Category: ಸುದ್ದಿ

  • ಕೋಟ :ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ

    ಕೋಟ :ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಕೆ.ಜಿ.ಎಫ್ ಚಲನಚಿತ್ರದ ಸಂಗೀತ ನಿರ್ದೇಶಕ ಕುಂದಕನ್ನಡದ ರವಿ ಬಸ್ರೂರ್ ಗುರುವಾರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದರು.

    ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪಕ ಗಣೇಶ್ ಹೊಳ್ಳ ಶಾಲು ಹೊದಿಸಿ ಗೌರವಿಸಿ ಪ್ರಸಾದ ವಿತರಿಸಿದರು.ಶ್ರೀ ದೇವಳದ ಅರ್ಚಕ ಪ್ರತಿನಿಧಿ ಸಂತೋಷ್ ಎನ್ ಜೋಗಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅರ್ಚಕ ವಿಜಯ ಜೋಗಿ ಮತ್ತಿತರರು ಉಪಸ್ಥಿತರಿದ್ದರು.

  • ಕುಂದಾಪುರ: ಶಿಕ್ಷಣ ಸಂಸ್ಥೆಗಳಿಗೆ ಹಳೆ ವಿದ್ಯಾರ್ಥಿಗಳೇ ಆಧಾರಸ್ತಂಭ – ಅಪ್ಪಣ್ಣ ಹೆಗ್ಡೆ

    ಕುಂದಾಪುರ: ಶಿಕ್ಷಣ ಸಂಸ್ಥೆಗಳಿಗೆ ಹಳೆ ವಿದ್ಯಾರ್ಥಿಗಳೇ ಆಧಾರಸ್ತಂಭ – ಅಪ್ಪಣ್ಣ ಹೆಗ್ಡೆ

    ಸ್ರೂರು ಶ್ರೀ ಶಾರದಾ ಕಾಲೇಜಿನ ಸುವರ್ಣ ಮಹೋತ್ಸವ ಸಮಾರಂಭ ಹಾಗೂ ಹಳೆ ವಿದ್ಯಾರ್ಥಿಗಳ ಸಮಾವೇಶ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಯಾವುದೇ ಶಿಕ್ಷಣ ಸಂಸ್ಥೆಗಳು ಉನ್ನತಿಯನ್ನು ಕಾಣಬೇಕಾದರೆ ಹಳೆ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ. ಹಳೆ ವಿದ್ಯಾರ್ಥಿಗಳೇ ಶಿಕ್ಷಣ ಸಂಸ್ಥೆಗಳಿಗೆ ಆಧಾರ ಸ್ತಂಭ ಎಂದು ಶ್ರೀ ಶಾರದಾ ಕಾಲೇಜು ಬಸ್ರೂರು ಸಂಚಾಲಕ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.

    ಅವರು ಬಸ್ರೂರು ಶ್ರೀ ಶಾರದಾ ಕಾಲೇಜಿನ ಸುವರ್ಣ ಮಹೋತ್ಸವ ಸಮಾರಂಭ ಹಾಗೂ ಹಳೆ ವಿದ್ಯಾರ್ಥಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

    ನವೀಕೃತ ಬಿ.ವೀರರಾಜೇಂದ್ರ ಹಗ್ಡೆ ಸಭಾಂಗಣವನ್ನು ಲೈಫ್ ಲೈನ್ ಫೀಡ್ಸ್(ಇಂಡಿಯಾ) ಪ್ರೈ.ಲಿ.ಚಿಕ್ಕಮಗಳೂರು ಇದರ ಅಧ್ಯಕ್ಷ ಮತ್ತು ವ್ಯವಸ್ಥಾಪನ ನಿರ್ದೇಶಕ ಕೈಲ್ಕೆರೆ ಕಿಶೋರ್ ಕುಮಾರ್ ಹೆಗ್ಡೆ ಉದ್ಘಾಟಿಸಿದರು. ಬೆಂಗಳೂರು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಯ ಅಪರ ನಿರ್ದೇಶಕ ನಾಗರಾಜ ಶೇರಿಗಾರ್ ಶ್ರೀ ಶಾರದ ಸುವರ್ಣ ಸಂಚಿಕೆ ಬಿಡುಗಡೆಗೊಳಿಸಿದರು. ಇದೆ ಸಂದರ್ಭ ಹಳೆ ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮ ನಡೆಯಿತು.

    ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ವಿಜಯ ಶೆಟ್ಟಿ ಸಟ್ವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಾನಿ ಕೈಲ್ಕೆರೆ ಕಿಶೋರ್ ಹೆಗ್ಡೆಯವರನ್ನು ಹಾಗೂ ಸುವರ್ಣ ಮಹೋತ್ಸವಕ್ಕೆ ಸಹಕರಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

    ಬೆಂಗಳೂರು ಜೆ.ಎಸ್.ಪದವಿ ಮತ್ತು ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಡಾ.ಎಸ್.ಜಯರಾಮ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಜಯಶೀಲ ಶೆಟ್ಟಿ, ಕೋಶಾಧಿಕಾರಿ ವಿಜಯಾನಂದ ಶೆಟ್ಟಿ ಹಳ್ನಾಡು, ಶ್ರೀ ಶಾರದಾ ಕಾಲೇಜು ಪ್ರಾಶುಂಪಾಲೆ ಚಂದ್ರಾವತಿ ಶೆಟ್ಟಿ, ಪಿಯು ಕಾಲೇಜಿನ ಪ್ರಾಂಶುಪಾಲ ನಾರಾಯಣ ಪೈ ಮೊದಲಾದವರು ಉಪಸ್ಥಿತರಿದ್ದರು.

    ಹಳೆ ‌ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮ್ ಕಿಶನ್ ಹೆಗ್ಡೆ ಸ್ವಾಗತಿಸಿದರು. ನಿವೃತ್ರ ಪ್ರಾಶುಂಪಾಲರಾದ ರಾಧಕೃಷ್ಣ ಶೆಟ್ಟಿ ಪ್ರಾಸ್ತಾವಿಸಿದರು. ಕಿಶೋರ್ ಕುಮಾರ್ ಶೆಟ್ಟಿ ನಿರೂಪಿಸಿದರು. ಪದ್ಮಾ ಹೆಗ್ಡೆ ಪ್ರಾರ್ಥಿಸಿದರು.

    ವಿದೂಷಿ ವೈದೇಹಿ ಮತ್ತು ಕಲಾಶ್ರೀ ಪುನಿತ್ ತಂಡದಿಂದ ಸುವರ್ಣ ನಾಟ್ಯ ವೈಭವ, ಪದವಿ ಪೂರ್ವ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

  • ಕುಂದಾಪುರ :ಮೇ 17 ರಿಂದ 19ರ ತನಕ ಮೂಡ್ಲಕಟ್ಟೆಯಲ್ಲಿ ವಿಶ್ವವಿದ್ಯಾಲಯ ಮಟ್ಟದ ತ್ರೋ ಬಾಲ್ ಪಂದ್ಯಾಟ

    ಕುಂದಾಪುರ :ಮೇ 17 ರಿಂದ 19ರ ತನಕ ಮೂಡ್ಲಕಟ್ಟೆಯಲ್ಲಿ ವಿಶ್ವವಿದ್ಯಾಲಯ ಮಟ್ಟದ ತ್ರೋ ಬಾಲ್ ಪಂದ್ಯಾಟ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಮೂಡ್ಲಕಟ್ಟೆಯ ಐ.ಎಂ.ಜೆ ವಿದ್ಯಾ ಸಂಸ್ಥೆಗಳಿಗೆ ಒಳಪಟ್ಟ ಐ.ಎಂ.ಜೆ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾ ಸಂಸ್ಥೆ (ಐ.ಎಂ.ಜೆ.ಐ.ಎಸ್.ಸಿ) ತನ್ನ ಮೊದಲ ಶೈಕ್ಷಣಿಕ ವರ್ಷದಲ್ಲೇ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ತ್ರೋ ಬಾಲ್ ಪಂದ್ಯಾಟವನ್ನು ಆಯೋಜಿಸುವ ಜವಾಬ್ದಾರಿ ಹೊತ್ತಿದೆ. ಉಡುಪಿ ಜೋನ್ ಮಟ್ಟದ ಪಂದ್ಯಗಳನ್ನು ಆಯೋಜಿಸುವುದರೊಂದಿಗೆ ಅದರ ಮುಂದಿನ ಹಂತವಾಗಿ ಉಡುಪಿ-ಮಂಗಳೂರಿನ ಅಂತರ್ ಜೋನ್ ಪಂದ್ಯಗಳನ್ನು ನಡೆಸಿಕೊಡಲಿದೆ. ಮೇ 17, 2023 ರಿಂದ ಮೇ 19, 2023 ರ ವರೆಗೆ ಕಾಲೇಜಿನ ಕ್ರೀಡಾಂಗಣದಲ್ಲಿ ವಿಶ್ವ ವಿದ್ಯಾಲಯ ಮಟ್ಟದ ತ್ರೋ ಬಾಲ್ ಪಂದ್ಯಾಟವನ್ನು ಆಯೋಜನೆ ಮಾಡುತ್ತಿದೆ ಎಂದು ಐ.ಎಂ.ಜೆ.ಐ.ಎಸ್.ಸಿ ಉಪ ಪ್ರಾಂಶುಪಾಲರಾದ ಜಯಶೀಲ್ ಕುಮಾರ್ ಹೇಳಿದರು.

    ಅವರು ಕುಂದಾಪುರದ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

    ಪಂದ್ಯಾಟವನ್ನು ಮೇ17 ಬೆಳಿಗ್ಗೆ 9.30ಕ್ಕೆ ಮಂಗಳೂರು ವಿಶ್ವನಿದ್ಯಾನಿಲಯದ ಡಾ.ಕಿಶೋರ್ ಕುಮಾರ ಸಿ.ಕೆ ಉದ್ಘಾಟಿಸಲಿದ್ದಾರೆ. ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ ಎಸ್.ಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಐ.ಎಂ.ಜೆ ವಿದ್ಯಾ ಸಂಸ್ಥೆಗಳ ಚೇರ್‍ಮನ್ ಸಿದ್ದಾರ್ಥ ಜೆ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮೇ 19ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಐ.ಎಂ.ಜೆ ವಿದ್ಯಾ ಸಂಸ್ಥೆಗಳ ಚೇರ್‍ಮನ್ ಸಿದ್ದಾರ್ಥ ಜೆ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸೃಷ್ಟಿ ಇನ್‍ಪೊಟೆಕ್‍ನ ಎಂ.ಡಿ ಹರ್ಷವರ್ಧನ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿ.ವಿಯ ಕ್ರೀಡಾ ವಿಭಾಗದ ನಿರ್ದೇಶಕ ಡಾ.ಜೇರಾಲ್ಡ್ ಸಂತೋಷ್ ಡಿಸೋಜ ಭಾಗವಹಿಸಲಿದ್ದಾರೆ ಎಂದರು.

    ಐ.ಎಂ.ಜೆ.ಐ.ಎಸ್.ಸಿ ಡಾ.ಪ್ರತಿಭಾ ಎಂ.ಪಟೇಲ್ ಮಾತನಾಡಿ, 2022-23ರಲ್ಲಿ ರಲ್ಲಿ ಪ್ರಾರಂಭಗೊಂಡು ಕುಂದಾಪುರದಲ್ಲಿ ತನ್ನದೇ ಆದ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿಶ್ವಾಸದ ಆಯ್ಕೆಯಾದ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವಲ್ಲಿ ಮುಂಚೂಣಿಯಲ್ಲಿದೆ. ನವ ರಾಷ್ಟ್ರೀಯ ಶಿಕ್ಷಣ ನೀತಿಯ ವೈಶಿಷ್ಟ್ಯವನ್ನು ವಿದ್ಯಾರ್ಥಿಗಳಿಗೆ ತಲುಪಿಸುತ್ತಾ ಅವರಲ್ಲಿ ಕ್ರೀಡೆ ಹಾಗು ಇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರೇಮ ಮತ್ತು ಆಯೋಜನ ಕೌಶಲ್ಯ ಬೆಳಸಿಕೊಳ್ಳಲು ಇಂತಹ ಪಂದ್ಯಾವಳಿಗಳು ಮುಖ್ಯಪಾತ್ರ ವಹಿಸುತ್ತದೆ ಎಂಬ ಐ ಎಂ ಜೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸಿದ್ದಾರ್ಥ ಜೆ ಶೆಟ್ಟಿ ರವರ ದೃಷ್ಟಿಕೋನದಲ್ಲಿ ಸಂಸ್ಥೆ ಮುನ್ನಡೆಯುತ್ತಿದೆ ಎಂದರು.
    ಸುದ್ಧಿಗೋಷ್ಠಿಯಲ್ಲಿ ರಾಮಕೃಷ್ಣ ಹೆಗ್ಡೆ, ದೈ.ಶಿ. ನಿರ್ದೇಶಕ ಪ್ರವೀಣ್ ಖಾರ್ವಿ ಉಪಸ್ಥಿತರಿದ್ದರು.

  • ಕೋಟ – ರೈತರೆಡೆಗೆ ನಮ್ಮ ನಮ್ಮ ನಡಿಗೆ – ಚಂದ್ರ ಕಾರ್ಕಡ ಇವರಿಗೆ ಗೌರವ

    ಕೋಟ – ರೈತರೆಡೆಗೆ ನಮ್ಮ ನಮ್ಮ ನಡಿಗೆ – ಚಂದ್ರ ಕಾರ್ಕಡ ಇವರಿಗೆ ಗೌರವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಕೋಟ ಹೋಬಳಿ ವ್ಯಾಪ್ತಿಯಲ್ಲಿ ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 25ರ ಸಂಭ್ರಮ ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಬರುವ ಮೇ.20 ಶನಿವಾರ ಸಂಜೆ 4.ಗ ನಡೆಯಲಿದೆ. ಈ ಬಾರಿ ಸಾಲಿಗ್ರಾಮದ ಕಾರ್ಕಡ ಪರಿಸರದ ಹಿರಿಯ ಕೃಷಿ ಕಾಯಕ ಜೀವಿ ಚಂದ್ರ ಕಾರ್ಕಡ ಇವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಗುವುದು ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕೋಟ ಸಾಲಿಗ್ರಾಮ ದೇವಾಡಿಗರ ಸಂಘದ 10ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ ಕಾರ್ಯಕ್ರಮ

    ಕೋಟ ಸಾಲಿಗ್ರಾಮ ದೇವಾಡಿಗರ ಸಂಘದ 10ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ದೇವಾಡಿಗರ ಸಂಘ ಕೋಟ ಸಾಲಿಗ್ರಾಮ ಇದರ 10ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ ಕಾರ್ಯಕ್ರಮ ಭಾನುವಾರ ಕೋಟ ಮಾಂಗಲ್ಯ ಮಂದಿರದಲ್ಲಿ ನಡೆಯಿತು.

    ಈ ಕಾರ್ಯಕ್ರಮದಲ್ಲಿ 75ನೇ ಹುಟ್ಟುಹಬ್ಬದ ಪ್ರಯುಕ್ತ ಅನಂದ ಸಿ. ಕುಂದರ್ ಇವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

    ಧಾರ್ಮಿಕ ವಿಧಿವಿಧಾನಗಳನ್ನು ವೇ.ಮೂ ಸುಬ್ರಹ್ಮಣ್ಯ ಅಡಿಗ ನೆರವೆರಿಸಿದರು.

    ಮುಖ್ಯ ಅತಿಥಿಗಳಾಗಿ ಬಾರಕೂರು ಏಕನಾಥೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರಾದ ಜನಾರ್ದನ ದೇವಾಡಿಗ, , ಗಣೇಶ್ ದೇವಾಡಿಗ, ನರಸಿಂಹ ದೇವಾಡಿಗ ಉಡುಪಿ, ಕೋಟ ಗ್ರಾಮ ಪಂಚಾಯತಿ ಅಧ್ಯಕ್ಷ ಅಜಿತ್ ದೇವಾಡಿಗ ,
    ಕೋಟ ಸಾಲಿಗ್ರಾಮ ದೇವಾಡಿಗ ಸಂಘದ ಅಧ್ಯಕ್ಷ ನರಸಿಂಹ ದೇವಾಡಿಗ, ಕಾರ್ಯದರ್ಶಿ ಸತೀಶ್ ದೇವಾಡಿಗ ,ಕಾರ್ಯಕಾರಿ ಮಂಡಳಿಯ ಸದಸ್ಯರಾದ ಗಿರೀಶ್ ದೇವಾಡಿಗ ಕೃಷ್ಣದೇವಾಡಿಗ ಆನಂದ ದೇವಾಡಿಗ, ದಿನೇಶ್ ದೇವಾಡಿಗ, ಮತ್ತು ದೇವಾಡಿಗ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಕುಮಾರ್ ದೇವಾಡಿಗ ಸ್ವಾಗತಿಸಿದರು.

    ಕಾರ್ಯಕ್ರಮವನ್ನು ರಾಘವೇಂದ್ರ ದೇವಾಡಿಗ ನಿರೂಪಿಸಿದರು ವಂದಿಸಿದರು.

  • ಕುಂದಾಪುರ :ಡಾ. ಬಿ.ಬಿ. ಹೆಗ್ಡೆ ಕಾಲೇಜು – “ಫುಡ್ ಆರ್ಟ್” – ಆಹಾರ ಮೇಳ ಕಾರ್ಯಕ್ರಮ

    ಕುಂದಾಪುರ :ಡಾ. ಬಿ.ಬಿ. ಹೆಗ್ಡೆ ಕಾಲೇಜು – “ಫುಡ್ ಆರ್ಟ್” – ಆಹಾರ ಮೇಳ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಫುಡ್ ಆರ್ಟ್ ಕಾರ್ಯಕ್ರಮ ಜರಗಿತು.

    ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ ವಿ.ಕೆ.ಆರ್. ಮತ್ತು ಎಚ್. ಎಮ್.ಎಮ್. ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಭಾರತಿ ನಾಯ್ಕ್ ಕಾರ್ಯಕ್ರಮವನ್ನು ಉದ್ದೇಶಿಸಿ ನೈಸರ್ಗಿಕ ಆಹಾರದ ಮಹತ್ವ ಹಾಗೂ ಅದರ ಉಪಯೋಗದಲ್ಲಿ ಆಹಾರದ ತಯಾರಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾಲೇಜು ವಿದ್ಯಾರ್ಥಿಗಳಲ್ಲಿ ಆಹಾರದ ನಿರ್ವಹಣೆ ಹಾಗೂ ಹಣದ ನಿರ್ವಹಣೆ ಜೀವನದ ಪ್ರಮುಖ ಅಂಗ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

    ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ಭಟ್, ಕಾರ್ಯಕ್ರಮದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಜೋಸ್ಲಿನ್ ಅಲ್ಮೇಡ, ವಿನಯ್ ಹೆಗ್ಡೆ ಉಪಸ್ಥಿತರಿದ್ದರು.

    ವಾಣಿಜ್ಯ ವಿಭಾಗದ ಉಪನ್ಯಾಸಕಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

     

  • ಕೋಡಿ :ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಶೇ.100 ಫಲಿತಾಂಶ

    ಕೋಡಿ :ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಶೇ.100 ಫಲಿತಾಂಶ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಸಿ.ಬಿ.ಎಸ್.ಇ 2022-23ರ 10ನೇ ತರಗತಿ ಪರೀಕ್ಷೆಯಲ್ಲಿ ಸತತ ಐದನೇ ವರ್ಷ ಶೇ.100 ಫಲಿತಾಂಶ ದಾಖಲಿಸಿದೆ.

    ವಿದ್ಯಾರ್ಥಿಗಳಾದ ಮರಿಯಂ ಅಯ್ಯುಬ್, ತನ್ವಿ , ಅಲ್‍ಷಿಫಾ ಶುಕುರ್ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ ಗೊಂಡಿದ್ದಾರೆ.

  • ಉಡುಪಿ :ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ -2023 : ಮೇ13 ರಂದು ಮತ ಎಣಿಕೆ, ಜಿಲ್ಲೆಯಾದ್ಯಂತ ನಿಷೇಧಾಜ್ಞೆ.

    ಉಡುಪಿ :ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ -2023 : ಮೇ13 ರಂದು ಮತ ಎಣಿಕೆ, ಜಿಲ್ಲೆಯಾದ್ಯಂತ ನಿಷೇಧಾಜ್ಞೆ.

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ :ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ , ಮತ ಎಣಿಕೆ ಕಾರ್ಯವು ಮೇ 13 ರಂದು ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆ, ಬ್ರಹ್ಮಗಿರಿ ಉಡುಪಿಯಲ್ಲಿ ನಡೆಯಲಿದೆ.

    ಚುನಾವಣೆಯ ಮತಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ನಂತರ ಕಾನೂನು ಸುವ್ಯವಸ್ಥೆಯನ್ನು ಕಾಯ್ದಕೊಂಡು, ಶಾಂತಿಯನ್ನು ಕಾಪಾಡುವ ಸಲುವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿಪಾಲನೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 (1) ರನ್ವಯ ಜಿಲ್ಲೆಯಾದ್ಯಂತ ಮೇ 13 ರಂದು ಬೆಳಿಗ್ಗೆ 5 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

    ಷರತ್ತುಗಳು

    1. ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ, ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದನ್ನು ನಿಷೇಧಿಸಿದೆ.

    2. ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ನಿಷೇಧಿಸಿದೆ.

    3. ಚುನಾವಣೆಯ ಮತ ಎಣಿಕೆ ಫಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿದೆ

    4. ಈ ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಗಧೆ, ಕೋಲು, ಚೂರಿ, ದೊಣ್ಣೆ, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಅಥವಾ ಮಾರಕವಾಗುವ ಇನ್ನಾವುದೇ ವಸ್ತುಗಳನ್ನು ಧರಿಸುವುದನ್ನು ಮತ್ತು ಯಾವುದೇ ಕಾರಕ ಯಾ ಸ್ಫೋಟಕ ವಸ್ತುಗಳು/ಪಟಾಕಿ | ಸಿಡಿಮದ್ದು ಹೊಂದುವುದನ್ನು ನಿಷೇಧಿಸಿದೆ.

    5. ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಯಾ ಕ್ಷಿಪಣಿಗಳು ಅಥವಾ ಕ್ಷಿಪಣಿಯಾಗಿ ಉಪಯೋಗಿಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಾಗ್ರಿಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

    6. ಈ ಅವಧಿಯಲ್ಲಿ ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು, ಪದ ಹಾಡುವುದು, ಗಾಯನ ಮಾಡುವುದು, ಆವೇಶ ಭಾಷಣ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು, ಚೇಷ್ಟೆ ಮಾಡುವುದು, ಚಿತ್ರಗಳ ಪ್ರದರ್ಶನ ತಯಾರಿಸುವುದು ಯಾ ಪುಸಾರ ಮಾಡುವುದು, ಗುರುತುಗಳು, ಪಕಟಣಾ ಪತ್ರಿಕೆಗಳ ಯಾ ಇತರ ಯಾವುದೇ ವಸ್ತುಗಳ ಪ್ರದರ್ಶನದಿಂದ ಸಭ್ಯತನ, ಸದಾಚಾರ, ಸಾರ್ವಜನಿಕ ಹಿತ ಯಾ ಭದ್ರತೆ ಶಿಥಿಲಗೊಳ್ಳುವಂತಹ ಯಾ ಸರಕಾರವನ್ನು ಕೆದಕುವ ಯಾ ಅಪರಾಧವೆಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.

    7. ಈ ನಿಷೇದಾಜ್ಞೆ ಆದೇಶವು ಸರಕಾರದಿಂದ ಯಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ, ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಸರಕಾರಿ ನೌಕರರು ಕರ್ತವ್ಯ ನಿರ್ವಹಣೆಯ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ.

    8. ಈ ನಿಷೇದಾಜ್ಞೆ ಆದೇಶವು ಕೆಳಗೆ ಸಹಿ ಮಾಡಿರುವವರ ಅಥವಾ ಉಪವಿಭಾಗದ ದಂಡಾಧಿಕಾರಿ, ತಾಲೂಕು ದಂಡಾಧಿಕಾರಿಯವರ ಪೂರ್ವಾನುಮತಿಯಂತೆ ನಡೆಯುವ ಕಾರ್ಯಕ್ರಮಗಳಿಗೆ ಹಾಗೂ ಶವ ಮೆರವಣಿಗೆ, ಮದುವೆ ಮೆರವಣಿಗೆ ಮತ್ತು ಧಾರ್ಮಿಕ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ.

  • ಕುಂದಾಪುರ :ಶಾಸಕ ಸುಕುಮಾರ್ ಶೆಟ್ಟಿ ಪಕ್ಷದಿಂದ ಉಚ್ಛಾಟನೆ!? ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ಧಿ ಹರಡಿದ ಕಿಡಿಗೇಡಿ

    ಕುಂದಾಪುರ :ಶಾಸಕ ಸುಕುಮಾರ್ ಶೆಟ್ಟಿ ಪಕ್ಷದಿಂದ ಉಚ್ಛಾಟನೆ!? ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ಧಿ ಹರಡಿದ ಕಿಡಿಗೇಡಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿಯವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿದೆ ಎಂಬ ಸುದ್ಧಿ ಯೊಂದನ್ನು ಹರಿಯಬಿಟ್ಟಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.

    ಬಿಜೆಪಿಯ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರ ನಕಲಿ ಸಹಿ ಇರುವ ಉಚ್ಚಾಟನಾ ಪತ್ರವಾಗಿದ್ದು, ಬಿಜೆಪಿಯಲ್ಲಿದ್ದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿರುವ ಬಗ್ಗೆ ದಾಖಲೆ ಲಭಿಸಿದ್ದು, ಪಕ್ಷ ವಿರೋಧಿ ಚಟುವಟಿಕೆಗಾಗಿ ಉಚ್ಚಾಟಿಸಲಾಗಿದೆ ಎಂದು ಬರೆಯಲಾಗಿತ್ತು.

    ಈ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾದ ವಿಷಯ, ಇಂತಹ ಯಾವುದೇ ರೀತಿಯ ಬೆಳವಣಿಗೆ ಆಗಿರುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ಧಿಯನ್ನು ನಂಬಬಾರದು ಎಂದು ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಸುಕುಮಾರ್ ಶೆಟ್ಟಿ, ಈ ಬಗ್ಗೆ ಯಾವುದೇ ಬೇಸರವಿಲ್ಲ. ನಾನು ಅಪ್ಪಟ ದೈವ ಭಕ್ತನಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ಧಿ ಹರಡುವವರಿಗೆ ಒಳ್ಳೆಯ ಬುದ್ಧಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

  • ಉಡುಪಿ :ಜಿಲ್ಲಾಡಳಿತ ವತಿಯಿಂದ ಮತ ಏಣಿಕೆಗೆ ಸಿದ್ದತೆ

    ಉಡುಪಿ :ಜಿಲ್ಲಾಡಳಿತ ವತಿಯಿಂದ ಮತ ಏಣಿಕೆಗೆ ಸಿದ್ದತೆ

    ಕುಂದಾಪುರ ಮಿರರ್ ಸುದ್ದಿ…
    ಉಡುಪಿ : ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆ ಪ್ರಕ್ರಿಯೆ 13 ರಂದು ನಡೆಯಲಿದ್ದು, ಜಿಲ್ಲೆಯಲ್ಲಿನ ಒಟ್ಟು 5 ವಿಧಾನಸಭಾ ಕ್ಷೇತ್ರಗಳ ಮತಎಣಿಕೆಯು ಉಡುಪಿಯ ಸೈಂಟ ಸಿಸಿಲಿ ಶಾಲೆಯಲ್ಲಿ ನಡೆಯಲ್ಲಿದೆ.

    ಮತಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ಸಿ.ಐ..ಎಸ್.ಎಫ್ ತುಕಡಿಯಿಂದ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಭದ್ರತೆ ನೀಡಲಾಗಿದೆ.