Category: ಸುದ್ದಿ

  • ಕೋಟ ಪಂಚವರ್ಣ ಸಂಘಟನೆ ವತಿಯಂದ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ವಾಹನ ಶೋಭಾಯಾತ್ರೆ

    ಕೋಟ ಪಂಚವರ್ಣ ಸಂಘಟನೆ ವತಿಯಂದ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ವಾಹನ ಶೋಭಾಯಾತ್ರೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟ ಗ್ರಾಮಪಂಚಾಯತ್ ಸನಿಹದ ಪಂಚವರ್ಣದ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಸದ್ಭಾವನಾ -2023 ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ವಾಹನಶೋಭಾಯಾತ್ರೆಗೆ ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಚಾಲನೆ ನೀಡಿದರು.

    ಕೋಟ ರಾಷ್ಟ್ರೀಯ ಹೆದ್ದಾರಿ ಕೋಟ, ಮಣೂರು, ಕೋಟ ಹೈಸ್ಕೂಲ್ ಹೆದ್ದಾರಿಯ ಮೂಲಕ ಕನ್ನಡ ಶೋಭಾಯಾತ್ರೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ,ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್,ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ,ಸಾಮಾಜಿಕ ಮುಖಂಡ ರಮೇಶ್ ಪ್ರಭು,ಕುಂದಾಪುರ ಆಯುಷ್ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಅಶೋಕ್ ಆಚಾರ್,ರಾಷ್ಟ್ರೀಯ ಮಾನವಹಕ್ಕು ರಾಜ್ಯ ಸಮಿತಿ ಪ್ರದಾನಕಾರ್ಯದರ್ಶಿ ಕೆ.ದಿನೇಶ್ ಗಾಣಿಗ,ಪರಿಸರವಾದಿ ಕೋ.ಗಿ ನಾ ,ಪಂಚವರ್ಣದ ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

  • ಕೋಟ :ನಾಡು ನುಡಿಯ ಜತೆಗೆ ಪಂಚವರ್ಣದ ಸಾಮಾಜಿಕ ಕಾರ್ಯ ನಿಜಕ್ಕೂ ಪ್ರಶಂಸನೀಯ – ಶಂಭುಲಿಂಗಯ್ಯ

    ಕೋಟ :ನಾಡು ನುಡಿಯ ಜತೆಗೆ ಪಂಚವರ್ಣದ ಸಾಮಾಜಿಕ ಕಾರ್ಯ ನಿಜಕ್ಕೂ ಪ್ರಶಂಸನೀಯ – ಶಂಭುಲಿಂಗಯ್ಯ

    ಕೋಟ ಪಂಚವರ್ಣ ಸಂಘಟನೆ ವತಿಯಂದ ಕನ್ನಡ ರಾಜ್ಯೋತ್ಸವ ಸಂಭ್ರಮ

    ಕುಂದಾಪುರ ಮಿರರ್ ಸುದ್ದಿ…
    ಕೋಟ: ನಾಡು ನುಡಿಯ ಜತೆಗೆ ಪಂಚವರ್ಣ ಸಂಸ್ಥೆಯ ಸಾಮಾಜಿಕ ಕಾರ್ಯ ನಿಜಕ್ಕೂ ಪ್ರಶಂಸನೀಯ ಎಂದು ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಹೇಳಿದರು.

    ಕೋಟ ಗ್ರಾಮಪಂಚಾಯತ್ ಸನಿಹದ ಪಂಚವರ್ಣದ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಸದ್ಭಾವನಾ -2023 ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಕನ್ನಡದ ಧ್ವಜವನ್ನು ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಬಾನೆತ್ತರಕ್ಕೆ ಏರಿಸುವ ಮೂಲಕ ಚಾಲನೆ ನೀಡಿ ಮಾತಮಾಡಿ ಸಂಘಸಂಸ್ಥೆಗಳು ನಿರಂತವಾಗಿ ಕ್ರೀಯಾಶೀಲತೆಯಲ್ಲಿ ತೊಡಗಿಕೊಳ್ಳಬೇಕು, ಅದರ ಜತೆಗೆ ಭಾಷಾಭಿಮಾನದ ಕಿಚ್ಚು ಪ್ರತಿಯೊಬ್ಬರಲ್ಲೂ ಬೆಳೆಯ ಬೇಕು ಎಂದು ಶುಭಹಾರೈಸಿದರು.

    ಕನ್ನಡ ತಾಯಿ ಭುವನೇಶ್ವರಿ ದೀಪ ಬೆಳಗಿಸುವ ಮೂಲಕ ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ ಉದ್ಘಾಟಿಸಿದರು.
    ನೀಡಿದರು.

    ಅಧ್ಯಕ್ಷೆತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

    ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸಾಮಾಜಿಕ ಮುಖಂಡ ರಮೇಶ್ ಪ್ರಭು, ಕುಂದಾಪುರ ಆಯುಷ್ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಅಶೋಕ್ ಆಚಾರ್, ರಾಷ್ಟ್ರೀಯ ಮಾನವಹಕ್ಕು ರಾಜ್ಯ ಸಮಿತಿ ಪ್ರದಾನಕಾರ್ಯದರ್ಶಿ ಕೆ.ದಿನೇಶ್ ಗಾಣಿಗ,ಪರಿಸರವಾದಿ ಕೋ.ಗಿ ನಾ ,ಪಂಚವರ್ಣದ ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್,ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.

    ರಾಷ್ಟ್ರೀಯ ಮಾನವ ಹಕ್ಕುಗಳ ರಾಜ್ಯ ಪ್ರಧಾನಕಾರ್ಯದರ್ಶಿ ಕೆ.ದಿನೇಶ್ ಗಾಣಿಗ ಮಾತನಾಡಿ ರಾಜ್ಯೋತ್ಸವ ಪ್ರಶಸ್ತಿಗಳು ದೊಡ್ಡದೊಡ್ಡ ರಾಜಕಾರಣಿಗಳ ಶಿಫಾರಸ್ಸಿನ ಮೂಲಕ ದೊರೆಯುತ್ತಿರುವುದು ಬೇಸರದ ಸಂಗತಿ ಅದು ನೈಜ ಕಾರ್ಯಕ್ರಮಗಳನ್ನು ನೀಡುವ ಸಾಧಕರಿಗೆ,ಸಂಘಸಂಸ್ಥೆಗಳಿಗೆ ಸಿಗದಿರುವ ಬಗ್ಗೆ ಖೇದ ವ್ಯಕ್ತಡಿಸಿ ಈ ರೀತಿಯ ಪ್ರಸಂಗಗಳು ಮುಂದುವರೆದರೆ ವಿಧಾನಸೌಧದ ಎದುರು ಪ್ರತಿಭಟನೆ ಕೂರುವುದಾಗಿ ಎಚ್ಚರಿಸಿದರು.

    ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಶಕೀಲ ಎನ್ ಪೂಜಾರಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸದಸ್ಯೆ ಸುಜಾತ ಬಾಯರಿ ನಿರೂಪಿಸಿದರು. ಪಂಚವರ್ಣದ ಕಾರ್ಯದರ್ಶಿ ಸುಧೀಂದ್ರ ಜೋಗಿ ವಂದಿಸಿದರು.

    ಕಾರ್ಯಕ್ರಮವನ್ನು ಪಂಚವರ್ಣ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

    ಇದೇ ಬರುವ ನ.10ರಂದು ಸಂಜೆ ಕೋಟದ ಗಾಂಧಿ ಮೈದಾನದಲ್ಲಿ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ದೊಡ್ಡಣ್ಣ ಇವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.ಚಾಪರ್ಕ ಕಲಾವಿದರಿಂದ ಹಾಸ್ಯಮಯ ನಾಟಕ ಹೆಸರಿಟ್ಟಾಯ್ತು ಪ್ರದರ್ಶನಗೊಳ್ಳಲಿದೆ.

  • ನ.4ರಂದು ಬ್ರಹ್ಮಾವರದಲ್ಲಿ ಮೊಗೆಬೆಟ್ಟು ಯಕ್ಷರಜತ ಸಂಭ್ರಮ

    ನ.4ರಂದು ಬ್ರಹ್ಮಾವರದಲ್ಲಿ ಮೊಗೆಬೆಟ್ಟು ಯಕ್ಷರಜತ ಸಂಭ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ : ಯಕ್ಷಗುರು ಮೊಗೆಬೆಟ್ಟು ಪ್ರಸಾದ್ ಕುಮಾರ್ ಅಭಿಮಾನಿ ಬಳಗ ಮತ್ತು ಶಿಷ್ಯವೃಂದ, ಗೀತಾನಂದ ಫೌಂಡೇಶನ್ ಮಣೂರು, ಮಯ್ಯ ಯಕ್ಷಶ್ರೀ ಪ್ರತಿಷ್ಠಾನ ಅಣಲಾಡಿ ಮಠ ಆಶ್ರಯದಲ್ಲಿ ಮೊಗೆಬೆಟ್ಟು ಪ್ರಸಾದ್ ಕುಮಾರ್ ಅವರ ಯಕ್ಷ ಜೀವನದ ಬೆಳ್ಳಿಹಬ್ಬ ಸಂಭ್ರಮ, ಗುರುವಂದನೆ, ನ.4ರಂದು ಬ್ರಹ್ಮಾವರ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜರಗಲಿದೆ ಎಂದು ಕಾರ್ಯಕ್ರಮದ ಸಂಚಾಲಕ ರಾಘವೇಂದ್ರ ಕರ್ಕೇರ ಕೋಡಿ ಅವರು ಕೋಟದಲ್ಲಿ ಅ.೩೧ರಂದು ನಡೆದ
    ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಅಪರಾಹ್ನ 2ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ
    ಶೆಟ್ಟಿ ಮೊದಲಾದವರು ಉಪಸ್ಥಿತರಿರುವರು. ಅಪರಾಹ್ನ 2.30ಕ್ಕೆ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಸುಧನ್ವ ಯಕ್ಷಗಾನ ನಡೆಯಲಿದೆ. ಸಂಜೆ 5.30ಕ್ಕೆ ಮೊಗೆಬೆಟ್ಟು ಅವರಿಗೆ
    ಸಮ್ಮಾನ ಜರಗಲಿದ್ದು, ನಾಡೋಜ ಡಾ. ಜಿ.ಶಂಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

    ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಸಭಾಧ್ಯಕತ್ಷೆ ವಹಿಸಲಿದ್ದಾರೆ.

    ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ರಜತ ಗೌರವ ಪ್ರದಾನಿಸಲಿದ್ದಾರೆ. ಉದ್ಯಮಿ ಕೃಷ್ಣಮೂರ್ತಿ ಮಂಜ ಹಾಗೂ ಋಷಿಕುಮಾರ್ ಮಯ್ಯ ಅವರು ಆಶೀರ್ವಚನ ನೀಡಲಿದ್ದು, ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ ಅಭಿನಂದನಾ
    ಭಾಷಣಗೈಯಲಿದ್ದಾರೆ.

    ಪತ್ರಕರ್ತ ಎಸ್.ಸತೀಶ್ ಕುಮಾರ್ ಕೋಟೇಶ್ವರ ಗುರುಗೌರವದ ಸಹಯೋಗ ವಹಿಸಲಿದ್ದಾರೆ.

    ಸಭಾ ಕಾರ್ಯಕ್ರಮದ ಅನಂತರ ಅದಲು ಬದಲು ಯಕ್ಷಗಾನ ನಡೆಯಲಿದೆ ಎಂದು ಕಾರ್ಯಕ್ರಮ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶ್ರೀನಾಥ ಉರಾಳ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಗೌರವಾಧ್ಯಕ್ಷ ಆನಂದ ಸಿ.ಕುಂದರ್, ಪ್ರಸಾದ್ ಮೊಗೆಬೆಟ್ಟು, ಸಚಿನ್ ಶೆಟ್ಟಿ ವಡ್ಡರ್ಸೆ, ಪ್ರಭಾಕರ ಮೆಂಡನ್ ಕೋಡಿ, ಹರೀಶ್ ದೇವಾಡಿಗ
    ಗಿಳಿಯಾರು, ರಾಘವೇಂದ್ರ ಸುವರ್ಣ ಇದ್ದರು.

  • ಕುಂದಾಪುರ :ವಿಠಲವಾಡಿ ಫ್ರೆಂಡ್ಸ್ ಕುಂದಾಪುರ ವತಿಯಿಂದ ಕನ್ನಡ ರಾಜ್ಯೋತ್ಸವ

    ಕುಂದಾಪುರ :ವಿಠಲವಾಡಿ ಫ್ರೆಂಡ್ಸ್ ಕುಂದಾಪುರ ವತಿಯಿಂದ ಕನ್ನಡ ರಾಜ್ಯೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಠಲವಾಡಿಯ ಭಗವಧ್ವಜ ಕಟ್ಟೆಯಲ್ಲಿ ಕನ್ನಡಪರ ಹೋರಾಟಗಾರ ದಿನೇಶ್ ಪುತ್ರನ್ ಧ್ವಜಾರೋಹಣ ನೆರವೇರಿಸಿದರು. ಬಳಿಕ‌ ಮಾತನಾಡಿದ ಅವರು ಕುಂದಾಪುರ ತಾಲೂಕಿನ ಎಲ್ಲಾ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಸಬೇಕು. ರಾಜ್ಯದ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಕನ್ನಡದಲ್ಲಿಯೇ ವ್ಯವಹರಿಸಿ, ಕನ್ನಡದಲ್ಲಿಯೇ ಆದೇಶಗಳನ್ನು ಹೊರಡಿಸಬೇಕು ಎಂದರು.

    ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಸಂತೋಷ, ಯೋಜನಾಧಿಕಾರಿ ರಾಘು ವಿಠಲವಾಡಿ, ಕೋಶಧಿಕಾರಿ ದಿವಾಕರ್ ಮೆಂಡನ್ ಮತ್ತು ವಿಠಲವಾಡಿ ಫ್ರೆಂಡ್ಸ್ ನ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ನಿತಿನ್ ವಿಠಲವಾಡಿ ಕಾರ್ಯಕ್ರಮ ನಿರೂಪಿಸಿದರು.

  • ಕುಂದಾಪುರ :ಸರ್ಕಾರಿ ಪ್ರೌಢಶಾಲೆ ಕಾಳಾವರದಲ್ಲಿ ಕನ್ನಡ ರಾಜ್ಯೋತ್ಸವ

    ಕುಂದಾಪುರ :ಸರ್ಕಾರಿ ಪ್ರೌಢಶಾಲೆ ಕಾಳಾವರದಲ್ಲಿ ಕನ್ನಡ ರಾಜ್ಯೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇಲ್ಲಿನ ಕಾಳಾವರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

    ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗ ಮಾತನಾಡಿ, ಕನ್ನಡ ಕೇವಲ ಭಾಷೆಯಲ್ಲ. ಅದು ನಮ್ಮ ಬದುಕು, ನಮ್ಮ ಉಸಿರು. ಕನ್ನಡ ಎಂದಾಗ ಜಗತ್ತಿನಾದ್ಯಂತ ಗೌರವ ವ್ಯಕ್ತವಾಗುತ್ತದೆ. ತಾಯಿ ಭುವನೇಶ್ವರಿಯ ಪಾದಸ್ಪರ್ಷದಿಂದ ಕರ್ನಾಟಕದಲ್ಲಿ ಹುಟ್ಟಿದ ನಾವು ಧನ್ಯರಾಗಬೇಕು. ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ಧಾರಿ ಮರೆಯಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

    ಶಿಕ್ಷಕ ರವಿರಾಜ್ ಶೆಟ್ಟಿ ರಾಜ್ಯೋತ್ಸವದ ಆಚರಣೆಯ ಮಹತ್ವ ಹಾಗೂ ಭಾಷಾವಾರು ಪ್ರಾಂತ್ಯಗಳ ರಚನೆಯ ಕುರಿತು ತಿಳಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ದಿನೇಶ್ ಪ್ರಭು ಕನ್ನಡ ಭಾಷಾ ಪ್ರೀತಿ ಮತ್ತು ಸಾಹಿತ್ಯಾಸಕ್ತಿಯನ್ನು ವಿದ್ಯಾರ್ಥಿ ಜೀವನದಲ್ಲಿ ಹೇಗೆ ಬೆಳೆಸಿಕೊಳ್ಳಬಹುದೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಆಯ್ದ ಕನ್ನಡ ಹಾಡುಗಳು ಮತ್ತು ನೃತ್ಯ ಸಂಭ್ರಮ ನಡೆಯಿತು.

  • ಕುಂದಾಪುರ :ಕನ್ನಡಾಭಿಮಾನಿ ಡಾ.ರಾಜ್ ಸಂಘಟನೆಯಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ

    ಕುಂದಾಪುರ :ಕನ್ನಡಾಭಿಮಾನಿ ಡಾ.ರಾಜ್ ಸಂಘಟನೆಯಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ

    ಕುಂದಾಪುರ ಮಿರರ್ ‌ಸುದ್ದಿ…

    ಕುಂದಾಪುರ :ಕನ್ನಡಾಭಿಮಾನಿ ಡಾ. ರಾಜ್ ಕುಮಾರ್ ಸಂಘಟನೆ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಹೊಸ ಬಸ್ ನಿಲ್ದಾಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
    ದೀಪ ಬೆಳಗಿಸುವುದರ ಮೂಲಕ ಹಿರಿಯ ನ್ಯಾಯವಾದಿ ಶಿರಿಯಾರ ಮುದ್ದಣ್ಣ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಾಡ ಧ್ವಜ ಧ್ವಜಾರೋಹಣವನ್ನು ಕುಂದಾಪುರದ ಠಾಣಾಧಿಕಾರಿ ವಿನಯ್ ಕೊರ್ಲಪಾಡಿ ಅವರು ನೆರವೇರಿಸಿ ಶುಭಾಶಯ ಕೋರಿದರು.

    ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರತ್ನಾಕರ ಪೂಜಾರಿ ವಹಿಸಿದ್ದರು.

    ಅತಿಥಿಗಳಾಗಿ ಗಾಳಿ ಮಾಧವ ಖಾರ್ವಿ, ಪ್ರಭಾಕರ ಖಾರ್ವಿ ಸೂರಜ್ ಭಟ್ ಆಗಮಿಸಿದ್ದರು.

    ಆಗಸ್ಟಿನ್ ಡಿಸೋಜ ಹಾಗೂ ಶ್ರೀಧರ್ ಗಾಣಿಗ ಅವರ ಮುಂದಾಳತ್ವದಲ್ಲಿ ಸಾಮೂಹಿಕವಾಗಿ ನಾಡ ಗೀತೆ ಹಾಡಲಾಯಿತು. ಸಂಘದ ಗಾಳಿ ಸಚಿನ್ ಖಾರ್ವಿ, ಕಿಶನ್ ಖಾವಿ೯, ವಿಘ್ನೇಶ್ ಖಾವಿ೯, ನವೀನ್ ಕುಮಾರ್,ನಾಗರಾಜ್ ಮೊವಾಡಿ, ಶಿವರಾಜ್ ಖಾರ್ವಿ,ಲಕ್ಷ್ಮೀನಾರಾಯಣ ಆಚಾರ್ಯ, ದಯಾನಾಯಕ್ ಮೊದಲಾದವರು ಉಪಸ್ಥಿತರಿದ್ದರು.

    ಪ್ರಣಮ್ಯ ಡಿ. ಪೂಜಾರಿ ಹಾಗೂ ಪ್ರಥಮೇಶ್ ಡಿ. ಪೂಜಾರಿ ಪ್ರಾರ್ಥನೆಗೈದರು. ಹೆಚ್.ಡುಂಢಿರಾಜ್ ಪೂಜಾರಿ ಪ್ರಾಸ್ತಾವಿಕ ನುಡಿಗಳ್ನಾಡಿದರು. ಹುಸೇನ್ ಹೈಕಾಡಿ ಕಾರ್ಯಕ್ರಮ ನಿರೂಪಿಸಿದರು. ಪ್ರರ್ತಕರ್ತ ಪತ್ರಕರ್ತ ಮಝರ್ ಕುಂದಾಪುರ ವಂದಿಸಿದರು.

  • ಕುಂದಾಪುರ: ಅಬಾಕಸ್, ವೇದಿಕ್ ಮ್ಯಾಥ್ಸ್ ನಲ್ಲಿ ತ್ರಿಷಾ ಆರ್ ದೇವಾಡಿಗ ರಾಜ್ಯಕ್ಕೆ ಪ್ರಥಮ

    ಕುಂದಾಪುರ: ಅಬಾಕಸ್, ವೇದಿಕ್ ಮ್ಯಾಥ್ಸ್ ನಲ್ಲಿ ತ್ರಿಷಾ ಆರ್ ದೇವಾಡಿಗ ರಾಜ್ಯಕ್ಕೆ ಪ್ರಥಮ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ರಾಜ್ಯ ಮಟ್ಟದ 18ನೇ ಅಭಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರ್ ನ ತ್ರಿಷಾ ಆರ್ ದೇವಾಡಿಗ ಮೊದಲ ಸುತ್ತಿನಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಅಕ್ಟೋಬರ್ 29ರಂದು ಐಡಿಯಲ್ ಪ್ಲೇ ಅಭಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಹಾಸನದಲ್ಲಿ ನಡೆದ ಸ್ಪರ್ಧೆಯಲ್ಲಿ ತ್ರಿಷಾ ಸಾಧನೆ ಮಾಡಿದ್ದಾಳೆ. ರಾಜ್ಯ ವಿವಿಧ ಪ್ರದೇಶದಿಂದ ಸುಮಾರು 1600 ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ತ್ರಿಷಾ ಕುಂದಾಪುರದ ಐಡಿಯಲ್ ಪ್ಲೇ ಅಭಾಕಸ್ ಸೆಂಟರ್ ಮುಖ್ಯಸ್ಥ ಪ್ರಸನ್ನ ಕೆ. ಬಿ ಹಾಗೂ ಶಿಕ್ಷಕಿ ಮಹಾಲಕ್ಷ್ಮೀ ಮತ್ತು ದೀಪ ಇವರಿಂದ ತರಭೇತಿ ಪಡೆಯುತ್ತಿದ್ದಾರೆ. ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ಬ್ರಹ್ಮಾವರ ದ ನಾಲ್ಕನೆ ತರಗತಿ ವಿದ್ಯಾರ್ಥಿಯಾಗಿರುವ ತ್ರಿಷಾ, ಕುಂದಾಪುರ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ರಾಘವೇಂದ್ರ ದೇವಾಡಿಗ ಹಾಗೂ ಸುಜಯಲಕ್ಷ್ಮೀ ದಂಪತಿಯ ಪುತ್ರಿ.

  • ಕುಂದಾಪುರ :ಕನ್ನಡ ಶಾಲೆಗಳು ಬೆಳೆದರೆ ಕನ್ನಡ ಉಳಿಯುತ್ತದೆ – ರಶ್ಮಿ ಎಸ್. ಆರ್

    ಕುಂದಾಪುರ :ಕನ್ನಡ ಶಾಲೆಗಳು ಬೆಳೆದರೆ ಕನ್ನಡ ಉಳಿಯುತ್ತದೆ – ರಶ್ಮಿ ಎಸ್. ಆರ್

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ: ಕನ್ನಡ ಮಾಧ್ಯಮ ಶಾಲೆಗಳು ಬೆಳೆದಾಗ ಕನ್ನಡದ ಉಳಿವು ಸಾಧ್ಯ. ಪೋಷಕರು ಈ ಬಗ್ಗೆ ಗಮನ ಹರಿಸಬೇಕು ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್. ಆರ್ ಹೇಳಿದರು.
    ಕುಂದಾಪುರದ ಗಾಂದೀ ಮೈದಾನದಲ್ಲಿ ಬುಧವಾರ ಆಚರಿಸಲಾದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಏಕೀಕರಣಕ್ಕೆ ಪೂರ್ವದಲ್ಲಿ ಸಾಕಷ್ಟು ಹೋರಾಟಗಳು ನಡೆದಿವೆ. 1915ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ರಚನೆ, 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ಉಪಸ್ಥಿತಿಯಲ್ಲಿ ಬೆಳಗಾವಿ ಅಧಿವೇಶನದಲ್ಲಿ ಮೊದಲ ಬಾರಿಗೆ ಉದಯವಾಗಲಿ ಚೆಲುವ ಕನ್ನಡ ನಾಡು ಎನ್ನು ನಾಡಗೀತೆಯನ್ನು ಹಾಡಲಾಯಿತು. ನಂತರದ ಸಂದರ್ಭದಲ್ಲಿ ದೇಶ ವಿಭಜನೆಯ ಕಾಲಘಟ್ಟದಲ್ಲಿ ರಾಜ್ಯದಲ್ಲಿ ವಿವಿಧ ಪ್ರಾಂತ್ಯಗಳಲ್ಲಿ ಕರ್ನಾಟಕ ಏಕೀಕರಣಕ್ಕೆ ನಾಂದಿ ಹಾಡಲಾಯಿತು. ಹಲವಾರು ಹೋರಾಟಗಾರರು, ಸಾಹಿತಿಗಳು, ಸಂಘ ಸಂಸ್ಥೆಗಳ ಹೋರಾಟದ ಪರಿಣಾಮವಾಗಿ ಮೈಸೂರು ರಾಜ್ಯ ಸ್ಥಾಪನೆಯಾಯಿತು. ಬಳಿಕ ಕರ್ನಾಟಕ ಎಂಬ ಹೆಸರು ಬಂತು. ಕುಂದಾಪುರ ಕನ್ನಡ ಶುದ್ಧವಾಗಿ ಉಳಿದಿದೆ. ಅದನ್ನು ಬೆಳೆಸುವ ಜವಾಬ್ಧಾರಿ ನಮ್ಮದಾಗಬೇಕು ಎಂದು ಅವರು ಹೇಳಿದರು.
    ಗಂಗೊಳ್ಳಿ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಬ್ ಇನ್ಸ್ ಪೆಕ್ಟರ್ ಬಸವರಾಜ್ ನೇತೃತ್ವದಲ್ಲಿ ಪೊಲೀಸ್, ಎನ್ಸಿಸಿ, ಸ್ಕೌಟ್ಸ್ ಹಾಗೂ ಭಾರತ್ ಸೇವಾದಳದ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಬಳಿಕ ನಗರ ವ್ಯಾಪ್ತಿಯ ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
    ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧ್ಯೀಕ್ಷಕ ಬೆಳ್ಳಿಯಪ್ಪ, ಕುಂದಾಪುರ ಪುರಸಭಾ ಮುಖ್ಯಾಧಿಕಾರಿ ಮಂಜುನಾಥ್ ಆರ್., ಕೆ.ಯು, ಪುರಸಭಾ ಸದಸ್ಯರು, ಮೊದಲಾದವರು ಉಪಸ್ಥಿತರಿದ್ದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್. ಶೋಭಾ ಶೆಟ್ಟಿ ಸ್ವಾಗತಿಸಿದರು. ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.
  • ಕುಂದಾಪುರ :ದೇಶಕ್ಕೆ ಇಂದಿರಾ, ಪಟೇಲ್ ಕೊಡುಗೆ ಅಪಾರ – ಮಲ್ಯಾಡಿ ಶಿವರಾಮ ಶೆಟ್ಟಿ

    ಕುಂದಾಪುರ :ದೇಶಕ್ಕೆ ಇಂದಿರಾ, ಪಟೇಲ್ ಕೊಡುಗೆ ಅಪಾರ – ಮಲ್ಯಾಡಿ ಶಿವರಾಮ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಇಂದು ಪ್ರಪಂಚದಲ್ಲಿ ಭಾರತ ಮಂಚೂಣಿ ಸ್ಥಾನ ಪಡೆಯಲು ಮತ್ತು ಇಡೀ ಪ್ರಪಂಚದ ನೋಟ ಭಾರತದತ್ತ ಬೀರಲು ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಮತ್ತು ನೆಹರು ಸಂಪುಟದಲ್ಲಿದ್ದ ದೇಶದ ಪ್ರಥಮ ಸಮರ್ಥ ಗ್ರಹ ಸಚಿವ ಸರ್ದಾರ್ ವಲ್ಲಭಾಯಿ ಪಟೇಲ್ ದೃಢ ನಿಲವು ದೂರ ದೃಷ್ಟಿ ಮತ್ತು ಸಮರ್ಥ ಆಡಳಿತ ಕಾರಣ. ದೇಶಕ್ಕೆ ಇಬ್ಬರು ನಾಯಕರು ಕಾಂಗ್ರೆಸ್ ಪಕ್ಷದ ಅಪೂರ್ವ ಕೊಡುಗೆಯಾಗಿದೆ ಎಂದು ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ ಹೇಳಿದರು.

    ಅವರು ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜರುಗಿದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು .

    ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಬ್ಯಾಂಕ್ ರಾಷ್ಟ್ರೀಕರಣ, ಭೂ ಮಸೂದೆ ಕಾನೂನು, 20 ಅಂಶಗಳ ಕಾರ್ಯಕ್ರಮ, ಮುಂತಾದ ಜನಪ್ರಿಯ ಕಾರ್ಯಕ್ರಮಗಳ ಸಮರ್ಥ ಅನುಷ್ಠಾನದಿಂದ ಇಂದಿರಾಗಾಂಧಿ ದೇಶದ ಬೆಳವಣಿಗೆ ದಿಕ್ಕನ್ನು ಅಭಿವೃದ್ಧಿಯತ್ತ ಕೊಂಡೊಯ್ದರು ಮತ್ತು ಸರ್ದಾರ್ ಪಟೇಲರು ದೇಶದ ಪ್ರಥಮ ಗೃಹ ಸಚಿವರಾಗಿ ತೆಗೆದುಕೊಂಡ ಹಲವು ನಿರ್ದಾಕ್ಷಿಣ ನಿರ್ಧಾರಗಳು ಇಂದಿನ ಭಾರತೀಯ ಪ್ರಜೆಗಳ ನೆಮ್ಮದಿಯ ಬದುಕಿಗೆ ಅಡಿಪಾಯವಾಗಿದೆ ಎಂದರು.

    ಇಂದಿರಾ ಪಟೇಲ್ ಕೊಡುಗೆಯ ಬಗ್ಗೆ ಹಿರಿಯರಾದ ಗಂಗಾಧರ ಶೆಟ್ಟಿ ಮತ್ತು ಅಬ್ದುಲ್ಲಾ ಕೂಡಿ ಅವರು ಮಾತನಾಡಿದರು.

    ಸಭೆಯಲ್ಲಿ ಬ್ಲಾಕ್ ಮಹಿಳಾ ಅಧ್ಯಕ್ಷ ದೇವಕಿ ಸಣ್ಣಯ್ಯ ,ಪುರಸಭೆ ಸದಸ್ಯರಾದ ಚಂದ್ರಶೇಖರ ಖಾರ್ವಿ , ಪ್ರಭಾವತಿ ಶೆಟ್ಟಿ, ಕೋಣಿ ಪಂಚಾಯತ್ ಅಧ್ಯಕ್ಷ ಅಶೋಕ ಭಂಡಾರಿ, ಬ್ಲಾಕ್ ಕಾಂಗ್ರೆಸ್ ಉಪಸಮಿತಿಗಳ ಅಧ್ಯಕ್ಷರಾದ ಚಂದ್ರ ಅಮೀನ್, ಸುಜನ್ ಶೆಟ್ಟಿ, ಅಶ್ವತ್ ಕುಮಾರ್, ಕೆ ಶಿವಕುಮಾರ್, ಐಟಿ ಸೆಲ್ ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ರೇವತಿ ಶೆಟ್ಟಿ ,ಪಂಚಾಯತ್ ಸದಸ್ಯ ಗಣಪತಿ ಶೇಟ್ ,ಕೋಣಿ ನಾರಾಯಣ ಆಚಾರಿ, ಅಶೋಕ್ ಸುವರ್ಣ, ಕೇಶವ ಭಟ್, ಅಭಿಜಿತ್ ಪೂಜಾರಿ, ಶಶಿ ರಾಜ್ ಪೂಜಾರಿ, ಜ್ಯೋತಿ ನಾಯ್ಕ್, ವೇಲಾ ಬ್ರಗಾಂಜ ,ಸದಾನಂದ ಕಾರ್ವಿ, ವಿವೇಕಾನಂದ ,ಜೋಸೆಫ್ ರೆಬೆಲ್ಲೊ ,ದಿನೇಶ್ ಬೆಟ್ಟ ,ಕೆ ಸುರೇಶ್, ಮೇಬಲ್ ಡಿಸೋಜಾ, ಸ್ವಸ್ತಿಕ್ ಶೆಟ್ಟಿ, ಡೊಲ್ಫಿ ಕ್ರಾಸ್ತಾ, ಫ್ರಾನ್ಸಿಸ್ ಮಚಾದೊ, ಪ್ರವೀಣ, ಸಂಗೀತ ಇನ್ನಿತರರು ಉಪಸ್ಥಿತರಿದ್ದರು.

    ಯುವ ಮುಖಂಡ ಕೊಡಿ ಸುನಿಲ್ ಪೂಜಾರಿ ಸ್ವಾಗತಿಸಿ ,ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ನಿರೂಪಿಸಿ, ಕಾರ್ಯದರ್ಶಿ ಆಶಾ ಕರ್ವಾಲ್ಲೊ ವಂದಿಸಿದರು.

  • ಕೋಟ ವಲಯ ಲಾರಿ ಚಾಲಕ, ಮಾಲಕರ ಸಂಘ ಉದ್ಘಾಟನೆ

    ಕೋಟ ವಲಯ ಲಾರಿ ಚಾಲಕ, ಮಾಲಕರ ಸಂಘ ಉದ್ಘಾಟನೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟ ವಲಯ ಲಾರಿ ಚಾಲಕ-ಮಾಲಕರ ಸಂಘದ ಉದ್ಘಾಟನೆ ಅ. 29ರಂದು ವಡ್ಡರ್ಸೆ ಮಹಾಲಿಂಗೇಶ್ವರ ದೇಗುಲದ ಸಭಾಂಗಣದಲ್ಲಿ ಜರಗಿತು.

    ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಂಘವನ್ನು ಉದ್ಘಾಟಿಸಿದರು.

    ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ ಲಾರಿ ಚಾಲಕ, ಮಾಲಕರು ತಮ್ಮ ಅಸ್ತಿತ್ವಕ್ಕಾಗಿ ಈ ಹಿಂದೆ ನಡೆಸಿದ ಹೋರಾಟ ಅವಿಸ್ಮರಣೀಯವಾದದ್ದು. ರಾಜ್ಯ ಸರಕಾರದ ತನಕ ನಿಮ್ಮ ಧ್ವನಿ ತಲುಪಿದೆ. ಇದೇ ರೀತಿ ಸಂಘಟನೆ ಮುಂದುವರಿಯಲಿ ಎಂದರು.

    ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಉದ್ಯಮಿ ಆನಂದ ಸಿ.ಕುಂದರ್, ಮಲ್ಯಾಡಿ ಶಿವರಾಮ ಶೆಟ್ಟಿ, ಶರತ್ ಶೆಟ್ಟಿ, ಕಷರ್, ಲಾರಿ ಮಾಲಕರ ಸಂಘದ ಜಿಲ್ಲಾ ಸಂಚಾಲಕ ರಾಘವ ಶೆಟ್ಟಿ, ಸಂಘದ ಕಾನೂನು ಸಲಹೆಗಾರ, ಶ್ಯಾಮಸುಂದರ್ ನಾಯರಿ, ಗೌರವಾಧ್ಯಕ್ಷ ಭೋಜ ಪೂಜಾರಿ, ಕಾರ್ಯದರ್ಶಿ ಜನಾರ್ದನ ಪೂಜಾರಿ ಇದ್ದರು. ಸುಧೀರ್ ಮಲ್ಯಾಡಿ ಸ್ವಾಗತಿಸಿ, ಶಿಕ್ಷಕ ಸತೀಶ್ ವಡ್ಡರ್ಸೆ ನಿರೂಪಿಸಿ, ಕಿರಣ್ ಹೊಳೆಕೆರೆ ವಂದಿಸಿದರು.