Category: ಸುದ್ದಿ

  • ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ಮಕ್ಕಳ ಕಳ್ಳರ ವದಂತಿ: ಪೊಲೀಸ್ ಇಲಾಖೆ ಸ್ಪಷ್ಟನೆ

    ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ಮಕ್ಕಳ ಕಳ್ಳರ ವದಂತಿ: ಪೊಲೀಸ್ ಇಲಾಖೆ ಸ್ಪಷ್ಟನೆ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ: ಇತ್ತೀಚೆಗೆ ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೋಟೇಶ್ವರ, ಕಾಳಾವರ ಪರಿಸರದಲ್ಲಿ ಮಕ್ಕಳನ್ನು ಅಪಹರಿಸಿಕೊಂಡು ಹೋಗುವ ಪ್ರಯತ್ನ ನಡೆದಿದೆ ಎಂಬ ವದಂತಿ ಹಾಗೂ ಫೋಟೋ ವೀಡಿಯೋಗಳು ಹರಿದಾಡುತ್ತಿದ್ದು. ಇದು ಸತ್ಯಕ್ಕೆ ದೂರವಾಗಿದೆ ಎಂದು ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು ತಿಳಿಸಿದ್ದಾರೆ.

    ಕಾರಿನಲ್ಲಿ ಮಕ್ಕಳ ಅಪಹರಣಕ್ಕೆ ಯತ್ನಿಸಲಾಗಿದೆ ಎಂಬ ವದಂತಿ ಹಬ್ಬುತ್ತಿದ್ದಂತೆಯೇ ತಕ್ಷಣ ಕಾರ್ಯಪ್ರವೃತ್ತರಾದ ಕುಂದಾಪುರ ನಗರ ಠಾಣಾ ಪೊಲೀಸರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವಾಹನವನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮವನ್ನು ತೆಗೆದುಕೊಂಡಿದ್ದಾರೆ. ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡದೆ ಏನೇ ಮಾಹಿತಿ ಇದ್ದಲ್ಲಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು. ಅಥವಾ ತುರ್ತು ಕರೆ ಸಂಖ್ಯೆ 112 ಗೆ ಕರೆ ಮಾಡಬೇಕಾಗಿ ಡಿವೈಎಸ್ಪಿ ಮನವಿ ಮಾಡಿದ್ದಾರೆ.

    ಮತ್ತೊಂದು ಪ್ರಕರಣದಲ್ಲಿ ಇತ್ತೀಚೆಗೆ ಕುಂದಾಪುರ ಬರೇಕಟ್ಟು ರಸ್ತೆಯಲ್ಲಿ ಮಕ್ಕಳಿಗೆ ಆಟಿಕೆ ಆಸೆ ತೋರಿಸಿ ಮಕ್ಕಳನ್ನು ಕರೆಯುವ ವಿಡಿಯೋ ತುಣುಕು ಹರಿದಾಡುತ್ತಿದ್ದು ಈ ವಿಚಾರವು ಸುಳ್ಳು ಸುದ್ದಿಯಾಗಿದ್ದು. ವಿಷಯ ತಿಳಿದ ತಕ್ಷಣವೇ ಕಾರ್ಯ ಪ್ರವೃತ್ತರಾದ ಕುಂದಾಪುರ ಪೊಲೀಸ್ ಸಿಬ್ಬಂದಿ ಆತನನ್ನು ಕರೆಸಿ ವಿಚಾರಣೆ ನಡೆಸಿದ್ದು ಅದರಲ್ಲಿ ಕೂಡ ಆತನಲ್ಲಿ ಯಾವುದೇ ದುರುದ್ದೇಶ ಕಂಡು ಬಂದಿಲ್ಲ. ಯಾವುದೇ ವದಂತಿ ನಂಬದೆ ಮಾಹಿತಿಗಳಿದ್ದಲ್ಲಿ ಕುಂದಾಪುರ ಠಾಣೆಯ 08254-230338 ಸಂಖ್ಯೆ ಸಂಪರ್ಕಿಸಲು ಕುಂದಾಪುರ ನಗರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ನಂದಕುಮಾರ್ ತಿಳಿಸಿದ್ದಾರೆ.

  • ಸಚಿವ ಎಸ್ ಎಸ್ ಮಲಿಕಾರ್ಜುನ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

    ಸಚಿವ ಎಸ್ ಎಸ್ ಮಲಿಕಾರ್ಜುನ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಇಲ್ಲಿನ ಸಾಸ್ತಾನ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯದ ಗಣಿ ಹಾಗೂ ತೋಟಗಾರಿಕಾ ಸಚಿವ ಎಸ್ ಎಸ್ ಮಲಿಕಾರ್ಜುನ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

    ಈ ಸಂದರ್ಭದಲ್ಲಿ ದೇವಸ್ಥಾನ ಧರ್ಮದರ್ಶಿ ಜ್ಯೋತಿಷ್ಯಿ ಸುಬ್ರಹ್ಮಣ್ಯ ಮಧ್ಯಾಸ್ಥ ಶಾಲು ಹೋದಿಸಿ ಗೌರವಿಸಿದರು.ಉದ್ಯಮಿ ಸುಧಾಕರ ಶೆಟ್ಟಿ ಹೇರಾಡಿ,ಸುರೇಶ್ ಶೆಟ್ಟಿ ,ದಾವಣಗೆರೆ ಮಹಾನಗರಪಾಲಿಕೆ ಮಾಜಿ ಸದಸ್ಯರುಗಳು, ಮತ್ತಿತರರು ಉಪಸ್ಥಿತರಿದ್ದರು.

     

  • ಕುಂದಾಪುರ :ಪತ್ರಕರ್ತರ ಮೇಲೆ ಜನರಿಟ್ಟ  ನಂಬಿಕೆ ಉಳಿಸುವ ಕೆಲಸ ಮಾಡಬೇಕಿದೆ – ಸಹಾಯಕ ಆಯುಕ್ತೆ ಎಸ್.ಆರ್.ರಶ್ಮಿ

    ಕುಂದಾಪುರ :ಪತ್ರಕರ್ತರ ಮೇಲೆ ಜನರಿಟ್ಟ ನಂಬಿಕೆ ಉಳಿಸುವ ಕೆಲಸ ಮಾಡಬೇಕಿದೆ – ಸಹಾಯಕ ಆಯುಕ್ತೆ ಎಸ್.ಆರ್.ರಶ್ಮಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಪತ್ರಿಕೋದ್ಯಮ ಬಹಳ ಪವಿತ್ರವಾದ ಕ್ಷೇತ್ರವಾಗಿದ್ದು ಪತ್ರಿಕಾ ಮಾದ್ಯಮ ಕ್ಷೇತ್ರದ ಬಗ್ಗೆ ಜನರಲ್ಲಿ ನಂಬಿಕೆ ಇದೆ. ಆ ನಂಬಿಕೆಯ ಆಧಾರದಿಂದಲೇ ಪತ್ರಿಕೊದ್ಯಮ ಕ್ಷೇತ್ರ ಇಷ್ಟೊಂದು ಬೆಳೆದಿರುವುದು. ಜನರ ನಂಬಿಕೆ, ವಿಶ್ವಾಸವನ್ನು ಉಳಿಸಿಕೊಂಡು ಮುನ್ನೆಡೆಯುವ ಮಹತ್ವದ ಜವಬ್ದಾರಿ ಪತ್ರಕರ್ತರ ಮೇಲಿದೆ ಎಂದು ಕುಂದಾಪುರದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಹೇಳಿದರು.

    ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಭಂಡಾರ್ಕಾರ್ಸ್ ಆಟ್ರ್ಸ್ ಮತ್ತು ಸಾಯನ್ಸ್ ಕಾಲೇಜು ಪತ್ರಿಕೋದ್ಯಮ ವಿಭಾಗ ಕುಂದಾಪುರ, ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಇವರ ಸಹಯೋಗದೊಂದಿಗೆ ಕೋಯಾಕುಟ್ಟಿ ಹಾಲ್‍ನಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಗ್ರಾಮೋಫೋನ್ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

    ಸರಕಾರಿ ಕಾರ್ಯಕ್ರಮಗಳ ಮಾಹಿತಿ ಜನರಿಗೆ ಅಷ್ಟೇ ಪರಿಣಾಮಕಾರಿಯಾಗಿ ತಲುಪಿದಾಗ ಆ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗುತ್ತದೆ. ಇವತ್ತು ನಮ್ಮನ್ನು ನಮ್ಮನವರೆ ನಂಬುವುದಕ್ಕಿಂತ ಮಾಧ್ಯಮಗಳನ್ನು ನಂಬುತ್ತಾರೆ. ಕರಾವಳಿ ಜಿಲ್ಲೆಯ ಪತ್ರಿಕೋದ್ಯಮ ಉತ್ತಮ ತಳಹದಿಯ ಮೇಲೆ ಸಾಗುತ್ತಿದೆ. ಈ ಭಾಗದ ಪತ್ರಕರ್ತರು ಸುದ್ಧಿಯ ಬಗ್ಗೆ ಅಧ್ಯಯನ ಮಾಡಿ ಬಳಿಕವೇ ಪ್ರಕಟಿಸುತ್ತಾರೆ. ಇವತ್ತು ಸಾಕಷ್ಟು ಟಿವಿ ವಾಹಿನಿಗಳು, ಪತ್ರಿಕೆಗಳು ಬೆಳೆದು ಬಂದಿವೆ. ಪತ್ರಿಕೊದ್ಯಮ ಕ್ಷೇತ್ರ ಇಷ್ಟೊಂದು ವೇಗವಾಗಿ ಬೆಳೆಯಲು ಜನರು ಈ ಕ್ಷೇತ್ರದ ಮೇಲೆ ಇಟ್ಟಿರುವ ನಂಬಿಕೆಯೇ ಕಾರಣ. ಯಾವುದೇ ಪೇಯ್ಡ್ ನ್ಯೂಸ್‍ಗಳಿಗೆ ಒಳಗಾಗದೇ ಮಾದ್ಯಮ ಕ್ಷೇತ್ರ ಜನರ ನಂಬಿಕೆಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

    ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಾಮಾಜಿಕ ಜಾಲಾತಾಣವನ್ನು ಉದ್ಘಾಟಿಸಿದ ಕುಂದಾಪುರದ ಡಿವೈಎಸ್‍ಪಿ ಬೆಳ್ಳಿಯಪ್ಪ ಕೆ.ಯು ಮಾತನಾಡಿ, ಪತ್ರಿಕಾ ಧರ್ಮವನ್ನು ಉಳಿಸಿಕೊಂಡು ಹೋಗುವ ಕೆಲಸ ಇವತ್ತು ಪತ್ರಕರ್ತರು ಮಾಡುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಫುಲವಾದ ಅವಕಾಶಗಳಿವೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ನಿರಂತರ ಓದುವ ಹವ್ಯಾಸ ಬೆಳೆಸಿಕೊಂಡಾಗ ಪತ್ರಿಕಾರಂಗದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.

    ಹಿರಿಯ ಪತ್ರಕರ್ತರಾದ ಯು.ಕೆ.ಕುಮಾರನಾಥ್ ಹಾಗೂ ಎಸ್.ಜನಾರ್ದನ್ ಮರವಂತೆ ವಿಶೇಷ ಉಪನ್ಯಾಸ ನೀಡಿದರು.
    ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಿದ್ದರು. ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ ನಾರಾಯಣ ಶೆಟ್ಟಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಂ.ಗೊಂಡ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷ ರಾಜೇಶ ಶೆಟ್ಟಿ ಅಲೆಯೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿನಯ ಪಾಯಸ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತೋತ್ಸವ ಸಮಿತಿಯ ಜಯಕರ ಸುವರ್ಣ, ಭಂಡಾರ್ಕಾರ್ಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸುಮಲತಾ ಉಪಸ್ಥಿತರಿದ್ದರು.

    ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಶಶಿಧರ ಹೆಮ್ಮಾಡಿ ಸ್ವಾಗತಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸುಮಲತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಪ್ರಶಾಂತ್ ಪಾದೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪಟ್ಟಿ ವಾಚಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಪ್ರಾಯೋಜರನ್ನು ಗೌರವಿಸಲಾಯಿತು. ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್.ಬೀಜಾಡಿ ವಂದಿಸಿದರು. ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಕಾರ್ಯಕ್ರಮ ನಿರ್ವಹಿಸಿದರು.

  • ಕುಂದಾಪುರ:ತೆಂಗು ಬೆಳೆಗಾರರ ನೆರವಿಗೆ ಧಾವಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಮನವಿ

    ಕುಂದಾಪುರ:ತೆಂಗು ಬೆಳೆಗಾರರ ನೆರವಿಗೆ ಧಾವಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಮನವಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ರಾಜ್ಯದಲ್ಲಿ ಒಟ್ಟು 6.46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆ ಬೆಳೆಯಲಾಗುತ್ತಿದ್ದು ವಾರ್ಷಿಕ ಕೊಬ್ಬರಿ ಉತ್ಪಾದನೆ 2.18 ಲಕ್ಷ ಮೆಟ್ರಿಕ್ ಟನ್ ನಷ್ಟಿದೆ. ಇಂತಹ ಪ್ರಮುಖ ತೋಟಗಾರಿಕಾ ಬೆಳೆಯಾದ ಕೊಬ್ಬರಿ ಬೆಲೆ ಹಿಂದೆಂದೂ ಕೇಳರಿಯದ ಪ್ರಮಾಣದಲ್ಲಿ ಕ್ವಿಂಟಾಲ್ ಗೆ 6-7 ಸಾವಿರಕ್ಕೆ ಇಳಿದಿರುವುದು ಕೇಂದ್ರ ಸರ್ಕಾರದ ತಪ್ಪು ನೀತಿಗಳಿಂದ ಬೆಳೆಗಾರರವಲ್ಲಿ ಆತಂಕ ಮೂಡಿಸಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆಪಾದಿಸಿದೆ.

    ಇಂದು ರಾಜ್ಯದಾದ್ಯಂತ ತೆಂಗು ಬೆಳೆಗಾರರು ಪ್ರತಿಭಟನೆ ನಡೆಸುವ ಅಂಗವಾಗಿ ಕುಂದಾಪುರದಲ್ಲಿ ರೈತ ಸಂಘದ ನಿಯೋಗ ಕುಂದಾಪುರ ತಹಸೀಲ್ದಾರ್ ಶೋಭಾ ಲಕ್ಷ್ಮೀ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದರು.

    ಕೇಂದ್ರ ಸರ್ಕಾರದ ತಪ್ಪು ಆಮದು ನೀತಿಯಿಂದ ಹೊರ ದೇಶಗಳಿಂದ ತೆಂಗು ತೆಂಗಿನ ಉತ್ಪನ್ನಗಳು ಮತ್ತು ಪಾಮಾಯಿಲ್ ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.ಇದರಿಂದ ತೆಂಗು ಬೆಳೆಯುವ ರೈತರಿಗೆ ಮಾರುಕಟ್ಟೆ ಸಿಗುತ್ತಿಲ್ಲ.ರಾಜ್ಯ ಸರ್ಕಾರ ರಾಜ್ಯದ ರೈತರುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.

    ರಾಜ್ಯ ತೋಟಗಾರಿಕ ಇಲಾಖೆಯು ಕೇಂದ್ರ ಸರ್ಕಾರದ ಕ್ರಷಿ ವೆಚ್ಚ ಮತ್ತು ದರ ಆಯೋಗ (CACP)ಕ್ಕೆ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 16,730/- ರೂಪಾಯಿಗಳನ್ನು ನೀಡಬೇಕು ಎಂದು ಉತ್ಪಾದನಾ ವೆಚ್ಚದ ಆಧಾರದಲ್ಲಿ ಶಿಫಾರಸ್ಸು ಮಾಡಿದೆ ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಹಾಗೂ ಇದುವರೆಗೂ ನೆಪೆಡ್ ಮೂಲಕ ಎಪಿಎಂಸಿ ಮಾರುಕಟ್ಟೆಯಲ್ಲಿ ಕೊಬ್ಬರಿ ಖರೀದಿಸುತ್ತಿರುವುದನ್ನು ಮುಂದುವರಿಸಬೇಕು ಮತ್ತು ಖರೀದಿ ಕೇಂದ್ರಗಳನ್ನು ಹೆಚ್ಚಿಸಬೇಕು ಇಡೀ ವರ್ಷ ಈ ಮಾರುಕಟ್ಟೆ ವ್ಯವಸ್ಥೆ ಇರಬೇಕು ಅಲ್ಲದೆ ಕ್ರಷಿ ತಜ್ಞ ಡಾ.ಎಂ.ಎಸ್ ಸ್ವಾಮಿನಾಥನ್ ಶಿಫಾರಸ್ಸು ಜಾರಿ ಮಾಡಬೇಕು. ಎಂದು ನಿಯೋಗ ತಿಳಿಸಿದೆ.

    ನಿಯೋಗದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಚಂದ್ರಶೇಖರ ವಿ,ಕೆ.ಶಂಕರ್,ಮಹಾಬಲ ವಡೇರಹೋಬಳಿ, ಎಚ್ ನರಸಿಂಹ, ಸುರೇಶ್ ಕಲ್ಲಾಗರ, ಚಿಕ್ಕ ಮೊಗವೀರ, ಸಂತೋಷ ಹೆಮ್ಮಾಡಿ ಇದ್ದರು.

  • ಕೋಟ :ಮಣೂರು ನೇಹಾ ಹೊಳ್ಳಗೆ ಸಿ ಸಿ ಆರ್ ಟಿ ಸ್ಕಾಲರ್ಶಿಪ್

    ಕೋಟ :ಮಣೂರು ನೇಹಾ ಹೊಳ್ಳಗೆ ಸಿ ಸಿ ಆರ್ ಟಿ ಸ್ಕಾಲರ್ಶಿಪ್

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದ, ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ (ಸಿ ಸಿ ಆರ್ ಟಿ) ನಡೆಸಿದ , 2020-2021,ಭಾರತದ ಯುವ ಪ್ರತಿಭಾ ಶೋಧದಲ್ಲಿ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಯುವ ಪ್ರತಿಭೆ, ವಿದ್ಯಾರ್ಥಿವೇತನ ಪ್ರಶಸ್ತಿಗೆ, ಉಡುಪಿ ಜಿಲ್ಲೆಯಿಂದ ಏಕೈಕ ಅಭ್ಯರ್ಥಿಯಾಗಿ ಮಣೂರು ಗ್ರಾಮದ ನೇಹಾ ಹೊಳ್ಳ ಆಯ್ಕೆಯಾಗಿದ್ದಾರೆ. ಇವರು ಮಣೂರು ಡಾ.ಎಂ.ವಿ ಹೊಳ್ಳ , ಶಾರದಾ ಹೊಳ್ಳ ಇವರ ಪುತ್ರಿ. ಇವರು ಕಳೆದ 9 ವರ್ಷಗಳಿಂದ ವಿದ್ವಾನ್ ಸತೀಶ್ ಭಟ್ ಮಾಳಕೊಪ್ಪ ಇವರ ಬಳಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸಗೈಯುತ್ತಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ 2023 ಮಾರ್ಚ್‍ನಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ವಿಭಾಗದ ಸೀನಿಯರ್ ಪರೀಕ್ಷೆಯನ್ನು ಉನ್ನತ ಶ್ರೇಣಿಯಲ್ಲಿ ಮುಗಿಸಿದ್ದಾರೆ.

  • ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

    ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಥಮ ಪೋಷಕ – ಶಿಕ್ಷಕರ ಸಭೆ ನಡೆಯಿತು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸುನಿಲ್ ರವರು ಸ್ಪರ್ಧಾತ್ಮಕ ಪರೀಕ್ಷೆಗಳ ನೋಂದಾವಣೆಗೆ ವಿದ್ಯಾರ್ಥಿ ದಾಖಲೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

    ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ್ ಪೂಜಾರಿಯವರು ಸ್ವಾಗತಿಸಿ, ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

  • ಕುಂದಾಪ್ರ ಭಾಷೆಯ ದಾಖಲೀಕರಣಕ್ಕೆ ಹೆಚ್ಚಿನ ಮಹತ್ವ ಅಗತ್ಯ- ಪೂರ್ಣಿಮಾ

    ಕುಂದಾಪ್ರ ಭಾಷೆಯ ದಾಖಲೀಕರಣಕ್ಕೆ ಹೆಚ್ಚಿನ ಮಹತ್ವ ಅಗತ್ಯ- ಪೂರ್ಣಿಮಾ

    ಕುಂದಾಪುರ ಮಿರರ್ ‌ಸುದ್ದಿ…

    ಕೋಟ : ಭಾಷೆಗಳ ಬೆಳವಣಿಗೆಗೆ ದಾಖಲೀಕರಣ ಅತೀ ಅಗತ್ಯ, ಕುಂದಾಪ್ರ ಭಾಷೆ ಇನ್ನಷ್ಟೂ ಸಮೃದ್ಧವಾಗಿ ಬೆಳೆಯಲು ಹಾಗೂ ಅಧ್ಯಯನ ದೃಷ್ಠಿಯಿಂದ ಅಕ್ಷರ ರೂಪಕ್ಕೆ ತರುವ ಪ್ರಯತ್ನ ಇನ್ನಷ್ಟೂ ಆಗಬೇಕಾಗಿದೆ, ಕುಂದಾಪ್ರ ಭಾಷೆಯ ಸಾಹಿತ್ಯ ಸಮ್ಮೇಳನದಂತಹ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿ ಎಂದು ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಹೇಳಿದರು.

    ಅವರು ಕೋಟದ ಡಾ.| ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ಜೆಸಿಐ ಕಲ್ಯಾಣಪುರದ ಆಶ್ರಯದಲ್ಲಿ ನಡೆದ ವಿಶ್ವ ಕುಂದಾಪ್ರ ದಿನಾಚರಣೆ ಅಂಗವಾಗಿ ಕುಂದಾಪ್ರ ಕನ್ನಡ ಉತ್ಸವ ಹೊಸ ಹೂಂಗು ಕೋಲೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಕನ್ನಡ ಸಾಹಿತ್ಯ ಪರಿಷತ್ತಿನ ಬ್ರಹ್ಮಾವರ ತಾಲ್ಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ಮಾತನಾಡಿ ಕುಂದಾಪ್ರ ಭಾಷೆಯ ಬಗ್ಗೆ ಕೀಳರಿಮೆ ಬೆಳೆಸಿಕೊಳ್ಳದೇ ಹೆಚ್ಚಾಗಿ ಬಳಸಬೇಕು ಎಂದರು.
    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ ಆಚಾರ್ಯ, ಜೆಸಿಐ ಕಲ್ಯಾಣಪುರ ಜ್ಯೂನಿಯರ್ ಜೆಸಿಐ ಅಧ್ಯಕ್ಷ ನಿರಂತರ, ಸಾಂಸ್ಕøತಿಕ ಚಿಂತಕರಾದ ಸುಮನ ಹೇರ್ಳೆ, ರವೀಂದ್ರ ಶೆಟ್ಟಿ ತಂತ್ರಾಡಿ, ಚೇಂಪಿ ದಿನೇಶ್ ಆಚಾರ್ಯ ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಸ್ತಾಪಿಸಿ, ಶಿಕ್ಷಕ ಸತೀಶ್ ವಡ್ಡರ್ಸೆ ನಿರೂಪಿಸಿದರು.

  • ಕೋಟ :ಜು.25ಕ್ಕೆ ಪಂಚವರ್ಣ ರಜತ ಗೌರವ ಪ್ರದಾನ ಸಮಾರಂಭ – ವೆರಿಕೋಸ್ ತಜ್ಞ ಡಾ.ಎಂ.ವಿ ಉರಾಳ ಆಯ್ಕೆ

    ಕೋಟ :ಜು.25ಕ್ಕೆ ಪಂಚವರ್ಣ ರಜತ ಗೌರವ ಪ್ರದಾನ ಸಮಾರಂಭ – ವೆರಿಕೋಸ್ ತಜ್ಞ ಡಾ.ಎಂ.ವಿ ಉರಾಳ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ಬೆಳ್ಳಿ ಹಬ್ಬದ ವರ್ಷಾಚರಣೆಯ ಅಂಗವಾಗಿ ಸಾಧಕರಿಗೆ ರಜತ ಗೌರವಾರ್ಪಣೆ ನೀಡುತ್ತಿದ್ದು ಈ ಹಿನ್ನಲ್ಲೆಯಲ್ಲಿ ಈ ತಿಂಗಳು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆದ ಕರಾವಳಿಯ ಆರೋಗ್ಯದಾತ ಬಿರುದಾಂಕಿತ ವೆರಿಕೋಸ್ ತಜ್ಞ ಡಾ.ಎಂ.ವಿ ಉರಾಳ ಇವರನ್ನು ಆಯ್ಕೆಗೊಳಿಸಲಾಗಿದೆ.

    ಪಂಚವರ್ಣ ಸಂಸ್ಥೆ ನೀಡುತ್ತಿರುವ ಏಳನೆ ಸಾಧಕ ಶಕ್ತಿಯಾಗಿದ್ದು ವೆರಿಕೋಸ್ ರೋಗದ ಬಗ್ಗೆ ಸಾಕಷ್ಟು ಅಧ್ಯಯನ ನಡೆಸಿ ರಾಜ್ಯಾದ್ಯಂತ ಡಾ.ಉರಾಳಸ್ ಕ್ಲಿನಿಕ್ ಸೃಷ್ಠಿಸಿ ಅದೆಷ್ಟೂ ಅನಾರೋಗ್ಯ ಪೀಡಿತರಿಗೆ ನೆರವು ನೀಡಿದ್ದಾರೆ. ಇವರ ಈ ಸೇವೆಗೆ ಪಂಚವರ್ಣ ಸಂಸ್ಥೆ ರಜತ ಗೌರವ ನೀಡಿ ಗೌರವಿಸಲಿದೆ.

    ಈ ಹಿಂದೆ ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಸಹಕಾರಿ ಕ್ಷೇತ್ರದ ಸಾಧಕ ಜಿ.ತಿಮ್ಮ ಪೂಜಾರಿ, ಸಮಾಜಸೇವಕ ಈಶ್ವರ್ ಮಲ್ಪೆ, ಅನಾಥರ ಬದುಕಿನ ಆಶಾಕಿರಣ ಹೊಸಬೆಳಕು ವಿನಯಚಂದ್ರ ಸಾಸ್ತಾನ, ವಿಶೇಷಚೇತನ ಸಾಧಕಿ ಲಲಿತಾ ಪೂಜಾರಿ, ಸಾಲಿಗ್ರಾಮದ ಹಿರಿಯ ವೈದ್ಯರಾದ ಡಾ.ವಿಶ್ವೇಶ್ವರ ತುಂಗ, ಸಹಕಾರಿ ಕ್ಷೇತ್ರದ ಕೊರಗ ಪೂಜಾರಿ ,ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಪಾರಂಪಳ್ಳಿ ಗಣೇಶ್ ಅಡಿಗ,ಇವರುಗಳನ್ನು ಗುರುತಿಸಿದ್ದು ಇಲ್ಲಿ ಸ್ಮರಿಸಬಹುದಾಗಿದೆ. ಇದೇ ಜು.25ರಂದು ಮಣೂರು ಅವರ ಸ್ವಗೃಹದಲ್ಲಿ ಈ ಗೌರವ ಕಾರ್ಯಕ್ರಮ ನಡೆಯಲಿದೆ ಎಂದು ಪಂಚವರ್ಣ ಸಂಸ್ಥೆಯ ಅಧ್ಯಕ್ಷ ಅಜಿತ್ ಆಚಾರ್ಯ ತಿಳಿಸಿದ್ದಾರೆ.

  • ಕುಂದಾಪುರ :ಹಿರಿಯ ಛಾಯಾಗ್ರಾಹಕ ಭಾರತ್ ಸ್ಟುಡಿಯೋ ಮಾಲಕ ರಾಬರ್ಟ್ ಡಿಸೋಜ ನಿಧನ

    ಕುಂದಾಪುರ :ಹಿರಿಯ ಛಾಯಾಗ್ರಾಹಕ ಭಾರತ್ ಸ್ಟುಡಿಯೋ ಮಾಲಕ ರಾಬರ್ಟ್ ಡಿಸೋಜ ನಿಧನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಕುಂದಾಪುರ ತಾಲೂಕು ಛಾಯಾಗ್ರಾಹಕರ ಸಂಘದ ಸ್ಥಾಪಕಾಧ್ಯಕ್ಷ, ಹಿರಿಯ ಛಾಯಾಗ್ರಾಹಕ, ಭಾರತ್ ಸ್ಟುಡಿಯೋ ಮಾಲಕ, ಹಾಲಿ ಗೌರವಾಧ್ಯಕ್ಷ ರಾಬರ್ಟ್ ಡಿಸೋಜಾ (77) ಇಂದು ಬೆಳಿಗ್ಗೆ ನಿಧನರಾದರು.

    ಕುಂದಾಪುರದ ಅತ್ಯಂತ ಹಿರಿಯ ಛಾಯಾಗ್ರಾಹಕರಲ್ಲಿ ಒಬ್ಬರಾದ ರಾಬರ್ಟ್, ಸಾಗರದ ಬಸಂತ್ ಸ್ಟುಡಿಯೋದಲ್ಲಿ ಆರಂಭಿಕ ವೃತ್ತಿ ಆರಂಭಿಸಿ ಬಳಿಕ ಕುಂದಾಪುರದ ಮಾಸ್ತಿಕಟ್ಟೆ ರಸ್ತೆಯಲ್ಲಿ ಭಾರತ್ ಸ್ಟುಡಿಯೋ ಆರಂಭಿಸಿದ್ದರು.

    ಸುಮಾರು ಆರು ದಶಕಗಳ ಕಾಲ ಛಾಯಾಚಿತ್ರಗ್ರಾಹಕರಾಗಿದ್ದ ರಾಬರ್ಟ್ ತನ್ನ ಕೊನೆಗಾಲದ ವರೆಗೂ ಫೋಟೊಗ್ರಾಫರ್ ಆಗಿಯೇ ಇದ್ದವರು. ಕುಂದಾಪುರ ತಾಲೂಕು ಫೋಟೊಗ್ರಾಫರ್ಸ್ ಅಸೋಸಿಯೇಷನ್ ಸಂಸ್ಥೆಯನ್ನು ಆರಂಭಿಸಿ ಸ್ಥಾಪಕಾಧ್ಯಕ್ಷರಾದವರು. ಈಗಲೂ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದರು.

    ರಾಬರ್ಟ್ ಡಿಸೋಜಾ ಅವರು ಪತ್ನಿ ಢೆಲ್ಫಿನ್, ಮೂವರು ಮಕ್ಕಳು, ಮೂವರು ಮೊಮ್ಮಕ್ಕಳನ್ನು ಅಗಲಿದ್ದಾರೆ. ಓರ್ವ ಪುತ್ರ ಫಾದರ್ ಆಗಿದ್ದಾರೆ. ನಾಳೆ ಮಧ್ಯಾಹ್ನ ಮೂರು ಗಂಟೆಗೆ ಕುಂದಾಪುರದ ಹೋಲಿರೋಜರಿ ಚರ್ಚಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

  • ಗುಡ್ಡಟ್ಟು: ಶ್ರೀ ವಿನಾಯಕ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಗಣೇಶ್ ಜಿ. ಆಯ್ಕೆ

    ಗುಡ್ಡಟ್ಟು: ಶ್ರೀ ವಿನಾಯಕ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಗಣೇಶ್ ಜಿ. ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ:ಶ್ರೀ ವಿನಾಯಕ ಯುವಕ ಮಂಡಲ (ರಿ) ಗುಡ್ಡಟ್ಟು ಇದರ 2023-25ರ ಸಾಲಿನ ಅಧ್ಯಕ್ಷರಾಗಿ ಗಣೇಶ್ ಜಿ. ಆಯ್ಕೆಯಾಗಿದ್ದಾರೆ.

    ಸಮಿತಿಯ ಉಪಾಧ್ಯಕ್ಷರಾಗಿ ಹರೀಶ್ ಗುಡ್ಡೆಟ್ಟು, ಗಣೇಶ್ ವೈ. ಯಡಾಡಿ, ಕಾರ್ಯದರ್ಶಿಯಾಗಿ ರವಿ ಮೊಗವೀರ, ಜೊತೆ ಕಾರ್ಯದರ್ಶಿಯಾಗಿ ಶರತ್ ದೇವಾಡಿಗ, ಖಜಾಂಚಿ ಶರತ್ ಕುಲಾಲ್, ಜೊತೆ ಖಜಾಂಚಿ ಗಣೇಶ್ ಯಡಾಡಿ, ಗೌರವಾಧ್ಯಕ್ಷರಾಗಿ ಗ್ರಾಮ ಪಂಚಾಯತ್ ಸದಸ್ಯ ಉದಯ ಯಡಾಡಿ ಸರ್ವಾನುಮತದಿಂದ ಆಯ್ಕೆಯಾದರು.