Category: ಸುದ್ದಿ

  • ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ಜಯಂತಿ ಆಚರಣೆ

    ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ಜಯಂತಿ ಆಚರಣೆ

    ಕುಂದಾಪುರ ಮಿರರ್ ‌ಸುದ್ದಿ…

    ಹೆಮ್ಮಾಡಿ :ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢ ಶಾಲೆಯಲ್ಲಿ ಜಂಟಿಯಾಗಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಕಾಲೇಜು ಹಾಗೂ ಪ್ರೌಢಶಾಲೆಯ ಸಿಬ್ಬಂದಿಗಳು
    ಗಾಂಧೀಜಿ ಹಾಗೂ ಶಾಸ್ತ್ರೀಯವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಗಾಂಧೀಜಿ ಹಾಗೂ ಶಾಸ್ತ್ರೀಯವರ ಜೀವನ ಹಾಗೂ ತತ್ವಾದರ್ಶಗಳ ಕುರಿತು ಮಾತನಾಡಿದರು. ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವರ ಸ್ವಾಗತಿಸಿ ವಂದಿಸಿದರು.

    ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಬೋಧಕ, ಬೋಧಕೇತರ ವೃಂದದವರು, ಪ್ರೌಢಶಾಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಹಾಗೂ ಉಭಯ ಸಂಸ್ಥೆಗಳ ವಿದ್ಯಾರ್ಥಿಗಳು ಜನತಾ ಕ್ರೀಡಾಂಗಣವನ್ನು ಸ್ವಚ್ಚಗೊಳಿಸಿದರು.

  • ಕುಂದಾಪುರ :ಚಕ್ರವರ್ತಿ ಸೂಲಿಬೆಲೆಯವರಿಂದ ಜನಗಣಮನ ಬೆಸೆಯೋಣ ಬೈಕ್ ರ್ಯಾಲಿ

    ಕುಂದಾಪುರ :ಚಕ್ರವರ್ತಿ ಸೂಲಿಬೆಲೆಯವರಿಂದ ಜನಗಣಮನ ಬೆಸೆಯೋಣ ಬೈಕ್ ರ್ಯಾಲಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕಳೆದ ಎರಡು ಅವಧಿಯಲ್ಲಿ ಭಾರತದ ಪ್ರದಾನ ಮಂತ್ರಿಗಳಾಗಿರುವ ನರೇಂದ್ರ ಮೋದಿಯವರ ಸಾಧನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಜನಗಣಮನ ಬೆಸೆಯೋಣ ಬೈಕ್ ಜಾಥಾ ಸೋಮವಾರ ಕುಂದಾಪುರಕ್ಕೆ ಬಂದಿತು.

    ಬೈಕ್ ಜಾಥಾ ನೇತೃತ್ವ ವಹಿಸಿದ ಚಕ್ರವರ್ತಿ ಸೂಲಿಬೆಲೆ ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ಮೋದಿ ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದರು. ಇಂದು ಜಗತ್ತು ಭಾರತವನ್ನು ಗೌರವಿಸುವಂತೆ ಮೋದಿ ಮಾಡಿದ್ದಾರೆ. ಈಗ ಭಾರತ ಜಗತ್ತಿನ ಐದನೇ ದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡಿದ್ದಾರೆ. ಮೂರನೇ ಅವಧಿಗೆ ಮೋದಿ ಪ್ರದಾನಿಯಾದರೆ ಭಾರತ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ. ಮೊಬೈಲಲ್ಲಿ ಬ್ಯಾಂಕ್ ತಂದುಕೊಡುವಲ್ಲಿಂದ ಹಿಡಿದು ಅಗ್ನಿವೀರನ ವರೆಗೆ ವ್ಯವಸ್ಥೆ ಮಾಡಿರುವ ಮೋದಿ, ತಾಯಂದಿರಿಗೆ ಗ್ಯಾಸ್ ಸಿಲಿಂಡರ್ ನೀಡಿರುವ ಮೋದಿಯನ್ನು ಕಳೆದುಕೊಂಡರೆ ಅದು ಭಾರತದ ಪಾಲಿಗೆ ಘೋರ ದುರಂತವಾಗಲಿದೆ. ಉಚಿತಗಳಿಗೆ, ಸುಳ್ಳು ಮೋಸಗಳಿಗೆ ನಾವು ಭಾರತವನ್ನು ಕಳೆದುಕೊಳ್ಳಬಾರದು ಎಂದರು. ಈ ಸಂದರ್ಭ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

  • ಕುಂದಾಪುರ :ಸರ್ಕಾರಿ ಪ್ರೌಢಶಾಲೆ ಕಾಳಾವರದಲ್ಲಿ ವಿಶೇಷ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ

    ಕುಂದಾಪುರ :ಸರ್ಕಾರಿ ಪ್ರೌಢಶಾಲೆ ಕಾಳಾವರದಲ್ಲಿ ವಿಶೇಷ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಅತ್ಯಂತ ಶೃದ್ಧಾ ಭಕ್ತಿಯಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗರು ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಎಸ್ ಡಿ ಎಂ ಸಿ ಸದಸ್ಯ ಜಯಪ್ರಕಾಶ್ ಶೆಟ್ಟಿ, ಎಸ್ ಡಿ ಎಂ ಸಿ ಸದಸ್ಯ ಸತೀಶ್ ಜೋಗಿ ಉಪಸ್ಥಿತರಿದ್ದರು.

    ಹಿಂದಿನ ಸಾಲಿನಲ್ಲಿ ಎಸ್. ಡಿ.ಎಂ.ಸಿ. ಅಧ್ಯಕ್ಷರಾಗಿ, ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ನಿತ್ಯಾನಂದ ದೇವಾಡಿಗರನ್ನು ಸನ್ಮಾನಿಸಲಾಯಿತು. ನಂತರ ಮಾತನಾಡಿ ನಿತ್ಯಾನಂದರು ತನ್ನ ಅವಧಿಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ವಿದ್ಯಾರ್ಥಿಗಳೆಲ್ಲ ಸೇರಿ ಶಾಲೆ ಒಂದು ಕುಟುಂಬದಂತೆ ಭಾಸವಾಗಿತ್ತು ಎಂದು ತಮ್ಮ ಅನುಭವ ಹಂಚಿಕೊಂಡರು. ಮುಂದಿನ ಅಧ್ಯಕ್ಷ ರಮೇಶ್ ಆಚಾರ್ ರವರಿಗೆ ಇನ್ನೂ ಹೆಚ್ಚಿನ ಸಾಧನೆ ಮಾಡುವಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

    2022-23ನೆಯ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ 8 ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಲಾಯಿತು. ಅಭಿನಂದನೆಗೆ ಉತ್ತರಿಸಿದ ಸಂಧ್ಯಾ, ಹಾಗೂ ಸುಜಿತ್ ಧನ್ಯವಾದಗಳನ್ನು ಅರ್ಪಿಸಿದರು ಹಾಗೂ ಮುಂದಿನ ಸಾಲಿನಲ್ಲಿ ಈ ಸಾಧಕರ ಸಂಖ್ಯೆ ದ್ವಿಗುಣಗೊಳ್ಳಲಿ ಎಂದರು. ಅಧ್ಯಕ್ಷೀಯ ಮಾತುಗಳಲ್ಲಿ ಮುಖ್ಯೋಪಾಧ್ಯಾಯಿನಿಯವರು ಈ ಎಲ್ಲಾ ಸಾಧನೆಗೆ ಕಾರಣಕರ್ತರಾದ ಶಿಕ್ಷಕರು, ಎಸ್ ಡಿ ಎಂ ಸಿ, ಪೋಷಕರು, ಹಾಗೂ ಗ್ರಾಮಸ್ಥರನ್ನು ಸ್ಮರಿಸಿದರು.

    ಗಣೇಶ ಶೆಟ್ಟಿಗಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕ ಅರುಣ್ ಕುಮಾರ್ ವಂದಿಸಿದರು, ಶಿಕ್ಷಕ ರವಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

  • ಕುಂದಾಪುರ :ಮಹಾತ್ಮ ಗಾಂಧಿ ಅವರ ತತ್ವ ಅಳವಡಿಕೆ ನಮ್ಮದಾಗಲಿ – ಸುಶೀಲಾ ಹೊಳ್ಳ

    ಕುಂದಾಪುರ :ಮಹಾತ್ಮ ಗಾಂಧಿ ಅವರ ತತ್ವ ಅಳವಡಿಕೆ ನಮ್ಮದಾಗಲಿ – ಸುಶೀಲಾ ಹೊಳ್ಳ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಮಹಾತ್ಮ ಗಾಂಧಿ ಅವರು ಕೇವಲ ಸ್ವತಂತ್ರ ಹೋರಾಟಗಾರ ಮಾತ್ರವಲ್ಲ ಬದಲಾಗಿ ಭಾರತೀಯರ ಆರ್ಥಿಕತೆ, ಸ್ವದೇಶಿ ಭಾವ, ಹರಿಜನ ಉದ್ದಾರ, ಸರ್ವ ಧರ್ಮ ಸಮನ್ವಯಗಳಂತಹ ಎಲ್ಲಾ ಕ್ಷೇತ್ರವನ್ನೂ ಪ್ರಭಾವಿಸಿದ ಯುಗ ಪುರುಷ ಎಂದು ಕೆ.ಪಿ.ಎಸ್ ಕೋಟೇಶ್ವರದ ಪ್ರಾಂಶುಪಾಲರಾದ ಸುಶೀಲಾ ಹೊಳ್ಳ ರವರು ಅಭಿಮತಿಸಿದರು.

    ಅವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇಲ್ಲಿ ಹಮ್ಮಿಕೊಂಡ ಗಾಂಧಿ ಮತ್ತು ಶಾಸ್ತ್ರಿ ಜಯಂತಿ ಸಮಾರಂಭದ ಮುಖ್ಯ ಅತಿಥಿ ಯಾಗಿ ಮಾತನ್ನಾಡಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪ ಪ್ರಾಂಶುಪಾಲರಾದ ಚಂದ್ರ ಶೇಖರ್ ಶೆಟ್ಟಿರವರು ಗಾಂಧಿ ಮತ್ತು ಶಾಸ್ತ್ರಿರವರು ನಡೆ ನುಡಿಗಳಲ್ಲಿ ಒಂದಾಗಿ ದೇಶದ ಅಭುದ್ಯಯಕ್ಕಾಗಿ ಬಾಳಿ ಬೆಳಕಾದವರು. ಅವರ ಜೀವನ ಆದರ್ಶಗಳೆ ನಮಗೆ ಅನುಸರಣನೀಯ ಎಂದು ಪ್ರತಿಪಾದಿಸಿದರು. ಈರ್ವರು ಮಹಾನ್ ಸ್ವತಂತ್ರ ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು.ಈರ್ವರು ಶ್ರೇಷ್ಠ ಮಹನೀಯರ ಬಗ್ಗೆ ಕುಮಾರಿ ಪ್ರಣಮ್ಯ, ವೈಷ್ಣವಿ ಮತ್ತು ಯತೀಶ್ ತಮ್ಮ ಮನದ ಮಾತು ಅಭಿವ್ಯಕ್ತಿಸಿದರು. ರಶ್ಮಿ, ಅನಿಲ್ ಮತ್ತು ಫೈಸಲ್ ಸರ್ವಧರ್ಮೀಯ ಪ್ರಾರ್ಥನೆಗೆ ದನಿಯಾದರು.

    ಶಾಲಾ ಕಾಲೇಜು ಅಧ್ಯಾಪಕಿ ಯರು ಗಾಂಧಿ ಪ್ರೀತ ರಾಮನಾಮ ಭಜನೆ ಹಾಡಿದರು.ಅಧ್ಯಾಪಕ ರಮಾನಂದ ನಾಯಕ್ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಹರೀಶ್ ನಾಯಕ್ ವಂದಿಸಿದರು. ಸಂಸ್ಥೆಯ ಎಲ್ಲಾ ಅಧ್ಯಾಪಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಶಾಲಾ ಆವರಣ ಶುಚಿ ಗೊಳಿಸುವ ಮೂಲಕ ಶ್ರಮದಾನ ಮಾಡಿದರು.

  • ಕುಂದಾಪುರ :ಮೋದಿ ಕನಸಿನ ಯೋಜನೆಗೆ ಕೈಜೋಡಿಸಿದ ಆನಗಳ್ಳಿ ಯುವಕರು

    ಕುಂದಾಪುರ :ಮೋದಿ ಕನಸಿನ ಯೋಜನೆಗೆ ಕೈಜೋಡಿಸಿದ ಆನಗಳ್ಳಿ ಯುವಕರು

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ದೇಶದೆಲ್ಲೆಡೆ‌ಬಮೋದಿ ಅಭಿಮಾನಿಗಳು ಹಮ್ಮಿಕೊಂಡಿರುವ ಸ್ವಚ್ಛ ಭಾರತ ಅಭಿಯಾನಕ್ಕೆ ಗಾಂಧೀ ಜಯಂತಿ ಸಾಕ್ಷಿಯಾಯಿತು. ಕುಂದಾಪುರ ತಾಲೂಕಿನ ಆನಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯಕ್ರಮ ನಡೆಸಿದರು.

    ಆನಗಳ್ಳಿಯ ಸುತ್ತಮುತ್ತಲಿನ ರಸ್ತೆ ಇಕ್ಕೆಲೆಗಳಲ್ಲಿ ಬೆಳೆದಿದ್ದ ಗಿಡಗಂಟಿ, ಪ್ಲಾಸ್ಟಿಕ್ ಕಸ ಕಡ್ಡಿಗಳ ವಿಲೇವಾರಿ ಮತ್ತು ಆನಗಳ್ಳಿ ಗ್ರಾಮ ಪಂಚಾಯತ್ ಎದುರಿನ ರಸ್ತೆ ಬದಿ, ರಸ್ತೆಯ ಇಕ್ಕೆಲಗಳಲ್ಲಿ ನಿಂತ ನೀರನ್ನು ಸರಾಗವಾಗಿ ಹರಿದು ಹೋಗುವಂತೆ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.

    ಆನಗಳ್ಳಿ ಬಿಜೆಪಿ ನೇತೃತ್ವದಲ್ಲಿ ಗೆಳೆಯರ ಬಳಗ (ರಿ) ಆನಗಳ್ಳಿ ಇವರ ಸಹಭಾಗಿತ್ವದಲ್ಲಿ ನಂದಿಕೇಶ್ವರ ಕ್ರಿಕೆಟರ್ ಹಾಗೂ ನೀರ್ ಬಾಯ್ಸ್, ರೈಲ್ವೇ ಬ್ರಿಡ್ಜ್ ಫ್ರೆಂಡ್ಸ್ ನ ಸದಸ್ಯರು ಅಭಿಯಾನದಲ್ಲಿ ಭಾಗವಹಿಸಿದ್ದರು.

  • ಕೋಟ ಸೇವಾ ಸಂಗಮ ಶಿಶುಮಂದಿರ ಮಾತಾಜೀ ದೀಪ ಬೀಳ್ಕೊಡುಗೆ.

    ಕೋಟ ಸೇವಾ ಸಂಗಮ ಶಿಶುಮಂದಿರ ಮಾತಾಜೀ ದೀಪ ಬೀಳ್ಕೊಡುಗೆ.

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟ ಸೇವಾಸಂಗಮ ಶಿಶುಮಂದಿರ ಇಲ್ಲಿ ಕಳೆದ ಏಳು ವರ್ಷಗಳಿಂದ ಕಾರ್ಯನಿರ್ವಹಿಸಿದ ಮಾತಾಜೀ ದೀಪಾ ಇವರಿಗೆ ಶಿಶುಮಂದಿರದ ವತಿಯಿಂದ ಬೀಳ್ಕೋಡುಗೆ ಸಭೆ ಏರ್ಪಡಿಸಲಾಯಿತು.

    ಕಾರ್ಯಕ್ರಮದಲ್ಲಿ ದೀಪ ಹಾಗೂ ಪತಿ ಸತ್ಯನಾರಾಯಣ ಆಚಾರ್ ಇವರಿಗೆ ಶಾಲು ಹೋದಿಸಿ ಪಲಪುಷ್ಭ ನೀಡಿ ಗೌರವಿಸಲಾಯಿತು.

    ಪುಟಾಣಿಗಳು ಹಾಗೂ ಪೋಷಕರು ಮಾತಾಜೀಗೆ ಪ್ರೀತಿಯ ಗೌರವ ಸಲ್ಲಿಸಿತು.

    ಅಧ್ಯಕ್ಷತೆಯನ್ನು ಕೋಟ ಸೇವಾಸಂಗಮ ಶಿಶುಮಂದಿರದ ಅಧ್ಯಕ್ಷೆ ನಾಗಲಕ್ಷ್ಮೀ ಹೆಗ್ಡೆ ವಹಿಸಿದ್ದರು.

    ಈ ಸಂದರ್ಭದಲ್ಲಿ ಶಿಶುಮಂದಿರದ ವ್ಯವಸ್ಥಾಪಕಿ ಭಾಗ್ಯವಾದಿರಾಜ್, ಸಮಿತಿಯ ಉಪಾಧ್ಯಕ್ಷೆ ಗೀತಾ ಎ ಕುಂದರ್ , ಸದಸ್ಯರಾದ ಸುಶೀಲಸೋಮಶೇಖರ್, ಪ್ರಮೀಳಾ,ಅಮೃತ್ ಜೋಗಿ, ರವೀಂದ್ರ ಕೋಟ, ರೇಣುಕಾ ಮಯ್ಯ, ಕೋಶಾಧಿಕಾರಿ ಲಕ್ಷ್ಮೀನಾರಾಯಣ ಮಯ್ಯ, ಮಾತಾಜೀ ಪ್ರಭಾವತಿ, ಸಹಾಯಕಿ ಜ್ಯೋತಿ, ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಮಿತಿ ಕಾರ್ಯದರ್ಶಿ ಸುಷ್ಮಾದಯಾನಂದ ಹೊಳ್ಳ ನಿರೂಪಿಸಿದರು.

  • ಸಾಲಿಗ್ರಾಮ – ಹಿಂದೂ ರುದ್ರಭೂಮಿ ಸ್ವಚ್ಛತಾ ಕಾರ್ಯಕ್ರಮ

    ಸಾಲಿಗ್ರಾಮ – ಹಿಂದೂ ರುದ್ರಭೂಮಿ ಸ್ವಚ್ಛತಾ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಸಾಲಿಗ್ರಾಮ ಘಟಕ ಹಾಗೂ ಮಹಿಳಾ ಸಂಘಟನೆ ಸಾಲಿಗ್ರಾಮ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ, ಉಡುಪಿ ಇವರ ಸಾರಥ್ಯದಲ್ಲಿ ಪಟ್ಟಣ ಪಂಚಾಯತ್ ಸಾಲಿಗ್ರಾಮ ಇವರ ಸಹಕಾರದಲ್ಲಿ,ಸೌಹಾರ್ದ ಫ್ರೆಂಡ್ಸ್ ಗೆಂಡೆಕೆರೆ ಇವರ ಸಹಯೋಗದೊಂದಿಗೆ ಗೆಂಡೆಕೆರೆ ಹಿಂದೂ ರುದ್ರಭೂಮಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.

    ಕಾರ್ಯಕ್ರಮದಲ್ಲಿ ಮೋ. ಯು. ಸಂ. ಸಾಲಿಗ್ರಾಮ ಘಟಕದ ಅಧ್ಯಕ್ಷ ಕಿರಣ್ ಕುಂದರ್, ಕಾರ್ಯದರ್ಶಿ ಜಗನ್ನಾಥ ಅಮೀನ್, ಪಟ್ಟಣ ಪಂಚಾಯತ್ ಸದಸ್ಯರಾದ ಶ್ರೀನಿವಾಸ ಅಮೀನ್, ಕಿರಿಯ ಅರೋಗ್ಯ ಸಹಾಯಕಿ ಮಮತಾ, ಮಾಜಿ ಅಧ್ಯಕ್ಷ ಶೇಖರ ಮರಕಾಲ, ಸತೀಶ ಮರಕಾಲ, ಕೃಷ್ಣಮೂರ್ತಿ ಮರಕಾಲ, ಶ್ರೀಮತಿ ಶಾಲಿನಿ ವಿಜಯ್ ಕಾಂಚನ್, ಗಿರಿಜಾ ಸುವರ್ಣ, ರೇವತಿರಾಜ್, ಗೀತಾ ಭಾಸ್ಕರ್, ಸೌಹಾರ್ದ ಫ್ರೆಂಡ್ಸ್ ಗೆಂಡೆಕೆರೆ ಅಧ್ಯಕ್ಷ ಬಷೀರ್, ಪೌರ ಕಾರ್ಮಿಕರು, ಸ್ಥಳೀಯರು ಉಪಸ್ಥಿತರಿದ್ದರು.

  • ಬೆಂಗಳೂರು – ‘ಗಾಂಧಿ ಗ್ರಾಮ ಪುರಸ್ಕಾರ’ ಕೋಡಿ ಗ್ರಾಮ ಪಂಚಾಯತ್‍ಗೆ ಗಾಂಧೀ ಪುರಸ್ಕಾರ ಪ್ರದಾನ

    ಬೆಂಗಳೂರು – ‘ಗಾಂಧಿ ಗ್ರಾಮ ಪುರಸ್ಕಾರ’ ಕೋಡಿ ಗ್ರಾಮ ಪಂಚಾಯತ್‍ಗೆ ಗಾಂಧೀ ಪುರಸ್ಕಾರ ಪ್ರದಾನ

    ಕುಂದಾಪುರ ಮಿರರ್ ‌ಸುದ್ದಿ…

    ಕೋಟ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ 2022 23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಕೋಡಿ ಗ್ರಾಮ ಪಂಚಾಯಿತಿಗೆ ದೊರಕಿದ್ದು ಸೋಮವಾರ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ ವೇಟ್ ಹಾಲ್‍ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ ಖರ್ಗೆಯವರು ಗಾಂಧೀ ಪುರಸ್ಕಾರ ನೀಡಿ ಗೌರವಿಸಿದರು.

    ಕೋಡಿ ಗ್ರಾಮ ಪಂಚಾಯತ್ ಪರವಾಗಿ ಪಂಚಾಯತ್ ಅಧ್ಯಕ್ಷ ಪ್ರಭಾಕರ್ ಮೆಂಡನ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರರಾವ್ ಪ್ರಶಸ್ತಿ ಪಡೆದುಕೊಂಡರು.

    ಚರಕದ ಸ್ಮರಣಿಕೆ ಪ್ರಶಸ್ತಿ ಪತ್ರ ಹಾಗೂ ಪಂಚಾಯತ್ ಕಾಮಗಾರಿಗೆ 5 ಲಕ್ಷ ರೂಪಾಯಿ ಬಹುಮಾನ ಒಳಗೊಂಡಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಪಂಚಾಯತ್‍ರಾಜ್ ಅಪರ ಮುಖ್ಯ ಕಾರ್ಯದರ್ಶಿ ಉಮಾಮದೇವನ್ ಮೊದಲಾದವರು ಉಪಸ್ಥಿತರಿದ್ದರು.

     

  • ಹಂಗಾರಕಟ್ಟೆ- ಚೇತನ ಪ್ರೌಢಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ

    ಹಂಗಾರಕಟ್ಟೆ- ಚೇತನ ಪ್ರೌಢಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ದೇಶದ ಪಿತಾಮಹಾ ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಚೇತನ ಪ್ರೌಢಶಾಲೆ ಹಂಗಾರಕಟ್ಟೆ ಇಲ್ಲಿ ವಿಶೇಷವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತು.
    ಇದೇ ವೇಳೆ ‘ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿದ್ದು ಬಹುಮಾನವನ್ನು ವಿತರಿಸಲಾಯಿತು.

    ಹಂಗಾರಕಟ್ಟೆ_ ಸಾಸ್ತಾನ ರೋಟರಿ ಕ್ಲಬ್‍ನ ಅಧ್ಯಕ್ಷ ಅರವಿಂದ್ ಶರ್ಮ, ಕಾರ್ಯದರ್ಶಿ ಕರುಣಾಕರ ಶೆಟ್ಟಿ ,ನಿಕಟ ಪೂರ್ವ ಅಧ್ಯಕ್ಷ ಮನೋಜ್ ಕುಮಾರ್ ಹಾಗೂ ಕೇಶವ ಗಾಣಿಗ ಉಪಸ್ಥಿತರಿದ್ದರು.

    ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಶ್ರಮದಾನ ನಡೆಯಿತು.ಶಾಲಾ ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಹಾಗೂ ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಶ್ರಮದಾನದಲ್ಲಿ ಪಾಲ್ಗೊಂಡರು.

  • ಕೋಟ ಬ್ಲಾಕ್ ಕಾಂಗ್ರೆಸ್‍ನ ಇಂದಿರಾ ಭವನದಲ್ಲಿ ನಡೆದ ಮಹಾತ್ಮಾ ಗಾಂಧೀಜಿ, ಮಾಜಿ ಪ್ರಧಾನಿ ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

    ಕೋಟ ಬ್ಲಾಕ್ ಕಾಂಗ್ರೆಸ್‍ನ ಇಂದಿರಾ ಭವನದಲ್ಲಿ ನಡೆದ ಮಹಾತ್ಮಾ ಗಾಂಧೀಜಿ, ಮಾಜಿ ಪ್ರಧಾನಿ ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

    ಸತ್ಯ, ಶಾಂತಿ ,ಅಹಿಂಸೆಯ ಮಹಾನ್ ಪ್ರತಿಪಾದಕ ಗಾಂಧೀಜಿ -ಬಿ.ಎಂ.ಸಂದೀಪ್ ಕುಮಾರ್

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಅಹಿಂಸಾತ್ಮಕ ರೀತಿಯಲ್ಲಿ ಅವಿರತವಾಗಿ ಹೋರಾಟ ನಡೆಸಿ ಬ್ರಿಟಿಷರ ಕಪಿಮುಷ್ಟಿಯಲ್ಲಿದ್ದ ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿಸುವ ಮೂಲಕ ಸತ್ಯ ,ಶಾಂತಿ , ಅಹಿಂಸೆಯೇ ಯಶಸ್ಸಿನ ಮೂಲಮಂತ್ರವೆಂದು ಜಗತ್ತಿಗೆ ತೋರಿಸಿಕೊಟ್ಟಿರುವ ಮಹಾತ್ಮ ಗಾಂಧೀಜಿಯವರು ಮಹಾನ್ ಅಹಿಂಸಾ ಪ್ರತಿಪಾದಕ ಎಂದು ರಾಷ್ಟ್ರೀಯ ಕಾಂಗ್ರೆಸ್‍ನ ಎಐಸಿಸಿ ಪ್ರಧಾನ ಮುಖ್ಯ ಕಾರ್ಯದರ್ಶಿ ಪ್ರಸ್ತುತ ಗುಜರಾತ್ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಬಿ.ಎಂ.ಸಂದೀಪ್ ಕುಮಾರ್ ಹೇಳಿದರು.

    ಸೋಮವಾರ ಕೋಟ ಬ್ಲಾಕ್ ಕಾಂಗ್ರೆಸ್‍ನ ಇಂದಿರಾ ಭವನದಲ್ಲಿ ನಡೆದ ಮಹಾತ್ಮಾ ಗಾಂಧೀಜಿಯವರ
    ಹಾಗೂ ದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ಶ್ರಮಿಸಿದ ಮಾಜಿ ಪ್ರಧಾನಿ ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿಯವರು ಜನ್ಮ ದಿನಾಚರಣೆಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಪುಷ್ಪಾಚರಣೆ ಸಲ್ಲಿಸಲಾಯಿತು.

    ಹಿರಿಯ ಕಾಂಗ್ರೆಸ್ ಮುಖಂಡ ಶಿವರಾಮ್ ಶೆಟ್ಟಿ ಮಲ್ಯಾಡಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಅಮೀನ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷ ರೇಖಾ ಪಿ ಸುವರ್ಣ, ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ರೋಷನಿ ಒಲೆವೆರಾ, ರಾಜ್ಯ ಪ್ರಧಾನ ಯುವ ಕಾಂಗ್ರೆಸ್‍ನ ಕಾರ್ಯದರ್ಶಿ ಅಜಿತ್ ಶೆಟ್ಟಿ ಯಾಳಕ್ಲು, ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಸುಶೀಲ ಪೂಜಾರಿ, ಮಾಜಿ ಕೋಟ ಪಂಚಾಯತ್ ಸದಸ್ಯೆ ಸುಧಾ ಪೂಜಾರಿ ಉಪಸ್ಥಿತರಿದ್ದರು.