Category: ಸುದ್ದಿ

  • ಕೋಡಿ ಗ್ರಾಮಪಂಚಾಯತ್ ಹಕ್ಕುಪತ್ರ ಸಮಸ್ಯೆ: 178 ಪೊರಂಬೋಕು ಪ್ರಕರಣ ವಿರಹಿತಕ್ಕೆ ಸರಕಾರ ಆದೇಶ

    ಕೋಡಿ ಗ್ರಾಮಪಂಚಾಯತ್ ಹಕ್ಕುಪತ್ರ ಸಮಸ್ಯೆ: 178 ಪೊರಂಬೋಕು ಪ್ರಕರಣ ವಿರಹಿತಕ್ಕೆ ಸರಕಾರ ಆದೇಶ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಡಿ ಕನ್ಯಾಣ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವಾರು ದಶಕಗಳಿಂದ ವಾಸವಿರುವ ಸುಮಾರು 387 ಕುಟುಂಬಗಳಿಗೆ ಸಿ.ಆರ್.ಝಡ್. ಮೊದಲಾದ ಕಾರಣಕ್ಕೆ ಹಕ್ಕುಪತ್ರ ಸಿಕ್ಕಿಲ್ಲ ಹೀಗಾಗಿ ಸ್ಥಳೀಯ ನಿವಾಸಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು ಹೋರಾಟ ನಡೆಸುತ್ತಿದ್ದರು ಪ್ರಸ್ತುತ 161ಮಂದಿಯ 45.19 ಎಕ್ರೆ ಅನಾದಿನ ಭೂಮಿ, 38.54 ಎಕ್ರೆ ವಿಸ್ತೀರ್ಣದ 178 ಪೊರಂಬೋಕು ಭೂಮಿಯನ್ನು ಪೆÇರಂಬೋಕು ಶೀರ್ಷಿಕೆಯಿಂದ ವಿರಹಿತಗೊಳಿಸಿ ಸರಕಾರದ ಕಂದಾಯ ಇಲಾಖೆಯ ಮುಖ್ಯಸ್ಥರು ಉಡುಪಿ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ ಎಂದು ಕೋಡಿ ಗ್ರಾ.ಪಂ. ಅಧ್ಯಕ್ಷ ಪ್ರಭಾಕರ್ ಮೆಂಡನ್ ಅವರು ಮಾ.11ರಂದು ಕೋಡಿಯಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪೊರಂಬೋಕು ಶೀರ್ಷಿಕೆಯಿಂದ ವಿರಹಿತಗೊಳಿಸಿರುವುದರಿಂದ ಹಕ್ಕುಪತ್ರ ನೀಡಲು ಅನುಕೂಲವಾಗಿದ್ದು ಸರ್ವೆ ಕಾರ್ಯದ ಅನಂತರ ಶೀಘ್ರದಲ್ಲೇ ಫಲಾನುಭವಿಗಳಿಗೆ ಹಕ್ಕುಪತ್ರ ಸಿಗಲಿದೆ ಎಂದರು. ಈ ಹಿಂದೆ 471 ಕುಟುಂಬಗಳಿಗೆ ಸಿ.ಆರ್.ಝಡ್. ಹಾಗೂ ವಾಸ್ತವ್ಯದ ಭೂ ಭಾಗಗಳು ಸಮುದ್ರ ಎಂದು ಆರ್.ಟಿ.ಸಿ.ಯಲ್ಲಿ ದಾಖಲಾದ್ದರಿಂದ ಹಾಗೂ ಸರಕಾರದ ಅನಾದಿನ ಭೂಮಿ ಎನ್ನುವ ಕಾರಣಕ್ಕೆ ಹಕ್ಕುಪತ್ರ ಸಿಗದೆ ಸಮಸ್ಯೆ ಎದುರಾಗಿತ್ತು. ಇದರಲ್ಲಿ 79ಕುಟುಂಬಗಳಿಗೆ ಹಕ್ಕುಪತ್ರ ಈ ಹಿಂದೆ ಮಂಜೂರಾಗಿದ್ದು ಅದರಲ್ಲಿ 22 ಮಂದಿ ಹಕ್ಕುಪತ್ರ ಪಡೆದಿದ್ದಾರೆ. ಪ್ರಸ್ತುತ 387ಕುಟುಂಬಗಳಿಗೆ ಸಮಸ್ಯೆ ಇದ್ದು 161ಮಂದಿಯ ಅನಾದಿನ ಭೂಮಿ, 178ಮಂದಿಯ ಪೆÇರಂಬೋಕು ಭೂಮಿ, ದೇವಸ್ಥಾನ, ಅಂಗನವಾಡಿ ಸೇರಂತೆ ಇತರ 20 ಪ್ರಕರಣಗಳಿಗೆ ಹಕ್ಕುಪತ್ರ ಸಿಗಲಿದೆ. ಸಮುದ್ರ ಎಂದು ದಾಖಲಾಗಿರುವ 132 ಪ್ರಕರಣಗಳು ಪರಿಶೀಲನೆ ಹಂತದಲ್ಲಿದ್ದು ಸರ್ವೇ ನಂಬರ್ ನೀಡುವ ಇನ್ನಿತರ ಕಾರ್ಯಗಳು ಕಂದಾಯ ಇಲಾಖೆ ಮಟ್ಟದಲ್ಲಿ ನಡೆಯಬೇಕಿದ್ದು ಈ ಭೂಮಿಯಲ್ಲಿ ವಾಸವಿರುವವರಿಗೆ ಹಕ್ಕುಪತ್ರ ನೀಡುವುದು ಸ್ವಲ್ಪ ಸಮಯಾವಕಾಶ ಬೇಕು ಎಂದು ಅಧ್ಯಕ್ಷರು ತಿಳಿಸಿದರು.

    ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ಸತತ ಪರಿಶ್ರಮ ಹಾಗೂ ಅಧಿಕಾರಿಗಳ ಸಹಕಾರದಿಂದ ಹಕ್ಕುಪತ್ರ ಕನಸು ನನಸಾಗಿದ್ದು,ಈ ಹಂತದಲ್ಲಿ ಅನೇಕ ಮಂದಿ ಹಕ್ಕುಪತ್ರ ನಮ್ಮಹೋರಾಟದಿಂದ ಸಿಕ್ಕಿದೆ ಎನ್ನುವಂತೆ ಬಿಂಬಿಸಿಕೊಳ್ಳುವುದು ಸರಿಯಲ್ಲ ಎಂದರು, ಹಾಗೂ ಈ ಹಿಂದೆ ಕಂದಾಯ ಮೊತ್ತವನ್ನು ಐದು ಸಾವಿರ ನಿಗಡಿಪಡಿಸಲಾಗಿದ್ದು ದುಬಾರಿ ಎನ್ನುವ ಕಾರಣಕ್ಕೆ ಹಕ್ಕುಪತ್ರ ಪಡೆದಿರಲಿಲ್ಲ. ಈ ಬಾರಿ ಕನಿಷ್ಠ ಕಂದಾಯ ಮೊತ್ತ ಮಲ್ಪೆ ಕೊಳ ಮಾದರಿಯಲ್ಲಿ ನಿಗದಿಯಾಗಲಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಗ್ರಾ.ಪಂ. ಸದಸ್ಯ ಕೃಷ್ಣ ಪೂಜಾರಿ, ಜಯಶ್ರೀ, ರಶ್ಮಿಕಾ, ಗೀತಾ ಖಾರ್ವಿ, ಸರಸ್ವತಿ, ಬಿಜೆಪಿ ಮುಖಂಡ ಮಹಾಬಲ ಕುಂದರ್, ನಾಗರಾಜ ವಿ. ಕುಂದರ್, ಮನೋಹರ್ ಕುಂದರ್ ಕೋಡಿಬೆಂಗ್ರೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

     

  • ಬೀಜಾಡಿ: ನಾಗಮಂಡಲೋತ್ಸವ ಧಾರ್ಮಿಕ ಕಾರ್ಯಕ್ರಮ ಆರಂಭ

    ಬೀಜಾಡಿ: ನಾಗಮಂಡಲೋತ್ಸವ ಧಾರ್ಮಿಕ ಕಾರ್ಯಕ್ರಮ ಆರಂಭ

    ಕುಂದಾಪುರ ಮಿರರ್ ಸುದ್ದಿ….

    ಕುಂದಾಪುರ: ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀವಾ೯ದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನದಲ್ಲಿ ಮಾ.13ರಂದು ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಕೆಳಬನದಲ್ಲಿ ಜರುಗಲಿರುವ ಏಕಪವಿತ್ರ ನಾಗಮಂಡಲೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಭಾನುವಾರದಿಂದ ಆರಂಭಗೊಂಡವು.
    ವೇದಮೂತಿ೯ ಶ್ರೀ ಮಧುಸೂಧನ ಬಾಯಿರಿ ಮಣೂರು ಇವರ ನೇತೃತ್ವದಲ್ಲಿ ಪ್ರಾರ್ಥನಾ ಫಲನ್ಯಾಸ ಪೂರ್ವಕ ಸಾಮೂಹಿಕ ಪ್ರಾರ್ಥನೆ, ಗಣೇಶ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ಋತ್ವಿಗ್ವರಣೀ ಗಣಯಾಗ, ಪವಮಾನ ಹೋಮ, ಆಯುತ ಸಂಖ್ಯಾತಿಲ ಹೋಮ, ಸಂಜೆ ಶ್ರೀ ದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ವಾಸ್ತು ರಾಕ್ಷೊಘ್ನ ಹೋಮ, ದಿಗ್ಬಲಿ ಕಾರ್ಯಕ್ರಮಗಳು ನಡೆಯಿತು.

    ಸೇವಾಕರ್ತರಾದ ರಾಮಚಂದ್ರ ಮತ್ತು ಕುಟುಂಬಿಕರು, ನಾಗಮಂಡಲೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

    ಮಾ.13ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಮಹಾ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಧಾಮಿ೯ಕ ಸಭಾ ಕಾರ್ಯಕ್ರಮ, ರಾತ್ರಿ 7ಕ್ಕೆ ನಾಗನಿಗೆ ಹಾಲಿಟ್ಟು ಸೇವೆ, ಮಂಡಲ ಪೂಜೆ, ಏಕಪವಿತ್ರ ನಾಗಮಂಡಲೋತ್ಸವ ನಂತರ ಮಹಾಪ್ರಸಾದದೊಂದಿಗೆ ಮಹಾಮಂತ್ರಾಕ್ಷತೆ ವಿತರಣೆಯಾಗಲಿದೆ. ಸಾಂಸ್ಕತಿಕ ಕಾರ್ಯಕ್ರಮದ ಅಂಗವಾಗಿ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ಕಲಾಬಳಗದ ವತಿಯಿಂದ ಮಕ್ಕಳ ಯಕ್ಷಗಾನ ಕಂಸ ದಿಗ್ವಿಜಯ ಪ್ರದರ್ಶನಗೊಳ್ಳಲಿದೆ.

  • ಕಿರಿಮಂಜೇಶ್ವರ : ಶ್ರೀರಾಮ ಭಜನಾ ಮಂದಿರ ಗಂಗೆಬೈಲು – ವಾರ್ಷಿಕ ಭಜನಾ ಮಹೋತ್ಸವ

    ಕಿರಿಮಂಜೇಶ್ವರ : ಶ್ರೀರಾಮ ಭಜನಾ ಮಂದಿರ ಗಂಗೆಬೈಲು – ವಾರ್ಷಿಕ ಭಜನಾ ಮಹೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು –ಶ್ರೀರಾಮ ಭಜನಾ ಮಂದಿರ ಗಂಗೆಬೈಲು ನಾಗೂರು ಕಿರಿಮಂಜೇಶ್ವರ ಇದರ ವಾರ್ಷಿಕ ಭಜನಾ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಿತು.

    ಧಾರ್ಮಿಕ ಭಜನಾ ಕಾರ್ಯಕ್ರಮಕ್ಕೆ ಬೈಂದೂರು ಶಾಸಕರಾದ ಬಿ ಎಂ ಸುಕುಮಾರ್ ಶೆಟ್ಟಿ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ದಕ್ಷಿಣ ಕನ್ನಡ, ಉಡುಪಿ ಮೀನು ಮಾರಾಟ ಫೆಡರೇಷನ್‌ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಬೈಂದೂರು ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಶ್ರೀಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಇದರ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ, ಉದ್ಯಮಿಗಳಾದ ಗೋವಿಂದ ಬಾಬು ಪೂಜಾರಿ, ಪ್ರಣಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಹೆಗ್ಡೆ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಶ್ಯಾಮಲ ಕುಂದರ್ ಉಪಸ್ಥಿತರಿದ್ದರು.

  • ಬೀಜಾಡಿ: ನಾಗಮಂಡಲೋತ್ಸವ ಹಸಿರು ಹೊರೆಕಾಣಿಕೆ ಮೆರವಣಿಗೆ

    ಬೀಜಾಡಿ: ನಾಗಮಂಡಲೋತ್ಸವ ಹಸಿರು ಹೊರೆಕಾಣಿಕೆ ಮೆರವಣಿಗೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀವಾ೯ದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನದಲ್ಲಿ ಮಾ.13ರಂದು ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಕೆಳಬನದಲ್ಲಿ ಜರುಗಲಿರುವ ಏಕಪವಿತ್ರ ನಾಗಮಂಡಲೋತ್ಸವದ ಅಂಗವಾಗಿ ಶನಿವಾರ ಹಸಿರು ಹೊರೆಕಾಣಿಕೆ ಪುರ ಮೆರವಣಿಗೆ ನಡೆಯಿತು.

    ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಿಂದ ಹೊರಟ ಹಸಿರು ಹೊರೆಕಾಣಿಕೆ ಪುರ ಮೆರವಣಿಗೆಗೆ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಿರಿಯ ಸದಸ್ಯ ಸುರೇಶ್ ಬೆಟ್ಟಿನ್ ಚಾಲನೆ ನೀಡಿ ಶುಭ ಹಾರೈಸಿದರು. ಸೇವಾಕರ್ತರಾದ ರಾಮಚಂದ್ರ ಮತ್ತು ಕುಟುಂಬಿಕರು, ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ನಾಗರಾಜ್, ಸದಸ್ಯರಾದ ವಾದಿರಾಜ್ ಹೆಬ್ಬಾರ್, ಚಂದ್ರ ಬಿ.ಎನ್, ಪುರಮೆರವಣಿಗೆ ಸಂಚಾಲಕ ರಾಮನಾಯ್ಕ್, ನಾಗಮಂಡಲೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
    ತಟ್ಟಿರಾಯ, ಕೀಲು ಕುದುರೆ, ಪಂಚವಾದ್ಯಗಳು, ಚಂಡೆವಾದನ, ಬ್ಯಾಂಡ್, ಭಜನೆ, ನಾಮಸಂಕೀರ್ತನೆ ಸೇರಿದಂತೆ ಕಳಸ ಹಿಡಿದ ಮಹಿಳೆಯರು ಇನ್ನಿತರ ಟ್ಯಾಬ್ಲೋಗಳು ಮೆರವಣಿಗೆಯ ವೈಭವನ್ನು ಹೆಚ್ಚಿಸಿದವು.

    ಮಾ.12ರಂದು ಬೆಳಿಗ್ಗೆ ಪ್ರಾರ್ಥನಾ ಫಲನ್ಯಾಸ ಪೂರ್ವಕ ಸಾಮೂಹಿಕ ಪ್ರಾರ್ಥನೆಯೊಂದಿಗೆ ವಿವಿಧ ಧಾಮಿ೯ಕ ಕಾರ್ಯಕ್ರಮಗಳು ಜರುಗಲಿದೆ. ಮಾ.13ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಮಹಾ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಧಾಮಿ೯ಕ ಸಭಾ ಕಾರ್ಯಕ್ರಮ, ರಾತ್ರಿ 7ಕ್ಕೆ ನಾಗನಿಗೆ ಹಾಲಿಟ್ಟು ಸೇವೆ, ಮಂಡಲ ಪೂಜೆ, ಏಕಪವಿತ್ರ ನಾಗಮಂಡಲೋತ್ಸವ ನಂತರ ಮಹಾಪ್ರಸಾದದೊಂದಿಗೆ ಮಹಾಮಂತ್ರಾಕ್ಷತೆ ವಿತರಣೆಯಾಗಲಿದೆ. ಸಾಂಸ್ಕತಿಕ ಕಾರ್ಯಕ್ರಮದ ಅಂಗವಾಗಿ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ಕಲಾಬಳಗದ ವತಿಯಿಂದ ಮಕ್ಕಳ ಯಕ್ಷಗಾನ ಕಂಸ ದಿಗ್ವಿಜಯ ಪ್ರದರ್ಶನಗೊಳ್ಳಲಿದೆ.

  • ಗೀತಾನಂದ ಫೌಂಡೇಶನ್ ವತಿಯಿಂದ ಪ್ರೇರಣಾ-2023 ಕಾರ್ಯಕ್ರಮ ಆಯೋಜನೆ

    ಗೀತಾನಂದ ಫೌಂಡೇಶನ್ ವತಿಯಿಂದ ಪ್ರೇರಣಾ-2023 ಕಾರ್ಯಕ್ರಮ ಆಯೋಜನೆ

    ವಿದ್ಯಾರ್ಥಿಗಳ ಪರೀಕ್ಷಾ ತಯಾರಿಯಲ್ಲಿ ಪೋಷಕರ ಪಾತ್ರ ಗಣನೀಯವಾದದ್ದು- ಆನಂದ್ ಸಿ ಕುಂದರ್

    ಕುಂದಾಪುರ ಮಿರರ್ ಸುದ್ದಿ…
    ಕೋಟ: ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಿಸಲು ಶಿಕ್ಷಕರಿಗಿಂತ ಪೋಷಕರ ಪಾತ್ರ ಗಣನೀಯವಾದದ್ದು ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದರು.

    ಶನಿವಾರ ಶಾಲಾ ಸಭಾಂಗಣದಲ್ಲಿ ಗೀತಾನಂದ ಫೌಂಡೇಶನ್ ಮಣೂರು ಇವರ ನೇತ್ರತ್ವದಲ್ಲಿ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟ ಘಟಕ, ಮನಸ್ಮಿತ ಫೌಂಡೇಶನ್ ಕೋಟ ಇವರ ಸಹಯೋಗದೊಂದಿಗೆ ಸಂಯುಕ್ತ ಪ್ರೌಢಶಾಲಾ ಮಕ್ಕಳಿಗೆ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಪರೀಕ್ಷಾ ತಯಾರಿ ಪ್ರೇರಣಾ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ
    ಪರೀಕ್ಷಾ ಭಯವನ್ನು ಹೊಗಲಾಡಿಸಿ ವಿದ್ಯಾರ್ಥಿಗಳ ಮನೋಬಲವನ್ನು ಹೆಚ್ಚಿಸಲು ಪೋಷಕರು ಪ್ರಯತ್ನಿಸಿಬೇಕು. ವಿದ್ಯಾರ್ಥಿಗಳು ಮೊಬೈಲ್ ವ್ಯಾಮೂಹ ತೊರೆದು ಶೈಕ್ಷಣಿಕ ಬದುಕಿಗೆ ಮುನ್ನುಡಿ ಬರೆಯಿರಿ ಎಂದರಲ್ಲದೆ.ನಮ್ಮ ಶೈಕ್ಷಣಿಕ ದಿನಗಳಲ್ಲಿ ಶಿಕ್ಷಕರು ದಂಡಿಸಿ ಪಾಠಪ್ರವಚ ನೀಡುತ್ತಿದ್ದರು.
    ಪ್ರಸ್ತುತ ಶೈಕ್ಷಣಿಕ ವಿದ್ಯಾಮಾನಗಳನ್ನು ಗಮನಿಸಿದರೆ ಶಿಕ್ಷಕರು ಮಕ್ಕಳಿಗೆ ದಂಡಿಸಿದರೆ ಮಕ್ಕಳ ಪೋಷಕರೆ ವಿದ್ಯಾಕೇಂದ್ರಕ್ಕೆ ಬಂದು ಶಿಕ್ಷಕರಿಗೆ ಬೆದರಿಸುವ ಸನ್ನಿವೇಶ ಶೈಕ್ಷಣಿಕ ಬದುಕಿಗೆ ಹಿನ್ನಡೆಯಾಗಲಿದೆ, ಈ ರೀತಿ ಬೆಳವಣಿಗೆ ಪೂರಕವಾದುದ್ದಲ್ಲ ಎಂದು ಪೋಷಕರಿಗೆ ಕಿವಿಮಾತು ಹೇಳಿದರು. ಶಾಲಾ ಉನ್ನಿತಿಕರಣ ಸೇರಿದಂತೆ ವಿದ್ಯಾರ್ಥಿಗಳಿಗೆ ಬೇಕಾದ ಸವಲತ್ತು ಗೀತಾನಂದ ಫೌಂಡೇಶನ್ ಒದಗಿಸುತ್ತಿದೆ, ಇದರ ಸದುಪಯೋಗ ಪಡೆದು ಸಾಧನೆಯ ಪಾಲು ನಿಮ್ಮದಾಗಿಸಿಕೊಳ್ಳಿ ಎಂದು ಕರೆನೀಡಿದರು.

    ಶಾಲಾ ಮುಖ್ಯ ಶಿಕ್ಷಕ ನಿರಂಜನ್ ನಾಯಕ್ ಅಧ್ಯಕ್ಷತೆಯನ್ನು ವಹಿಸಿದ್ದರು.

    ಸಂಪನ್ಮೂಲ ವ್ಯಕ್ತಿಗಳಾಗಿ ಮನೋವೈದ್ಯ ಡಾ.ಪ್ರಕಾಶ್ ತೋಳಾರ್, ಉಡುಪಿ ಡಯೆಟ್ ಕಾಲೇಜಿನ ಉಪ ಪ್ರಾಂಶುಪಾಲ ಅಶೋಕ್ ಕಾಮತ್ ಭಾಗವಹಿಸಿದರು.

    ಮುಖ್ಯ ಅಭ್ಯಾಗತರಾಗಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ, ,ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್, ಮೊಗವೀರ ಯುವ ಸಂಘ ಕೋಟ ಘಟಕದ ಅಧ್ಯಕ್ಷ ರಂಜೀತ್ ಕುಮಾರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ, ಸಿಆರ್ ಪಿ ಸವಿತ ಕಾರ್ಕಡ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ರಾಮದಾಸ್ ನಾಯಕ್ ಸ್ವಾಗತಿಸಿದರು.

    ಕಾರ್ಯಕ್ರಮವನ್ನು ಶಾಲಾ ಶಿಕ್ಷಕ ಶ್ರೀಧರ ಶಾಸ್ತ್ರಿ ನಿರೂಪಿಸಿದರು. ಶಿಕ್ಷಕಿ ಹರ್ಷಿತ ವಂದಿಸಿದರು. ಗೀತಾನಂದ ಸಮಾಜ ಕಾರ್ಯ ವಿಭಾಗದ ರವಿಕಿರಣ್ ಕೋಟ ಸಹಕರಿಸಿದರು.

  • ಕುಂದಾಪುರ :ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮಂಗಳೂರು ವಿ.ವಿ.ಯ ಮೂರು ರ್ಯಾಂಕ್‍ಗಳು

    ಕುಂದಾಪುರ :ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮಂಗಳೂರು ವಿ.ವಿ.ಯ ಮೂರು ರ್ಯಾಂಕ್‍ಗಳು

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಮಂಗಳೂರು ವಿ.ವಿ.ಯ 2021-22ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಶುಭಲಕ್ಷ್ಮೀ ಬಿ.ಬಿ.ಎ. ಪದವಿಯಲ್ಲಿ ದ್ವಿತೀಯ ರ್ಯಾಂಕ್, ಅಕ್ಷಯ್ ಶೆಟ್ಟಿ ಬಿ.ಎಸ್ಸಿ. ಪದವಿಯಲ್ಲಿ ದ್ವಿತೀಯ ರ್ಯಾಂಕ್, ಅಕ್ಷತಾ ಬಿ.ಕಾಂ. ಪದವಿಯಲ್ಲಿ ಒಂಭತ್ತನೇ ರ್ಯಾಂಕ್ ಪಡೆದುಕೊಂಡಿರುತ್ತಾರೆ.

    ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಆಡಳಿತ ಮಂಡಳಿಯ ಸದಸ್ಯರು, ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

  • ಉಡುಪಿ: ಜಿಲ್ಲೆಯ ಜನತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತು ವಿತರಣೆಯಲ್ಲಿ ಸಂಪೂರ್ಣ ಗುರಿ ಸಾಧನೆ: ಸಚಿವ ಎಸ್.ಅಂಗಾರ.

    ಉಡುಪಿ: ಜಿಲ್ಲೆಯ ಜನತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತು ವಿತರಣೆಯಲ್ಲಿ ಸಂಪೂರ್ಣ ಗುರಿ ಸಾಧನೆ: ಸಚಿವ ಎಸ್.ಅಂಗಾರ.

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸವಲತ್ತುಗಳನ್ನು ಶೇ.98 ರಷ್ಟು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಜಿಲ್ಲೆಯ ನಾಗರೀಕರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡಲಾಗಿದ್ದು, ಮಾರ್ಚ್ ಮಾಹೆಯ ಒಳಗೆ ಸಂಪೂರ್ಣ ಗುರಿ ಸಾಧಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.

    ಅವರು ಇಂದು ಕಟಪಾಡಿಯಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ನಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಮಾತೃವಂದನಾ ಯೋಜನೆಯಡಿಯಲ್ಲಿ 38,915 ಫಲಾನುಭವಿಗಳಿಗೆ 17.14 ಕೋಟಿ ರೂ. ನೀಡಲಾಗಿದ್ದು, ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿಗೆ ಪ್ರತೀ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಇದುವರೆಗೆ 1,75,265 ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಿ 269 ಕೋಟಿ ರೂ. ವೆಚ್ಚ ಮಾಡಲಾಗಿದೆ. ಮೀನುಗಾರರ ಅನುಕೂಲಕ್ಕಾಗಿ 8030 ನಾಡದೋಣಿಗಳಿಗೆ 10 ತಿಂಗಳ ಕಾಲ ತಲಾ 300 ಲೀ. ಸೀಮೆಎಣ್ಣೆ ಹಾಗೂ ಯಾಂತ್ರೀಕೃತ ಬೋಟುಗಳಿಗೆ 2.5 ಲಕ್ಷ ಕಿ.ಲೋ. ಲೀಟರ್ ಡೀಸೆಲ್ ವಿತರಿಸಲಾಗಿದ್ದು, ಮೀನು ಉತ್ಪಾದನೆಯಲ್ಲಿ ರಾಜ್ಯವು ದೇಶದಲ್ಲೇ 3 ನೇ ಸ್ಥಾನ ಪಡೆದಿದೆ ಎಂದರು.

    ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಿದ್ದು, ಪ್ರತೀ ಮನೆಯಲ್ಲಿ ಶೌಚಾಲಯಗಳ ನಿರ್ಮಾಣ, ಮನೆ ಮನೆಗೆ ಶುದ್ಧ ಕುಡಿಯವ ನೀರು ಸೌಲಭ್ಯ, ಕೋವಿಡ್-19 ಅವಧಿಯಲ್ಲಿ 240 ಕೋಟಿ ಗೂ ಅಧಿಕ ಉಚಿತ ಲಸಿಕೆ ವಿತರಣೆ, ಪಿಎಂ ಗರೀಬ್ ಯೋಜನೆಯಡಿ ಉಚಿತ ಪಡಿತರ ವಿತರಣೆ, ದೀನ್ ದಯಾಳ್ ಯೋಜನೆಯಡಿ ವಿದ್ಯುತ್ ಸಂಪರ್ಕ, ಉಜ್ವಲ ಗ್ಯಾಸ್ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ, ಜನೌಷಧಿ ಕೇಂದ್ರಗಳ ಮೂಲಕ ಅತ್ಯಂತ ಕಡಿಮೆ ದರದಲ್ಲಿ ಔಷಧಗಳ ಪೂರೈಕೆ ಹಾಗೂ ವಸತಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಎಲ್ಲಾ ಸಮುದಾಯದ ಜನತೆಯ ಅಭಿವೃದ್ಧಿಗೆ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಸರ್ಕಾರದ ಎಲ್ಲಾ ಯೋಜನೆಗಳ ಪ್ರಯೋಜನವನ್ನು ಪಡೆಯುವಂತೆ ತಿಳಿಸಿದರು.

    ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ನಾಗರೀಕರಿಗೆ ಉತ್ತಮ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಜಿಲ್ಲೆಯಲ್ಲಿ 7475 ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ 51 ಕೋಟಿ ರೂ. ಗಳನ್ನು ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ನೀಡಲಾಗಿದೆ. ಪಿಎಂ ಕಿಸಾನ್ ಯೋಜನೆಯಡಿ ಜಿಲ್ಲೆಯ 1,53,000 ರೈತರಿಗೆ ರೂ. 10,000 ಗಳನ್ನು ನೀಡಲಾಗಿದೆ. 4 ಹೊಸ ತಾಲೂಕುಗಳಲ್ಲಿ ನೂತನ ತಾಲೂಕು ಆಡಳಿತ ಸೌಧಗಳನ್ನು ನಿರ್ಮಿಸಿ ಆಡಳಿತ ಯಂತ್ರವನ್ನು ಚುರುಕುಗೊಳಿಸಲಾಗಿದೆ. ಪಶ್ಚಿಮ ವಾಹಿನಿ ಯೋಜನೆಯ ಮೂಲಕ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಿ ಅಂತರ್ಜಲ ವೃದ್ಧಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ನೆರವು ನೀಡಲಾಗಿದೆ. ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆಹರಿಸಿ ಜಿಲ್ಲೆಯಲ್ಲಿ 35,000 ಎಕ್ರೆ ಜಮೀನನ್ನು ಕಂದಾಯ ಇಲಾಖೆಗೆ ನೀಡುವ ಮೂಲಕ ಹಲವು ಮಂದಿಗೆ ಹಕ್ಕುಪತ್ರ ವಿತರಿಸಲು ಸಾಧ್ಯವಾಗಿದೆ. ವಿದ್ಯಾನಿಧಿ, ಬೆಳಕು ಯೋಜನೆ, ಮನೆ ಬಾಗಿಲಿಗೆ ಪಿಂಚಣಿ, ಗ್ರಾಮ ಒನ್ ಕೇಂದ್ರಗಳ ಆರಂಭ ಮುಂತಾದ ಹಲವು ಕಾರ್ಯಕ್ರಮಗಳ ಮೂಲಕ ಸರ್ಕಾರದ ಹಲವು ಯೋಜನೆಗಳ ಪ್ರಯೋಜನವನ್ನು ಜನರಿಗೆ ತಲುಪಿಸಲಾಗಿದೆ ಎಂದರು.

    ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ, ಉಡುಪಿ ಶಾಸಕ ರಘುಪತಿ ಭಟ್, ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಎಸ್ ಆಚಾರ್ಯ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಎ.ಎಸ್ಪಿ ಸಿದ್ದಲಿಂಗಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

    ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಸ್ವಾಗತಿಸಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ ನಿರೂಪಿಸಿದರು.

  • ಉಡುಪಿ – ಕರಾವಳಿ ಜಂಕ್ಷನ್- ಮಲ್ಪೆ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ  ಆರಂಭ

    ಉಡುಪಿ – ಕರಾವಳಿ ಜಂಕ್ಷನ್- ಮಲ್ಪೆ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ  ಆರಂಭ

    ಕುಂದಾಪುರ ಮಿರರ್ ಸುದ್ದಿ…

     ಉಡುಪಿ : ಉಡುಪಿಯ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ರಸ್ತೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.

    ನಂತರ ಮಾತನಾಡಿದ ಸಚಿವರು, ಈ ರಸ್ತೆ ಆಭಿವೃದ್ಧಿಯು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಇಲ್ಲಿ ಮೀನುಗಾರಿಕಾ ಬಂದರು ಮತ್ತು ಪ್ರವಾಸಿ ಕ್ಷೇತ್ರವಾದ ಮಲ್ಪೆ ಬೀಚ್ ಇರುವ ಕಾರಣ ಈ ರಸ್ತೆಯಲ್ಲಿ ವಾಹನ ದಟ್ಟಣೆ ಅತ್ಯಧಿಕವಾಗಿದ್ದು, ಕಿರಿದಾದ ರಸ್ತೆಯಿಂದ ಹಲವು ಅಪಘಾತಗಳಿಗೆ ಸಹ ಕಾರಣವಾಗಿದ್ದು, ಪ್ರಸ್ತುತ ಈ ರಸ್ತೆ ವಿಸ್ತರಣೆಯ ಮೂಲಕ ಬಂದರುನಲ್ಲಿ ಹೆಚ್ಚಿನ ಅರ್ಥಿಕ ಚಟುವಟಿಕೆಗಳು ನಡೆಯಲು ಹಾಗೂ  ಪ್ರವಾಸೋದ್ಯಮ ಚಟುವಟಿಕೆಗಳು ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ ಎಂದರು.

    ಪ್ರಸ್ತುತ ಈ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಿ ಶೀಘ್ರದಲ್ಲಿ ರಸ್ತೆ ಕಾಮಗಾರಿ ಮುಕ್ತಾಯಗೊಳ್ಳಲು ಸಹಕಾರ ನೀಡುವಂತೆ ತಿಳಿಸಿದರು.

    ಈ ಹಿಂದೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು, ಇದರಿಂದಾಗಿ ಸಂತೆಕಟ್ಟೆ, ಅಂಬಲಪಾಡಿ ಮತ್ತು ಕಟಪಾಡಿಯಲ್ಲಿ ಸಮಸ್ಯೆಗಳಾಗಿದ್ದು, ಸರ್ವಿಸ್ ರಸ್ತೆ ಸಹ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆದರೆ  ಪ್ರಸ್ತುತ  ಕೇಂದ್ರ ಸರ್ಕಾರದ ನೆರವಿನಿಂದ ಸಂತೆಕಟ್ಟೆಯಲ್ಲಿ 27 ಕೋಟಿ ರೂ. ವೆಚ್ಚದಲ್ಲಿ ಓವರ್‌ಪಾಸ್ ಕಾಮಗಾರಿ ನಡೆಯುತ್ತಿದ್ದು, ಅಂಬಲಪಾಡಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅಂಡರ್‌ಪಾಸ್ ಕಾಮಗಾರಿ ಶೀಘ್ರದಲ್ಲಿ ಆರಂಭಗೊಳ್ಳಲಿದೆ ಎಂದರು.

    ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಸ್ವಾಗತಿಸಿ ಮಾತನಾಡಿ, ಡಬಲ್ ಇಂಜಿನ್ ಸರ್ಕಾರದಿಂದ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಹೆಬ್ರಿಯಿಂದ ಮಲ್ಪೆವರೆಗೆ ಒಟ್ಟು 350 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕರಾವಳಿ ಜಂಕ್ಷನ್‌ನಿAದ ಮಲ್ಪೆವರೆಗಿನ ಕಾಮಗಾರಿಗೆ ಭೂಮಿ ನೀಡುವ ಮಾಲೀಕರಿಗೆ ಸೂಕ್ತ ಪರಿಹಾರ ದೊರೆಯಲಿದೆ ಎಂದರು.

    ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷಿö್ಮ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಮಟ್ಟಾರು ರತ್ನಾಕರ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ನಗರಸಭಾ ಸದಸ್ಯ ಸುಂದರ ಕಲ್ಮಾಡಿ ವಂದಿಸಿದರು.

     

  • ಜೆಸಿಐ ಸಾಲಿಗ್ರಾಮ ವಡ್ಡರ್ಸೆ ಸಿಟಿ – ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ

    ಜೆಸಿಐ ಸಾಲಿಗ್ರಾಮ ವಡ್ಡರ್ಸೆ ಸಿಟಿ – ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಪುರುಷ ಪ್ರಧಾನವಾದ ಸಮಾಜದಲ್ಲಿ ಮಹಿಳೆ ತನ್ನ ಪ್ರತಿಭೆ ಮತ್ತು ಸಾಮರ್ಥ್ಯದಿಂದ ಎಲ್ಲಾ ಅವಕಾಶವನ್ನು ತನ್ನದಾಗಿಸಿಕೊಂಡು ಸಮಾಜದಲ್ಲಿ ಗೌರವಯುತವಾದ ಜೀವನವನ್ನು ಸಾಗಿಸುತ್ತಾ ಇಂದು ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಕ್ರೀಡಾ,ರಕ್ಷಣಾ ,ಸಾಂಸ್ಕೃತಿಕ ಸೇರಿದಂತೆ ಹತ್ತು ಹಲವಾರು ಕ್ಷೇತ್ರದಲ್ಲಿ ಪುರುಷರಿಗೆ ಸಮಾನವಾಗಿ ತನ್ನ ಪಾರಮ್ಯವನ್ನು ಮೆರೆಯುತ್ತಿದ್ದಾಳೆ ಎಂದು ಜೆಸಿಐ ಸಾಲಿಗ್ರಾಮ ವಡ್ಡರ್ಸೆ ಸಿಟಿ ಅಧ್ಯಕ್ಷ ಪದ್ಮನಾಭ ಆಚಾರ್ಯ ಹೇಳಿದರು.

    ಅವರು ಮಾ 8.ರಂದು ವಡ್ಡರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

    ಮನೆಮದ್ದುಗಳನ್ನು ನೀಡುವುದರ ಮೂಲಕ ಗ್ರಾಮೀಣ ಭಾಗದಲ್ಲಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ನಾಟಿ ವೈದ್ಯರಾದ ಕೊಲ್ಲು ಪೂಜಾರ್ತಿ ಬನ್ನಾಡಿ, ಆಶಾ ಕಾರ್ಯಕರ್ತೆ ಭವಾನಿ ಶೆಟ್ಟಿ ಸೂರಿಬೆಟ್ಟು ಅಚ್ಲಾಡಿ,ಹಾಗೂ ವಡ್ಡರ್ಸೆ ಗ್ರಾಮ ಪಂಚಾಯತ್‍ನ ಘನ ಸಂಪನ್ಮೂಲ ನಿರ್ವಹಣಾ ಘಟಕದ ಮೇಲ್ವಿಚಾರಕಿ ಹಾಗೂ ಮಹಿಳಾ ವಾಹನ ಚಾಲಕಿ ದೀಪಾರವರನ್ನು ಈ ಸಂಧರ್ಭದಲ್ಲಿ ಗೌರವಿಸಲಾಯಿತು.

    ಸಭೆಯಲ್ಲಿ ಜೆಸಿರೇಟ್ ಕಲಾವತಿ ಪದ್ಮನಾಭ ಆಚಾರ್ಯ, ಕಾರ್ಯದರ್ಶಿ ಉಮೇಶ್, ಜೆಜೆಸಿ ಶ್ರೀವತ್ಸ ಭಟ್ ,ವಲಯ ತರಬೇತುದಾರ ಯಶವಂತ್ ಸ್ಥಾಪಕಾಧ್ಯಕ್ಷ ಸಚ್ಚಿದಾನಂದ ಅಡಿಗ ಸೇರಿದಂತೆ ಜೆಸಿಯ ಸದಸ್ಯರು ಹಾಜರಿದ್ದರು.ಸದಸ್ಯೆ ಸರೋಜ ಜಗದೀಶ್ ಪೂಜಾರಿ ಸನ್ಮಾನಿತರನ್ನು ಪರಿಚಯಿಸಿದರು. ಶಿಕ್ಷಕ ಸುವೀರ್ ಹೊಳ್ಳ ಕಾರ್ಯಕ್ರಮದ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು. ಶಾರದ ಸತೀಶ್ ಕಾರ್ಯಕ್ರಮ ನಿರೂಪಿಸಿದರು.ಶ್ರೀರಕ್ಷಾ ಅಡಿಗ ವಂದಿಸಿದರು.

  • ಕೋಟ ಮಹಿಳಾ ಮಂಡಲ ಸಭಾಂಗಣ ಉದ್ಘಾಟನೆ, ವಿಶ್ವಮಹಿಳಾ ದಿನಾಚರಣೆ

    ಕೋಟ ಮಹಿಳಾ ಮಂಡಲ ಸಭಾಂಗಣ ಉದ್ಘಾಟನೆ, ವಿಶ್ವಮಹಿಳಾ ದಿನಾಚರಣೆ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಮಹಿಳಾ ಮಂಡಳಗಳು ಮಹಿಳೆಯರ ಉನ್ನತಿಗೆ ಪ್ರೇರಕ ಶಕ್ತಿಕೇಂದ್ರವಾಗಿ ರೂಪುಗೊಂಡಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದರು.

    ಕೋಟ ಮಹಿಳಾ ಮಂಡಲದ ನೂತನ ಸಭಾಂಗಣ ಲೋಕಾರ್ಪಣೆಗೊಳಿಸಿ ಹಾಗೂ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಹಿಳಾ ಮಂಡಲ ಸಾಕಷ್ಟು ವರ್ಷಗಳನ್ನು ಕ್ರಮಿಸಿಕೊಂಡು ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತದೆ ಇದು ಶ್ಲಾಘನೀಯ ಕಾರ್ಯವಾಗಿದೆ ಎಂದು ವಿಶ್ವಮಹಿಳಾ ದಿನಾಚರಣೆಯ ಶುಭಹಾರೈಕೆ ಸಲ್ಲಿಸಿದರು.

    ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಳ ಕೋಟ ಅಧ್ಯಕ್ಷೆ ಸುಶೀಲಸೋಮಶೇಖರ್ ವಹಿಸಿ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು.

    ಮುಖ್ಯ ಅಭ್ಯಾಗತರಾಗಿ ಕೋಟ ಅಮೃತೇಶ್ವರಿ ದೇವಳದ ಟ್ರಸ್ಟಿ ಎಂ.ಸುಬ್ರಾಯ ಆಚಾರ್ಯ,ಮಹಿಳಾ ಮಂಡಲದ ಉಪಾಧ್ಯಕ್ಷೆ ಗೀತಾ ಎ ಕುಂದರ್, ಮಾಜಿ ಅಧ್ಯಕ್ಷೆ ಯಶೋಧ ಹಂದೆ ಉಪಸ್ಥಿತರಿದ್ದರು. ಮಹಿಳಾ ಮಂಡಲದ ರಮಾ ಕಾರಂತ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಭಾಗ್ಯವಾದಿರಾಜ್ ವಂದಿಸಿದರು.