Category: ಸುದ್ದಿ

  • ಕುಂದಾಪುರ: ದೆಹಲಿಯ ಗಣರಾಜ್ಯೋತ್ಸವಕ್ಕೆ ತೆರಳುವ ಮಣಿಕಂಠ ದಂಪತಿಗಳಿಗೆ ಪುರಸಭೆಯಿಂದ ಸನ್ಮಾನ

    ಕುಂದಾಪುರ: ದೆಹಲಿಯ ಗಣರಾಜ್ಯೋತ್ಸವಕ್ಕೆ ತೆರಳುವ ಮಣಿಕಂಠ ದಂಪತಿಗಳಿಗೆ ಪುರಸಭೆಯಿಂದ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ ಉದ್ಯಮಶಿಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ, ಪ್ರಧಾನಮಂತ್ರಿಸ್ವ ನಿಧಿ ಯೋಜನೆಯಡಿಯಲ್ಲಿ ಜನವರಿ 26 ರಂದು ದೆಹಲಿಯಲ್ಲಿ ಜರಗುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಸರಕಾರದಿಂದ ಆಯ್ಕೆಯಾದ ಉಡುಪಿ ಜಿಲ್ಲೆಯ ಕುಂದಾಪುರ ಪುರಸಭೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಸ್ಥ ಮಣಿಕಂಠ ಹಾಗೂ ನಿರ್ಮಲ ದಂಪತಿಗಳನ್ನು ಪುರಸಭೆಯ ವತಿಯಿಂದ ಸನ್ಮಾನಿಸಲಾಯಿತು. ಕುಂದಾಪುರದ ಶಾಸಕರಾದ ಮಾನ್ಯ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ, ಪುರಸಭೆಯ ಆಡಳಿತ ಅಧಿಕಾರಿಯಾಗಿರುವ ರಶ್ಮಿ ಎಸ್. ಆರ್ ಸನ್ಮಾನಿಸಿ ಗೌರವಿಸಿದರು.

    ಪುರಸಭೆಯ ಮುಖ್ಯಾಧಿಕಾರಿ ಆರ್ ಮಂಜುನಾಥ್ , ಜಿಲ್ಲಾ ಲೀಡ್ಕರ್ ನಿಗಮದ ಸಂಯೋಜಕ ತಿಪ್ಪೆ ಸ್ವಾಮಿ, ಪುರಸಭೆ ಸದಸ್ಯರಾದ ದೇವಕಿ ಸಣ್ಣಯ್ಯ, ಪ್ರಭಾಕರ್, ಪುರಸಭಾ ಪರಿಸರ ಅಭಿಯಂತರಾದ ಗುರು ಪ್ರಸಾದ್ ಶೆಟ್ಟಿ, ಸಮುದಾಯದ ಸಂಘಟನಾಧಿಕಾರಿಯಾದ ಶರತ್ ಎಸ್ ಖಾರ್ವಿ, ಕಂದಾಯ ಅಧಿಕಾರಿಗಳಾದ ಅಂಜನಿ ಗೌಡ, ಹಿರಿಯ ಆರೋಗ್ಯ ನಿರೀಕ್ಷಕರಾದ ರಾಘವೇಂದ್ರ ನಾಯ್ಕ್, ಮತ್ತು ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

  • ಕುಂದಾಪುರ ಪೊಲೀಸರಿಂದ ರಸ್ತೆ ಸುರಕ್ಷತಾ ಜಾಗೃತಿ!

    ಕುಂದಾಪುರ ಪೊಲೀಸರಿಂದ ರಸ್ತೆ ಸುರಕ್ಷತಾ ಜಾಗೃತಿ!

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕುಂದಾಪುರ ಸಂಚಾರಿ ಪೊಲೀಸರು ಮಂಗಳವಾರ ವಾಹನ ಚಾಲಕರಿಗೆ ಸಂಚಾರ ಜಾಗೃತಿ ಮೂಡಿಸಿದ್ದಾರೆ. ನಿಯಮ ಮೀರಿ ಸಂಚರಿಸಿದರೆ ಯಮನ ಪಾದ ಸೇರಬೇಕಾಗುತ್ತದೆ ಎನ್ನುವ ಸೂಚನೆ ನೀಡಲು ಸ್ವತಃ ಯಮನ ಪಾತ್ರಧಾರಿಯನ್ನೂ ಪಕ್ಕದಲ್ಲಿಯೇ ನಿಲ್ಲಿಸಿಕೊಂಡು ಚಾಲಕರಿಗೆ ಹೂ ಕೊಟ್ಟು ಜಾಗ್ರತಿ ಮೂಡಿಸಲಾಯಿತು.

    ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ನಡೆದ ಈ ಜಾಗೃತಿ ಕಾರ್ಯಕ್ರಮದಲ್ಲಿ ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ನಂದಕುಮಾರ್, ನಗರ ಠಾಣೆ ಉಪನಿರೀಕ್ಷಕರ ವಿನಯ್ ಕೊರ್ಲಹಳ್ಳಿ, ಸಂಚಾರಿ ಉಪನಿರೀಕ್ಷಕ ಸುಬ್ಬಣ ಸೇರಿದಂತೆ ಪೊಲೀಸರು ಜಾಗೃತಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು. ಅತೀ ವೇಗದ ಚಾಲನೆ, ವಾಹನ ನಿಲ್ಲುವ ಮೊದಲೇ ಹತ್ತುವುದು ಅಥವಾ ಇಳಿಯುವುದು ರಸ್ತೆ ಪಕ್ಕದಲ್ಲಿ ಗುಂಪಾಗಿ ಸಂಚರಿಸುವುದು, ಚಾಲನೆ ಸಂದರ್ಭ ಮೊಬೈಲ್ ಬಳಸುವುದು, ಅವಕಾಶವಿಲ್ಲದ ಸ್ಥಳದಲ್ಲಿ ಸಂಚಾರ, ಕರ್ಕಶ ಹಾರ್ನ್ ಇತ್ಯಾದಿ ನಿಯಮಗಳ ಉಲ್ಲಂಘನೆಗಳ ಬಗ್ಗೆ ಮಾಹಿತಿ ನೀಡಿದರು. ಸಂದರ್ಭ ಕರಪತ್ರಗಳು ಹಾಗೂ ಆಟೋ ರಿಕ್ಷಾದಲ್ಲಿ ಧ್ವನಿವರ್ಧಕಗಳ ಮೂಲಕವೂ ಜಾಗೃತಿ ಮೂಡಿಸಲಾಯಿತು.

  • ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿರುಪತಿಯಲ್ಲಿ ಪೂಜಿಸಲ್ಪಡುವ ಪ್ರಭು ಶ್ರೀ ರಾಮಚಂದ್ರ ಸೀತಾದೇವಿ ಲಕ್ಷ್ಮಣ, ಹನುಮಂತ ದೇವರುಗಳ ಮೂರ್ತಿಗೆ ವಿಶೇಷ ಪೂಜೆ.

    ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿರುಪತಿಯಲ್ಲಿ ಪೂಜಿಸಲ್ಪಡುವ ಪ್ರಭು ಶ್ರೀ ರಾಮಚಂದ್ರ ಸೀತಾದೇವಿ ಲಕ್ಷ್ಮಣ, ಹನುಮಂತ ದೇವರುಗಳ ಮೂರ್ತಿಗೆ ವಿಶೇಷ ಪೂಜೆ.

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಅಯೋಧ್ಯೆಯ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನಲೆಯಲ್ಲಿ ಇಲ್ಲಿನ ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾದಲ್ಲಿ ಸೋಮವಾರದಂದು ಊರಿನ ಸಮಾನಮನಸ್ಕ ಭಕ್ತರು ಹಾಗೂ ದೇಗುಲದ ವತಿಯಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

    ಬೆಳಿಗ್ಗೆ 9 ರಿಂದ ವಿವಿಧ ಭಜನಾ ತಂಡಗಳಿಂದ ವಿಶೇಷ ಭಜನಾ ಸಂಕೀರ್ತನೆ ,ವಿಶೇಷವಾಗಿ ಅಪರೂಪ ಎಂಬಂತೆ ತಿರುಪತಿಯಲ್ಲಿ ಪೂಜಿಸಲ್ಪಡುವ ಪ್ರಭು ಶ್ರೀ ರಾಮಚಂದ್ರ ಸೀತಾದೇವಿ ಲಕ್ಷ್ಮಣ ದೇವರು ಹಾಗೂ ಹನುಮಂತ ದೇವರುಗಳ ಮೂರ್ತಿಯು ಬೆಳಿಗ್ಗೆ 10:30 ಗಂಟೆಗೆ ಭವ್ಯ ಮೆರವಣಿಗೆಯಲ್ಲಿ ಆಗಮಿಸಿ , ದೇವಳದಲ್ಲಿ ವಿರಾಜಮಾನರಾಗಿ ತಿರುಪತಿಯ ಅರ್ಚಕರಿಂದ ಶ್ರೀ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಹಾಗೂ ಪೂಜಾ ವಿಧಿ ವಿಧಾನಗಳನ್ನು ಸಲ್ಲಿಸಲಾಯಿತು.ಅಪರಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ ದೀಪೋತ್ಸವ
    ಕಾರ್ಯಕ್ರಮಗಳು ಜರಗಿದವು.

    ಕೋಟ ಅಮೃತೇಶ್ವರಿ ದೇಗುಲದ ಮಾಜಿ ಅಧ್ಯಕ್ಷ ಆನಂದ್ ಸಿ ಕುಂದರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಈ ವೇಳೆ ಶ್ರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ,ಶ್ರೀ ದೇಗುಲದ ಟ್ರಸ್ಟಿ ಅಶೋಕ್ ಶೆಟ್ಟಿ,ಸುಫಲ ಶೆಟ್ಟಿ, ದಿನೇಶ್ ಆಚಾರ್, ಬಾಬು.ರವಿ ಐತಾಳ್ ಅಚ್ಯುತ್ ಹಂದೆ,ದಿವ್ಯ ಪ್ರಭು,ಪ್ರಮುಖರಾದ ಮಹೇಶ್ ಹೊಳ್ಳ,ಗೋಪಾಲ್ ಪೈ,ಅರುಣಾಚಲ ಮಯ್ಯ,ಭಾರತಿ.ವಿ.ಮಯ್ಯ, ವಿಷ್ಣುಮೂರ್ತಿ ಮಯ್ಯ ಊರಿನ ಹಿರಿಯ ಗಣ್ಯರು ಮತ್ತಿತರರು ಉಪಸ್ಥಿತರಿದ್ದರು.

  • ವಡ್ಡರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿರುಪತಿಯಲ್ಲಿ ಪೂಜಿಸಲ್ಪಡುವ ಪ್ರಭು ಶ್ರೀ ರಾಮಚಂದ್ರ ಸೀತಾದೇವಿ ಲಕ್ಷ್ಮಣ, ಹನುಮಂತ ದೇವರುಗಳ ಮೂರ್ತಿಗೆ ವಿಶೇಷ ಪೂಜೆ

    ವಡ್ಡರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿರುಪತಿಯಲ್ಲಿ ಪೂಜಿಸಲ್ಪಡುವ ಪ್ರಭು ಶ್ರೀ ರಾಮಚಂದ್ರ ಸೀತಾದೇವಿ ಲಕ್ಷ್ಮಣ, ಹನುಮಂತ ದೇವರುಗಳ ಮೂರ್ತಿಗೆ ವಿಶೇಷ ಪೂಜೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಅಯೋಧ್ಯೆಯ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನಲೆಯಲ್ಲಿ ಇಲ್ಲಿನ ವಡ್ಡರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾದಲ್ಲಿ ಸೋಮವಾರದಂದು ಹಿಂದೂ ಮುಖಂಡರು ಹಾಗೂ ಗ್ರಾಮಸ್ಥರಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

    ಬೆಳಿಗ್ಗೆ 9 ರಿಂದ ವಿವಿಧ ಭಜನಾ ತಂಡಗಳಿಂದ ವಿಶೇಷ ಭಜನಾ ಸಂಕೀರ್ತನೆ ,ವಿಶೇಷವಾಗಿ ಅಪರೂಪ ಎಂಬಂತೆ ತಿರುಪತಿಯಲ್ಲಿ ಪೂಜಿಸಲ್ಪಡುವ ಪ್ರಭು ಶ್ರೀ ರಾಮಚಂದ್ರ ಸೀತಾದೇವಿ ಲಕ್ಷ್ಮಣ ದೇವರು ಹಾಗೂ ಹನುಮಂತ ದೇವರುಗಳ ಮೂರ್ತಿಯನ್ನು ಗರಿಕೆ ಮಠದಿಂದ ಭವ್ಯ ಮೆರವಣಿಗೆಯ ಮೂಲಕ , ದೇಗುಲಕ್ಕೆ ಕರತರಲಾಯಿತು.

    ತಿರುಪತಿಯ ಅರ್ಚಕರಿಂದ ಶ್ರೀ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಹಾಗೂ ಪೂಜಾ ವಿಧಿ ವಿಧಾನಗಳನ್ನು ಸಲ್ಲಿಸಲಾಯಿತು.ಡಿಜಿಟಲ್ ಪರದೆಯ ಮೂಲಕ ಶ್ರೀ ರಾಮ ಪ್ರಾಣಪ್ರತಿಷ್ಠೆಯನ್ನು ಶ್ರೀರಾಮ ಭಕ್ತರಿಗೆ ವೀಕ್ಷಿಸಲು ಅವಕಾಶ ಕಲ್ಪಿಸಲಾಯಿತು.ಅಪರಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ ದೀಪೋತ್ಸವ ಕಾರ್ಯಕ್ರಮಗಳು ಜರಗಿದವು. ಸಂಘಟನೆಯ ಪ್ರಮುಖರಾದ ವೇಣುಗೋಪಾಲ ಶೆಟ್ಟಿ ಸೇರಿದಂತೆ ಗ್ರಾಮದ ಗಣ್ಯರು ಉಪಸ್ಥಿತರಿದ್ದರು.

     

  • ಕುಂದಾಪುರ :ಬಿ.ಬಿ.ಹೆಗ್ಡೆ ಕಾಲೇಜು – ಕಿರಣ್ ಕುಮಾರ್ ಎನ್. ಗಣರಾಜ್ಯೋತ್ಸವ ಪೆರೇಡ್‍ಗೆ ಆಯ್ಕೆ

    ಕುಂದಾಪುರ :ಬಿ.ಬಿ.ಹೆಗ್ಡೆ ಕಾಲೇಜು – ಕಿರಣ್ ಕುಮಾರ್ ಎನ್. ಗಣರಾಜ್ಯೋತ್ಸವ ಪೆರೇಡ್‍ಗೆ ಆಯ್ಕೆ

    ಕುಂದಾಪುರ ಮಿರರ್ ‌ಸುದ್ದಿ…

    ಕುಂದಾಪುರ : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಕಿರಣ್ ಕುಮಾರ್ ಎನ್., ದ್ವಿತೀಯ ಬಿ.ಬಿ.ಎ. ಇವರು ಬೆಂಗಳೂರಿನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

  • ಪಾಂಡೇಶ್ವರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ರಾಮೋತ್ಸವ

    ಪಾಂಡೇಶ್ವರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ರಾಮೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಶ್ರೀ ಶಂಕರನಾರಾಯಣ ದೇವಸ್ಥಾನ ಪಾಂಡೇಶ್ವರ ಇಲ್ಲಿ ಅಯೋಧ್ಯಾ ಶ್ರೀ ರಾಮ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಜನೆ, ಮಹಾಮಂಗಳಾರತಿ ಪ್ರಸಾದ ವಿತರಣಾ ಕಾರ್ಯಕ್ರಮಗಳು ಜರಗಿದವು.

    ಭಕ್ತಾಧಿಗಳಿಗೆ ವೀಕ್ಷಿಸಲು ಸಲುವಾಗಿ ಡಿಜಿಟಲ್ ಪರದೆಯ ಮೂಲಕ ನೇರ ಪ್ರಸಾರ ವ್ಯವಸ್ಥೆ ಕಲ್ಪಿಸಲಾಯಿತು. ಪೂರ್ವಾಹ್ನ ಉಪಹಾರ, ಪಾನಕ ವ್ಯವಸ್ಥೆ, ಅನ್ನಸಂತರ್ಪಣೆ, ಕರಸೇವಕ ರಾಜು ಪೂಜಾರಿಯವರಿಗೆ ಸನ್ಮಾನ ಕಾರ್ಯಕ್ರಮ ನೆರವೆರಿತು. ಸ್ಥಳೀಯ 5 ಭಜನೆ ತಂಡಗಳಿಂದ ಭಜನೆ ಕಾರ್ಯಕ್ರಮ ಸಂಪನ್ನಗೊಂಡಿತು.

    ಗ್ರಾಮ ಪ್ರಮುಖರಾದ ಕೆ.ವಿ ರಮೇಶ್ ರಾವ್ , ವಿದ್ಚಾನ್ ಡಾ.ವಿಜಯ್ ಮಂಜರ್. ರಾಮೋತ್ಸವ ಸಂಚಾಲಕರಾದ ಪ್ರತಾಪ್ ಶೆಟ್ಟಿ , ಸುರೇಶ ಪೂಜಾರಿ ಹಿಂದೂ ಸಂಘಟನೆ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

  • ಕುಂದಾಪುರ :ರಾಮ ಪ್ರಾಣ ಪ್ರತಿಷ್ಟೆಗೆ ರಾಮನಾದ ಕಲ್ಲಂಗಡಿ, ಇದು ಹಳ್ಳಿ ಕಲಾವಿದನ ತರಕಾರಿ ಕಲೆ!

    ಕುಂದಾಪುರ :ರಾಮ ಪ್ರಾಣ ಪ್ರತಿಷ್ಟೆಗೆ ರಾಮನಾದ ಕಲ್ಲಂಗಡಿ, ಇದು ಹಳ್ಳಿ ಕಲಾವಿದನ ತರಕಾರಿ ಕಲೆ!

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಜನವರಿ 22 ದೇಶದಾದ್ಯಂತ ರಾಮನಾಮ ಜಪದಲ್ಲಿ ಮುಳುಗಿದರೆ ಕುಂದಾಪುರ ತಾಲೂಕಿನ ಆಜ್ರಿ ಎಂಬ ಪುಟ್ಟ ಗ್ರಾಮದ ಕೊಡ್ಲಾಡಿಯ ಕಲಾವಿದನೊಬ್ವ ಶ್ರೀರಾಮನ ಭಕ್ತಿಯನ್ನು ಕಲ್ಲಂಗಡಿಯಲ್ಲಿ ಅರಳಿಸಿದ್ದಾರೆ.

    ಹೌದು. ಆಜ್ರಿ ಗ್ತಾಮದ ರಾಘವೇಂದ್ರ ಮೊಗವೀರ ಕೊಡ್ಲಾಡಿ ಎಂಬ ಬಡ ಕಲಾವಿದನ ಕೈಯಲ್ಲಿ ಇದುವರೆಗೆ ಸಾವಿರಾರು ಕಲಾಕೃತಿಗಳು ತರಕಾರಿಗಳಲ್ಲಿ ಅರಳಿದೆ. ಅಲ್ಲದೇ ಹತ್ತು ಹಲವು ಥರ್ಮಾಕೋಲ್ ಡಿಸೈನಿಂಗ್, ನಾಮಫಲಕ ತಯಾರಿಕೆ, ಮದುವೆ ಹಾಗೂ ಇತರ ಸಮಾರಂಭಗಳಿಗೆ ವೇದಿಕೆ ನಿರ್ಮಾಣಸಲ್ಲಿ ತೊಡಗಿಸಿಕೊಂಡಿರುವ ಇವರನ್ನು ಕಲಾವಿದನನ್ನಾಗಿ ಗುರುತಿಸುವಂತೆ ಮಾಡಿದ್ದು ವಿವಿಧ ತರಕಾರಿಗಳಿಂದ ಅರಳಿದ ವಿವಿಧ ಕಲಾಕೃತಿಗಳು.

    ಒಂದಿಷ್ಟು ಹಣ್ಣು, ತರಕಾರಿಗಳನ್ನು ಕೊಟ್ಟರೆ ಇವರ ಚಿತ್ರ ಚಿಮತ್ಕಾರ, ಹಸ್ತ ಚಮತ್ಕಾರ ಮಿಲನಗೊಂಡು ಚಾಕುವಿನಿಂದ ಎಳೆದು, ಕುಯ್ದು ಸುಂದರ ಕಲಾಕೃತಿಗಳನ್ನು ಎದುರಿಗಿಡುತ್ತಾರೆ. ಪಪ್ಪಾಯಿ ತಾವರೆಯಾಗುತ್ತದೆ, ಹಾಗಲಕಾಯಿ ಡೈನೋಸಾರ್ ಆಗಿ ಬೆಚ್ಚಿ ಬೀಳಿಸುತ್ತದೆ.

    ಶ್ರೀ ರಾಮನ ಪ್ರತಿಷ್ಟಾಪನೆಗೆ ಇನ್ನೇನು ಕ್ಷಣಗಣನೆ ಶುರುವಾಗಿದೆ‌. ಎಲ್ಲರ ಮನೆ ಮನದಲ್ಲೂ ರಾಮನಾಮ ಸ್ಮರಣೆ ಜೈ ಶ್ರೀರಾಮ್ ಎಂಬ ಉದ್ಘೋಷ ಮೊಳಗುತ್ತಿದೆ. ಇದೇ ಸಂದರ್ಭ ರಾಘವೇಂದ್ರ ಮೊಗವೀರ ಅವರ ಕೈಯಲ್ಲಿ ಅರಳಿದ ಶ್ರೀರಾಮನ ಕಲಾಕೃತಿ ಎಲ್ಲೆಡೆ ವೈರಲ್ಲಾಗುತ್ತಿದೆ.

  • ಹಾಲಾಡಿ :ಬಡವರ ನೊಂದವರ ಕಣ್ಣೊರೆಸುವ ಸೇವೆ ದೇವರನ್ನು ತಲುಪುತ್ತದೆ – ಕೇಮಾರು ಶ್ರೀ

    ಹಾಲಾಡಿ :ಬಡವರ ನೊಂದವರ ಕಣ್ಣೊರೆಸುವ ಸೇವೆ ದೇವರನ್ನು ತಲುಪುತ್ತದೆ – ಕೇಮಾರು ಶ್ರೀ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಸಮಾಜ ಮುಂದೆ ಬರಬೇಕಾದರೆ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು. ಅಂತಹಾ ಮಕ್ಕಳ ಶಿಕ್ಷಣ ಸೇವೆಯನ್ನು ಡಾ. ಹೆಚ್.ಎಸ್. ಶೆಟ್ಟಿಯವರು ನೀಡುತ್ತಿದ್ದಾರೆ. ಸಮಾಜದ ಅತ್ಯಂತ ಬಡವರ, ನೊಂದವರ ಕಣ್ಣೊರೆಸಿದಾಗ ಅದು ದೇವರನ್ನು ತಲುಪುತ್ತದೆ ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು.

    ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ 23ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ “ಡಾಕ್ಟರ್ ಆಫ್ ಸೈಯನ್ಸ್” ಗೌರವಕ್ಕೆ ಭಾಜನರಾದ ಹಾಲಾಡಿ ಕುದ್ರುಮನೆ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಹಾಲಾಡಿ ಶ್ರೀ ಆದಿಮರಳುಚಿಕ್ಕು ದೈವಸ್ಥಾನದ ಆಡಳಿತ ಮಂಡಳಿ, ಭಕ್ತಾದಿಗಳು, ಹಾಲಾಡಿ ಕುದ್ರುಮನೆ, ಹಾಲಾಡಿ ಕೈಕಾಡಿಮನೆ ಮತ್ತು ಉಳ್ತೂರು ಭಂಡಾರರಮನೆ ಕುಟುಂಬಿಕರಿಂದ ಭಾನುವಾರ ಹಾಲಾಡಿ ಶ್ರೀ ಆದಿಮರಳು ಚಿಕ್ಕು ದೈವಸ್ಥಾನದ ವಠಾರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಡಾ. ಹೆಚ್.ಎಸ್.ಶೆಟ್ಟಿ ದಂಪತಿಗಳನ್ನು ಸನ್ಮಾನಿಸಿ ಮಾತನಾಡಿದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಹೆಚ್.ಎಸ್.ಶೆಟ್ಟಿ, ಪ್ರತಿಯೊಬ್ಬ ವ್ಯಕ್ತಿಗೂ ಒಬ್ಬ ದೊಡ್ಡ ತಂದೆ ಇರಬೇಕು ಅಥವಾ ಒಳ್ಳೆಯ ಗಾಡ್ ಫಾದರ್ ಇರಬೇಕು. ಹಾಗಾಗಿ ನಾವೆಲ್ಲರೂ ಉತ್ತಮ ತಂದೆ, ತಾಯಿಯಾಗಲು ಮತ್ತು ಗಾಡ್ ಫಾದರ್ ಆಗಲು ಯತ್ನಿಸಿದಾಗ ಸಮರ್ಥ ಸಮಾಜ ನಿರ್ಮಾಣ ಸಾಧ್ಯ ಎಂದರು.

    ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಶ್ರೀ ಶಕ್ತಿ ದರ್ಶನ ಯೋಗಾಶ್ರಮದ ದೇವ ಬಾಬಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಾಲಾಡಿ ಕುದ್ರುಮನೆ ಡಾ. ಶ್ರೀನಿವಾಸ ಶೆಟ್ಟಿಯವರ ಅಭಿನಂದನಾ ಸಮಿತಿ ಅಧ್ಯಕ್ಷ ರಾಘವ ಶೆಟ್ಟಿ, ಹಾಲಾಡಿ ಕುದ್ರುಮನೆ ಅಧ್ಯಕ್ಷತೆ ವಹಿಸಿದ್ದರು.

    ಹಾಲಾಡಿ ಕುದ್ರುಮನೆ ಗೋಪಾಲ ಶೆಟ್ಟಿ, ಉಳ್ತೂರು ಭಂಡಾರರಮನೆ ದೇವೇಂದ್ರ ಶೆಟ್ಟಿ, ಹಾಲಾಡಿ ಕಾಡಿಮನೆ ಜಯರಾಮ ಶೆಟ್ಟಿ ಉಪಸ್ಥಿತರಿದ್ದರು. ಉದಯಕುಮಾರ್ ಶೆಟ್ಟಿ ಸ್ವಾಗತಿಸಿದರು. ಉದಯಕುಮಾರ್ ಶೆಟ್ಟಿ ಕುದ್ರುಮನೆ ಪ್ರಶಸ್ತಿ ಪತ್ರ ವಾಚಿಸಿದರು. ನಿವೃತ್ತ ಪ್ರಾಂಶುಪಾಲ ಡಾ. ಉದಯ್ ಕುಮಾರ್ ಶೆಟ್ಟಿ ಪ್ರಾಸ್ತಾವಿಸಿದರು. ಅಕ್ಷಯ್ ಹೆಗ್ಡೆ ಮೊಳಹಳ್ಳಿ ನಿರೂಪಿಸಿದರು. ಹಾಲಾಡಿ ಕುದ್ರುಮನೆ ಡಾ. ಅರುಣ್ ಕುಮಾರ್ ಶೆಟ್ಟಿ ವಂದಿಸಿದರು.

    ಬಳಿಕ ಶಕ್ತಿದರ್ಶನ ಯೋಗಾಶ್ರಮ (ರಿ.) ಕಿನ್ನಿಗೋಳಿ ಇವರಿಂದ “ವಿಶ್ವಮಾತಾ ಗೋಮಾತಾ” ದ್ವಿಭಾಷಾ ನೃತ್ಯ ನಾಟಕ ಪ್ರದರ್ಶನಗೊಂಡಿತು.

  • ಕೋಟ ಅಮೃತೇಶ್ವರೀ ದೇಗುಲಕ್ಕೆ ಸಚಿವ ರಾಮಲಿಂಗ ರೆಡ್ಡಿ ಭೇಟಿ

    ಕೋಟ ಅಮೃತೇಶ್ವರೀ ದೇಗುಲಕ್ಕೆ ಸಚಿವ ರಾಮಲಿಂಗ ರೆಡ್ಡಿ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಜ.21ರಂದು ಕೋಟ ಅಮೃತೇಶ್ವರೀ ದೇಗುಲಕ್ಕೆ ಭೇಟಿ ನೀಡಿದರು.

    ಈ ಸಂದರ್ಭ ಸಚಿವರನ್ನು ದೇಗುಲದ ವತಿಯಿಂದ ಗೌರವಿಸಿ ಬರಮಾಡಿಕೊಳ್ಳಲಾಯಿತು ಹಾಗೂ ಕ್ಷೇತ್ರದ ಮಹಿಮೆ ಕುರಿತು ತಿಳಿಸಲಾಯಿತು. ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ನೀಡಲಾಯಿತು. ದೇಗುಲದ ಅಭಿವೃದ್ಧಿ ಕಾರ್ಯಗಳು ಸಾಕಷ್ಟು ಬಾಕಿ ಇದ್ದು ಇಲಾಖೆಯಿಂದ ಸೂಕ್ತ ಅನುದಾನ ಒದಗಿಸುವಂತೆ ಕೋರಲಾಯಿತು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

    ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ದೇಗುಲದದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಆನಂದ ಸಿ.ಕುಂದರ್, ಧಾರ್ಮಿಕ ದತ್ತಿ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಸ್ಥಳೀಯ ಮುಖಂಡರಾದ ಚಂದ್ರ ಆಚಾರ್ಯ, ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ, ದಿನೇಶ್ ಬಂಗೇರ, ಪಾರಂಪಳ್ಳಿ ರವೀಂದ್ರ ಐತಾಳ, ದೇವದಾಸ್ ಬಂಗೇರ, ರಾಜೇಶ್ ನೆಲ್ಲಿಬೆಟ್ಟು, ದೇವೇಂದ್ರ ಗಾಣಿಗ, ರಾಘವೇಂದ್ರ ವೈ.ಬಿ.,ಗಣೇಶ್ ಪೂಜಾರಿ,ಸುರೇಶ್ ಪೂಜಾರಿ, ರತ್ನಾಕರ ಶ್ರೀಯಾನ್, ದೇಗುಲದ ಅರ್ಚಕರು, ವ್ಯವಸ್ಥಾಪಕರು ಮೊದಲಾದವರಿದ್ದರು.

  • ಕೋಟ :ಪಂಚವರ್ಣದ 193ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ

    ಕೋಟ :ಪಂಚವರ್ಣದ 193ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ

    ಶ್ರೀ ರಾಮಮಂದಿರದ ಪ್ರಯುಕ್ತ ದೇಗುಲ ಸ್ವಚ್ಛತಾ ಅಭಿಯಾನದಲ್ಲಿ ಕೋಟ ದೇಗುಲ ಸ್ವಚ್ಛತೆ

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಶ್ರೀ ರಾಮ ಮಂದಿರದ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಗುಲ ಸ್ವಚ್ಛತೆ ಕರೆನೀಡಿದ ಹಿನ್ನಲೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್ ,ಹಂದಟ್ಟು ಮಹಿಳಾ ಬಳಗ ಕೋಟ, ಹಿರೇಮಹಾಲಿಂಗೇಶ್ವರ ಕಟ್ಟೆ ಬಳಗ ಕೋಟ, ಹಿರೇಮಹಾಲಿಂಗೇಶ್ಚರ ಮಿತ್ರವೃಂದ, ದೇಗುಲದ ಆಡಳಿತ ಮಂಡಳಿಯ ಸಹಯೋಗದೊಂದಿಗೆ 193ನೇ ಭಾನುವಾರ ಅಭಿಯಾನ ಕೋಟ ಮಹತೋಭಾರ ಹಿರೇಮಹಾಲಿಂಗೇಶ್ಚರ ದೇಗುಲದಲ್ಲಿ ಸ್ವಚ್ಛತಾ ಕಾರ್ಯಕ್ರಮದ ಮೂಲಕ ನೆರವೆರಿತು.

    ಕಾರ್ಯಕ್ರಮಕ್ಕೆ ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಎಸ್ ಪೂಜಾರಿ ಚಾಲನೆ ನೀಡಿದರು.

    ದೇಗುಲ ಪ್ರಧಾನ ಅರ್ಚಕ ಗಣೇಶ್ ಭಟ್, ಸದಾಶಿವ ಅಡಿಗ, ಪಂಚಾಯತ್ ಸದಸ್ಯ ಅಜಿತ್ ದೇವಾಡಿಗ, ಆಡಳಿತ ಮಂಡಳಿಯ ಸದಸ್ಯ ಆನಂದ್ ದೇವಾಡಿಗ, ಕೋಟ ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಪೂಜಾರಿ, ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ, ಕಟ್ಟೆ ಬಳಗದ ಪ್ರದೀಪ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.