Category: ಸುದ್ದಿ

  • ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಹಳೇ ವಿದ್ಯಾರ್ಥಿಗಳ ಪಾತ್ರ ಗಣನೀಯವಾದದ್ದು – ರೇ.ಫಾ.ಸುನೀಲ್ ಡಿಸಿಲ್ವ

    ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಹಳೇ ವಿದ್ಯಾರ್ಥಿಗಳ ಪಾತ್ರ ಗಣನೀಯವಾದದ್ದು – ರೇ.ಫಾ.ಸುನೀಲ್ ಡಿಸಿಲ್ವ

    ಪಾಂಡೇಶ್ವರ ಶಾಲಾ 99ನೇ ವರ್ಷದ ವಾರ್ಷಿಕೋತ್ಸವ

    ಕೋಟ: ಗ್ರಾಮೀಣ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಹಳೇ ವಿದ್ಯಾರ್ಥಿಗಳ ಹಾಗೂ ಶಾಲಾಭಿವೃದ್ಧಿ ಸಮಿತಿ ಪಾತ್ರ ಮಹತ್ತರವಾದದ್ದು ಈ ದಿಸೆಯಲ್ಲಿ ಇಲ್ಲಿನ ಹಳೇ ವಿದ್ಯಾರ್ಥಿಗಳ ಕಾರ್ಯತತ್ಪರತೆ ಶ್ಲಾಘನೀಯ ಎಂದು ಶಾಲಾ ಸಂಚಾಲಕ ರೇ.ಫಾ.ಸುನೀಲ್ ಡಿಸಿಲ್ವ ನುಡಿದರು.

    ಭಾನುವಾರ ಶತಮಾನೋತ್ಸವ ಸಂಭ್ರಮದಲ್ಲಿರುವ ಇಲ್ಲಿನ ಸಾಸ್ತಾನದ ಪಾಂಡೇಶ್ವರ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಅಳಿವಿನಂಚಿನಲ್ಲಿರುವ ಸಾಕಷ್ಟು ಕನ್ನಡ ಮಾಧ್ಯಮಗಳ ಶಾಲೆಗಳು ಚಿಗುರೊಡೆಯುತ್ತಿವೆ ಈ ಹಿನ್ನಲ್ಲೆಯನ್ನು ಗಮನದಲ್ಲಿರಿಸಿ ಪ್ರತಿಯೊರ್ವರು ಶಾಲಾ ಉಳಿವಿಗೆ ಶ್ರಮಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಈ ಬಾರಿಯ ಅಂತರಾಷ್ಟ್ರೀಯ ಪಂಜ ಕುಸ್ತಿಯಲ್ಲಿ ಎಡಗೈ ಹಾಗೂ ಬಲಗೈ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಪಾಂಡೇಶ್ವರ ಸುರೇಶ್.ಬಿ.ಪೂಜಾರಿ ಹಾಗೂ ಆಸರೆ ಅನಿಮಲ್ ಟ್ರಸ್ಟ್‌ನ ಸ್ಥಾಪಕಿ ಸಾಕ್ಷಿ ಕಾಮತ್ ಇವರುಗಳನ್ನು ಸನ್ಮಾನಿಸಲಾಯಿತು. ಆಟೊ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳು ನಡೆದವು. ಮುಖ್ಯ ಅತಿಥಿಗಳಾಗಿ ಪಾಂಡೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ, ಕ್ಯಾಥೋಲಿಕ್ ಸಭಾ ಅಧ್ಯಕ್ಷ ಮೈಕಲ್ ಲೂವಿಸ್ , ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷ ರಮೇಶ್ ಪೂಜಾರಿ, ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಜಾನೇಶ್ವರಿ ಉಡುಪ ,ಸುರಕ್ಷಾ ಸಮಿತಿ ಅಧ್ಯಕ್ಷ ಕುಮಾರ ಪೂಜಾರಿ ,ಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಪೂಜಾರಿ ಉಪಸ್ಥಿತರಿದ್ದರು

    ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ, ಸುರೇಶ್ ಪೂಜಾರಿ ಸ್ವಾಗತಿಸಿದರು, ಮುಖ್ಯೋಪಾಧ್ಯಾಯರು ವಾರ್ಷಿಕ ವರದಿ ವಾಚಿಸಿದರು. ಶಿಕ್ಷಕ ಬಾಳಪ್ಪ ಅವಾಲಿ ಧನ್ಯವಾದಗೈದರು.

  • ಕೋಟ :ಬಾರಿಕೆರೆ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ರವಿ ಕುಂದರ್ ಆಯ್ಕೆ

    ಕೋಟ :ಬಾರಿಕೆರೆ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ರವಿ ಕುಂದರ್ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟದ ಬಾರಿಕೆರೆ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ರವಿ ಕುಂದರ್ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಸುರೇಶ್ ಕಾಂಚನ್, ಉಪಾಧ್ಯಕ್ಷರಾಗಿ ಪ್ರಮೋದ ಆಚಾರ್, ಪ್ರಧಾನ ಕಾರ್ಯದರ್ಶಿಯಾಗಿ ಪವನ್ ಕುಂದರ್, ಜತೆಕಾರ್ಯದರ್ಶಿ ಪ್ರತಾಪ್ ಬಾರಿಕೆರೆ, ಕೋಶಾಧಿಕಾರಿಶ್ರೀಕಾಂತ್ ಆಚಾರ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರವಿಕಿರಣ್ ಬಾರಿಕೆರೆ, ಜತೆಕಾರ್ಯದರ್ಶಿ ವಿಶ್ವಾಸ್ ಬಾರಿಕೆರೆ, ಕ್ರೀಡಾಕಾರ್ಯದರ್ಶಿ ಪ್ರಜ್ವಲ್ ಕಾಂಚನ್, ಜತೆ ಕ್ರೀಡಾ ಕಾರ್ಯದರ್ಶಿ ಗಣೇಶ್ ಪೂಜಾರಿ ಆಯ್ಕೆಯಾಗಿದ್ದರು.

  • ಕೋಟ :ಮಣೂರು ದೇಗುಲದ ದೀಪೋತ್ಸವ

    ಕೋಟ :ಮಣೂರು ದೇಗುಲದ ದೀಪೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟದ ಮಣೂರು ಶ್ರೀ ಮಹಾಲಿಂಗೇಶ್ವರ ಮತ್ತು ಹೇರಂಬ ಮಹಾಗಣಪತಿ ದೇಗುಲದ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಡಿ.12ರಂದು ನಡೆಯಿತು. ಈ ಪ್ರಯುಕ್ತ ರಂಗಪೂಜೆ, ಅಗಲುಸೇವೆ, ಪನ್ಯಾರ ಸೇವೆ , ಶ್ರೀರಾಮ ಭಜನಾ ತಂಡ ಮಣೂರು ಇವರಿಂದ ಭಜನಾ ಕಾರ್ಯಕ್ರಮ ಹಾಗೂ ಮುಕಾಂಬಿಕಾ ತೀರ್ಥಕೆರೆಯಲ್ಲಿ ತೆಪೋತ್ಸವ ಜರಗಿತು.

    ದೇಗುಲದ ಸುತ್ತ ಹಣತೆಗಳ ಸಾಲು ವಿಶೇಷವಾಗಿ ಗಮನ ಸೆಳೆಯಿತು. ಧಾರ್ಮಿಕ ವಿಧಿವಿಧಾನಗಳನ್ನು ವೇ.ಮೂ ರಾಮಪ್ರಸಾದ ಅಡಿಗ ನೆರವೆರಿಸಿದರು.

    ಶ್ರೀ ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ,ಟ್ರಸ್ಟ್‌ನ ಸದಸ್ಯರಾದ ಅಶೋಕ ಶೆಟ್ಟಿ, ದಿನೇಶ್ ಆಚಾರ್, ಕೃಷ್ಣ ದೇವಾಡಿಗ, ಬಾಬು ಕೋಟತಟ್ಟು, ಸುಫಲ ಶೆಟ್ಟಿ, ದಿವ್ಯ ಪ್ರಭು, ಅರ್ಚಕ ಪ್ರತಿನಿಧಿ ರವಿ ಐತಾಳ್ ಮತ್ತಿತರರು ಇದ್ದರು.

  • ಕುಂದಾಪುರ :ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನಘಾ ನಾಯಕ್ ಕ್ಲಾಟ್ (CLAT) ಪರೀಕ್ಷೆಯಲ್ಲಿ 964ನೇ ರ್ಯಾಂಕ್

    ಕುಂದಾಪುರ :ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನಘಾ ನಾಯಕ್ ಕ್ಲಾಟ್ (CLAT) ಪರೀಕ್ಷೆಯಲ್ಲಿ 964ನೇ ರ್ಯಾಂಕ್

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನಘಾ ನಾಯಕ್ ಇವರು ಕೇಂದ್ರೀಕೃತ ರಾಷ್ಟ್ರೀಯ ಮಟ್ಟದ ಸರ್ಕಾರಿ ಪ್ರವೇಶ ಪರೀಕ್ಷೆಯಾದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT-2023) ನಲ್ಲಿ ಅತ್ಯುತ್ತಮ ಸಾಧನೆಯೊಂದಿಗೆ ರಾಜ್ಯಮಟ್ಟದಲ್ಲಿ 964ನೇ ರ್ಯಾಂಕ್ ಗಳಿಸಿ ವಿದ್ಯಾಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಇವರು ಈ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಾರೆ. ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ದಾತ್ಮಕ ಪರೀಕ್ಷೆಗಳಿಗೆ ಅನುಭವಿ ಅಧ್ಯಾಪಕರಿಂದ ತರಬೇತಿಯನ್ನು ನೀಡುತ್ತಿದೆ. ಈ ನಿಟ್ಟಿನಲ್ಲಿ ಅನೇಕ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆಗಳನ್ನು ಮಾಡಿರುತ್ತಾರೆ.

    ವಿದ್ಯಾರ್ಥಿನಿಯ ಸಾಧನೆಗೆ ಈ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕವೃಂದದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

  • ಕುಂದಾಪುರ: ಬಸವ ವಸತಿ ಯೋಜನೆ ಅನುದಾನ ಬಿಡುಗಡೆಗೆ ಲಂಚದ ಬೇಡಿಕೆ – ಪಿಡಿಓ ಲೋಕಾಯುಕ್ತ ಬಲೆಗೆ

    ಕುಂದಾಪುರ: ಬಸವ ವಸತಿ ಯೋಜನೆ ಅನುದಾನ ಬಿಡುಗಡೆಗೆ ಲಂಚದ ಬೇಡಿಕೆ – ಪಿಡಿಓ ಲೋಕಾಯುಕ್ತ ಬಲೆಗೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಬಸವ ವಸತಿ ಯೋಜನೆಯಲ್ಲಿ ಮಂಜೂರಾಗಿದ್ದ ಮನೆಯ ಅನುದಾನ ಬಿಡುಗಡೆಗೆ ಲಂಚದ ಬೇಡಿಕೆ ಇಟ್ಟ ಆರೋಪಿ ಪಿಡಿಓ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಎಂಬಲ್ಲಿ ನಡೆದಿದೆ.

    ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಪಿ ಡಿ ಓ ಜಯಂತ್ ಎಂಬಾತ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಆರೋಪಿ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊಗೆಬೆಟ್ಟು ನಿವಾಸಿ ರಾಧಾ ಮರಕಾಲ್ತಿ ಎಂಬುವರ ಜಾಗದಲ್ಲಿ ಬಸವ ವಸತಿ ಯೋಜನೆ ಅಡಿಯಲ್ಲಿ ಮನೆ ಮಂಜೂರಾಗಿದ್ದು ಅನುದಾನ ಬಿಡುಗಡೆಗೆ 10 ಸಾವಿರ ರೂಪಾಯಿ ಲಂಚ ನೀಡುವಂತೆ ಆರೋಪಿತ ಪಿಡಿಒ ಜಯಂತ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ರಾಧಾ ಮರಕಾಲ್ತಿಯವರ ಪುತ್ರಿ ಸುಜಾತ ಎಂಬುವರು ಉಡುಪಿ ಲೋಕಾಯುಕ್ತ ಇಲಾಖೆಗೆ ಲಿಖಿತ ದೂರು ನೀಡಿದ್ದರು. ದೂರನ್ನು ಆಧರಿಸಿದ ಲೋಕಾಯುಕ್ತ ಪೊಲೀಸರು ಮಂಗಳೂರು ಲೋಕಾಯುಕ್ತ ಅಧೀಕ್ಷಕ ಸಿ ಎ ಸೈಮನ್ ಅವರ ಮಾರ್ಗದರ್ಶನದಲ್ಲಿ ನವೆಂಬರ್ 12ರಂದು ಲಂಚದ ಹಣ ಹತ್ತು ಸಾವಿರ ರೂಪಾಯಿಗಳನ್ನು ಕುಂದಾಪುರ ತಾಲೂಕಿನ ತೆಕ್ಕಟ್ಟೆ ಜಂಕ್ಷನ್ ಬಳಿ ಆರೋಪಿ ಪಿಡಿಓ ಜಯಂತ್ ಅವರು ಪಡೆಯುತ್ತಿರುವಾಗ ಲೋಕಾಯುಕ್ತ ಪೊಲೀಸರು ರೆಡ್ ಹದಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

    ಉಡುಪಿ ಲೋಕಾಯುಕ್ತ ಇಲಾಖೆ ನಿರೀಕ್ಷಕರಾದ ರಫೀಕ್ ಎಂ ಹಾಗೂ ಸಿಬ್ಬಂದಿಗಳಾದ ನಾಗೇಶ್ ಉಡುಪ, ರಾಘವೇಂದ್ರ, ನಾಗರಾಜ, ರೋಹಿತ್, ಮಲ್ಲಿಕಾ, ಸತೀಶ್ ಹಂದಾಡಿ, ಅಬ್ದುಲ್ ಜಲಾಲ್, ಪ್ರಸನ್ನ ದೇವಾಡಿಗ, ರಾಘವೇಂದ್ರ ಹೊಸ್ಕೋಟೆ, ಸತೀಶ್ ಆಚಾರ್ಯ, ಸೂರಜ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.

  • ಸಾಲಿಗ್ರಾಮದಲ್ಲಿ ಬಿಲಿಯನ್ ಫೌಂಡೇಶನ್ ಸಮಾವೇಶ

    ಸಾಲಿಗ್ರಾಮದಲ್ಲಿ ಬಿಲಿಯನ್ ಫೌಂಡೇಶನ್ ಸಮಾವೇಶ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಸಾಲಿಗ್ರಾಮದಲ್ಲಿ ಕೂಟ ಸಮಾಜದ ಅಶಕ್ತರ ಸಹಾಯೋದ್ದೇಶದಿಂದ ಎರಡು ದಶಕಗಳಿಂದ ಕಾರ್ಯಾಚರಿಸುತ್ತಿರುವ ಶ್ರೀ ಗುರುನರಸಿಂಹ ಬಿಲಿಯನ್ ಫೌಂಡೇಶನ್‍ನ ದ್ವೈವಾರ್ಷಿಕ ಸಮಾವೇಶವು ಕೂಟಬಂಧು ಭವನದಲ್ಲಿ ಭಾನುವಾರ ನಡೆಯಿತು.

    ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ವಿಶ್ವಸ್ಥ ಮಂಡಳಿಯ ಸದಸ್ಯ ಡಾ.ಕೆ.ಎಸ್.ಕಾರಂತ ಉದ್ಘಾಟಿಸಿದರು.

    ಸಮಾವೇಶದ ಅಧ್ಯಕ್ಷತೆಯನ್ನು ಆನಂದರಾಮ ಮಧ್ಯಸ್ಥ ವಹಿಸಿದ್ದರು. ಬೃಹತ್ ಮೊತ್ತದ ದಾನಿಗಳಾದ ರಘುನಾಥ ಸೋಮಯಾಜಿ, ಕರ್ನಾಟಕ ಬ್ಯಾಂಕ್ ಮತ್ತು ಬೈಂದೂರು ದಿ.ಅಣ್ಣಪ್ಪ ಹೊಳ್ಳ ಕುಟುಂಬಸ್ಥರನ್ನು ವಿಶೇಷವಾಗಿ ಅಭಿನಂದಿಸಲಾಯಿತು.

    ಸಭೆಯಲ್ಲಿ ಕೂಟ ಮಹಾಜಗತ್ತಿನ ಪೂರ್ವಾಧ್ಯಕ್ಷ ಡಾ.ಕೆ.ಪಿ.ಹೊಳ್ಳ, ಪ್ರಸಕ್ತ ಅಧ್ಯಕ್ಷ ಸತೀಶ ಹಂದೆ, ಸ್ಥಾಪಕ ಟ್ರಸ್ಟಿ ನಾರಾಯಣ ಸೋಮಯಾಜಿ, ನಾಗರಾಜ ಶೃಂಗೇರಿ, ಬಂಟ್ವಾಳ ವಿಶ್ವನಾಥ ಸೋಮಯಾಜಿ, ಕೃಷ್ಣ ಕುಮಾರ ಸೋಮಯಾಜಿ , ಯಜ್ಞ ನಾರಾಯಣ ಕಮ್ಮಾಜೆ ,ವಿಜಯಲಕ್ಷ್ಮಿ ಹೊಳ್ಳ, ಕೂಟ ಮಹಾಜಗತ್ತು ಅಂಗಸಂಸ್ಥೆ ಅಧ್ಯಕ್ಷ ಶ್ರೀಪತಿ ಅಧಿಕಾರಿ, ಸಮಾವೇಶದಲ್ಲಿ ದೇಶದಾದ್ಯಂತ ಪಸರಿಸಿರುವ ಕೂಟ ಜಗತ್ತಿನ 37 ಅಂಗಸಂಸ್ಥೆಯ ಪ್ರತಿನಿಧಿಗಳು, ದಾನಿಗಳು, ಫಲಾನುಭವಿಗಳು ಭಾಗವಹಿಸಿದರು. ಟ್ರಸ್ಟ್‌ನ ನಾಗರಾಜ ಶೃಂಗೇರಿ ಸ್ವಾಗತಿಸಿದರು. ಟ್ರಸ್ಟ್‌ನ ಕಾರ್ಯದರ್ಶಿ ಎಂ.ರಾಘವೇಂದ್ರ ಮಯ್ಯ ಕಾರ್ಯಕ್ರಮ ನಿರೂಪಿಸಿದರು. ಪುತ್ತೂರು ಗೋಪಾಲಕೃಷ್ಣ ಹೇರ್ಳೆ ವಂದಿಸಿದರು.

  • ಸಾಲಿಗ್ರಾಮ – ಕೋಟ ಶಿವರಾಮ ಕಾರಂತರ26ನೇ ಸ್ಮೃತಿ ದಿನಾಚರಣೆ

    ಸಾಲಿಗ್ರಾಮ – ಕೋಟ ಶಿವರಾಮ ಕಾರಂತರ26ನೇ ಸ್ಮೃತಿ ದಿನಾಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟ ಶಿವರಾಮ ಕಾರಂತ ರಿಸರ್ಚ್ ಮತ್ತು ಸ್ಟಡಿ ಸೆಂಟರ್ ಟ್ರಸ್ಟ್ , ಮಾನಸ, ಸಾಲಿಗ್ರಾಮ ಹಾಗೂ ಗೆಳೆಯರ ಬಳಗ ಕಾರ್ಕಡ ಇವರ ಸಹಯೋಗದೋಂದಿಗೆ ಡಾ ಶಿವರಾಮ ಕಾರಂತರ 26ನೇ ಸ್ಮೃತಿ ದಿನಾಚರಣೆ, ಕಾರಂತ ರಂಗ ರಥದಲ್ಲಿ ಆಚರಿಸಲಾಯಿತು.

    ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಬಿ.ಎಂ ಗುರುರಾಜ್ ವಹಿಸಿದ್ದರು.

    ಮುಖ್ಯಅತಿಥಿಯಾಗಿ ಕುಂದಾಪುರದ ಹಿರಿಯ ನ್ಯಾಯವಾದಿ , ಸಾಹಿತಿ ಎ.ಎಸ್.ಎನ್ ಹೆಬ್ಬಾರ ಮಾತಾನಾಡಿ ಶಕಪುರುಷ ಕಾರಂತರ ಜೀವನೋತ್ಸಾಹ ಅನನ್ಯ ಅವರ ಜೀವನದ ಮಜಲುಗಳು ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಅಂತಹ ಮಹಾನ್ ಸಾಹಿತಿಯನ್ನು ಪಡೆದ ನಾವುಗಳೇ ಧನ್ಯರು ಎಂದು ಅಭಿಪ್ರಾಯಪಟ್ಟರಲ್ಲದೆ ಶಿವರಾಮ ಕಾರಂತರಂತಹವರು ಶಕಪುರುಷರು. ಅವರು ಧೀರೋದಾತ್ತರು. ಅನ್ಯಾಯದ ವಿರುದ್ಧ ಕೊನೆ ತನಕ ಹೋರಾಟ ನಡೆಸಿದವರು. ಎಲ್ಲಕ್ಕಿಂತ ಹೆಚ್ಚಾಗಿ ಅವರ ಜೀವನೋತ್ಸಾಹ ಯುವಜನಕ್ಕೆ ಆದರ್ಶ ಮಂಗಳೂರು ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಭಾಷಣವನ್ನು ಉಕ್ತಲೇಖನದಲ್ಲಿ ಬರೆಸಿದ್ದರು. ಕಂಪ್ಯೂಟರ್ ಕಲಿತು, ವರ್ಣಮಯ ಪಶು, ಪಕ್ಷಿಗಳ ಪುಸ್ತಕ ಬರೆಯಬೇಕೆಂದಿದ್ದರು. ಬದುಕಿನುದ್ದಕ್ಕೂ ನುಡಿದಂತೆ ನಡೆದವರು. ಆರ್ತರಿಗೆ, ಕಷ್ಟದಲ್ಲಿದ್ದವರಿಗೆ ಪ್ರತಿ ತಿಂಗಳೂ ಆರ್ಥಿಕ ನೆರವು ಕಳುಹಿಸುತ್ತಿದ್ದವರು. ನಾಡು ಕಂಡ ಅದ್ಭುತ ವ್ಯಕ್ತಿತ್ವದ ಕಾರಂತರ ಜೀವನ, ಸಾಧನೆ ಅನುಕರಣೀಯ”ಎಂದರು.

    ಸಮಾರಂಭದಲ್ಲಿ ಸಂಸ್ಥೆಯ ವಿಶ್ವಸ್ಥಮಂಡಳಿಯ ಕಾರ್ಯನಿರ್ವಾಹಕ ಗುಜ್ಜಾಡಿ ಪ್ರಭಾಕರ ನಾಯಕ್ ಕಾರಂತರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಮಾರಂಭದಲ್ಲಿ ಉಡುಪಿ ಜಿಲ್ಲಾ ಕ.ಸಾ.ಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಾಗೂ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ಕಾರಂತರ ವ್ಯಕ್ತಿತ್ವದ ಬಗ್ಗೆ ತಿಳಿಸಿದರು

    ಟ್ರಸ್ಟ್‌ನ ಸಂದೀಪ್ ಶೆಟ್ಟಿ. ಎನ್. ವಿಶ್ವನಾಥ್ ಕಾಮತ್, ಕಾರ್ಯದರ್ಶಿ ನಾರಾಯಣ ಆಚಾರ್ಯ, ಬಳಗದ ಜಗದೀಶ ಆಚಾರ್ಯ, ಸೇವಾಸಂಗಮ ತೆಕ್ಕಟ್ಟೆಯ. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಸಾಸ್ತಾನ – ಶ್ರೀ ಕ್ಷೇತ್ರ ಗೋಳಿಗರಡಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಾಬು ಶಿವ ಪೂಜಾರಿ ದಂಪತಿಗಳಿಗೆ ಸನ್ಮಾನ

    ಸಾಸ್ತಾನ – ಶ್ರೀ ಕ್ಷೇತ್ರ ಗೋಳಿಗರಡಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಾಬು ಶಿವ ಪೂಜಾರಿ ದಂಪತಿಗಳಿಗೆ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಇತ್ತೀಚೆಗೆ ಕೋಟ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷರ ಸ್ಥಾನವನ್ನು ಅಲಂಕರಿಸಿದ ಬಾಬು ಶಿವ ಪೂಜಾರಿ ದಂಪತಿಗಳನ್ನು ಶ್ರೀ ಕ್ಷೇತ್ರ ಸಾಸ್ತಾನ ಬ್ರಹ್ಮಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಹಾಗೂ ಗೋಳಿಗರಡಿ ವತಿಯಿಂದ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಗೌರವಿಸಿದ ದಂಪತಿಗಳ ಅಮೃತ ಹಸ್ತದಲ್ಲಿ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘದ ನೂತನ ಕಟ್ಟಡ ನೀಲ ನಕ್ಷೆಯ ಪ್ರತಿಯನ್ನು ಬಿಡುಗಡೆಗೊಳಿಸಲಾಯಿತು.

    ಕಾರ್ಯಕ್ರಮದಲ್ಲಿ ಪಾಂಡೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ, ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಎಂ.ಸಿ ಚಂದ್ರಶೇಖರ್, ಪ್ರದಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ, ಕ್ಷೇತ್ರದ ಪಾತ್ರಿಗಳಾದ ಶಂಕರ್ ಪೂಜಾರಿ, ಗೋಳಿ ಗರಡಿ ಮೇಳದ ವ್ಯವಸ್ಥಾಪಕರಾದ ಜಿ.ವಿಠ್ಠಲ್ ಪೂಜಾರಿ, ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ರತ್ನ ಜೆ ರಾಜ್, ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗಣೇಶ್ ಪೂಜಾರಿ ಸ್ವಾಗತಿಸಿ ವಂದಿಸಿದರು.

  • ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಭಾಷಾ ವಿಷಯಗಳ ಕಾರ್ಯಾಗಾರ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಡಿ.11ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ, ಹಿಂದಿ ಹಾಗೂ ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

    ಸಂಪನ್ಮೂಲ ವ್ಯಕ್ತಿಯಾಗಿ ಕನ್ನಡ ವಿಷಯದಲ್ಲಿ ತೆಂಕನಿಡಿಯೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ ಹಾಗೂ ಹಿಂದಿ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯಡ್ಕ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ಡಾ. ಅನಂತ ರಾಮ್ ನಾಯಕ್, ಸಂಸ್ಕೃತ ವಿಷಯದ ಕುರಿತು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಮಮತಾ ರೈ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.

  • ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಶ್ರೀ ಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿಯವರು ಡಿ.10ರಂದು ಶ್ರೀ ಸೀತಾರಾಮಚಂದ್ರ ದೇವಸ್ಥಾನ ಕುಂದಾಪುರದಲ್ಲಿ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದಿವೀಶ್ ಪ್ರಥಮ ಸ್ಥಾನ, ತನುಶ್ರೀ ದ್ವಿತೀಯ ಸ್ಥಾನವನ್ನು ಹಾಗೂ ಭಗವದ್ಗೀತಾ ಕಂಠ ಪಾಠದಲ್ಲಿ ವರ್ಷಾ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.