Category: ಸುದ್ದಿ

  • ಕೋಟೇಶ್ವರ :ದೃಢ ಸಂಕಲ್ಪದಿಂದ ಮುನ್ನೆಡೆದಾಗ ಯಶಸ್ಸು ಸಾಧ್ಯ- ಜಯಪ್ರಕಾಶ್ ಹೆಗ್ಡೆ

    ಕೋಟೇಶ್ವರ :ದೃಢ ಸಂಕಲ್ಪದಿಂದ ಮುನ್ನೆಡೆದಾಗ ಯಶಸ್ಸು ಸಾಧ್ಯ- ಜಯಪ್ರಕಾಶ್ ಹೆಗ್ಡೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ನನಗೂ ಸಾಧ್ಯ ಎಂಬ ಮನಸ್ಸಿನ ದೃಢ ಸಂಕಲ್ಪದಿಂದ ಉದ್ಯಮ ಆರಂಭಿಸಿ ಶ್ರದ್ದೆ, ಪರಿಶ್ರಮ, ನಿರಂತರ ಆಸಕ್ತಿಯಿಂದ ಮುನ್ನೆಡೆದಾಗ ಯಶಸ್ಸು ಸಾಧ್ಯ. ಸ್ಪರ್ಧಾತ್ಮಕವಾದ ಈ ದಿನಗಳಲ್ಲಿ ಉದ್ಯಮ ಕ್ಷೇತ್ರಗಳಲ್ಲಿಯೂ ಕೂಡಾ ಸ್ಪರ್ಧೆ ಎದುರಿಸಲು ಸಿದ್ಧವಿರಬೇಕು ಎಂದು ಹಿಂದುಳಿದ ವರ್ಗಗಳ ಅಭಿವೃದ್ದಿ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಹೇಳಿದರು.

    ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ,ಇವರ ಉದ್ಯೋಗ ಮತ್ತು ಸ್ಥಾನೀಕರಣ ಘಟಕ ಆಶ್ರಯದಲ್ಲಿ ಅಂತರಾಳ ಫೌಂಡೇಶನ್ ರಿ., ಕುಂದಾಪುರ ಇವರ ಸಹಯೋಗದಲ್ಲಿ ಕಾಲೇಜು ಸಭಾಂಗಣದಲ್ಲಿ ಒಂದು ದಿನದ ಉದ್ಯಮಶೀಲತಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಅಭಿವೃದ್ದಿಯ ಪ್ರಥಮ ಆದ್ಯತೆಗಳು ಆರೋಗ್ಯ ಮತ್ತು ಶಿಕ್ಷಣಕ್ಕೆ ಸಿಗಬೇಕು. ಸರ್ಕಾರ ವ್ಯವಸ್ಥೆಯಲ್ಲಿಯೂ ಕೂಡಾ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೌಲಭ್ಯಗಳಿಂದ ಕೂಡಿರಬೇಕು ಎಂದರು.

    ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್.ನಾಯಕ ಅಧ್ಯಕ್ಷತೆ ವಹಿಸಿದ್ದರು.

    ಅರಣ್ಯ ಗುತ್ತಿಗೆದಾರರಾದ ಜೆ.ಪಿ ಶೆಟ್ಟಿ, ಅಂತರಾಳ ಫೌಂಡೇಶನ್ ನಿರ್ದೇಶಕಿ ಲೀನಾ ನಾಯಕ್, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕ ನಾಗರಾಜ ಯು ಉಪಸ್ಥಿತರಿದ್ದರು.
    ಕಾಲೇಜಿನ ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿಗಳು ಮತು ಉದ್ಯೋಗ ಮತ್ತು ಸ್ಥಾನೀಕರಿಣ ಘಟಕದ ರಾಮರಾಯ ಆಚಾರ್ಯ ಸ್ವಾಗತಿಸಿದರು. ಅಂತರಾಳ ಫೌಂಡೇಶನ್ ಟ್ರಸ್ಟಿ ವಿವೇಕ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ವೆಂಕಟೇಶ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.

  • ಕನ್ಯಾನ : ಕೊಠಾರಿ ಸಮಾಜ ಶಿಕ್ಷಣ, ಉದ್ಯೋಗಕ್ಕೆ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು – ಜಯಪ್ರಕಾಶ್ ಹೆಗ್ಡೆ

    ಕನ್ಯಾನ : ಕೊಠಾರಿ ಸಮಾಜ ಶಿಕ್ಷಣ, ಉದ್ಯೋಗಕ್ಕೆ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು – ಜಯಪ್ರಕಾಶ್ ಹೆಗ್ಡೆ

    ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ ಕುಂದಾಪುರ ಇದರ ಕೊಠಾರಿ ಸಮುದಾಯ ಭವನ( ಶ್ರೀ ಚೌಡೇಶ್ವರಿ ಕನ್ವೇನ್ಶನ್ ಹಾಲ್) ಹಾಗೂ ಶ್ರೀ ಸೀತಾರಾಮ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನೆ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ, ಮಾ. 24: ಕೊಠಾರಿ ಸಮುದಾಯವು ತಿಜೋರಿ ಬೀಗವನ್ನು ಇಟ್ಟುಕೊಂಡಿರುವ ಸಮಾಜವಾಗಿದ್ದು, ನಂಬಿಕೆಗೆ ಅರ್ಹರಾದ ಒಂದು ಸಮುದಾಯ ಇದಾಗಿದೆ. ಕೊಠಾರಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕೆ ಸೂಕ್ತ ಮೀಸಲಾತಿಯ ಪ್ರಯೋಜನವಿದ್ದು, ಆ ನಿಟ್ಟಿನಲ್ಲಿ ಬೇಡಿಕೆ ಇಟ್ಟು ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು. ಕೊಠಾರಿ ಸಮುದಾಯದ ಅಭಿವೃದ್ದಿಗೆ ಸರ್ಕಾರ ಒತ್ತು ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

    ಅವರು ಶುಕ್ರವಾರ ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ ಕುಂದಾಪುರ ಇದರ ವತಿಯಿಂದ ಕನ್ಯಾನ ಗ್ರಾಮದ ಕರ್ಕಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಮುದಾಯ ಭವನ (ಶ್ರೀ ಚೌಡೇಶ್ವರಿ ಕನ್ವೇನ್ಶನ್ ಹಾಲ್) ವನ್ನು ಉದ್ಘಾಟಿಸಿ ಮಾತನಾಡಿದರು.

    ಕೊಠಾರಿ ಸಮುದಾಯವು ಪ್ರವರ್ಗ 2 ರಲ್ಲಿದ್ದು, ಶೇ. 15 ರಷ್ಟು ಮೀಸಲಾತಿಯಿದೆ. ಆದರೆ ಪ್ರಬಲ ಸಮುದಾಯದವರೇ ಇದರ ಹೆಚ್ಚಿನ ಪ್ರಯೋಜನ ಪಡೆಯುತ್ತಿದ್ದಾರೆ. ಕಡಿಮೆ ಜನರಿರುವ ಜಾತಿಗಳು, ಪ್ರಬಲ ಸಮುದಾಯದವರ ಎದುರು ಸ್ಪರ್ಧೆ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ಈ ವರೆಗೆ ಪ್ರಯೋಜನ ಪಡೆಯದ ಜಾತಿಗಳಿಗೆ ಶಿಕ್ಷಣ, ಉದ್ಯೋಗದ ಮೀಸಲಾತಿಯಲ್ಲಿ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಯುತ್ತಿದೆ ಎಂದರು.
    ಸಹಕಾರಿ ಸಂಘದ ಕಟ್ಟಡವನ್ನು ಉದ್ಘಾಟಿಸಿ, ಸಮ್ಮಾನ ಸ್ವೀಕರಿಸಿದ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಈ ದಿನ ಕೊಠಾರಿ ಸಮಾಜದ ಇತಿಹಾಸದಲ್ಲಿ ಮಹತ್ವದ ದಿನವಾಗಿದ್ದು, ಈ ಸಮುದಾಯ ಭವನ ಸಮಾಜದ ಆಸ್ತಿಯಾಗಲಿದೆ. ಇದಕ್ಕಾಗಿ ನಾಗಪ್ಪ ಕೊಠಾರಿಯವರ ಶ್ರಮ ಅಪಾರ ಎಂದವರು ಪ್ರಶಂಸಿದರು.

    ಮಾಜಿ ಶಾಸಕ, ಧಾರ್ಮಿಕ ಮುಂದಾಳು ಬಿ. ಅಪ್ಪಣ್ಣ ಹೆಗ್ಡೆ ಸಭಾಭವನವನ್ನು, ಕಮಲಶಿಲೆ ದೇಗುಲದ ಅನುವಂಶೀಯ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ಪಾಕಶಾಲೆಯನ್ನು ಉದ್ಘಾಟಿಸಿ, ಶುಭಹಾರೈಸಿದರು.

    ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘದ ಅಧ್ಯಕ್ಷ ಸೀತಾರಾಮ ಕೊಠಾರಿ ಅಧ್ಯಕ್ಷತೆ ವಹಿಸಿದ್ದರು. ಗಣಕ ಯಂತ್ರವನ್ನು ಎಸ್‍ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜು ಪೂಜಾರಿ, ವರನ ಗೃಹವನ್ನು ಕೊಲ್ಲೂರು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ್ ಶೆಟ್ಟಿ, ವಧುವಿನ ಗೃಹವನ್ನು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ| ಗೋವಿಂದ ಬಾಬು ಪೂಜಾರಿ, ಬ್ಯಾಂಕ್ ಸೇಫ್ ಲಾಕರನ್ನು ಸೌಕೂರು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಂಜಯ್ಯ ಶೆಟ್ಟಿ ಸಬ್ಲಾಡಿ, ಕಚೇರಿಯನ್ನು ವಿಟ್ಲ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಉದ್ಘಾಟಿಸಿದರು.

    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದಾನಿ ಕೃಷ್ಣಮೂರ್ತಿ ಮಂಜ, ಹಟ್ಟಿಯಂಗಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ರಾಜೀವ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.

    ಹಟ್ಟಿಯಂಗಡಿ ದೇಗುಲದ ಧರ್ಮದರ್ಶಿ ಬಾಲಚಂದ್ರ ಭಟ್, ಕೂಡ್ಲು ಬಾಡಬೆಟ್ಟು ದೇಗುಲದ ಮೊಕ್ತೇಸರ ಜಯರಾಮ, ಕೊಠಾರಿ ವೇಲ್‍ಫೇರ್ ಅಸೋಸಿಯೇಶನ್ ಅಧ್ಯಕ್ಷ ನಾಗರಾಜ ಕೊಠಾರಿ ಆಜ್ರಿ, ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಪಾರ್ವತಿ, ಕರ್ಕುಂಜೆ ವ್ಯ. ಸೇ. ಸ. ಸಂಘದ ಅಧ್ಯಕ್ಷ ಬಾಂಡ್ಯ ಸುಧಾಕರ ಶೆಟ್ಟಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಉದ್ಯಮಿಗಳಾದ ರಾಜು ಕೊಠಾರಿ ಆಜ್ರಿ, ಶಂಕರ ಕೊಠಾರಿ ಉಳ್ತೂರು, ವಾಸುದೇವ ಯಡಿಯಾಳ, ಹಟ್ಟಿಯಂಗಡಿ ಗ್ರಾ.ಪಂ. ಉಪಾಧ್ಯಕ್ಷ ಪ್ರತಾಪ್ ಕುಮಾರ್ ಶೆಟ್ಟಿ, ದ.ಕ. ಕೊಟ್ಟಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಕೊಟ್ಟಾರಿ, ಕೊಠಾರಿ ಮನೆ ಪಾಂಗಾಳದ ಉದಯ ಕುಮಾರ್ ಶೆಟ್ಟಿ, ಚಂದ್ರಕಾಂತ ಶೆಟ್ಟಿ ಪಾಂಗಾಳ, ಕೊಟ್ಟಾರಿ ದ.ಕ. ಯುವ ಸಂಘದ ಅಧ್ಯಕ್ಷ ಚೇತನ್ ಕುಮಾರ್, ಅಪ್ಪು ಕೊಠಾರಿ, ಬಾಬು ಕೊಠಾರಿ, ಯುವ ಸಂಘಟನೆ ನಾಗೇಶ ಕೊಠಾರಿ ಮೊಳಹಳ್ಳಿ, ಮಹಿಳಾ ಸಂಘಟನೆ ಅಧ್ಯಕ್ಷೆ ಜಯಲಕ್ಷ್ಮಿ ಕೊಠಾರಿ ತಲ್ಲೂರು ಮತ್ತಿತರರು ಉಪಸ್ಥಿತರಿದ್ದರು.

    ಕುಂದಾಪುರದ ಸೀತಾರಾಮ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಾಗಪ್ಪ ಕೊಠಾರಿ ಕೆರಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಸಂತೋಷ ಕೊಠಾರಿ ಕಾರ್ಯಕ್ರಮ ನಿರ್ವಹಿಸಿದರು.

  • ಕುಂದಾಪುರ :ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿಯಲ್ಲಿ ಬೀಳ್ಕೊಡುಗೆ ಸಮಾರಂಭ

    ಕುಂದಾಪುರ :ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿಯಲ್ಲಿ ಬೀಳ್ಕೊಡುಗೆ ಸಮಾರಂಭ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಮೌಲ್ಯಯುತ, ಪಠ್ಯ ಪಠ್ಯೇತರ ರಂಗದಲ್ಲಿಯೂ ಶಿಸ್ತುಬದ್ದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪವಾಗಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗುವಂತಹ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ನೆರವೇರಿತು.

    ಸುಜ್ಞಾನ ಎಜುಕೇಶನ್ ಟ್ರಸ್ಟನ ಅಧ್ಯಕ್ಷರಾದ ರಮೇಶ್ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ “ವಿದ್ಯಾರ್ಥಿಗಳು ಪರೀಕ್ಷೆಯ ಸಂದರ್ಭದಲ್ಲಿ ಹೆಚ್ಚಿನ ಸಮಯ ಹಾಳು ಮಾಡದೇ ಅದನ್ನು ಓದಲು ಮೀಸಲಿಟ್ಟು ಸಾಧಕರಾಗಬೇಕು ಎಂದರು. ನಮ್ಮ ಶಿಕ್ಷಣ ಸಂಸ್ಥೆಯು ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾಕ್ಷೇತ್ರದಲ್ಲಿ ಹೆಸರು ಮಾಡಿದ್ದು ಎಕ್ಸಲೆಂಟ್ ಎಂದರೆ ಶೈಕ್ಷಣಿಕ ಪ್ರಗತಿಯ ಜ್ಞಾನ ದೇಗುಲವಾಗಿದೆ” ಎಂದು ಹೇಳಿದರು.

    ಸುಜ್ಞಾನ ಎಜುಕೇಶನ್ ಟ್ರಸ್ಟನ ಖಜಾಂಚಿಯಾದ ಭರತ್ ಶೆಟ್ಟಿಯವರು ಪ್ರಸ್ತಾವಿಕ ನುಡಿಗೈಯುತ್ತಾ “ವಿದ್ಯಾರ್ಥಿಗಳು ತಮ್ಮ ಬೀಳ್ಕೊಡುಗೆ ಸಮಾರಂಭವನ್ನು ಸಂಭ್ರಮಿಸುವಂತೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸಂಭ್ರಮಿಸಬೇಕು ಅವರ ಮುಂದಿನ ಜೀವನದ ಗುರಿ ಸ್ಪಷ್ಟವಾಗಿದ್ದಾಗ ಏಕಾಗ್ರತೆಯು ಸಾಧ್ಯವಾಗುತ್ತದೆ ಎಂದರು.”

    ಎಕ್ಸಲೆಂಟ್‍ನ ಪ್ರಾಂಶುಪಾಲರಾದ ಅಗಸ್ಟಿನ್ ರವರು “ವಿದ್ಯಾರ್ಥಿಗಳ ಜೀವನದಲ್ಲಿ 10ನೇತರಗತಿ ಮಹತ್ತರವಾದ ಘಟ್ಟವಾಗಿದೆ. ಶಿಸ್ತು ಬದ್ಧವಾದ ಅಧ್ಯಯನದಿಂದ ಯಶಸ್ಸು ಸಾಧ್ಯವೆಂದು ವಿದ್ಯಾರ್ಥಿಗಳನ್ನು ಹರಸಿದರು”. ಶಿಕ್ಷಕರ ಪರವಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇಮಾ ಮತ್ತು ಸುದಕ್ಷಿಣಾ ಆರ್. ಉಡುಪ ರವರು ಶುಭ ಹಾರೈಸಿದರು. ಕನ್ನಡ ಉಪನ್ಯಾಸಕರಾದ ಗುರುಪ್ರಸಾದ್ ರವರು ವಿದ್ಯಾರ್ಥಿಗಳಿಗೆ ಪರೀಕ್ಷೆಯ ಪೂರ್ವತಯಾರಿ ಹೇಗಿರಬೇಕು ಎಂದು ತಮ್ಮ ದಿಕ್ಸೂಚಿ ಭಾಷಣದಲ್ಲಿ ತಿಳಿಸಿದರು.

    10ನೇ ತರಗತಿ ವಿದ್ಯಾರ್ಥಿಗಳಾದ ಶಮನ, ಸ್ವಸ್ತಿಕ್ ರವರು ವಿದ್ಯಾರ್ಥಿ ಜೀವನದ ಅನುಭವವನ್ನು ಹಂಚಿಕೊಂಡರು ಆದ್ಯಾ, ತೃಪ್ತಿಕ್ ಇಂಪಾದ ಗಾನದೊಂದಿಗೆ ಸಭಿಕರನ್ನು ರಂಜಿಸಿದರು.

    ಸರೋಜಿನಿ ಆಚಾರ್ಯ ರವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಚಿತ್ರಕಲಾ ಶಿಕ್ಷಕ ಗಿರೀಶ್ ರವರು ಉತ್ತಮ ವೇದಿಕೆ ನಿರ್ಮಿಸಿ ಕೊಟ್ಟರು ವೇದಿಕೆಯಲ್ಲಿ ಮುಖ್ಯ ಶಿಕ್ಷಕಿಯಾದ ಸುರೇಖಾ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

  • ತೆಕ್ಕಟ್ಟೆ :ಕರಾವಳಿ ಜನರ ಜೀವನಾಡಿ ಭಜನಾ ಮಂದಿರಗಳು – ಅಪ್ಪಣ್ಣ ಹೆಗ್ಡೆ

    ತೆಕ್ಕಟ್ಟೆ :ಕರಾವಳಿ ಜನರ ಜೀವನಾಡಿ ಭಜನಾ ಮಂದಿರಗಳು – ಅಪ್ಪಣ್ಣ ಹೆಗ್ಡೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಭಜನೆ ಒಂದು ವಿಶೇಷವಾದ ಶಕ್ತಿವುಳ್ಳ ವ್ಯವಸ್ಥೆ ಆದರೆ ಅದನ್ನು ಆಧುನಿಕ ವ್ಯವಸ್ಥೆ ಕಸಿದುಕೊಂಡಿದೆ ಎಂದು ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ಹೇಳಿದರು.

    ಕೊಮೆ ಕೊರವಡಿ ಶ್ರೀ ಪಟ್ಟಾಭಿರಾಮಚಂದ್ರ ದೇಗುಲದ ಸುವರ್ಣ ಮಹೋತ್ಸವ ಹಾಗೂ ನೂತನ ಮಂದಿರ ಲೋಕಾರ್ಪಣಾ ಸಮಾರಂಭದಲ್ಲಿ ಮಾತನಾಡಿ ಆಗಿನ ಕಾಲದಲ್ಲೆ ಶ್ರದ್ಧಾ ಭಕ್ತಿಯ ತಾಣವಾಗಿ ಭಜನಾ ಮಂದಿರಗಳು ರೂಪುಗೊಂಡಿದ್ದವು ಆದರೆ ಕಾಲಕ್ರಮೇಣ ಅದು ಮೊಬೈಲ್ ಟಿ.ವಿ ಮಾಧ್ಯಮಗಳ ಹಾವಳಿಯಿಂದ ಕುಂಠಿತಗೊಂಡಿತು. ಆದರೆ ಇದೀಗ ಮತ್ತೆ ಭಜನಾ ಸಂಸ್ಕಾರ ಪುಟಿದೇಳುಲು ಆರಂಭಿಸಿದೆ ಇದೊಂದು ಸಂಸ್ಕಾರ ಬಿತ್ತುವ ಆಶಾದಾಯಕ ಬೆಳೆವಣಿಗೆಯಾಗಿದೆ. ಅವಿಭಜಿತ ಜಿಲ್ಲೆಗಳ ಕರಾವಳಿ ಭಾಗದ ಜನರಿಂದ ಭಜನೆ ಉಳಿವು ಕಂಡಿದೆ. ಭಜನೆಯ ಮೂಲಕ ಭಗವಂತನನ್ನು ಸುಲಭವಾಗಿ ಕಾಣುವ ಶಕ್ತಿ ಕೇಂದ್ರವಾಗಿದೆ. ಇಂದಿನ ಯುವ ಸಮೂಹ ಭಜನೆಯನ್ನು ಉಳಿಸಿ ಬೆಳೆಸಿ ಬಿಡುವಿನ ಸಯಮವನ್ನು ಸದುಪಯೋಗಿಸಿ ಮುಂದಿನ ಜನಾಂಗಕ್ಕೆ ಕೊಂಡ್ಯೊಯುವ ಕಾರ್ಯ ಮಾಡಲಿ ಆ ಮೂಲಕ ಪಟ್ಟಾಭಿರಾಮಚಂದ್ರ ಮಂದಿರ ಕಡಲೂರ ಸಂಸ್ಕ್ರತಿ ಕೇಂದ್ರ ಸ್ಥಾನವಾಗಿ ಬೆಳಗಲಿ ಎಂದು ಹಾರೈಸಿದರು.

    ಕಾರ್ಯಕ್ರಮವನ್ನು ಕೊಮೆ ಕೊರವಡಿ ಬೊಬ್ಬರ್ಯ ಮತ್ತು ಹಳೆಯಮ್ಮ ಪರಿವಾರ ದೇವಸ್ಥಾನದ ಮುಕ್ತೇಸರ ಕೆ.ಅಶೋಕ್ ಹತ್ವಾರ್ ಉದ್ಘಾಟಿಸಿದರು.

    ಅಧ್ಯಕ್ಷತೆಯನ್ನು ಶ್ರೀ ಪಟ್ಟಾಭಿರಾಮಚಂದ್ರ ಭಜನಾ ಮಂಡಳಿ ಅಧ್ಯಕ್ಷ ಕೆ.ಚಂದ್ರ ಕಾಂಚನ್ ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ಕೋಟ ಜನತಾ ಫಿಶ್‍ಮೀಲ್ ನಿರ್ದೇಶಕ ಪ್ರಶಾಂತ್ ಎ ಕುಂದರ್,ಉಡುಪಿ ಭಜನಾ ಮಂಡಳಿಗಳ ಒಕ್ಕೂಟ ಅಧ್ಯಕ್ಷ ಭೋಜರಾಜ ಕಿದಿಯೂರು, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ, ತೆಕ್ಕಟ್ಟೆ ಗ್ರಾಮಪಂಚಾಯತ್ ಅಧ್ಯಕ್ಷೆ ಮಮತಾ ದೇವಾಡಿಗ, ಕುಂಭಾಶಿ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ವೇತ ಎಸ್ ಆರ್, ಶನೇಶ್ಚರ ದೇವಸ್ಥಾನ ಕೊಮೆ ಅಧ್ಯಕ್ಷ ಕೆ.ಎಸ್ ಗಣೇಶ್ ಉಪಸ್ಥಿತರಿದ್ದರು.

    ಪಟ್ಟಾಭಿರಾಮಚಂದ್ರ ಭಜನಾ ಮಂದಿರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ವಿಠ್ಠಲ ಅನಂತ ಪೈ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯದಶಿ ರಾಜು ಪೂಜಾರಿ ಸ್ವಾಗತಿಸಿದರು.

    ಕಾರ್ಯಕ್ರವನ್ನು ಹರೀಶ್ ಚಂದನ್ ಕೊರವಡಿ ನಿರೂಪಿಸಿ ವಂದಿಸಿದರು.

  • ಕೋಟತಟ್ಟು – ಪಡುಕರೆ ಶ್ರೀ ಶಿರಸಿ ಮಾರಿಕಾಂಬಾ ದೇವಸ್ಥಾನ ವಾರ್ಷಿಕ ವರ್ಧಂತ್ಯುತ್ಸವ, ಬ್ರಹ್ಮಕಲಶಾಭಿಷೇಕ ಸಂಪನ್ನ

    ಕೋಟತಟ್ಟು – ಪಡುಕರೆ ಶ್ರೀ ಶಿರಸಿ ಮಾರಿಕಾಂಬಾ ದೇವಸ್ಥಾನ ವಾರ್ಷಿಕ ವರ್ಧಂತ್ಯುತ್ಸವ, ಬ್ರಹ್ಮಕಲಶಾಭಿಷೇಕ ಸಂಪನ್ನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಶ್ರೀ ಶಿರಸಿ ಮಾರಿಕಾಂಬಾ ದೇವಸ್ಥಾನ ಕೋಟತಟ್ಟು – ಪಡುಕರೆ ಇಲ್ಲಿ ಗುರುವಾರ ಶ್ರೀ ದೇವಿಯ ದಿವ್ಯ ಸನ್ನಿಧಿಯಲ್ಲಿ ವಾರ್ಷಿಕ ವರ್ಧಂತ್ಯುತ್ಸವ, ಬ್ರಹ್ಮಕಲಶಾಬಿಷೇಕ ಕಾರ್ಯಕ್ರಮಗಳು ವೇ.ಮೂರ್ತಿ ಮಧುಸೂಧನ ಬಾಯರಿ ನೇತ್ರತ್ವದಲ್ಲಿ ನಡೆಯಿತು.

    ದೇವಳದಲ್ಲಿ ವಿವಿಧ ದೇವರುಗಳ ದರ್ಶನ ಸೇವೆ, ಪೂಜಾ ಕಾರ್ಯಗಳು, ಪ್ರಸಾದ ವಿತರಣೆ ನೆರವೆರಿತು.

    ಧಾರ್ಮಿಕ ವಿಧಿವಿಧಾನದಲ್ಲಿ ಕೋಟ ರಾಜೇಂದ್ರ ಅಡಿಗ ಭಾಗಿಯಾದರು.

    ದೇವಳದ ಆಡಳಿತ ಮಂಡಳಿ ಗೌರವಾಧ್ಯಕ್ಷ ಆನಂದ್ ಸಿ ಕುಂದರ್, ಅಧ್ಯಕ್ಷ ಬಸವ ಕುಂದರ್, ಪ್ರಧಾನ ಕಾರ್ಯದರ್ಶಿ ರಮೇಶ್ ಪೂಜಾರಿ, ಕೋಶಾಧಿಕಾರಿ ಶಿವಮೂರ್ತಿ ಉಪಾಧ್ಯ, ಉಪಾಧ್ಯಕ್ಷರಾದ ಕೃಷ್ಣ ಪುತ್ರನ್, ಯೋಗೇಂದ್ರ ತಿಂಗಳಾಯ, ಜತೆಕಾರ್ಯದರ್ಶಿ ಮಂಜುನಾಥ ನಾಯ್ಕ್, ಗೌರವ ಸಲಹೆಗಾರರಾದ ಸಂಜೀವ ಆರ್ ಕುಂದರ್, ಚಂದ್ರ ಪುತ್ರನ್, ಉದಯ್ ತಿಂಗಳಾಯ, ಅಶೋಕ್ ಪೂಜಾರಿ, ನಾಗಪ್ಪ ಪೂಜಾರಿ, ಬಾಬು ಪೂಜಾರಿ, ದೇವಳದ ಅರ್ಚಕರಾದ ನೆಂದಪ್ಪ ಪೂಜಾರಿ, ಪಾತ್ರಿಗಳಾದ ಸಂಜೀವ ಪೂಜಾರಿ,ನಂದಿ ಪೂಜಾರಿ, ಚಂದ್ರ ಮೆಂಡನ್ ಅಣ್ಣಪ್ಪ ತಿಂಗಳಾಯ, ರಾಜೇಂದ್ರ , ವಿಠ್ಠಲ ಪೂಜಾರಿ, ಸಿದ್ಧಿ ಶ್ರೀನಿವಾಸ ಪೂಜಾರಿ, ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.

    ಸಕಲ ವೈದಿಕ, ಧಾರ್ಮಿಕ, ಪೂಜಾ ಕಾರ್ಯಕ್ರಮದ ನಂತರ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನೆರವೆರಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಭಾಗವಾಗಿ ರಾತ್ರಿ 8.30 ಕುಂದಗನ್ನಡದ ಚೇತನ್ ನೈಲಾಡಿಯವರ ಹೆಂಗ್ಸರ್ ಪಂಚಾಯ್ತಿ ನಮ್ಮಂತಕೆ ರಾತ್ರಿಮ9.30.ಸಾಂಸ್ಕ್ರತಿಕ ಸಂಜೆ ಹಾಡು ನೃತ್ಯ, ಭಾವ ಬಣ್ಣಗಳ ತಿಲ್ಲಾನ ಜರಗಿತು.

  • ಬ್ರಹ್ಮಾವರ :ಆಡಳಿತ ವ್ಯವಸ್ಥೆಯು ಸಮಸ್ಯೆಗೆ ಪರಿಹಾರವಾಗಬೇಕು – ಸಚಿವ ಕೋಟ ಶ್ರೀನಿವಾಸ ಪೂಜಾರಿ

    ಬ್ರಹ್ಮಾವರ :ಆಡಳಿತ ವ್ಯವಸ್ಥೆಯು ಸಮಸ್ಯೆಗೆ ಪರಿಹಾರವಾಗಬೇಕು – ಸಚಿವ ಕೋಟ ಶ್ರೀನಿವಾಸ ಪೂಜಾರಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಆಡಳಿತ ವ್ಯವಸ್ಥೆಯು ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಅತ್ಯಂತ ಪ್ರಮುಖ ಭಾಗವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿಯಾಗಿರಬೇಕು ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಅವರು ಇಂದು ಬ್ರಹ್ಮಾವರದಲ್ಲಿ ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

    ಸಾರ್ವಜನಿಕರ ಬಹುತೇಕ ಸಮಸ್ಯೆಗಳು ಕಂದಾಯ ಇಲಾಖೆಗೆ ಸಂಬಂಧಪಟ್ಟಿದ್ದು. ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯಿಂದ ಕಾರ್ಯ ನಿರ್ವಹಿಸಿ, ಸಮಸ್ಯೆಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವ ಮೂಲಕ ಜನಪರ ಕೆಲಸಗಳನ್ನು ಮಾಡುವ ಮನೋಭಾವವನ್ನು ಸಿಬ್ಬಂದಿಗಳು ಬೆಳೆಸಿಕೊಳ್ಳುವಂತೆ ತಿಳಿಸಿದರು.

    ಉಡುಪಿ ಜಿಲ್ಲೆಯಲ್ಲಿ ಡೀಮ್ಡ್ ಅರಣ್ಯ ವಿನಾಯತಿಯ ನಂತರ ಕಂದಾಯ ಇಲಾಖೆಗೆ ನೀಡಿರುವ ಜಾಗವನ್ನು ಅರ್ಹರಿಗೆ 94 ಸಿ ಮತ್ತು 94 ಸಿಸಿ ಯಡಿಯಲ್ಲಿ ಆದ್ಯತೆಯ ಮೇಲೆ ಹಕ್ಕುಪತ್ರಗಳನ್ನು ನೀಡುವ ಕಾರ್ಯ ಆಗಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಬ್ರಹ್ಮಾವರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಕಾಮಗಾರಿಗಳಿಗಾಗಿ 310 ಕೋಟಿ ರೂ. ಮತ್ತು 195 ಕೊಟಿ ರೂ. ಗಳ ಯೋಜನೆಯನ್ನು ಕೈಗೊಳ್ಳಲಾಗಿದೆ. 80 ಕೋಟಿ ರೂ. ವೆಚ್ಚದಲ್ಲಿ ಬ್ರಹ್ಮಾವರ ಸೀತಾನದಿ ಚತುಷ್ಪಥ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ಕೇಂದ್ರ ಸರ್ಕಾರದ ನೆರವಿನಿಂದ 5 ಎಕ್ರೆ ಪ್ರದೇಶದಲ್ಲಿ 100 ಬೆಡ್ ಸಾಮರ್ಥ್ಯದ ಸುಸಜ್ಜಿತ ಇ.ಎಸ್.ಐ. ಆಸ್ಪತ್ರೆ ನಿರ್ಮಾಣ ಕಾಮಗಾರಿಯು ಟೆಂಡರ್ ಹಂತದಲ್ಲಿದೆ. ನೂತನ ತಾಲೂಕು ಕೋರ್ಟ್ ಹಾಗೂ ತಾಲೂಕು ಪಂಚಾಯತ್ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಗಳು ನಡೆದಿವೆ ಎಂದರು.

    ಪ್ರಸ್ತುತ ನೂತನ ತಾಲೂಕು ಆಡಳಿತ ಸೌಧದಲ್ಲಿ ಎಲ್ಲಾ ತಾಲೂಕು ಮಟ್ಟದ ಕಚೇರಿಗಳು ಒಂದೇ ಕಡೆ ಇರುವುದರಿಂದ ನಾಗರೀಕರಿಗೆ ಒಂದೇ ಕಡೆಯಲ್ಲಿ ಹಲವು ಸೌಲಭ್ಯಗಳು ಶೀಘ್ರದಲ್ಲಿ ದೊರೆಯಲಿದ್ದು, ಕಟ್ಟಡದಲ್ಲಿ ಪೀಠೋಪಕರಣ ಮತ್ತಿತರ ಸೌಲಭ್ಯಕ್ಕಾಗಿ ಹೆಚ್ಚುವರಿಯಗಿ 2.75 ಕೋಟಿ ರೂ. ಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸುವುದಾಗಿ ಕಂದಾಯ ಸಚಿವರು ಭರವಸೆ ನೀಡಿದ್ದಾರೆ ಎಂದರು.

    ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗವೇಣಿ ಪಂಡರೀನಾಥ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಮ್ ಹಾಕೆ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಕರ್ನಾಟಕ ಗೃಹ ಮಂಡಳಿ ಇಂಜಿನಿಯರ್ ಸಹನಾ ಮತ್ತಿತರರು ಉಪಸ್ಥಿತರಿದ್ದರು.

    ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಸ್ವಾಗತಿಸಿದರು, ಕಂದಾಯ ನಿರೀಕ್ಷಕ ಲಕ್ಷ್ಮಿ ನಾರಾಯಣ ಭಟ್ ವಂದಿಸಿದರು.

  • ಮಾ.23 ರಂದು ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ

    ಮಾ.23 ರಂದು ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ : ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಮಾರ್ಚ್ 23 ರಂದು ಮಧ್ಯಾಹ್ನ 2.30 ಕ್ಕೆ ಬ್ರಹ್ಮಾವರದಲ್ಲಿ ನಡೆಯಲಿದೆ.

    ಕಟ್ಟಡದ ಉದ್ಘಾಟನೆಯನ್ನು ಕಂದಾಯ ಸಚಿವ ಆರ್ ಅಶೋಕ್ ನೆರವೇರಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

    ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ವಿ ಸೋಮಣ್ಣ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್, ವಸತಿ ಇಲಾಖೆಯ ಕಾರ್ಯದರ್ಶಿ ಡಾ. ರವಿಶಂಕರ್ ಜೆ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಜಿ.ಸಿ ಪ್ರಕಾಶ್, ಕರ್ನಾಟಕ ಗೃಹ ಮಂಡಳಿ ಆಯುಕ್ತೆ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಮ್ ಹಾಕೆ, ಕರ್ನಾಟಕ ಗೃಹ ಮಂಡಳಿ ಮುಖ್ಯ ಅಭಿಯಂತರ ಶರಣಪ್ಪ ಸುಲಗಂಟೆ, ಕರ್ನಾಟಕ ಗೃಹ ಮಂಡಳಿ ಕಾರ್ಯದರ್ಶಿ ಸಿದ್ದಲಿಂಗಪ್ಪ ಎನ್ ಆರ್ ಹಾಗೂ ಮತ್ತಿತರರು ಭಾಗವಹಿಸಲಿರುವರು.

  • ಹರ್ತಟ್ಟು- ಕಲ್ಲಟ್ಟು ಹೊರೆಕಾಣಿಕೆ ಸರ್ಮಪಣೆ, ನಂದಿ ವಿಗ್ರಹ ಮೆರವಣಿಗೆ, ವಿವಿಧ ಧಾರ್ಮಿಕ ಕಾರ್ಯಕ್ರಮ

    ಹರ್ತಟ್ಟು- ಕಲ್ಲಟ್ಟು ಹೊರೆಕಾಣಿಕೆ ಸರ್ಮಪಣೆ, ನಂದಿ ವಿಗ್ರಹ ಮೆರವಣಿಗೆ, ವಿವಿಧ ಧಾರ್ಮಿಕ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಇಲ್ಲಿನ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ನೂತನ ಸುತ್ತು ಪೌಳಿ ಲೋಕಾರ್ಪಣೆ, ಅಷ್ಠಬಂಧ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ 22 ರಿಂದ24ರ ತನಕ ನಡೆಯಲಿದ್ದು ಆ ಪ್ರಯುಕ್ತ ಹೊರೆಕಾಣಿಕೆ ಸಮರ್ಪಣೆ, ನಂದಿ ವಿಗ್ರಹ ಮೆರವಣಿಗೆ ಅದ್ಧೂರಿಯಾಗಿ ಜರಗಿತು.

    ಕೋಟ ಮಹಾತೋಭಾರ ಶ್ರೀ ಹಿರೇಮಹಾಲಿಂಗೇಶ್ಚರ ದೇವಳದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸಿ ವೈಭಪೂರಿತ ಮೆರವಣಿಗೆ ಶ್ರೀ ದೇವಳವನ್ನು ತಲುಪಿತು.

    ಮೆರವಣಿಗೆಯಲ್ಲಿ ಕೀಲು ಕುದುರೆ, ತಟ್ಟಿರಾಯ, ಚಂಡೆವಾದನ, ವಾದ್ಯಘೋಷಗಳು, ಕಳಶ ಹಿಡಿದ ಮಹಿಳಾ ಭಕ್ತಾಧಿಗಳು ವಿಶೇಷವಾಗಿ ಗಮನ ಸೆಳೆಯಿತು. ಸ್ಥಳೀಯ ಗ್ರಾಮಸ್ಥರಿಂದ ಹೊರೆಕಾಣಿಕೆ ಶ್ರೀದೇವಳಕ್ಕೆ ಅರ್ಪಿಸಲಾಯಿತು. ದೇವಳದ ಗೌರವಾಧ್ಯಕ್ಷ ಆನಂದ್ ಸಿ ಕುಂದರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಗಾಣಿಗ, ಕಾರ್ಯದರ್ಶಿ ಹರೀಷ್ ದೇವಾಡಿಗ, ಕೋಶಾಧಿಕಾರಿ ಶ್ರೀಕಾಂತ್ ಶೆಣೈ, ಸಮಿತಿಯ ಪ್ರಮುಖರಾದ ಸಿದ್ಧ ದೇವಾಡಿಗ, ಚಂದ್ರ ಹಾಡಿಕೆರೆ, ತಿಮ್ಮ ಕಾಂಚನ್, ಆದರ್ಶ ಶೆಟ್ಟಿ, ಶೇಖರ್ ದೇವಾಡಿಗ, ನಾಗರಾಜ್ ಗಾಣಿಗ, ಸಂತೋಷ್ ಪೂಜಾರಿ, ಕೀರ್ತಿಶ್ ಪೂಜಾರಿ, ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಸದಸ್ಯರಾದ ಪಾಂಡು ಪೂಜಾರಿ, ದೇವಳದ ಅರ್ಚಕ ಸುಧೀರ್ ಐತಾಳ್ ಭಾಗಿಯಾದರು.

    ಮಂಗಳಾದ ಧಾರ್ಮಿಕ ವಿಧಿವಿಧಾನ
    ಮಂಗಳವಾರ ಶ್ರೀ ದೇವಳದಲ್ಲಿ ವೇ.ಮೂ.ಸುಧೀರ್ ಐತಾಳ್ ನೇತ್ರತ್ವದಲ್ಲಿ ಮಣಿಕಲ್ ಮಂಜುನಾಥ ಉಡುಪ ಸಂಯೋಜನೆಯೊಂದಿಗೆ ಸಹಸ್ರ ಸಂಕೇತನಾಮ, ಅಹಿತ ಸಂಕೇತನಾಮ, ಚಕ್ರಾಬ್ಧ ಪೂಜೆ, ದ್ವಾದಶ ಪೂಜೆ ಆರಾಧನೆ ನಡೆಯಿತು.

    ಪೂಜಾ ಕಾರ್ಯದಲ್ಲಿ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಸುರೇಶ್ ಗಾಣಿಗ ದಂಪತಿಗಳು ಭಾಗಿಯಾಗಿಯಾದರು.

  • ತೆಕ್ಕಟ್ಟೆ – ಕೊಮೆ ಕೊರವಡಿ ಪಟ್ಟಾಭಿರಾಮಚಂದ್ರ ಮಂದಿರ ಲೋಕಾರ್ಪಣೆ, ಸುವರ್ಣ ಸಂಭ್ರಮ, ಶ್ರೀರಾಮನ ವಿಗ್ರಹ, ಪ್ರಭಾವಳಿ, ಬೆಳ್ಳಿ ನಗರ ಭಜನಾ ಮಂಟಪ ಪುರಮೆರವಣಿಗೆ

    ತೆಕ್ಕಟ್ಟೆ – ಕೊಮೆ ಕೊರವಡಿ ಪಟ್ಟಾಭಿರಾಮಚಂದ್ರ ಮಂದಿರ ಲೋಕಾರ್ಪಣೆ, ಸುವರ್ಣ ಸಂಭ್ರಮ, ಶ್ರೀರಾಮನ ವಿಗ್ರಹ, ಪ್ರಭಾವಳಿ, ಬೆಳ್ಳಿ ನಗರ ಭಜನಾ ಮಂಟಪ ಪುರಮೆರವಣಿಗೆ

    ಕುಂದಾಪುರ ಮಿರರ್ ‌ಸುದ್ದಿ…

    ಕೋಟ: ಇಲ್ಲಿನ ಕೊಮೆ ಕೊರವಡಿ ಶ್ರೀ ಪಟ್ಟಾಭಿರಾಮಚಂದ್ರ ಮಂದಿರದ ಸುವರ್ಣ ಸಂಭ್ರಮ, ನೂತನ ಶಿಲಾಮಯ ದೇಗುಲ, ಶ್ರೀರಾಮಮೂರ್ತಿ ಸ್ಥಾಪನೆ, ಬ್ರಹ್ಮಕುಂಭಾಭಿಷೇಕ,ಕೋಟಿ ಶ್ರೀರಾಮತಾರಕ ಲೇಖನ ಯಜ್ಞ , ಮಹಾಅನ್ನಸಂತರ್ಪಣೆ , ಶ್ರೀರಾಮ ಸಮುದಾಯ ಭವನ ಲೋಕಾರ್ಪಣೆ ಮಾ.21 ರಿಂದ 30ತನಕ ಜರಗಲಿದ್ದು ಆ ಪ್ರಯುಕ್ತ ಶ್ರೀರಾಮನ ವಿಗ್ರಹ, ಪ್ರಭಾವಳಿ, ಬೆಳ್ಳಿ ನಗರ ಭಜನಾ ಮಂಟಪ ಪುರಮೆರವಣಿಗೆ ಅದ್ಧೂರಿಯಾಗಿ ಜರಗಿತು.

    ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ಪುರಮೆರವಣಿಗೆ ಕೊಮೆ ಕೊರವಡಿ ನವೀಕೃತ ಶ್ರೀ ರಾಮದೇಗಲದವರೆಗೆ ವೈಭವಪೂರಿತವಾಗಿ ಸಾಗಿತು.
    ಇದೇ ಮೊದಲ ಬಾರಿಗೆ ಕರಾವಳಿ ಭಾಗದಲ್ಲಿ ಶ್ರೀರಾಮ ಮಂದಿರದ ಪರಮೆರವಣಿ ಅದ್ಧೂರಿಯಾಗಿ ಜನಮನಸೂರ್ಯಗೊಳಿಸಿತು.

    ಮೆರವಣಿಗೆಯಲ್ಲಿ ವಿವಿಧ ಬಗೆಯ ವೇಷಗಳು ಗಮನ ಸೆಳೆಯಿತು. ಪುಟಾಣಿ ಭಜಕರಿಂದ ಹಿಡಿದು ಮಹಿಳೆಯರು, ಪುರುಷ ಭಜಕರು ತಾಳ ಹಿಡಿದು ನರ್ತಿಸಿದರು. ಚಂಡೆ ವಾದನ, ತಟ್ಟಿರಾಯ, ವಿವಿಧ ವೇಷಗಳಾದ ಯಕ್ಷಗಾನ,ಹನುಮ ಪಾತ್ರದಾರಿ, ಹುಲಿವೇಷ ವಿಶೇಷವಾಗಿ ಗಮನ ಸೆಳೆಯಿತು. ದಾರಿಯೂದ್ದಕ್ಕೂ ಕೇಸರಿ ವಸ್ತ್ರದಾರಿಗಳು, ಭಗವತ್ ಧ್ವಜ ರಾರಾಜಿಸಿದವು. ಈ ಸಂದರ್ಭದಲ್ಲಿ ಮಂದಿರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಆನಂದ್ ಸಿ ಕುಂದರ್, ಅಧ್ಯಕ್ಷ ವಿಠ್ಠಲ್ ಅನಂತ ಪೈ ಸಾಲಿಗ್ರಾಮ, ದೇಗುಲದ ಅಧ್ಯಕ್ಷ ಕೆ.ಚಂದ್ರ ಕಾಂಚನ್, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ರಾಜು ಪೂಜಾರಿ, ಉಮೇಶ್ ಮೆಂಡನ್, ಧಾರ್ಮಿಕ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಟಿ.ಗಣಪತಿ ಶ್ರೀಯಾನ್, ತೆಕ್ಕಟ್ಟೆ ಗ್ರಾ.ಪಂ ಅಧ್ಯಕ್ಷೆ ಮಮತಾ ದೇವಾಡಿಗ, ಉಪಾಧ್ಯಕ್ಷರಾದ ಸಂಜೀವ ದೇವಾಡಿಗ, ಸದಸ್ಯರಾದ ಶೇಖರ್ ಕಾಂಚನ್, ವಿಜಯ ಭಂಢಾರಿ, ಗೋಪಾಲ ಕಾಂಚನ್, ವಿನೋದ ದೇವಾಡಿಗ, ಕಮಲ ಪೂಜಾರ್ತಿ, ಪ್ರೇಮಾ, ಕೊಮೆ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲ ಪೂಜಾರಿ, ಹಿಂದೂ ಮುಖಂಡರಾದ ಶ್ರೀನಾಥ್ ಶೆಟ್ಟಿ, ಪ್ರಶಾಂತ್ ಮಡಪಾಡಿ, ಮಂದಿರದ ಸಮಿತಿ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಸಂಘಸಂಸ್ಥೆಗಳ ಪದಾಧಿಕಾರಿಗಳು, ಕೊಮೆ, ಕೊರವಡಿ ಗ್ರಾಮಸ್ಥರು ಭಾಗಿಯಾದರು.

  • ಮಣೂರು ಪಡುಕರೆ-ಸುಸಜ್ಜಿತ ಶೌಚಾಲಯ ಲೋಕಾರ್ಪಣೆ

    ಮಣೂರು ಪಡುಕರೆ-ಸುಸಜ್ಜಿತ ಶೌಚಾಲಯ ಲೋಕಾರ್ಪಣೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲೆ ಇಲ್ಲಿಗೆ ಕೋಟ ಗ್ರಾಮಪಂಚಾಯತ್ ಉದ್ಯೋಗಖಾತ್ರಿ ಯೋಜನೆ ಹಾಗು ವಿವಿಧ ಇಲಾಖೆಯಿಂದ ಸುಮಾರು 7.30ಲಕ್ಷ ರೂ ಅನುದಾನದಡಿ ಸುಸಜ್ಜಿತ ಶೌಚಾಲಯ ನಿರ್ಮಿಸಿದ್ದು ಇದರ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು.

    ಶೌಚಾಲಯವನ್ನು ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿದರು.

    ಬ್ರಹ್ಮಾವರ ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ವಿ ಇಬ್ರಾಹಿಂಪು ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ,ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸುನೀತಾ,ಉಪಾಧ್ಯಕ್ಷೆ ಜಯಂತಿ ಪೂಜಾರಿ,ಸದಸ್ಯರಾದ ಸುಧಾ.ಎ.ಪೂಜಾರಿ,ಮಣೂರು ಶಿವರಾಮ್ ಶೆಟ್ಟಿ, ಭುಜಂಗ ಗುರಿಕಾರ,ಶೇಖರ್ ಗಿಳಿಯಾರು,ಜಯರಾಮ್ ಶೆಟ್ಟಿ, ಪಾಂಡು ಪೂಜಾರಿ,ಶಾರದ ಆರ್ ಕಾಂಚನ್,ಗುಲಾಬಿ, ಪಂಚಾಯ್ ಲೆಕ್ಕಾಸಹಾಯಕ ಅಧಿಕಾರಿ ಪೂರ್ಣಿಮಾ ಅಧಿಕಾರಿ,ಸಂಯುಕ್ತ ಪ್ರೌಢಶಾಲಾ ಮುಖ್ಯ ಶಿಕ್ಷಕ ನಿರಂಜನ್ ನಾಯಕ್,ಶಿಕ್ಷಕರಾದ ರಾಮದಾಸ ನಾಯಕ್,ಪಂಚಾಯತ್ ಕಾರ್ಯದರ್ಶಿ ಶೇಖರ್ ಮರವಂತೆ ,ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜಯಂತಿ,ಗೀತಾನಂದ ಸಮಾಜ ಕಾರ್ಯವಿಭಾಗದ ರವಿಕಿರಣ್ ಕೋಟ, ಮತ್ತಿತರರು ಉಪಸ್ಥಿತರಿದ್ದರು.