Category: ಸುದ್ದಿ

  • ಕೋಡಿ – ಕಡಲ್ಕೊರೆತ ಸ್ಥಳಗಳಿಗೆ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಭೇಟಿ

    ಕೋಡಿ – ಕಡಲ್ಕೊರೆತ ಸ್ಥಳಗಳಿಗೆ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ರಾಜ್ಯದ ಹಿಂದುಳಿದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಸೋಮವಾರ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾ.ಪಂ ವ್ಯಾಪ್ತಿಯ ಕೋಡಿ ಹೊಸಬೇಂಗ್ರೆ ಲೈಟ್ ಹೌಸ್ ಸೇರಿದಂತೆ ವಿವಿಧ ಭಾಗಗಳು,ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಮಣೂರು ಪಡುಕರೆ ಕಡಲ್ಕೊರೆತ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿ ಹಿಂದೆ ಸರಕಾರದ ಅವಧಿಯಲ್ಲಿ ಸಚಿವನಾಗಿದ್ದ ಸಂದರ್ಭದಲ್ಲಿ ಕರಾವಳಿಯ ಹೆಚ್ಚಿನ ಕಡಲ್ಕೊರೆತ ಸ್ಥಳಗಳಿಗೆ ಶ್ವಾಶತ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ವರ್ಷದಿಂದ ವರ್ಷಕ್ಕೆ ಕೆಲವೊಂದು ಭಾಗಗಳು ಕಡಲ್ಕೊರೆತಕ್ಕೆ ತುತ್ತಾಗಾತ್ತಿವೆ, ಈ ಹಿನ್ನಲೆಯಲ್ಲಿ ಪ್ರಸ್ತುತ ಸರಕಾರದ ಗಮನ ಸೆಳೆಯಲಾಗುವುದಲ್ಲದೆ ಬಂದರೂ ಮೀನುಗಾರಿಕಾ ಸಚಿವರೊಂದಿಗೆ ಚರ್ಚಿಸಿ ಶ್ವಾಶತ ತಡೆಗೋಡೆ ನಿರ್ಮಿಸುವುದರ ಕುರಿತು ಚರ್ಚಿಸುತ್ತೇನೆ, ಇದಕ್ಕಾಗಿ ಮಂಗಳವಾರ ಉಡುಪಿಯಲ್ಲಿ ಸಂಬಂಧಿಸಿದ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆಯಾ ಭಾಗದ ಕಡಲ್ಕೊರೆತ ಸ್ಥಳಗಳಿಗೆ ಶಾಶ್ವತ ಪರಿಹಾರ ಕ್ರಮಕ್ಕೆ ರೂಪರೇಷ ಸಿದ್ಧಪಡಿಸಲಿದ್ದೇವೆ ಎಂದರು.

    ಈ ವೇಳೆ ಮೀನುಗಾರಿಕಾ ಮುಖಂಡರಾದ ಲಕ್ಷ್ಮಣ್ ಸುವರ್ಣ, ಚಂದ್ರ ಕಾಂಚನ್, ಅಣ್ಣಪ್ಪ ಕುಂದರ್ , ಪ್ರಭಾಕರ ಬಂಗೇರ, ಕೃಷ್ಣಪ್ಪ ಬಂಗೇರ, ಅಶೋಕ್ ತಿಂಗಳಾಯ, ಉದಯ್ ಕಾಂಚನ್, ಪ್ರತಾಪ್ ಪೂಜಾರಿ, ಕರಾವಳಿ ಕಾವಲು ಪಡೆಯ ಮಹೇಶ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

  • ಕುಂದಾಪುರ :ಉಡುಪಿ ಜಿಲ್ಲೆಯಲ್ಲಿ ಶೂನ್ಯ ಶಿಕ್ಷಕರಿರುವ ಸರಕಾರಿ ಶಾಲೆಗಳಿಗೆ ತಕ್ಷಣ ಖಾಯಂ ಶಿಕ್ಷಕರನ್ನು ಒದಗಿಸುವಂತೆ  ಮನವಿ

    ಕುಂದಾಪುರ :ಉಡುಪಿ ಜಿಲ್ಲೆಯಲ್ಲಿ ಶೂನ್ಯ ಶಿಕ್ಷಕರಿರುವ ಸರಕಾರಿ ಶಾಲೆಗಳಿಗೆ ತಕ್ಷಣ ಖಾಯಂ ಶಿಕ್ಷಕರನ್ನು ಒದಗಿಸುವಂತೆ ಮನವಿ

    Video :

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ 63 ಸರಕಾರಿ ಶಾಲೆಗಳಲ್ಲಿ ಶೂನ್ಯ ಶಿಕ್ಷಕರಿದ್ದು, ರಾಜ್ಯದಲ್ಲಿಯೂ ಕೂಡಾ ಹಲವಾರು ಶಾಲೆಗಳಲ್ಲಿ ಶೂನ್ಯ ಶಿಕ್ಷಕರ ಸಮಸ್ಯೆಯಿದೆ. ಖಾಯಂ ಶಿಕ್ಷಕರಿಲ್ಲದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಇದೇ ತಿಂಗಳು ನಡೆಯುವ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸಮಯದಲ್ಲಿ ಮೊದಲು ಶೂನ್ಯ ಶಿಕ್ಷಕರು ಇರುವ ಶಾಲೆಗಳನ್ನು ಭರ್ತಿಗೊಳಿಸಿ ನಂತರ ಉಳಿದ ಶಾಲೆಗಳಿಗೆ ಅವಕಾಶ ನೀಡಬೇಕು. ಶಿಕ್ಷಕರಿಲ್ಲದ ಶಾಲೆಗೆ ಪ್ರಥಮ ಒತ್ತನ್ನು ನೀಡುವಂತೆ ರಾಜ್ಯದ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲಾ ಘಟಕ ಮನವಿ ಸಲ್ಲಿಸಿದೆ.
    ಸೋಮವಾರ ಕುಂದಾಪುರದ ಸಹಾಯಕ ಕಮಿಷನರ್ ಕಛೇರಿಯಲ್ಲಿ ನಾಗರಾಜ ನಾಯ್ಕಡ ತಹಶೀಲ್ದಾರ್ ಗ್ರೇಡ್-2 ಇವರ ಮೂಲಕ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
    ಕರ್ನಾಟಕ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ ಶಿಕ್ಷಣ ತಜ್ಞರಾದ ಪ್ರೋ. ಡಾ. ನಿರಂಜನಾರಾಧ್ಯ ವಿ.ಪಿ ಅವರ ಮಾರ್ಗದರ್ಶನದಲ್ಲಿ ಹಾಗೂ ಮಗು ಮತ್ತು ಕಾನೂನು ಕೇಂದ್ರ ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನವರ್ಸಿಟಿ ಬೆಂಗಳೂರು ಇವರ ಸುಗಮವಾರಿಕೆಯಲ್ಲಿ ಉಡುಪಿ ಜಿಲ್ಲಾ ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆ 2013ರಿಂದ ‘ಸರಕಾರಿ ಶಾಲೆ ಉಳಿಯಲಿ ಬೆಳೆಯಲಿ ನೆರೆಹೊರೆಯ ಸಮಾನ ಶಾಲೆಯಾಗಲಿ’ ಎಂಬ ಧ್ಯೇಯ ಉದ್ದೇಶದೊಂದಿಗೆ ಸರಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಸಬಲೀಕರಣ ಮತ್ತು ಶಿಕ್ಷಕರು, ಪೋಷಕರು ಮತ್ತು ಸಮುದಾಯದೊಂದಿಗೆ ನಿರಂತರವಾಗಿ ಗ್ರಾಮೀಣ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವಲ್ಲಿ ತೊಡಗಿಸಿಕೊಂಡಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
    ಈ ಸಂದರ್ಭದಲ್ಲಿ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಜಿಲ್ಲಾ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ಪುರಸಭಾ ಘಟಕದ ಅಧ್ಯಕ್ಷ ಅಶ್ವತ್ ಕುಂದಾಪುರ, ಬೈಂದೂರು ತಾಲೂಕು ಅಧ್ಯಕ್ಷ ಅವಿನಾಶ್ ಹೊಳ್ಳ, ಪತ್ರಿಕಾ ಕಾರ್ಯದರ್ಶಿ ಶಶಿ ಬಳ್ಕೂರು, ಸಂಘಟನಾ ಕಾರ್ಯದರ್ಶಿ ವರದ ಆಚಾರ್ಯ ಅಂಕದಕಟ್ಟೆ, ಸಂಪನ್ಮೂಲ ವ್ಯಕ್ತಿ ಅಶ್ಫಕ್ ಮೂಡುಗೋಪಾಡಿ, ಶೋಭಾ ಶಾಂತಾರಾಜ್, ತಾಲೂಕು ಕೋಶಾಧಿಕಾರಿ ಕೃಷ್ಣಾನಂದ ಶ್ಯಾನುಭಾಗ್ ಉಪಸ್ಥಿತರಿದ್ದರು.

  • ಡಾ| ಬಿ.ಬಿ. ಹೆಗ್ಡೆ ಕಾಲೇಜು – ಡಿಮ್ಯಾಟ್ ಅಕೌಂಟ್ ಓಪನಿಂಗ್ ಡ್ರೈವ್

    ಡಾ| ಬಿ.ಬಿ. ಹೆಗ್ಡೆ ಕಾಲೇಜು – ಡಿಮ್ಯಾಟ್ ಅಕೌಂಟ್ ಓಪನಿಂಗ್ ಡ್ರೈವ್

    ಕುಂದಾಪುರ ಮಿರರ್ ‌ಸುದ್ದಿ…

    ಕುಂದಾಪುರ :ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ನ ಸಂಯುಕ್ತ ಆಶ್ರಯದಲ್ಲಿ ಡಿಮ್ಯಾಟ್ ಖಾತೆ ತೆರೆಯುವ ಕಾರ್ಯಗಾರ ಜರುಗಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಹೂಡಿಕೆಯ ಅರಿವು ಮತ್ತು ಅದರ ಮಹತ್ವ ಅತ್ಯವಶ್ಯಕ ಎಂದು ತಿಳಿಸಿದರು.

    ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನ್ನಾಡಿದರು.

    ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೊರ್ಸ್ನ ಸಂಯೋಜಕರಾದ ಸುಧೀರ ಕುಮಾರ್ ಸ್ವಾಗತಿಸಿದರು. ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ವಂದಿಸಿದರು.

    ವಿದ್ಯಾರ್ಥಿನಿ ಪವಿತ್ರ ಪೈ ಪ್ರಾರ್ಥಿಸಿ, ಸಮೃದ್ಧಿ ಕಿಣಿ ಕಾರ್ಯಕ್ರಮ ನಿರೂಪಿಸಿದರು.

  • ಬ್ರಹ್ಮಾವರ: ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಘೋಷಣೆ

    ಬ್ರಹ್ಮಾವರ: ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಘೋಷಣೆ

    ರಾಜ್ಯ ಚುನಾವಣಾ ಆಯೋಗ ನಿಗದಿಪಡಿಸಿರುವ ಮೀಸಲಾತಿಯಂತೆ ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ 27 ಗ್ರಾಮ ಪಂಚಾಯತಿಗಳ , 30 ತಿಂಗಳ ಎರಡನೇ ಅವಧಿಗೆ ಆಯ್ಕೆಯಾದ ಅಧ್ಯಕ್ಷ / ಉಪಾಧ್ಯಕ್ಷ ಸ್ಥಾನ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ.

    ಕ್ರ.ಸಂ. ಗ್ರಾಮ ಪಂಚಾಯತ್ ಹೆಸರು 2020 ನೇ ಸಾಲಿನ ಚುನಾವಣೆ ಮುಗಿದ ನಂತರ 30 ತಿಂಗಳ ಎರಡನೇ ಅವಧಿಗೆ ನಿಗದಿಪಡಿಸಿರುವ ಮೀಸಲಾತಿ ಅಧ್ಯಕ್ಷ ಉಪಾಧ್ಯಕ್ಷ
    1 1-ಕೋಟತಟ್ಟು ಸಾಮಾನ್ಯ ಹಿಂದುಳಿದ ವರ್ಗ – ಅ (ಮಹಿಳೆ)
    2 2-ಕೋಟ ಸಾಮಾನ್ಯ ಮಹಿಳೆ ಹಿಂದುಳಿದ ವರ್ಗ – ಅ
    3 3-ಪಾಂಡೇಶ್ವರ ಹಿಂದುಳಿದ ವರ್ಗ – ಅ (ಮಹಿಳೆ) ಸಾಮಾನ್ಯ
    4 4-ಕೋಡಿ ಸಾಮಾನ್ಯ ಮಹಿಳೆ ಸಾಮಾನ್ಯ
    5 5-ಐರೋಡಿ ಅನುಸೂಚಿತ ಪಂಗಡ (ಮಹಿಳೆ) ಹಿಂದುಳಿದ ವರ್ಗ – ಬ (ಮಹಿಳೆ)
    6 6-ಬಾರ್ಕೂರು ಸಾಮಾನ್ಯ ಮಹಿಳೆ ಸಾಮಾನ್ಯ
    7 7-ವಡ್ಡರ್ಸೆ ಸಾಮಾನ್ಯ ಅನುಸೂಚಿತ ಜಾತಿ (ಮಹಿಳೆ)
    8 8-ಯಡ್ತಾಡಿ ಸಾಮಾನ್ಯ ಹಿಂದುಳಿದ ವರ್ಗ – ಅ (ಮಹಿಳೆ)
    9 9-ಶಿರಿಯಾರ ಹಿಂದುಳಿದ ವರ್ಗ – ಬ ಸಾಮಾನ್ಯ (ಮಹಿಳೆ)
    10 10-ಬಿಲ್ಲಾಡಿ ಹಿಂದುಳಿದ ವರ್ಗ – ಅ (ಮಹಿಳೆ) ಸಾಮಾನ್ಯ
    11 11-ಆವರ್ಸೆ ಹಿಂದುಳಿದ ವರ್ಗ – ಅ ಸಾಮಾನ್ಯ (ಮಹಿಳೆ)
    12 12-ಹೆಗ್ಗುಂಜೆ ಹಿಂದುಳಿದ ವರ್ಗ – ಅ ಸಾಮಾನ್ಯ (ಮಹಿಳೆ)
    13 13-ಹನೆಹಳ್ಳಿ ಸಾಮಾನ್ಯ ಮಹಿಳೆ ಸಾಮಾನ್ಯ
    14 14-ಕಾಡೂರು ಸಾಮಾನ್ಯ ಸಾಮಾನ್ಯ (ಮಹಿಳೆ)
    15 15-ನಾಲ್ಕೂರು ಸಾಮಾನ್ಯ ಮಹಿಳೆ ಸಾಮಾನ್ಯ
    16 16-ಕೊಕ್ಕರ್ಣೆ ಸಾಮಾನ್ಯ ಅನುಸೂಚಿತ ಪಂಗಡ (ಮಹಿಳೆ)
    17 17-ಚೇರ್ಕಾಡಿ ಸಾಮಾನ್ಯ ಸಾಮಾನ್ಯ (ಮಹಿಳೆ)
    18 18-38 –ಕಳ್ತೂರು ಹಿಂದುಳಿದ ವರ್ಗ – ಅ ಹಿಂದುಳಿದ ವರ್ಗ – ಬ
    19 19-ಕರ್ಜೆ ಸಾಮಾನ್ಯ ಹಿಂದುಳಿದ ವರ್ಗ – ಅ (ಮಹಿಳೆ)
    20 20-ಆರೂರು ಸಾಮಾನ್ಯ ಸಾಮಾನ್ಯ (ಮಹಿಳೆ)
    21 21-ಉಪ್ಪೂರು ಸಾಮಾನ್ಯ ಮಹಿಳೆ ಸಾಮಾನ್ಯ
    22 22- ವಾರಂಬಳ್ಳಿ ಸಾಮಾನ್ಯ ಸಾಮಾನ್ಯ (ಮಹಿಳೆ)
    23 23-ಹಾರಾಡಿ ಹಿಂದುಳಿದ ವರ್ಗ – ಅ (ಮಹಿಳೆ) ಸಾಮಾನ್ಯ
    24 24-ಚಾಂತಾರು ಹಿಂದುಳಿದ ವರ್ಗ – ಬ (ಮಹಿಳೆ) ಹಿಂದುಳಿದ ವರ್ಗ – ಅ (ಮಹಿಳೆ)
    25 25-ಹಾವಂಜೆ ಹಿಂದುಳಿದ ವರ್ಗ – ಅ (ಮಹಿಳೆ) ಸಾಮಾನ್ಯ
    26 26-ಹಂದಾಡಿ ಸಾಮಾನ್ಯ ಮಹಿಳೆ ಹಿಂದುಳಿದ ವರ್ಗ – ಅ
    27 27-ನೀಲಾವರ ಅನುಸೂಚಿತ ಜಾತಿ (ಮಹಿಳೆ) ಹಿಂದುಳಿದ ವರ್ಗ – ಅ

  • ಪಡುಕರೆ – ಸರಕಾರಿ ಪದವಿಪೂರ್ವ ಕಾಲೇಜಿನ ಕಂಪ್ಯೂಟರ್ ಲ್ಯಾಬ್ ಲೋಕಾರ್ಪಣೆ

    ಪಡುಕರೆ – ಸರಕಾರಿ ಪದವಿಪೂರ್ವ ಕಾಲೇಜಿನ ಕಂಪ್ಯೂಟರ್ ಲ್ಯಾಬ್ ಲೋಕಾರ್ಪಣೆ

    ಕುಂದಾಪುರ ‌ಮಿರರ್ ಸುದ್ದಿ…

    ಕೋಟ: ಇಲ್ಲಿನ ಕೋಟ ಮಣೂರು ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಗೀತಾನಂದ ಫೌಂಡೇಶನ್ ಕೊಡಮಾಡಿದ ಕಂಪ್ಯೂಟರ್ ಲ್ಯಾಬ್ ಅನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಲೋಕಾರ್ಪಣೆಗೊಳಿಸಿದರು.

    ಗೀತಾನಂದ ಫೌಂಡೇಶನ್ ಸುಸಜ್ಜಿತ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಸಂದರ್ಭದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ಪ್ರಕಾಶ್ ತೋಳಾರ್, ರಾಜ್ಯ ಅಮೇಚೂರ್ ಕಬ್ಬಡಿ ಅಸೋಸಿಯೇಷನ್ ಅಧ್ಯಕ್ಷ ರಾಜೇಂದ್ರ ಸುವರ್ಣ, ಕೋಟ ಪಡುಕರೆ ಲಕ್ಷ್ಮೀಸೋಮಬಂಗೇರ ಸ.ಪ್ರ.ಕಾಲೇಜಿನ ಪ್ರಾಂಶುಪಾಲೆ ಡಾ.ಸುನೀತಾ,ಪ್ರೌಢಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ,ಪ್ರಾಥಮಿಕ ವಿಭಾಗದ ಅಧ್ಯಕ್ಷ ನಾಗರಾಜ್, ಮೊಗವೀರ ಯುವ ಸಂಘ ಕೋಟ ಘಟಕದ ಅಧ್ಯಕ್ಷ ರಂಜೀತ್ ಕುಮಾರ್, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್, ಕೋಟ ಗ್ರಾಮಪಂಚಾಯತ್ ಸದಸ್ಯ ಪ್ರದೀಪ್ ಸಾಲಿಯಾನ್, ಪ್ರಾಥಮಿಕ ಶಾಲಾ ವಿಭಾಗ ಮುಖ್ಯ ಶಿಕ್ಷಕಿ ಜಯಂತಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ನಿರಂಜನ್ ನಾಯಕ್, ಉದ್ಯಮಿ ಆನಂದ ಪಿ ಸುವರ್ಣ, ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ಗೀತಾನಂದ ಫೌಂಡೇಶನ್ ಮಾನವ ಸಂಪನ್ಮೂಲ ಘಟಕದ ಮುಖ್ಯಸ್ಥ ಕೃಷ್ಣ,ಗೀತಾನಂದ ಫೌಂಡೇಶನ್ ನಿರ್ದೇಶಕಿ ಗೀತಾ ಎ ಕುಂದರ್, ಜನತಾ ಫಿಶ್‍ಮಿಲ್ ನಿರ್ದೇಶಕ ಪ್ರಶಾಂತ್ ಕುಂದರ್, ಮ್ಯಾನೇಜರ್ ಶ್ರೀನಿವಾಸ್ ಕುಂದರ್, ಪ್ರೌಢಶಾಲಾ ಶಿಕ್ಷಕ ಶ್ರೀಧರ ಶಾಸ್ತ್ರಿ , ಗೀತಾನಂದ ಸಮಾಜಕಾರ್ಯವಿಭಾಗದ ರವಿಕಿರಣ್ ಕೋಟ ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ, ಉಪನ್ಯಸಕ ಸತ್ಯನಾರಾಯಣ ಇದ್ದರು.

  • ಕೋಟ :ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು- ನಾಡೋಜ ಡಾ.ಜಿಶಂಕರ್

    ಕೋಟ :ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು- ನಾಡೋಜ ಡಾ.ಜಿಶಂಕರ್

    ಉಚಿತ ನೋಟ್ ಬುಕ್ ಪುಸ್ತಕ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣಾ ಆನಂದೋತ್ಸವ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯತೆ ಇದೆ. ಈ ದಿಸೆಯಲ್ಲಿ ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಹಾಗೂ ಗೀತಾನಂದ ಫೌಂಡೇಶನ್ ಸದಾ ಶ್ರಮಿಸುತ್ತಿದೆ ಎಂದು ನಾಡೋಜ ಡಾ.ಜಿ ಶಂಕರ್ ಹೇಳಿದರು.

    ಶನಿವಾರ ಮಣೂರು ಸಂಯುಕ್ತ ಪ್ರೌಢಶಾಲೆಯ ಕೆ.ಸಿ ಕುಂದರ್ ಸಭಾಂಗಣದಲ್ಲಿ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ ಆನಂದೋತ್ಸವ ಉಚಿತ ನೋಟ್ ಬುಕ್ ಪುಸ್ತಕ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರಸ್ತುತ ಹಣ ಇದ್ದವರು ಸಮಾಜದ ಹಾಗೂ ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾರರು ಆದರೆ ಆನಂದ್ ಕುಂದರ್ ತನ್ನೂರಲ್ಲಿ ಶಿಕ್ಷಣದ ಕಾಶಿಯಾಗಿಸಿದ್ದಾರೆ. ತನ್ನ ದುಡಿಮೆ ಪಾಲಿನಲ್ಲಿ ಸಮಾಜಕ್ಕೆ ಅರ್ಪಿಸಿಕೊಂಡಿದ್ದಾರೆ ಇದು ಶ್ಲಾಘನಾರ್ಹ ಕಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

    ಮುಖ್ಯ ಅತಿಥಿಗಳಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ ಕರಾವಳಿಯಲ್ಲಿ ಈ ತಾಣದಲ್ಲಿ ಶಿಕ್ಷಣದ ಕಂಪು ಪಸರಿಸಿದ ಆನಂದ್ ಸಿ ಕುಂದರ್ ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತನ್ನದೆ ಆದ ಕೊಡುಗೆಗಳನ್ನು ನೀಡುತ್ತಿದ್ದಾರೆ.ಇಲ್ಲಿನ ಶೈಕ್ಷಣಿಕ ಅಭಿವೃದ್ಧಿ ತನ್ನ ಶಾಸಕ ಸ್ಥಾನದಿಂದ ಸದಾ ಸಹಕಾರ ನೀಡಲಿದ್ದೇನೆ ಎಂದರು.

    ಈ ಸಂದರ್ಭದಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಉಡುಪಿ ಕ್ಷೇತ್ರದ ಶಾಸಕ ಯಶ್‍ಪಾಲ್ ಸುವರ್ಣ ಇವರುಗಳನ್ನು ಗೌರವಿಸಲಾಯಿತು.

    ಒಟ್ಟು 31.ಅಧಿಕ ಶಾಲೆಗಳ 5000 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಹಸ್ತಾಂತರಿಸಲಾಯಿತು.

    ಪ್ರೌಢಶಾಲಾ ವಿಭಾಗದ ಎಸ್‍ಎಸ್‍ಎಸ್‍ಎಲ್‍ಸಿ ಅತ್ಯಧಿಕ ವಿಶಿಷ್ಟ ಶ್ರೇಣಿಯಲ್ಲಿ ಅಂಕ ಗಳಿಸಿದ 21 ವಿದ್ಯಾರ್ಥಿಗಳನ್ನು ಮತ್ತು ಪದವಿಪೂರ್ವ ಕಾಲೇಜಿನ 18 ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹ ಧನ ನೀಡಿ ಗೌರವಿಸಲಾಯಿತು.

    ಗೀತಾನಂದ ಫೌಂಡೇಶನ್ ಪ್ರತಿವರ್ಷ ನೀಡಲ್ಪಡುವ ಸಹಸ್ರ ಗಿಡ ನಡುವ ಕಾರ್ಯಕ್ರಮಕ್ಕೂ ಇದೇ ವೇಳೆ ಚಾಲನೆ ನೀಡಲಾಯಿತು.

    ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ಪ್ರಕಾಶ್ ತೋಳಾರ್, ರಾಜ್ಯ ಅಮೇಚೂರ್ ಕಬ್ಬಡಿ ಅಸೋಸಿಯೇಷನ್ ಅಧ್ಯಕ್ಷ ರಾಜೇಂದ್ರ ಸುವರ್ಣ, ಕೋಟ ಪಡುಕರೆ ಲಕ್ಷ್ಮೀಸೋಮಬಂಗೇರ ಸ.ಪ್ರ.ಕಾಲೇಜಿನ ಪ್ರಾಂಶುಪಾಲೆ ಡಾ.ಸುನೀತಾ, ಪ್ರೌಢಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ,ಪ್ರಾಥಮಿಕ ವಿಭಾಗದ ಅಧ್ಯಕ್ಷ ನಾಗರಾಜ್, ಮೊಗವೀರ ಯುವ ಸಂಘ ಕೋಟ ಘಟಕದ ಅಧ್ಯಕ್ಷ ರಂಜೀತ್ ಕುಮಾರ್, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್, ಪ್ರಾಥಮಿಕ ಶಾಲಾ ವಿಭಾಗ ಮುಖ್ಯ ಶಿಕ್ಷಕಿ ಜಯಂತಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ನಿರಂಜನ್ ನಾಯಕ್, ಉದ್ಯಮಿ ಆನಂದ ಪಿ ಸುವರ್ಣ, ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ಗೀತಾನಂದ ಫೌಂಡೇಶನ್ ಮಾನವ ಸಂಪನ್ಮೂಲ ಘಟಕದ ಮುಖ್ಯಸ್ಥ ಕೃಷ್ಣ,ಗೀತಾನಂದ ಫೌಂಡೇಶನ್ ನಿರ್ದೇಶಕಿ ಗೀತಾ ಎ ಕುಂದರ್, ಜನತಾ ಫಿಶ್ ಮಿಲ್ ನಿರ್ದೇಶಕ ಪ್ರಶಾಂತ್ ಕುಂದರ್ ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ ಸ್ವಾಗತಿಸಿದರು.

    ಕಾರ್ಯಕ್ರಮ ಸಂಯೋಜಕ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವನೆ ಸಲ್ಲಿಸಿದರು. ಪ್ರೌಢಶಾಲಾ ಸಿಕ್ಷಕ ರಾಮದಾಸ ನಾಯಕ್ ಹಾಗೂ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸತ್ಯನಾರಾಯಣ ಆಚಾರ್ ಸಾಧಕ ವಿದ್ಯಾರ್ಥಿಗಳ ಪತ್ರ ವಾಚಿಸಿದರು. ಕಾರ್ಯಕ್ರಮವನ್ನು ಪ್ರೌಢಶಾಲಾ ಶಿಕ್ಷಕ ಶ್ರೀಧರ ಶಾಸ್ತ್ರಿ ನಿರೂಪಿಸಿ ವಂದಿಸಿದರು. ಗೀತಾನಂದ ಸಮಾಜಕಾರ್ಯವಿಭಾಗದ ರವಿಕಿರಣ್ ಕೋಟ ಸಹಕರಿಸಿದರು.

  • ಕೆ-ಸಿಇಟಿ ಫಲಿತಾಂಶ-2023: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    ಕೆ-ಸಿಇಟಿ ಫಲಿತಾಂಶ-2023: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ: ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ನಡೆಯುವ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆ ಕೆ-ಸಿಇಟಿ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಐಶ್ವರ್ಯ ಖಾರ್ವಿ B.sc Agri-450,BNYS-1050, ಇಂಜಿನಿಯರಿಂಗ್-1189 ರ‍್ಯಾಂಕ್‌ ಗಳನ್ನು,ನೇಶಲ್ -ಇಂಜಿನಿಯರಿಂಗ್ 1966ನೇ ರ‍್ಯಾಂಕ್‌, ಆಯುಷ್ ಜೆ.ಸಿ- ಇಂಜಿನಿಯರಿಂಗ್ -2060ನೇ ರ‍್ಯಾಂಕ್‌, ತಿಲಕ್ ಇಂಜಿನಿಯರಿಂಗ್-2500ನೇ ರ‍್ಯಾಂಕ್‌, ಧನುಷ್ಯ-ಇಂಜಿನಿಯರಿಂಗ್-3958ನೇ ರ‍್ಯಾಂಕ್‌, ಸುಮಂತ್- ಇಂಜಿನಿಯರಿಂಗ್-4062ನೇ ರ‍್ಯಾಂಕ್‌, ಓಂಕಾರ್ ಪ್ರಭು-ಇಂಜಿನಿಯರಿಂಗ್-4203ನೇ ರ‍್ಯಾಂಕ್‌, ಸಂಪದ-ಇಂಜಿನಿಯರಿಂಗ್-5620ನೇ ರ‍್ಯಾಂಕ್‌, ತನಿಷಾ-ಇಂಜಿನಿಯರಿಂಗ್-5923ನೇ ರ‍್ಯಾಂಕ್‌
    ಶ್ರೀಶ್ ಶೆಟ್ಟಿ-6560ನೇ ರ‍್ಯಾಂಕ್‌ಗಳನ್ನು ಪಡೆದು ಅರ್ಹತೆಯನ್ನು ಪಡೆದಿರುತ್ತಾರೆ.

    100ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,40ಕ್ಕೂ ಹೆಚ್ಚು ವಿದ್ಯಾರ್ಥಿಗಳು 10,000 ಒಳಗಿನ ರ‍್ಯಾಂಕ್‌ಗಳನ್ನು ಪಡೆದಿರುತ್ತಾರೆ.

    ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

  • ಕೋಟ ಠಾಣೆಯ ಠಾಣಾಧಿಕಾರಿಯಾಗಿ ಶಂಭುಲಿಂಗಯ್ಯ ಅಧಿಕಾರ ಸ್ವೀಕಾರ

    ಕೋಟ ಠಾಣೆಯ ಠಾಣಾಧಿಕಾರಿಯಾಗಿ ಶಂಭುಲಿಂಗಯ್ಯ ಅಧಿಕಾರ ಸ್ವೀಕಾರ

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಸದಾ ಪ್ರಚಲಿತದಲ್ಲಿರು ಸಾಕಷ್ಟು ವ್ಯಾಪ್ತಿಯನ್ನು ಹೊಂದಿಕೊಂಡಿರು ಗ್ರಾಮೀಣ ಭಾಗವಾದ ಕೋಟ ಠಾಣೆಯ ಠಾಣಾಧಿಕಾರಿಯಾಗಿ ಶಂಭುಲಿಂಗಯ್ಯ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

    ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

  • ಮರವಂತೆಯಲ್ಲಿ ಭೀಕರ ರೂಪ ತಾಳಿದ ಕಡಲ್ಕೊರೆತ, ರಸ್ತೆ ಬಿರುಕು

    ಮರವಂತೆಯಲ್ಲಿ ಭೀಕರ ರೂಪ ತಾಳಿದ ಕಡಲ್ಕೊರೆತ, ರಸ್ತೆ ಬಿರುಕು

    ಮರವಂತೆ ಕಡಲ್ಕೊರೆತ ಸಮಸ್ಯೆ ತಕ್ಷಣ ಪರಿಹರಿಸಿ – ಸರ್ಕಾರಕ್ಕೆ ಶಾಸಕ ಕ ಗುರುರಾಜ್ ಆಗ್ರಹ

    ಕುಂದಾಪುರ ಮಿರರ್ ‌ಸುದ್ದಿ…

    ಮರವಂತೆ :ಬಿಪರ್ ಜಾಯ್ ಚಂಡಮಾರುತದ ಆರ್ಭಟದ ಪರಿಣಾಮ ಮರವಂತೆಯಲ್ಲಿ ಕಡಲ್ಕೊರೆತ ರೌದ್ರಾವತಾರ ತಾಳಿದೆ. ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು ಈಗಾಗಲೇ ಕಡಲಕೊರೆತ ತಡೆಗೆ ಹಾಕಿದ ಕಲ್ಲುಗಳು ಸಮುದ್ರ ಪಾಲಾಗಿದ್ದು, ಅಲೆಗಳು ಮತ್ತೆ ಮುಂದೊತ್ತಿ ಬರುತ್ತಿದ್ದು ಮರವಂತೆಯ ಕರಾವಳಿ ಸಂಪರ್ಕ ರಸ್ತೆ ಕೊಚ್ಚಿ ಹೋಗುವ ಆತಂಕ ಎದುರಾಗಿದೆ.
    ಕಳೆದ ಒಂದು ವಾರದಿಂದ ಕಡಲ ಕೊರತೆ ಕಾಣಿಸಿಕೊಂಡಿದ್ದು ನಿನ್ನೆಯಿಂದ ಅದು ಭೀಕರ ರೂಪ ತಾಳಿದೆ. ಕಳೆದ ವರ್ಷ ಕಡಲ್ಕೊರೆತದಿಂದ ಸಾಕಷ್ಟು ಹಾನಿಯಾದ ಹೊರ ಬಂದರು ಸಮೀಪದಲ್ಲಿಯೇ ಮತ್ತೆ ಅಪಾಯ ಎದುರಾಗಿದೆ. ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು ವಿದ್ಯುತ್ ಕಂಬ, ತೆಂಗಿನ ಮರಗಳು ಸೇರಿದಂತೆ ಸಮುದ್ರ ತೀರ ಪ್ರದೇಶದಲ್ಲಿ ತಡೆಗೆ ಅಡ್ಡ ಹಾಕಿದ ಕಲ್ಲುಗಳು ಕೊಚ್ಚಿಕೊಂಡು ಹೋಗುತ್ತಿದೆ. ಕರಾವಳಿ ರಸ್ತೆ ಬಿರುಕು ಕಾಣಿಸಿಕೊಂಡಿದ್ದು ಆತಂಕ ಹುಟ್ಟಿಸಿದೆ.
    ಮರವಂತೆ ಭಾಗದ ಮೀನುಗಾರರು ತೀವ್ರ ಆತಂಕದಲ್ಲಿದ್ದು ನಿರಂತರವಾಗಿ ಸಂಭವಿಸುತ್ತಿರುವ ಕಡಲ್ಕೊರೆತದಿಂದ ಅವರು ಕಂಗೆಟ್ಟು ಹೋಗಿದ್ದಾರೆ. ಇನ್ನೂ ಕೂಡಾ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗದ ಬಗ್ಗೆ ಸರ್ಕಾರ, ಜಿಲ್ಲಾಡಳಿತ ಬಗ್ಗೆ ಆಕ್ರೋಶ ವ್ಯಕ್ತ ಪಡಿಸುತ್ತಾರೆ. ಕಳೆದ ಒಂದು ವಾರದಿಂದ ಕಡಲ್ಕೊರೆತ ಕಾಣಿಸಿಕೊಂಡಿದ್ದರೂ ತುರ್ತು ಪರಿಹಾರಕ್ಕೆ ಮುಂದಾಗದ ಜಿಲ್ಲಾಡಳಿತದ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತ ಪಡಿಸುತ್ತಿದ್ದಾರೆ.
    ಬೆಂಗಳೂರು ಪ್ರವಾಸದಲ್ಲಿದ್ದ ಸ್ಥಳೀಯ ಶಾಸಕ ಗುರುರಾಜ ಗಂಟಿಹೊಳೆ ಅವರು ಪ್ರವಾಸ ರದ್ದು ಪಡಿಸಿ ಶುಕ್ರವಾರ ಬೆಳಿಗ್ಗೆ ಮರವಂತೆಗೆ ಆಗಮಿಸಿ, ಸ್ಥಳದಲ್ಲಿ ಮೊಕ್ಕಂ ಹೂಡಿ, ಮೀನುಗಾರರಿಗೆ ಧೈರ್ಯ ತುಂಬುತ್ತಿದ್ದಾರೆ. ಸಂಬಂಧಪಟ್ಟ ಸಚಿವರು, ಅಧಿಕಾರಿಗಳನ್ನು ಸಂಪರ್ಕಿಸಿ ತಕ್ಷಣ ತುರ್ತು ಪರಿಹಾರಕ್ಕೆ ಕೂಡಲೆ ಸ್ಪಂದಿಸುವಂತೆ ದೂರವಾಣಿ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದಾರೆ.
    ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಗುರುರಾಜ ಗಂಟಿಹೊಳೆ ಅವರು, ಉಡುಪಿ ಜಿಲ್ಲೆಯ ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಕಡಲ್ಕೊರೆತ ಸಮಸ್ಯೆ ಎದುರಿಸುವುದು ಬೈಂದೂರು ಕ್ಷೇತ್ರ. ಮರವಂತೆಯಲ್ಲಿ ನಿರಂತರವಾಗಿ ಕಡಲ್ಕೊರೆತ ಸಂಭವಿಸುತ್ತಿದೆ. ಈ ಬಗ್ಗೆ ಜಿಲ್ಲಧಿಕಾರಿಗಳು, ಅಧಿಕಾರಿಗಳನ್ನು ಪ್ರಶ್ನಿಸಿದರೆ ಅವರು ತಮ್ಮ ಅಸಹಾಯಕತೆ ತೊಡಿಕೊಳ್ಳುತ್ತಿದ್ದಾರೆ. ಈಗಾಗಲೇ ಸರ್ಕಾರದ ಮೀನುಗಾರಿಕಾ ಸಚಿವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಅವರ ಗಮನಕ್ಕೆ ತಂದಿದ್ದೇನೆ. ಅವರು ಸ್ಥಳಕ್ಕೆ ಇಂದು ಭೇಟಿ ಕೊಡುವ ಸಾಧ್ಯತೆ ಇದೆ. ಸರ್ಕಾರ ತಕ್ಷಣ ಮರವಂತೆಯಲ್ಲಿ ಆಗುತ್ತಿರುವ ಕಡಲ್ಕೊರೆತ ಸಮಸ್ಯೆಗೆ ಸ್ಪಂದಿಸಬೇಕು. ಶಾಶ್ವತವಾಗಿ ಪರಿಹಾರ ದೊರಕಿಸಿಕೊಡಬೇಕು. ಈಗ ತಕ್ಷಣಕ್ಕೆ ಆಗುವ ಹಾನಿಯನ್ನು ತಪ್ಪಿಸುವ ನಿಟ್ಟಿನಲ್ಲಿ ತುರ್ತು ಪರಿಹಾರಕ್ಕೆ ಕ್ರಮಕ್ಕೆ ಸೂಚಿಸಬೇಕು ಎಂದರು.
    ಮರವಂತೆಯ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷ ವಾಸುದೇವ ಖಾರ್ವಿ ಮಾತನಾಡಿ, ಮರವಂತೆಯಲ್ಲಿ ಕಡಲ್ಕೊರೆತ ಸಮಸ್ಯೆ ಇಂದು ನಿನ್ನೆಯದಲ್ಲ. ಕಳೆದ ವರ್ಷ ತೌಕ್ತೆ ಚಂಡಮಾರುತ ಪರಿಣಾಮ 100 ಮೀಟರ್ ಪ್ರದೇಶ ಕೊಚ್ಚಿಕೊಂಡು ಹೋಗಿದೆ. ದೋಣಿ ಶೆಡ್‍ಗಳು ನೀರುಪಾಲಾಗಿದೆ. ನೂರಾರು ತೆಂಗಿನಮರಗಳು ಸಮುದ್ರಪಾಲಾಗಿದೆ. ಆಗ ನಾವೇ ಸ್ಥಳೀಯವಾಗಿ ಮರಳು ಚೀಲಗಳನ್ನು ಇಟ್ಟು ಕೊರೆತ ತಡೆಗೆ ಪ್ರಯತ್ನ ಮಾಡಿದ್ದೇವು. ಕಡಲ್ಕೊರೆತ ತೀವ್ರ ಸಂಭವಿಸಿದಾಗ ಸರ್ಕಾರವೇ ಇಲ್ಲಿಗೆ ಬರುತ್ತದೆ. ಮುಖ್ಯಮಂತ್ರಿಗಳು ಬಂದಿದ್ದಾರೆ. ಸಂಬಂಧಪಟ್ಟ ಎಲ್ಲಾ ಸಚಿವರು ಬಂದಿದ್ದಾರೆ. ಆದರೆ ಇನ್ನೂ ಕೂಡಾ ಶಾಶ್ವತ ಪರಿಹಾರ ಮಾಡುವ ಕೆಲಸ ಮಾತ್ರ ಯಾರೂ ಮಾಡಿಲ್ಲ ಎಂದರು.
    ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ತಾ.ಪಂ. ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಸುರೇಶ್ ಶೆಟ್ಟಿ ಬಿ.ಎಸ್., ಅಶೋಕ್ ಶೆಟ್ಟಿ, ಅನಿತಾ ಆರ್.ಕೆ., ಮೀನುಗಾರರ ಮುಖಂಡರು ಉಪಸ್ಥಿತರಿದ್ದರು.

  • ಗಂಗೊಳ್ಳಿ :ಎಸ್‍ಎಸ್‍ಎಲ್‍ಸಿ ಮರು ಮೌಲ್ಯಮಾಪನದಲ್ಲಿ ರಶ್ಮಿ ರಾಜ್ಯಕ್ಕೆ 5ನೇ ಸ್ಥಾನ

    ಗಂಗೊಳ್ಳಿ :ಎಸ್‍ಎಸ್‍ಎಲ್‍ಸಿ ಮರು ಮೌಲ್ಯಮಾಪನದಲ್ಲಿ ರಶ್ಮಿ ರಾಜ್ಯಕ್ಕೆ 5ನೇ ಸ್ಥಾನ

    ಕುಂದಾಪುರ ಮಿರರ್ ಸುದ್ದಿ…

    ಗಂಗೊಳ್ಳಿ : ಎಸ್‍ಎಸ್‍ಎಲ್‍ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿಯಾಗಿ 7 ಅಂಕಗಳನ್ನು ಪಡೆದ ರಶ್ಮಿ 621 ಅಂಕಗಳನ್ನು ಪಡೆದು ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದಾಳೆ. ಈಕೆ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಪ್ರಸ್ತುತ ತ್ರಾಸಿ ನಿವಾಸಿ ಗುಂಡ್ಮಿ ರಾಘವೇಂದ್ರ ಭಟ್ ಮತ್ತು ಸುಮಂಗಲ ದಂಪತಿಯ ಪುತ್ರಿ.