Category: ಸುದ್ದಿ

  • ಬೈಂದೂರು :ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿದ ಕೇಂದ್ರ ಸರ್ಕಾರ: ಬೈಂದೂರು ಶಾಸಕ ಗಂಟಿಹೊಳೆ ಸಂತಸ

    ಬೈಂದೂರು :ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿದ ಕೇಂದ್ರ ಸರ್ಕಾರ: ಬೈಂದೂರು ಶಾಸಕ ಗಂಟಿಹೊಳೆ ಸಂತಸ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸ್ವಾಗತಿಸಿದ್ದಾರೆ.

    ಕೊಬ್ಬರಿ ಧಾರಣೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರಿಗೆ ಕೇಂದ್ರ ಸರಕಾರದ ಈ ನಿರ್ಧಾರ ನೆರವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯು ದೇಶದ ತೆಂಗು ಬೆಳೆಗಾರರ ಸಂಕಷ್ಟವನ್ನು ಅರಿತು ಬೆಂಬಲ ಬೆಲೆ ಹೆಚ್ಚಿಸುವ ನಿರ್ಧಾರವನ್ನು ತನ್ನ ಸಚಿವ ಸಂಪುಟ ಸಭೆಯಲ್ಲಿ ಅಂಗೀರಿಕರಿಸಿದೆ. ಮೋದಿ ಸರ್ಕಾರದ ಈ ನಿರ್ಧಾರದಿಂದ ಕರಾವಳಿ ಸಹಿತ ದೇಶದ ತೆಂಗು ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ ಎಂದು ಅವರು ತಮ್ಮ ಪ್ರಕರಕಟಣೆಯಲ್ಲಿ ತಿಳಿಸಿದ್ದಾರೆ.

    ಕೇಂದ್ರ ಸರ್ಕಾರ ಗಿರಣಿ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತೀ ಕ್ವಿಂಟಾಲ್ಗೆ 300 ರೂಪಾಯಿ ಹಾಗೂ ಉಂಡೆ ಕೊಬ್ಬರಿಯ ಎಂಎಸ್ಪಿಯನ್ನು ಕ್ವಿಂಟಾಲ್ಗೆ 250 ರೂಪಾಯಿಗೆ ಏರಿಕೆ ಮಾಡಿದೆ. ಬುಧವಾರ ನಡೆದ ಕೇಂದ್ರ ಸರ್ಕಾರದ ಸಂಪುಟ ಸಮಿತಿ ಸಭೆಯಲ್ಲಿಈ ತೀರ್ಮಾನ ಕೈಗೊಳ್ಳಲಾಗಿದೆ. ಇದರೊಂದಿಗೆ 2024ನೇ ಋುತುವಿಗೆ ಮಿಲ್ಲಿಂಗ್ ಕೊಬ್ಬರಿಯ ಕನಿಷ್ಠ ಬೆಲೆಯು ಕ್ವಿಂಟಾಲ್ಗೆ 11,160 ರೂಪಾಯಿಗಳಿಗೆ ಹೆಚ್ಚಳಗೊಂಡಿದೆ. ಇದೇ ವೇಳೆ ಉತ್ತಮ ಗುಣಮಟ್ಟದ ಉಂಡೆ ಕೊಬ್ಬರಿಯ ಬೆಲೆ 12,000 ರೂಪಾಯಿಗಳಿಗೆಗೆ ಏರಿಕೆಯಾಗಿದೆ.

  • ಕೋಟ :ಡಿ ಫಾರ್ ಡೈ ಕಿರುಚಿತ್ರವನ್ನು ಕಿರಿಯವನಾಗಿ ಹಿರಿತನದಿಂದ ಚಿತ್ರಿಸಿದ ಕಾರ್ಯ ಶ್ಲಾಘನೀಯ: ಕಾವ್ಯ ಹಂದೆ

    ಕೋಟ :ಡಿ ಫಾರ್ ಡೈ ಕಿರುಚಿತ್ರವನ್ನು ಕಿರಿಯವನಾಗಿ ಹಿರಿತನದಿಂದ ಚಿತ್ರಿಸಿದ ಕಾರ್ಯ ಶ್ಲಾಘನೀಯ: ಕಾವ್ಯ ಹಂದೆ

    ಗ್ರಾಮೀಣ ಕಲಾ ಪ್ರತಿಭೆ ಸಂಜೀವ ಕದ್ರಿಕಟ್ಟು ಸಂಸ್ಮರಣೆ

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಒಂದರ್ಥದಲ್ಲಿ ಕಳೆದ ವರ್ಷಗಳ ಕೊಳೆಯನ್ನು ಕಿತ್ತೊಗೆಯುವ ಸಂದೇಶವನ್ನು ಸಾರಿದ ಡಿಸೈನರ್ ವಿಜಿತ್ ರಚಿಸಿ, ನಿರ್ದೇಶಿಸಿದ ‘ಡಿ ಫಾರ್ ಡೈ’ ಕಿರುಚಿತ್ರ ಹೊಸ ವರ್ಷಕ್ಕೆ ಹೊಸ ಆಯಾಮಗಳಾಗಿ ಹೊಸೆಯಲಿ. ಕಿರಿಯ ನಿರ್ದೇಶಕನಾಗಿ ಕಿರಿಯ ಕಲಾವಿದರನ್ನೊಡಗೂಡಿಕೊಂಡು ಕಿರಿಯವಳಾದ ನನ್ನಿಂದಲೇ ಉದ್ಘಾಟಿಸಿ, ಹಿರಿತನದ ಜವಾಬ್ಧಾರಿಯನ್ನು ವಿಜಿತ್ ತಂಡ ಮೆರೆದಿದೆ ಎಂದು ಕಿರಿಯ ರಂಗ ನಟಿ ಕಾವ್ಯ ಹಂದೆ ಕಿರುಚಿತ್ರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನ್ನಾಡಿದರು.

    ಶಿವರಾಮ ಕಾರಂತ ಥೀಂ ಪಾರ್ಕ್ ಕೋಟದಲ್ಲಿ ಗೌರವ ಗಣ್ಯರನೇಕರ ಉಪಸ್ಥಿತಿಯೊಂದಿಗೆ ಡಿ.31ರಂದು ಕಾರ್ಯಕ್ರಮ ಉದ್ಘಾಟಿಸಿ ಕಾವ್ಯ ಹಂದೆ ಮಾತನ್ನಾಡಿದರು.

    ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕಲಾ ಪ್ರತಿಭೆ ಸಂಜೀವ ಕದ್ರಿಕಟ್ಟು ಇವರ ಸಂಸ್ಮರಣಾ ಕಾರ್ಯಕ್ರಮವೂ ಜರುಗಿತು.

    ಹಲವಾರು ವರ್ಷಗಳ ಹಿಂದಿನಿಂದಲೂ ನಾಟಕ ರಚಿಸಿ, ನಿರ್ದೇಶಿಸಿ, ಅಭಿನಯಿಸುವ ಮೂಲಕ ಕಲಾ ಪ್ರಪಂಚಕ್ಕೆ ಕಾಲಿರಿಸಿದ ಸಂಜೀವ ಕದ್ರಿಕಟ್ಟು, ವ್ಯಾವಹಾರಿಕವಾಗಿ ಬಹು ಚಟುವಟಿಕೆಯಲ್ಲಿ ನಿರತನಾದ ಸಂದರ್ಭದಲ್ಲಿಯೂ ಕಲೆಯ ತುಡಿತ ಅವರಲ್ಲಿ ಮಾಸಿರಲಿಲ್ಲ. ಆನೆ, ಕುದುರೆ, ತಟ್ಟಿರಾಯ, ಗೋರಿಲ್ಲ, ಬೊಂಬೆಗಳನ್ನೆಲ್ಲಾ ರಚಿಸುತ್ತಾ ಬಿಡುವಿನ ಸಮಯದಲ್ಲಿ ಬೊಂಬೆಗಳೊಂದಿಗೆ ಕಲಾವಿದನಾಗಿ ಕೈಚಳಕದಿಂದ ಬೆಳಗಿ ಅನೇಕ ಸಂಘ ಸಂಸ್ಥೆಗಳ ಕಾರ್ಯಕ್ರಮಗಳಿಗೆ ತನ್ನಿಂದ ನಿರ್ಮಿತವಾದ ಬೊಂಬೆಗಳನ್ನು ಅಲಂಕಾರಕ್ಕಾಗಿ ರವಾನಿಸುತ್ತಾ ಕಲೆಯ ಆಸಕ್ತಿಯನ್ನು ಮೆರೆದ ಸಂಜೀವಣ್ಣ ಅಕಾಲ ಮರಣದಿಂದಾಗಿ ಕಲಾ ಪ್ರಪಂಚವನ್ನು ಬಡವಾಗಿಸಿದರು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸಂಸ್ಮರಣಾ ಮಾತುಗಳಲ್ಲಿ ನುಡಿದರು.

    ಗೌರವ ಉಪಸ್ಥಿತಿಯಲ್ಲಿ ಅಭಿಲಾಷ ಹಂದೆ, ಉದಯ ಶೆಟ್ಟಿ ಪಡುಕೆರೆ, ಸಚಿನ್ ಅಂಕೋಲ, ಪ್ರದೀಪ ವಿ. ಸಾಮಗ, ಶ್ರೀಶ ಭಟ್, ಗಿರಿಧರ್ ಕೋಟ, ಆಕಾಶ್ ದೇವಾಡಿಗ ಉಪಸ್ಥಿತರಿದ್ದು ಕಿರುಚಿತ್ರದ ಕಥಾ ವಸ್ತುವಿನ ವಿಶ್ಲೇಷಣೆಗಳನ್ನು ವಿಮರ್ಷಿಸಿದರು. ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು.

  • ಕೋಟ- ಶ್ರೀ ಶಾಂತಿಮತೀ ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮದ ಕೃತಜ್ಞತಾ ಸಭೆ

    ಕೋಟ- ಶ್ರೀ ಶಾಂತಿಮತೀ ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮದ ಕೃತಜ್ಞತಾ ಸಭೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಶ್ರೀ ಶಾಂತಿಮತೀ ಪ್ರತಿಷ್ಠಾನದ ದಶಮಾನೋತ್ಸವದ ಅಂಗವಾಗಿ ಹಮ್ಮಿಕೊಂಡ ಕೋಟಿ ಗಾಯತ್ರೀ ಹಾಗೂ ಲಕ್ಷ ಲಲಿತಾ ಸಹಸ್ರನಾಮ ಮಹಾಯಾಗವು ಯಶಸ್ವೀಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಕೃತಜ್ಞತಾ ಸಭೆಯನ್ನು ಭಾನುವಾರ ಕೋಟ ಮಾಂಗಲ್ಯ ಮಂದಿರದಲ್ಲಿ ನಡೆಸಲಾಯಿತು.

    ಮಹಾಯಾಗದ ಸಂದರ್ಭದಲ್ಲಿ ಸಹಕರಿಸಿದ ಮಹಾನೀಯರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಸಭೆಯಲ್ಲಿ ಪ್ರಮುಖರು ತಮ್ಮ ತಮ್ಮ ಅಭಿಪ್ರಾಯ ಸಲ್ಲಿಸಿದರು.

    ವೇದಿಕೆಯಲ್ಲಿ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮದ ಅಧ್ಯಕ್ಷ ಶಿವರಾಮ ಉಡುಪ, ಕೋಟ ಹಿರೇಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷ ಗಣೇಶ ಭಟ್, ಶ್ರೀ ಶಾಂತಿಮತೀ ಪ್ರತಿಷ್ಠಾನದ ಅಧ್ಯಕ್ಷ ಸಚ್ಚಿದಾನಂದ ಅಡಿಗ ಉಪಸ್ಥಿತರಿದ್ದರು. ಪ್ರತಿಷ್ಠಾನದ ಮಾಜಿ ಅಧ್ಯಕ್ಷ ಪ್ರಸನ್ನ ಭಟ್ ಸ್ವಾಗತಿಸಿದರು. ಕೋಟಿ ಗಾಯತ್ರೀ ಮಹಾಯಾಗ ಸಮಿತಿ ಅಧ್ಯಕ್ಷ ವಿದ್ವಾನ್ ಡಾ| ವಿಜಯ ಮಂಜರ್ ಧನ್ಯವಾದಗೈದರು.ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷ ರಾಮಚಂದ್ರ ಉಡುಪ ನಿರೂಪಿದರು.

  • ಕುಂದಾಪುರ :ಇನಿದನಿ ಆಹ್ವಾನ ಪತ್ರಿಕೆ ಬಿಡುಗಡೆ

    ಕುಂದಾಪುರ :ಇನಿದನಿ ಆಹ್ವಾನ ಪತ್ರಿಕೆ ಬಿಡುಗಡೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ನಾಡಿನಾದ್ಯಂತ ಪ್ರಸಿದ್ಧಿ ಪಡೆದಿರುವ ಸಂಗೀತಾಭಿಮಾನಿಗಳ ಬಹು ನಿರೀಕ್ಷೆಯ ಇನಿದನಿ ಸಂಗೀತ ಸಂಜೆ ಕಾರ್ಯಕ್ರಮವು ಜನವರಿ 14 ರಂದು ನಡೆಯಲಿದ್ದು ಅದರ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕಲಾಕ್ಷೇತ್ರ-ಕುಂದಾಪುರದ ಪ್ರಕಾಶಾಂಗಣದಲ್ಲಿ ನಡೆಯಿತು.

    ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದ ಕೃಷ್ಣ ಪ್ರಸಾದ್ ಕ್ಯಾಶ್ಯೂಸ್ ವಂಡಾರು, ಇದರ ಮಾಲಕರಾದ ಸಂಪತ್ ಕುಮಾರ್ ಶೆಟ್ಟಿ ಮಾತನಾಡುತ್ತಾ, ಇನಿದನಿ ಪ್ರಾರಂಭದ ವರ್ಷದಲ್ಲಿ ಕೇವಲ 150 ಜನ ಪ್ರೇಕ್ಷಕರಿಂದ ಶುರುವಾಗಿ ಈಗ 8,000 ಸಾವಿರಕ್ಕೂ ಅಧಿಕ ಪ್ರೇಕ್ಷಕರ ಮನಸೂರೆಗೊಳ್ಳುತ್ತದೆ ಅಂತಾದರೆ, ಅದು ಇನಿದನಿಯ ಗುಣಮಟ್ಟವನ್ನು ಸಾರುತ್ತದೆ. ಇದೊಂದು ಅಭೂತಪೂರ್ವ ಕಾರ್ಯಕ್ರಮವೆನ್ನುವುದು ಸ್ವತಃ ಪ್ರೇಕ್ಷಕನಾಗಿ ಇದು ನನ್ನ ಅನುಭವ.

    12 ನೇ ವರ್ಷದ ಇನಿದನಿ ಯಾವಾಗೆಂದು ಕಾಯುತ್ತಿದ್ದ ನನಗೆ ಅದೇ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡುವ ಸುಯೋಗ ದೊರಕಿದ್ದು ಖುಷಿಯ ವಿಚಾರ ಎಂದರು.

    ಮುಖ್ಯ ಅತಿಥಿಯಾಗಿದ್ದ ಕೃಷ್ಣಕೃಪಾ ಕ್ಯಾಶ್ಯೂಸ್ ಜಪ್ತಿ ಇದರ ನಿರ್ದೇಶಕ ಜಯಪ್ರಕಾಶ್ ಶೆಟ್ಟಿ ಮತ್ತು. ಹಿರಿಯ ಗಾಯಕ ಮೊಹನ್ ಸಾರಂಗ್ ಕುಂದಾಪುರ ಇವರು ಶುಭಕೋರಿದರು.

    ಅಧ್ಯಕ್ಷ ಕಿಶೋರ್ ಕುಮಾರ್ ಸ್ವಾಗತಿಸಿ ಪ್ರಸ್ತಾವನೆ ಗೈದರು. ರಾಜೇಶ್ ಕಾವೇರಿ ಕಾರ್ಯಕ್ರಮ ನಿರೂಪಿಸಿ, ದಾಮೋದರ ಪೈ ವಂದನಾರ್ಪಣೆಗೈದರು.

  • ವಂಡ್ಸೆ :ಮಾತೃಭೂಮಿ ಯುವ ಸಂಘಟನೆಯಿಂದ ಶ್ರಮದಾನ

    ವಂಡ್ಸೆ :ಮಾತೃಭೂಮಿ ಯುವ ಸಂಘಟನೆಯಿಂದ ಶ್ರಮದಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ವಂಡ್ಸೆ ಆತ್ರಾಡಿಯ ಮಾತೃಭೂಮಿ ಯುವ ಸಂಘಟನೆಯ ವತಿಯಿಂದ ಹೊಸವರ್ಷದ ಮುನ್ನ ದಿನ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರಮದಾನ ಮಾಡಲಾಯಿತು. ದೇವಸ್ಥಾನದ ಪರಿಸರದ ಪೊದೆಗಿಡಗಳನ್ನು ಸ್ವಚ್ಚಗೊಳಿಸಲಾಯಿತು.

    ಈ ಸಂದರ್ಭದಲ್ಲಿ ಮಾತೃಭೂಮಿ ಯುವ ಸಂಘಟನೆ ಅಧ್ಯಕ್ಷ ಶಶಿಧರ ಆಚಾರ್ಯ, ಕಾರ್ಯದರ್ಶಿ ವಿನಂತ್ ಗಾಣಿಗ, ಮಾಜಿ ಅಧ್ಯಕ್ಷರಾದ ಪ್ರಸಾದ ಅಚಾರ್ಯ, ರಮೇಶ ಪೂಜಾರಿ ಬಳಿಹಿತ್ಲು, ಸದಸ್ಯರಾದ ಚಂದ್ರ ಪೂಜಾರಿ ಕಲ್ಮಡಿ, ರಾಜು ಪೂಜಾರಿ ಅರೆಕಲ್ಲು ಮನೆ, ಪ್ರಥ್ಬಿರಾಜ್ ಶೆಟ್ಟಿ, ಪ್ರಜೇತ್ ಶೆಟ್ಟಿ,ಗಣೇಶ್ ದೇವಾಡಿಗ,ಗುರುರಾಜ್ ದೇವಾಡಿಗ, ಶಬರೀಶ್ ಆಚಾರ್ಯ ,ದಿನೇಶ್ ಬಳಗೇರಿ ಮೊದಲಾದವರು ಉಪಸ್ಥಿತರಿದ್ದರು.

  • ವಂಡ್ಸೆ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

    ವಂಡ್ಸೆ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಹಬ್ಬ ಮತ್ತು ಉತ್ಸವಕ್ಕೆ ವ್ಯತ್ಯಾಸವಿದೆ. ಹಬ್ಬ ಎಂದರೆ ತಿಂಡಿ ತಿನಿಸು ಮಾರಾಟ ಮಳಿಗೆ ಖರೀದಿಗಳು ಅವಕಾಶ ಇರುತ್ತದೆ. ಉತ್ಸವ ಎಂದರೆ ಅದು ದೇವಸ್ಥಾನದ ಒಳಗಡೆ ದೇವರಿಗೆ ನಡೆಯುವ ಪೂಜೆ ಪುನಸ್ಕಾರ ಇತ್ಯಾದಿಗಳು. ಪೋಷಕರಿಗೆ, ಸಾರ್ವಜನಿಕರಿಗೆ ವಾರ್ಷಿಕೋತ್ಸವ, ಮಕ್ಕಳಿಗೆ ಹಬ್ಬ. ಪ್ರತೀ ವರ್ಷ ಕೂಡಾ ಶಾಲಾ ವಾರ್ಷಿಕೋತ್ಸವನ್ನು ಆಯೋಜಿಸುವ ಮೂಲಕ ಮಕ್ಕಳ ಹಬ್ಬವನ್ನು ಆಚರಿಸಬೇಕು. ಇದಕ್ಕೆ ಊರವರ ಸಹಕಾರವೂ ಅಗತ್ಯ ಎಂದು ಉದ್ಯಮಿ, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಹೇಳಿದರು.

    ಡಿ.28ರಂದು ಜರಗಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇದರ 109ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಸಾಂಸ್ಕೃತಿಕ ಕಾರ್ಯಕ್ರಮ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗಿವೆ. ಸಂಸ್ಕøತಿ, ಸಾಂಸ್ಕøತಿಕ ಮೌಲ್ಯಗಳ ವಿದ್ಯಾರ್ಥಿಗಳಿಗೆ ತಿಳಿಯಪಡಿಸುವಲ್ಲಿ ಇಂತಹ ಹೊಸತನದ ಅಗತ್ಯತೆ ಇರುತ್ತದೆ. ಎಲ್ಲರೂ ಒಗ್ಗಟ್ಟಿನಲ್ಲಿ ಸರ್ಕಾರಿ ಶಾಲೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸಲು ಶ್ರಮಿಸೋಣ ಎಂದರು.

    ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗೋವರ್ದನ್ ಜೋಗಿ, ಗ್ರಾಮ ಪಂಚಾಯಿತಿ ಸದಸ್ಯರಾದ ಉದಯಕುಮಾರ್ ಶೆಟ್ಟಿ, ಪ್ರಶಾಂತ ಪೂಜಾರಿ, ಶಶಿಕಲಾ ಎಸ್., ಸುಶೀಲ, ಸುಬ್ಬು, ಬೈಂದೂರು ಕ್ಷೇತ್ರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಸೀತರಾಮ ಶೆಟ್ಟಿ ತೊಂಭತ್ತು, ರೋಟರಿ ಜಿಲ್ಲೆ 3182 ಇದರ ಮಾಜಿ ಜಿಲ್ಲಾ ಗವರ್ನರ್ ಅಭಿನಂದನ್ ಶೆಟ್ಟಿ, ನ್ಯಾಯವಾದಿ ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ, ಚಾರ್ಟೆಡ್ ಅಕೌಂಟೆಂಟ್ ಸಿ.ಎ ರಾಜೇಶ್ ಶೆಟ್ಟಿ ನಂದ್ರೋಳಿ ಸೋಡಿಗದ್ದೆ, ದುರ್ಗಾಶ್ರೀ ಎಂಟರ್‍ಪ್ರೈಸಸ್ ವಂಡ್ಸೆ ಇದರ ನಿಶ್ಚಿತ್ ಶೆಟ್ಟಿ ಹೆಗ್ಗುಂಜೆ ಮಂದರ್ತಿ, ವಿದ್ಯಾರ್ಥಿ ನಾಯಕರಾದ ಆದಿತ್ಯ, ಶರಣ್ಯ, ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕಿ ಆಶಾ ಆವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಮಟ್ಟದ ಗುಂಡು ಎಸೆತ ಮತ್ತು ಚಕ್ರಾ ಎಸೆತ ಸ್ಪರ್ಧೆಯಲ್ಲಿ ಬಂಗಾರದ ಪದಕದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶರಣ್ಯ , ಮೈಸೂರು ವಿಭಾಗ ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಶಾಲಾ ವಿದ್ಯಾರ್ಥಿಗಳಾದ ಶರಣ್ಯ, ಶಿರೀಶ, ಶ್ರದ್ದಾ, ಮಾನ್ವಿತಾ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ವಿಶ್ವಾಸ್ ಹಾಗೂ ಜಿಲ್ಲಾ ಮಟ್ಟವನ್ನು ಪ್ರತಿನಿಧಿಸಿದ ಸಂಸ್ಥೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ದತ್ತಿನಿಧಿ ಬಹುಮಾನಗಳನ್ನು ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳಿಗೆ ಆಯೋಜಿಸಿದ ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿಯರಾದ ನಾಗವೇಣಿ, ವಾಣಿಶ್ರೀ, ಅಂಬಿಕಾ ಶೆಟ್ಟಿ ವಿಜೇತರ ಯಾದಿ, ಶಿಕ್ಷಕಿ ಶೈಲಾಶ್ರೀ ಸನ್ಮಾನ ಪತ್ರ ವಾಚಿಸಿದರು.

    ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಡಾ|| ಪೂರ್ಣಿಮಾ ಟಿ, ಸ್ವಾಗತಿಸಿದರು. ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಸದಾಶಿವ ವರದಿ ವಾಚಿಸಿದರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂದೇಶ್ ಶೆಟ್ಟಿ ವಂದಿಸಿದರು. ಸಹಶಿಕ್ಷಕರಾದ ಪ್ರತಾಪ ಶೆಟ್ಟಿ, ಇಂದಿರಾ ಕಾರ್ಯಕ್ರಮ ನಿರ್ವಹಿಸಿದರು.

    ಸಾಂಸ್ಕøತಿಕ ಕಾರ್ಯಕ್ರಮವಾಗಿ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಸಂಜೆ, ಶಾಲಾ ಪುಟಾಣಿಗಳಿಂದ ನೃತ್ಯ ಸಿಂಚನ, ವಿದ್ಯಾರ್ಥಿಗಳಿಂದ ವೈವಿದ್ಯಮಯ ನೃತ್ಯ ವೈಭವ, ಶಾಲಾ ವಿದ್ಯಾರ್ಥಿಗಳಿಂದ ನವ್ಯ ಶೈಲಿಯ ನಾಟಕ ‘ಕುಣಿ ಕುಣಿ ನವಿಲೆ’ ಪ್ರದರ್ಶನಗೊಂಡಿತು. ಅಪರೂಪದ ಜಾನಪದ ನೃತ್ಯಗಳನ್ನು ವಿದ್ಯಾರ್ಥಿಗಳು ಅಧ್ಭುತವಾಗಿ ಪ್ರದರ್ಶಿಸಿದರು.

    ಮಕ್ಕಳದ್ದೇ ನಿರ್ವಹಣೆ
    ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿ/ನಿಯರೆ ನಿರ್ವಹಿಸಿದ್ದು ವಿಶೇಷವಾಗಿತ್ತು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ವಿದ್ಯಾರ್ಥಿಗಳು ವೇದಿಕೆಯಲ್ಲಿ ನಿಂತು ಪ್ರಬುದ್ಧ ನಿರೂಪಕರಂತೆ ಕಾರ್ಯಕ್ರಮ ನಿರ್ವಹಿಸಿ ಭೇಷ್ ಎನಿಸಿಕೊಂಡರು. ಸುಮಾರು 2ಸಾವಿರಕ್ಕೂ ಹೆಚ್ಚು ಜನ ಕಾರ್ಯಕ್ರಮ ವೀಕ್ಷಿಸಿದರು.

  • ಸಾಲಿಗ್ರಾಮ – ವಿನ್‍ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಅಧ್ಯಕ್ಷರಾಗಿ ಗಿರೀಶ್ ಪೂಜಾರಿ ಪುನಾರಾಯ್ಕೆ

    ಸಾಲಿಗ್ರಾಮ – ವಿನ್‍ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಅಧ್ಯಕ್ಷರಾಗಿ ಗಿರೀಶ್ ಪೂಜಾರಿ ಪುನಾರಾಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ವಿನ್‍ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಇದರ ಅಧ್ಯಕ್ಷರಾಗಿ ಗಿರೀಶ್ ಪೂಜಾರಿ ಪುನಾರಾಯ್ಕೆಗೊಂಡರು. ಗೌರವಾಧ್ಯಕ್ಷರಾಗಿ ರಾಜೇಶ್ ಉಪಾಧ್ಯ,ಉಪಾಧ್ಯಕ್ಷರಾಗಿ ಕೃಷ್ಣ. ಪಿ, ಪ್ರಧಾನ ಕಾರ್ಯದರ್ಶಿ ಸುಧಾಕರ್ ಪೂಜಾರಿ, ಕಾರ್ಯದರ್ಶಿ ರಮೇಶ್ ಪೂಜಾರಿ, ಕೋಶಾಧಿಕಾರಿಯಾಗಿ ರವಿ ದೇವಾಡಿಗ, ರವಿ ಪೂಜಾರಿ, ಗೌರವ ಸಲಹೆಗರರಾಗಿ ಕೃಷ್ಣ ದೇವಾಡಿಗ, ರತ್ನಾಕರ ಪೂಜಾರಿ ಆಯ್ಕೆಯಾದರು.

     

  • ವಂಡ್ಸೆ ಬ್ಲಾಕ್ ಕಿಸಾನ್ ಕಾಂಗ್ರೆಸ್‍ನ ನೂತನ ಅಧ್ಯಕ್ಷ ಗೋವರ್ಧನ್ ಜೋಗಿ ಪದಪ್ರದಾನ

    ವಂಡ್ಸೆ ಬ್ಲಾಕ್ ಕಿಸಾನ್ ಕಾಂಗ್ರೆಸ್‍ನ ನೂತನ ಅಧ್ಯಕ್ಷ ಗೋವರ್ಧನ್ ಜೋಗಿ ಪದಪ್ರದಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ವಂಡ್ಸೆ ಬ್ಲಾಕ್ ಕಿಸಾನ್ ಕಾಂಗ್ರೆಸ್‍ನ ನೂತನ ಅಧ್ಯಕ್ಷರಾಗಿ ವಂಡ್ಸೆ ಗ್ರಾಮ ಪಂಚಾಯತ್‍ನ ಉಪಾಧ್ಯಕ್ಷ ಗೋವರ್ಧನ್ ಜೋಗಿ ಅವರು ಆಯ್ಕೆಯಾಗಿದ್ದು ಅವರ ಪದಪ್ರದಾನ ಕಾರ್ಯಕ್ರಮ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

    ವಂಡ್ಸೆ ಬ್ಲಾಕ್ ಕಿಸಾನ್ ಕಾಂಗ್ರೆಸ್‍ನ ನಿಕಟಪೂರ್ವ ಅಧ್ಯಕ್ಷರಾ ನಾಗಪ್ಪ ಕೊಠಾರಿಯವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂಡ್ಸೆ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ವಹಿಸಿದ್ದರು.

    ಜಿಲ್ಲಾ ಕಿಸಾನ್ ಕಾಂಗ್ರೆಸ್‍ನ ಅಧ್ಯಕ್ಷ ಎಲ್ಲೂರು ಶಶಿಧರ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

    ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ವಾಸುದೇವ ಯಡಿಯಾಳ, ಶೇಖರ್ ಕೋಟ್ಯಾನ್, ಉದಯ್ ಹೇರೂರು, ಭಾಸ್ಕರ್ ಶೆಟ್ಟಿ ಕುಂದಾಪುರ, ರೋಷನ್ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ, ಉದಯ್ ಜಿ ಪೂಜಾರಿ, ರವಿ ಗಾಣಿಗ ಅಜ್ರಿ, ಶ್ರೀನಿವಾಸ ಪೂಜಾರಿ ಕಲ್ಮಾಡಿ, ಕಾಳಿಂಗ ಶೆಟ್ಟಿ, ಕಾವ್ರಾಡಿ ಸುಧಾಕರ್ ಶೆಟ್ಟಿ ಹಕ್ಲಾಡಿ, ರಮೇಶ್ ಪೂಜಾರಿ ವಂಡ್ಸೆ, ಗುಂಡು ಪೂಜಾರಿ ಹರಾವರಿ, ಮಂಜು ಕೊಠಾರಿ ಕೆರಾಡಿ, ರಘುರಾಮ್ ಶೆಟ್ಟಿ ಅಜ್ರಿ ಉಪಸ್ಥಿತರಿದ್ದರು.

  • ಕೋಟ :ನವ ಕುಂಡಗಳಲ್ಲಿ ಮೊಳಗಿದ ಕೋಟಿ ಗಾಯತ್ರೀ ಮಹಾಯಾಗ, ಲಕ್ಷ ಲಲಿತಾ ಸಹಸ್ರನಾಮ, ಕುಂಕುಮಾರ್ಚನೆ

    ಕೋಟ :ನವ ಕುಂಡಗಳಲ್ಲಿ ಮೊಳಗಿದ ಕೋಟಿ ಗಾಯತ್ರೀ ಮಹಾಯಾಗ, ಲಕ್ಷ ಲಲಿತಾ ಸಹಸ್ರನಾಮ, ಕುಂಕುಮಾರ್ಚನೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಇತಿಹಾಸದಲ್ಲೆ ಮೊದಲೆಂಬಂತೆ ಕೂಟ ಮಹಾಜಗತ್ತಿನ ಕೋಟ ಪರಿಸರದ ಮಹಾಲಿಂಗೇಶ್ವರನ ಸಾನಿಧ್ಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಕೋಟಿ ಗಾಯತ್ರೀ, ಮಹಾಯಾಗ, ಲಕ್ಷ ಲಲಿತಾ ಸಹಸ್ರನಾಮ ಮಹಾಯಾಗ ಕಾರ್ಯಕ್ರಮಗಳು ವಿಪ್ರ ಬಾಂಧವರ ಹಾಗೂ ಭಕ್ತ ಸಮುದಾಯದ ನಡುವೆ ಧಾರ್ಮಿಕವಾಗಿ ವಿಜೃಂಭಿಸಿಕೊಂಡಿತು.

    ಶ್ರೀ ಶಾಂತಿಮತೀ ಪ್ರತಿಷ್ಠಾನ ಹಂದಾಡಿ ಬ್ರಹ್ಮಾವರ ಇವರ ಆಶ್ರಯದಲ್ಲಿ ಮಹಾಯಾಗ ಸಮಿತಿಯ ಮೇಲುಸ್ತುವಾರಿಯಲ್ಲಿ ನವ ಕುಂಡಗಳಲ್ಲಿ 150 ಋತ್ವಿಜರ ಸಮ್ಮುಖದಲ್ಲಿ ಮಹಾಯಾಗ ಮೊದಲ್ಗೊಂಡಿತು.

    ವೇದಬ್ರಹ್ಮ ಹೃಷಿಕೇಶ್ ಬಾಯರಿ ಬಾರ್ಕೂರು,ಅವಧಾನಿ ಶ್ರೀ ಸುಬ್ರಹ್ಮಣ್ಯ ಭಟ್ ಗುಂಡಿಬೈಲ್ ಉಡುಪಿ ಇವರುಗಳ ಸಾರಥ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು ಪ್ರಾರಂಭಗೊಂಡಿತು.
    1000 ಅಧಿಕ ವಿಪ್ರ ಮಹಿಳೆಯರಿಂದ ಲಲಿತಾ ಸಹಸ್ರ ಕುಂಕುಮಾರ್ಚನೆ ಕಾರ್ಯಕ್ರಮ ವಿಶೇಷವಾಗಿ ಕಣ್ಮನ ಸೆಳೆಯಿತು.

    ಗಮನ ಸೆಳೆದ ಒರ್ವ ವಿಪ್ರ ಮಹಿಳೆ


    ಯಾವುದೇ ದೇವಳಗಳ ಧಾರ್ಮಿಕ ಕಾರ್ಯಕ್ರಮಗಳಿರಲಿ ಅಥವಾ ಜಾತ್ರಾ ಸಂದರ್ಭದಲ್ಲಿ ಒರ್ವ ಮಹಿಳೆ ಬಾಯಾರಿಗೆ ನೀಗಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ ಅದರಂತೆ ತೆಕ್ಕಟ್ಟೆ ಪರಿಸರದ ನಾಗಲಕ್ಷ್ಮೀ ಎಂಬ ವಿಪ್ರ ಮಹಿಳೆ ಮಹಾಯಾಗದಲ್ಲಿ ಗಮನ ಸೆಳೆದು ಆಗಮಿಸಿದ ಎಲ್ಲಾ ಭಕ್ತಾಧಿಗಳಿಗೂ, ವಿಪ್ರ ಬಾಂಧವರಿಗೆ ನೀರುಣಿಸುವ ಕಾಯಕ ವಿಶೇಷವಾಗಿ ಗಮನ ಸೆಳೆಯಿತು.

    ಧಾರ್ಮಿಕ ಸಭಾ ಕಾರ್ಯಕ್ರಮ


    ಧಾರ್ಮಿಕ ಸಭಾ ಕಾರ್ಯಕ್ರಮವನ್ನು ವಿದ್ಯಾವಾಚಸ್ಪತಿ ವಿದ್ವಾನ್ ಉಮಾಕಾಂತ್ ಭಟ್ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು.

    ಮುಖ್ಯ ಅಭ್ಯಾಗತರಾಗಿ ಸಂಸ್ಕೃತ ವಿದ್ವಾಂಸ ಡಾ.ಕೃಷ್ಣಮೂರ್ತಿ ಬಾಯರಿ, ವಾಸ್ತು ತಜ್ಞ ಅವಧಾನಿ ಗುಂಡಿಬೈಲ್ ಸುಬ್ರಹ್ಮಣ್ಯ ಭಟ್, ಪಾರಂಪರಿಕ ಶಿಕ್ಷಣ ತಜ್ಞೆ ಅಮೃತವರ್ಷಿಣಿ ಉಮೇಶ್ ಬೆಂಗಳೂರು, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ವೈ ಸುಧಾಕರ್ ಭಟ್, ಕೋಟ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಭಟ್ ಉಪಸ್ಥಿತರಿದ್ದರು.

    ಮಹಾಯಾಗ ಸಮಿತಿ ಅಧ್ಯಕ್ಷ ಡಾ.ವಿದ್ವಾನ್ ವಿಜಯ್ ಮಂಜರ್ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಪೂರ್ಣಿಮಾ ಕಮಲಶಿಲೆ, ಸಮಿತಿಯ ಕೆ.ರಾಜಾರಾಮ್ ಐತಾಳ್ ನಿರೂಪಿಸಿದರು. ಯಾಗಸಮಿತಿ ಕಾರ್ಯದರ್ಶಿ ಪ್ರಸನ್ನ ಭಟ್ ವಂದಿಸಿದರು. ಸಮಿತಿಯ ಸದಸ್ಯರು ವೇದಘೋಷಗಳನ್ನು ನುಡಿದರು. ಪಲ್ಲವಿ ತುಂಗ ಪ್ರಾರ್ಥನೆ ಸಲ್ಲಿಸಿದರು. ಸಮಿತಿಯ ಜತೆಕಾರ್ಯದರ್ಶಿ ದಯಾನಂದ ವಾರಂಬಳ್ಳಿ ಸಹಕರಿಸಿದರು.
    ಕಾರ್ಯಕ್ರಮದ ನಂತರ ಪ್ರಸಾದ ವಿತರಣೆ ನಡೆಯಿತು.

    ಶನಿವಾರ ಪೂರ್ವಾಹ್ನ ನವ ಕುಂಡಗಳಲ್ಲಿ ಕೋಟಿ ಗಾಯತ್ರೀ ಮಹಾಯಾಗ,9.ಗಮಹಾಯಾಗದ ಪೂರ್ಣಾಹುತಿ,ಪ್ರಸಾದ ವಿತರಣೆ,ಮಹಾಮಂತ್ರಾಕ್ಷತೆ,10.ಗ ಸಮಾರೋಪ ಸಮಾರಂಭ,ಅಪರಾಹ್ನ 12.30ಕ್ಕೆ ಮಹಾಅನ್ನಸಂತರ್ಪಣೆ ಕಾರ್ಯಕ್ರಮಗಳು ಜರಗಲಿಕ್ಕಿದೆ

    ಶ್ರೀ ಶಾಂತಿಮತೀ ಪ್ರತಿಷ್ಠಾನ ಹಂದಾಡಿ ಬ್ರಹ್ಮಾವರ ಇವರ ಆಶ್ರಯದಲ್ಲಿ ಮಹಾಯಾಗ ಸಮಿತಿಯ ಮೇಲುಸ್ತುವಾರಿಯಲ್ಲಿ ನವ ಕುಂಡಗಳಲ್ಲಿ 150 ಋತ್ವಿಜರ ಸಮ್ಮುಖದಲ್ಲಿ ಮಹಾಯಾಗ ಮೊದಲ್ಗೊಂಡಿತು.

  • ಉಡುಪಿ :ಧರ್ಮಸ್ಥಳ ಕ್ಷೇತ್ರದಿಂದ ಉಡುಪಿ ಪುತ್ತಿಗೆ ಮಠಕ್ಕೆ 10 ಲಕ್ಷ ಮೊತ್ತದ ಸಹಾಯಧನ

    ಉಡುಪಿ :ಧರ್ಮಸ್ಥಳ ಕ್ಷೇತ್ರದಿಂದ ಉಡುಪಿ ಪುತ್ತಿಗೆ ಮಠಕ್ಕೆ 10 ಲಕ್ಷ ಮೊತ್ತದ ಸಹಾಯಧನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ 10 ಲಕ್ಷ ರೂಪಾಯಿ ಸಹಾಯಧನದ ಡಿಡಿ ಉಡುಪಿ ತಾಲೂಕಿನ ಪುತ್ತಿಗೆ ಮಠದ ಪರ್ಯಾಯಕ್ಕೆ ಹಸ್ತಾಂತರಿಸಲಾಯಿತು. ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ ಅವರು ಸ್ವಾಮೀಜಿಯವರಿಗೆ ಡಿಡಿ ಯನ್ನು ಹಸ್ತಾಂತರಿಸಿದರು.

    ಈ ಸಂದರ್ಭ ಜನ ಜಾಗೃತಿ ಸಮಿತಿಯ ಅಧ್ಯಕ್ಷ ಸತ್ಯನಂದ ನಾಯಕ್, ಜಿಲ್ಲಾ ಜನ ಜಾಗೃತಿ ಸಮಿತಿಯ ಸದಸ್ಯ ಶಿವಕುಮಾರ್, ಭಜನ್ ಪರಿಷತ್ ಉಪಾಧ್ಯಕ್ಷೆ ವಜ್ರಾಕ್ಷಿ, ವಲಯ ಅಧ್ಯಕ್ಷೆ ಗೀತಾ, ಯೋಜನಾಧಿಕಾರಿಗಳು, CSC ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಸೇವಾಪ್ರತಿನಿಧಿ ಉಪಸ್ಥಿತರಿದ್ದರು.