Category: ಸುದ್ದಿ

  • ಕುಂದಾಪುರ :ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

    ಕುಂದಾಪುರ :ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

    ಕುಂದಾಪುರ ಮಿರರ್ ‌ಸುದ್ದಿ…

    ಕುಂದಾಪುರ: ಶಿಕ್ಷಕರ ಉದ್ಧೇಶ ಜ್ಞಾನ ಕೊಡುವುದೇ ಹೊರತು ಉದ್ಯೋಗ ನೀಡುವುದಲ್ಲ. ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳುವುದರೊಂದಿಗೆ ನಿರಂತರ ಪ್ರಯತ್ನದ ಮುಖೇನ ಬದುಕು ರೂಪಿಸಿಕೊಳ್ಳುವಂತಾಗಬೇಕು. ವಿದ್ಯೆಯೊಂದಿಗಿನ ಸಂಸ್ಕಾರದ ಬದುಕು ಶಿಷ್ಯಂದಿರದ್ದಾದರೆ ಅದು ಗುರುವಿಗೆ ನೀಡುವ ಬಹುದೊಡ್ಡ ಸತ್ಕಾರ ಎಂದು ಬೈಂದೂರು ಪದವಿ ಪೂರ್ವ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಉದಯ್ ಕುಮಾರ್ ಎಮ್.ಪಿ. ಹೇಳಿದರು.

    ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯನ್ನುದ್ಧೇಶಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ, ಶಿಕ್ಷಣ ಕೇವಲ ಅಭ್ಯಾಸವಾಗದೆ ವಿದ್ಯಾರ್ಥಿಗಳ ಪೂರ್ಣ ವ್ಯಕ್ತಿತ್ವ ನಿರ್ಮಾಣವಾಗುವಂತಾಗಬೇಕು ಎಂದರು.

    ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಅತಿಥಿಗಳನ್ನು ಪರಿಚಯಿಸಿ, ಪ್ರೀತಿ ಹೆಗ್ಡೆ ವಂದಿಸಿದರು. ಕನ್ನಡ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ ಪ್ರಾರ್ಥಿಸಿದರು. ಪೂಜಾ ಆಚಾರ್ ಅಭಿನಂದನ ಗೀತೆ ಹಾಡಿದರು. ಚೇತನ್, ಲಕ್ಷ್ಮೀಕಾಂತ್ ಅನಿಸಿಕೆ ಹಂಚಿಕೊಂಡರು.

  • ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳೊಂದಿಗೆ ಲಕ್ನೋದ ಬ್ರೀಡ್ ಅಧಿಕಾರಿಗಳ ಭೇಟಿ

    ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳೊಂದಿಗೆ ಲಕ್ನೋದ ಬ್ರೀಡ್ ಅಧಿಕಾರಿಗಳ ಭೇಟಿ

    ಕುಂದಾಪುರ ‌ಮಿರರ್ ಸುದ್ದಿ…

    ಕೋಟ: ನಬಾರ್ಡ್‍ನ ಡಿಡಿಎಮ್ ಸಂಗೀತಾ ಎಸ್. ಕರ್ತಾ ಮತ್ತು ನಬಾರ್ಡ್ ಅಧಿಕಾರಿ ಜೈಶಂಕರ್ ಇವರ ನೇತೃತ್ವದಲ್ಲಿ ಬ್ರೀಡ್‍ನಿಂದ ಹೊಸದಾಗಿ ನೇಮಕಗೊಂಡ ಲಕ್ನೋದ 30 ಅಭಿವೃದ್ಧಿ ಸಹಾಯಕ ಅಧಿಕಾರಿಗಳು ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಭೇಟಿ ನೀಡಿದರು.

    ಈ ಸಂದರ್ಭದಲ್ಲಿ ಸಂಘದ ವ್ಯವಹಾರದ ಅಭಿವೃದ್ಧಿ ಕುರಿತು ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಮಾಹಿತಿ ನೀಡಿ ಸಂಘವು ನಡೆದು ಬಂದ ದಾರಿ, ಸದಸ್ಯರಿಗೆ ಸಂಘದಿಂದ ದೊರಕುವ ವಿವಿಧ ಸಾಲಗಳು, ಸ್ವ ಸಹಾಯ ಸಂಘ ರಚನೆ, ಉಳಿತಾಯ ಕ್ರೋಢೀಕರಣ, ಸಾಲ ವಿತರಣೆ ಮತ್ತು ವಸೂಲಾತಿ, ಸಂಘದ ಸ್ವಂತ ಕಟ್ಟಡಗಳು ಮತ್ತು ಗೋದಾಮುಗಳು ಮತ್ತು ಸದಸ್ಯರಿಗೆ ಸಂಘದಿಂದ ದೊರಕುವ ವಿವಿಧ ಯೋಜನೆಗಳ ಬಗ್ಗೆ ಕುರಿತು ವಿವರವಾಗಿ ಮಾಹಿತಿ ನೀಡಿದರು. ಸದಸ್ಯರು ತಾವು ಬೆಳೆದ ಬೆಳೆಗಳನ್ನು ಉತ್ತಮ ಧಾರಣೆ ಸಿಗುವ ತನಕ ತಮ್ಮ ಸ್ವಂತ ಗೋದಾಮು ಅಥವಾ ಸಂಘದ ಗೋದಾಮಿನಲ್ಲಿ ದಾಸ್ತಾನು ಮಾಡಿ ಅವುಗಳ ಜವಾಬ್ದಾರಿ ಮೇಲೆ ಉತ್ಪತ್ತಿ ಈಡಿನ ಸಾಲ ಪಡೆದು ವ್ಯವಹರಿಸುವುದನ್ನು ಬ್ರೀಡ್‍ನ ಅಧಿಕಾರಿಗಳು ಗಮನಿಸಿ ಹರ್ಷ ವ್ಯಕ್ತಪಡಿಸಿದರು ಮತ್ತು ಮಾಹಿತಿ ಪಡೆದು ಚರ್ಚೆಯ ಮೂಲಕ ವಿಚಾರ ವಿನಿಮಯ ಮಾಡಿಕೊಂಡು ಸಂಘದ ವ್ಯವಸ್ಥಿತ ಕಾರ್ಯವೈಖರಿ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಅಭಿವೃದ್ಧಿಯನ್ನು ಶ್ಲಾಘಿಸಿದರು. ಸಂಘದ ನೂತನ ವಿಶಿಷ್ಟ ಯೋಜನೆಗಳಲ್ಲಿ ಒಂದಾದ ‘ಸಕಲ’ ಕೃಷಿ ಉಪಕರಣಗಳ ಮಾರಾಟ ಮಳಿಗೆಗೆ ಅವರು ಭೇಟಿ ನೀಡಿದರು.

    ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಇವರು ಭೇಟಿ ನೀಡಿದ ಅಧಿಕಾರಿಗಳನ್ನು ಸ್ವಾಗತಿಸಿ ವಂದನಾರ್ಪಣೆ ನೆರವೇರಿಸಿದರು.

  • ಕುಂದಾಪುರ :ಅಂಪಾರು ಭಜನಾ ಮಂದಿರದಲ್ಲಿ ಕೃಷ್ಣ ಜನ್ಮಾಷ್ಟಮಿ

    ಕುಂದಾಪುರ :ಅಂಪಾರು ಭಜನಾ ಮಂದಿರದಲ್ಲಿ ಕೃಷ್ಣ ಜನ್ಮಾಷ್ಟಮಿ

    ಕುಂದಾಪುರ ಮಿರರ್ ‌ಸುದ್ದಿ…


    ಕುಂದಾಪುರ :ವರ್ಷಂಪ್ರತಿ ನಡೆಯುವ ಸಾಮೂಹಿಕ ಜನ್ಮಾಷ್ಟಮಿಯನ್ನು ಜಿ ಎಸ್ ಬಿ ಸಮಾಜದ ಸಮಸ್ತರು ಸೇರಿ ಶೃದ್ಧಾ ಭಕ್ತಿಯಿಂದ ಆಚರಿಸಿದರು.

    ಕೃಷ್ಣನಿಗೆ ತುಲಸಿ ದಲ ಅರ್ಚನೆ, ಅರ್ಘ್ಯ ನೀಡುವ ಧಾರ್ಮಿಕ ಕಾರ್ಯ ವೇದಮೂರ್ತಿ ಶ್ರೀ ಪ್ರಸನ್ನ ಭಟ್ ರವರ ಮಾರ್ಗದರ್ಶನದಲ್ಲಿ ನಡೆಯಿತು. ತದನಂತರ ಹತ್ತು ಸಮಸ್ತರಿಂದ ಸಂತರ್ಪಣೆ ಸೇವೆ ನಡೆಯಿತು.

  • ಕುಂದಾಪುರ :ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ – ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 13 ಚಿನ್ನ,7 ಬೆಳ್ಳಿ,1 ಕಂಚಿನ ಪದಕ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    ಕುಂದಾಪುರ :ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ – ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 13 ಚಿನ್ನ,7 ಬೆಳ್ಳಿ,1 ಕಂಚಿನ ಪದಕ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ :ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಉಲಾಖೆಯವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ
    ಹರ್ಷಿಣಿ ಪ್ರಥಮ ಪಿ.ಯು.ಸಿ.59 ಕೆ.ಜಿ ವಿಭಾಗದಲ್ಲಿ ಚಿನ್ನ, 62ಕೆ.ಜಿ.ವಿಭಾಗದಲ್ಲಿ ಭೂಮಿಕಾ ದ್ವಿತೀಯ ಪಿ.ಯು.ಸಿ.ಚಿನ್ನ, 68ಕೆ.ಜಿ.ವಿಭಾಗದಲ್ಲಿ ಅಮಿಶಾ ಚೌದ್ರಿ ದ್ವಿತೀಯ ಪಿ.ಯು.ಸಿ. ಚಿನ್ನ, 70ಕೆ.ಜಿ.ವಿಭಾಗದಲ್ಲಿ ಪ್ರಜ್ವಲ್ ಎಸ್ ಪೂಜಾರಿ ದ್ವಿತೀಯ ಪಿ.ಯು.ಸಿ. ಚಿನ್ನ, 74ಕೆ.ಜಿ.ವಿಭಾಗದಲ್ಲಿ ಅದ್ವಿತ್ ದ್ವಿತೀಯ ಪಿ.ಯು.ಸಿ.ಚಿನ್ನ, 86ಕೆ.ಜಿ.ವಿಭಾಗದಲ್ಲಿ ಶ್ರೀನಿಧಿ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ, 92ಕೆ.ಜಿ.ವಿಭಾಗದಲ್ಲಿ ರೋಹಿತ್ ದ್ವಿತೀಯ ಪಿ.ಯು.ಸಿ.ಚಿನ್ನ, 97 ಕೆ.ಜಿ.ವಿಭಾಗದಲ್ಲಿ ಚೇತನ್ ಖಾರ್ವಿ ದ್ವಿತೀಯ ಪಿ.ಯು.ಸಿ. ಚಿನ್ನ, 125ಕೆ.ಜಿ.ವಿಭಾಗದಲ್ಲಿ ಶ್ರೀಷ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ, 60ಕೆ.ಜಿ.ವಿಭಾಗದಲ್ಲಿ ಸ್ವಸ್ತಿಕ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ, 72ಕೆ.ಜಿ.ವಿಭಾಗದಲ್ಲಿ ಗಗನ್ ಎಮ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ, 87ಕೆ.ಜಿ.ವಿಭಾಗದಲ್ಲಿ ಗಣೇಶ್ ಕೆ. ದ್ವಿತೀಯ ಪಿ.ಯು.ಸಿ. ಚಿನ್ನ, 97ಕೆ.ಜಿ.ವಿಭಾಗದಲ್ಲಿ ಸಂಪತ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ, 53ಕೆ.ಜಿ.ವಿಭಾಗದಲ್ಲಿ ದಿಶಾ ದ್ವಿತೀಯ ಪಿ.ಯು.ಸಿ. ಬೆಳ್ಳಿ, 57ಕೆ.ಜಿ.ವಿಭಾಗದಲ್ಲಿ ಶ್ವೇತಾ ದ್ವಿತೀಯ ಪಿ.ಯು.ಸಿ. ಬೆಳ್ಳಿ 60ಕೆ.ಜಿ.ವಿಭಾಗದಲ್ಲಿ ರತನ್ ಪ್ರಥಮ ಪಿ.ಯು.ಸಿ. ಬೆಳ್ಳಿ, 55ಕೆ.ಜಿ‌.ವಿಭಾಗದಲ್ಲಿ ಅಕ್ಷೋಭ್ಯ ದ್ವಿತೀಯ ಪಿ.ಯು.ಸಿ. ಬೆಳ್ಳಿ, 63ಕೆ‌.ಜಿ.ವಿಭಾಗದಲ್ಲಿ ಚೇತನ್ ಕುಮಾರ್ ದ್ವಿತೀಯ ಪಿ.ಯು.ಸಿ. ಬೆಳ್ಳಿ,77ಕೆ.ಜಿ.ವಿಭಾಗದಲ್ಲಿ ಆಶಿಕ್ ದೇವಾಡಿಗ ದ್ವಿತೀಯ ಪಿ.ಯು.ಸಿ. ಬೆಳ್ಳಿ,130ಕೆ.ಜಿ ವಿಭಾಗದಲ್ಲಿ ಸಮ್ರದ್ದ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಬೆಳ್ಳಿ, 50ಕೆ.ಜಿ.ವಿಭಾಗದಲ್ಲಿ ಅನನ್ಯ ಪ್ರಥಮ ಪಿ.ಯು.ಸಿ ಕಂಚಿನ ಪದಕ ಗಳಿಸಿದ್ದಾರೆ.

    ಚಿನ್ನದ ಪದಕ ಪಡೆದ 13 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗುವುದರ ಮೂಲಕ ಸಾಧನೆ ಮೆರೆದಿದ್ದಾರೆ. ಒಟ್ಟಾರೆಯಾಗಿ 13 ಚಿನ್ನ, 7ಬೆಳ್ಳಿ, 1ಕಂಚಿನ ಪದಕ ಗಳಿಸುದರೊಂದಿಗೆ ಉಡುಪಿ ಜಿಲ್ಲೆಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.

    ವಿದ್ಯಾರ್ಥಿಗಳ ಅದ್ಭುತ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

  • ಕುಂದಾಪುರ: ಮುರುಡೇಶ್ವರ-ಬೆಂಗಳೂರು ರೈಲು ಸೇವೆ ವಿಸ್ತರಣೆ; ಅವಿರತ ಶ್ರಮಕ್ಕೆ ಯಶಸ್ಸು

    ಕುಂದಾಪುರ: ಮುರುಡೇಶ್ವರ-ಬೆಂಗಳೂರು ರೈಲು ಸೇವೆ ವಿಸ್ತರಣೆ; ಅವಿರತ ಶ್ರಮಕ್ಕೆ ಯಶಸ್ಸು

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಬೆಂಗಳೂರು ಮೈಸೂರು ಮಂಗಳೂರಿಗೆ ಬರುತಿದ್ದ ಗಾಡಿ‌ ಸಂಖ್ಯೆ 16585 ಎಕ್ಸ್ಪ್ರೆಸ್ ರೈಲನ್ನು ಮುರುಡೇಶ್ವರದವರೆಗೆ ವಿಸ್ತರಿಸಿ ಭಾರತೀಯ ರೈಲ್ವೇ ಆದೇಶ ಹೊರಡಿಸಿದೆ .ಇದರೊಂದಿಗೆ ಕುಂದಾಪುರ ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕಕ್ಕೆ ರಾಜದಾನಿ ಬೆಂಗಳೂರು ಹಾಗು ಮೈಸೂರಿಗೆ ನಿತ್ಯ ರೈಲೊಂದು ಸಿಕ್ಕಂತಾಗಿದೆ.

    ಕಳೆದ ಒಂದೂವರೆ ವರ್ಷದಿಂದ ಸತತವಾಗಿ ಈ ಹೋರಾಟ ಕೈಗೆತ್ತಿಕೊಂಡಿದ್ದ ಕುಂದಾಪುರ ರೈಲ್ವೇ ಸಮಿತಿ ಹಾಗು ದೆಹಲಿ ಮಟ್ಟದಲ್ಲಿ ನಿರಂತರ ಕೆಲಸ ಮಾಡಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಯತ್ನಕ್ಕೆ ಕೊನೆಗೂ ಯಶಸ್ಸು ಲಭಿಸಿದೆ . ಈಗಿರುವ ಕರಾವಳಿಯ ಜೀವನಾಡಿ ಪಂಚಗಂಗಾ ಎಕ್ಸ್‌ಪ್ರೆಸ್‌ ಬೆಂಗಳೂರಿನಿಂದ ಬೇಗನೆ ಹೊರಡುತ್ತದೆ ಹಾಗೂ ಅದರಲ್ಲಿ ಟಿಕೇಟು ಸಿಗುವುದಿಲ್ಲ ಎಂಬ ದೂರುಗಳಿಗೆ ಈಗ ಪರಿಹಾರ ಸಿಕ್ಕಂತಾಗಿದ್ದು, ಬೈಯಪ್ಪನ ಹಳ್ಳಿಯಿಂದ ಹೊರಟು ರಾತ್ರಿ ಒಂಬತ್ತು ಘಂಟೆಗೆ ಮೆಜೆಸ್ಟಿಕ್ ಬರುವ ರೈಲು ಮೈಸೂರು ಮಾರ್ಗವಾಗಿ ಮಂಗಳೂರು ಉಡುಪಿ ಕುಂದಾಪುರ ಮೂಲಕ ಸಂಚರಿಸಲಿದೆ.

    ಮದ್ಯಾಹ್ನ ಮೂರುವರೆ ಸುಮಾರಿಗೆ ಕರಾವಳಿಯಿಂದ ಹೊರಡುವ ರೈಲು ಬೆಳಿಗ್ಗೆ ಆರಕ್ಕೆ ಬೆಂಗಳೂರು ತಲುಪಲಿದೆ .

    ವಾರಕ್ಕೆ ಮೂರು ದಿನ ಮಂಗಳೂರಿನವರೆಗೆ ಮಾತ್ರ ಓಡುತಿದ್ದ ಈ ರೈಲನ್ನು ಆರೂದಿನ ಓಡುವಂತೆ ಮಾಡಿ ಕುಂದಾಪುರ ಕಾರವಾರಕ್ಕೆ ವಿಸ್ತರಣೆ ಮಾಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಸತತವಾಗಿ ಪ್ರಯತ್ನಿಸಿದ್ದು , ಅವರ ಬೇಡಿಕೆಯಂತೆ ವಾರಕ್ಕೆ ಮೂರು ದಿನದ ಬದಲು ಆರು ದಿನ ಓಡುವಂತೆ ಭಾರತೀಯ ರೈಲ್ವೇ ಕಳೆದ ವರ್ಷವೇ ಆದೇಶ ಮಾಡಿತ್ತು .ಆದರೆ ರೈಲಿನ ಉಡುಪಿ ಕುಂದಾಪುರ ಕಾರವಾರ ವಿಸ್ತರಣೆ ಮಾತ್ರ ವಿಳಂಭವಾಗುತ್ತಲೇ ಇದ್ದ ಕಾರಣ ,ಕುಂದಾಪುರ ರೈಲ್ವೇ ಸಮಿತಿ ನಿರಂತರವಾಗಿ ಕೊಂಕಣ ರೈಲ್ವೆ, ದಕ್ಷಿಣ ರೈಲ್ವೇ ಹಾಗು ನೈರುತ್ಯ ರೈಲ್ವೇ ಜತೆ ಬೆಂಗಳೂರಿಗೆ ಹೆಚ್ಚುವರಿ ರೈಲು ಸೇವೆಯ ಹೋರಾಟ ನಡೆಸಿತ್ತು .

    ಸಂಸದರ ಯತ್ನದಿಂದ ಎಲ್ಲಾ ಸಮಸ್ಯೆಗಳನ್ನೂ ಮೀರಿ ರೈಲ್ವೇ ಸಚಿವರ ಒಪ್ಪಿಗೆ ಪಡೆದುದಲ್ಲದೇ ರೈಲ್ವೇ ಅದಿಕಾರಿಗಳ ಸಭೆ ಕರೆದು ದಸರಾ ಒಳಗೆ ರೈಲು ಓಡಲೇ ಬೇಕೆಂದು ಕಟ್ಟು ನಿಟ್ಟಿನ ಸೂಚನೆ ರವಾನಿಸಿದ ಪರಿಣಾಮ ಇಲಾಖೆ ಈ ರೈಲಿನ ವಿಸ್ತರಣೆಗೆ ಆದೇಶ ನೀಡಿದೆ.

    “ಕುಂದಾಪುರ ರೈಲ್ವೇ ಸಮಿತಿಯ ನಿರಂತರ ಪ್ರಯತ್ನ ಹಾಗು ಮೈಸೂರು ಸಂಸದರ ಅಧ್ಭುತ ಕೆಲಸದಿಂದಾಗಿ ಕರಾವಳಿ ಕರ್ನಾಟಕಕ್ಕೆ ಹೊಸ ರೈಲು ಸೇವೆ ಲಭಿಸಿದ್ದು ಇದು ಬೆಂಗಳೂರು ಮೈಸೂರು ಪ್ರಯಾಣಿಕರಿಗೆ ಬಾರೀ ಅನುಕೂಲವಾಗಿದೆ”. – ಗಣೇಶ್ ಪುತ್ರನ್ ಕುಂದಾಪುರ ರೈಲ್ವೇ ಸಮಿತಿ

    “ಮೈಸೂರನ್ನು ಕರಾವಳಿಯ ಜತೆ ಬೆಸೆಯಲು ಸಂಪರ್ಕ ಕ್ರಾಂತಿಯ ಸಂಸದ ಎಂದೇ ಖ್ಯಾತಿಯಾದ ಪ್ರತಾಪ್ ಸಿಂಹರ ಶ್ರಮ ಹಾಗು ಭಾರತೀಯ ರೈಲ್ವೇಯ ಹಿರೀಯ ಅದಿಕಾರಿಗಳ ಸಹಕಾರದಿಂದ ಕರಾವಳಿಗೆ ಈ ಸೇವೆ ಲಭ್ಯವಾಗಿದ್ದು, ಬೆಂಗಳೂರಿನಿಂದ‌ ತಡವಾಗಿ ಹೊರಡುವವರಿಗೆ ಹಾಗು ಬೆಂಗಳೂರು ಬೇಗನೆ ತಲುಪ ಬೇಕು‌ ಎನ್ನುವವರಿಗೆ ಈ ವಿಸ್ತರಣೆಯಿಂದ ಅನುಕೂಲವಾಗಲಿದೆ”. ಗೌತಮ್ ಶೆಟ್ಟಿ ಕುಂದಾಪುರ ರೈಲ್ವೇ ಸಮಿತಿ‌

  • ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ‌ಗಿರೀಶ್ ಎಸ್. ನಾಯ್ಕ್ ಆಯ್ಕೆ

    ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ‌ಗಿರೀಶ್ ಎಸ್. ನಾಯ್ಕ್ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಈವರೆಗೆ ಉಪಾಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ಗಿರೀಶ್ ಎಸ್. ನಾಯ್ಕ್ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಚಂದ್ರಮತಿ ಡಿ. ಹೆಗ್ಡೆ ಆಯ್ಕೆಯಾಗಿದ್ದಾರೆ.

    ೧೬ ಸದಸ್ಯ ಬಲದ ಪಂಚಾಯತ್‌ನಲ್ಲಿ ೫ ಬಿಜೆಪಿ ಬೆಂಬಲಿತರು, ೪ ಕಾಂಗ್ರೆಸ್ ಬೆಂಬಲಿತರು ಹಾಗೂ ೭ ಪಕ್ಷೇತರ ಸದಸ್ಯರಿದ್ದರು.
    ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಗಿರೀಶ್ ನಾಯ್ಕ್ ಹಾಗೂ ಪಕ್ಷೇತರ ಸಂಜೀವ ದೇವಾಡಿಗ ಸ್ಪರ್ಧಿಸಿದ್ದರು. ಗಿರೀಶ್ ಅವರಿಗೆ ೮ ಹಾಗೂ ಸಂಜೀವ ಅವರಿಗೆ ೭ ಮತಗಳು ಬಿದ್ದವು.
    ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಚಂದ್ರಮತಿ ಹಾಗೂ ಪಕ್ಷೇತರ ಸದಸ್ಯೆ ರುಕ್ಮಿಣಿ ಸ್ಪರ್ದಿಸಿದ್ದರು. ಈ ಪೈಕಿ ೮ ಮತ ಪಡೆದ ಚಂದ್ರಮತಿ ಉಪಾಧ್ಯಕ್ಷೆಯಾಗಿ ಆಯ್ಕೆಯಾದರೆ, ರುಕ್ಮಿಣಿ ಅವರಿಗೆ ೭ ಮತಗಳು ಸಿಕ್ಕವು. ಒಬ್ಬರು ಸದಸ್ಯರು ಗೈರಾಗಿದ್ದರು.
    ಚುನಾವಣಾಧಿಕಾರಿಯಾಗಿ ಕ್ಷೇತ್ರ ಶೋಭಾ ಶೆಟ್ಟಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಪಿಡಿಒ ನಾಗರತ್ನ ಸಹಕರಿಸಿದರು.

  • ಕುಂದಾಪುರ :ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

    ಕುಂದಾಪುರ :ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಧ್ಯಾಪಕರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಡಾ.ಎಂ.ವಿ.ನಾರಾಯಣಸ್ವಾಮಿ ರಾಧಾಕೃಷ್ಣನ್ ಅವರ ಬದುಕೆ ಆದರ್ಶ ಪ್ರಾಯ ಅವರು ವ್ಯಕ್ತಿತ್ವವೇ ಭವ್ಯ. ಅವರು ಬದುಕಿನ ಪುಟಗಳಲ್ಲಿ ಶಿಸ್ತುಬದ್ಧತೆ, ಜ್ಞಾನದ ಆಳ ಶಿಕ್ಷಕರಾದ ನಮಗೆ ದಾರಿದೀಪವಾಗಲಿ ಎಂದು ಆಶಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಿ.ಲಲಿತಾದೇವಿ ವಹಿಸಿದ್ದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಐಕ್ಯೂಎಸಿ ಸಂಯೋಜಕರಾದ ಡಾ.ಕೆ.ಎಂ.ಉದಯ
    ಕುಮಾರ್ ಮತ್ತು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಸತ್ಯನಾರಾಯಣ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಡಾ.ಎಂ.ವಿ ನಾರಾಯಣ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

    ಅಧ್ಯಾಪಕರ ಸಂಘದ ಉಪಾಧ್ಯಕ್ಷೆ ಸರೋಜಾ ಎಂ. ಕಾರ್ಯಕ್ರಮ ನಿರ್ವಹಿಸಿದರು. ಖಜಾಂಚಿ ದುರ್ಗಾಪ್ರಸಾದ್ ಮಯ್ಯ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಸುಮಲತಾ ನಾಯ್ಕ ವಂದಿಸಿದರು.

  • ಬೈಂದೂರು :ವಾಲಿಬಾಲ್ ಪಂದ್ಯಾಟ – ಉಪ್ಪಿನ ಕುದ್ರು ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ

    ಬೈಂದೂರು :ವಾಲಿಬಾಲ್ ಪಂದ್ಯಾಟ – ಉಪ್ಪಿನ ಕುದ್ರು ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು :ಕ್ಷೇತ್ರ ಶಿಕ್ಷಣಾಧೀಕಾರಿ ಕಛೇರಿ ಬೈಂದೂರು ಹಾಗೂ ಸ.ಪ.ಪೂ.ಕಾಲೇಜು ನಾವುಂದ ಇವರ ಸಹಯೋಗ ದೊಂದಿಗೆ ಜರುಗಿದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಪ್ಪಿನ ಕುದ್ರು ಪ್ರೌಢಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರ ಹಾಗೂ ಬಾಲಕರು ದ್ವೀತಿಯ ಸ್ಥಾನ ಪಡೆದಿರುತ್ತಾರೆ. ಇವರನ್ನು ಶಾಲಾ ಮುಖ್ಯೋಪಾಧ್ಯಾಯ ರು ಶಿಕ್ಷಕ ವೃಂದ ಹಾಗೂ ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.

  • ಉಪನ್ಯಾಸಕ ಕೋಟ ಸುಜಯೀಂದ್ರ ಹಂದೆ ಅವರಿಗೆ ಡಾ. ಎಸ್. ರಾಧಾಕೃಷ್ಣನ್ ರಾಷ್ಟ್ರೀಯ ಆದರ್ಶ ಶಿಕ್ಷಕ ಪುರಸ್ಕಾರ

    ಉಪನ್ಯಾಸಕ ಕೋಟ ಸುಜಯೀಂದ್ರ ಹಂದೆ ಅವರಿಗೆ ಡಾ. ಎಸ್. ರಾಧಾಕೃಷ್ಣನ್ ರಾಷ್ಟ್ರೀಯ ಆದರ್ಶ ಶಿಕ್ಷಕ ಪುರಸ್ಕಾರ

    ಕುಂದಾಪುರ ಮಿರರ್ ಸುದ್ದಿ…
    ಕೋಟ : ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವ ವಿದ್ಯಾ ನಿಲಯ ಧಾರವಾಡ, ಚೇತನ ಫೌಂಡೇಶನ್ ಹುಬ್ಬಳ್ಳಿ ಇವರ ಸಹಯೋಗದ ಆಯೋಜನೆಯ ‘ಧಾರವಾಡ ನುಡಿ ಸಡಗರ-ಪ್ರಶಸ್ತಿ ಪ್ರದಾನ’ ಕಾರ್ಯಕ್ರಮದಲ್ಲಿ ನೀಡಲಾಗುವ ಡಾ. ಎಸ್. ರಾಧಾಕೃಷ್ಣನ್ ರಾಷ್ಟ್ರೀಯ ಆದರ್ಶ ಶಿಕ್ಷಕ ಗೌರವ ಪುರಸ್ಕಾರಕ್ಕೆ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕೋಟದ ಸುಜಯೀಂದ್ರ ಹಂದೆ ಭಾಜನರಾಗಿದ್ದಾರೆ.
    ಸುಮಾರು 26 ವರ್ಷಗಳ ಕಾಲ ಶಿಕ್ಷಣದೊಂದಿಗೆ ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡ ಹಂದೆಯವರು ವಿದ್ಯಾರ್ಥಿಗಳ ಕ್ರಿಯಾ ಶೀಲ ಚಟುವಟಿಕೆಗಳಿಗೆ ವೇದಿಕೆವೊದಗಿಸಿದವರು. ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿದವರು. ಇವರ ಅನೇಕ ಕತೆ, ಕವನ, ಲೇಖನಗಳು ನಾಡಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಕಲೆ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿ ಹಲವು ಕೃತಿಗಳನ್ನು ಹೊರತಂದಿದ್ದಾರೆ. ಇದೆ ಸೆಪ್ಟಂಬರ್ 9 ರಂದು ಧಾರವಾಡ ವಿಶ್ವ ವಿದ್ಯಾನಿಲಯದ ಕನಕ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ನುಡಿ ಸಡಗರ ಸಂಯೋಜಕ ಚಂದ್ರ ಶೇಖರ ಮಾಡಲಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಧಾರವಾಡ ನುಡಿ ಸಡಗರ-ಪ್ರಶಸ್ತಿ ಪ್ರದಾನ’ ಕಾರ್ಯಕ್ರಮದಲ್ಲಿ ನೀಡಲಾಗುವ ಡಾ. ಎಸ್. ರಾಧಾಕೃಷ್ಣನ್ ರಾಷ್ಟ್ರೀಯ ಆದರ್ಶ ಶಿಕ್ಷಕ ಗೌರವ ಪುರಸ್ಕಾರಕ್ಕೆ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕೋಟದ ಸುಜಯೀಂದ್ರ ಹಂದೆ ಭಾಜನರಾಗಿದ್ದಾರೆ.
    ಕೋಟ.ಸೆ.5 ಸುಜಯೀಂದ್ರ ಹಂದೆ

  • ಕೋಡಿ ಕನ್ಯಾಣ – ಶ್ರೀ ರಾಮಾಂಜನೇಯ ವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಸಭೆ, ಸಹಕಾರಿ ಕ್ಷೇತ್ರದ ಸಾಧಕರಿಗೆ ಸನ್ಮಾನ

    ಕೋಡಿ ಕನ್ಯಾಣ – ಶ್ರೀ ರಾಮಾಂಜನೇಯ ವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಸಭೆ, ಸಹಕಾರಿ ಕ್ಷೇತ್ರದ ಸಾಧಕರಿಗೆ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಡಿ ಕನ್ಯಾಣ ಶ್ರೀ ರಾಮಾಂಜನೇಯ ವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಇದರ ಹತ್ತನೇ ವಾರ್ಷಿಕ ಮಹಾಸಭೆಯು ಸೆ.2ರ ಶನಿವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿ ಕನ್ಯಾನದ ಸಭಾಂಗಣದಲ್ಲಿ ಜರುಗಿತು.

    ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ನಿರ್ದೇಶಕರಾದ ಮಂಜುನಾಥ ಎಸ್.ಕೆ ಮಾತನಾಡಿ ದಶಮ ಸಂಭ್ರಮದಲ್ಲಿರುವ ಶ್ರೀ ರಾಮಾಂಜನೇಯ ಸೌಹಾರ್ದದ ಆಡಳಿತ ಮಂಡಳಿಗೆ ಶುಭ ಹಾರೈಸಿ ಸಂಸ್ಥೆಯು ವಿವಿಧ ರೀತಿಯ ಸೇವಾ ಚಟುವಟಿಕೆ ಮತ್ತು ಆರ್ಥಿಕ ವ್ಯವಹಾರಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

    ವಾರ್ಷಿಕ ಮಹಾಸಭೆಯ ಕಾರ್ಯಕಲಾಪಗಳನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ರಾಘವೇಂದ್ರ ಕರ್ಕೇರ ವಿವರವಾಗಿ ಮಂಡಿಸಿದರು. 2022-23 ನೇ ಸಾಲಿನ ವಾರ್ಷಿಕ ವರದಿಯನ್ನು ವ್ಯವಸ್ಥಾಪಕಿ ಪ್ರತಿಮಾ ವಾಚಿಸಿದರು. ಹಿಂದಿನ ಸಾಲಿನ ನಡವಳಿಗಳನ್ನು ಸಿಬ್ಬಂದಿ ಸ್ವಾತಿರವರು ವಾಚಿಸಿದರು.

    ಈ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಶ್ರೇಷ್ಠ ಸಹಕಾರಿಗಳಾದ ಅಂಪಾರು ಜಗನ್ನಾಥ ಶೆಟ್ಟಿ ಮತ್ತು ಅಶೋಕ ಪ್ರಭು ಸಾಹೇಬಕಟ್ಟೆ ಇವರುಗಳನ್ನು ಆಡಳಿತ ಮಂಡಳಿ ಗೌರವಿತವಾಗಿ ಸನ್ಮಾನಿಸಲಾಯಿತು. ಶೈಕ್ಷಣಿಕ ಸಾಧನೆಗೈದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

    ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅಂಪಾರು ಜಗನ್ನಾಥ ಶೆಟ್ಟಿ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘ ಉಡುಪಿ ಜಿಲ್ಲೆಯಲ್ಲಿ ಒಂದು ಮಾದರಿ ಸೌಹಾರ್ದ ಸಹಕಾರಿ ಸಂಘ ಎನ್ನುವುದರ ಮೂಲಕ ಸಂಸ್ಥೆಯ ಕಾರ್ಯ ಚಟುವಟಿಕೆ, ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಅಗಾಧವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಸಂಸ್ಥೆಯ ಅಧ್ಯಕ್ಷ ಶಂಭು ಪೂಜಾರಿ ಸಂಸ್ಥೆಯ ಮುಂದಿನ ದಿನಗಳಲ್ಲಿ ದಶಮಾನೋತ್ಸವ ಸಂಭ್ರಮ ಆಚರಿಸುವುದರ ಮೂಲಕ ನಮ್ಮ ಸಂಸ್ಥೆಗೆ ಏಳಿಗೆಗೆ ಕಾರಣಿಕರ್ತರಾದ ಪ್ರತಿಯೊಂದು ಸದಸ್ಯರನ್ನು ಗುರುತಿಸಿ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಕಾರ್ಯಕ್ರಮವನ್ನು ಆಡಳಿತ ಮಂಡಳಿ ಈಗಾಗಲೇ ಹಮ್ಮಿಕೊಂಡಿದೆ. ಲಾಭಗಳಿಸುವುದು ಒಂದೇ ಉದ್ದೇಶವನ್ನು ಇರಿಸಿಕೊಳ್ಳದೆ ಹೆಚ್ಚಿನ ಸೇವಾ ಚಟುವಟಿಕೆ ಹಮ್ಮಿಕೊಳ್ಳುವುದರ ಮೂಲಕ ಸಂಸ್ಥೆಗೆ ಇನ್ನಷ್ಟು ಮೆರುಗು ನೀಡಲು ಪ್ರಯತ್ನಿಸುತ್ತೇವೆ ಎಂದರು.

    ವಿವಿಧ ಶಾಲೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೂ ವಿಶೇಷವಾಗಿ ಪುರಸ್ಕಾರ ಸನ್ಮಾನ ಹಮ್ಮಿಕೊಳ್ಳಲಾಯಿತು. ಸದಸ್ಯರಿಗೆ 13 ಶೇಕಡಾ ಡಿವಿಡೆಂಡ್ ಘೋಷಣೆ ಮಾಡಲಾಯಿತು. ಸಹಕಾರಿಯ ವ್ಯವಸ್ಥಾಪಕ ಸಂದೀಪ್ ಕರ್ಕೇರ ನಿರೂಪಿಸಿದರು. ಉಪಾಧ್ಯಕ್ಷ ಮಹಾಬಲ ಕುಂದರ್ ಧನ್ಯವಾದ ಸಮರ್ಪಿಸಿದರು.