Category: ಸುದ್ದಿ

  • ಕೋಟ :ನಾಡೋಜ ಜಿ.ಶಂಕರ್ ಸಮಾಜ ಕಟ್ಟುವ ಕಾಯಕ ಜೀವಿ- ಆನಂದ್ ಸಿ. ಕುಂದರ್

    ಕೋಟ :ನಾಡೋಜ ಜಿ.ಶಂಕರ್ ಸಮಾಜ ಕಟ್ಟುವ ಕಾಯಕ ಜೀವಿ- ಆನಂದ್ ಸಿ. ಕುಂದರ್

    ನಾಡೋಜ ಡಾ. ಜಿ.ಶಂಕರ್ 68ನೇ ಹುಟ್ಟುಹಬ್ಬ ಆಚರಣೆ

    ಕುಂದಾಪುರ: ನಾಡೋಜ ಡಾ.ಜಿ ಶಂಕರ್ ಸಮಾಜ ಕಟ್ಟುವ ಹಾಗೂ ಕಳಕಳಿಯುಳ್ಳ ಕಾಯಕಜೀವಿ ಅವರ ಜನ್ಮದಿನಾಚರಣೆ ಅರ್ಥಪೂರ್ಣ ಆಚರಣೆಯಾಗಿಸಿರುವುದು ಶ್ಲಾಘನೀಯ ಎಂದು ಕೋಟದ ಧರ್ಮರತ್ನಾಕರ ಆನಂದ್ ಸಿ ಕುಂದರ್ ಹೇಳಿದರು.

    ಕೋಟ ಮೊಗವೀರ ಯುವ ಸಂಘದ ಆಶ್ರಯದಲ್ಲಿ ನಾಡೋಜ ಡಾ.ಜಿ ಶಂಕರ್‍ರವರ 68ನೇ ಜನ್ಮದಿನೋತ್ಸವದ ಹಿನ್ನಲ್ಲೆಯಲ್ಲಿ ಕೋಟದ ಗುಳ್ಳಾಡಿ ವಿಠ್ಠಲ ಪ್ರಭು ಅನಾಥಾಶ್ರಮದಲ್ಲಿ ಹಣ್ಣು ಹಂಪಲು ವಿತರಿಸಿ ಮಾತನಾಡಿ ಸದಾ ಸಮಾಜದ ಬಗ್ಗೆ ತುಡಿತ ಹೊಂದಿದ ನಾಡೋಜ ಜಿ.ಶಂಕರ್‍ರವರು ಹತ್ತು ಹಲವು ಕಾರ್ಯಗಳನ್ನು ಈ ಸಮಾಜಕ್ಕೆ ಧಾರೆ ಎರೆದಿದ್ದಾರೆ. ಆರೋಗ್ಯ ಕಾರ್ಡ ಯೋಜನೆ, ಸಾಮೂಹಿಕ ವಿವಾಹ ಸೇರಿದಂತೆ ಸಾಕಷ್ಟು ಕಾರ್ಯಕ್ರಮಗಳಲ್ಲಿ ಜನಮನ ವಿಡಿಯುವಂತ್ತದ್ದು ಅಂತಹ ವ್ಯಕ್ತಿಯ ಜನ್ಮದಿನೋತ್ಸವ ಸಮುದಾಯ ಸಂಘಟನೆ ಅನಾಥಾಶ್ರಮದಲ್ಲಿ ಕಳೆಯುವ ಕಾರ್ಯ ಪ್ರಶಂಸನೀಯ ಎಂದು ಅಭಿಪ್ರಾಯಪಟ್ಟರು.

    ಇದೇ ವೇಳೆ ಕೇಕ್ ಕತ್ತರಿಸಿ ನಾಡೋಜರಿಗೆ ಶುಭಾಶಯಗಳನ್ನು ಸಲ್ಲಿಸಲಾಯಿತು.

    ಕೋಟ ಘಟಕದ ಅಧ್ಯಕ್ಷ ರಂಜಿತ್ ಕುಮಾರ್ ಅಧ್ಯಕ್ಷತೆ ವಹಿಸಿ ವಂದಿಸಿದರು.

    ಮೊಗವೀಯ ಯುವ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ, ಪ್ರಧಾನ ಕಾರ್ಯದರ್ಶಿ ರವೀಶ್ ಶ್ರೀಯಾನ್ ಕೊರವಾಡಿ, ನಿಕಟ ಪೂರ್ವ ಅಧ್ಯಕ್ಷ ಶಿವಾರಾಮ ಕೆ ಎಮ್, ಮಾಜಿ ಜಿಲ್ಲಾಧ್ಯಕ್ಷ ಸಂಜೀವ್ ಎಮ್ ಎಸ್, ಜಿಲ್ಲಾ ಘಟಕದ ಪ್ರಮುಖರಾದ ಕೃಷ್ಣಮೂರ್ತಿ ಮರಕಾಲ,ಮಾಜಿ ಅಧ್ಯಕ್ಷ ರಮೇಶ್ ವಿ ಕುಂದರ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಡಿ , ಅಶೋಕ್ ತೆಕ್ಕಟ್ಟೆ ,ಗುಲಾಬಿ ದೇವಾದಾಸ್ ಬಂಗೇರ ಮಹಿಳಾ ಅಧ್ಯಕ್ಷ ಲಲಿತಾ ಪಡುಕರೆ ಪದಾಧಿಕಾರಿಗಳಾದ ದೇವಾದಾಸ ಕಾಂಚನ್ , ರಾಮ ಬಂಗೇರ , ಮಹೇಶ್ ಕಂಬಳಗದ್ದೆ , ಸಂತೋಷ ಮಣೂರು , ಅಭಿಜಿತ್ ಕಾಂಚನ್ ಬಾರಿಕೆರೆ, ಸುಮತಿ ಪಡುಕರೆ ,ನಂದಿನಿ ಗಿಳಿಯಾರು ಜಿಲ್ಲಾ ಸಮಿತಿ ಸದಸ್ಯರು ಮತ್ತು ಕೋಟ ಘಟಕ ಪದಾಧಿಕಾರಿಗಳು ಮತ್ತು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
    ಕಾರ್ಯದರ್ಶಿ ಪ್ರವೀಣ್ ಕುಂದರ್ ಕಾರ್ಯಕ್ರಮ ನಿರೂಪಿಸಿದರು.

  • ಹೆಮ್ಮಾಡಿ :ತಾಲೂಕು ಮಟ್ಟದ ಸಾಹಿತ್ಯಕ ಸ್ಪರ್ಧೆಗಳಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    ಹೆಮ್ಮಾಡಿ :ತಾಲೂಕು ಮಟ್ಟದ ಸಾಹಿತ್ಯಕ ಸ್ಪರ್ಧೆಗಳಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ: ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯವರು ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಆಯೋಜಿಸಿದ ತಾಲೂಕು ಮಟ್ಟದ ವಿವಿಧ ಸಾಹಿತ್ಯಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ವಿಭಾಗಗಳಲ್ಲಿ ಸಾಧನೆ ಮೆರೆದಿದ್ದಾರೆ.

    ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವರ್ಷಾ ರವಿಶಂಕರ್ ಪ್ರಥಮ ಸ್ಥಾನ, ರಸಪ್ರಶ್ನೆ(ಕ್ವಿಜ್) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ಗಿರೀಶ್ ಪೈ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಐಶ್ವರ್ಯ ವೈದ್ಯ ದ್ವಿತೀಯ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವೈಷ್ಣವಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.

    ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

  • ಕೋಟ :ಕ್ರೀಡಾ ಚಟುವಟಿಕೆಯಲ್ಲಿ ದೈಹಿಕ ಶಿಕ್ಷಕರ ಪಾತ್ರ ಗಣನೀಯವಾದದ್ದು – ಆನಂದ್ ಸಿ ಕುಂದರ್

    ಕೋಟ :ಕ್ರೀಡಾ ಚಟುವಟಿಕೆಯಲ್ಲಿ ದೈಹಿಕ ಶಿಕ್ಷಕರ ಪಾತ್ರ ಗಣನೀಯವಾದದ್ದು – ಆನಂದ್ ಸಿ ಕುಂದರ್

    ಮಣೂಡು ಪಡುಕರೆ ಸಂಯುಕ್ತ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ

    ಕುಂದಾಪುರ ಮಿರರ್ ‌ಸುದ್ದಿ…
    ಕೋಟ: ಉಡುಪಿ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ವಲಯ, ಸಂಯುಕ್ತ ಸರಕಾರಿ ಪ್ರೌಢಶಾಲೆ ಪ್ರಾಥಮಿಕ ವಿಭಾಗ ಮಣೂರು ಪಡುಕರೆ ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ -2023-24 ಕಾರ್ಯಕ್ರಮ ಸರಕಾರಿ ಮಣೂರು ಸಂಯುಕ್ತ ಪ್ರೌಢಶಾಲೆ ನಡೆಯಿತು.

    ಗೀತಾನಂದ ಫೌಂಡೇಶನ್ ಮಣೂರು ಇದರ ಪ್ರವರ್ತಕ ಆನಂದ್ ಸಿ ಕುಂದರ್ ಧ್ವಜಾವಂದನೆ ಸ್ವೀಕರಿಸಿ ಕಾರ್ಯಕ್ರವನ್ನು ಉದ್ಘಾಟಿಸಿ ಕ್ರೀಡಾ ಚಟುವಟಿಗಳಲ್ಲಿ ದೈಹಿಕ ಶಿಕ್ಷಕರ ಪಾತ್ರ ಗಣನೀಯವಾದದ್ದು ಅಂತಯೇ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಬೇಕಾದರೆ ಅಂತಹ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರ ಕೊರತೆ ಎದುರಾಗಬಾರದು ನಮ್ಮ ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಸಾಕಷ್ಟು ಏರುಗತಿಯನ್ನು ಕಾಣುತ್ತಿದೆ ಆದರೆ ಶಿಕ್ಷಕರ ಮಟ್ಟ ,ದೈಹಿಕ ಶಿಕ್ಷಕ ಹುದ್ದೆ ಭರ್ತಿ ಶಿಕ್ಷಕ ಇಲಾಖೆ ಅಥವಾ ಸರಕಾರ ನಿರಾಸಕ್ತಿ ತೊರುತ್ತಿವೆ ಇದರ ಬಗ್ಗೆ ಸಾಕಷ್ಟು ಒತ್ತಡಗಳನ್ನು ಹೇರಲಾಗಿದೆ. ಖಾಯಂ ದೈಹಿಕ ಶಿಕ್ಷಕರ ಬಗ್ಗೆ ಇಲಾಖೆ ಕಣ್ಣಾಯಿಸಬೇಕು ಎಂದು ಇಲಾಖಾಧಿಕಾರಿಗಳಲ್ಲಿ ಮನವಿ ಇತ್ತರು.ಗ್ರಾಮೀಣ ಭಾಗಗಳಲ್ಲಿ ಸಾಕಷ್ಟು ಕ್ರೀಡಾ ಪ್ರತಿಭೆಗಳಿವೆ ಅವುಗಳನ್ನು ಹೊರಗೆಡವಲು ಇಂಥಹ ಕ್ರೀಡಾ ಕಾರ್ಯಕ್ರಮಗಳು ಸಹಕಾರಿಗಲಿದೆ ಎಂದು ಅಭಿಪ್ರಾಯಪಟ್ಟರು.

    ಕ್ರೀಡಾಜ್ಯೋತಿಯನ್ನು ಕೋಟ ಆರಕ್ಷಕ ಠಾಣಾಧಿಕಾರಿ ಶಂಭು ಲಿಂಗಯ್ಯ ಬೆಳಗಿಸಿದರು.

    ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ ತಿಮ್ಮ ಪೂಜಾರಿ ಧ್ವಜಾರೋಹಣ ನೆರವೆರಿಸಿದರು. ವಿದ್ಯಾರ್ಥಿಗಳಿಂದ ಕ್ರೀಡಾ ಪಥಸಂಚಲ ನಡೆಯಿತು.

    ಮುಖ್ಯ ಅತಿಥಿಗಳಾಗಿ ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ, ಲಕ್ಷ್ಮೀ ಸೋಮಬಂಗೇರ ಸ.ಪ್ರ.ಕಾಲೇಜಿನ ಪ್ರಾಂಶುಪಾಲೆ ಡಾ.ಸುನಿತಾ, ಕರ್ನಾಟಕ ಪ್ರಾಥಮಿಕ ಶಿಕ್ಷಕರ ಸಂಘದ ಬ್ರಹ್ಮಾವರ ತಾಲೂಕು ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಬ್ರಹ್ಮಾವರ ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ,ತಾಲೂಕು ದೈಹಿಕ ಪರಿವೀಕ್ಷಕಿ ಪದ್ಮಾವತಿ, ಕ್ಲಸ್ಟರ್ ಮಟ್ಟದ ಸಿಆರ್‍ಪಿ ಸವಿತಾ, ಅಮೇಚೂರ್ ಕಬ್ಬಡಿ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ,ಸಂಯುಕ್ರ ಪ್ರೌಢಶಾಲಾ ಮುಖ್ಯ ಶಿಕ್ಷಕ ನಿರಂಜನ್ ನಾಯಕ್,ಶಾಲಾ ಎಸ್‍ಡಿಎಂಸಿ ಪ್ರಾಥಮಿಕ ವಿಭಾಗದ ಅಧ್ಯಕ್ಷ ನಾಗರಾಜ್,ಪ್ರೌಢಶಾಲಾ ವಿಭಾಗದ ಅಧ್ಯಕ್ಷ ಜಯರಾಮ್ ಶೆಟ್ಟಿ ,ಪಿಯುಸಿ ವಿಭಾಗದ ಪ್ರಾಂಶುಪಾಲ ಡೆನಿಸ್ ಬಾಂಝಿ,ವಾಹನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್ ,ಜಿಲ್ಲಾ ದೈಹಿಕ ಶಿಕ್ಷಣ ಪರೀವಿಕ್ಷಣಾಧಿಕಾರಿ ಗೋಪಾಲ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸೇಸು ಟೀಚರ್ ಸ್ವಾಗತಿಸಿದರು.
    ಕಾರ್ಯಕ್ರಮ ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ, ಕೃಷ್ಣ ಆಚಾರ್ ನಿರೂಪಿಸಿದರು. ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕ ನಾರಾಯಣ ಮೊಗವೀರ ವಂದಿಸಿದರು.

  • ಕೋಟ :ಬೆಳೆಸಿದ ಮಕ್ಕಳನ್ನು ಬಳಸಿ, ತೊಡಗಿಸಿಕೊಂಡರೆ ಅದ್ಭುತ ಪ್ರತಿಭೆ ಅನಾವರಣ ಸಾಧ್ಯ – ನರೇಂದ್ರ ಕುಮಾರ್ ಕೋಟ

    ಕೋಟ :ಬೆಳೆಸಿದ ಮಕ್ಕಳನ್ನು ಬಳಸಿ, ತೊಡಗಿಸಿಕೊಂಡರೆ ಅದ್ಭುತ ಪ್ರತಿಭೆ ಅನಾವರಣ ಸಾಧ್ಯ – ನರೇಂದ್ರ ಕುಮಾರ್ ಕೋಟ

    ಅರ್ಥಾಂಕುರದಲ್ಲಿ ನರೇಂದ್ರಕುಮಾರ್‍ರಿಗೆ ಅಭಿಮಾನದ ಸಮ್ಮಾನ

    ಕೋಟ: ವ್ಯಕ್ತಿ ಸಮಾಜಮುಖಿಯಾಗಿ ಬೆಳೆಯಬೇಕು. ಪ್ರತಿಭೆ ನಿಂತ ನೀರಾಗಬಾರದು. ಅವಕಾಶ ಪಡೆದು ಇತರರಿಗೆ ಅವಕಾಶ ನೀಡುವ ಸಲುವಾಗಿ ಸದಾ ಚಿಂತಿಸುವ ನರೇಂದ್ರ ಕುಮಾರ್ ಹತ್ತು ಹಲವು ಕಾರ್ಯಕ್ರಮವನ್ನು ಸಂಯೋಜಿಸಿ ಸೈ ಎನಿಸಿಕೊಂಡವರು. ಜೇಸಿ ತರಬೇತುದಾರರಾಗಿ, ನಿರೂಪಕರಾಗಿ, ಸಂಘಟಕರಾಗಿ, ಬರಹಗಾರರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಪರಿಚಾರಕರಾಗಿ ಗುರುತಿಸಿಕೊಂಡು ಆದರ್ಶ ಶಿಕ್ಷಕರಾಗಿ ವಿದ್ಯಾರ್ಥಿಗಳನ್ನು ರೂಪಿಸಿ ಇದೀಗ ಕರ್ನಾಟಕ ರಾಜ್ಯ ಶಿಕ್ಷಕ ಪ್ರಶಸ್ತಿಗೆ ಭಾಜನರಾದದ್ದು ಸಂಸ್ಥೆಯ ನಿಕಟವರ್ತಿಗಳಾಗಿ ಸಂಸ್ಥೆಗೆ ಹೆಮ್ಮೆ ತಂದ ವಿಶಯ. ಇವರನ್ನು ಸಮ್ಮಾನಿಸಿ ಧನ್ಯತೆಯನ್ನು ಹೊಂದಿದೆ ಎಂದು ಯಕ್ಷಗುರುಗಳಾದ ಸೀತಾರಾಮ ಶೆಟ್ಟಿ ಕೊೈಕೂರು ಅಭಿನಂದನಾ ಮಾತುಗಳನ್ನಾಡಿದರು.

    ತೆಕ್ಕಟ್ಟೆ ಹಯಗ್ರೀವದಲ್ಲಿ ಅ.1ರಂದು ಯಶಸ್ವೀ ಕಲಾವೃಂದ ಕೊಮೆ ತಕ್ಕಟ್ಟೆ ಹಾಗೂ ರೋಟರಿ ಕ್ಲಬ್ ತೆಕ್ಕಟ್ಟೆ ಆಯೋಜಿಸಿದ “ಅರ್ಥಾಂಕುರ-3” ಕಾರ್ಯಕ್ರಮದಲ್ಲಿ ನರೇಂದ್ರ ಕುಮಾರ್ ಕೋಟ ಇವರನ್ನು ಸಮ್ಮಾನಿಸಿ ಸೀತಾರಾಮ ಶೆಟ್ಟಿ ಮಾತನ್ನಾಡಿದರು.

    ಅವಕಾಶ ಹಾಗೂ ಸ್ವಾತಂತ್ರ್ಯ ಸಿಕ್ಕಿದರೆ ಸಾಧಿಸುವುದಕ್ಕೆ ಸಾಧ್ಯ. ಹೊಸ ಪರಿಕಲ್ಪನೆಗಳು ಇತರರಿಗೂ ಪ್ರೇರಣೆ ಆಗುತ್ತದೆ. ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಕಾಯಕ ಬಹಳ ದೊಡ್ಡದು. ಸಂಸ್ಥೆ ತಾನು ಬೆಳೆಯುತ್ತಾ ಇತರರನ್ನು ಬೆಳೆಸುವ, ಗುರುತಿಸುವ ದೊಡ್ಡ ಜವಾಬ್ಧಾರಿಯನ್ನು ಹೊತ್ತು ಕರಾವಳಿ ಭಾಗದಲ್ಲಿ ಉತ್ತುಂಗದಲ್ಲಿದೆ. ಬೆಳೆಸಿದ ಮಕ್ಕಳನ್ನು ಬಳಸಿ, ತೊಡಗಿಸಿಕೊಂಡರೆ ಅದ್ಭುತ ಪ್ರತಿಭೆ ಅನಾವರಣಗೊಳ್ಳುತ್ತದೆ. ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಅಭಿನಂದನೆಯನ್ನು ಸ್ವೀಕರಿಸಿ, ನರೇಂದ್ರ ಕುಮಾರ್ ಕೋಟ ಮಾತನ್ನಾಡಿದರು.
    ಮುಖ್ಯ ಅತಿಥಿಗಳಾಗಿ ಹಿರಿಯ ಅರ್ಥಧಾರಿ ಕುಮಾರ್ ಮಾಸ್ಟರ್ ಕೋಟೇಶ್ವರ ಮಾತನ್ನಾಡಿ, ಬಡಗಿನ ಸಂಘಟಕರು ಬಡಗಿನ ಕಲಾವಿದರಿಗೆ ಅವಕಾಶ ನೀಡಿ ಬೆಳೆಸುವ ಕೆಲಸವನ್ನೇ ಮರೆತಿದ್ದಾರೆ. ಸಮರ್ಥ ಅರ್ಥದಾರಿಗಳು ಇದ್ದೂ ತೆಂಕಿನ ವ್ಯಾಮೋಹದಿಂದ ಬಡಗಿನ ಕಲಾವಿದರನ್ನು ನಿರ್ಲಕ್ಷಿಸಿ, ಅವಕಾಶ ವಂಚಿತರನ್ನಾಗಿ ಮಾಡಿರುವುದು ನಿಜಕ್ಕೂ ವಿಷಾದದ ಸಂಗತಿ. ಯಶಸ್ವೀ ಕಲಾವೃಂದದ ಅರ್ಥಾಂಕುರ ನಿಜಕ್ಕೂ ಅರ್ಥಪೂರ್ಣ ಎಂದು ವ್ಯಕ್ತಪಡಿಸಿದರು.

    ತೆಕ್ಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಸುಧಾಕರ ಶೆಟ್ಟಿ, ಗುರುಗಳಾದ ಲಂಬೋದರ ಹೆಗಡೆ ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಗೋಪಾಲ ಪೂಜಾರಿ ಸ್ವಾಗತಿಸಿದರು. ರೊ. ಡಾ. ಗಣೇಶ್ ಧನ್ಯವಾದಗೈದರು. ಕೈಲಾಸ ಕಲಾಕ್ಷೇತ್ರದ ಅಧ್ಯಕ್ಷ ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಹೊಸ ತಲೆಮಾರಿನ ಅರ್ಥಧಾರಿಗಳ ಪರಿಶೋಧ ಕಾರ್ಯಕ್ರಮದಡಿಯಲ್ಲಿ ಕೃಷ್ಣಾರ್ಜುನ ಕಾಳಗ ತಾಳಮದ್ದಲೆ ರಂಗದಲ್ಲಿ ಪ್ರಸ್ತುತಿಗೊಂಡಿತು.

  • ಕುಂದಾಪುರ :ರಿಕ್ಷಾ ಚಾಲಕರ ಸಮಸ್ಯೆಗೆ ಸ್ಪಂದಿಸದೇ ಇದ್ದರೆ ಹೋರಾಟ ಅನಿವಾರ್ಯ – ಶಂಕರ್ ಅಂಕದಕಟ್ಟೆ

    ಕುಂದಾಪುರ :ರಿಕ್ಷಾ ಚಾಲಕರ ಸಮಸ್ಯೆಗೆ ಸ್ಪಂದಿಸದೇ ಇದ್ದರೆ ಹೋರಾಟ ಅನಿವಾರ್ಯ – ಶಂಕರ್ ಅಂಕದಕಟ್ಟೆ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ : ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ಅಧಿಕೃತ ಆಟೋ ನಿಲ್ದಾಣಗಳಿಗಾಗಿ ದೀರ್ಘಕಾಲದಿಂದ ಒತ್ತಾಯಿಸುತ್ತಿದ್ದರೂ ಈ ನಿಟ್ಟಿನಲ್ಲಿ ಸಾಕಷ್ಟು ಕೆಲಸಗಳು ಆಗದೇ ಯಥಾಸ್ಥಿತಿ ಮುಂದುವರಿದಿದೆ. ಆಡಳಿತ ವ್ಯವಸ್ಥೆ ರಿಕ್ಷಾ ಚಾಲಕ-ಮಾಲಕರನ್ನು ನಿರಂತರವಾಗಿ ನಿರ್ಲಕ್ಷ್ಯ ಮಾಡುತ್ತಲೇ ಬಂದಿದೆ. 40 ವರ್ಷಗಳಿಂದ ಕಡೆಗಣಿಸುತ್ತಲೇ ಬಂದಿದೆ. ತುಂಬಾ ಕಷ್ಟದಿಂದ ರಿಕ್ಷಾ ಚಾಲಕರು ಇವತ್ತು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಸಮಾಜಕ್ಕೆ ತಮ್ಮದೆಯಾದ ಸೇವೆ ನೀಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಸಹಕಾರ ನೀಡಬೇಕಾದವರು ನಮ್ಮ ಬೇಡಿಕೆಯನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದೀಗ ವಿನಾಯಕ ರಿಕ್ಷಾ ನಿಲ್ದಾಣ ವಿಚಾರದಲ್ಲಿಯೂ ಕೂಡಾ ಉಚ್ಚ ನ್ಯಾಯಾಲಯದ ಆದೇಶ ಪಾಲಿಸುವ ಸಲುವಾಗಿ ಅವೈಜ್ಞಾನಿಕವಾಗಿ ಬದಲಾವಣೆ ಮಾಡಿದೆ. ಈ ಬಗ್ಗೆ ನ್ಯಾಯಕ್ಕಾಗಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದೇವೆ. ಸಮಸ್ಯೆ ಪರಿಹಾರ ದೊರಕದೇ ಇದ್ದರೆ ಪ್ರತಿಭಟನೆಗೆ ಮುಂದಾಗುವುದು ಅನಿವಾರ್ಯವಾಗುತ್ತದೆ ಎಂದು ಭಾರತೀಯ ಮಜ್ದೂರ್ ಸಂಘದ ಸ್ಥಾಪಕಧ್ಯಕ್ಷ ಶಂಕರ ಅಂಕದಕಟ್ಟೆ ಹೇಳಿದರು.

    ಅವರು ಕುಂದಾಪುರ ಪ್ರೆಸ್‍ಕ್ಲಬ್‍ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ನಿರ್ದಿಷ್ಟ ರಿಕ್ಷಾ ನಿಲ್ದಾಣವನ್ನು ಅಲ್ಲಿನ ಸ್ಥಳೀಯಾಡಳಿತ ನೀಡಿದೆ. ವಿಶೇಷವೆಂದರೆ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸೂಕ್ತ ನಿಲ್ದಾಣಕ್ಕೆ ಸ್ಥಳ ಗುರುತಿಸುವ ಕೆಲಸವಾಗಿಲ್ಲ. ಈ ಹಿಂದೆ ಪ್ರತಿಭಟನೆ ನಡೆಸಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ ಎಂದರು.

    ಅಟೋರಿಕ್ಷಾ ಟ್ಯಾಕ್ಸಿ ಮೆಟಾಡೋರ್ ಡ್ರೈವರ್ಸ್ ಎಸೋಸಿಯೇಶನ್ ಇಂಟೆಕ್ ಕುಂದಾಪುರ ತಾಲೂಕು ಅಧ್ಯಕ್ಷ ಲಕ್ಷ್ಮಣ ಶೆಟ್ಟಿ ಮಾತನಾಡಿ, ಎಲ್ಲ ರಿಕ್ಷಾ ನಿಲ್ದಾಣಗಳು ಖಾಸಗಿ ಸ್ಥಳದ ಎದುರುಗಡೆಗೆ ಇದೆ. ಎಲ್ಲರೂ ಹೈಕೋರ್ಟ್ ಆದೇಶದ ಮೂಲಕ ತೆರವಿಗೆ ಮುಂದಾದರೆ ರಿಕ್ಷಾದವರ ಬದುಕು ಏನಾಗಬೇಕು. ಖಾಯಂ ಆಗಿ ರಿಕ್ಷಾದವರಿಗೆ ಒಂದು ನೆಲೆ ಕೊಡುವ ಕೆಲಸ ಸ್ಥಳೀಯಾಡಳಿತಕ್ಕೆ ಆಗಿಲ್ಲ. ರಿಕ್ಷಾ, ಟ್ಯಾಕ್ಷಿ, ಗೂಡ್ಸ್ ವಾಹನದವರ ಬಗ್ಗೆ ಈ ರೀತಿಯ ನಿರ್ಲಕ್ಷ್ಯ ಏಕೆ? ವಿನಾಯಕ ನಿಲ್ದಾಣವನ್ನು ತೆರವು ಮಾಡಿದರು. ಬದಲಿ ಸ್ಥಳವನ್ನು ನೀಡಿರುವುದು ಕೂಡಾ ತೀರಾ ಅವೈಜ್ಞಾನಿಕವಾಗಿದೆ. 22 ರಿಕ್ಷಾಗಳು ಇಲ್ಲಿವೆ. ಈಗ ಗ್ರಂಥಾಲಯದ ಎದುರು ರಿಕ್ಷ ನಿಲ್ದಾಣ ಎಂದು ಭೋರ್ಡ್ ಹಾಕಿದ್ದಾರೆ. ಇದರಿಂದ ರಿಕ್ಷದವರಿಗೂ ಅನುಕೂಲವಿಲ್ಲ, ಸಾರ್ವಜನಿಕರಿಗೂ ಪ್ರಯೋಜನವಿಲ್ಲ ಎಂದರು.

    ಕುಂದಾಪುರ ತಾಲೂಕು ಅಟೋರಿಕ್ಷಾ ಮತ್ತು ವಾಹನ ಚಾಲಕರ ಸಂಘ ಸಿಐಟಿಯು ಅಧ್ಯಕ್ಷ ರಮೇಶ ಮಾತನಾಡಿ, ವಿನಾಯಕ ನಿಲ್ದಾಣದಿಂದ ಈಗ ನೀಡಿರುವ ಸ್ಥಳಕ್ಕೆ ಒಂದು ಕಿ.ಮೀ ಆಗುತ್ತದೆ. ಯಾವುದೇ ಪ್ರಯೋಜನವಿಲ್ಲ. ವಿನಾಯಕದಿಂದ ಕೋಡಿಗೆ ಹೋಗಲು ಜನರಿಗೆ ರಿಕ್ಷಾದ ಅವಶ್ಯಕತೆ ಇರುತ್ತದೆ. ಈಗ ಅಲ್ಲಿ ರಿಕ್ಷಾ ನಿಲುಗಡೆಗೆ ಅವಕಾಶ ಇಲ್ಲದಿರುವುದರಿಂದ ಕೋಡಿ ಭಾಗಕ್ಕೆ ಹೋಗುವ ಜನರಿಗೆ ಸಮಸ್ಯೆಯಾಗುತ್ತದೆ. ಬಸ್ ನಿಲ್ದಾಣದ ಹತ್ತಿರವೇ ರಿಕ್ಷಾ ನಿಲ್ದಾಣ ಇರುವುದು ಸ್ವಾಭಾವಿಕ. ಆದರೆ ಪುರಸಭೆ ಗ್ರಂಥಾಲಯದ ಹತ್ತಿರಕ್ಕೆ ಸ್ಥಳಾಂತರ ಮಾಡಿರುವುದು ತೀರಾ ಅವೈಜ್ಞಾನಿಕವಾದ ಕ್ರಮವಾಗಿದೆ. ಕೂಡಲೇ ಸೂಕ್ತ ಕ್ರಮವಹಿಸಿ ವಿನಾಯಕ ಬಸ್ ನಿಲ್ದಾಣದ ಸಮೀಪದಲ್ಲಿ ಸರ್ಕಾರಿ ಸ್ಥಳದಲ್ಲಿ ರಿಕ್ಷಾ ನಿಲುಗಡೆಗೆ ಅವಕಾಶ ಕಲ್ಪಿಸಬೇಕು ಎಂದರು.

    ಸುದ್ಧಿಗೋಷ್ಠಿಯಲ್ಲಿ ಬಿಎಂಎಸ್ ರಿಕ್ಷಾ ಯೂನಿಯನ್ ಅಧ್ಯಕ್ಷ ಮಂಜುನಾಥ ಹಾಗೂ ವಿವಿಧ ರಿಕ್ಷಾ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ಕೋಟ :ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ – ನವೆಂಬರ್ 10ಕ್ಕೆ ಚಿತ್ರರಂಗದ ಶ್ರೇಷ್ಠ ನಟ ದೊಡ್ಡಣ್ಣ ಅವರಿಗೆ ಪ್ರಶಸ್ತಿ ಪ್ರದಾನ

    ಕೋಟ :ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ – ನವೆಂಬರ್ 10ಕ್ಕೆ ಚಿತ್ರರಂಗದ ಶ್ರೇಷ್ಠ ನಟ ದೊಡ್ಡಣ್ಣ ಅವರಿಗೆ ಪ್ರಶಸ್ತಿ ಪ್ರದಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ನವೆಂಬರ್ ತಿಂಗಳಲ್ಲಿ ನಡೆಯುವ ಸದ್ಭಾವನಾ 2023 ಎಂಬ ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು ಈ ಬಾರಿ ನವೆಂಬರ್ 10 ರಂದು ಕೋಟದ ಗಾಂಧಿ ಮೈದಾನದಲ್ಲಿ ಆಯೋಜಿಸುತ್ತಿದೆ.

    ಪ್ರತಿವರ್ಷ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು ಈ ಬಾರಿ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ದೊಡ್ಡಣ ರವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದೆ. ಪ್ರಶಸ್ತಿ 15ಸಾವಿರ ಮೌಲ್ಯದ ಬೆಳ್ಳಿ ಸ್ಮರಣಿಗೆ ನಗದು ಒಳಗೊಂಡಿದೆ.

    ಇದೇ ವೇಳೆ ವಿಶೇಷ ಅಭಿನಂದನೆಯನ್ನು ಅಮ್ಮಚ್ಚಿ ಎಂಬ ನೆನಪು ಚಿತ್ರದ ನಾಯಕ ರಂಗನಟ ಡಾ.ರಾಧಕೃಷ್ಣ ಉರಾಳ ಇವರಿಗೆ ನೀಡಲಿದ್ದು, ವಿಶೇಷ ಪುರಸ್ಕಾರವನ್ನು ಪರಿಸರಸ್ನೇಹಿ ಸಂಘಟನೆ ಕ್ಲಿನ್ ತ್ರಾಸಿ ತಂಡಕ್ಕೆ ನೀಡಲಿದೆ.ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ , ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಈ ವೇದಿಕೆಯಲ್ಲಿ ನೀಡಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ನೃತ್ಯ, ಮಂಗಳೂರು ಪ್ರಸಿದ್ಧ ನಾಟಕ ತಂಡ ದೇವದಾಸ್ ಕಾಪಿಕಾಡ್ ನಿರ್ದೇಶನದ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್ ತಿಳಿಸಿದ್ದಾರೆ.

  • ಪಾಂಡೇಶ್ವರ – “ನಮ್ಮ ಗ್ರಾಮ ಸ್ವಚ್ಛ ಗ್ರಾಮ” ಗ್ರಾಮ ನೈರ್ಮಲ್ಯ ಸ್ವಚ್ಚತಾ ಕಾರ್ಯಕ್ರಮ

    ಪಾಂಡೇಶ್ವರ – “ನಮ್ಮ ಗ್ರಾಮ ಸ್ವಚ್ಛ ಗ್ರಾಮ” ಗ್ರಾಮ ನೈರ್ಮಲ್ಯ ಸ್ವಚ್ಚತಾ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಾಂಡೇಶ್ವರ ಗ್ರಾಮ ಪಂಚಾಯತ್ ಬ್ರಹ್ಮಾವರ ತಾಲ್ಲೂಕು ಇದರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ‘ನಮ್ಮ ಗ್ರಾಮ ಸ್ವಚ್ಛಗ್ರಾಮ’ ಗ್ರಾಮ ನೈರ್ಮಲ್ಯ ಸ್ವಚ್ಚತಾ ಕಾರ್ಯದ ಪ್ರಯುಕ್ತ ಸೂಲ್ಕುದ್ರು ಪರಿಸರದಲ್ಲಿ ಶ್ರಮದಾನದ ಮೂಲಕ ರಸ್ತೆಯ ಪಕ್ಕದ ಹುಲ್ಲುಗಿಡಗಳನ್ನು ಕತ್ತರಿಸಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಚತಾ ಕಾರ್ಯವನ್ನು ಕೈಗೊಳ್ಳಲಾಯಿತು.

    ಈ ಸಂದರ್ಭದಲ್ಲಿ ಪಾಂಡೇಶ್ವರ ಪಂಚಾಯತ್ ಅಧ್ಯಕ್ಷೆ ಸುಶೀಲಾ ಸದಾನಂದ ಪೂಜಾರಿ. ಉಪಾಧ್ಯಕ್ಷ ವೈ.ಬಿ. ರಾಘವೆಂದ್ರ, ಪಿ. ಡಿ. ಓ ಲೋಲಾಕ್ಷಿ, ಕಾರ್ಯದರ್ಶಿ ವಿಜಯ, ಗ್ರಾಮ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಜೇಮ್ಸ್ ಒಲ್ವೆರಾ, ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಶೇಷನ್ ಕರ್ನಾಟಕ. ಸಂತ ಆಂತೋನಿ ದೇವಾಲಯ ಸಾಸ್ತಾನ ಘಟಕ ಇವರ ಅಧ್ಯಕ್ಷ ವಿಜಯ್ ಲೂವಿಸ್, ಸ್ವಸಹಾಯ ಸಂಘಗಳ ಪದಾಧಿಕಾರಿಗಳಾದ ಮೇಬಲ್.ಡಿ ಸೋಜ, ಸ್ಟ್ಯಾನಿ ಡಿ. ಅಲ್ಮೇಡಾ, ತೆರೇಸಾ ಒಲ್ಮೆರಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

  • ಕೋಟ :ಮಾಜಿ ಭೂ ನ್ಯಾಯ ಮಂಡಳಿ ಸದಸ್ಯ ಪಿ.ಶೀನ ಪೂಜಾರಿ ನಿಧನ

    ಕೋಟ :ಮಾಜಿ ಭೂ ನ್ಯಾಯ ಮಂಡಳಿ ಸದಸ್ಯ ಪಿ.ಶೀನ ಪೂಜಾರಿ ನಿಧನ

    ಕುಂದಾಪುರ ಮಿರರ್ ಸುದ್ದಿ…

    ಕೋಟ : ಪಾಂಡೇಶ್ವರದ ನಿವಾಸಿ ಪಿ.ಶೀನ ಪೂಜಾರಿ 85.ವ ಶನಿವಾರ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಪತ್ನಿ, ಆರು ಜನ ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

    ಮಾಜಿ ಭೂ ನ್ಯಾಯ ಮಂಡಳಿ ಸದಸ್ಯರಾಗಿ, ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘದ ಮಾಜಿ ನಿರ್ದೇಶಕರಾಗಿ, ಪಾಂಡೇಶ್ವರ ಪಂಚಾಯತ್ ಬೋರ್ಡ್ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

  • ಕೋಟ :ಅಕ್ಟೋಬರ್ 3 ರಿಂದ 10ತನಕ ನಡೆಯಲಿರುವ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮ ‘ಇಂಪನಾ’ ಉದ್ಘಾಟನೆ

    ಕೋಟ :ಅಕ್ಟೋಬರ್ 3 ರಿಂದ 10ತನಕ ನಡೆಯಲಿರುವ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮ ‘ಇಂಪನಾ’ ಉದ್ಘಾಟನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಮಾತುಗಳು ಸಾಧನೆಯಾಗಬಾರದು, ಸಾಧನೆಗಳು ಮಾತಾಗಬೇಕು. ಕೋಟ ಶಿವರಾಮ ಕಾರಂತ ಎಲ್ಲ ಕ್ಷೇತ್ರಗಳಲ್ಲಿಯೂ ಕೈಯಾಡಿಸಿ ಸಾಧನೆ ಮಾಡಿದವರು. ತನ್ನ ಸಾಧನೆಯ ಮೂಲಕವೇ ಕೋಟದ ಹೆಸರನ್ನು ಜಗತ್ತಿನಾದ್ಯಂತ ಪಸರಿಸಿದವರು. ಸಾಹಿತ್ಯ, ಸಂಸ್ಕೃತಿ, ಪರಿಸರ ಹೋರಾಟ, ಕಲೆ ಹೀಗೆ ಎಲ್ಲ ಕ್ಷೇತ್ರದಲ್ಲಿಯೂ ಕೂಡಾ ತನ್ನ ಛಾಪು ಮೂಡಿಸಿದ ಕಾರಂತರು ಪರಿಸರಕ್ಕೆ ಧಕ್ಕೆಯಾಗುವ ಸಂದರ್ಭ ಹೋರಾಟಕ್ಕೂ ಮುಂದಾದವರು. ಹೀಗೆ ಕಾರಂತರಿಗೆ ಕಾರಂತರೇ ಸಾಟಿ ಎಂದು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

    ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ಅಕ್ಟೋಬರ್ 3 ರಿಂದ 10ತನಕ ನಡೆಯಲಿರುವ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮ ‘ಇಂಪನಾ’ ಉದ್ಘಾಟಿಸಿ ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಾಪು ವಿಧಾನಸಭಾ ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕ ಯಶ್‍ಪಾಲ್ ಎ ಸುವರ್ಣ, ಡಾ. ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಉಡುಪಿ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ.ಇಬ್ರಾಹೀಂಪುರ್ ಉಪಸ್ಥಿತರಿದ್ದರು.

    ಮಾಜಿ ಸಚಿವ ಹಾಗೂ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಕಾರಂತರು ಈ ನಾಡಿನ ಆಸ್ತಿ. ಕಳೆದ 19 ವರ್ಷಗಳಿಂದ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಕಾರಂತರ ಆಸಕ್ತಿಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೇರು ಸಾಧಕರಿಗೆ ಕಾರಂತ ಹುಟ್ಟೂರ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಕೋಟತಟ್ಟು ಗ್ರಾಮ ಪಂಚಾಯತ್ ಸ್ವತಂತ್ರ ಸರ್ಕಾರದಂತೆ ಕಾರ್ಯನಿರ್ವಹಿಸುತ್ತಾ ಕಾರಂತ ಥೀಂಪಾರ್ಕ್ ಸ್ಥಾಪನೆ, ನಿರ್ವಹಣೆಯಲ್ಲಿ ಗುರುತಿಸಿಕೊಂಡಿದೆ. ಪ್ರಸ್ತುತ ಕಾರಂತ ಥೀಂ ಪಾರ್ಕ್ ಇನ್ನಷ್ಟು ನವೀಕರಣಗೊಂಡಿದೆ. ಹವಾನಿಯಂತ್ರಿತ ವ್ಯವಸ್ಥೆ ಅಳವಡಿಸಲಾಗಿದೆ. ಚಿಮ್ಮುವ ಕಾರಂಜಿ, ಅತ್ಯಾಧುನಿಕ ಧ್ವನಿ-ಬೆಳಕಿನ ವ್ಯವಸ್ಥೆ ಮಾಡಲಾಗಿದೆ ಎಂದರು.

    ಗಾಂಧಿಗ್ರಾಮ ಪುರಸ್ಕಾರ ಪಡೆದ ನೀರೆ ಗ್ರಾಮ ಪಂಚಾಯಿತಿ, ಶಂಕರನಾರಾಯಣ ಗ್ರಾಮ ಪಂಚಾಯಿತಿ, ಅಲೆಯೂರು ಗ್ರಾಮ ಪಂಚಾಯಿತಿ, ಕೋಡಿ ಗ್ರಾಮ ಪಂಚಾಯಿತಿ, ಕಾಲ್ತೋಡು ಗ್ರಾಮ ಪಂಚಾಯಿತಿ, ಮಡಾಮಕ್ಕಿ ಗ್ರಾಮ ಪಂಚಾಯಿತಿ, ಬೆಳ್ಳೆ ಗ್ರಾಮ ಪಂಚಾಯಿತಿ, ಹೊಸಾಡು ಗ್ರಾಮ ಪಂಚಾಯಿತಿಗಳಿಗೆ ಕಾರಂತ ಪುರಸ್ಕಾರ ನೀಡಿ ಗೌರವಿಸಲಾಯಿತು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಜನಾರ್ದನ್ ಕುಂಭಾಶಿ ನಾಡಗೀತೆ ಹಾಡಿದರು. ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರ್ವಹಿಸಿದರು.

    ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ
    ಕೋಟತಟ್ಟು ಗ್ರಾಮ ಪಂಚಾಯತ್ ಕೋಟ, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಸಹಭಾಗಿತ್ವದಲ್ಲಿ ಕಳೆದ ಹದಿನಾರು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ. 2005 ರಲ್ಲಿ ಆರಂಭವಾದ ಹುಟ್ಟೂರ ಪ್ರಶಸ್ತಿ ಕಾರ್ಯಕ್ರಮ 18 ವರ್ಷಗಳಿಂದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಾ ಬಂದಿದ್ದು.

    ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2023ರ ಸಾಲಿನಲ್ಲಿ ಹಲವು ದಶಕಗಳಿಂದ ಸಂಗೀತ ಕ್ಷೇತ್ರದಲ್ಲಿ ಅಮೂಲ್ಯ ಸೇವೆಯನ್ನು ಹಾಗೂ ಅವರು ಏರಿದ ಸಾಧನೆಯ ಮೆಟ್ಟಿಲುಗಳನ್ನು ಪರಿಗಣಿಸಿ ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ.ವಿದ್ಯಾಭೂಷಣ್ ಈ ವರ್ಷ ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    ಅಕ್ಟೋಬರ್ 10 ರಂದು ಪ್ರಶಸ್ತಿ ಪ್ರದಾನ
    ಅಕ್ಟೋಬರ್ 10 ರಂದು ಮಂಗಳವಾರ ಸಂಜೆ 4 ಗಂಟೆಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ.ವಿದ್ಯಾಭೂಷಣ್ ಅವರಿಗೆ ಕಾನೂನು ಹಾಗೂ ಸಂಸದೀಯ, ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್ ಕೆ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಮಾಡಲಿದ್ದಾರೆ. ಜನಪ್ರತಿನಿಧಿಗಳು ಸೇರಿದಂತೆ ಹಲವಾರು ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡಯಲಿದೆ.

    ರಾಜ್ಯ ಮಟ್ಟದ ಚಲನಚಿತ್ರ ಉತ್ಸವ-ಸಂವಾದ
    ಅಕ್ಟೋಬರ್ 4 ರಿಂದ 8ರ ತನಕ ರಾಜ್ಯಮಟ್ಟದ ಚಲನಚಿತ್ರ ಉತ್ಸವ ಹಾಗೂ ಚಿತ್ರ ತಂಡದೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಮಾರ್ಡನ್ ಮಹಾಭಾರತ, ಕೋಳಿತಾಳ್, ಮೂಕಜ್ಜಿಯ ಕನಸುಗಳು,ಕಾಂತಾರ, ಸುಗಂಧಿ ಚಲನಚಿತ್ರಗಳನ್ನು ಹಮ್ಮಿಕೊಳ್ಳಲಾಗಿದೆ.ಅಕ್ಟೋಬರ್ 9 ರಂದು ಡಾ. ಶಿವರಾಮ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ, ಅಕ್ಟೋಬರ್ 10 ರಂದು ಜಿಲ್ಲೆಯ ಖ್ಯಾತ ಕಲಾವಿದರ ಸಂಗಮ ಮಧುರ ಗೀತೆಗಳ ಮಧುರಯಾನ “ಮಾರ್ದನಿ” ಕಾರ್ಯಕ್ರಮ ನಡೆಯಲಿದೆ.

  • ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ

    ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನೇಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿ ಕೋಯಿಟ್ ಪಂದ್ಯಾಟ ದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದು ವಿದ್ಯಾರ್ಥಿಗಳಾದ ಶಿಹಾಬ್ , ಮನೀಶ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.