Category: ಸುದ್ದಿ

  • ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ

    ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕಳೆದ ಮೂರು ದಿನಗಳಿಂದ ಕರಾವಳಿಯಲ್ಲಿ ಬಿಡದೆ ವರ್ಷಧಾರೆ ಸುರಿಯುತ್ತಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬುಧವಾರದಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು ತಗ್ಗು ಪ್ರದೇಶಗಳು ನೀರಿನಿಂದ ಆವೃತ್ತವಾಗುತ್ತಿದೆ. ಕೆಲವೆಡೆ ನೆರೆ ಸಹ ಕಾಣಿಸಿಕೊಂಡಿದೆ.

    ಜೂನ್ ತಿಂಗಳಲ್ಲಿ ಆಗಬೇಕಾದ ವಾಡಿಕೆಯ ಮಳೆ ಆಗದೆ ರೈತರು ಕಂಗೆಟ್ಟಿದ್ದರು. ಜನಸಾಮಾನ್ಯರು ಕೂಡಾ ಜೂನ್‍ನಲ್ಲಿ ನಿರೀಕ್ಷಿತ ಮಳೆಯಾಗದೆ ಕುಡಿಯುವ ನೀರಿಗೂ ಸಮಸ್ಯೆ ಅನುಭವಿಸುತ್ತಿದ್ದರು. ಕೊನೆಗೂ ವಿಳಂಬವಾಗಿ ಆರಂಭವಾದ ಮಳೆ ಈಗ ಆರ್ಭಟಿಸುತ್ತಿದೆ.

    ಬಿಡದೆ ಸುರಿಯುತ್ತಿರುವ ಮಳೆ ಕೆಲವಡೆ ಅವಾಂತರ ಸೃಷ್ಟಿಸಿದೆ. ಪೇಟೆ ಪಟ್ಟಣಗಳಲ್ಲಿ ಮರಗಳು ರಸ್ತೆಗೆ ಉರುಳುತ್ತಿವೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಕೃತಕ ನೆರೆ ಸೃಷ್ಟಿಯಾಗಿದೆ. ತೆಕ್ಕಟ್ಟೆ, ಉಳ್ತೂರು ಭಾಗದಲ್ಲಿಯೂ ನೆರೆ ಕಾಣಿಸಿಕೊಂಡಿದೆ. ಕೋಣಿ ಭಾಗದಲ್ಲಿಯೂ ಕೂಡಾ ನೆರೆ ಕಾಣಿಸಿಕೊಂಡಿದೆ. ಹಳ್ಳ, ತೊರೆಗಳು ಮೈದುಂಬಿ ಹರಿಯುತ್ತಿದೆ. ಜಿಲ್ಲೆಯ ಎಲ್ಲಾ ನದಿಗಳು ಕೂಡಾ ತುಂಬಿ ಹರಿಯುತ್ತಿವೆ. ನದಿಗಳಿಗೆ ಅಲ್ಲಲ್ಲಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗಿದ್ದು, ತುಂಬಿದ ಹೂಳನ್ನು ಕಾಲಕಾಲಕ್ಕೆ ತಗೆಯದೆ ಇರುವುದರಿಂದ ನೀರಿನ ಮಟ್ಟ ಮೇಲೆ ಬರುವ ಆತಂಕವೂ ಎದುರಾಗಿದೆ.

    ಹಳ್ಳಿಗಳಲ್ಲಿ ಕಾಲುಸಂಕದ ಭೀತಿ ಹೆಚ್ಚಾಗಿದೆ. ಮಂಗಳವಾರ ಸಂಜೆ ಕಮಲಶಿಲೆಯಲ್ಲಿ ಅರ್ಚಕರೊಬ್ಬರು ನೀರುಪಾಲಾಗಿದ್ದು ಬುಧವಾರ ಮೃತದೇಹ ಪತ್ತೆಯಾಗಿತ್ತು. ಮಂಗಳವಾರ ರಾತ್ರಿ ತೆಕ್ಕಟ್ಟೆ ಸಮೀಪ ನೀರು ತುಂಬಿದ್ದರಿಂದ ರಸ್ತೆ ಪಕ್ಕದ ಹೊಂಡದ ಅರವಿಲ್ಲದೆ ಬೈಕ್ ಸವಾರ ಬೈಕ್ ಸಹಿತ ನೀರಿಗೆ ಬಿದ್ದು ಅಸುನೀಗಿದ್ದಾರೆ.

    ಗುರುವಾರ ಸಂಜೆ ತನಕ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ಹಲವೆಡೆ ಮರಗಳು ಧರೆಗೂರುಳಿವೆ. ಸಂಚಾರಕ್ಕೆ ಸಮಸ್ಯೆಯಾಗಿದೆ. ಮಳೆ ಮುಂದುವರಿಯುವ ಎಲ್ಲಾ ಸಾಧ್ಯತೆಗಳು ಇವೆ. ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲೂಕಿನಾದ್ಯಂತ ಮಳೆಯ ಅಬ್ಬರ ಹೆಚ್ಚೇ ಇದೆ. ಇಂದು ರಾತ್ರಿಯೂ ಕೂಡಾ ಮಳೆ ಹೀಗೆ ಮುಂದುವರಿದರೆ ಶುಕ್ರವಾರ ತಗ್ಗು ಪ್ರದೇಶಕ್ಕೆ ನೆರೆ ಆವರಿಸುವ ಸಾಧ್ಯತೆ ಇದೆ.

  • ಉಡುಪಿ‌: ನಾಳೆ(ಜು.6) ಜಿಲ್ಲೆಯಲ್ಲಿ ಶಾಲೆ ಮತ್ತು ಪಿಯು ಕಾಲೇಜಿಗೆ ರಜೆ ಘೋಷಣೆ

    ಉಡುಪಿ‌: ನಾಳೆ(ಜು.6) ಜಿಲ್ಲೆಯಲ್ಲಿ ಶಾಲೆ ಮತ್ತು ಪಿಯು ಕಾಲೇಜಿಗೆ ರಜೆ ಘೋಷಣೆ

    ಕುಂದಾಪುರ ಮಿರರ್ ‌ಸುದ್ದಿ…
    ಉಡುಪಿ: ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.6 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.

    ನಾಳೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಶಾಲೆಗಳಿಂದ ಹಿಡಿದು ಪದವಿ ಪೂರ್ವ ಕಾಲೇಜುಗಳ ತನಕ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.

  • ಕೋಟ :ಅಪಘಾತದಲ್ಲಿ ಸಾವಿಗಿಡಾದ ನಾಗೇಶ್ ಆಚಾರ್ಯ ಕುಟುಂಬದವರಿಗೆ ನೆರವು

    ಕೋಟ :ಅಪಘಾತದಲ್ಲಿ ಸಾವಿಗಿಡಾದ ನಾಗೇಶ್ ಆಚಾರ್ಯ ಕುಟುಂಬದವರಿಗೆ ನೆರವು

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ನಿಧನರಾದ ಕಾವಡಿ ನಿವಾಸಿ ನಾಗೇಶ್ ಆಚಾರ್ಯ ಅವರ ಮನೆಗೆ ಅವರು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕಂಪನಿಯ ಸಿಬ್ಬಂದಿಗಳು ತಮ್ಮ ಸಂಬಳದಲ್ಲಿ ಮೃತ ಕುಟುಂಬದವರಿಗೆ 1,30,000/- ನಗದನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.

    ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳಾದ ಗಣೇಶ್ ಕರ್ಕೇರ, ರಮೇಶ್ ಆಚಾರ್ಯ, ಸುದರ್ಶನ್ ನಾಯ್ಕ್, ಸುರೇಂದ್ರ ಶೆಟ್ಟಿ, ಲೋಹಿತ್ ಹೆಗ್ಡೆ, ಸದಾಶಿವ ಮತ್ತು ಮಹೇಶ್ ಉಪಸ್ಥಿತರಿದ್ದರು.

  • ಗ್ರಾಮೀಣ ಪರಿಸರದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ವಿಷಯದ ತರಬೇತಿ ಅಗತ್ಯ- ವಾದಿರಾಜ್ ಭಟ್

    ಗ್ರಾಮೀಣ ಪರಿಸರದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ವಿಷಯದ ತರಬೇತಿ ಅಗತ್ಯ- ವಾದಿರಾಜ್ ಭಟ್

    ಕುಂದಾಪುರ ಮಿರರ್ ಸುದ್ದಿ…

    ಕೋಟ :ಪ್ರಸ್ತುತ ಸ್ಪರ್ಧಾ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿಯಾಗುವುದು ವಿದ್ಯಾರ್ಥಿಗಳಿಗೆ ಸವಾಲಾಗಿರುತ್ತದೆ. ಹೆಚ್ಚಿನ ಗ್ರಾಮೀಣ ಪರಿಸರದ ವಿದ್ಯಾರ್ಥಿಗಳು ಇದರಿಂದ ವಂಚಿತರಾಗುತ್ತಾರೆ. ಈ ಕೊರೆತೆ ನೀಗಿಸಲು ಗ್ರಾಮೀಣ ಭಾಗದಲ್ಲೂ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುತ್ತಿರುವ ವಿ-ಶೈನ್ ಕೋಚಿಂಗ್ ಸೆಂಟರ್‍ನ ಕಾರ್ಯ ಶ್ಲಾಘನೀಯ ಎಂದು ಮಣಿಪಾಲ ಮಾಹೆ ಪ್ರಾಧ್ಯಪಕ ವಾದಿರಾಜ್ ಭಟ್ ಹೇಳಿದರು.

    ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ ನಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್‍ನ ಪಿ.ಡಿ.ಓ ಹಾಗೂ ಕಾರ್ಯದರ್ಶಿ ಪರೀಕ್ಷೆಯ ತರಬೇತಿಯ ಮೊದಲ ಬ್ಯಾಚ್‍ನ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

    ವಿ ಶೈನ್ ಕೋಚಿಂಗ್ ಸೆಂಟರ್‍ನ ಸಂಚಾಲಕ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ ಗ್ರಾಮೀಣ ಪರಿಸರದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸೂಕ್ತ ತರಬೇತಿಯಿಂದ ವಂಚಿತರಾಗುತ್ತಿರುವುದನ್ನು ಮನಗೊಂಡು ಈ ತರಬೇತಿ ಸಂಸ್ಥೆಯನ್ನು ಆರಂಭಿಸಿದ್ದು, ಶೀಘ್ರದಲ್ಲೇ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಯ ತರಗತಿಯನ್ನು ಆರಂಭಿಸಲಾಗುವುದು ಎಂದರು.

    ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ವಿ-ಶೈನ್ ಕೋಚಿಂಗ್ ಸೆಂಟರ್‍ನ ಗಿರೀಶ್ ಕುಮಾರ್ ಶೆಟ್ಟಿ, ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು.

  • ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ – ಕ್ರೀಡಾ ಸಾಧಕರಿಗೆ ಸನ್ಮಾನ

    ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ – ಕ್ರೀಡಾ ಸಾಧಕರಿಗೆ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ, ಅಂತರ್ ಕಾಲೇಜು ಮತ್ತು ಕಾಲೇಜು ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳಾದ ಸಾಫ್ಟ್ ಬಾಲ್ ನಲ್ಲಿ ತೃತೀಯ ಬಿ.ಕಾಂ. ‘ಎ’ ವಿಭಾಗದ ನಿಸರ್ಗ ಖಾರ್ವಿ, ದ್ವಿತೀಯ ಬಿ.ಕಾಂ. ‘ಸಿ’ ವಿಭಾಗದ ರೋಹನ್ ಪೂಜಾರಿ, ದ್ವಿತೀಯ ಬಿ.ಕಾಂ. ‘ಎ’ ವಿಭಾಗದ ಲೋಕೇಶ್, ಪ್ರಥಮ ಬಿ.ಬಿ.ಎ.ನ ದಿನಕರ್, ಪ್ರಥಮ ಬಿ.ಎಸ್ಸಿ. ಡೇವಿಡ್, ಪ್ರಥಮ ಬಿ.ಕಾಂ. ‘ಸಿ’ ವಿಭಾಗದ ಅಮಿತ್‍ರಾಜ್, ಪ್ರಥಮ ಬಿ.ಬಿ.ಎ. ನ ರಕ್ಷಕ್, ಚೆಸ್‍ನಲ್ಲಿ ತೃತೀಯ ಬಿ.ಎಸ್ಸಿ. ವಿಶಾಲ್, ದ್ವಿತೀಯ ಬಿ.ಸಿ.ಎ.ನ ದಿವ್ಯಾ, ಪ್ರಥಮ ಬಿ.ಬಿ.ಎ. ನ ಕಿರಣ್ ಮೊಗವೀರ, ಚರಣ್ ಶೆಟ್ಟಿ, ಕರಾಟೆಯಲ್ಲಿ ದ್ವಿತೀಯ ಬಿ.ಕಾಂ. ‘ಎ’ ವಿಭಾಗದ ಪ್ರಜ್ವಲ್ ಶೆಟ್ಟಿ, ಸಚಿನ್ ದೇವಾಡಿಗ, ದ್ವಿತೀಯ ಬಿ.ಕಾಂ.ನ ನವ್ಯಾ, ಪವರ್ ಲಿಫ್ಟಿಂಗ್‍ನಲ್ಲಿ ದ್ವಿತೀಯ ಬಿ.ಕಾಂ. ‘ಸಿ’ ವಿಭಾಗದ ವರುಣ್ ಇವರನ್ನು ವಾರ್ಷಿಕ ಕ್ರೀಡಾ ಹಬ್ಬ ಸಮಾರಂಭದಲ್ಲಿ ಪುರಸ್ಕರಿಸಲಾಯಿತು.

    ಈ ಸಂದರ್ಭದಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಕೆ. ಸೀತಾರಾಮ ನಕ್ಕತ್ತಾಯ, ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ವಿಶೇಷ ಅಧಿಕಾರಿ ಡಾ| ರಮೇಶ್ ಹೆಚ್.ಎನ್., ಮೂಡುಬಿದಿರೆ ಆಳ್ವಾಸ್ ಕಾಲೇಜಿನ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲರಾದ ಮಧು ಜಿ. ಆರ್., ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಂಜಿತ್ ಟಿ. ಎನ್. ಉಪಸ್ಥಿತರಿದ್ದರು.

  • ಕುಂದಾಪುರ ಬಿ.ಬಿ. ಹೆಗ್ಡೆ ಕಾಲೇಜು-ಸ್ಟಾಫ್ ವೆಲ್‍ಫೇರ್ ಅಸೋಸಿಯೇಶನ್ ನಿಂದ ಬೀಳ್ಕೊಡುಗೆ

    ಕುಂದಾಪುರ ಬಿ.ಬಿ. ಹೆಗ್ಡೆ ಕಾಲೇಜು-ಸ್ಟಾಫ್ ವೆಲ್‍ಫೇರ್ ಅಸೋಸಿಯೇಶನ್ ನಿಂದ ಬೀಳ್ಕೊಡುಗೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸ್ಟಾಫ್ ವೆಲ್‍ಫೇರ್ ಅಸೋಸಿಯೇಶನ್ ಆಯೋಜಿಸಿದ ಸಿಬ್ಬಂದಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಿದ ಇಬ್ಬರು ಉಪಾನ್ಯಾಸಕರನ್ನು ಶ್ಲಾಘಿಸಿದರು.
    ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಬೀಳ್ಕೋಡುಗೆ ಸ್ವೀಕರಿಸಿದ ಗಣಿತ ಶಾಸ್ತ್ರದ ಉಪನ್ಯಾಸಕಿ ನಿರುಷಾ ಆನಂದ ಶೆಟ್ಟಿ ಮತ್ತು ಭೌತಶಾಸ್ತ್ರ ಉಪನ್ಯಾಸಕಿ ಚೈತ್ರಾ ಸಂಸ್ಥೆಯಲ್ಲಿನ ತಮ್ಮ ಸೇವಾನುಭವನ್ನು ಹಂಚಿಕೊಂಡರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಹಾಗೂ ಇಂಗ್ಲಿಷ್ ವಿಭಾಗದ ದೀಪಿಕಾ ಜಿ. ಅನಿಸಿಕೆ ತಿಳಿಸಿದರು.

    ಕಾಲೇಜಿನ ಗಣಿತಶಾಸ್ತ್ರ ಉಪಾನ್ಯಾಸಕಿ ನಿರ್ಮಲಾ ಪ್ರಾರ್ಥಿಸಿ, ಸಿಬ್ಬಂದಿ ಸಂಘದ ಸಂಯೋಜಕ ಮಹೇಶ್ ನಾಯಕ್ ವಂದಿಸಿದರು. ವಾಣಿಜ್ಯ ಉಪನ್ಯಾಸಕ ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿದರು.

  • ಕುಂದಾಪುರ :ಕೆಪಿಎಸ್ ಪ್ರೌಢಶಾಲೆ ಕೋಟೇಶ್ವರ ಪೋಷಕರ ಸಭೆ

    ಕುಂದಾಪುರ :ಕೆಪಿಎಸ್ ಪ್ರೌಢಶಾಲೆ ಕೋಟೇಶ್ವರ ಪೋಷಕರ ಸಭೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಪೋಷಕರು ಶಿಕ್ಷಕರೊಂದಿಗೆ ಸಂಪರ್ಕ ಸಾಧಿಸಲು ಮತ್ತು ತಮ್ಮ ಮಗುವಿನ ಶೈಕ್ಷಣಿಕ ಪ್ರಗತಿಯ ಬಗ್ಗೆ ಚರ್ಚಿಸಲು ಮತ್ತು ಕಲಿಕೆಯ ಸಾಮರ್ಥ್ಯವನ್ನು ಬೆಂಬಲಿಸಲು ತಂತ್ರಗಳನ್ನು ಅಭಿವೃದ್ಧಿಪಡಿಸಲು ಶಾಲೆಯಲ್ಲಿ ಮಕ್ಕಳ ಅನುಭವದ ಸಮಗ್ರ ನೋಟವನ್ನು ಪಡೆಯುಲು ದೂರುಗಳಿಗಷ್ಟೇ ಸೀಮಿತವಾಗದೇ ಮಗುವಿನ ಸಮಗ್ರ ಕಲಿಕಾ ಪ್ರಕ್ರಿಯೆ ವಿಶ್ಲೇಷಿಸುವ ಹಾಗೂ ಮಗುವಿನ ಮಾನಸಿಕ ಬೆಳವಣಿಗೆ ಕುರಿತು ಚರ್ಚಿಸುವ ವೇದಿಕೆಯಾಗಬೇಕು ಎಂದು ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಸಂಸ್ಥೆಯ ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ಸಭೆಯಲ್ಲಿ ವಿದ್ಯಾರ್ಥಿ ಮತ್ತು ಪೋಷಕರಿಗೆ ಕಿವಿಮಾತು ಹೇಳಿದರು.

    ಇದೇ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ್ ಶೆಟ್ಟಿ ಚಾರಿಟೇಬಲ್ ಸೊಸೈಟಿ ರಿಜಿಸ್ಟರ್ಡ್ ಬೆಂಗಳೂರು ಇವರು ಕೊಡ ಮಾಡಿದ ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು

    ಹಿರಿಯ ಶಿಕ್ಷಕಿ ಜಯಶ್ರೀ ಭಟ್ ಮಾತನಾಡಿ ಮಕ್ಕಳ ಸರ್ವತೋಮುಖ ವಿಕಾಸದಲ್ಲಿ ಶಾಲೆ ಮತ್ತು ಶಿಕ್ಷಕರ ಪಾತ್ರ ವಷ್ಟೇ ಅಲ್ಲ ಕುಟುಂಬ ಹಾಗೂ ಪಾಲಕರದ್ದು ಎಂಬುದನ್ನು ಮರೆಯಬಾರದು ಎಂದರು.

    ಸಭೆಯಲ್ಲಿ ವಿವಿಧ ತರಗತಿಯ ಅಧ್ಯಾಪಕರಾದ ಶ್ರೀಕಾಂತ,ರೇಷ್ಮಾ, ಜಯಶ್ರೀ, ಸಂಧ್ಯಾ, ಉಪಸ್ಥಿತರಿದ್ದರು.

    ಭಾಷಾ ಹಸನ್ ಸಾಭ್ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕಿ ಅನುರಾಧ ವಂದಿಸಿದರು.

  • ಕೋಟ ವಲಯ ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಹರೀಶ್ ಭಂಡಾರಿ ಗಿಳಿಯಾರು

    ಕೋಟ ವಲಯ ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಹರೀಶ್ ಭಂಡಾರಿ ಗಿಳಿಯಾರು

    ಕುಂದಾಪುರ ಮಿರರ್ ಸುದ್ದಿ…

    ಕೋಟ :ಕೋಟ ವಲಯ ಸವಿತಾ ಸಮಾಜದ 2023-26ರ ಸಾಲಿನ ನೂತನ ಅಧ್ಯಕ್ಷರಾಗಿ ಹರೀಶ್ ಭಂಡಾರಿ ಗಿಳಿಯಾರು ಆಯ್ಕೆಯಾದರು. ಇತ್ತೀಚಿಗೆ ನಡೆದ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಗೌರವಾಧ್ಯಕ್ಷರಾಗಿ ರಮೇಶ್ ಭಂಡಾರಿ ಕಾರ್ಕಡ ಉಪಾಧ್ಯಕ್ಷರಾಗಿ ಗಣೇಶ ಬಂಗೇರಾ ವಕ್ವಾಡಿ, ದಿನೇಶ್ ಭಂಡಾರಿ ಕೋಟ ಹೈಸ್ಕೂಲ್, ಕಾರ್ಯದರ್ಶಿಯಾಗಿ ಪ್ರಶಾಂತ್ ಭಂಡಾರಿ ಶೇಡಿಮನೆ ಜೊತೆ ಕಾರ್ಯದರ್ಶಿ ನರಸಿಂಹ ಭಂಡಾರಿ ಸಾಲಿಗ್ರಾಮ, ಕೋಶಾಧಿಕಾರಿ ಶರತ್ ಭಂಡಾರಿ ಅಚ್ಲಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಅಕ್ಷಯ್ ಭಂಡಾರಿ ತೆಕ್ಕಟ್ಟೆ ಗೌರವ ಸಲಹೆಗಾರರಾಗಿ ಮಂಜುನಾಥ ಭಂಡಾರಿ ಸಾಲಿಗ್ರಾಮ ,ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

  • ಕೋಟ :ಪಂಚವರ್ಣ ಸಂಸ್ಥೆಯ 170ನೇ ಪರಿಸರಸ್ನೇಹಿ ಅಭಿಯಾನ

    ಕೋಟ :ಪಂಚವರ್ಣ ಸಂಸ್ಥೆಯ 170ನೇ ಪರಿಸರಸ್ನೇಹಿ ಅಭಿಯಾನ

    ಸ್ಥಳೀಯಾಡಳಿತ ವ್ಯಾಪ್ತಿಯಲ್ಲಿ ಹೊಸಮನೆಗಳಿಗೆ ಎರಡು ಗಿಡ ನಡಲು ಸೂಚಿಸಬೇಕು –ಕೆ.ವಿ ರಮೇಶ್ ರಾವ್

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಸ್ಥಳೀಯಾಡಳಿತ ವ್ಯಾಪ್ತಿಯಲ್ಲಿ ಹೊಸಮನೆಗಳ ಲೈಸೆನ್ಸ್ ನೀಡುವಾಗಲೇ ಎರಡು ಗಿಡ ನೆಡಲು ಸೂಚಿಸಬೇಕು ಎಂದು ಪಾಂಡೇಶ್ವರ ರಕ್ತೇಶ್ವರಿ ದೇವಸ್ಥಾನದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಸಲಹೆ ನೀಡಿದ್ದಾರೆ.

    ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಂಯೋಜನೆಯೊಂದಿಗೆ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಹಂದಟ್ಟು ಮಹಿಳಾ ಬಳಗ,ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗಿಳಿಯಾರು ಯುವಕ ಮಂಡಲ,ಸಮುದ್ಯತಾ ಗ್ರೂಪ್ಸ್ ,ಗೆಳೆಯರ ಬಳಗ ಕಾರ್ಕಡ ಇದರ ಸಹಯೋಗದೊಂದಿಗೆ ಪರಿಸರಸ್ನೇಹಿ ಅಭಿಯಾನಕ್ಕೆ 170ನೇ ವಾರದ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿ ವಾತಾವರಣವು ದಿನಕ್ಕೊಂದು ರೂಪ ಪಡೆಯುತ್ತಿದೆ. ಮಳೆಗಾಲವು ಹಿಮ್ಮುಖವಾಗುತ್ತಿದೆ, ತಾಪಮಾನವು ದಿನದಿಂದ ದಿನಕ್ಕ ವಿಕೋಪವನ್ನು ಸೃಷ್ಠಿಸುತ್ತಿದೆ ಇದಕ್ಕೆ ಹೊಣೆಗಾರರು ನಾವುಗಳೇ ಈಗಲೇ ಎಚ್ಚತ್ತುಕೊಳ್ಖದಿದ್ದರೆ ಮುಂದೆ ಆಪತ್ತು ತಪ್ಪಿದಲ್ಲ ಅದಕ್ಕಾಗಿ ಇವತ್ತಿನಿಂದಲೆ ವಾಸ್ತವ್ಯ ಸ್ಥಳದಲ್ಲಿ ಒಂದೆರಡು ಗಿಡಗಳನ್ನ ನೆಟ್ಟು ಪೋಷಿಸುವ ಕಾರ್ಯ ನಡೆಯಲಿ ಎಂದು ಕಿವಿಮಾತ ಹೇಳಿದರು.

    ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

    ಈ ಸಂದರ್ಭದಲ್ಲಿ ಪಾಂಡೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷೆ ಕಲ್ಪನಾ ದಿನಕರ್ ಇವರಿಗೆ ಗಿಡ ಹಸ್ತಾಂತರಿಸಲಾಯಿತು.
    ಸುತ್ತಮುತ್ತಲಿನ ಪರಿಸರದ ಮನೆಗಳಿಗೆ ತೆರಳಿ ಗಿಡ ನಾಟಿ ಮಾಡಲಾಯಿತು.

    ಈ ಸಂದರ್ಭದಲ್ಲಿ ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶಾಂತಾ ಭಟ್,ಉಪಾಧ್ಯಕ್ಷರು ಜ್ಯೂಡಿತ್ ಪಿಕಾರ್ಡೊ ಮತ್ತು ನಿರ್ದೇಶಕರುಗಳು,ಪಾಂಡೇಶ್ವರ ಗ್ರಾ.ಪಂ ಸದಸ್ಯೆ ಸುಜಾತ ವೆಂಕಟೇಶ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲೀಲಾವತಿ ಗಂಗಾಧರ್, ಪಾಂಡೇಶ್ವರ ಮಹಿಳಾ ಮಂಡಳದ ಅಧ್ಯಕ್ಷೆ ಸುಮಿತ್ರ ಸುಧಾಕರ್,ಪಂಚವರ್ಣ ಮಹಿಳಾ ಮಂಡದ ಉಪಾಧ್ಯಕ್ಷ ವಸಂತಿ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿದರು. ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ಯಾಮಲ ಪಾಂಡೇಶ್ವರ ವಂದಿಸಿದರು. ಪಂಚವರ್ಣ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.ಗೀತಾನಂದ ಫೌಂಡೇಶನ್ ಮಣೂರು,ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಗಿಡದ ವ್ಯವಸ್ಥೆ ಕಲ್ಪಿಸಿತು.

  • ಸಚಿವ ಮಂಕಾಳ ವೈದ್ಯರಿಗೆ ಹಂಗಾರಕಟ್ಟೆ ಬಂದರು ಅಭಿವೃದ್ಧಿ ಸಮಿತಿಯಿಂದ ಸನ್ಮಾನ

    ಸಚಿವ ಮಂಕಾಳ ವೈದ್ಯರಿಗೆ ಹಂಗಾರಕಟ್ಟೆ ಬಂದರು ಅಭಿವೃದ್ಧಿ ಸಮಿತಿಯಿಂದ ಸನ್ಮಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ರಾಜ್ಯದ ಬಂದರು ಹಾಗೂ ಮೀನುಗಾರಿಕಾ ಸಚಿವ ಮಂಕಾಳ ಎಸ್ ವೈದ್ಯ ಇವರು ಭಾನುವಾರ ಹಂಗಾರಕಟ್ಟೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದರು.

    ಈ ಸಂದರ್ಭದಲ್ಲಿ ಹಂಗಾರಕಟ್ಟೆ ಬಂದರು ಅಭಿವೃದ್ಧಿ ಸಮಿತಿಯಿಂದ ಬಂದರು ಅಭಿವೃದ್ಧಿ ಪಡಿಸುವ ಕುರಿತು ಮನವಿ ನೀಡಿತು. ಮೀನುಗಾರರನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಮೀನುಗಾರಿಕಾ ಸಚಿವನಾಗಿ ಈ ಹಂಗಾರಕಟ್ಟೆ ಬಂದರು ಪ್ರದೇಶವನ್ನು ಮೀನುಗಾರರ ವ್ಯವಸ್ಥೆಗೆ ಅನುಗುಣವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮೀನುಗಾರರಿಗೆ ಭರವಸೆಯನ್ನು ನೀಡಿದರು.

    ಹಂಗಾರಕಟ್ಟೆ ಬಂದರು ಅಭಿವೃದ್ಧಿ ಸಮಿತಿ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.

    ಈ ವೇಳೆ ನಾಡೋಜ ಡಾ.ಜಿ ಶಂಕರ್ ಮೀನುಗಾರರ ಪರವಾಗಿ ಪ್ರಾಸ್ತಾವನೆ ಸಲ್ಲಿಸಿದರು. ಬ್ರಹ್ಮಾವರ ತಹಶಿಲ್ದಾರ್ ರಾಜಶೇಖರಮೂರ್ತಿ, ಕೋಟ ಕಂದಾಯ ಅಧಿಕಾರಿ ಶಿವರಾಜ್, ಮೀನುಗಾರ ಮುಖಂಡರಾದ ಆನಂದ್ ಸಿ ಕುಂದರ್, ರಾಜೇಂದ್ರ ಸುವರ್ಣ, ಕೇಶವ ಕುಂದರ್, ರಾಜು ಬಂಗೇರ, ಚಂದ್ತ ಕಾಂಚನ್, ಬಂದರು ಅಭಿವೃದ್ಧಿ ಸಮಿತಿಯ ಪ್ರಮುಖರು, ಮೀನುಗಾರಿಕಾ ಇಲಾಖಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.