್ಲಿ ಪೊಲೀಸರ ತಂಡ, ಪುರಸಭೆಯ ಪೌರ ಕಾರ್ಮಿಕರ ತಂಡ, ಕುಂದಾಪುರದ ವಿ.ಕೆ.ಆರ್. ಆಚಾರ್ಯ ಆ. ಮಾ. ಶಾಲೆ, ಶ್ರೀ ವೆಂಕಟರಮಣ ಆ. ಮಾ. ಪ್ರೌಢಶಾಲೆ, ಸಂತ ಜೋಸೆಫ್ ಪ್ರೌಢಶಾಲೆ, ಸರಕಾರಿ ಮಾದರಿ ಹಿ.ಪ್ರಾ. ಶಾಲೆ (ಗರ್ಲ್ಸ್ ಸ್ಕೂಲ್), ಶಾಸಕರ ಮಾದರಿ ಹಿ.ಪ್ರಾ. ಶಾಲೆ ವಡೇರಹೋಬಳಿ, ಸಂತ ಮೇರಿಸ್ ಹಿ.ಪ್ರಾ. ಶಾಲೆ, ಸರಕಾರಿ ಬೋರ್ಡ್ ಹೈಸ್ಕೂಲ್, ವಡೇರಹೋಬಳಿ ಪ್ರೌಢಶಾಲೆ, ಸಂತ ಜೋಸೆಫ್ ಹಿ.ಪ್ರಾ. ಶಾಲೆಯ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಂತ ಜೋಸೆಫ್ ಹಿ.ಪ್ರಾ. ಶಾಲೆ ತಂಡ ಬ್ಯಾಂಡ್ ಸೆಟ್‌ನಲ್ಲಿ ಸಹಕರಿಸಿತು.

    ಕೃಷಿ ಇಲಾಖೆಯಿಂದ ತಾಲೂಕು ಮಟ್ಟದ ಕೃಷಿ ಪ್ರಶಸ್ತಿಯನ್ನು ಕರುಣಾಕರ ಶೆಟ್ಟಿ ಕೆದೂರು, ನಿತ್ಯಾನಂದ ಶೇರೆಗಾರ್ ಬೀಜಾಡಿ, ಉಷಾ ಬಾಯರಿ ಕೆದೂರು, ಇಂದಿರಾ ಶೆಡ್ತಿ ಹಳ್ನಾಡು, ಲಕ್ಷ್ಮೀ ಕಾಳಾವರ, ರುಕ್ಕು ಕಾಳಾವರ, ಶ್ರೀನಿವಾಸ ಶಾನು‘ಗ್ ಕುಂದಬಾರಂದಾಡಿ, ಬಿ. ರತ್ನಾಕರ ಶೆಟ್ಟಿ ಉಳ್ಳೂರು-೭೪, ನಾರಾಯಣ ಶೆಟ್ಟಿ ಹೇರೂರು, ಬಚ್ಚು ದೇವಾಡಿಗ ಕಟ್‌ಬೆಲ್ತೂರು, ಸತೀಶ ಶೇರಿಗಾರ್ ಕಂದಾವರ ಅವರಿಗೆ ಪ್ರದಾನ ಮಾಡಲಾಯಿತು.

    ವಿ.ಕೆ.ಆರ್. ಆಚಾರ್ಯ ಆ. ಮಾ. ಶಾಲೆ, ಹೋಲಿ ರೋಜರಿ ಆ.ಮಾ. ಶಾಲೆ, ಬಿ.ಆರ್. ರಾವ್ ಹ.ಪ್ರಾ.ಶಾಲೆ, ಶಾಸಕರ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಂದ ದೇಶ ‘ಕ್ತಿಯ ಸಾಂಸ್ಕೃತಿಕ ಕಾರ್‍ಯಕ್ರಮ ರಂಜಿಸಿತು. ಇದೇ ವೇಳೆ ಕಾರ್ಮಿಕರ ಇಲಾಖೆಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ಗಳನ್ನು ಹಸ್ತಾಂತರಿಸಲಾಯಿತು.

    ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ ಕೆ.ಯು., ತಾ.ಪಂ. ಕಾರ್‍ಯನಿರ್ವಾಹಣಾಧಿಕಾರಿ ಪ್ರಶಾಂತ್ ವಿ.ರಾವ್, ಪುರಸ‘ ಮುಖ್ಯಾಧಿಕಾರಿ ಮಂಜುನಾಥ್, ಪುರಸಭಾ ಸದಸ್ಯರು, ಮಾಜಿ ಸದಸ್ಯರು, ವೃತ್ತ ನಿರೀಕ್ಷಕ ನಂದಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ| ಪ್ರೇಮಾನಂದ್, ಸಿಡಿಪಿಒ ಅನುರಾಧ, ಸಹಾಯಕ ನಿರ್ದೇಶಕರಾದ ಯುವಜನ ಸೇವಾ ಇಲಾಖೆಯ ಕುಸುಮಾಕರ ಶೆಟ್ಟಿ, ಕೃಷಿ ಇಲಾಖೆಯ ರೂಪಾ ಮಾಡ, ಸಮಾಜ ಕಲ್ಯಾಣ ಇಲಾಖೆಯ ರಾಘವೇಂದ್ರ ವರ್ಣೇಕರ್, ಮೀನುಗಾರಿಕಾ ಇಲಾಖೆಯ ಸುಮಲತಾ, ಮತ್ತಿತರರು ಉಪಸ್ಥಿತರಿದ್ದರು.

    ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ ಸ್ವಾಗತಿಸಿ, ಬಿಇಒ ಶೋ‘ ಶೆಟ್ಟಿ ವಂದಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ನಿರೂಪಿಸಿದರು.

  • ಕೋಟ :ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಮೂಡುಗಿಳಿಯಾರು ಯೋಗಬನ ಹಾಗೂ ಸಾಲಿಗ್ರಾಮ ಡಿವೈನ್ ಪಾರ್ಕಗೆ ಭೇಟಿ

    ಕೋಟ :ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಮೂಡುಗಿಳಿಯಾರು ಯೋಗಬನ ಹಾಗೂ ಸಾಲಿಗ್ರಾಮ ಡಿವೈನ್ ಪಾರ್ಕಗೆ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ :ಬಿಜೆಪಿ ರಾಷ್ಟ್ರೀಯ ಪ್ರದಾನಕಾರ್ಯದರ್ಶಿ ಸಿ.ಟಿ ರವಿ ಬುಧವಾರ ಸಾಲಿಗ್ರಾಮದ ಡಿವೈನ್ ಪಾರ್ಕ ಹಾಗೂ ಮೂಡುಗಿಳಿಯಾರು ಎಸ್. ಎಚ್.ಆರ್ ಎಫ್‍ಗೆ ಭೇಟಿ ನೀಡಿ ಕೆಲ ಹೊತ್ತು ಅಲ್ಲಿ ಕಳೆದು ಅಲ್ಲಿನ ಆಧ್ಯಾತ್ಮ ಮತ್ತು ಅತ್ಯುತ್ತಮ ಆರೋಗ್ಯವನ್ನು ಪ್ರತಿಯೊಬ್ಬರಿಗೂ ಕರುಣಿಸಿ ಕೊಡುವ ಅದ್ಭುತ ಕೇಂದ್ರ ಎಂದು ಬಣ್ಣಿಸಿದ ಅವರು ಆಧ್ಯಾತ್ಮಿಕ ಕ್ಷೇತ್ರವಾಗಿ ಪ್ರವಾಸಿಗರನ್ನು ವಿಶೇಷವಾಗಿ ಸೆಳೆಯುವ ಡಿವೈನ್ ಪಾರ್ಕಗೆ ಸ್ವಾಮೀ ವಿವೇಕಾನಂದರ ಆದರ್ಶಗಳನ್ನು ಬಿತ್ತರಿಸುವ ಕೇಂದ್ರವಾಗಿದೆ ಎಂದು ಅಭಿಪ್ರಾಯ ಪಟ್ಟರು.

    ಈ ವೇಳೆ ಅದರ ಮುಖ್ಯಸ್ಥ ಡಾ.ವಿವೇಕ್ ಉಡುಪ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

  • ಕುಂದಾಪುರ: ಕಾನೂನು ಸೇವಾ ಪ್ರಾಧಿಕಾರ ಮತ್ತು ತಾಲೂಕು ಆಡಳಿತದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ

    ಕುಂದಾಪುರ: ಕಾನೂನು ಸೇವಾ ಪ್ರಾಧಿಕಾರ ಮತ್ತು ತಾಲೂಕು ಆಡಳಿತದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ತಾಲೂಕು ಆಡಳಿತ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ, ಅಭಿಯೋಗ ಇಲಾಖೆ ಕುಂದಾಪುರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ 2024 ಕಾರ್ಯಕ್ರಮವು ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶ್ರೀ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆಯಿತು. ಇದಕ್ಕೂ ಮುನ್ನ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದಿಂದ ಆರಂಭಗೊಂಡ ಮತದಾರರ ಜಾಗೃತಿ ಅಭಿಯಾನ ಜಾಥಾವು ಮಾಸ್ತಿಕಟ್ಟೆ ರಸ್ತೆ, ಹಳೆಬಸ್ ಸ್ಟ್ಯಾಂಡ್ , ಹೂವಿನ ಮಾರ್ಕೇಟ್ ಮೂಲಕ ಸಾಗಿ ಕಾಲೇಜು ಆವರಣದಲ್ಲಿ ಬಂದು ಸಮಾಪ್ತಿಯಾಯಿತು.

    ಕಾರ್ಯಕ್ರಮ ಉದ್ಘಾಟಿಸಿದ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೇನ್ ಶೇಖ್ ಮಾತನಾಡಿ, “ನಮ್ಮ ದೇಶದಲ್ಲಿ 18 ವರ್ಷಗಳಿಗಿಂತ ಮೇಲ್ಪಟ್ಟ ಎಲ್ಲರೂ ಮತದಾನದ ಹಕ್ಕನ್ನು ಹೊಮದುತ್ತಾರೆ. ಪ್ರತಿಯೊಬ್ಬ ಮತದಾರನೂ ದೇಶದ ಅಭಿವೃದ್ಧಿ, ದೇಶದ ಪ್ರಗತಿಯ ಹಿತದೃಷ್ಟಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಮತದಾರನೂ ತನ್ನ ವೈಯುಕ್ತಿ ಸ್ವಾರ್ಥವನ್ನು ಬದಿಗಿಟ್ಟು, ದೇಶ ಕಟ್ಟುವ ಪ್ರಾಮಾಣಿಕ ಪ್ರಯತ್ನಕ್ಕೆ ಕೈಜೋಡಿಸಬೇಕು” ಎಂದರು.

    ಬಸ್ರೂರು ಶಾರದಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ॥ ವಿಶ್ವನಾಥ ಆಚಾರ್ಯ ಮಾಹಿತಿ ನೀಡಿದರು. ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್. ಆರ್ ಸಭಾಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್., ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಶೃತಿಶ್ರೀ ಎಸ್., ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ. ಯು., ತಾಲೂಕು ಪಂಚಾಯತ್ ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ವಿ. ರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬಿ. ಜಿ. ರಾಮಕೃಷ್ಣ, ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಸಹಾಯಕ ಸರ್ಕಾರಿ ಅಭಿಯೋಜಕ ಉದಯಕುಮಾರ್ ಬಿ.ಎ, ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಶ್ರೀನಾಥ ರಾವ್, ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಎಸ್., ತಹಶೀಲ್ದಾರ್ ಶ್ರೀಕಾಂತ ಎಸ್. ಹೆಗ್ಡೆ ಉಪಸ್ಥಿತರಿದ್ದರು.

  • ಕುಂದಾಪುರ :ಗ್ರಾಮೀಣ ವಿದ್ಯಾರ್ಥಿಗಳ ತಂತ್ರಜ್ಞಾನದ ಅರಿವಿಗೆ ಎ.ಟಿ.ಎಲ್ ಸಹಕಾರಿ – ಡಾ ಅಶೋಕ್ ಕಾಮತ್

    ಕುಂದಾಪುರ :ಗ್ರಾಮೀಣ ವಿದ್ಯಾರ್ಥಿಗಳ ತಂತ್ರಜ್ಞಾನದ ಅರಿವಿಗೆ ಎ.ಟಿ.ಎಲ್ ಸಹಕಾರಿ – ಡಾ ಅಶೋಕ್ ಕಾಮತ್

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ವಿಜ್ಞಾನ ಮತ್ತು ತಂತ್ರಜ್ಞಾನದ ಅಭಿವೃದ್ದಿಯೊಂದಿಗೆ ಗ್ರಾಮೀಣ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನದ ಮತ್ತು ತಂತ್ರಜ್ಞಾನದ ಅರಿವಿಗೆ ಹಾಗೂ ಜಗತ್ತಿನ ವಿನೂತನ ಆವಿಷ್ಕಾರದ ಚಿಂತನೆಗೆ ಅಟಲ್ ಟಿಂಕರಿಂಗ್ ಲ್ಯಾಬ್ ಸಹಕಾರಿಯಾಗಲಿದೆ ಎಂದು ಉಡುಪಿ ಜಿಲ್ಲಾ ಡಯಟ್ ನ ಉಪ ಪ್ರಾಂಶುಪಾಲರಾದ ಡಾ. ಅಶೋಕ್ ಕಾಮತ್ ಅಭಿಪ್ರಾಯ ಪಟ್ಟರು

    ಅವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇಲ್ಲಿ ನಡೆದ ಉಡುಪಿ ಜಿಲ್ಲಾ ಅಟಲ್ ಟಿಂಕರಿಂಗ್ ಲ್ಯಾಬ್ ನ ಸುಮಾರು 50 ಶಾಲೆಗಳ ಶಿಕ್ಷಕರ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ವಾಸುದೇವ್ ಆಚಾರ್ಯ ಕೋ ಆರ್ಡಿನೇಟರ್ ಐ.ಟಿ ವಿಂಗ್ ಇಂಜಿನಿಯರಿಂಗ್ ಕಾಲೇಜ್ ನಿಟ್ಟೆ ಇವರು ಕಾರ್ಯಾಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು

    ಸಭೆಯಲ್ಲಿ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಉಡುಪಿ ಡಯಟ್ ಹಿರಿಯ ಉಪನ್ಯಾಸಕ ಪ್ರಭಾಕರ್ ಮಿತ್ಯಂತಾಯ, ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಪ್ರಾಂಶುಪಾಲ ಸುಶೀಲಾ ಹೊಳ್ಳ, ಉಡುಪಿ ಡಯಟ್ ಎ ಟಿ ಎಲ್ ನೋಡಲ್ ಅಧಿಕಾರಿ ಸುಬ್ರಹ್ಮಣ್ಯ ಭಟ್ , ಕೆಪಿಎಸ್ ಕೋಟೇಶ್ವರ ಉಪ ಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ, ಉಪನ್ಯಾಸಕ ಗಣೇಶ್ ಕೃಷ್ಣ ಭಾಗವತ್ ಉಪಸ್ಥಿತರಿದ್ದರು

    ಕಾರ್ಯಕ್ರಮವನ್ನು ಶಿಕ್ಷಕ ಶ್ರೀಕಾಂತ್ ನೆರವೇರಿಸಿ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ಪ್ರಭಾಕರ ಮಿತ್ಯಂತಾಯ ವಂದಿಸಿದರು. ಸಂಸ್ಥೆಯ ನೋಡಲ್ ಶಿಕ್ಷಕಿ ಜಯಶ್ರೀ ಭಟ್ ಸಹಕರಿಸಿದರು.