Category: ಸುದ್ದಿ

  • ಕುಂದಾಪುರ :ವಿಶ್ವ ಹಿಂದೂ ಪರಿಷತ್ – ಭಜರಂಗದಳ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ

    ಕುಂದಾಪುರ :ವಿಶ್ವ ಹಿಂದೂ ಪರಿಷತ್ – ಭಜರಂಗದಳ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ನಮ್ಮ ದೇಶ ೧೯೪೭ರ ಆ. ೧೪ ರ ಮಧ್ಯರಾತ್ರಿ ೧೨ ಗಂಟೆಗೆ ವಿಭಜನೆಯಾಯಿತು. ಅವರು ಕಿರಿ ಕಿರಿ ಮಾಡುತ್ತಾರೆ ಅಂತ ದೇಶವನ್ನು ಇಬ್ಭಾಗ ಮಾಡುವುದು ಅನಿವಾರ್‍ಯವಾಯಿತು ಎಂದು ಆಗ ನೆಹರೂ ಅವರು ಹೇಳುತ್ತಾರೆ. ಆದರೆ ವಿಭಜನೆಯಿಂದ ಉಂಟಾದ ಈ ಕಿರಿಕಿರಿ ಇಂದಿಗೂ ನಿಂತಿಲ್ಲ. ಕಳೆದ ೭೬ ವರ್ಷಗಳಿಂದ ಇಡೀ ಜಗತ್ತಿಗೆ ಪಾಕಿಸ್ಥಾನ ಕಿರಿಕಿರಿ ಮಾಡುತ್ತಿದೆ. ಜಗತ್ತಿಗೆ ಭಯೋತ್ಪಾದಕರನ್ನು ರಫ್ತು ಮಾಡುತ್ತಿರುವ ಭೂ ಪ್ರದೇಶ ಪಾಕ್. ಅವರಿಗೆ ಶಾಂತಿ ಬೇಡ. ಅಶಾಂತಿಯೇ ಬೇಕಿರುವುದು ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

    ಅವರು ವಿಶ್ವ ಹಿಂದೂ ಪರಿಷತ್ – ಭಜರಂಗ ದಳ ಕುಂದಾಪುರ ನಗರ, ವಡೇರಹೋಬಳಿ ವತಿಯಿಂದ ಕುಂದಾಪುರದಲ್ಲಿ ಶನಿವಾರ ರಾತ್ರಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆಯ ಬಳಿಕ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ನಡೆದ ಸಭಾ ಕಾರ್‍ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

    ಆಗಿನ ಕೆಲ ನಾಯಕರಲ್ಲಿ ದೇಶದ ಬಗೆಗಿನ ಭಾವನೆಯೇ ಸತ್ತು ಹೋಗಿದ್ದರಿಂದ, ಅಖಂಡವಾಗಿದ್ದ ದೇಶ ಇಬ್ಭಾಗ ಆಗುವಂತಾಯಿತು. ಭಾರತ್ ಜೋಡೋ ಅಂತ ಈಗ ಪ್ರಚಾರಕ್ಕಾಗಿ ಮಾಡುತ್ತಾರೆ. ಎಲ್ಲಿದೆ ಭಾರತ್ ಜೋಡೋ? ತುಂಡಾಗಿ ಹೋದ ಪಾಕಿಸ್ಥಾನದ ಬಗ್ಗೆ ಕಾಂಗ್ರೆಸ್‌ನವರು ಮಾತನಾಡುತ್ತಾರೆ. ಅಮೆರಿಕಾದಲ್ಲಿ ಹೋಗಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಅವಹೇಳನ ಮಾಡುತ್ತಾರೆ. ಇಂತಹ ಅಪಾಯದ, ಗೊಂದಲದ ಸಂದರ್ಭದಲ್ಲಿ ನಾವಿದ್ದೇವೆ. ಆದರೆ ಜಗತ್ತಿನಲ್ಲಿಯೇ ದೇಶಕ್ಕೋಸ್ಕರ ಹೋರಾಡಿದ ತಾಯಂದಿರಿದ್ದರೆ ಅದು ಭಾರತ ಮಾತ್ರ. ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಉಳ್ಳಾಲದ ಅಬ್ಬಕ್ಕ ಸಹಿತ ನೂರಾರು ಮಂದಿ ಇಂತಹ ವೀರ ವನಿತೆಯರು ಸಿಗುತ್ತಾರೆ. ಇಂತಹ ಹೋರಾಟದ ಇತಿಹಾಸ ಸಾವಿರಾರು ಇದೆ ಎಂದವರು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಮಾಜಿ ಸೈನಿಕ ರವಿಚಂದ್ರ ಶೆಟ್ಟಿ ಮಾತನಾಡಿದರು.

    ಸಂಘ ಚಾಲಕ ಸತೀಶ್ಚಂದ್ರ ಕಾಳಾವರ್ಕರ್, ವಿಶ್ವ ಹಿಂದೂ ಪರಿಷತ್ – ಭಜರಂಗ ದಳ ಜಿಲ್ಲಾ ಪ್ರಮುಖ್ ಸುರೇಂದ್ರ ಮಾರ್ಕೋಡು, ತಾಲೂಕು ಪ್ರಮುಖ್ ಸುಧೀರ್ ಮೇರ್ಡಿ, ಮತ್ತಿತರರು ಉಪಸ್ಥಿತರಿದ್ದರು.

    ಪಂಜಿನ ಮೆರವಣಿಗೆ
    ಸಭಾ ಕಾರ್‍ಯಕ್ರಮಕ್ಕೂ ಮುನ್ನ ಹುಣ್ಸೆಕಟ್ಟೆಯ ನಾಗಯಕ್ಷೀ ಬೊಬ್ಬರ್ಯ ದೈವಸ್ಥಾನದಿಂದ ಕುಂದಾಪುರದವರೆಗೆ ಪಂಜಿನ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

  • ಕುಂದಾಪುರ ರೆಡ್‌ಕ್ರಾಸ್ ಸಂಸ್ಥೆಯಿಂದ ಜಿನೇವಾ ಒಪ್ಪಂದ ದಿನಾಚರಣೆ

    ಕುಂದಾಪುರ ರೆಡ್‌ಕ್ರಾಸ್ ಸಂಸ್ಥೆಯಿಂದ ಜಿನೇವಾ ಒಪ್ಪಂದ ದಿನಾಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಜಿನೇವಾ ಒಪ್ಪಂದದ ದಿನಾಚರಣೆಯನ್ನು ಆಚರಿಸುವ ಉದ್ದೇಶ ಮಾನವೀಯ ಮೌಲ್ಯದ ಮಹತ್ವವನ್ನು ತಿಳಿಸುವುದೇ ಆಗಿದೆ. ಯಾವುದಾದರೂ ದೇಶದ ಯೋಧರು, ಯುದ್ಧ ಅಥವಾ ಇನ್ನು ಯಾವುದೇ ಸಂದರ್ಭದಲ್ಲಿ ಇನ್ನೊಂದು ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರೆ, ಅವರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಹಸ್ತಾಂತರಿಸಬೇಕು ಅನ್ನುವುದು ಈ ಒಪ್ಪಂದದ ಪ್ರಮುಖಾಂಶ. ಇದು ಮಾನವೀಯ ಮೌಲ್ಯವನ್ನು ಎತ್ತಿ ಹಿಡಿಯುವ ದಿನವಾಗಿದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

    ಅವರು ಶನಿವಾರ ಇಲ್ಲಿನ ಬೋರ್ಡ್ ಹೈಸ್ಕೂಲಿನ ಕಲಾಮಂದಿರದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಆಶ್ರಯದಲ್ಲಿ ನಡೆದ ಜಿನೇವಾ ಒಪ್ಪಂದ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

    ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತೆ, ರೆಡ್‌ಕ್ರಾಸ್ ಘಟಕದ ಅಧ್ಯಕ್ಷೆ ರಶ್ಮಿ ಎಸ್.ಆರ್. ಮಾತನಾಡಿ, ಜಿನೇವಾ ಒಪ್ಪಂದವೆಂದರೆ ಅದು ಮಾನವೀಯತೆ ತಿಳಿಸುವ ದಿನ. ೧೬ ದೇಶಗಳಿಂದ ಆರಂಭಗೊಂಡ ಈ ಒಪ್ಪಂದಕ್ಕೆ ಈಗ ೧೯೬ ದೇಶಗಳು ಸಹಿ ಹಾಕಿವೆ. ಯುದ್ಧ ಮಾತ್ರವಲ್ಲ, ನಮ್ಮ ಬದುಕಿನಲ್ಲೂ ಮಾನವೀಯ ಮೌಲ್ಯ ಅತೀ ಅಗತ್ಯ. ಅದಕ್ಕಿಂತ ಮಿಗಿಲಾದುದು ಈ ಪ್ರಪಂಚದಲ್ಲಿ ಯಾವುದು ಇಲ್ಲ. ವಿದ್ಯಾರ್ಥಿಗಳು ಈ ದಿನದ ಮಹತ್ವವನ್ನು ಅರಿತುಕೊಂಡು, ತಮ್ಮ ದೈನಂದಿನ ಜೀವನದಲ್ಲೂ ತಮ್ಮಿಂದಾದ ಮಾನವೀಯತೆ, ಪರೋಪಕಾರ, ಸಹಾಯವನ್ನು ಮಾಡಿದರೆ ಅದು ನಿಮ್ಮನ್ನು ದೇಶದ ಪ್ರಜೆಯಾಗಿ ರೂಪುಗೊಳ್ಳುವಂತೆ ಮಾಡುತ್ತದೆ ಎಂದರು.
    ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಚೇರ್‌ಮನ್ ಎಸ್. ಜಯಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

    ಸಂಪನ್ಮೂಲ ವ್ಯಕ್ತಿ ಭಂಡಾರ್‌ಕಾರ್‍ಸ್ ಕಾಲೇಜಿನ ಪ್ರಾಂಶುಪಾಲ ಡಾ| ಶುಭಕರಾಚಾರಿ ಅವರು, ಈ ದಿನದ ಆಚರಣೆ ಆರಂಭಗೊಂಡ ಬಗ್ಗೆ, ಅದರ ಉದ್ದೇಶ, ಮಹತ್ವದ ಕುರಿತಂತೆ ಮಾತನಾಡಿದರು.

    ಅಚ್ಲಾಡಿಯ ಕೆನರಾ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ನಟರಾಜನ್, ಯುವ ರೆಡ್‌ಕ್ರಾಸ್ ಸಂಯೋಜಕ ಸತ್ಯನಾರಾಯಣ ಪುರಾಣಿಕ್, ರೆಡ್‌ಕ್ರಾಸ್ ಕಾರ್‍ಯದರ್ಶಿ ವೈ. ಸೀತಾರಾಮ ಶೆಟ್ಟಿ, ಕೋಶಾಧಿಕಾರಿ ಶಿವರಾಮ ಶೆಟ್ಟಿ, ರೆಡ್‌ಕ್ರಾಸ್ ಘಟಕದ ಪದಾಧಿಕಾರಿಗಳು, ವಿವಿಧ ಕಾಲೇಜುಗಳ ಯುವ ರೆಡ್‌ಕ್ರಾಸ್ ಘಟಕಗಳ ಸಂಯೋಜಕರು, ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.

    ರೆಡ್‌ಕ್ರಾಸ್ ಉಪಸಭಾಪತಿ ಡಾ| ಉಮೇಶ್ ಪುತ್ರನ್ ಸ್ವಾಗತಿಸಿ, ಡಾ| ಸೋನಿ ಕಾರ್‍ಯಕ್ರಮ ನಿರೂಪಿಸಿದರು.

  • ತೆಕ್ಕಟ್ಟೆ- ಜ್ಞಾನ ವಿಜ್ಞಾನ, ಗಣಿತ, ಸಂಸ್ಕೃತಿ ಜ್ಞಾನ, ಯೋಗ ಮೇಳ ಕಾರ್ಯಕ್ರಮ

    ತೆಕ್ಕಟ್ಟೆ- ಜ್ಞಾನ ವಿಜ್ಞಾನ, ಗಣಿತ, ಸಂಸ್ಕೃತಿ ಜ್ಞಾನ, ಯೋಗ ಮೇಳ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಸೇವಾ ಸಂಗಮ ವಿದ್ಯಾ ಕೇಂದ್ರ ವಿದ್ಯಾಗಿರಿ ತೆಕ್ಕಟ್ಟೆಯಲ್ಲಿ ಆ. 12 ರಂದು ಜ್ಞಾನ ವಿಜ್ಞಾನ, ಗಣಿತ, ಸಂಸ್ಕೃತಿ ಜ್ಞಾನ, ಯೋಗ ಮೇಳ ಕಾರ್ಯಕ್ರಮವನ್ನು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಘಟಕ ಸಂಯೋಗದೊಂದಿಗೆ ಆಯೋಜಿಸಲಾಯಿತು.

    ಶಾಲಾ ಆಡಳಿತ ಮಂಡಳಿಯ ಸಂಚಾಲಕ ಟಿ. ರಮೇಶ್ ನಾಯಕ್ ರವರು ಆರನೇ ತರಗತಿ ವಿದ್ಯಾರ್ಥಿಯಾದ ತನ್ಮಯ್ ಇವನು ತಯಾರಿಸಿದ ಅಲೆಗಳಿಂದ ವಿದ್ಯುತ್ ಶಕ್ತಿ ವಿಜ್ಞಾನ ಮಾದರಿಯನ್ನು ಚಾಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಸುಮಾರು 10 ವಿದ್ಯಾಭಾರತೀಯ ಶಾಲೆಗಳಿಂದ 252 ಮಂದಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾ ಭಾರತೀ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಪೈ ವಹಿಸಿದ್ದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿದ್ಯಾ ಭಾರತೀ ಉಡುಪಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ, ಉಡುಪಿ ಜಿಲ್ಲಾ ಘಟಕದ ವಿಜ್ಞಾನ ಪ್ರಮುಖ ಸಂಧ್ಯಾ ಭಟ್, ಯೋಗ ಪ್ರಮುಖ ಸಂಜಯ್, ಸಂಸ್ಕೃತಿ ಜ್ಞಾನ ಪ್ರಮುಖ ಕುಮಾರಿ ಜ್ಯೋತಿ ಎಳ್ಳಾರೆ, ಗಣಿತ ಪ್ರಮುಖ ಜ್ಯೋತಿ ಅಡಿಗ , ಶಾಲಾ ಮುಖ್ಯೋಪಾಧ್ಯಾಯ ಟಿ. ವಿಷ್ಣುಮೂರ್ತಿ ಭಟ್ ಇವರು ಉಪಸ್ಥಿತರಿದ್ದರು.

  • ಮಾಬುಕಳ- ಚೇತನ ಪ್ರೌಢಶಾಲೆ ಹಂಗಾರಕಟ್ಟೆ ನವೀಕೃತ ವಿಜ್ಞಾನ ಪ್ರಯೋಗ ಶಾಲೆ ಉದ್ಘಾಟನೆ

    ಮಾಬುಕಳ- ಚೇತನ ಪ್ರೌಢಶಾಲೆ ಹಂಗಾರಕಟ್ಟೆ ನವೀಕೃತ ವಿಜ್ಞಾನ ಪ್ರಯೋಗ ಶಾಲೆ ಉದ್ಘಾಟನೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಸಾಸ್ತಾನ ಸಮೀಪ ಮಾಬುಕಳದ ಚೇತನ ಪ್ರೌಢಶಾಲೆ ಇದರ ನವೀಕೃತ ವಿಜ್ಞಾನ ಪ್ರಯೋಗ ಶಾಲೆಯನ್ನು ಆ. 10.ರಂದು ಸಂಸ್ಥೆಯ ಹಿಂದಿನ ವಿದ್ಯಾರ್ಥಿ, ಪ್ರಸ್ತುತ ಜಪಾನಿನ ಮಿಯಾಸಾಕಿ ವಿಶ್ವವಿದ್ಯಾಲಯದ ಹೃದಯ ರಕ್ತನಾಳದ ಶರೀರ ಶಾಸ್ತ್ರ ವಿಭಾಗದ ಪ್ರೋಫೆಸರ್ ಡಾ. ಹರೀಶ್ ಕುಮಾರ್ ಮಧ್ಯಸ್ಥ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೊಡುಗೆ ಸ್ಮರಿಸಿ ಶಾಲಾ ಆಡಳಿತ ಮಂಡಳಿ ವತಿಯಿಂದ ಡಾ. ಹರೀಶ್ ಕುಮಾರ್ ಮಧ್ಯಸ್ಥರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಭರತ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು.

    ಆಡಳಿತ ಮಂಡಳಿಯ ಉಪಾಧ್ಯಕ್ಷ ಬಿ.ರಾಜಾರಾಮ್ ಭಟ್, ಕೋಶಾಧಿಕಾರಿ ಎ.ಮಹಾಬಲೇಶ್ವರ ಹೆಬ್ಬಾರ್, ವಿಘ್ನೇಶ್ವರ ಅಡಿಗ ,ರಾಮದೇವ ಹಂದೆ ಹಾಗೂ ಫಾರ್ಚುನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್ ಚೇರ್ಮನ್ ತಾರಾನಾಥ ಶೆಟ್ಟಿ ಹಾಗೂ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷ ಅರವಿಂದ ಶರ್ಮ ,ಕಾರ್ಯದರ್ಶಿ ಕರುಣಾಕರ ಶೆಟ್ಟಿ ಗುಂಡ್ಮಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸತೀಶ ಐತಾಳ್ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಜ್ಞಾನ ಶಿಕ್ಷಕ ಗೋವಿಂದ ರಾವ್ ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆ ಮಾಡಿದರು.

  • ಸುಜಯೀಂದ್ರ ಹಂದೆಯವರ ‘ಯಕ್ಷ ದೀವಟಿಗೆ’ ಕೃತಿ ಅನಾವರಣ ಕಾರ್ಯಕ್ರಮ

    ಸುಜಯೀಂದ್ರ ಹಂದೆಯವರ ‘ಯಕ್ಷ ದೀವಟಿಗೆ’ ಕೃತಿ ಅನಾವರಣ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ : ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ಮೈಸೂರಿನ ಅಂಬಾರಿ ಪ್ರಕಾಶನ ಪ್ರಕಟಿಸಿದ ಉಪನ್ಯಾಸಕ ಕೋಟ ಸುಜಯೀಂದ್ರ ಹಂದೆಯವರ ಯಕ್ಷ ಪ್ರಬಂಧಗಳ ಸಂಕಲನ “ಯಕ್ಷ ದೀವಟಿಗೆ” ಆಗಸ್ಟ್ 14ರ ಸೋಮವಾರ ಸಂಜೆ 5.30 ಕ್ಕೆ ಮಂಗಳೂರಿನ ಕೊಡಿಯಾಲಬೈಲ್ ಎಂ. ಜಿ. ರಸ್ತೆಯಲ್ಲಿರುವ ಕಲ್ಕೂರ ಪ್ರತಿಷ್ಠಾನದ ಕಛೇರಿಯಲ್ಲಿ ಅನಾವರಣಗೊಳ್ಳಲಿದೆ.

    ಯಕ್ಷಗಾನ ವಿದ್ವಾಂಸರಾದ, ಡಾ. ಪ್ರಭಾಕರ ಜೋಷಿ ಕೃತಿಯನ್ನು ಬಿಡುಗಡೆಗೊಳಿಸಲಿದ್ದಾರೆ. ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆವಹಿಸಲಿದ್ದಾರೆ. ಸಾಹಿತಿ ಜನಾರ್ದನ ಹಂದೆ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

  • ಆ.14: ಪಾಂಡೇಶ್ವರ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

    ಆ.14: ಪಾಂಡೇಶ್ವರ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಾಂಡೇಶ್ವರ ಗ್ರಾಮ ಪಂಚಾಯತ್ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಆಗಸ್ಟ್ 14 ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಜರುಗಲಿದೆ.

    ನೂತನ ಕಟ್ಟಡವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ನೆರವೇರಿಸಲಿದ್ದು, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರಾದ ಪ್ರಿಯಾಂಕ ಖರ್ಗೆ ಉಪಸ್ಥಿತರಿರಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ವಹಿಸಲಿದ್ದಾರೆ.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್ ಎಲ್ ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಪಂಚಾಯತ್ ಅಧ್ಯಕ್ಷೆ ಕಲ್ಪನಾ ದಿನಕರ ಪೂಜಾರಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಮ್ ಟಿ ರೇಜು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.

  • ಹೆಸಕುತ್ತೂರು ಪ್ರಾಥಮಿಕ ಶಾಲೆ: ಸಂಪೂರ್ಣ ಸುಕನ್ಯಾ ಸಮೃದ್ಧಿ ಶಾಲೆ

    ಹೆಸಕುತ್ತೂರು ಪ್ರಾಥಮಿಕ ಶಾಲೆ: ಸಂಪೂರ್ಣ ಸುಕನ್ಯಾ ಸಮೃದ್ಧಿ ಶಾಲೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ಅಡಿಯಲ್ಲಿ ಎಲ್ಲಾ ಅರ್ಹ ಹೆಣ್ಣು ಮಕ್ಕಳ ಹೆಸರಲ್ಲಿ ಖಾತೆ ತೆರೆದ ಪ್ರಯುಕ್ತ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪೂರ್ಣ ಸುಕನ್ಯಾ ಸಮೃದ್ಧಿ ಶಾಲೆಯಾಗಿ ಭಾರತೀಯ ಅಂಚೆ ಇಲಾಖೆ ವತಿಯಿಂದ ಗುರುತಿಸಲಾಗಿದೆ.

    ಈ ಸಂದರ್ಭದಲ್ಲಿ ಉಡುಪಿ ಉತ್ತರ ಉಪವಿಭಾಗದ ಅಂಚೆ ನಿರೀಕ್ಷಕರಾದ ಶಂಕರ ಲಮಾಣಿ ಶಾಲಾ ಮುಖ್ಯ ಶಿಕ್ಷಕರಾದ ಶೇಖರ ಕುಮಾರರಿಗೆ ಪ್ರಮಾಣ ಪತ್ರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಂಚೆ ಮೇಲ್ವಿಚಾರಕರಾದ ಸುಭಾಷ್ ತಿಂಗಳಾಯ, ಹೆಸಕುತ್ತೂರು ಬ್ರಾಂಚ್ ಪೋಸ್ಟ್ ಮಾಸ್ಟರ್ ಶಂಕರ ಶೆಟ್ಟಿ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

  • ಕುಂದಾಪುರ: ಪುರಸಭೆಯ ಕಂದಾಯ ನಿರೀಕ್ಷಕಿಗೆ ವಿದಾಯ

    ಕುಂದಾಪುರ: ಪುರಸಭೆಯ ಕಂದಾಯ ನಿರೀಕ್ಷಕಿಗೆ ವಿದಾಯ

    Video

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಪುರಸಭೆಯಲ್ಲಿ 2015ರಿಂದ ಕಂದಾಯ ನಿರೀಕ್ಷಕರಾಗಿ ಸೇವೆಗೆ ಸೇರಿ 8ವರ್ಷಗಳ ಕಾಲ ಸೇವೆ ಸಲ್ಲಿಸಿ ಕಂದಾಯ ಅಧಿಕಾರಿಯಾಗಿ ಭಡ್ತಿ ಹೊಂದಿ ಇದೀಗ ಮೂಡಬಿದಿರೆಗೆ ವರ್ಗಾವಣೆಯಾಗಿರುವ ಜ್ಯೋತಿ ಅವರಿಗೆ ಪುರಸಭೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

    ಮಾಜಿ ಅಧ್ಯಕ್ಷರಾದ ದೇವಕಿ ಸಣ್ಣಯ್ಯ, ಕಲಾವತಿ, ಮೋಹನದಾಸ್ ಶೆಣೈ, ಮಾಜಿಉಪಾಧ್ಯಕ್ಷ ರಾಜೇಶ್ ಕಾವೇರಿ, ಚಂದ್ರಶೇಖರ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

  • ಕುಂದಾಪುರ: ಕನ್ನಡ ನಾಮಫಲಕ ಅಳವಡಿಸುವಂತೆ ಕನ್ನಡ ಅಭಿಮಾನಿಗಳಿಂದ ಪುರಸಭೆಗೆ ಮನವಿ

    ಕುಂದಾಪುರ: ಕನ್ನಡ ನಾಮಫಲಕ ಅಳವಡಿಸುವಂತೆ ಕನ್ನಡ ಅಭಿಮಾನಿಗಳಿಂದ ಪುರಸಭೆಗೆ ಮನವಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ಕನ್ನಡ ನಾಮಫಲಕವನ್ನು ಖಡ್ಡಾಯವಾಗಿ ಅಳವಡಿಸುವಂತೆ ಆಗ್ರಹಿಸಿ ಕುಂದಾಪುರದ ವಿಠಲವಾಡಿ ಕನ್ನಡಾಭಿಮಾನಿಗಳ ಸಮಘದ ವತಿಯಿಂದ ಮನವಿ ಸಲ್ಲಿಸಲಾಯಿತು.

    ಕನ್ನಡ ಖಡ್ಡಾಯವಾಗಿದ್ದರೂ ಹೆಚ್ಚಿನ ಅಂಗಡಿ ಮುಂಗಟ್ಟುಗಳ ಮುಂಭಾಗದಲ್ಲಿ ಆಂಗ್ಲಭಾಷೆಯ ಹಾಗೂ ಇತರ ಭಾಷೆಯ ನಾಮಫಲಕಗಳನ್ನು ಅಳವಡಿಸಿದ್ದು ತಕ್ಷಣವೇ ಅಂದರೆ ಕನ್ನಡ ರಾಜ್ಯೋತ್ಸವಕ್ಕೆ ಮುಂಚಿತವಾಗಿ ಎಲ್ಲಾ ಅಂಗಡಿಗಳ ಮುಂಭಾಗದಲ್ಲಿ ಕನ್ನಡ ನಾಮಫಲಕವನ್ನು ಖಡ್ಡಾಯಗೊಳಿಸುವಂತೆ ಪುರಸಭೆ ಮುಖ್ಯಾಧಿಕಾರಿ ಹೆಚ್ ಮಂಜುನಾಥ ಇವರಿಗೆ ಮನವಿ ನೀಡಲಾಯಿತು.

    ಕನ್ನಡಾಭಿಮಾನಿಗಳ ಮನವಿಗೆ ಸ್ಪಂದಿಸಿದ ಮುಖ್ಯಾಧಿಕಾರಿ ಸೋಮವಾರದಿಂದ ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಕನ್ನಡ ಅಭಿಮಾನಿಗಳ ಸಂಘದ ದಿನೇಶ ಪುತ್ರನ್ ವಿಠಲವಾಡಿ, ನಿತಿನ್ ವಿಠಲವಾಡಿ, ಹರ್ಷೀತ್ ವಿಠಲವಾಡಿ,ಪುರಸಭೆ ಸದಸ್ಯ ಗಿರೀಶ್ ಜಿ.ಕೆ,ಹಾಗೂ ಕನ್ನಡ ಅಭಿಮಾನಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

  • ಖ್ಯಾತ ಚಿತ್ರ ನಟಿ ಮಾಲಾಶ್ರೀ ಆನೆಗುಡ್ಡೆ ದೇವಳಕ್ಕೆ ಭೇಟಿ

    ಖ್ಯಾತ ಚಿತ್ರ ನಟಿ ಮಾಲಾಶ್ರೀ ಆನೆಗುಡ್ಡೆ ದೇವಳಕ್ಕೆ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಆ.9 ರಂದು ಖ್ಯಾತ ಚಿತ್ರ ನಟಿ ಮಾಲಾಶ್ರೀ ಹಾಗೂ ಪುತ್ರಿ ಶ್ರೀ ದೇವರ ದರ್ಶನ ಪಡೆದರು.

    ಶ್ರೀ ದೇವಸ್ಥಾನದ ವತಿಯಿಂದ ಅವರನ್ನು ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಅರ್ಚಕ ಹಾಗೂ ಮಾಜಿ ಮೊಕ್ತೇಸರರಾದ ಕೆ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ಶ್ರೀಶ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.