Category: ಸುದ್ದಿ

  • ಎಕ್ಸಲೆಂಟ್ ಪಿಯು ಕಾಲೇಜು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಕೈಗಾರಿಕಾ ಕೇಂದ್ರಗಳಿಗೆ ಭೇಟಿ

    ಎಕ್ಸಲೆಂಟ್ ಪಿಯು ಕಾಲೇಜು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಕೈಗಾರಿಕಾ ಕೇಂದ್ರಗಳಿಗೆ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಸುಣ್ಣಾ ರಿಯ ಎಕ್ಸಲೆಂಟ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕೈಗಾರಿಕಾ ಸಂಸ್ಥೆಯ ವೀಕ್ಷಣೆ ಹಾಗೂ ಅಧ್ಯಯನ ವಿಷಯ ಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡಿದರು.

    ಕುಂದಾಪುರ ದ ಮಂಗಳೂರು ಟೈಲ್ಸ್ ಲಿಮಿಟೆಡ್ ನ ಓಂ ಟೈಲ್ಸ್ ಕಾರ್ಖಾನೆ ಗೆ ವಿದ್ಯಾರ್ಥಿಗಳು ಭೇಟಿ ಕೊಟ್ಟು ಹೆಂಚು ತಯಾರಿಸುವ ವಿವಿಧ ಹಂತಗಳ ಬಗ್ಗೆ ತಿಳಿದುಕೊಂಡರು. ತಯಾರಾದ ಹೆಂಚನ್ನು ವರ್ಗಿಕರಿಸುವುದು ಹಾಗೆ ವಿವಿಧ ಅಲಂಕಾರಿಕ ಹೆಂಚುಗಳು ಮತ್ತು ಇಟ್ಟಿಗೆ ತಯಾರಿಕೆಯ ಮಾಹಿತಿಯನ್ನು ಸಂಗ್ರಹಿಸಿದರು. ಕಾರ್ಖಾನೆ ಯ ಆಡಳಿತ ಮಂಡಳಿ ಯವರು ಈ ಎಲ್ಲಾ ಮಾಹಿತಿ ನೀಡುವಲ್ಲಿ ಸಹಕರಿಸಿದರು.

    ಆ ಬಳಿಕ ಕುಂದಾಪುರ ದ ತಲ್ಲೂರಿನಲ್ಲಿರುವ ಮೆಟಟ ಮಂಜುನಾಥ ಗೇರು ಬೀಜ ಕಾರ್ಖಾನೆ ಗೆ ಭೇಟಿ ನೀಡಿ ಗೇರು ಬೀಜ ಸಂಸ್ಕರಣೆ ಹಾಗೂ ಸಿದ್ದಗೊಳಿಸಿದ ಉತ್ಪನ್ನದ ವಿವಿಧ ಹಂತಗಳ ಬಗ್ಗೆ ಕಾರ್ಖಾನೆ ಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪ್ರತಾಪ್ ಚಂದ್ರ ಶೆಟ್ಟಿ ಯವರು ವಿದ್ಯಾರ್ಥಿ ಗಳಿಗೆ ಸಮಗ್ರ ಮಾಹಿತಿ ನೀಡಿದರು.

    ಈ ಒಂದು ದಿನದ ಕೈಗಾರಿಕಾ ಸಂಸ್ಥೆ ಗಳಿಗೆ ಭೇಟಿ ಹಾಗೂ ವೀಕ್ಷಣೆ ಕಾರ್ಯಕ್ರಮ ದಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು ಮತ್ತು ವಾಣಿಜ್ಯ ವಿಭಾಗದ ಉಪನ್ಯಾಸ ಕರು ಸಹಕರಿಸಿದರು.

  • ಬೈಂದೂರು :ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮಹಾಸಭೆ: ರೂ.5.07 ಕೋಟಿ ಲಾಭ, ಸದಸ್ಯರಿಗೆ 15% ಡಿವಿಡೆಂಡ್

    ಬೈಂದೂರು :ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮಹಾಸಭೆ: ರೂ.5.07 ಕೋಟಿ ಲಾಭ, ಸದಸ್ಯರಿಗೆ 15% ಡಿವಿಡೆಂಡ್

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು :ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 46ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು.

    ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 46 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ.1015 ಕೋಟಿ ವ್ಯವಹಾರ ನಡೆಸಿ, ರೂ 5.07 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಹೇಳಿದರು.

    ಸಂಘವು ವರ್ಷದಲ್ಲಿ ರೂ. 219.17 ಕೋಟಿ ಠೇವಣಿ ಸಂಗ್ರಹಿಸಿ, ರೂ. 177.66 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 91.21 ಕೋಟಿ ಹೂಡಿಕೆ ಮಾಡಿದೆ. ರೂ.27.98 ಕೋಟಿ ನಿಧಿಗಳು, ರೂ.2.41 ಕೋಟಿ ಪಾಲು ಬಂಡವಾಳ ಹೊಂದಿದೆ. ರೂ.16.88 ಕೋಟಿ ಕೃಷಿ ಸಾಲ, 18.96 ಕೋಟಿ ರೈತ ಸಿರಿ ಸ್ವ-ಸಹಾಯ ಗುಂಪುಗಳ ಸಾಲ ನೀಡಲಾಗಿದೆ ಎಂದರು.

    ಸಂಘದಲ್ಲಿ 8100ಕ್ಕೂ ಮಿಕ್ಕಿ ಸದಸ್ಯರನ್ನೊಳಗೊಂಡ ಸ್ವಸಹಾಯ ಗುಂಪುಗಳನ್ನು ರಚನೆ ಮಾಡಲಾಗಿದ್ದು, ಅವಶ್ಯಕತೆಗನುಗುಣವಾಗಿ ಸಾಲ ಸೌಲಭ್ಯ, ಗಂಪುಗಳ ಅಭಿವೃದ್ಧಿ ಪ್ರಗತಿಗಾಗಿ ಸದಸ್ಯರಿಗೆ ಉದ್ಯೋಗ ಮಾಹಿತಿ, ಗುತ್ತಿಗೆ ಆಧಾರದಲ್ಲಿ 13 ಮಂದಿ ರೈತಸಿರಿ ಪ್ರತಿನಿಧಿಗಳನ್ನು ನೇಮಿಸಿಕೊಳ್ಳಲಾಗಿದೆ. 900ಕ್ಕೂ ಮಿಕ್ಕಿ ಸದಸ್ಯರನ್ನೊಳಗೊಂಡ ರೈತ ಕೂಟವನ್ನು ರಚಿಸಲಾಗಿದ್ದು, ಪ್ರತಿ ತಿಂಗಳ ಕೊನೆಯ ಶನಿವಾರ ಮಾಸಿಕ ಸಭೆ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ ಎಂದರು.

    ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್, ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಕೆ. ಮೋಹನ ಪೂಜಾರಿ, ಬಿ. ಎಸ್. ಸುರೇಶ ಶೆಟ್ಟಿ, ಗುರುರಾಜ್ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ, ಹೂವ ನಾಯ್ಕ್, ದಿನಿತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ ಉಪಸ್ಥಿತರಿದ್ದರು.

    ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಪ್ರಬಂಧಕ ಚಂದಯ್ಯ ಶೆಟ್ಟಿ ವಂದಿಸಿದರು.

  • ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು – ವೃತ್ತಿ ಮಾರ್ಗದರ್ಶನದ ಮಾಹಿತಿ ಕಾರ್ಯಕ್ರಮ

    ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು – ವೃತ್ತಿ ಮಾರ್ಗದರ್ಶನದ ಮಾಹಿತಿ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ :ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

    ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷರಾದ ವಸಂತರಾಜ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ
    ವೃತ್ತಿ ಮಾರ್ಗದರ್ಶನದ ಅಗತ್ಯತೆಯ ಕುರಿತು ಮಾತನಾಡಿದರು.

    ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಲಯನ್ಸ್ ಕ್ಲಬ್ ಉಡುಪಿ ಲಕ್ಯ್ಯ ಇದರ ಅಧ್ಯಕ್ಷರಾದ ಧನುಷ್ ಕೆ ಇವರು ವಿದ್ಯಾರ್ಥಿ ಬದುಕಿಗೆ ಇಂತಹ ನೂರಾರು ಕಾರ್ಯಕ್ರಮಗಳ ಅಗತ್ಯತೆ ಬಹಳಷ್ಟಿದೆ ಎಂದರು.

    ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಜಿಲ್ಲೆ 317 ರವಿರಾಜ್ ನಾಯಕ್ ರವರು ವೃತ್ತಿ ಮಾರ್ಗದರ್ಶನದ ಕುರಿತಾಗಿ ಸವಿಸ್ತಾರವಾಗಿ ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಉಡುಪಿ ಲಯನ್ಸ್ ಕ್ಲಬ್ ಲಕ್ಷ್ಯ ಇದರ ಉಪಾಧ್ಯಕ್ಷರಾದ ರಘುನಾಥ ನಾಯಕ್, ಕುಂದಾಪುರ ಲಯನ್ಸ್ ಕ್ಲಬ್ ಕೋಸ್ಟಲ್ ಇದರ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಹಾಗೂ ಖಜಾಂಚಿ ಸುಕುಮಾರ ಶೆಟ್ಟಿ,ಕಾಲೇಜಿನ ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಉಪನ್ಯಾಸಕ ಉದಯ ನಾಯ್ಕ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.

    ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗೌತಮ್ ಸ್ವಾಗತಿಸಿ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ನೌಫಾಲ್ ವಂದಿಸಿದರು.

  • ಕುಂದಾಪುರ :ಅಪೌಷ್ಟಿಕತೆ ನಿರ್ಮೂಲನೆ ಪ್ರಸ್ತುತ ಅಗತ್ಯ- ಅಬ್ದುಲ್ ರಹೀಂ ಹುಸೇನ್

    ಕುಂದಾಪುರ :ಅಪೌಷ್ಟಿಕತೆ ನಿರ್ಮೂಲನೆ ಪ್ರಸ್ತುತ ಅಗತ್ಯ- ಅಬ್ದುಲ್ ರಹೀಂ ಹುಸೇನ್

    ವಿಶ್ವ ಪೌಷ್ಠಿಕ ಸಪ್ತಾಹ ಮಾಸಾಚರಣೆ – ಕಾನೂನು ಮಾಹಿತಿ ಕಾರ್‍ಯಕ್ರಮ ಹಾಗೂ ಪೋಷಣ್ ಅಭಿಯಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ನಮ್ಮ ಪೂರ್ವಜರು, ಹಿರಿಯರಿಗೆ ಪೌಷ್ಠಿಕತೆ ಬಗ್ಗೆ ಅಗಾಧವಾದ ಜ್ಞಾನವಿತ್ತು. ಅದಕ್ಕೆ ಅವರ ಜೀವಿತಾವಧಿಯೇ ಸಾಕ್ಷಿ. ಆಗಿನ ಸರಾಸರಿ ಬದುಕಿನ ಅವಧಿ ೮೦-೯೦ ವರ್ಷ ಆಗಿತ್ತು. ಆದರೆ ಈಗ ೪೫-೫೦ ವರ್ಷಕ್ಕೆ ಆ ವಯಸ್ಸಿನವರ ಅನುಭವ ಆಗುತ್ತಿದೆ. ಇದಕ್ಕೆ ನಾವು ತಿನ್ನುವ ಆಹಾರ, ಇನ್ನಿತರ ಅಂಶಗಳು ಕಾರಣ. ಅಪೌಷ್ಠಿಕತೆ ಅನ್ನುವುದು ಗಂಭೀರ ಸಂಗತಿ. ಸರಕಾರ ಈ ಬಗ್ಗೆ ಕ್ರಮಕೈಗೊಳ್ಳುತ್ತಿದೆ. ನಮ್ಮ ಜವಾಬ್ದಾರಿಯೂ ಇದೆ. ಈ ಬಗ್ಗೆ ನಾವೆಲ್ಲರೂ ಅರಿವು ಮೂಡಿಸಬೇಕಾಗಿದೆ. ಅಪೌಷ್ಠಿಕತೆ ಹೋಗಲಾಡಿಸಲು ಅರಿವು ಅಗತ್ಯ. ಆಹಾರದ ಸಮತೋಲನ ಬಹಳ ಮುಖ್ಯ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್ ಹೇಳಿದರು.

    ಅವರು ಶನಿವಾರ ಕುಂದಾಪುರದ ತಾ.ಪಂ. ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ತಾಲೂಕು ಆಡಳಿತ ಕುಂದಾಪುರದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೌಷ್ಠಿಕ ಸಪ್ತಾಹ ಮಾಸಾಚರಣೆ ಅಂಗವಾಗಿ ಆಯೋಜಿಸಿದ ಕಾನೂನು ಮಾಹಿತಿ ಕಾರ್‍ಯಕ್ರಮ ಹಾಗೂ ಪೋಷಣ್ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.

    ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರವೃತ್ತಿ ಹೆಚ್ಚುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆ. ಇದಕ್ಕೆ ಅಪೌಷ್ಠಿಕತೆಯು ಸಹ ಒಂದು ಕಾರಣ ಆಗಿರಬಹುದು. ಮಾನಸಿಕ ಸದೃಢತೆಯು ಬಹಳ ಮುಖ್ಯ. ಆತ್ಮಹತ್ಯೆಯಂತಹ ಪ್ರಕರಣ ಕಡಿಮೆಯಾಗುವ ನಿಟ್ಟಿನಲ್ಲಿ ನಾವೆಲ್ಲ ಕಾರ್‍ಯಪ್ರವೃತ್ತರಾಗಬೇಕು ಎಂದವರು ಕರೆ ನೀಡಿದರು.

    ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್ ನ್ಯಾಯಾಽಶ ರಾಜು ಎನ್. ಮಾತನಾಡಿ, ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಶಾರೀರಿಕ ಸದೃಢತೆ ಬಹಳ ಮುಖ್ಯ. ಅದಕ್ಕಾಗಿ ಈ ಪೌಷ್ಠಿಕ ಸಪ್ತಾಹವನ್ನು ದೇಶಾದ್ಯಂತ ಆಚರಿಸುವ ಮೂಲಕ ಅದರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಪೌಷ್ಠಿಕತೆಯನ್ನು ಹೋಗಲಾಡಿಸುವುದೇ ಇದರ ಮುಖ್ಯ ಉದ್ದೇಶ ಎಂದರು.

    ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ, ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್‍ಯದರ್ಶಿ ಶ್ರುತಿ ಎಸ್. ಮಾತನಾಡಿದರು. ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು.

    ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ವಕೀಲರ ಸಂಘದ ಪ್ರ. ಕಾರ್‍ಯದರ್ಶಿ ಜೆ. ಶ್ರೀನಾಥ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

    ಸಂಪನ್ಮೂಲ ವ್ಯಕ್ತಿಗಳಾದ ಆಯುಷ್ ಧಾಮ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಸೋನಿ, ಡಾ| ಸ್ವಾತಿ ಶೆಣೈ ಪೌಷ್ಠಿಕತೆ ಬಗ್ಗೆ ಮಾಹಿತಿ ನೀಡಿದರು.

    ಕುಂದಾಪುರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನುರಾಧ ಪ್ರಸ್ತಾವಿಸಿ, ಸ್ವಾಗತಿಸಿದರು. ಪ್ರಭಾವತಿ ಶೆಟ್ಟಿ ಕಾರ್‍ಯಕ್ರಮ ನಿರೂಪಿಸಿದರು.

  • ಯುವ ಬಂಟರ ಸಂಘ ಕುಂದಾಪುರ – ಆಸರೆ ಹಾಗೂ ನವಚೇತನ ಪೋತ್ಸಾಹಧನ ಸಮಿತಿಯ ಸಂಚಾಲಕರಾಗಿ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆ

    ಯುವ ಬಂಟರ ಸಂಘ ಕುಂದಾಪುರ – ಆಸರೆ ಹಾಗೂ ನವಚೇತನ ಪೋತ್ಸಾಹಧನ ಸಮಿತಿಯ ಸಂಚಾಲಕರಾಗಿ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನಡೆಯುವ 2023-24ನೇ ಸಾಲಿನ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುವ ‘ಆಸರೆ’ ಪೋತ್ಸಾಹಧನ ಹಾಗು ವಿಕಲಚೇತನ ವಿದ್ಯಾರ್ಥಿಗಳಿಗೆ ನೀಡಲಾಗುವ ‘ನವಚೇತನ’ ಪೋತ್ಸಾಹಧನದ ಸಮಿತಿಯ ಸಂಚಾಲಕರಾಗಿ ಕುಂದಾಪುರದ ಖ್ಯಾತ ನಿರೂಪಕ ಹಾಗು ಸಿಪ್ಲಾ ಕಂಪನಿಯಲ್ಲಿ ಏರಿಯಾ ಬ್ಯುಸ್ನೆಸ್ ಮ್ಯಾನೇಜರ್ ಆಗಿರುವ ಸಂದೇಶ್ ಶೆಟ್ಟಿ ಸಳ್ವಾಡಿಯವರು ಆಯ್ಕೆಯಾಗಿರುತ್ತಾರೆ.

    ಸಳ್ವಾಡಿ ರತ್ನಾವತಿ ವಾಸುದೇವ ಶೆಟ್ಟಿ ಅವರ ಮಗನಾಗಿದ್ದು ಇವರು ಕಾಲೇಜು ದಿನಗಳಲ್ಲಿ ರಾಷ್ಟ್ರೀಯಸೇವಾ ಯೋಜನೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ತಮ್ಮ ಸಾಮಾಜಿಕ ಸೇವೆಯನ್ನು ಆರಂಭಿಸಿ, ಕಳೆದ 11 ವರ್ಷಗಳಿಂದ ಪ್ರತಿಷ್ಠಿತ ಔಷದ ಕಂಪನಿ ಸಿಪ್ಲಾ ಅಲ್ಲಿ ಕೆಲಸ ಮಾಡುತ್ತಿದ್ದು, ಬೆನಕ ಇವೆಂಟ್ಸ್ ಅಂಡ್ ಮ್ಯಾನೇಜ್ಮೆಂಟ್ ಎನ್ನುವ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆ ಸ್ಥಾಪಿಸಿ ರಾಜ್ಯಮಟ್ಟದ ಕಾರ್ಯಕ್ರಮವನ್ನು ಸಂಘಟಿಸಿ ಹಾಗು ನಿರೂಪಿಸಿ ಪ್ರಸಿದ್ಧ ನಿರೂಪಕರೆನಿಸಿಕೊಂಡಿದ್ದಾರೆ, ಪ್ರಸ್ತುತ ಜೆಸಿಐ ಕುಂದಾಪುರ ಸಿಟಿ ಘಟಕದ ಕಾರ್ಯದರ್ಶಿಯಾಗಿ ಹಾಗು ಕುಂದಾಪುರ ಯುವ ಬಂಟರ ಸಂಘದ ದಶಮ ಸಂಭ್ರಮದ ಕಾರ್ಯಕಾರಿ ಸಮಿತಿಯ ಸಕ್ರೀಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ಬಿ ಉದಯ ಕುಮಾರ್ ಶೆಟ್ಟಿ ಹಾಗು ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ..

  • ಕುಂದಾಪುರ :ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ವಾರಾಹಿ ನೀರಾವರಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆ

    ಕುಂದಾಪುರ :ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ವಾರಾಹಿ ನೀರಾವರಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ವರಾಹಿ ನೀರಾವರಿ ಯೋಜನೆಯ ಬಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

    ವಾರಾಹಿ ನೀರಾವರಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು, ಕಾಮಗಾರಿಯ ಸಮರ್ಪಕವಾಗಿ, ಕ್ಲಪ್ತ ಸಮಯದಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಯೋಜನೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ ವಾರಾಹಿ ಅಧಿಕಾರಿಗಳು ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ಮತ್ತು ಉಡುಪಿ ತಾಲೂಕಿನ ಗ್ರಾಮಗಳ ಒಟ್ಟು ಸುಮಾರು 15,702 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯವನ್ನು ಒದಗಿಸಲು ರೂಪಿಸಲಾಗಿದೆ. ನೀರಾವರಿ ಯೋಜನೆಯ ಪರಿಷ್ಕೃತ ಯೋಜನಾ ಮೊತ್ತ ರೂ. 178.50 ಕೋಟಿಗಳಾಗಿದ್ದು, ಆಗಸ್ಟ್-2023ರ ಅಂತ್ಯಕ್ಕೆ ರೂ. 1302.80 ಕೋಟಿಗಳ ವಾರಾಹಿ ನೀರಾವರಿ ಯೋಜನೆಯಡಿ ಉದ್ದೇಶಿತ 15702 ಹೆ. ಅಚ್ಚುಕಟ್ಟು ಪ್ರದೇಶದ ಪೈಕಿ ಸೆಪ್ಟೆಂಬರ್-2022ರ ಅಂತ್ಯದವರೆಗೆ ಸುಮಾರು 610 ಹೆ. ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ.

    ಪ್ರಸ್ತುತ ವಾರಾಹಿ ನೀರಾವರಿ ಯೋಜನೆಯಡಿ ಡೈವರ್ಶನ್ ವಿಯರ್, ವಾರಾಹಿ ಬಲದಂಡೆ ಸಾಮಾನ್ಯ ಕಾಲುವೆ ಸರಪಳಿ: 1.01 ರಿಂದ 18,725 ಎಡದಂಡೆ ನಾಲೆ-0.00 ರಿಂದ 44.35 ಕಿ.ಮೀನ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ವಾರಾಹಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿರುತ್ತದೆ. ವಾರಾಹಿ ಎಡದಂಡೆ ನಾಲೆಯ ವಿತರಣಾ ನಾಲೆ-29, 32, 45, 46 ಮತ್ತು 47ಕ್ಕೆ ಸಂಬಂಧಿಸಿದಂತೆ ಅಂದಾಜುಪಟ್ಟಿ ತಯಾರಿಕಾ ಹಂತದಲ್ಲಿರುತ್ತದೆ ಎನ್ನುವ ಮಾಹಿತಿ ನೀಡಿದರು.

    ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಹಿಂದಿನ ಸರ್ಕಾರದ ಅವಧಿಯಲ್ಲಿ ವಾರಾಹಿ ನಾಲೆ ನಿರ್ಮಾಣಕ್ಕೆ 54.77 ಕೋಟಿ, ರಸ್ತೆ, ಟ್ಯಾಂಕ್‍ಗೆ 21 ಕೋಟಿ, ಎಸ್.ಸಿ.ಪಿ., ಎಸ್‍ಜಿಪಿ ಕೆಲಸಕ್ಕೆ 6 ಕೋಟಿ, ಸರ್ವೆಗೆ 1 ಕೋಟಿ, ಒಟ್ಟು 81.88 ಕೋಟಿ ಮಂಜೂರಾತಿಯಾಗಿತ್ತು. ಈಗ ಈ ಸರ್ಕಾರ ಅನುದಾನವನ್ನು ತಡೆ ಹಿಡಿದಿರುವುದರಿಂದ ಮುಂದಿನ ಆದೇಶ ಬರುವ ತನಕ ಕಾಯಬೇಕಾಗಿದೆ ಎಂದರು.
    ವಾರಾಹಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

  • ಸಾಸ್ತಾನ – ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತೋತ್ಸವ

    ಸಾಸ್ತಾನ – ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಗೋಳಿಗರಡಿ ಸಾಸ್ತಾನ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮದಿನಾಚರಣೆ ಪ್ರಯುಕ್ತ ಗುರು ಪೂಜೆ ಕಾರ್ಯಕ್ರಮ ಗೋಳಿಗರಡಿ ದೈವಸ್ಥಾನದಲ್ಲಿ ನಡೆಯಿತು. ಗೋಳಿಗರಡಿ ದೈವಸ್ಥಾನದ ಪಾತ್ರಿ ಶಂಕರ ಪೂಜಾರಿ ಪೂಜಾ ಕಾರ್ಯಕ್ರಮವನ್ನು ನೆರವೆರಿಸಿದರು.

    ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಜಿ.ವಿಠಲ ಪೂಜಾರಿಸಂಘದ ಅಧ್ಯಕ್ಷ ಎಮ್.ಸಿ ಚಂದ್ರಶೇಖರ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ, ಕಾರ್ಯದರ್ಶಿ ಚಂದ್ರಮೋಹನ್ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ರತ್ನ ಜೆ ರಾಜ್, ಸಂಘದ ಪ್ರಮುಖರಾದ ಸುಧಾಕರ್ ಪೂಜಾರಿ ಐರೋಡಿ, ಸುರೇಶ್ ಪೂಜಾರಿ ಪಾಂಡೇಶ್ವರ, ರಾಜು ಪೂಜಾರಿ ಮೂಡಬೆಟ್ಟು, ಸುರೇಶ್ ಪೂಜಾರಿ ಗುಂಡ್ಮಿ ಸಂಬೋಡ್ಲು, ಗೋದಾವರಿ, ಉಷಾ ಗಣೇಶ್ ಪೂಜಾರಿ ಮತ್ತು ಸಂಘದ ಇತರ ಸದಸ್ಯರು ಇದ್ದರು.

  • ಬಾಳಕುದ್ರು – ಬಿಲ್ಲವ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ

    ಬಾಳಕುದ್ರು – ಬಿಲ್ಲವ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜಯಂತೋತ್ಸವದ ಹಿನ್ನಲ್ಲೆಯಲ್ಲಿ ಇಲ್ಲಿನ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳಕುದ್ರು ಹಂಗಾರಕಟ್ಟೆ ಇವರ ಆಶ್ರಯದಲ್ಲಿ ಗುರು ಜಯಂತಿ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ, ಗುರುಪೂಜೆ ಕಾರ್ಯಕ್ರಮ ಸಂಘದ ಕಛೇರಿಯಲ್ಲಿ ಏರ್ಪಡಿಸಲಾಯಿತು.

    ಧಾರ್ಮಿಕ ವಿಧಿವಿಧಾನಗಳನ್ನು ವೇ.ಮೂ ಸೂರ್ಯನಾರಾಯಣ ಅಡಿಗ ನೆರವೆರಿಸಿದರು.

    ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಶಂಕರ್ ಪೂಜಾರಿ ಬಾಳಕುದ್ರು ಪೂಜಾ ಕೈಂಯರ್ಕವನ್ನು ನೆರವೆರಿಸಿದರು.

    ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಅಧ್ಯಕ್ಷ ವಿಜಯ ಕುಮಾರ್, ಸಂಫದ ಪ್ರಮುಖರಾದ ನಾರಾಯಣ ಪೂಜಾರಿ, ವಾಸುದೇವ ಕೋಟ್ಯಾನ್, ಶೀನಪ್ಪ ಡಿ ಅಮೀನ್, ರವೀಂದ್ರ ಸುವರ್ಣ, ಗುರಿಕಾರರಾದ ಕುಷ್ಟು ಪೂಜಾರಿ,ಮಹಿಳಾ ಘಟಕದ ಅಧ್ಯಕ್ಷೆ ಶಕುಂತಲ ವಾಸುದೇವ ಕೋಟ್ಯಾನ್ ಇದ್ದರು. ನಂತರ ಸಂಘದ ಸದಸ್ಯರಿಂದ ಭಜನೆ, ಮಹಾಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು.

  • ಕೋಟ ಹಾಗೂ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ

    ಕೋಟ ಹಾಗೂ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಕೋಟ ಇದರ ಆಶ್ರಯದಲ್ಲಿ ಕೋಟ ಶ್ರೀ ನಾರಾಯಣಗುರು ಮಂದಿರಲ್ಲಿ ಬ್ರಹ್ಮಶ್ರೀ ನಾರಾಯಣಗುರು 169ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಇತ್ತೀಚಿಗೆ ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆಯಾಗಿ ಆಯ್ಕೆಯಾದ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಪಾಂಡು ಪೂಜಾರಿ, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಉಪಾಧ್ಯಕ್ಷೆ ಸರಸ್ವತಿ.ಸಿ.ಪೂಜಾರಿ ಇವರುಗಳನ್ನು ಸನ್ಮಾನಿಸಲಾಯಿತು.

    ಸಂಘದ ಅಧ್ಯಕ್ಷ ಸದಾನಂದ ಗಿಳಿಯಾರು, ಪ್ರದಾನಕಾರ್ಯದರ್ಶಿ ಪ್ರಸಾದ್ ಬಿಲ್ಲವ, ಸಂಘದ ಹಿರಿಯರಾದ ಬಿ.ಕೆ ತೇಜ ಪೂಜಾರಿ, ಕೋಟ ಹಾಗೂ ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯರು ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.

  • ಕೋಟ ಬ್ರಹ್ಮಶ್ರೀ ನಾರಾಯಣಗುರು 169ನೇ ಜಯಂತೋತ್ಸವ

    ಕೋಟ ಬ್ರಹ್ಮಶ್ರೀ ನಾರಾಯಣಗುರು 169ನೇ ಜಯಂತೋತ್ಸವ

    ಬ್ರಹ್ಮಶ್ರೀ ನಾರಾಯಣಗುರುಗಳ ಚಿಂತನೆ,ಹೋರಾಟದ ತಳಹದಿ ಹಿಂದುಳಿದವರಿಗೆ ಶ್ರೀರಕ್ಷೆ – ಮಾಜಿ ಸಚಿವ ಕೋಟ

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಬ್ರಹ್ಮಶ್ರೀ ನಾರಾಯಣಗುರುಗಳ ಚಿಂತನೆ ಅವರ ಹೋರಾಟದ ತಳಹದಿ ಹಿಂದುಳಿದರನ್ನು ಬಲು ಎತ್ತರಕ್ಕೆ ಕೊಂಡ್ಯೋಯ್ದಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಗುರುವಾರ ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಕೋಟ ಇದರ ಆಶ್ರಯದಲ್ಲಿ ಕೋಟ ಶ್ರೀ ನಾರಾಯಣಗುರು ಮಂದಿರಲ್ಲಿ ಬ್ರಹ್ಮಶ್ರೀ ನಾರಾಯಣಗುರು 169ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಎಲ್ಲಾ ವರ್ಗದ ಜನರ ನಾಡಿ ಮಿಡಿತ ಅರಿತು, ಮೇಲು ಕೀಳು,ಜಾತಿ ಮತದ ವಿರುದ್ಧ ಸಿಡಿದ್ದೆದ್ದು ಶೋಷಿತರ ಧ್ವನಿಯಾಗಿದ್ದರು, ಅವರ ಜೀವನ ಇಂದಿನ ದಿನಕ್ಕೆ ಸ್ಪೂರ್ತಿಯ ಸೆಲೆಯಾಗಿದೆ ಎಂದು ಶುಭಹಾರೈಸಿದರು.

    ಹೆಜಮಾಡಿ ಮಹೇಶ್ ಶಾಂತಿ ನೇತ್ರತ್ವದಲ್ಲಿ ವಿವಿಧ ಧಾರ್ಮಿಕ ಪೌರೋಹಿತ್ಯ ಕಾರ್ಯಕ್ರಮಗಳು ನೆರವೆರಿತು.

    ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಸಂಘದ ಯುವ ಘಟಕದ ಅಧ್ಯಕ್ಷ ಸುರೇಶ್ ಗಿಳಿಯಾರು ದಂಪತಿಗಳು ಭಾಗಿಯಾದರು.

    ಗುರು ಜಯಂತಿ ಪ್ರಯುಕ್ತ ವಿಶೇಷ ಪೂಜೆ,ಪಂಚವರ್ಣ ಮಹಿಳಾ ಮಂಡಲ ಭಜನಾ ತಂಡ,ಸಾಸ್ತಾನದ ಬ್ರಹ್ಮಬೈದರ್ಕಳ ಮಹಿಳಾ ಭಜನಾ ತಂಡ ಹಾಗೂ ಶ್ರೀ ರಾಮಾಮೃತ ಭಜನಾ ಮಂಡಳಿ ಪಡುಕರೆ ಇವರಿಂದ ಭಜನಾ ಕಾರ್ಯಕ್ರಮ ಸಂಪನ್ನಗೊಂಡಿತು. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗೌರವಿಸಲಾಯಿತು.

    ಸಂಘದ ಅಧ್ಯಕ್ಷ ಸದಾನಂದ ಗಿಳಿಯಾರು, ಪ್ರದಾನಕಾರ್ಯದರ್ಶಿ ಪ್ರಸಾದ್ ಬಿಲ್ಲವ, ಸಂಘದ ಹಿರಿಯರಾದ ಬಿ.ಕೆ ತೇಜ ಪೂಜಾರಿ, ಪುಟ್ಟ ಪೂಜಾರಿ, ಶಿರಿಯಾರ ನರಸಿಂಹ ಪೂಜಾರಿ, ರಾಜು ಪೂಜಾರಿ,ಶೀನ ಪೂಜಾರಿ,ವಿಠ್ಠಲ ಪೂಜಾರಿ, ರಾಜು ಪೂಜಾರಿ, ಗೋಪಾಲ ಪೂಜಾರಿ, ಸಂತೋಷ್ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ವಸಂತಿ ಉಮೇಶ್, ಬ್ರಹ್ಮಶ್ರೀ ನಾರಾಯಣಗುರು ವಿವಿದೋದ್ದೇಶ ಸ್ವಸಹಾಯ ಸಂಘದ ಅಧ್ಯಕ್ಷೆ ಸುಧಾ ಎ ಪೂಜಾರಿ, ಕಾರ್ಯದರ್ಶಿ ಸ್ಮೀತಾ ಆರ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.