Category: ಸುದ್ದಿ

  • ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

    ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ : ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವೈಭವದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಸೂಚನೆ ನೀಡಿದರು.

    ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.

    ಕಾರ್ಯಕ್ರಮಕ್ಕೆ ಜನಪ್ರನಿಧಿಗಳು, ಗಣ್ಯರು ಸೇರಿದಂತೆ ಶಿಷ್ಠಾಚಾರದಂತೆ ಎಲ್ಲರನ್ನೂ ಆಹ್ವಾನಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
    ಅಂದು ಬೆಳಗ್ಗೆ 8 ಗಂಟೆಗೆ ಬೋರ್ಡ್ ಹೈಸ್ಕೂಲ್‌ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು.

    ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸುವಂತೆ ಸಲಹೆ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ನಗರಸಭೆ ಪೌರಾಯುಕ್ತ ರಾಯಪ್ಪ, ಡಿ.ಡಿ.ಪಿ.ಐ ಗಣಪತಿ ಕೆ ಹಾಗೂ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

  • ಹಂದಟ್ಟು ಮಹಿಳಾ ಬಳಗಕ್ಕೆ ರತ್ನಕೃಷ್ಣ ಆಯ್ಕೆ

    ಹಂದಟ್ಟು ಮಹಿಳಾ ಬಳಗಕ್ಕೆ ರತ್ನಕೃಷ್ಣ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಹಂದಟ್ಟು ಮಹಿಳಾ ಬಳಗ ದಾನಗುಂದು ಕೋಟ ಇದರ ನೂತನ ಪದಾಧಿಕಾರಿಗಳ ಆಯ್ಕೆ ಭಾನುವಾರ ಹಂದಟ್ಟಿನಲ್ಲಿ ನಡೆಯಿತು.

    ನೂತನ ಅಧ್ಯಕ್ಷರಾಗಿ ರತ್ನ ಕೃಷ್ಣ, ಸ್ಥಾಪಕಾಧ್ಯಕ್ಷರಾಗಿ ಪುಷ್ಪಾ.ಕೆ, ಗೌರವಾಧ್ಯಕ್ಷರಾಗಿ ಜಲಜ ಶಂಕರ್, ಉಪಾಧ್ಯಕ್ಷರಾಗಿ ಪ್ರೇಮ ರಾಜು , ಕಾರ್ಯದರ್ಶಿಯಾಗಿ ಯಶೋದಾ ,ಜೊತೆ ಕಾರ್ಯದರ್ಶಿಯಾಗಿ ಪುಷ್ಪ ನಾಗೇಶ್, ಸಂಚಾಲಕಿ ಶಕೀಲಾ ನಾಗರಾಜ್, ಖಜಾಂಚಿ ಅಶ್ವಿನಿ ಸಂದೇಶ್ ,ಜೊತೆ ಖಜಾಂಚಿ ರಾಜೇಶ್ವರಿ ಸದಾಶಿವ ಆಯ್ಕೆಯಾದರು.

  • ಪಾಂಡೇಶ್ವರ – ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿಶರನ್ನವರಾತ್ರಿ ಉತ್ಸವ

    ಪಾಂಡೇಶ್ವರ – ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿಶರನ್ನವರಾತ್ರಿ ಉತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಶ್ರೀ ರಕ್ತೇಶ್ವರಿ ದೇವಸ್ಥಾನ ಮತ್ತು ಪರಿವಾರ ದೇವಸ್ಥಾನ ಪಾಂಡೇಶ್ವರ ಸಾಸ್ತಾನ ಅ. 15ನೇ ರವಿವಾರದಿಂದ ಅ.24ನೇ ಮಂಗಳವಾರದ ತನಕ ಶ್ರೀ ಕ್ಷೇತ್ರದಲ್ಲಿ ಶರನ್ನವರಾತ್ರಿ ಕಾರ್ಯಕ್ರಮ ನಡೆಯಲಿದೆ.

    ಆ ಪ್ರಯುಕ್ತ ಅ.15ರ ರವಿವಾರ ಪ್ರಥಮ ನವರಾತ್ರಿ 22ನೇ ರವಿವಾರ ದುರ್ಗಾಷ್ಟಮಿ, 19ರಂದು ಲಲಿತಾ ಪಂಪಮಿ, 20ರಂದುಶಾರದಾ ಪೂಜೆ, 23ರಂದು ಸೋಮವಾರ ಮಹಾನವಮಿ, ದುರ್ಗಾಹೋಮ. ಮಧ್ಯಾಹ್ನ 1.00 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ,24ರಂದು ಮಂಗಳವಾರ ವಿಜಯ ದಶಮಿಯೊಂದಿಗೆ ಸಂಪನ್ನಗೊಳ್ಳಲಿದೆ ಎಂದು
    ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ

    ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪುರಾಣ ಪ್ರಸಿದ್ಧ ಕೋಟದ ಶ್ರೀ ಕ್ಷೇತ್ರ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನ ಇಲ್ಲಿ ಇದೇ ಬರುವ ಅ.15ರಿಂದ 24ರವರೆಗೆ ಶರನ್ನವರಾತ್ರಿಯ ಅಂಗವಾಗಿ ಪ್ರತಿದಿನ ಚಂಡಿಕಾ ಸಪ್ತಶತಿ ಪಾರಾಯಣ, ದುರ್ಗಾಹೋಮವು ಸಕಲ ವೈದಿಕ, ಪ್ರತಿದಿನ ಅಪರಾಹ್ನ 12:30ಕ್ಕೆ ಮಹಾಪೂಜೆ ನಂತರ ಅನ್ನಸಂತರ್ಪಣೆ,ಸಂಜೆ ಭಜನೆ ಹಾಗೂ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಶ್ರೀ ದೇಗುಲದ ಅಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಬೀಜಾಡಿ ಮೀನುಗಾರರ ಸಹಕಾರಿ ಸಂಘಕ್ಕೆ ಮೀನುಗಾರಿಕಾ ಸಚಿವರಾದ ಮಂಕಾಳ್.ಎಸ್.ವೈದ್ಯ ಭೇಟಿ

    ಬೀಜಾಡಿ ಮೀನುಗಾರರ ಸಹಕಾರಿ ಸಂಘಕ್ಕೆ ಮೀನುಗಾರಿಕಾ ಸಚಿವರಾದ ಮಂಕಾಳ್.ಎಸ್.ವೈದ್ಯ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಮೀನುಗಾರಿಕಾ ಸಚಿವರಾದ ಮಂಕಾಳ್. ಎಸ್.ವೈದ್ಯ ಬೀಜಾಡಿ ಮೀನುಗಾರರ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಸಂಘದ ಕಾರ್ಯಚಟುವಟಿಕೆಯನ್ನು ಪರಿಶೀಲಿಸಿ ಸಂಘದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮಾತ್ರವಲ್ಲದೆ ಮೀನುಗಾರರ ಬೇಡಿಕೆ ಮತ್ತು ಕುಂದುಕೊರತೆ, ಮೀನುಗಾರಿಕೆ ಇಲಾಖೆಯಿಂದ ಬರತಕ್ಕ ಬಾಕಿಯಿರುವ ಅನುದಾನದ ಬಗ್ಗೆ ಸಚಿವರಿಗೆ ಮನವರಿಕೆ ಮಾಡಲಾಯಿತು. ಈ ಬಗ್ಗೆ ಸಚಿವರು ಸ್ಪಂದನೆ ನೀಡಿ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.

    ಸಭೆಯಲ್ಲಿ ಮೀನುಗಾರಿಕಾ ನಿರ್ದೇಶಕರಾದ ದಿನೇಶ್ ಕುಮಾರ್ ಕಳ್ಳೇರ್, ಮೀನುಗಾರಿಕಾ ಜಂಟಿ ನಿರ್ದೇಶಕರಾದ ವಿವೇಕ್.ಆರ್, ಕೆ.ಎಫ್.ಡಿ.ಸಿ ಆಡಳಿತ ನಿರ್ದೇಶಕರಾದ ಗಣೇಶ್.ಕೆ ಮತ್ತು ಮೀನುಗಾರಿಕಾ ಸಹಾಯಕ ನಿರ್ದೇಶಕರಾದ ಸುಮಲತಾ, ಕೆ.ಎಫ್.ಡಿ.ಸಿ ಮಾಜಿ ಅಧ್ಯಕ್ಷರಾದ ಬಿ.ಹೆರಿಯಣ್ಣ ಚಾತ್ರಬೆಟ್ಟು ಬೀಜಾಡಿ, ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಿ.ಪ್ರಕಾಶ್.ಜಿ.ಪೂಜಾರಿ ಮತ್ತು ಮೀನುಗಾರರ ಸಮಾಜದ ಮುಖಂಡರು, ಮತ್ತು ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

    ಸಂಘದ ಅಧ್ಯಕ್ಷರಾದ ಬಿ.ಮಂಜುನಾಥ ಕುಂದರ್ ಚಾತ್ರಬೆಟ್ಟು ಸಚಿವರನ್ನು ಸ್ವಾಗತಿಸಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ರಮೇಶ್ ಕಾಂಚನ್ ಧನ್ಯವಾದ ಗೈದರು.

  • ಬೈಂದೂರು :ಬಿಜೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರಕ್ಕೆ ಚಾಲನೆ

    ಬೈಂದೂರು :ಬಿಜೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರಕ್ಕೆ ಚಾಲನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: “ಸಮೃದ್ಧ ಬೈಂದೂರು”ಯೋಜನೆಯ ಮೊದಲ ಕಾರ್ಯಕ್ರಮ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ವತಿಯಿಂದ ಬೈಂದೂರು ತಾಲೂಕಿನ ಬಿಜೂರು ಸರ್ಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯ, ಒಳಗೊಂಡ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಶಾಸಕ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿ, ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾoತರಿಸಿದರು ಹಾಗೂ ಫೌಂಡೇಶನ್ ವತಿಯಿಂದ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು

    ನಂತರ ಮಾತನಾಡಿದ ಶಾಸಕರು ತಮ್ಮ ಪರಿಕಲ್ಪನೆಯ ಸಮೃದ್ಧ ಬೈಂದೂರು ಯೋಜನೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮಾಡಲಾದ ತ್ರೀ ಹಂಡ್ರೆಡ್ ಟ್ರೀಸ್ ಯೋಜನೆ ದಾನಿಗಳು, ಊರವರು, ಎಸ್.ಡಿ.ಎಂ.ಸಿ ಮತ್ತು ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು ಎಂದರು.

    ಸರ್ಕಾರಿ ಶಾಲೆ ಮಕ್ಕಳಿಗೆ ಓದಲು ಕಲಿಕಾ ಸ್ನೇಹಿ ವಾತಾವರಣ ನಿರ್ಮಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಮಹತ್ವಾಕಾಂಕ್ಷೆಯಿಂದ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ”ವನ್ನು ಸ್ಥಾಪಿಸಲಾಗಿದೆ ಎಂದು ಸ್ವಯಂಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ ಶೆಟ್ಟಿ ಜಡ್ಕಲ್ ತಿಳಿಸಿದರು.

    ಎಸ್.ಡಿ.ಎಂ.ಸಿ ಅಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಸ್ವಯಂಸ್ಪೂರ್ತಿ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.

  • ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ತೇಜಸ್ವಿ ಮಿಥುನ್ ಆಯ್ಕೆ

    ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ತೇಜಸ್ವಿ ಮಿಥುನ್ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ :ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಗ್ರಾಮೀಣ ಐ‌.ಟಿ. ಕ್ವಿಜ್ ನಲ್ಲಿ ಸ್ಪರ್ಧಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ ವಿದ್ಯಾರ್ಥಿ ತೇಜಸ್ವಿ ಮಿಥುನ್ ಜಿಲ್ಲಾ ಮಟ್ಟದಲ್ಲಿ ವಿಜೇತನಾಗಿ ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಆಯ್ಕೆ ಆಗಿರುತ್ತಾನೆ.

    ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

  • ಕೋಟ :ಪಂಚವರ್ಣ ಸಂಸ್ಥೆಯ 181ನೇ ವಾರದ ಅಭಿಯಾನ – ಪಾರಂಪಳ್ಳಿ ಸಮುದ್ರ ಕಿನಾರ ಸ್ವಚ್ಛತೆ

    ಕೋಟ :ಪಂಚವರ್ಣ ಸಂಸ್ಥೆಯ 181ನೇ ವಾರದ ಅಭಿಯಾನ – ಪಾರಂಪಳ್ಳಿ ಸಮುದ್ರ ಕಿನಾರ ಸ್ವಚ್ಛತೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಹಾಗೂ ಸಾಲಿಗ್ರಾಮ ಪಟ್ಟಣಪಂಚಾಯತ್, ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಇವರ ನೇತ್ರತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಮಣೂರು ಫ್ರೆಂಡ್ಸ್, ಯಕ್ಷಸೌರಭ ಕಲಾರಂಗ ಕೋಟ ಇವರುಗಳ ಸಹಯೋಗದೊಂದಿಗೆ 181ನೇ ವಾರದ ಸ್ವಚ್ಚತಾ ಅಭಿಯಾನದ ಪ್ರಯುಕ್ತ ಸಾಲಿಗ್ರಾಮ ಪ.ಪಂ ವ್ಯಾಪ್ತಿಯ ಪಾರಂಪಳ್ಳಿ ಪಡುಕರೆ ಬೀಚ್ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.
    ಕಾರ್ಯಕ್ರಮದಲ್ಲಿ 35ಕ್ಕೂ ಅಧಿಕ ಚೀಲ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು.

    ಸಾಲಿಗ್ರಾಮ ಪಟ್ಟಣಪಂಚಾಯತ್ ಆರೋಗ್ಯ ನೀರಿಕ್ಷಕಿ ಮಮತಾ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಕಾರ್ಯದರ್ಶಿ ಸುಧೀಂದ್ರ ಜೋಗಿ, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ವಸಂತಿ, ಕಾರ್ಯದರ್ಶಿ ಲಲಿತಾ ಪೂಜಾರಿ, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್, ವಿಪ್ರ ಮಹಿಳಾ ಬಳಗದ ಸುಜಾತ ಬಾಯರಿ, ಹಂದಟ್ಟು ಮಹಿಳಾ ಬಳಗದ ಸುಜಾತ , ವಿನ್ ಲೈಟ್ ಸ್ಪೋಟ್ಸ್ 9 ಕ್ಲಬ್ ಕಾರ್ಯದರ್ಶಿ ಸುಧಾಕರ್ ಪೂಜಾರಿ , ಪ.ಪಂ ಪೌರಕಾರ್ಮಿಕರು,ಮತ್ತಿತರರು ಇದ್ದರು.ಕಾರ್ಯಕ್ರಮವನ್ನು ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

    ಸಾಲಿಗ್ರಾಮ ಪಟ್ಟಣಪಂಚಾಯತ್ ಪ್ಲಾಸ್ಟಿಕ್ ಇನ್ನಿತ ತ್ಯಾಜ್ಯಗಳ ವಾಹನ ಹಾಗೂ ಅದರ ನಿರ್ವಹಣೆಗೈಯಿತು.

  • ಕೋಟ- ಯಕ್ಷಗುರು ಪ್ರಸಾದ್ ಕುಮಾರ್ ಮೊಗೆಬೆಟ್ಟು ಯಕ್ಷರಂಗದಲ್ಲಿ 25 ಸಂವತ್ಸರದ ಯಕ್ಷರಜತ ಪರ್ವ ಆಮಂತ್ರಣ ಬಿಡುಗಡೆ

    ಕೋಟ- ಯಕ್ಷಗುರು ಪ್ರಸಾದ್ ಕುಮಾರ್ ಮೊಗೆಬೆಟ್ಟು ಯಕ್ಷರಂಗದಲ್ಲಿ 25 ಸಂವತ್ಸರದ ಯಕ್ಷರಜತ ಪರ್ವ ಆಮಂತ್ರಣ ಬಿಡುಗಡೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ : ಯಕ್ಷಗುರು ಪ್ರಸಾದ್ ಕುಮಾರ್ ಮೊಗೆಬೆಟ್ಟು ಇವರ ಯಕ್ಷರಂಗದಲ್ಲಿ 25 ಸಂವತ್ಸರ ಕಳೆದ ಹಿನ್ನಲ್ಲೆಯಲ್ಲಿ ಯಕ್ಷ ರಜತ ಪರ್ವ ಎನ್ನುವ ಶೀರ್ಷಿಕೆಯಡಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಹಿನ್ನಲ್ಲೆಯಲ್ಲಿ ಇದರ ಆಮಂತ್ರಣ ಬಿಡುಗೆಡೆ ಸಮಾರಂಭ ಶನಿವಾರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ಸನ್ನಿದಾನದಲ್ಲಿ ನಡೆಯಿತು.

    ರಜತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಆನಂದ್ ಸಿ ಕುಂದರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಯಕ್ಷರಂಗದ ಸವ್ಯಸಾಚಿ ಗುರುಗಳಾಗಿ ಸೇವೆ ಸಲ್ಲಿಸಿದ ಪ್ರಸಾದ್ ಕುಮಾರ್ ಮೊಗೆಬೆಟ್ಟು ಜೀವನವೆ ಕಲಾಕೇತ್ರಕ್ಕೆ ಅರ್ಪಿಸಿಕೊಂಡಿದ್ದಾರೆ. ಸಾಕಷ್ಟು ಶಿಷ್ಯವರ್ಗ,ಕಲಾತಂಡಗಳನ್ನು ಹುಟ್ಡುಹಾಕಿ ಕಲಾ ಕ್ಷೇತ್ರಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡಿದ್ದಾರೆ ಇವರ ಯಕ್ಷರಂಗದ ಬದುಕಿನ ಆಯಾಮಕ್ಕೆ ಹೊಸ ಮೆರುಗು ನೀಡಲು ಶಿಷ್ಯ ವೃಂದ ಅಭಿಮಾನಿಗಳು ಅಣಿಯಾಗಿರುವುದು ಪ್ರಶಂಸನೀಯ ಎಂದರು.
    ಈ ಸಂದರ್ಭದಲ್ಲಿ ಪೋಸ್ಟರ್ ಅನ್ನು ಯಕ್ಷಗರು ಕೃಷ್ಣಮೂರ್ತಿ ಉರಾಳ ಅನಾವರಣಗೈದರು,
    ಸಮಿತಿಯ ಕಾರ್ಯಾಧ್ಯಕ್ಷ ಸತೀಶ್ ಕುಮಾರ್, ಯಕ್ಷಕಲಾವಿದ ಸುರೇಶ್ ಬಂಗೇರ, ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಭಾಕರ್ ಮೆಂಡನ್, ಮಾಜಿ ಅಧ್ಯಕ್ಷ ಅಣ್ಣಪ್ಪ ಕುಂದರ್ ಕೋಡಿ, ರಜತ ಮಹೋತ್ಸವ ಸಮಿತಿ ಸಂಚಾಲಕ ರಾಘವೇಂದ್ರ ಕರ್ಕೇರ , ಯಕ್ಷಸೌರಭ ಕಲಾರಂಗ ಕೋಟ, ಮಯ್ಯ ಯಕ್ಷ ಶ್ರೀ ಪ್ರತಿಷ್ಠಾನ ಅಣಲಾಡಿ ಮಠ ಐರೋಡಿ, ಸ್ವರ್ಣ ನೂಪುರ ಯಕ್ಷಕಲಾ ಸಂಘ ಕುಂದಾಪುರ,ವಡ್ಡರ್ಸೆ ಯಕ್ಷಗಾನ ಕಲಾರಂಗ ,ಯಡಾಡಿ ಯಕ್ಷಗಾನ ಕಲಾರಂಗ, ಕೆದೂರು ಯಕ್ಷಗಾನ ಕಲಾರಂಗ,,ನಮ್ಮ ಭೂಮಿ ಯಕ್ಷಗಾನ ಕಲಾರಂಗ ಕುಂದಾಪುರ ಇನ್ನಿತರ ಯಕ್ಷಗಾನ ಕಲಾಸಂಘದ ಪದಾಧಿಕಾರಿಗಳು ,ಗಣ್ಯರು ಉಪಸ್ಥಿತರಿದ್ದರು.
    ಸಮಿತಿಯ ಪ್ರಧಾನಕಾರ್ಯದರ್ಶಿ ಶ್ರೀನಾಥ್ ಉರಾಳ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

  • ಕುಂದಾಪುರ: ಉತ್ತಮ ಶಿಕ್ಷಣದಿಂದ ಸಮೃದ್ಧ ಸಮಾಜ ನಿರ್ಮಾಣ – ಸಚಿವ ಮಾಂಕಾಳ್ ವೈದ್ಯ

    ಕುಂದಾಪುರ: ಉತ್ತಮ ಶಿಕ್ಷಣದಿಂದ ಸಮೃದ್ಧ ಸಮಾಜ ನಿರ್ಮಾಣ – ಸಚಿವ ಮಾಂಕಾಳ್ ವೈದ್ಯ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಶಿಕ್ಷಣ ದೊರಕಿದರೆ ಸಮೃದ್ಧ ಸಮಾಜ ನಿರ್ಮಾಣ ಸಾಧ್ಯ ಎಂದು ರಾಜ್ಯ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ಎಸ್.ವೈದ್ಯ ಹೇಳಿದರು.

    ಅವರು ಭಾನುವಾರ ಕೋಟೇಶ್ವರದ ಕಮಲಮ್ಮ ಸರ್ವೋತ್ತಮ ಬುದ್ಯ ಕಲ್ಯಾಣ ಮಂಟಪದಲ್ಲಿ ನಡೆದ ಬೀಜಾಡಿ ಮೀನುಗಾರರ ಸಹಕಾರಿ ಸಂಘದಿಂದ ಪ್ರತಿಭಾ ಪುರಸ್ಕಾರ, ಮಹಿಳಾ ಮೀನುಗಾರ ಸ್ವಸಹಾಯ ಗುಂಪುಗಳಿಗೆ ಸಾಲ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಮೀನುಗಾರಿಕೆ ಮಾಡುವುದೆಂದರೆ ಅವರು ಬಡವರು ಅಂತಲೇ ಅರ್ಥ. ಅದರಲ್ಲೂ ಮಳೆಗಾಲದಲ್ಲಿ ಮೀನುಗಾರಿಕೆ ನಡೆಸುತ್ತಾರೆಂದರೆ ಅವರು ಕಡುಬಡವರೆಂದೇ ಅರ್ಥ. ಆ ನಿಟಿನಲ್ಲಿ ರಾಜ್ಯ ಸರಕಾರದ ಪರಿಹಾರ ಧನವನ್ನು ಅರ್ಹ ಕುಟುಂಬಕ್ಕೆ ಪ್ರಮಾಣಿಕವಾಗಿ ತಲುಪಿಸುವ ಕೆಲಸ ಮಾಡುತ್ತೇನೆ. ಕೇಂದ್ರ ಸರ್ಕಾರದಿಂದಲೂ 5 ಲಕ್ಷ ಪರಿಹಾರ ಧನ ಬಿಡುಗಡೆಯಾಗುತ್ತದೆಯಾದರೂ ಇದುವರೆಗೆ ಅದು ಫಲಾನುಭವಿಗಳಿಗೆ ತಲುಪಿಲ್ಲ. ಇದನ್ನು ಪ್ರಶ್ನಿಸಬೇಕಾದ ಸಂಸದರು ಮೌನವಾಗಿದ್ದಾರೆ ಎಂದರು.

    ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಬಿ. ಮಂಜುನಾಥ ಕುಂದರ್ ಚಾತ್ರಬೆಟ್ಟು ಅಧ್ಯಕ್ಷತೆ ವಹಿಸಿದ್ದರು.

    ವಿಶೇಷವಾಗಿ ಈ ಸಂದರ್ಭದಲ್ಲಿ ಸಚಿವರನ್ನು ಹಾಗೂ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

    ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಮಹಿಳಾ ಮೀನುಗಾರ ಸ್ವಸಹಾಯ ಗುಂಪುಗಳಿಗೆ ಸಾಲ ವಿತರಿಸಿದರು. ಉಡುಪಿ ಶಾಸಕ ಯಶಪಾಲ್ ಸುವರ್ಣ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ಕೋಟ ಗೀತಾನಂದ ಟ್ರಸ್ಟ್ ಪ್ರರ್ವತಕ ಆನಂದ ಸಿ.ಕುಂದರ್ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

    ಉಡುಪಿ ಮೀನುಗಾರಿಕಾ ಜಂಟಿ ನಿರ್ದೇಶಕ ವಿವೇಕ್ ಆರ್, ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಎ.ಆರ್. ಅರುಣ್ ಕುಮಾರ್ ಎಸ್.ವಿ., ಬೀಜಾಡಿ ಗ್ರಾ.ಪಂ.ಅಧ್ಯಕ್ಷ ಪ್ರಕಾಶ್ ಜಿ.ಪೂಜಾರಿ, ಕೋಟೇಶ್ವರ ವ್ಯವಸಾಯ ಸೇ.ಸ.ಸಂ.ನಿ. ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಗೋಪಾಡಿ ಶಾಖೆಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್ ಪೈ, ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

    ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ತೋಟದಬೆಟ್ಟು ಕೊಮೆ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ್ ಕಾಂಚನ್ ಪ್ರಾಸ್ತಾವಿಸಿದರು. ಅಣ್ಣಯ್ಯ ಪುತ್ರನ್ ವಂದಿಸಿದರು, ಚಂದ್ರಶೇಖರ್ ಬೀಜಾಡಿ ನಿರೂಪಿಸಿದರು.