Category: ಸುದ್ದಿ

  • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಗ್ನಿ ಸುರಕ್ಷತೆ ಅರಿವು ಕಾರ್ಯಾಗಾರ

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಗ್ನಿ ಸುರಕ್ಷತೆ ಅರಿವು ಕಾರ್ಯಾಗಾರ

    ಕುಂದಾಪುರ ಮಿರರ್ ‌ಸುದ್ದಿ…

    ಕುಂದಾಪುರ: ಭಂಡಾರ್ ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ, ಇಲ್ಲಿನ ಐಕ್ಯೂಎಸಿ, ಯೂತ್ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಶಾಖೆ ಅವರ ಸಹಯೋಗದಲ್ಲಿ ಅಗ್ನಿ ಸುರಕ್ಷತೆ ಅರಿವು ಕಾರ್ಯಕ್ರಮ ನಡೆಯಿತು.

    ಕೋಣಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಬಾಲಕೃಷ್ಣ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಅಗ್ನಿ ಸುರಕ್ಷತೆಯ ಕುರಿತು ಅರಿವು ಮೂಡಿಸಿದರು. ಭಂಡಾರಕಾರ್ಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎನ್.ಪಿ ನಾರಾಯಣ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿ ಕೃಷ್ಣಾನಂದ. ಟಿ. ಗೌಡ, ಐಆರ್ ಸಿ ಎಸ್ ಕುಂದಾಪುರ ತಾಲೂಕು ಶಾಖೆಯ ಅಧ್ಯಕ್ಷ ಎಸ್. ಜಯಕರ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರ ಆಚಾರಿ, ಐಕ್ಯೂಎಸಿ ಸಂಯೋಜಕ ಡಾ. ಕೆ. ಎಮ್. ವಿಜಯ್ ಕುಮಾರ್, ಕಾರ್ಯಕ್ರಮ ಸಂಯೋಜಕ ಕಾಲೇಜಿನ ರೆಡ್ ಕ್ರಾಸ್ ಘಟಕದ ಪ್ರೊ.ಸತ್ಯನಾರಾಯಣ, ಎನ್ಎಸ್ಎಸ್ ಯೋಜನಾಧಿಕಾರಿ ರಾಮಚಂದ್ರ ಆಚಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅರ್ಪಿತಾ ಸ್ವಾಗತಿಸಿ, ವಿದ್ಯಾರ್ಥಿನಿ ಸೊನಾಲಿ ನಿರೂಪಿಸಿ ಮತ್ತು ವಿದ್ಯಾರ್ಥಿ ಪ್ರಜ್ವಲ್ ವಂದಿಸಿದರು.

  • ಉಡುಪಿ :ಜೂನ್ 1 ರಿಂದ ಜುಲೈ 31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    ಉಡುಪಿ :ಜೂನ್ 1 ರಿಂದ ಜುಲೈ 31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ : ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.

    ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

    ಮೀನುಗಾರಿಕೆ ನಿಷೇಧದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ.

    ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಶೃಂಗೇರಿ ಬೆಳಂದೂರಿನಲ್ಲಿ ವಿಶ್ವವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ಪ್ರದರ್ಶನ

    ಶೃಂಗೇರಿ ಬೆಳಂದೂರಿನಲ್ಲಿ ವಿಶ್ವವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ಪ್ರದರ್ಶನ

    ಕುಂದಾಪುರ ಮಿರರ್ ಸುದ್ದಿ…

    ಕೋಟ :ತಾಳಮದ್ದಳೆ ಅರ್ಥಧಾರಿ, ಪ್ರಸಂಗ ಕವಿ, ಪ್ರಾಧ್ಯಾಪಕ ಪವನ್ ಕಿರಣ್‍ಕೆರೆ ಮತ್ತು ಆಶಾ ದಂಪತಿಗಳ ಸುಪುತ್ರ ನಿನಾದ ಕಿರಣ್‍ಕೆರೆಯವರ ಬ್ರಹ್ಮೋಪದೇಶ ಶುಭಾವಸರದಲ್ಲಿ ಶೃಂಗೇರಿ ಸಮೀಪದ ಬೆಳಂದೂರಿನಲ್ಲಿ ವಿಶ್ವವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆ ನಿರ್ದೇಶನದಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ಕಲಾವಿದರಿಂದ ದಿವಂಗತ ಕಾರ್ಕಡ ಶ್ರೀನಿವಾಸ ಉಡುಪ ರಚಿತ ‘ವೀರ ವೃಷಸೇನ’ ಯಕ್ಷಗಾನ ಪ್ರದರ್ಶನ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಸುಜಯೀಂದ್ರ ಹಂದೆ, ಮದ್ದಳೆಯಲ್ಲಿ ರಾಘವೇಂದ್ರ ಹೆಗಡೆ ಯಲ್ಲಾಪುರ, ಚಂಡೆಯಲ್ಲಿ ಸುದೀಪ ಉರಾಳ, ಮುಮ್ಮೇಳದಲ್ಲಿ ಆರ್ಯನ್, ಮನೋಜ್, ಮನೀಷ್, ಚಿನ್ಮಯ್ ಮಯ್ಯ, ಸಮೀಕ್ಷಿತ್ ಆಚಾರ್ ಮತ್ತು ಪ್ರಸಾಧನದಲ್ಲಿ ಸುದರ್ಶನ ಉರಾಳ, ಸುಹಾಸ ಕರಬ, ಆದಿತ್ಯ ಹೊಳ್ಳ. ಮನೋಜ್ ಆಚಾರ್ ಭಾಗವಹಿಸಿದ್ದರು.

  • ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಡುಗೆ

    ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಡುಗೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಸರಕಾರಿ ಸಮುದಾಯ ಆರೋಗ್ಯ ಕೇಂದ್ರ ಕೋಟ ಇಲ್ಲಿನ ಮುಖ್ಯ ವ್ಯೆದ್ಯಾಧಿಕಾರಿಯವರ ಕೋರಿಕೆಯ ಮೆರೆಗೆ ಸುಮಾರು ಮೂರು ಲಕ್ಷ ವೆಚ್ಚದ ಮಲ್ಟಿ ಪ್ಯಾರ ಪೆಶೆಂಟ್ ಮಾನಿಟರ್, ಡಿಪೆಬ್ರಿಲೇಟರ್ ಮತ್ತು ಪುಡ್ ಟ್ರಾಲಿಯನ್ನು ಕೋಟ ಮಣೂರು ಗೀತಾನಂದ ಪೌಂಡೇಶನ್ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಡುಗೆಯಾಗಿ ನೀಡಲಾಯಿತು.

    ಈ ಸಂದರ್ಭದಲ್ಲಿ ಗೀತಾನಂದ ಟ್ರಸ್ಟ್‌ನ ಪ್ರವರ್ತಕರಾದ ಆನಂದ್.ಸಿ ಕುಂದರ್ ಅದನ್ನು ಡಾ.ವಿಶ್ವನಾಥ ಅವರಿಗೆ ಹಸ್ತಾಂತರಿಸಿದರು. ಜನತಾ ಸಂಸ್ಥೆಯ ವ್ಯವಸ್ಥಾಪಕ ಶ್ರೀನಿವಾಸ ಕುಂದರ್ ಮತ್ತು ಗೀತಾನಂದ ಪೌಂಡೇಶನ್ ಸಂಯೋಜಕ ರವಿಕಿರಣ್ ಕೋಟ ಉಪಸ್ಥಿತರಿದ್ದರು.

  • ಗುಂಡ್ಮಿ- ಪದ್ಮಶಾಲಿ ಸಮಾಜ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

    ಗುಂಡ್ಮಿ- ಪದ್ಮಶಾಲಿ ಸಮಾಜ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪದ್ಮಶಾಲಿ ಸಮಾಜ ಸೇವಾ ಸಂಘ ಸಾಸ್ತಾನ ವಲಯ ಇದರ 19 ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ.21ರಂದು ಶ್ರೀ ವೀರಭದ್ರ ದುರ್ಗಾ ಸಹಪರಿವಾರ ಚಿಕ್ಕು ದೇವಸ್ಥಾನ ಗುಂಡ್ಮಿ ಸಾಸ್ತಾನ ಇಲ್ಲಿ ಜರುಗಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದ್ಮಶಾಲಿ ಸಮಾಜ ಸೇವಾ ಸಂಘ ಸಾಸ್ತಾನ ವಲಯ ಅಧ್ಯಕ್ಷ ಭಾಸ್ಕರ ಶೆಟ್ಟಿಗಾರ್ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಸಾಲಿಕೇರಿ ಶ್ರೀ ಬ್ರಹ್ಮಲಿಂಗ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ.ಎಂ.ಶೆಟ್ಟಿಗಾರ್, ಮೈಸೂರು ರೈಲ್ವೇ ಇಲಾಖೆಯ ಸುರೇಶ್ ಶೆಟ್ಟಿಗಾರ್ ಗುಂಡ್ಮಿ , ಉಡುಪಿಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿವೃತ್ತ ಎ.ಜಿ.ಎಂ ವಿಠಲ ಶೆಟ್ಟಿಗಾರ್ ಗುಂಡ್ಮಿ ಉಪಸ್ಥಿತರಿದ್ದರು.

    19 ವರ್ಷಗಳಿಂದ ನಿರಂತರ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದ ಪ್ರಾಯೋಜಕ ಉದ್ಯಮಿ ಮಾಧವ ಶೆಟ್ಟಿಗಾರ್, ಇವರು ಸುಮಾರು 15 ಸಾವಿರ ವೆಚ್ಚದಲ್ಲಿ ಕೊಡ ಮಾಡಿದ ಪುಸ್ತಕಗಳನ್ನು ಸುಮಾರು 50 ವಿದ್ಯಾರ್ಥಿಗಳಿಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮ್ಯಾರಥಾನ್ ಓಟಗಾರ ವಿಠಲ ಶೆಟ್ಟಿಗಾರ್ ಸಾಸ್ತಾನ ಇವರನ್ನು ಗೌರವಿಸಲಾಯಿತು. ಸಂಘಟನೆಯ ಪ್ರಮುಖರಾದ ಪ್ರಕಾಶ ಶೆಟ್ಟಿಗಾರ್ ಸಾಲಿಗ್ರಾಮ ಸ್ವಾಗತಿಸಿದರು. ಶ್ರೀನಿವಾಸ ಶೆಟ್ಟಿಗಾರ್ ಶೆಟ್ಟಿಗಾರ್ ಗುಂಡ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

  • ಕೋಟ :ಸಹಕಾರಿ ಕುಟುಂಬ ಸಮ್ಮಿಲನ ಮತ್ತು ಸಿಬ್ಬಂದಿ ಬೀಳ್ಕೊಡುಗೆ ಸಮಾರಂಭ

    ಕೋಟ :ಸಹಕಾರಿ ಕುಟುಂಬ ಸಮ್ಮಿಲನ ಮತ್ತು ಸಿಬ್ಬಂದಿ ಬೀಳ್ಕೊಡುಗೆ ಸಮಾರಂಭ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘ ನಿ. ಕೋಟ, ಇವರ ಆಶ್ರಯದಲ್ಲಿ ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಯವರ ಕುಟುಂಬ ಸದಸ್ಯರಿಗಾಗಿ “ಸಹಕಾರಿ ಕುಟುಂಬ ಸಮ್ಮಿಲನ” ಮತ್ತು ಸಂಘದ ಸೇವೆಯಿಂದ ಇತ್ತೀಚೆಗೆ ನಿವೃತ್ತರಾಗಿರುವ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕುಮಾರ ಇವರಿಗೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಂದ “ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ” ಮೇ. 21ರಂದು ಸಂಘದ ಪ್ರಧಾನ ಕಛೇರಿಯ ಬಿ. ಸಿ. ಹೊಳ್ಳ ಸಹಕಾರ ಸಭಾಭವನದಲ್ಲಿ ಜರಗಿತು.

    ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಕೆಥೋಲಿಕ್ ಕ್ರೆಡಿಟ್ ಕೋ-ಆಪ್‍ರೇಟಿವ್ ಸೊಸೈಟಿ, ಬ್ರಹ್ಮಾವರ ಇದರ ಅಧ್ಯಕ್ಷ ವೆಲೇರಿಯನ್ ಮೆನೇಜಸ್ ಇವರು ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು ಮತ್ತು ನಿವೃತ್ತ ಸಿಬ್ಬಂದಿಯವರಿಗೆ ಶುಭ ಹಾರೈಸಿದರು.

    ಪ್ರಜ್ಞಾ ವಿದ್ಯಾ ಸಂಸ್ಥೆ ಕೋಟ ಇದರ ಪ್ರಾಂಶುಪಾಲ ಪ್ರಕಾಶ್ ಭಟ್ ಮತ್ತು ವೆಂಕಟೇಶ ಭಟ್, ಸಂಘದ ಉಪಾಧ್ಯಕ್ಷರಾದ ಜಿ. ರಾಜೀವ ದೇವಾಡಿಗ, ನಿರ್ದೇಶಕರಾದ ಟಿ. ಮಂಜುನಾಥ, ಡಾ. ಕೃಷ್ಣ ಕಾಂಚನ್, ಮಹೇಶ ಶೆಟ್ಟಿ, ಪ್ರೇಮಾ ಎಸ್. ಪೂಜಾರಿ, ರಶ್ಮಿತಾ, ಗೀತಾ ಶಂಭು ಪೂಜಾರಿ, ಅಚ್ಯುತ ಪೂಜಾರಿ, ಸಂಘದ ಸಲಹಾ ಸಮಿತಿ ಸದಸ್ಯರು, ನಿವೃತ್ತ ಮತ್ತು ಹಾಲಿ ಸಿಬ್ಬಂದಿಯವರು, ಸಿಬ್ಬಂದಿಯವರ ಕುಟುಂಬ ಸದಸ್ಯರು, ಆಭರಣ ಬೆಲೆ ನಿರ್ಣಾಯಕರು, ಭಾಗ್ಯನಿಧಿ ಸಂಗ್ರಾಹಕರು ನಿವೃತ್ತ ಸಿಬ್ಬಂದಿಗಳು, ಕುಮಾರರವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ ಸುದೀರ್ಘ 35 ವರ್ಷ ಸೇವೆ ಸಲ್ಲಿಸಿ ಮೇ.30ರಂದು ನಿವೃತ್ತರಾಗಿರುವ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕುಮಾರ ಇವರನ್ನು ಸಭಾ ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

    ಸಂಘದ ಸಿಬ್ಬಂದಿ ಸಹನಾ ಪ್ರಾರ್ಥಿಸಿದರು,ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ ಧನ್ಯವಾದ ಸಮರ್ಪಿಸಿದರು. ಸಭಾ ಕಾರ್ಯಕ್ರಮದ ನಂತರ ಪ್ರಕಾಶ್ ಭಟ್ ಮತ್ತು ವೆಂಕಟೇಶ ಭಟ್ ಇವರಿಂದ ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಯವರು ಮತ್ತು ಕುಟುಂಬ ಸದಸ್ಯರಿಗಾಗಿ “ಸಹಕಾರಿ ಕುಟುಂಬ ಸಮ್ಮಿಲನ” ಕಾರ್ಯಕ್ರಮ ನಡೆಯಿತು.

  • ಸಾಲಿಗ್ರಾಮ – ನನ್ನ ಲೈಫ್ ನನ್ನ ಸ್ವಚ್ಛ ನಗರ ಅಭಿಯಾನ ಕಾರ್ಯಕ್ರಮ

    ಸಾಲಿಗ್ರಾಮ – ನನ್ನ ಲೈಫ್ ನನ್ನ ಸ್ವಚ್ಛ ನಗರ ಅಭಿಯಾನ ಕಾರ್ಯಕ್ರಮ

    ಕುಂದಾಪುರ ಮಿರರ್ ‌ಸುದ್ದಿ…

    ಕೋಟ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ” ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ, ಮೇ 20ರಿಂದ ಜೂ 5ರ ವರೆಗೆ ನೆಡೆಸಲಾಗುವ ” ನನ್ನ ಲೈಫ್ ನನ್ನ ಸ್ವಚ್ಛ ನಗರ ಅಭಿಯಾನ ಕಾರ್ಯಕ್ರಮ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿ ಎದುರು ಕೇಂದ್ರಗಳನ್ನು ತೆರೆಯುವ ಮೂಲಕ ಶನಿವಾರ ಚಾಲನೆ ನೀಡಲಾಯಿತು.

    ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಇಂದುಶ್ರೀ ಮಾತಾನಾಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ಆಯ್ದ ಮರುಬಳಕೆಯ ಮಸ್ತುಗಳನ್ನು ಸ್ವಯಂಪ್ರೇರಿತರಾಗಿ ಆರ್. ಆರ್. ಆರ್ ಕೇಂದ್ರಕ್ಕೆ ನೀಡುವಂತೆ ವಿನಂತಿಸಿದರು.

    ಮೇ 20 ರಿಂದ ವಿಶ್ವ ಪರಿಸರ ದಿನವಾದ ಜೂನ್ 5 ರವರೆಗೆ ಜನರು ತಮ್ಮಲ್ಲಿರುವ ಮರುಬಳಕೆಯ ತ್ಯಾಜ್ಯವನ್ನು ನೀಡಿ, ಬದಲಿ ವಸ್ತುಗಳನ್ನು ಪಡೆದು ಸ್ವಚ್ಛ ಸಾಲಿಗ್ರಾಮ ಪರಿಕಲ್ಪನೆಯನ್ನು ಸಾಕಾರಗೊಳಿಸಬೇಕಾಗಿ ಕರೆನೀಡಿದರು.

    ಆರ್ ಆರ್ ಆರ್ ಕೇಂದ್ರದ ಬಗ್ಗೆ ಮಾಹಿತಿ
    ಪಟ್ಟಣ ಪಂಚಾಯತ್ ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ ಯೋಜನೆಯ ಮಾಹಿತಿ ನೀಡಿ, ಕೇಂದ್ರ ಸರಕಾದ ನಿರ್ದೇಶನದಂತೆ ತ್ಯಾಜ್ಯ ಪ್ರಮಾಣ ಕಡಿಮೆ (ರೆಡ್ಯೂಸ್) , ಮರುಬಳಕೆ (ರೀಯೂಸ್), ಪುನರ್ ಬಳಕೆ ( ರಿ ಸೈಕಲ್) ವಿಚಾರಗಳನ್ನು ಒಳಗೊಂಡ ಅಭಿಯಾನ ಇದಾಗಿದ್ದು, ಆರ್ ಆರ್ ಆರ್ ಕೇಂದ್ರಕ್ಕೆ ಮರುಬಳಕೆಯ ಆರು ವಸ್ತುಗಳನ್ನು ನೀಡಲು ಅವಕಾಶ ನೀಡಲಾತ್ತಿದೆ, ನೀಡಿದ ವಸ್ತುವನ್ನು ದಾಖಲಿಸಿ, ಸೂಕ್ತ ಬದಲಿ ಪ್ರೋತ್ಸಾಹ ವಸ್ತುವನ್ನು ನೀಡಲಾಗುತ್ತದೆ. ಇದಲ್ಲದೇ ಹಸ್ತಾಕ್ಷರ ಅಭಿಯಾನ, ಸೆಲ್ಫೀ ಬೋರ್ಡ್ ಅಭಿಯಾನವನ್ನೂ ಅಳವಡಿಸಲಾಗಿದೆ ಎಂಬ ಮಾಹಿತಿ ನೀಡಿದರು. ಪಟ್ಟಣ ಪಂಚಾಯತ್‍ನ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

  • ಮೇ.23ಕ್ಕೆ ಕೋಟ ದಿನೇಶ್ ಗಾಣಿಗ ಮಾಸ್ಟರ್ ಅಥ್ಲೆಟಿಕ್‍ಗಾಗಿ ಮಲೇಷಿಯಾ ಸಿಂಗಾಪುರ್ ಪಯಣ

    ಮೇ.23ಕ್ಕೆ ಕೋಟ ದಿನೇಶ್ ಗಾಣಿಗ ಮಾಸ್ಟರ್ ಅಥ್ಲೆಟಿಕ್‍ಗಾಗಿ ಮಲೇಷಿಯಾ ಸಿಂಗಾಪುರ್ ಪಯಣ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಪಟು ಕೋಟ ದಿನೇಶ್ ಗಾಣಿಗ ಮಲೇಷಿಯಾ ಸಿಂಗಾಪುರ್‍ನಲ್ಲಿ ಇದೇ 26,ಮತ್ತು 27ರಂದು ನಡೆಯುವ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು ಮೇ.23ರಂದು ಮಲೇಷಿಯಾಗೆ ಪ್ರಯಾಣ ಬೆಳೆಸಲಿದ್ದಾರೆ.

    2019 ಸಿಂಗಾಪುರ್ ಒಂದು ಗೋಲ್ಡ್ ಒಂದು ಸಿಲ್ವರ್,2022 ಶ್ರೀಲಂಕಾ ಒಂದು ಸಿಲ್ವರ್ ಮಾಸ್ಟರ್ ಅಥ್ಲೆಟಿಕ್‍ನಲ್ಲಿ ಪಡೆದಿರುವುದು ಇಲ್ಲಿ ಸ್ಮರಿಸಬಹುದಾಗಿದೆ. ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿಯ ಪ್ರದಾನಕಾರ್ಯದರ್ಶಿಯಾಗಿ ಶ್ರೀಯುತರು ಸೇವೆ ಸಲ್ಲಿಸುತ್ತಿದ್ದಾರೆ.

  • ಆನಂದ್ ಸಿ ಕುಂದರ್ 75ನೇ ಹುಟ್ಟುಹಬ್ಬದ ಪ್ರಯುಕ್ತ ಪಂಚವರ್ಣ ಸಂಸ್ಥೆಯ 164ನೇ ವಾರದ ಸ್ವಚ್ಛತಾ ಅಭಿಯಾನ

    ಆನಂದ್ ಸಿ ಕುಂದರ್ 75ನೇ ಹುಟ್ಟುಹಬ್ಬದ ಪ್ರಯುಕ್ತ ಪಂಚವರ್ಣ ಸಂಸ್ಥೆಯ 164ನೇ ವಾರದ ಸ್ವಚ್ಛತಾ ಅಭಿಯಾನ

    ಪರಿಸರದ ಜಾಗೃತಿ ಪ್ರತಿಯೊಬ್ಬರಲ್ಲೂ ಮೂಡಬೇಕು – ಪರಿಸರ ಇಲಾಖಾಧಿಕಾರಿ ಪ್ರಮೀಳಾ

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಪರಿಸರದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಬೇಕು ಆ ಮೂಲಕ ಮನೆ ಮನೆಯಲ್ಲಿ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಉಡುಪಿ ಪರಿಸರ ಇಲಾಖೆಯ ಉಪ ಅಧಿಕಾರಿ ಪ್ರಮೀಳಾ ಹೇಳಿದರು.

    ಕೋಟದ ಪಂಚವರ್ಣ ಯುವಕ ಮಂಡಲ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ, ಯಕ್ಷಸೌರಭ ಕಲಾರಂಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಸಹಯೋಗದೊಂದಿಗೆ 164 ವಾರದ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಸಮಾಜಸೇವಕ ಆನಂದ್ ಸಿ ಕುಂದರ್ 75ನೇ ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿ ಒಂದು ತಿಂಗಳ ಕಾಲ ಬೀಚ್ ಸ್ವಚ್ಛತಾ ಕಾರ್ಯಕ್ರಮ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿ ಕಂಡ ಕಂಡಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವ ಕೈಗಳಿಗೆ ಕಡಿವಾಣ ಅತ್ಯವಶ್ಯಕ, ಈ ದಿಸೆಯಲ್ಲಿ ಸ್ಥಳೀಯಾಡಳಿತಗಳು ಕ್ರೀಯಾತ್ವಮಕವಾಗಿ ಕಾರ್ಯನಿರ್ವಹಿಸಿದರೆ ಯಶಸ್ಸು ಪಡೆಯಲು ಸಾಧ್ಯ,ಪರಿಸರದ ಬಗ್ಗೆ ಕಾಳಜಿ ವಹಿಸುವ ಆನಂದ್ ಸಿ ಕುಂದರ್ ಹಾಗೂ ಇಲ್ಲಿನ ಸಂಘಸಂಸ್ಥೆಗಳ ಕಾರ್ಯ ನಿಜಕ್ಕೂ ಶ್ಲಾಘನೀಯ, ಪರಿಸರ ಸಂರಕ್ಷಿಸುವ ಕಾರ್ಯಕ್ರಮ ಹೆಚ್ಚು ಹೆಚ್ಚು ಪ್ರಚುರಪಡಿಸಬೇಕಾದ ಅಗತ್ಯತೆಯನ್ನು ಒತ್ತಿಹೇಳಿದರು.

    ಕಾರ್ಯಕ್ರಮದಲ್ಲಿ ಆನಂದ್ ಸಿ ಕುಂದರ್ ರವರಿಗೆ ಅಭಿನಂದನೆ ಸಲ್ಲಿಸಿ ಬೀಚ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.

    ಕಾರ್ಯಕ್ರಮದಲ್ಲಿ ಪರಿಸರ ಇಲಾಖೆಯ ಸಹಾಯಕ ಅಧಿಕಾರಿ ಅಮೃತ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ವಸಂತಿ ಹಂದಟ್ಟು, ಜನತಾ ಸಂಸ್ಥೆಯ ವ್ಯವಸ್ಥಾಪಕ ಶ್ರೀನಿವಾಸ ಕುಂದರ್, ಗೀತಾನಂದ ಫೌಂಡೇಶನ್ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇದರ ಸುಜಾತ ಬಾಯರಿ,ಯಕ್ಷಸೌರಭ ಕಲಾರಂಗದ ಕೋಟ ಅಧ್ಯಕ್ಷ ಪ್ರಶಾಂತ್ ಪಡುಕರೆ ಮತ್ತಿತರರು ಉಪಸ್ಥಿತರಿದ್ದರು.ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

  • ಕಾರ್ಕಡ- ಪಂಚವರ್ಣ ಸಂಸ್ಥೆಯ ರೈತರೆಡೆಗೆ ನಮ್ಮ ನಡಿಗೆ 25ನೇ ಮಾಲಿಕೆ

    ಕಾರ್ಕಡ- ಪಂಚವರ್ಣ ಸಂಸ್ಥೆಯ ರೈತರೆಡೆಗೆ ನಮ್ಮ ನಡಿಗೆ 25ನೇ ಮಾಲಿಕೆ

    ರೈತರೆಡೆಗೆ ನಮ್ಮ ನಡೆ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ – ನರಸಿಂಹ ನಕ್ಷತ್ರಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಸಾರ್ವಜನಿಕ ವೇದಿಕೆಯಲ್ಲಿ ಗುರುತಿಸುತ್ತಾರೆ ಆದರೆ ಕೃಷಿಕರನ್ನು ಗುರುತಿಸುವ ಕಾಯಕ ಬಲು ಅಪರೂಪ, ಅದರಲ್ಲಿ ಸಂಘ ಸಂಸ್ಥೆಗಳು ರೈತರನ್ನು ಗುರುತಿಸುವುದೇ ಮಹತ್ವವಾದ ಕಾರ್ಯ ಎಂದು ಕೃಷಿ ಕ್ಷೇತ್ರದ ಅಧ್ಯಯಶೀಲರಾದ ನರಸಿಂಹ ನಕ್ಷತ್ರಿ ಹೇಳಿದ್ದಾರೆ.

    ಶನಿವಾರ ಕೋಟ ಪಂಚವರ್ಣ ಯುವಕ ಮಂಡಲ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತ್ರತ್ವದಲ್ಲಿ ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೆಳೆಯರ ಬಳಗ ಕಾರ್ಕಡ, ಗೀತಾನಂದ ಫೌಂಡೇಶನ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ ಇವರ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 25ನೇ ಮಾಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ಪ್ರಸ್ತುತ ವಿದ್ಯಾಮಾನಗಳಲ್ಲಿ ಕೃಷಿಯಲ್ಲಿ ಮಧ್ಯವರ್ತಿಗಳ ಹಾವಳಿ ವಿಪರೀತವಾಗಿದೆ ಆ ಮೂಲಕ ರೈತರಿಗೆ ನೈಜ ಬೆಲೆ ಸಿಗದೆ ಅಸಾಯಕರಾಗುತ್ತಿದ್ದಾರೆ.
    ಬೆಳೆಗಳಲ್ಲಿ ನಾನಾ ರೀತಿಯ ಬೆಳೆಗಳನ್ನು ಬೆಳೆಯಬೇಕು ಆ ಮೂಲಕ ಲಾಭದಾಯಕವಾಗಿಸಲು ಪ್ರಯತ್ನಿಸಬೇಕು,ಕೃಷಿ ಕ್ಷೇತ್ರ ಖಾಸಗಿಕರಣವಾಗಲು ಬಿಡಬಾರದು, ನಮ್ಮ ದೇಶ ಕೃಷಿ ಅವಲಂಬಿತ ರಾಷ್ಟ್ರ ಉಳಿಯಬೇಕು ವಿನಹ ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುವ ರಾಷ್ಟ್ರ ವಾಗಬಾರದು, ಆಮದು ಮಾಡಿಕೊಂಡ ಪದಾರ್ಥಗಳು ವಿಷಕಾರಿ ಎಂಬುವುದನ್ನು ಮನಗಾಣಬೇಕು ಈ ದಿಸೆಯಲ್ಲಿ ನಾವುಗಳು ಮನೆಯಲ್ಲೆ ಆಹಾರ ಬೆಳೆಗಳನ್ನು ಬೆಳಸುವಂತ್ತಾಗಬೇಕು ಇದರಿಂದ ಆರೋಗ್ಯವಂತ ಸಮಾಜ ನಿರ್ಮಾಣಮಾಡಲು ಸಾಧ್ಯ, ರೈತರೆಡೆಗೆ ನಮ್ಮ ನಡೆ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ ಕಾರ್ಯಕ್ರಮ,ಕೃಷಿಯಲ್ಲಿ ಯುವ ಸಮೂಹ ಹೆಚ್ಚು ಹೆಚ್ಚು ತೊಡಗಿಕೊಂಡು ಚಂದ್ರ ಕಾರ್ಕಡರಂತೆ ಸಿದ್ಧಗೊಳ್ಳಬೇಕು ಎಂದು ಆಶಿಸಿದರು.

    ಈ ಸಂದರ್ಭದಲ್ಲಿ ಸಾಲಿಗ್ರಾಮದ ಚಂದ್ರ ಕಾರ್ಕಡ ಇವರಿಗೆ ಕೃಷಿ ಪರಿಕರ ಇತ್ತು ಗೌರವಿಸಲಾಯಿತು.

    ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಗುತ್ತಿಗೆದಾರ ವಿಶ್ವೇಶ್ವರ ಹೊಳ್ಳ ಕಾರ್ಕಡ,ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಪುಷ್ಭಾ ಕೆ ಹಂದಟ್ಟು, ಸಾಲಿಗ್ರಾಮ ಸಾಮಾಜಿಕ ಕಾರ್ಯಕರ್ತ ರಮೇಶ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು. ರೈತರೆಡೆಗೆ ನಮ್ಮ ನಡಿಗೆ ಅಂಗವಾಗಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು.
    ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಸುಜಾತ ಬಾಯರಿ ನಿರೂಪಿಸಿದರು. ಪಂಚವರ್ಣ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮವನ್ನು ಸಂಯೋಜಿಸಿ ಸ್ವಾಗತಿಸಿದರು. ಸಂಚಾಲಕ ಅಮೃತ್ ಜೋಗಿ ವಂದಿಸಿದರು.