Category: ಸುದ್ದಿ

  • ಕುಂದಾಪುರ :ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೇಡಿಯೋ ಕುಂದಾಪ್ರ 89.6 FM ಸಮುದಾಯ ಬಾನುಲಿ ಕೇಂದ್ರದ ಲಾಂಛನ ಮತ್ತು ರಾಗ ಬಿಡುಗಡೆ

    ಕುಂದಾಪುರ :ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೇಡಿಯೋ ಕುಂದಾಪ್ರ 89.6 FM ಸಮುದಾಯ ಬಾನುಲಿ ಕೇಂದ್ರದ ಲಾಂಛನ ಮತ್ತು ರಾಗ ಬಿಡುಗಡೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ನಿಮ್ಮ ಒಳಗೊಂದು ಕಿಚ್ಚು ಹುಟ್ಟಬೇಕು. ನಮ್ಮವರೇ ನಮ್ಮನ್ನು ಪ್ರೀತಿಯಿಂದ ಪ್ರೋತ್ಸಾಹ ನೀಡಿದಾಗ ನಮ್ಮ ಸಾಧನೆಯ ಹಾದಿ ಸುಗಮವಾಗುತ್ತದೆ. ಕುಂದಾಪುರ ಪರಿಸರ ಭಾಗದಲ್ಲಿ ಹಲವರು ಕಲೆಗಳಿವೆ ಅವುಗಳಿಗೆ ಇದರ ಉಪಯೋಗವಾಗಲಿ ಇವತ್ತಿನ ವರೆಗಿನ ಹಾದಿಯ ನನ್ನ ದುಡಿಮೆಯ 20ಶೇಕಡಾ ಮಾತ್ರ ನನಗಾಗಿ ಉಳಿದ 80ಶೇಕಡಾ ಸಮಾಜಕ್ಕಾಗಿ ಎಂಬ ಪಾಲಿಸಿ ಹಾಕಿಕೊಂಡು ಬರುತ್ತಿದ್ದೇನೆ. ರೇಡಿಯೋ ಎನ್ನುವುದು ಮೊಬೈಲ್ ಅಥವಾ ಉಳಿದ ಮಾಧ್ಯಮಗಳಿಗಿಂತ ಭಿನ್ನ. ಇದರ ಹಿಂದಿನ ಕೆಲಸಗಳು ಶ್ಲಾಘನೀಯ ಎಂದು ಹೇಳಿದರು.

    ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೇಡಿಯೋ ಕುಂದಾಪ್ರ 89.6 FM ಸಮುದಾಯ ಬಾನುಲಿ ಕೇಂದ್ರ ಇದರ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು.

    ಜಾದೂಗಾರ ಹಾಗೂ ಸಾಹಿತಿಗಳಾದ ಶ್ರೀ ಓಂ ಗಣೇಶ್ ಅವರು ರೇಡಿಯೋ ಕುಂದಾಪ್ರ 89.6 FM ಸಮುದಾಯ ಬಾನುಲಿ ಕೇಂದ್ರ ಇದರ ಬಿಡುಗಡೆಗೊಳಿಸಿ ರೇಡಿಯೋ ಒಂದು ಪ್ರಗತಿ ದತ್ತವಾದ ವಿಶಿಷ್ಟವಾದ ವರ ರೇಡಿಯೋ ಹೊರೆತು ಪ್ರಪಂಚ ಇಷ್ಟು ಮುಂದೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು.

    ಕ. ಸ. ಪ ಉಡುಪಿ ಜಿಲ್ಲೆ ಇದರ ಮಾಜಿ ಅಧ್ಯಕ್ಷರಾದ ಶ್ರೀ.ಎ.ಎಸ್.ಎನ್ ಹೆಬ್ಬಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕುಂದಾಪುರ ಕನ್ನಡಕ್ಕೆ ಅದರದೇ ಅದ ವೈಶಿಷ್ಟ್ಯವಿದೆ ಎಂದು ಮಾತನಾಡಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ .ಶಾಂತರಾಮ್ ಪ್ರಭು ರೇಡಿಯೋ ಕುಂದಾಪುರದ ಉಪಯೋಗವನ್ನು ವಿದ್ಯಾರ್ಥಿಗಳು ಸಂಘ ಸಂಸ್ಥೆ ಸಾರ್ವಜನಿಕರೆಲ್ಲರು ಪಡೆದುಕೊಳ್ಳಬೇಕು ಎಂದು ಹೇಳಿದರು.

    ಕುಂದಾಪುರದ ಪ್ರತಿಭೆಗಳನ್ನು ಸಮಾಜಕ್ಕೆ ಗುರುತಿಸುವುದು ಹಾಗೂ ಕುಂದಾಪುರ ಕನ್ನಡ ಎಷ್ಟು ಪ್ರಸಿದ್ಧಿಯನ್ನು ಹೊಂದಿದೆ ಅಷ್ಟೇ ಪ್ರಸಿದ್ಧಿ ನಮ್ಮೂರಿನ ಜನತೆ ಹೊಂದಬೇಕು ಎಂದು ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಯು.ಎಸ್ ಶೆಣೈ ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ರೇಡಿಯೋ ಕುಂದಾಪುರ. 89.6 FM ಇದರ ರಾಗ ಸಂಯೋಜನೆ ಮಾಡಿದ ಚಲನಚಿತ್ರ ಸಂಗೀತ ನಿರ್ದೇಶಕ ರವಿ ಬಸ್ರೂರು ಮತ್ತು ಲಾಂಛನ ವಿನ್ಯಾಸ ಸ್ಪರ್ಧೆಯ ವಿಜೇತರಾದ ಕೇಶವ ಸಸಿಹಿತ್ಲು ಮತ್ತು ಅವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

    ಈ ಸಂದರ್ಭದಲ್ಲಿ ಭಂಡರ್ಕಾರ್ಸ್ ಕಲಾ ಮತ್ತು ವಿಜ್ಞಾನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ.ದೇವದಾಸ್ ಕಾಮತ್, ಸದಾನಂದ ಛಾತ್ರ, ಜಯಕರ ಶೆಟ್ಟಿ ಪ್ರಜ್ಞೇಶ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಅಭಿನಂದನ್ ಶೆಟ್ಟಿ , ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರದ ಡಾ. ಜಿ.ಎಂ ಗೊಂಡ, ಗಣ್ಯರು ಉಪಸ್ಥಿತರಿದ್ದರು.

    ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರ ಆಚಾರಿ ಅತಿಥಿಗಳನ್ನು ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ. ಎಂ. ಗೊಂಡ ವಂದಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸುಮಲತಾ ನಾಯ್ಕ್ ಅತಿಥಿಗಳ ಪರಿಚಯಿದರು, ಜ್ಯೋತಿ ಸಾಲಿಗ್ರಾಮ ನಿರೂಪಿಸಿದರು.

  • ಕುಂದಾಪುರ :ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ

    ಕುಂದಾಪುರ :ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ನಡೆಸಿದ ಕರ್ನಾಟಕ North Zonal Level ಪ್ರಬಂಧ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಖಾರ್ವಿ ಇಂಗ್ಲೀಷ್ ಪ್ರಬಂಧದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.

    ಈ ಸ್ಪರ್ಧೆಯನ್ನು ಸ್ಥಳೀಯ ಸಂಸ್ಥೆಯಾದ ಕುಂದಾಪುರದ ಶ್ರೀ ಸತ್ಯ ಸಾಯಿ ಸೇವಾ ಸಮಿತಿಯವರು ನಡೆಸಿರುತ್ತಾರೆ.

    ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

  • ಕೋಡಿ ಗ್ರಾಮಪಂಚಾಯತ್ ನೂತನ ಅಧ್ಯಕ್ಷರಾಗಿ ಗೀತಾ ಖಾರ್ವಿ, ಉಪಾಧ್ಯಕ್ಷರಾಗಿ ಪ್ರಸಾದ್ ಬೇಂಗ್ರೆ ಆಯ್ಕೆ

    ಕೋಡಿ ಗ್ರಾಮಪಂಚಾಯತ್ ನೂತನ ಅಧ್ಯಕ್ಷರಾಗಿ ಗೀತಾ ಖಾರ್ವಿ, ಉಪಾಧ್ಯಕ್ಷರಾಗಿ ಪ್ರಸಾದ್ ಬೇಂಗ್ರೆ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಇಲ್ಲಿನ ಕೋಡಿ ಗ್ರಾಮಪಂಚಾಯತ್ ಎರಡುವರೆ ವರ್ಷದ ಅವಧಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು.

    ನೂತನ ಅಧ್ಯಕ್ಷರಾಗಿ ಗೀತಾ ಖಾರ್ವಿ ಆಯ್ಕೆಯಾದರೆ ಉಪಾಧ್ಯಕ್ಷರಾಗಿ ಪ್ರಸಾದ್ ಬೇಂಗ್ರೆ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 12ರ ಸದಸ್ಯರ ಬಲದ ಪಂಚಾಯತ್‍ನಲ್ಲಿ ಬಿಜೆಪಿ 11-1 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಈ ಪ್ರಕ್ರಿಯೆಯೊಳಗೆ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಪ್ರಸ್ತುತ ಅಧ್ಯಕ್ಷ ಪ್ರಭಾಕರ್ ಮೆಂಡನ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು.

    ಚುನಾವಣಾಧಿಕಾರಿಯಾಗಿ ರಾಘವ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಭಾಗವಹಿಸಿದ್ದರು.

  • ಕುಂದಾಪುರ :ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

    ಕುಂದಾಪುರ :ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

    ಕುಂದಾಪುರ ಮಿರರ್ ಸುದ್ದಿ…
    ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸ.ನಂ. 180, 157, 189 ಲ್ಲಿನ 11.90 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 4 ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸ.ನಂ. 174, 56 ರಲ್ಲಿನ 5.70 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿ ಮರಳನ್ನು ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಸ್ಯಾಂಡ್ ಆಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸದರಿ ಮರಳನ್ನು UDUPI E-SAND APP ಮೂಲಕ ಬುಕ್ಕೀಂಗ್ ಮಾಡಿಕೊಂಡು ಪಡೆದುಕೊಳ್ಳಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2572333, 2950088 ಹಾಗೂ UDUPI E-SAND APP ದೂ.ಸಂಖ್ಯೆ: 6364024555, 6366745888 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

  • ಕುಂದಾಪುರ :ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಸಹಕಾರಿ – ಅಲ್ತಾರು ನಾಗರಾಜ್

    ಕುಂದಾಪುರ :ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಸಹಕಾರಿ – ಅಲ್ತಾರು ನಾಗರಾಜ್

    ಕುಂದಾಪುರ ಮಿರರ್ ಸುದ್ದಿ…

    ಕೋಟ : ಮಕ್ಕಳ ಎಳೆ ವಯಸ್ಸಿನಲ್ಲಿ ಹೊಸ ಚಿಂತನೆಯ ಅವಕಾಶ ಕಲ್ಪಿಸಿ ಅವರಲ್ಲಿನ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ ಯುವಕ ಮಂಡಲದಂತಹ ಸಂಘ ಸಂಸ್ಥೆಗಳು ನೆರವಾಗಬೇಕು, ಸಂಘಟನೆಗಳಿಂದ ಗ್ರಾಮೀಣ ಪ್ರದೇಶಗಳಲ್ಲೂ ಸಾಂಸ್ಕೃತಿಕ ಚಿಂತನೆಯ ಜೊತೆಗೆ ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಸುತ್ತಿರುವುದು ಶ್ಲಾಘನೀಯ ಎಂದು ಸಾಹಿತಿ ಶಿಕ್ಷಕ ಅಲ್ತಾರು ನಾಗರಾಜ್ ಅವರು ಹೇಳಿದರು.

    ಅವರು ಶ್ರೀ ವಿನಾಯಕ ಯುವಕ ಮಂಡಲ ಸಾಹೇಬರಕಟ್ಟೆ ಯಡ್ತಾಡಿ ಇದರ 12ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಮಹೋತ್ಸವದ ಪ್ರಯುಕ್ತ ನಡೆದ ಮುದ್ದು ಕೃಷ್ಣ ವೇಷ ಸ್ಪರ್ದೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷ ನಂದೀಶ ನಾಯ್ಕ, ಭರತನಾಟ್ಯ ಶಿಕ್ಷಕರಾದ ವಿದುಷಿ ಅಮೃತ ಉಪಾಧ್ಯಾಯ, ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಯುವಕ ಮಂಡಲದ ಸದಸ್ಯ ಅಜಿತ್ ಕುಮಾರ್ ನಿರೂಪಿಸಿದರು.

  • ಗುಳ್ಳಾಡಿ ಶಾರದೋತ್ಸವದಲ್ಲಿ ಸಮಾಜಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರಿಗೆ ಸನ್ಮಾನ

    ಗುಳ್ಳಾಡಿ ಶಾರದೋತ್ಸವದಲ್ಲಿ ಸಮಾಜಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರಿಗೆ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಬೇಳೂರಿನ ಗುಳ್ಳಾಡಿಯಲ್ಲಿ ನಡೆದ 12ನೇ ವರ್ಷದ ಶಾರದೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಮಂಗಳವಾರ ಸಂಪನ್ನಗೊಂಡಿತು. ಈ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

    ಸನ್ಮಾನ ಸ್ವೀಕರಿಸಿ ಮಾತನಾಡಿ ಉಪಕಾರ ಬಯಸದ ಸೇವೆಯ ಅಗತ್ಯತೆ ಮತ್ತು ಯುವಕರಲ್ಲಿನ ಸಾಮಾಜಿಕ ಕಳಕಳಿಯನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಸ್ಫೂರ್ತಿ ತುಂಬಿದರು.

    ಕಾರ್ಯಕ್ರಮವನ್ನು ಬೇಳೂರು ಗ್ರಾಮ ಪಂಚಾಯತ್‍ನ ಅಧ್ಯಕ್ಷ ಜಯಶೀಲ ಶೆಟ್ಟಿ ಉದ್ಘಾಟಿಸಿದರು.

    ಮುಖ್ಯ ಅತಿಥಿಗಳಾಗಿ ಅಮೃತೇಶ್ವರಿ ರೈಸ್‍ಮಿಲ್ ಗಿಳಿಯಾರು ಗುಳ್ಳಾಡಿ ಇದರ ಮಾಲೀಕ ಮಹೇಶ್ ಶೆಟ್ಟಿ,ಬೇಳೂರು ಗ್ರಾಮ ಪಂಚಾಯತ್ ಸದಸ್ಯೆ ಮುಕ್ತಾ ರಾಘವೇಂದ್ರ, ಶ್ರೀಕಲಾ ಉಪಸ್ಥಿತರಿದ್ದರು.

    ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಸುಧೀರ್ ಗುಳ್ಳಾಡಿ ವಹಿಸಿದ್ದರು.

    ಸಂಧ್ಯಾ, ದೀಪ್ತಿ ಪ್ರಾರ್ಥಿಸಿದರು, ಕಾರ್ಯಕ್ರಮವನ್ನು ಉಪನ್ಯಾಸಕ ನಾಗರಾಜ್ ಗುಳ್ಳಾಡಿ ನಿರೂಪಿಸಿದರು.

  • ಕುಂದಾಪುರ :ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ನರೇಂದ್ರ ಕುಮಾರ್ ಕೋಟರವರಿಗೆ ಮಂಗಳೂರು ಕಥಬಿಂದುವಿನ ಚೈತನ್ಯ ಶ್ರೀ ಪುರಸ್ಕಾರಕ್ಕೆ ಆಯ್ಕೆ

    ಕುಂದಾಪುರ :ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ನರೇಂದ್ರ ಕುಮಾರ್ ಕೋಟರವರಿಗೆ ಮಂಗಳೂರು ಕಥಬಿಂದುವಿನ ಚೈತನ್ಯ ಶ್ರೀ ಪುರಸ್ಕಾರಕ್ಕೆ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟರವರಿಗೆ ಅವರ ಶೈಕ್ಷಣಿಕ ಚಲನಚಿತ್ರ ಸುಗಂಧಿ ನಿರ್ಮಾಣಕ್ಕಾಗಿ ಮಂಗಳೂರಿನ ಕಥಾ ಬಿಂದುವಿನ ಚೈತನ್ಯಶ್ರೀ ವಿಶೇಷ ರಾಜ್ಯ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ.

    ಕಾರಂತರು ಹಾಗೂ ಯಕ್ಷಗಾನವನ್ನು ಸಮನ್ವಯಗೊಳಿಸುವ ಈ ಚಲನಚಿತ್ರ ಕಲಾತ್ಮಕ ಬೆರಗಿನೊಂದಿಗೆ ನಿರ್ಮಾಣವಾಗಿರುವುದು ಶ್ಲಾಘನೀಯ ವಿಚಾರವೆಂದು ಸಂಸ್ಥೆ ತಿಳಿಸಿದೆ.

    ಇತ್ತೀಚಿಗಷ್ಟೇ ಕರ್ನಾಟಕ ಸರಕಾರದ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪುರಸ್ಕಾರ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಕನಕಪೀಠದ ಸಾರ್ವಭೌಮ ಪುರಸ್ಕಾರ ಲಭಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

  • ಕುಂದಾಪುರ :ನಂದಿಕೇಶ್ವರ ದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನದ ನೀಲನಕ್ಷೆ ಬಿಡುಗಡೆ ಹಾಗೂ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

    ಕುಂದಾಪುರ :ನಂದಿಕೇಶ್ವರ ದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನದ ನೀಲನಕ್ಷೆ ಬಿಡುಗಡೆ ಹಾಗೂ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇಲ್ಲಿನ ಸರಕಾರಿ ಆಸ್ಪತ್ರೆಯ ಆವರಣದಲ್ಲಿರುವ ಶ್ರೀ ನಂದಿಕೇಶ್ವರ ದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನದ ನೀಲನಕ್ಷೆ ಬಿಡುಗಡೆ ಹಾಗೂ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡುವ ಕಾರ್ಯಕ್ರಮ ಅ.24ರಂದು ನಡೆಯಿತು.

    ಉದ್ಯಮಿ ದತ್ತಾನಂದ ಅವರು ನೂತನ ದೇವಳದ ನೀಲನಕ್ಷೆ ಬಿಡುಗಡೆಗೊಳಿಸಿ ಮಾತನಾಡಿ, ಧಾರ್ಮಿಕ ಸ್ಥಳಗಳಲ್ಲಿನ ಆರಾಧನೆ ಭಗವಂತನಿಗೆ ಸಮರ್ಪಿತವಾಗುತ್ತದೆ. ಪ್ರಾಚಿನವಾದ ದೇವಸ್ಥಾನಗಳನ್ನು ಅಭಿವೃದ್ದಿ ಪಡಿಸಿ, ಧಾರ್ಮಿಕ ವಿಧಿವತ್ತಾಗಿ ವಿಧಿವಿಧಾನಗಳು ನಡೆದಾಗ ಊರಿಗೆ ಸುಭೀಕ್ಷೆಯಾಗುತ್ತದೆ. ಆ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಂದಿಕೇಶ್ವರ ದೇವಸ್ಥಾನದ ಜೀರ್ಣೋದ್ದಾರ ಪ್ರಸ್ತುತವಾಗಿದೆ ಎಂದರು.
    ಶಿಲ್ಪಿಗಳಿಗೆ ಕಾಮಗಾರಿ ಆರಂಭಿಸಲು ವೀಳ್ಯ ನೀಡಿದ ಕುಂದಾಪುರದ ಶ್ರೀ ಮೈಲಾರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆ.ರಮೇಶ ಬಿಲ್ಲವ ಮೈಲಾರೇಶ್ವರ ದೇವಸ್ಥಾನಕ್ಕೂ ಈ ನಂದಿಕೇಶ್ವರ ದೇವಸ್ಥಾನಕ್ಕೂ ಸಂಬಂಧವಿರುವುದು ಹಿಂದೆ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ವ್ಯಕ್ತವಾಗಿತ್ತು. ಈಗ ಇಲ್ಲಿ ಸ್ವರ್ಣರೂಢ ಪ್ರಶ್ನೆ ಇರಿಸಿದಾಗಲೂ ಕೂಡಾ ಇದು ದೃಢಪಟ್ಟಿದೆ. ನಿರೀಕ್ಷಿತ ಸಮಯದಲ್ಲಿ ದೇವಸ್ಥಾನ ನಿರ್ಮಾಣವಾಗಲಿ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ|ನಾಗೇಶ್ ಮಾತನಾಡಿ, ನಂದಿಕೇಶ್ವರ ದೇವಸ್ಥಾನಕ್ಕೆ ಸಾಕಷ್ಟು ಶತಮಾನಗಳ ಇತಿಹಾಸವಿದೆ. ಕೋಪ ಹಾಗೂ ಸಂತೋಷವನ್ನು ಸ್ವಪ್ನದ ಮೂಲಕ ಸಂದೇಶ ನೀಡುವ ದೇವರು ಖ್ಯಾತಿ ಈ ನಂದಿಕೇಶ್ವರ ದೇವರಿಗಿದೆ. ಈ ದೇವಸ್ಥಾನವನ್ನು ಶಿಲಾಮಯವಾಗಿ ಜೀರ್ಣೋದ್ಧಾರಗೊಳಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಜೀರ್ಣೋದ್ದಾರ ಸಮಿತಿ ರಚನೆ ಮಾಡಿಕೊಂಡು ಕಾರ್ಯೋನ್ಮುಖವಾದಾಗ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು 50 ಲಕ್ಷ ವೆಚ್ಚದಲ್ಲಿ ಈ ದೇವಸ್ಥಾನ ನಿರ್ಮಾಣ ನಿಗಧಿತ ದಿನಗಳ ಒಳಗೆ ನಿರ್ಮಾಣವಾಗಲಿದೆ ಎಂದರು.

    ಕುಂದಾಪುರ ಬಟ್ರಹಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸ್ಥಾಪಕ ಅಧ್ಯಕ್ಷರಾದ ರಾಮಕೃಷ್ಣ ಬಿಜೂರು, ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ|ರಾಬರ್ಟ್ ರೆಬೆಲ್ಲೋ, ಕುಂದಾಪುರ ಶ್ರೀ ಮಹಾಕಾಳಿ ದೇವಸ್ಥಾನದ ಅಧ್ಯಕ್ಷರಾದ ಜಯಾನಂದ ಖಾರ್ವಿ ಉಪಸ್ಥಿತರಿದ್ದರು.

    ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ರಾಧಾಕೃಷ್ಣ ಯು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಈ ದೇವಸ್ಥಾನ 400 ವರ್ಷಗಳಿಗಿಂತಲೂ ಹಿಂದೆ 15ನೇ ಶತಮಾನದಲ್ಲಿ ಬಿದನೂರು ಅರಸರ ಆಳ್ವಿಕೆಯಲ್ಲಿ ಸ್ಥಾಪನೆಗೊಂಡ ಇತಿಹಾಸವಿದೆ. ಬ್ರಿಟಿಷರ ಆಡಳಿತದಲ್ಲಿ ದೇವಸ್ಥಾನಕ್ಕೆ 4 ಸೆಂಟ್ಸ್ ಜಾಗ ಮಂಜೂರಾತಿಯಾಗಿದೆ. 40 ವರ್ಷಗಳ ಹಿಂದೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಭಕ್ತರು ಸೇರಿ ದೇವರಿಗೆ ಸುಂದರವಾದ ಗುಡಿ ನಿರ್ಮಿಸಿದರು. ಆಸ್ಪತ್ರೆಯು ಅಭಿವೃದ್ದಿಗೊಂಡಂತೆ ಹೊಸ ಕಟ್ಟಡಗಳ ನಿರ್ಮಾಣವಾದಾಗ ಅದರ ಅಡಿಪಾಯ ದೇವಸ್ಥಾನದ ಅಡಿಪಾಯಕ್ಕಿಂತ ಎತ್ತರದಲ್ಲಿರುವುದು ವಾಸ್ತುಶಾಸ್ತ್ರದ ಪ್ರಕಾರ ಶ್ರೇಷ್ಠವಲ್ಲ ಎಂದು ಕಂಡುಬಂದ ಹಿನ್ನೆಲೆ ಮಾತ್ರವಲ್ಲದೆ ಶಿಥಿಲಗೊಂಡಿರುವ ದೇವಸ್ಥಾನದ ಪುನರ್ ನವೀಕರಣದ ಅನಿರ್ವಾತೆಯೂ ಇರುವುದರಿಂದ ಈಗಾಗಲೇ ಎ.10-2022ರಂದು ಸ್ವರ್ಣರೂಢ ಪ್ರಶ್ನೆಯನ್ನು ಇರಿಸಲಾಗಿತ್ತು. ಸುಮಾರು 50 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಶಿಲಾಮಯ ದೇವಸ್ಥಾನ ನಿರ್ಮಾಣಕ್ಕೆ ಯೋಜನೆ ತಯಾರಿಸಲಾಗಿದೆ. ಡಿಸೆಂಬರ್‍ನಲ್ಲಿ ಕಲಾಸಂಕೋಚಗೊಳಿಸಿ 90 ದಿನಗಳ ಅವಧಿಯಲ್ಲಿ ದೇವಳ ನಿರ್ಮಿಸಿ ಪುನರ್ ಪ್ರತಿಷ್ಠಾಪನೆ ನಡೆಸಲಾಗುವುದು ಎಂದರು.

    ಶಲಿತಾ ರಾವ್ ಹಾಗೂ ರೂಪಾ ಪ್ರಾರ್ಥನೆ ಮಾಡಿದರು. ಪುರಸಭಾ ಮಾಜಿ ಸದಸ್ಯ ರಾಜೇಶ ಕಾವೇರಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

  • ಕೋಟ ಸಹಕಾರಿ ವ್ಯವಸಾಯಿಕ ಸಂಘ ಗಿಳಿಯಾರು ಶಾಖೆಯ ನೂತನ ಕಟ್ಟಡ ಲೋಕಾರ್ಪಣೆ

    ಕೋಟ ಸಹಕಾರಿ ವ್ಯವಸಾಯಿಕ ಸಂಘ ಗಿಳಿಯಾರು ಶಾಖೆಯ ನೂತನ ಕಟ್ಟಡ ಲೋಕಾರ್ಪಣೆ

    ಕುಂದಾಪುರ ಮಿರರ್ ಸುದ್ದಿ…


    ಕೋಟ :ಸೌಹಾರ್ಧ ವ್ಯವಸ್ಥೆಯನ್ನು ಸಹಕಾರಿ ವ್ಯವಸ್ಥೆಯಡಿ ತರಲು ನಿಯಮಗಳಲ್ಲಿ ತಿದ್ದುಪಡಿ ತರುವಂತೆ ಸರ್ಕಾರಕ್ಕೆ ಒತ್ತಡ ಹೇರಲು ಪ್ರಯತ್ನಿಸಲಾಗುತ್ತಿದೆ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು,

    ಕೋಟ ಸಹಕಾರಿ ವ್ಯವಸಾಯಕ ಸಂಘದ ಗಿಳಿಯಾರು ನೂತನ ಶಾಖಾ ಕಟ್ಟಡ ಸಹಕಾರ ಸೂರ್ಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಸಹಕಾರಿ ಕ್ಷೇತ್ರದ ವ್ಯವಸ್ಥೆ ಸುಲಲಿತವಾಗಿ ನಡೆಯಲು ನಿಯಮ ಬದಲಾವಣೆ ಅಗತ್ಯವಾಗಿ ಆಗಬೇಕು. ಕರಾವಳಿ ಜಿಲ್ಲೆ ವಾಣಿಜ್ಯ ಬ್ಯಾಂಕ್‍ಗಳ ತವರೂರಾದರೂ, ಇಂದು ರಾಷ್ಟ್ರೀಕೃತ ಬ್ಯಾಂಕ್‍ಗಳ ವಿಲೀನತೆಯಿಂದ ಅನೇಕ ಅಧಿಕಾರಿಗಳು ಬೇರೆ ರಾಜ್ಯದವರಾಗಿರುವುದರಿಂದ ಗ್ರಾಹಕರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಇನ್ನೊಂದೆಡೆ ಕೇಂದ್ರ ಸರ್ಕಾರ ಗ್ರಾಮಕ್ಕೊಂದು ಸಹಕಾರಿ ಸಂಘಗಳನ್ನು ಪ್ರಾರಂಭಿಸಲು ಯೋಜನೆ ರೂಪಿಸಿ ಸಹಕಾರಿ ಸಂಘಗಳ ನಿರ್ನಾಮಕ್ಕೆ ಹುನ್ನಾರ ನಡೆಸುತ್ತಿದೆ. ಆದರೆ ಸಹಕಾರಿ ಸಂಘಗಳು ಗ್ರಾಮದ ಜನತೆಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇಂತಹ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತಾರದಂತೆ ಹೈಕೋರ್ಟ್‍ನಲ್ಲಿ ತಡೆಯಾಜ್ಞೆ ಹೇರಲಾಗಿದೆ. ಬಲಿಷ್ಟ ಸಹಕಾರಿ ಸಂಘವನ್ನು ಉಳಿಸಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

    ಭದ್ರತಾ ಕೊಠಡಿಯನ್ನು ಉದ್ಘಾಟಿಸಿದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ ಸಹಕಾರಿ ಸಂಘಗಳ ಧ್ಯೇಯೋದ್ಧೇಶವನ್ನು ಅರಿತು ಕಾನೂನು ಬದಲಾವಣೆ ತರಬೇಕು ಎಂದರು.

    ಸಂಘದ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

    ಇದೇ ಸಂದರ್ಭ ಗಿಳಿಯಾರು ಶಾಖೆಯ ನೂತನ ಕಟ್ಟಡವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ ಡಾ.ಎಂ.ರಾಜೇಂದ್ರ ಕುಮಾರ್, ಗೋದಾಮು ಕಟ್ಟಡವನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ, ಭದ್ರತಾ ತಿಜೋರಿಯನ್ನು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ ಕುಮಾರ್ ಎಸ್ ವಸತಿ ಸಂಕೀರ್ಣ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಗಣಕ ಯಂತ್ರ ಉದ್ಘಾಟಿಸಿದರು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ನಿರ್ದೇಶಕ ಡಾ.ಐ.ದೇವಿಪ್ರಸಾದ್ ಶೆಟ್ಟಿ ಫಲಾನುಭವಿಗಳಿಗೆ ಚೆಕ್ ಮತ್ತು ಕೋಟ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ ಸಿ ಕುಂದರ್ ಸುತ್ತುನಿಧಿ ಹಸ್ತಾಂತರಿಸಿದರು.

    ಸಂಘದ ವತಿಯಿಂದ ಡಾ.ರಾಜೇಂದ್ರ ಕುಮಾರ್, ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಕೋಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಸಂಸ್ಥೆಯಲ್ಲಿ ಆಡಳಿತ ನಡೆಸಿ ನಿವೃತ್ತರಾದ ಶ್ರೀಧರ ಸೋಮಯಾಜಿ, ಸುರೇಂದ್ರ ಹೆಗ್ಡೆ, ಭರತ್ ಕುಮಾರ್ ಶೆಟ್ಟಿ, ಡಾ.ಪ್ರಶಾಂತ ಕುಮಾರ್ ಶೆಟ್ಟಿ, ಅಶೋಕ್ ಕುಮಾರ ಶೆಟ್ಟಿ ಮತ್ತು ಇಂಜಿನಿಯರ್ ಪ್ರಮೋದ್ ಶೆಟ್ಟಿ, ಚೇತನ್, ದಾನಿ ಸುಮಿತ್ರ ಹೇರ್ಳೆ ಅವರನ್ನು ಗೌರವಿಸಲಾಯಿತು. ಮೂಡುಗಿಳಿಯಾರಿನ ಸಮಸ್ತ ಗ್ರಾಮಸ್ಥರು ಮತ್ತು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

    ಮಂಗಳೂರು ಡಿಸಿಸಿ ಬ್ಯಾಂಕ್‍ನ ನಿರ್ದೇಶಕ ಅಶೋಕ ಕುಮಾರ್ ಶೆಟ್ಟಿ, ಮಹೇಶ ಹೆಗ್ಡೆ ಮೊಳಹಳ್ಳಿ, ಕುಂದಾಪುರ ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್‍ನ ಅಧ್ಯಕ್ಷ ಎಂ.ಶಿವರಾಮ ಶೆಟ್ಟಿ, ಬೊಬ್ಬರ್ಯೇಶ್ವರ ದೈವಸ್ಥಾನದ ಮೊಕ್ತೇಸರ ಮಹಾಬಲ ಹೇರ್ಳೆ ಮತ್ತು ಸಂಘದ ನಿರ್ದೇಶಕರು ಇದ್ದರು.

    ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ವರದಿ ವಾಚಿಸಿದರು. ಶಾಖಾ ಸಭಾಪತಿ ಟಿ.ಮಂಜುನಾಥ ಗಿಳಿಯಾರು ಸ್ವಾಗತಿಸಿದರು. ಶಾಖಾ ವ್ಯವಸ್ಥಾಪಕ ಉಮೇಶ ವಂದಿಸಿದರು. ಅಧ್ಯಾಪಕ ಸತೀಶ್ಚಂದ್ರ ಶೆಟ್ಟಿ ಮತ್ತು ಸಿಬ್ಬಂದಿ ಶಾಲಿನಿ ಹಂದೆ ನಿರೂಪಿಸಿದರು.

  • ಬೈಂದೂರು :ದಸರಾ ಪ್ರಯುಕ್ತ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ಉದ್ಘಾಟನೆ

    ಬೈಂದೂರು :ದಸರಾ ಪ್ರಯುಕ್ತ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ಉದ್ಘಾಟನೆ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು :ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಬೈಂದೂರು ದಸರಾ ಪ್ರಯುಕ್ತ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದ ದೇವಳದ ಮಾಜಿ ಆಡಳಿತ ಧರ್ಮದರ್ಶಿಗಳಾದ ಶ್ರೀ ಚನ್ನಕೇಶವ ಉಪಾಧ್ಯಾಯ ಇವರು ಮಾತನಾಡಿ ಬೈಂದೂರಿಗೆ ತನ್ನದೇ ಆದ ಸಾಂಸ್ಕೃತಿಕ ಪರಂಪರೆ ಇದೆ ವೈವಿಧ್ಯಮಯ ಪ್ರಾಕೃತಿಕ ಸ್ಥಳಗಳನ್ನು ಹೊಂದಿರುವ ಬೈಂದೂರು ಸಾಕಷ್ಟು ಅಭಿವೃದ್ಧಿ ಹೊಂದಬೇಕಾಗಿದೆ ಈ ಸಂದರ್ಭದಲ್ಲಿ ಬೈಂದೂರು ದಸರಾ ಮೂಲಕ ಅನೇಕ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು

    ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾರದೋತ್ಸವ ಹಾಗೂ ಬೈಂದೂರು ದಸರಾ ಸಮಿತಿಯ ಅಧ್ಯಕ್ಷರಾದ ಶ್ರೀ ದೀಪಕ್ ಕುಮಾರ್ ಶೆಟ್ಟಿ ವಹಿಸಿದ್ದರು

    ಸರಕಾರಿ ಪದವಿ ಪೂರ್ವ ಕಾಲೇಜು, ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಲಿ ಮಕ್ಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ರಥಬೀದಿ ಉಪ್ಪುಂದ ಶಾಲೆಗಳ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

    ಈ ಸಂದರ್ಭದಲ್ಲಿ ಶಾರದೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ರಾಜು ಪೂಜಾರಿ ,
    ಯಡ್ತೆರೆ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರಾದ ನಾಗರಾಜ ಶೆಟ್ಟಿ ಯಡ್ತರೆ ಗ್ರಾಮ ಪಂಚಾಯಿತಿನ ಮಾಜಿ ಸದಸ್ಯರಾದ ಗಿರೀಶ್ ಬೈಂದೂರು ಆನಂದ ಶೆಟ್ಟಿ ಉದ್ಯಮಿಗಳಾದ ವಿಠ್ಠಲ ಶೆಟ್ಟಿ ನಾಕಟ್ಟೆ ಸೋಡೀತಾರ್ ಸುಬ್ರಾಯ ಶೇರುಗಾರ್ ಕಾರ್ಯಕ್ರಮದ ಪ್ರಾಯೋಜಕರಾದ ಶರತ್ ಕುಮಾರ್ ಶೆಟ್ಟಿ ಕೋಶಾಧಿಕಾರಿ ಉಮೇಶ್ ದೇವಾಡಿಗ ಕಾರ್ಯದರ್ಶಿ ರಾಜೇಶ್ ಆಚಾರ್ಯ ಉಪಸ್ಥಿತರಿದ್ದರು.

    ದೀಪಕ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳ್ನಾಡಿದರು. ಉದಯ ಆಚಾರ್ ಪ್ರಾರ್ಥಿಸಿದರು. ದಯಾನಂದ ಧನ್ಯವಾದ ಸಲ್ಲಿಸಿದರು. ಗಣಪತಿ ಹೋಬಳಿದಾರ್ ಮತ್ತು ಶ್ರೀದೇವಿ ಕಾರ್ಯಕ್ರಮ ನಿರ್ವಹಿಸಿದರು.