Category: ಸುದ್ದಿ

  • ಜನತಾ ದರ್ಶನದಲ್ಲಿ ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು ಅವಕಾಶ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

    ಜನತಾ ದರ್ಶನದಲ್ಲಿ ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು ಅವಕಾಶ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ : ಸಾರ್ವಜನಿಕರ ಅಹವಾಲು ಸ್ವೀಕರಿಸುವ ಜನತಾ ದರ್ಶನ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಸೆಪ್ಟಂಬರ್ 25 ರಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಅವರು ತಿಳಿಸಿದರು.

    ಅವರು ಇಂದು ವೀಡಿಯೋ ಕಾನ್ಫ್ರೆನ್ಸ ಮೂಲಕ ಜನತಾ ದರ್ಶನದ ಪೂರ್ವ ಸಿದ್ಧತಾ ಸಭೆ ನಡೆಸಿ ಮಾತನಾಡಿದರು.

    ಸರ್ಕಾರದ ನಿರ್ದೇಶದಂತೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ ಕಾರ್ಯಕ್ರಮವನ್ನು ಸೆಪ್ಟಂಬರ್ 25 ರಂದು ಹಮ್ಮಿಕೊಳ್ಳಲಾಗಿದ್ದು, ಅದರನ್ವಯ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸರಕಾರಿ ಕೆಲಸ ಸಂಬಂಧ ತಮ್ಮ ಅಹವಾಲುಗಳೇನಾದರೂ ಇದ್ದಲ್ಲಿ ಖುದ್ದಾಗಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದರು.

    ಅಂದು ಬೆಳಗ್ಗೆ 10.30 ಕ್ಕೆ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲುಗಳನ್ನು ವಿವಿಧ ಇಲಾಖೆಯ ಅಧಿಕಾರಿಗಳಿಂದ ಸ್ವೀಕರಿಸಲಾಗುತ್ತದೆ. ನಂತರ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸ್ಥಳದಲ್ಲಿಯೇ ವಿಲೇವಾರಿ ಮಾಡಬೇಕಾದ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು. ಒಂದೊಮ್ಮೆ ಸರ್ಕಾರದ ಗಮನ ಸೆಳೆಬೇಕಾದ ಅರ್ಜಿಗಳನ್ನು ಸರ್ಕಾರಿ ಮಟ್ಟದಲ್ಲಿ ಕ್ರಮಕೈಗೊಳ್ಳಲಾಗುತ್ತದೆ ಎಂದರು.

    ಜಿಲ್ಲೆಯ ಸಾರ್ವಜನಿಕರಿಂದ ಬರುವ ಕುಂದುಕೊರತೆ ಅರ್ಜಿಗಳನ್ನು ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್) ಪೋರ್ಟಲ್‌ದಲ್ಲಿ ನೊಂದಣಿ ಮಾಡಬೇಕು. ನುರಿತ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ನಿಯೋಜಿಸಬೇಕು ಎಂದರು.

    ನೋಂದಣಿಯಾದ ಅರ್ಜಿಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥಪಡಿಸಲು ಸ್ಥಳದಲ್ಲಿಯೇ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಹಲವು ದಿನಗಳಿಂದ ಬಾಕಿ ಉಳಿದಿರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಗಮನ ಹರಿಸಬೇಕು ಎಂದರು.

    ಜನತಾ ದರ್ಶನದ ಸಂದರ್ಭದಲ್ಲಿ ಅಧಿಕಾರಿಗಳು ಬೆಳಗ್ಗೆ 9.30 ಕ್ಕೆ ಉಪಸ್ಥಿತರಿದ್ದು, ಯಾವುದೇ ಲೋಪಗಳಾಗದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಸಾರ್ವಜನಿಕರಿಗೆ ಸ್ಪಂದಿಸಬೇಕು. ಸಭೆಗೆ ಅಗಮಿಸುವ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳಾದ ಕುಡಿಯುವ ನೀರು, ಲಘು ಉಪಹಾರ ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಒದಗಿಸಬೇಕು ಎಂದ ಅವರು, ಪ್ರತೀ ಹದಿನೈದು ದಿನಗಳಿಗೊಮ್ಮೆ ತಾಲೂಕುವಾರು ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುವುದು ಎಂದರು.
    ಸಭೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್, ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

  • ಹಾಲಾಡಿ – ಸಾಧಕರ ಜೀವನದ ಯಶೋಗಾಥೆ ಹೊಸ ಸಾಧನೆಗೆ ಮಾರ್ಗದರ್ಶಿ – ಲಕ್ಷ್ಮೀ ಹೆಬ್ಬಾಳ್ಕರ್

    ಹಾಲಾಡಿ – ಸಾಧಕರ ಜೀವನದ ಯಶೋಗಾಥೆ ಹೊಸ ಸಾಧನೆಗೆ ಮಾರ್ಗದರ್ಶಿ – ಲಕ್ಷ್ಮೀ ಹೆಬ್ಬಾಳ್ಕರ್

    ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರಿಗೆ ಹುಟ್ಟೂರ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…


    ಕುಂದಾಪುರ :ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರು ಈ ಹಂತಕ್ಕೆ ಬೆಳೆಯುವುದರ ಹಿಂದೆ ಸಾಕಷ್ಟು ಪರಿಶ್ರಮವಿದೆ. ಅವರ ಸಾಧನೆಯ ಹಾದಿಯನ್ನು ನಾವು ಮೆಲುಕು ಹಾಕಬೇಕು. ಮುನ್ನೆಡೆಗೆ ಇಂಥಹ ಸಾಧಕರ ಜೀವನದ ಯಶೋಗಾಥೆ ಮಾರ್ಗದರ್ಶಿ ಆಗುತ್ತದೆ ಎಂದು ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

    ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಹುಟ್ಟೂರ ಸನ್ಮಾನ ಸಮಿತಿ ನೇತೃತ್ವದಲ್ಲಿ ಹಾಲಾಡಿಯ ಶ್ರೀಮತಿ ಶಾಲಿನಿ ಜಿ.ಶಂಕರ್ ಕನ್ವೆಶನ್ ಸೆಂಟರ್‍ನಲ್ಲಿ ನಡೆದ ಗೌರವ ಡಾಕ್ಟರ್ ಆಫ್ ಸೈನ್ಸ್ ಪುರಸ್ಕೃತರಾದ ಮೈಸೂರು ಮರ್ಕಂಟೈಲ್ ಕಂಪನಿ ಅಧ್ಯಕ್ಷರು ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಬೆಂಗಳೂರು ಇದರ ಅಧ್ಯಕ್ಷರಾಗಿರುವ ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರ ಹುಟ್ಟೂರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರು ಶಿಕ್ಷಣ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಸಮಾಜಕ್ಕೆ ಸಹಾಯ ಹಸ್ತ ನೀಡುತ್ತಿದ್ದಾರೆ. ಕೆಲವೇ ಕೆಲವು ವ್ಯಕ್ತಿಗಳಲ್ಲಿ ಸಮಾಜಕ್ಕೆ ಸ್ಪಂದಿಸುವ ಹೃದಯ ಶ್ರೀಮಂತಿಕೆ ಇರುತ್ತದೆ. ದೇವರ ರೂಪದಲ್ಲಿ ಇಂಥಹ ವ್ಯಕ್ತಿಗಳು ಸಮಾಜಕ್ಕೆ ಸ್ಪಂದಿಸುತ್ತಾರೆ ಎಂದು ಅಭಿಪ್ರಾಯ ಪಟ್ಟರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು.

    ಕರ್ನಾಟಕ ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್‍ಚಂದ್ರ ಶೆಟ್ಟಿ ಅವರು ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ದಂಪತಿಗಳನ್ನು ಸನ್ಮಾನಿಸಿದರು.

    ಹುಟ್ಟೂರ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರು, ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡು ರಾಜ್ಯದಲ್ಲಿ ಪ್ರಥಮ ಬಾರಿಗೆ ಖಾಸಗಿ ಹಾಗೂ ಸರ್ಕಾರ ಸಹಭಾಗಿತ್ವದಲ್ಲಿ ಪಬ್ಲಿಕ್ ಸ್ಕೂಲ್ ನಿರ್ಮಾಣವಾಗುತ್ತಿದೆ. ಡಿಸೆಂಬರ್‍ನಲ್ಲಿ ಉದ್ಘಾಟನೆಯಾಗಲಿದೆ. ಹಾಲಾಡಿ ನನ್ನ ಹುಟ್ಟೂರು. ಹಾಲಾಡಿಯಲ್ಲಿ 4-5 ಸರ್ಕಾರಿ ಶಾಲೆಗಳಿವೆ. ಅವುಗಳನ್ನೆಲ್ಲ ಒಟ್ಟುಗೂಡಿಸಿ ಪಬ್ಲಿಕ್ ಸ್ಕೂಲ್ ನಿರ್ಮಾಣ ಮಾಡುವುದಾಗಿ ತೀರ್ಮಾನಿಸಿದ್ದೇನೆ. ಈ ಸಂದರ್ಭದಲ್ಲಿ ಘೋಷಣೆ ಮಾಡುತ್ತೇನೆ ಎಂದು ಹೇಳಿದರು.

    ವೇ.ಮೂ.ತಟ್ಟುವಟ್ಟು ವಾಸುದೇವ ಜೋಯಿಸ ಹಾಲಾಡಿ ಆಶೀರ್ವಚನ ನೀಡಿದರು.

    ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಉದ್ಯಮಿ ಎಂ ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಚೋರಾಡಿ, ಸನ್ಮಾನ ಸಮಿತಿ ಗೌರವಾಧ್ಯಕ್ಷ ಮಂಜುನಾಥ ಕಾಮತ್, ಗ್ರಾ.ಪಂ. ಮಾಜಿ ಅಧ್ಯಕ್ಷ ನಾಗರಾಜ ಗೋಳಿ, ನ್ಯಾಯವಾದಿ ರವಿರಾಜ ಶೆಟ್ಟಿ ಉಪಸ್ಥಿತರಿದ್ದರು.
    ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭಾಗವತ ರಾಘವೇಂದ್ರ ಮಯ್ಯ ಪ್ರಾರ್ಥನೆ ಮಾಡಿದರು. ಹುಟ್ಟೂರ ಸಮಿತಿ ಸರ್ವೋತ್ತ ಶೆಟ್ಟಿ ಸ್ವಾಗತಿಸಿದರು. ಆರ್.ಜೆ ನಯನ ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯೋಪಾಧ್ಯಾಯಿನಿ ರೋಶನಿ ಬಿಬಿ ವಂದಿಸಿದರು.

  • ಕುಂದಾಪುರ :ಶಿಕ್ಷಣದ ರಾಯಭಾರಿ ಜಿ. ಎಮ್.ಗೊಂಡರವರಿಗೆ ಸಾಧಕ ಪ್ರಶಸ್ತಿ

    ಕುಂದಾಪುರ :ಶಿಕ್ಷಣದ ರಾಯಭಾರಿ ಜಿ. ಎಮ್.ಗೊಂಡರವರಿಗೆ ಸಾಧಕ ಪ್ರಶಸ್ತಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಜೆಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ಶ್ರೀ ಲಕ್ಷ್ಮಿ ನರಸಿಂಹ ಕಲಾ ಮಂದಿರದಲ್ಲಿ ಜೆಸಿ ಸಪ್ತಾಹದ ಪ್ರಯುಕ್ತ ಶಿಕ್ಷಣದ ರಾಯಭಾರಿಯಾಗಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಪದವಿ ಪೂರ್ವ ಪ್ರಾಂಶುಪಾಲರಾದ ಜಿ. ಎಮ್. ಗೊಂಡರವರನ್ನು ಸಾಧಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

    ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷರಾದ ಡಾ ಸೋನಿ ವಹಿಸಿದ್ದರು.

    ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕುಂದಾಪುರ ಕಾರ್ತಿಕ್ ಸ್ಕ್ಯಾನಿಂಗ್ ನ ನಿರ್ದೇಶಕರಾದ ಡಾ. ಬಿ. ಎಮ್. ಉಡುಪ, ವಲಯ 15ರ ಪೂರ್ವ ವಲಯಾಧ್ಯಕ್ಷ ಅಲನ್ ರೋಹನ್ ವಾಜ್ ಉಪ್ಪುಂದ ಜೇಸಿ ಪೂರ್ವ ಅಧ್ಯಕ್ಷರಾದ ಪ್ರಕಾಶ್ ಭಟ್ ವಲಯ 15 ರ ತರಬೇತುದಾರ ಕೆ.ಕೆ. ಶಿವರಾಮ್ , ಜೆಸಿಐ ಕುಂದಾಪುರ ಸಿಟಿ ಸ್ಥಾಪಕಧ್ಯಕ್ಷ ಹುಸೇನ್ ಹೈಕಾಡಿ, ಪೂರ್ವ ಅಧ್ಯಕ್ಷರಾದ ರಾಘವೇಂದ್ರ ಚರಣ್ ನಾವಡ, ನಾಗೇಶ ನಾವಡ, ವಿಜಯ್ ಭಂಡಾರಿ, ಶ್ರೀಧರ್ ಸುವರ್ಣ ಚಂದ್ರಕಾಂತ್, ಗಿರೀಶ್ ಹೆಬ್ಬಾರ್, ಪ್ರಶಾಂತ್ ಹವಾಲ್ದಾರ್, ನಿಕಟ ಪೂರ್ವ ಅಧ್ಯಕ್ಷ ಅಭಿಲಾಶ್, ಕಾರ್ಯದರ್ಶಿ ಸಂದೇಶ್ ಶೆಟ್ಟಿ, ಲೇಡಿ ಜೇಸಿ ಅಧ್ಯಕ್ಷೆ ಪ್ರೇಮ. ಡಿ’ಕೋನ್ಹ, ಜೊತೆ ಕಾರ್ಯದರ್ಶಿ ಶೈಲಾ ಲೂಯಿಸ್,
    ಸಪ್ತಾಹದ ಸಭಾಪತಿ ರಾಘವೇಂದ್ರ ಕುಲಾಲ್, ಹೆಮ್ಮಾಡಿ ಯುವ ಜೇಸಿ ಅಧ್ಯಕ್ಷೆ ಚಂದ್ರಿಕಾ ಮೊದಲಾದವರು ಉಪಸ್ಥಿತರಿದ್ದರು.

  • ಜಡ್ಕಲ್ :ಮಹಿಳೆ ನಾಪತ್ತೆ

    ಜಡ್ಕಲ್ :ಮಹಿಳೆ ನಾಪತ್ತೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಬೈಂದೂರು ತಾಲೂಕು ಹಾಲ್ಕಲ್, ಜಡ್ಕಲ್ ಗ್ರಾಮದ ತುಂಬೆ ಮಕ್ಕಿ ನಿವಾಸಿ ಮೈತ್ರಿ (23) ಎಂಬ ಮಹಿಳೆಯು ಸೆಪ್ಟಂಬರ್ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

    5 ಅಡಿ 3 ಇಂಚು ಎತ್ತರ, ದುಂಡು ಮುಖ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ.9480805434, ಕಂಟ್ರೋಲ್ ರೂಂ : 100, ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕುಂದಾಪುರ :ಸಮಾಜದಲ್ಲಿ ತಮ್ಮನ್ನು ತಾವು ಅರ್ಪಿಸಿಕೊಳ್ಳಿ – ಪ್ರಕಾಶ್ ಸಿ ತೋಳಾರ್

    ಕುಂದಾಪುರ :ಸಮಾಜದಲ್ಲಿ ತಮ್ಮನ್ನು ತಾವು ಅರ್ಪಿಸಿಕೊಳ್ಳಿ – ಪ್ರಕಾಶ್ ಸಿ ತೋಳಾರ್

    ಪಡುಕರೆ ರಜತ ಪರ್ವ ಕಾರ್ಯಕ್ರಮದಲ್ಲಿ ಆನಂದ್ ಸಿ ಕುಂದರ್ ದಂಪತಿಗಳಿಗೆ ಹುಟ್ಟೂರ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಅರ್ಪಿಸಿಕೊಂಡಾಗ ಅದರ ನೈಜ ಸ್ಥಿತಿಗತಿ ಅನಾವರಣಗೊಳ್ಳುತ್ತದೆ ಎಂದು ಪ್ರಸಿದ್ಧ ಮನೋವೈದ್ಯ ಡಾ.ಪ್ರಕಾಶ್ ಸಿ ತೋಳಾರ್ ಹೇಳಿದರು.

    ಕೋಟ ಪಡುಕರೆ ಐಸ್ ಪ್ಯ್ಲಾಂಟ್ ಸಮೀಪ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೋಟ ಪಡುಕರೆ ಇವರ ಆಶ್ರಯದಲ್ಲಿ 25ನೇ ವರ್ಷದ ಗಣೇಶೋತ್ಸವ ರಜತ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿ ಸಮಾಜದ ಏಳು ಬೀಳುಗಳನ್ನು ಅರಿತು ಇಲ್ಲಿನ ಪ್ರತಿಯೊಬ್ಬರ ನೋವು ನಲಿಯುಗಳಿಗೆ ಸ್ಪಂದಿಸುವ ಆನಂದ್ ಸಿ ಕುಂದರ್ ಸಾಮಾಜಿಕ ಬದ್ಧತೆಯನ್ನು ಆಶಯದಲ್ಲಿ ಕೊಂಡಾಡಿದರು.

    ತಾನು ಈ ಸಮಾಜದಲ್ಲಿ ಬದುಕುತ್ತೇನೆ ಎಂಬುವುದು ಮುಖ್ಯವಲ್ಲ ಬದಲಾಗಿ ಸಮಾಜಕ್ಕೆ ನಾವೆನು ಕೊಡುಗೆ ನೀಡುತ್ತಿದ್ದೇವೆ ಅದು ಮುಖ್ಯವಾಗುತ್ತದೆ. ಈ ದಿಸೆಯಲ್ಲಿ ಪಡುಕರೆ ಎಂಬ ಗ್ರಾಮೀಣ ಭಾಗವನ್ನು ಶೈಕ್ಷಣಿಕ ಕ್ರಾಂತಿಯಾಗಿಸಿ ಅದೆಷ್ಟೊ ವಿದ್ಯಾರ್ಥಿಗಳ ಬದುಕಿಗೆ ಮುನ್ನಡಿ ಬರೆದಿದ್ದಾರೆ. ಇಂಥಹ ವ್ಯಕ್ತಿಗಳು ಈ ವ್ಯವಸ್ಥೆಯಲ್ಲಿ ಬಲು ಅಪರೂಪವಾಗಿದೆ ಎಂದು ಅಭಿಪ್ರಾಯಪಟ್ಟರು.

    ಈ ಸಂದರ್ಭದಲ್ಲಿ ಸಮಾಜಸೇವಕ ಆನಂದ್ ಸಿ ಕುಂದರ್ ದಂಪತಿಗಳಿಗೆ ಹುಟ್ಟೂರ ಸನ್ಮಾನ ನೀಡಿ ಗೌರವಿಸಲಾಯಿತು.
    ಈ ವೇಳೆ ಗಣೇಶೋತ್ಸವಕ್ಕೆ ಸ್ಥಳಾವಕಾಶ ನೀಡಿದ ಸ್ಥಳದಾನಿ ಮಣೂರು ರಾಮ ಹೊಳ್ಳ ಇವರನ್ನು ಅಭಿನಂದಿಸಲಾಯಿತು.
    ಸ್ಥಳೀಯವಾಗಿ ಗಣೇಶೋತ್ಸವಕ್ಕೆ ಆರಂಭಿಕ ಮೆರುಗು ನೀಡಿದ ಗಣೇಶ್, ನಿತೀನ್ ಮೆಂಡನ್, ವಿನೋದ್ ಮೆಂಡನ್ ಇವರನ್ನು ಗುರುತಿಸಿ ಗೌರವಿಸಲಾಯಿತು.

    ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದಿಗಂತ್ ಪೂಜಾರಿ ಕೋಟತಟ್ಟು ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

    ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಶಶಿಧರ ತಿಂಗಳಾಯ ವಹಿಸಿದ್ದರು.

    ಕಾರ್ಯಕ್ರಮವನ್ನು ಉದ್ಯಮಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು.

    ಮುಖ್ಯ ಅಭ್ಯಾಗತರಾಗಿ ಉದ್ಯಮಿ ಬಿಜು ನಾಯರ್, ಕೆ.ಎಮ್ ಜಾಫರ್, ಸುರೇಶ್ ಕುಂದರ್, ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಧರ್ಮದರ್ಶಿ ಸತೀಶ್ ಹೆಚ್ ಕುಂದರ್, ರಾಷ್ಟ್ರೀಯ ಮಾನವ ಹಕ್ಕು ಸಮಿತಿ ರಾಜ್ಯ ಪ್ರಧಾನಕಾರ್ಯದರ್ಶಿ ಡಾ.ದಿನೇಶ್ ಗಾಣಿಗ, ಕೋಟ ಗ್ರಾ.ಪಂ ಸದಸ್ಯ ಪ್ರದೀಪ್ ಸಾಲಿಯಾನ್, ಸ್ಥಳೀಯರಾದ ಗುಲಾಬಿ ಬಂಗೇರ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್ ಉಪಸ್ಥಿತರಿದ್ದರು. ದೀಪಿಕಾ ರವಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಿಕ್ಷಕ ಸಂತೋಷ್ ಕುಮಾರ್ ಕೋಟ ನಿರೂಪಿಸಿ ವಂದಿಸಿದರು.

  • ಕುಂದಾಪುರ :ಗಣೇಶೋತ್ಸವ ಕಾರ್ಯಕ್ರಮಗಳು ಸಾಮರಸ್ಯದ ಸಂಕೇತ – ಆನಂದ್ ಸಿ ಕುಂದರ್

    ಕುಂದಾಪುರ :ಗಣೇಶೋತ್ಸವ ಕಾರ್ಯಕ್ರಮಗಳು ಸಾಮರಸ್ಯದ ಸಂಕೇತ – ಆನಂದ್ ಸಿ ಕುಂದರ್

    ಕೋಟ ಹಂದಟ್ಟು 23ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಗಣೇಶೋತ್ಸವ ಕಾರ್ಯಕ್ರಮಗಳು ಆಡಂಬರಕ್ಕೆ ವೇದಿಕೆಯಾಗದೆ ಅರ್ಥಪೂರ್ಣವಾಗಿ ಆಚರಿಸಿಕೊಂಡಾಗ ಅದರ ನೈಜತೆ ಅನಾವರಣಗೊಳ್ಳುತ್ತದೆ ಎಂದು ಕೋಟ ಅಮೃತೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದರು.

    ಕೋಟದ ಹಂದಟ್ಟು ದಾನಗುಂದು ಬಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೆಳೆಯರ ಬಳಗ ಹಂದಟ್ಟು ಇವರ ಆಶ್ರಯದಲ್ಲಿ 23ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಸ್ವಾತಂತ್ರ್ಯದ ಕಾಲಘಟ್ಟದಲ್ಲಿ ಬಾಲಗಂಗಾಧರ ತಿಲಕರು ದೇಶದ ಜನತೆಯನ್ನು ಒಗ್ಗೂಡಿಸುವ ಸಲುವಾಗಿ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಹೊಸ ಆಯಾಮ ನೀಡಿದರು. ಆದರೆ ಇದು ಇಂದು ಗಲ್ಲಿ ಗಲ್ಲಿಗಳಲ್ಲಿ ಪಸರಿಸಿಕೊಂಡಿದೆ ಇದು ಗ್ರಾಮದ ಒಗ್ಗಟ್ಟನ್ನು ಇನ್ನಷ್ಟು ಇಮ್ಮಡಿಗೊಳಿಸಲಿ ಎಂದು ಶುಭಹಾರೈಸಿದರು.

    ಈ ಸಂದರ್ಭದಲ್ಲಿ ಸಮಾಜ ಸೇವಕ ಆನಂದ್ ಸಿ ಕುಂದರ್, ಮಹಾಲಕ್ಷ್ನೀ ಹಂದೆ, ಸಿ ಎ ರೋಹಿತ್ ಇವರನ್ನು ಸನ್ಮಾನಿಸಲಾಯಿತು.

    ದಿಕ್ಸೂಚಿ ಭಾಷಣಕಾರರಾಗಿ ಕಷಕೋಡಿ ಸೂರ್ಯನಾರಾಯಣ ಭಟ್ ಆಗಮಿಸಿ ಸನಾತನ ಧರ್ಮ ಹಾಗೂ ಅದರ ಏಳುಬೀಳು,ಗಣೇಶೋತ್ಸವ ಆವರಣೆಯ ಕುರಿತು ಸಮಗ್ರ ಮಾಹಿತಿ ನೀಡಿದರು.

    ಅಧ್ಯಕ್ಷತೆಯನ್ನು ಗೆಳೆಯರ ಬಳಗ ಹಂದಟ್ಟು ಅಧ್ಯಕ್ಷ ಪ್ರಕಾಶ್ ಹಂದಟ್ಟು ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಗ್ರಾ.ಪಂ ಅಧ್ಯಕ್ಷ ಸತೀಶ್ ಕುಂದರ್ ಉಪಸ್ಥಿತರಿದ್ದರು.ಬಳಗದ ನಿತೀಶ್ ಸ್ವಾಗತಿಸಿದರೆ, ಕಾರ್ಯಕ್ರಮವನ್ನು ಸುಜಾತ ಬಾಯರಿ ನಿರೂಪಿಸಿ ವಂದಿಸಿದರು.

  • ಕುಂದಾಪುರ :ಬಹುರೂಪಿ-2023(ಸಾಧನೆಯ ಹೂಕಂಪನ) ಆಮಂತ್ರಣ ಪತ್ರಿಕೆ ಬಿಡುಗಡೆ

    ಕುಂದಾಪುರ :ಬಹುರೂಪಿ-2023(ಸಾಧನೆಯ ಹೂಕಂಪನ) ಆಮಂತ್ರಣ ಪತ್ರಿಕೆ ಬಿಡುಗಡೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಾಹಿತಿ-ಶಿಕ್ಷಕ ನರೇಂದ್ರ ಕುಮಾರ್ ಕೋಟ ಇವರಿಗೆ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಬಹುರೂಪಿ-2023(ಸಾಧನೆಯ ಹೂಕಂಪನ) ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಸೋಮಶೇಖರ್ ಶೆಟ್ಟಿ ಬಿಡುಗಡೆಗೊಳಿಸಿ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವವರ ಸಂಖ್ಯೆ ಸಮಾಜದಲ್ಲಿ ಹೆಚ್ಚಾದಾಗ ಸಾಧನೆ ಮಾಡಬೇಕೆನ್ನುವ ಮನಸ್ಸುಗಳು ಹೆಚ್ಚುತ್ತದೆ ಎಂದರು.

    ಕಾರ್ಯಕ್ರಮದ ಸಂಚಾಲಕ, ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಪ್ರವರ್ತಕ ಆನಂದ್ ಸಿ ಕುಂದರ್ ಮಾತನಾಡಿ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕರೆಯಲ್ಲಿ ಸೆ. 24 ರಂದು ಬೆಳಿಗ್ಗೆ 9.30ರಿಂದ ನಡೆಯಲಿದ್ದು ಕಾರ್ಯಕ್ರಮವನ್ನು ನಾಡೋಜ ಡಾ.ಜಿ ಶಂಕರ್ ಉದ್ಘಾಟಿಸಲಿದ್ದು, ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸನ್ಮಾನಿಸಲಿದ್ದಾರೆ, ಕುಂದಾಪುರ ವಿಧಾನ ಸಭಾ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಆಶಯ ನುಡಿಗಳನ್ನಾಡಲಿದ್ದು, ಇನ್ನಿತರ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್, ಶ್ರೀಕ್ಷೇತ್ರ ಅಮೃತೇಶ್ವರಿ ದೇವಸ್ಥಾನದ ಟ್ರಸ್ಟಿಗಳಾದ ಶ್ರೀ ಸುಬ್ರಾಯ್ ಆಚಾರ್ಯ, ಸುಶೀಲಾ ಸೋಮಶೇಖರ್, ಶಿಕ್ಷಕ ಸತೀಶ್ ವಡ್ಡರ್ಸೆ, ಸುಮುಖ ಶ್ಯಾಮಿಯನದ ಮಾಲಕ ಪ್ರಕಾಶ್ ಪೂಜಾರಿ, ಭಗತ್ ಸಿಂಗ್ ಯುವವೇದಿಕೆ ಕೋಟದ ಅಧ್ಯಕ್ಷ ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು.

  • ಬಡಗುತಿಟ್ಟಿನ ಪ್ರಸಿದ್ಧ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನಬೈಲು ನಿಧನ

    ಬಡಗುತಿಟ್ಟಿನ ಪ್ರಸಿದ್ಧ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನಬೈಲು ನಿಧನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಬಡಗುತಿಟ್ಟಿನ ಪ್ರಸಿದ್ಧ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನಬೈಲು (೫೭ವ) ಸೆ.೨೧ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಬಡಗುತಿಟ್ಟಿನ ಹಲವಾರು ಮೇಳಗಳಲ್ಲಿ ಅವರು ತಿರುಗಾಟ ಮಾಡಿದ್ದರು. ಉತ್ತಮ ಕಂಠಸಿರಿ ಹೊಂದಿದ್ದ ಅವರು ಗಾನವೈಭವ, ತಾಳಮದ್ದಳೆಗಳಿಗೆ ಬೇಡಿಕೆಯ ಭಾಗವತರಾಗಿದ್ದರು. ಪ್ರಸಂಗ ರಚನೆಯಲ್ಲಿಯೂ ಗುರುತಿಸಿಕೊಂಡಿದ್ದ ರಾಮಚಂದ್ರ ನಾಯ್ಕರು ಪುರಾಣ ಆಧರಿತ, ಕಾಲ್ಪನಿಕ ಪ್ರಸಂಗಳನ್ನು ರಚಿಸಿ, ನಿರ್ದೇಶಿಸಿ ಯಶಸ್ವಿ ಪ್ರಯೋಗವನ್ನು ಮಾಡಿದ್ದರು. ಸಾಲಿಗ್ರಾಮ ಮೇಳದಲ್ಲಿಯೂ ತಿರುಗಾಟ ಮಾಡಿದ ಅವರು ಸಾಮಾಜಿಕ ಪ್ರಸಂಗಗಳಿಗೆ ಅದ್ಭುತವಾಗಿ ಜೀವ ತುಂಬಿದ್ದರು. ಇತ್ತೀಚೆಗೆ ಅವರು ಸಿಗಂದೂರು ಮೇಳದಲ್ಲಿ ತಿರುಗಾಟ ಮಾಡಿದ್ದರು.

    ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

  • ಕುಂದಾಪುರ :ನರ್ಸಿ ಅಜ್ಜಿಗೆ ಸೂರು ಒದಗಿಸಿದ ಕುಂದಾಪುರ ವಾಟ್ಸಾಪ್ ಫ್ರೆಂಡ್ಸ್ ಗ್ರೂಪ್

    ಕುಂದಾಪುರ :ನರ್ಸಿ ಅಜ್ಜಿಗೆ ಸೂರು ಒದಗಿಸಿದ ಕುಂದಾಪುರ ವಾಟ್ಸಾಪ್ ಫ್ರೆಂಡ್ಸ್ ಗ್ರೂಪ್

    Video :

    ಕುಂದಾಪುರ ಮಿರರ್ ಸುದ್ದಿ….

    ಕುಂದಾಪುರ: ಅದು ನರ್ಸಿ ಅಜ್ಜಿಯ ಜೋಪಡಿ. ನರ್ಸಿ ಅಜ್ಜಿ ದಂಪತಿಗಳಿಗೆ ಕೆಲಸ ಮಾಡುವುದೇನು, ನಡೆದಾಡುವುದಕ್ಕೂ ಕಷ್ಟದ ಸ್ಥಿತಿ. ಹೌದು ಇದು ಕುಂದಾಪುರ ತಾಲೂಕಿನ ಯಡಾಡಿ ಮತ್ಯಾಡಿ ಗ್ರಾಮದ ಬಡ ವೃದ್ಧ ದಂಪತಿಗಳ ದುರಂತ ಕಥೆ.

    ಕಿತ್ತು ತಿನ್ನುವ ಬಡತನದ ಜೊತೆಗೆ‌ ವಯೋಸಹಜ ಸಮಸ್ಯೆಗಳ ಜೊತೆಗೆ ಕಿತ್ತುಹೋದ ಜೋಪಡಿ. 2020ರ ಲಾಕ್ ಡೌನ್ ಸಂದರ್ಭದಲ್ಲಿ ದಾನಿಗಳು ನೀಡಿದ ರೇಷನ್ ಕಿಟ್ ಹಂಚುವ ಸಂದರ್ಭದಲ್ಲಿ ಕಂಡು ಬಂದ ಈ ನರ್ಸಿ ಅಜ್ಜಿಯ ಜೋಪಡಿಗೆ ರೂಪಕೊಟ್ಟು ಹೊಸ ಮನೆ ನಿರ್ಮಿಸಿದ ವಾಟ್ಸಾಪ್ ಪ್ರೆಂಡ್ಸ್ ಗ್ರೂಪ್ ಸಾಧನೆಯೂ ಸಣ್ಣದಲ್ಲ.

    ಹೌದು. ಕುಂದಾಪುರ ಫ್ರೆಂಡ್ಸ್ ವಾಟ್ಸಾಪ್ ಗ್ರೂಪ್ ನ ಅಡ್ಮಿನ್ ದಿನೇಶ್ ಪುತ್ರನ್ ಹಾಗೂ ಸ್ನೇಹಿತ ನಾಗೇಶ್ ನಾವಡರ ಕನಸು ಬುಧವಾರ ನನಸಾಗಿದೆ. ಸುಮಾರು ಒಂದೂವರೆ ಲಕ್ಷ ಮೌಲ್ಯದ ಪುಟ್ಟದಾದ ಮನೆಯೊಂದನ್ನು ನರ್ಸಿ ಅಜ್ಜಿ ದಂಪತಿಗಳಿಗೆ ಹಸ್ತಾಂತರಿಸಿದ್ದಾರೆ.

    ಲಾಕ್ ಡೌನ್ ಬಳಿಕ ಅಜ್ಜಿಗೆ ಮನೆಕಟ್ಟುವ ಬಗ್ಗೆ ದಾನಿಗಳನ್ನು ಹುಡುಕಿದರೂ ಪ್ರಯೋಜನವಾಗಿಲ್ಲ. ಪ್ರತಿಷ್ಟಿತ ಕಂಪೆನಿಗಳಿಗೂ ಮನವಿ ಸಲ್ಲಿಸಿದರು. ಬಳಿಕ ಸ್ನೇಹಿತ ರವಿ ಮೊಗವೀರ ಜೊತೆ ಸೇರಿ ಸರ್ಕಾರದ ಸವಲತ್ತುಗಳ ಬಗ್ಗೆಯೂ ಪ್ರಯತ್ನಿಸಿ ಸೋತಿದ್ದಾರೆ.

    ಕೊನೆಗೆ ದೃಡ ಮನಸ್ಸು ಮಾಡಿದ ಗೆಳೆಯರು ಸೇರಿ ತಮ್ಮ ಕುಂದಾಪುರ ಫ್ರೆಂಡ್ಸ್ ವಾಟ್ಸಾಪ್ ಗ್ರೂಪ್ ಹಾಗೂ ಕುಟುಂಬಿಕರ ಸಹಕಾರದಿಂದ, ಜೇಸೀ ಕುಂದಾಪುರ ಸಿಟಿ ಹಾಗೂ ರೋಟರಿ ಕುಂದಾಪುರ ಸನ್ ರೈಸ್ ಸದಸ್ಯರ ಬೆಂಬಲದಿಂದ ಸುಂದರ ಮನೆಯೊಂದು ಸಿದ್ಧವಾಗಿಯೇ ಬಿಟ್ಟಿತು.

    ದಿನೇಶ್ ಪುತ್ರನ್ ವಿಠಲವಾಡಿ ಮನೆಯ ಸಂಪೂರ್ಣ ಜವಾಬ್ಧಾರಿ ನಿರ್ವಹಿಸಿದರೆ ರವಿ ಮೊಗವೀರ ಕಾಮಗಾರಿ ಉಸ್ತುವಾರಿ ನಿರ್ವಹಿಸಿದರು. ಬುಧವಾರ ನರ್ಸಿ ಅಜ್ಜಿ ಹಾಗೂ ಅವರ ಪತಿ ಅನಂತ ಮನೆಯನ್ನು ಉದ್ಘಾಟಿಸಿದರು. ನಾಗೇಶ್ ನಾವಡ, ಹುಸೈನ್ ಹೈಕಾಡಿ, ಡಾ. ಸೋನಿ ಡಿ ಕೋಸ್ತಾ, ರೇಷ್ಮಾ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

  • ಬೆಂಗಳೂರು ಮುರ್ಡೇಶ್ವರ ರೈಲಿಗೆ ಅವೈಜ್ಞಾನಿಕ ವೇಳಾಪಟ್ಟಿ : ಹಿತರಕ್ಷಣಾ ವೇದಿಕೆ ಆಕ್ರೋಶ

    ಬೆಂಗಳೂರು ಮುರ್ಡೇಶ್ವರ ರೈಲಿಗೆ ಅವೈಜ್ಞಾನಿಕ ವೇಳಾಪಟ್ಟಿ : ಹಿತರಕ್ಷಣಾ ವೇದಿಕೆ ಆಕ್ರೋಶ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇತ್ತೀಚೆಗೆ ಮುರುಡೇಶ್ವರದ ವರೆಗೆ ವಿಸ್ತರಣೆಗೊಂಡ ಬೆಂಗಳೂರು ಮೈಸೂರು ಮಂಗಳೂರು ಮುರ್ಡೇಶ್ವರ (16585) ರೈಲಿನ ವೇಳಾಪಟ್ಟಿಯ ವಿರುದ್ಧ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಮಂಗಳೂರಿನಿಂದ ಸುರತ್ಕಲ್ ಗೆ ಕೇವಲ 20 ಕಿ ಮಿ ದೂರವಿದೆ. ಆದರೆ, ಈ ರೈಲು ಮಂಗಳೂರಿಗೆ 8.15ಕ್ಕೆ ಬಂದರೆ 11 ಘಂಟೆಗೆ ಸುರತ್ಕಲ್ ಗೆ ಬರುವ ಮೂಲಕ ಬರೋಬ್ಬರಿ ಮೂರೂವರೆ ಗಂಟೆ ಸಮಯ ತೆಗೆದುಕೊಳ್ಳುತ್ತಿದೆ. ಮತ್ಸಗಂಧಾ ಎಕ್ಸ್ ಪ್ರೆಸ್ ರೈಲು 2ಗಂಟೆ ಅವಧಿಯಲ್ಲಿ ಮಂಗಳೂರಿನಿಂದ ಕುಂದಾಪುರಕ್ಕೆ ಬರುತ್ತದೆ. ಆದರೆ ಈ ರೈಲಿಗೆ ಮೂರು ಗಂಟೆ ತಗಲುತ್ತಿದೆ. ನೈರುತ್ಯ ರೈಲ್ವೆಯಿಂದ ಮೊದಲಿಗಿಂತಲೂ ಅರ್ಧ ಘಂಟೆ ಬೇಗನೆ ಪಡೆದು ಕೊಂಕಣ ರೈಲ್ವೇಗೆ ಮಾತ್ರ ವಿಳಂಭವಾಗಿ ರೈಲನ್ನು ಹಸ್ತಾಂತರಿಸುವುದರಿಂದ ಕೇರಳದ ಲಾಬಿಗೆ ದಕ್ಷಿಣ ರೈಲ್ವೆ ಮಣಿದಿದೆ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ ಎಂದಿದ್ದಾರೆ.

    ಇಲಾಖೆ ಈ ಬಗ್ಗೆ ಸರಿಯಾದ ವೇಳಾ ಪಟ್ಟಿ ಸಿದ್ಧಪಡಿಸಿದರೆ ಈ ರೈಲನ್ನು ಗೋಕರ್ಣ, ಕಾರವಾರ ದ ವರೆಗೂ ವಿಸ್ತರಿಸಬಹುದು. ಮೈಸೂರು, ಉಡುಪಿ, ಆನೆಗುಡ್ಡೆ, ಹಟ್ಟಿಅಂಗಡಿ ವಿನಾಯಕ, ಕೊಲ್ಲೂರು, ಇಡಗುಂಜಿ, ಗೋಕರ್ಣಕ್ಕೆ ಅನುಕೂಲವಾಗುವ ವೇಳಾ ಪಟ್ಟಿ ತಯಾರಿಸಿ ಅನುಕೂಲ ಮಾಡಬೇಕು ಮತ್ತು ಯಾವುದೇ ಕಾರಣಕ್ಕೂ ಉಳಿದ ರೈಲುಗಳ ಸಂಚಾರದ ಅವಧಿಯಷ್ಟೇ ಈ ರೈಲಿಗೂ ಅನ್ವಯ ಆಗುವ ವೇಳಾಪಟ್ಟಿ ತಯಾರಿಸಿ ಅನುಕೂಲ ಮಾಡಬೇಕು ಎಂದು ಗಣೇಶ್ ಪುತ್ರನ್ ಅಗ್ರಹಿಸಿದ್ದಾರೆ.