Category: ಸುದ್ದಿ

  • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಎ.30 ರಿಂದ ಮೇ.11 ತನಕ ಅಷ್ಟಬಂಧ ಬ್ರಹ್ಮಕಲಶೋತ್ಸವ

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಎ.30 ರಿಂದ ಮೇ.11 ತನಕ ಅಷ್ಟಬಂಧ ಬ್ರಹ್ಮಕಲಶೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಎಪ್ರಿಲ್ 30-2023 ರಿಂದ ಮೇ 11-2023 ರ ತನಕ ನಡೆಸುವುದೆಂದು ತೀರ್ಮಾನಿಸಲಾಗಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾನಾ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ ಶೆಟ್ಟಿ ಹೇಳಿದರು.

    ಅವರು ಕೊಲ್ಲೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಹಿಂದೆ 1972 ನೇ ಇಸವಿಯಲ್ಲಿ ನಡೆದಿದ್ದು, ಅದು ನಡೆದು 30 ವರ್ಷಗಳ ನಂತರ ಅಂದರೆ 2002 ನೇ ಇಸವಿಯಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದಿದೆ. ಈಗ 21 ವರ್ಷಗಳ ನಂತರ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸಲು ಸಮಯ ಒದಗಿ ಬಂದಿದೆ. ಪ್ರತಿ 12 ವರ್ಷಗಳಿಗೊಮ್ಮೆ ಅಷ್ಟಬಂಧ ನಡೆಸಬೇಕೆಂದು ಶಾಸ್ತ್ರ ಹೇಳುತ್ತದೆ. ಅನಿವಾರ್ಯ ಕಾರಣಗಳಿಂದ ಈ ದೇವಸ್ಥಾನದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಅಷ್ಟಬಂಧ ನಡೆಸಲು ಸಾಧ್ಯವಾಗಿರುವುದಿಲ್ಲ. ಈ ಒಂದು ದೇವತಾ ಕಾರ್ಯ ನಡೆಸಲು ಈಗ ಕಾಲ ಕೂಡಿ ಬಂದಿದೆ.
    ಇನ್ನೊಂದು ವಿಶೇಷ ಎಂದರೆ 1972 ನೇ ಇಸವಿಯಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸುವಾಗ ದೇವಸ್ಥಾನದ ಪರಿವಾರ ದೇವರುಗಳಲ್ಲಿ ಪ್ರಮುಖವಾದ ಶ್ರೀ ವೀರಭದ್ರ ದೇವರ ಗುಡಿಯನ್ನು ಜೀರ್ಣೋದ್ಧಾರಗೊಳಿಸಿ ನೂತನ ದೇವಸ್ಥಾನದ ಕಲಶ ಪ್ರತಿಷ್ಠೆ ಮತ್ತು ಕಲಾವೃದ್ಧಿ ಸೇವೆಗಳನ್ನು ನಡೆಸಿ ಲೋಕಾರ್ಪಣೆಗೊಳಿಸಲಾಗಿರುತ್ತದೆ. 2002ನೇ ಇಸವಿಯಲ್ಲಿ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಕ್ಷೇತ್ರಕ್ಕೆ ನೂತನ ಶಿಲಾ ಮಹಾದ್ವಾರ ಸಮರ್ಪಣೆ, ನೂತನ ಸ್ವಾಗತ ಗೋಪುರ ಸಮರ್ಪಣೆ, ಸ್ವರ್ಣಲೇಪಿತ ಧ್ವಜಸ್ಥಂಭ ಸಮರ್ಪಣೆ ಕಾರ್ಯ ನಡೆದಿದೆ.

    50 ವರ್ಷಗಳ ನಂತರ ದಾನಿಗಳಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಹಾಗೂ ಅವರ ಕುಟುಂಬಸ್ಥರು ನಿರ್ಮಿಸಿ ದೇವಸ್ಥಾನಕ್ಕೆ ನೀಡಿರುವ ವೀರಭದ್ರ ದೇವರ ನೂತನ ಶಿಲಾಮಯ ದೇವಸ್ಥಾನವು ಕಳೆದ ಮೇ ತಿಂಗಳಲ್ಲಿ ಲೋಕಾರ್ಪಣೆ ಗೊಂಡಿದೆ. ಅಲ್ಲದೇ ಉದ್ಯಮಿ ಮುರ್ಡೇಶ್ವರದ ಆರ್. ಎನ್. ಶೆಟ್ಟಿ ಇವರ ಪುತ್ರ ಉದ್ಯಮಿ ಸುನಿಲ್ ಆರ್.ಶೆಟ್ಟಿ ಇವರು ನೀಡಿರುವ ನೂತನ ಬ್ರಹ್ಮರಥವು ಫೆ.16.ರಂದು ಶ್ರೀ ದೇವಿಗೆ ಸಮರ್ಪಿಸುವ ಮೂಲಕ ಲೋಕಾರ್ಪಣೆಗೊಂಡಿರುವುದು ಈ ಅಷ್ಟಬಂಧ ನಡೆಯುವ ಸಂದರ್ಭದಲ್ಲಿ ವಿಶೇಷವಾಗಿದೆ ಎಂದರು.

    ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು, ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ವೀಣಾ ಬಿ.ಎನ್ ಮಾತನಾಡಿ, ಈ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ಕೆ ಅಂದಾಜು 5 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದ್ದು, ದೇವಸ್ಥಾನದಿಂದ ರೂ. 2 ಕೋಟಿಯನ್ನು ಬಳಸಿಕೊಳ್ಳಲು ಮತ್ತು ಉಳಿದ 3 ಕೋಟಿ ರೂಪಾಯಿಗಳನ್ನು ಭಕ್ತರಿಂದ ದೇಣಿಗೆ ರೂಪದಲ್ಲಿ ಸಂಗ್ರಹಿಸಲು ಸರ್ಕಾರ ಅನುಮತಿ ನೀಡಿದೆ. ಹಾಗಾಗಿ ಭಕ್ತಾದಿಗಳು ಕಡ್ಡಾಯವಾಗಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ-2023 ಇದರ ಖಾತೆಗೇ ಡಿಟಿಜಲ್ ಪೇಮೆಂಟ್, ಇ-ಹುಂಡಿ ಮೂಲಕ ನೇರವಾಗಿ ಜಮಾ ಮಾಡಬಹುದಾಗಿದೆ. ದೇವಸ್ಥಾನದಲ್ಲಿ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಇದ್ದು ಅಲ್ಲಿ ಸಲ್ಲಿಸಿ ರಶೀದಿ ಪಡೆಯಬಹುದಾಗಿದೆ ಎಂದರು.

    ಈ ಸಮಯದಲ್ಲಿ ಚುನಾವಣೆ ಬಂದರೂ ಸಹ ಧಾರ್ಮಿಕ ಕಾರ್ಯಕ್ರಮಗಳಿಗೆ ಸಮಸ್ಯೆ ಇಲ್ಲ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

    ಸುದ್ಧಿಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ.ಕೆ ರಾಮಚಂದ್ರ ಅಡಿಗ, ಡಾ.ಅತುಲ್ ಕುಮಾರ್ ಶೆಟ್ಟಿ, ಗೋಪಾಲಕೃಷ್ಣ, ಜಯಾನಂದ ಹೋಬಳಿದಾರ, ರತ್ನ ರಮೇಶ್ ಕುಂದರ್, ಗಣೇಶ್ ಕಿಣಿ, ಶೇಖರ ಪೂಜಾರಿ, ಸಂಧ್ಯಾ ರಮೇಶ್, ಉಪಸ್ಥಿತರಿದ್ದರು.

    ಕೆನರಾ ಬ್ಯಾಂಕ್ ಶಾಖೆ ಕೊಲ್ಲೂರು, ಖಾತೆ ಸಂಖ್ಯೆ-01752200000014 IFSC : CNRB0010175
    ದೂರವಾಣಿ ಸಂಖ್ಯೆ 08254-200200,

  • ಮೇರು ಗಾಯಕಿ ಡಾ.ಎಸ್.ಜಾನಕಿ ರಾಷ್ಟ್ರೀಯ ಪುರಸ್ಕಾರಕ್ಕೆ ಖ್ಯಾತ ಗಾಯಕಿ ಕೆ.ಎಸ್ .ಚಿತ್ರಾ ಆಯ್ಕೆ.  ಡಾ.ಸಿ.ಆರ್. ಚಂದ್ರಶೇಖರ್ ಮನಸ್ಮಿತ ರಾಷ್ಟ್ರೀಯ ಪುರಸ್ಕಾರ ಪ್ರಕಟ

    ಮೇರು ಗಾಯಕಿ ಡಾ.ಎಸ್.ಜಾನಕಿ ರಾಷ್ಟ್ರೀಯ ಪುರಸ್ಕಾರಕ್ಕೆ ಖ್ಯಾತ ಗಾಯಕಿ ಕೆ.ಎಸ್ .ಚಿತ್ರಾ ಆಯ್ಕೆ. ಡಾ.ಸಿ.ಆರ್. ಚಂದ್ರಶೇಖರ್ ಮನಸ್ಮಿತ ರಾಷ್ಟ್ರೀಯ ಪುರಸ್ಕಾರ ಪ್ರಕಟ

    ಕುಂದಾಪುರ ಮಿರರ್ ‌ಸುದ್ದಿ…

    ಕೋಟ: ಕೋಟದ ಮನಸ್ಮಿತ ಫೌಂಡೇಶನ್ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಹಾಗೂ ಯುವ ಮೆರಿಡಿಯನ್ ಸಹಭಾಗಿತ್ವದಲ್ಲಿ ನೀಡಲ್ಪಡುವ ಡಾ. ಎಸ್. ಜಾನಕಿ ರಾಷ್ಟ್ರೀಯ ಪ್ರಶಸ್ತಿ 2023 ಹಾಗೂ ಮನಸ್ಮಿತ ರಾಷ್ಟ್ರೀಯ ಪುರಸ್ಕಾರ ಕಾರ್ಯಕ್ರಮ ಇದೇ ಬರುವ ಮಾ.24ಕ್ಕೆ ಯುವ ಮೆರಿಡಿಯನ್ ಒಪೆರಾ ಪಾರ್ಕಲ್ಲಿ ಜರಗಲಿದೆ.

    2023ನೇ ಸಾಲಿನ ಎಸ್.ಜಾನಕಿ ರಾಷ್ಟ್ರೀಯ ಪ್ರಶಸ್ತಿಗೆ ಭಾರತದ ಖ್ಯಾತ ಗಾಯಕಿ ಪದ್ಮಭೂಷಣ ಕೆ.ಎಸ್.ಚಿತ್ರಾ ಹಾಗೂ ಮನಸ್ಮಿತ ಪುರಸ್ಕಾರಕ್ಕೆ ವೈದ್ಯಕೀಯಲೋಕದ ಸಂತ, ಸಾಹಿತಿ ಡಾ.ಸಿ.ಆರ್. ಚಂದ್ರಶೇಖರ್ ಆಯ್ಕೆಗೊಳಿಸಲಾಗಿದೆ.

    ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರವು ಒಂದು ಲಕ್ಷ ರೂ ನಗದು, Citation ಹಾಗೂ ಪ್ರಶಸ್ತಿಯನ್ನು ಒಳಗೊಂಡಿರುತ್ತದೆ. ಹಾಗೂ ಮನಸ್ಮಿತ ರಾಷ್ಟ್ರೀಯ ಪುರಸ್ಕಾರವು ಇಪ್ಪತ್ತೈದು ಸಾವಿರ ರೂಪಾಯಿ ನಗದು, Citation, ಹಾಗೂ ಪ್ರಶಸ್ತಿಯನ್ನು ಒಳಗೊಂಡಿರುತ್ತದೆ. ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾಯಕ ಡಾ. ಸತೀಶ್ ಪೂಜಾರಿ ನೇತ್ರತ್ವದಲ್ಲಿ ಕರ್ನಾಟಕದ ಶ್ರೇಷ್ಟ ಗಾಯಕ, ಗಾಯಕಿಯರು ಹಾಗೂ ವಾದ್ಯ ವೃಂದದವರಿಂದ ಅದ್ದೂರಿ ಸಂಗೀತ ಸಂಜೆ ಮಾ.24ಕ್ಕೆ ಯುವ ಮೆರಿಡಿಯನ್ ಒಪೆರಾ ಪಾರ್ಕಲ್ಲಿ ಜರಗಲಿದೆ.ಎಲ್ಲರಿಗೂ ಉಚಿತ ಪ್ರವೇಶ ಇರಲಿದೆ ಎಂದು ಮನಸ್ಮಿತ ಫೌಂಡೇಶನ್ ನಿರ್ದೇಶಕ ಡಾ. ಪ್ರಕಾಶ್ ತೋಳಾರ್ ತಿಳಿಸಿದ್ದಾರೆ.

  • ಹಂಗಾರಕಟ್ಟೆ- ಅಶಕ್ತರ ಬಾಳಿನ ಆಶಾಕಿರಣ ಹ.ರಾ. ವಿನಯಚಂದ್ರ ಸಾಸ್ತಾನ ಅವರಿಗೆ ಪಂಚವರ್ಣ ರಜತ ಗೌರವ ಪ್ರದಾನ

    ಹಂಗಾರಕಟ್ಟೆ- ಅಶಕ್ತರ ಬಾಳಿನ ಆಶಾಕಿರಣ ಹ.ರಾ. ವಿನಯಚಂದ್ರ ಸಾಸ್ತಾನ ಅವರಿಗೆ ಪಂಚವರ್ಣ ರಜತ ಗೌರವ ಪ್ರದಾನ

    ಅನಾಥರನ್ನು ಸಲಹುದೆ ಪುಣ್ಯದ ಕಾರ್ಯ -ಬಾಳೆಕುದ್ರು ಶ್ರೀ ನೃಸಿಂಹಾಶ್ರಮ ಸ್ವಾಮೀಜಿ

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಸೇವೆಯನ್ನು ತನ್ನ ಜೀವನದ ಸರ್ವಸ್ವ ಎಂದು ತಿಳಿದು ನಿರಂತರವಾಗಿ ಸೇವಾ ಚಟುವಟಿಕೆಯಲ್ಲಿ ತೊಡಗಿಕೊಂಡ ವಿನಯಚಂದ್ರರ ಸಾಮಾಜಿಕ ಕಾರ್ಯ ನಿಜಕ್ಕೂ ಸ್ವಾಗತಾರ್ಹ ಎಂದು ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ಶ್ರೀ ಶ್ರೀ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಹೇಳಿದ್ದಾರೆ.

    ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ಬೆಳ್ಳಿ ಹಬ್ಬದ ಅಂಗವಾಗಿ ಸಾಧಕರಿಗೆ ರಜತ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಕಾರ್ಕಳದ ರಂಗನಪಲ್ಕೆ ಹೊಸಬೆಳಕು ಆಶ್ರಯದ ಸೇವಾ ಪ್ರತಿನಿಧಿ ವಿನಯಚಂದ್ರ ಸಾಸ್ತಾನ ರಜತ ಗೌರವ ಪ್ರದಾನ ಮಾಡಿ ಆಶ್ರೀವಚನಗೈದು ಅನಾಥರನ್ನು ಸಲಹುದೆ ಪುಣ್ಯದ ಕಾರ್ಯ ತನ್ನ ವಯಕ್ತಿಕ ಜೀವನವನ್ನು ಬದಿಗಿಟ್ಟು ಸಮಾಜದ ಋಣ ತಿರಿಸುವ ನಿಮ್ಮ ಸೇವೆ ನಿರಂತರವಾಗಲಿ ಪಂಚವರ್ಣ ಸಂಸ್ಥೆ ನಿಜಕ್ಕೂ ಅರ್ಥಪೂರ್ಣವಾಗಿ ರಜತ ವರ್ಷಾಚರಣೆ ಆಚರಿಸಿದೆ ಇದು ಅಭಿನಂದನೀಯ ಎಂದರು.
    ಸಮಾಜಸೇವಕ ,ಅಶಕ್ತರ ಬಾಳಿನ ಆಶಾಕಿರಣ ರಂಗನಪಲ್ಕೆ ಹೊಸಬೆಳಕು ಆಶ್ರಮದ ಸೇವಾ ಪ್ರತಿನಿಧಿ ಹ.ರಾ ವಿನಯಚಂದ್ರ ಸಾಸ್ತಾನ ಇವರಿಗೆ ಪಂಚವರ್ಣ ರಜತ ಗೌರವಾರ್ಪಣೆ ಪ್ರದಾನ ಮಾಡಲಾಯಿತು.ಈ ಸಂದರ್ಭದಲ್ಲಿ ಸ್ಥಳೀಯ ದಾನಿಗಳ ಹಾಗೂ ಪಂಚವರ್ಣ ಸಂಸ್ಥೆ ವತಿಯಿಂದ ದಿನಸಿ ಪರಿಕರಯುಕ್ತ ರಜತ ಹೊರೆಕಾಣಿಕೆ ಹಸ್ತಾಂತರಿಸಲಾಯಿತು.

    ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ನಿಕಟಪೂರ್ವ ಅಧ್ಯಕ್ಷ ಪ್ರಸ್ತುತ ಸದಸ್ಯ ಕೆ.ಅನಂತಪದ್ಮನಾಭ ಐತಾಳ್ ವಿವಿಧ ಪರಿಕರಗಳನ್ನು ಆಶ್ರಮಕ್ಕೆ ಹಸ್ತಾಂತರಿಸಿದರು.

    ಕೋಟ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್ಯ ಅಧ್ಯಕ್ಷತೆಯನ್ನು ವಹಿಸಿದ್ದರು.
    ಬಾಳೆಕುದ್ರು ಶ್ರೀ ಮಠದ ಅಧ್ಯಕ್ಷ ರಾಜಶೇಖರ ಕಲ್ಕೂರ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಕಲಾವತಿ ಅಶೋಕ್,ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ಪುಷ್ಭಾ ಕೆ ಹಂದಟ್ಟು ,ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ,ಸಂಯುಕ್ತ ಒಕ್ಕೂಟದ ಸಂಯೋಜಕ ಸತ್ಯನಾರಾಯಣ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು. ಪಂಚವರ್ಣ ಮಹಿಳಾ ಮಂಡಲದ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು.ಪಂಚವರ್ಣ ಗೌರವ ಸದಸ್ಯ ರಾಧಕೃಷ್ಣ ಬ್ರಹ್ಮಾವರ ವಂದಿಸಿದರು.

  • ಕೋಟ ಪಂಚವರ್ಣ ಸಂಸ್ಥೆಯ 154ನೇ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನ

    ಕೋಟ ಪಂಚವರ್ಣ ಸಂಸ್ಥೆಯ 154ನೇ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಹಂದಟ್ಟು ಮಹಿಳಾ ಬಳಗ,ಮಣೂರು ಫ್ರೆಂಡ್ಸ್ ಮಣೂರು, ಯಕ್ಷ ಸೌರಭಕಲಾರಂಗ ಕೋಟ ಸಂಯುಕ್ತ ಸಹಯೋಗದೊಂದಿಗೆ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನಕ್ಕೆ 154ನೇ ವಾರದ ಕಾರ್ಯಕ್ರಮದ ಪ್ರಯುಕ್ತ ಕೋಟ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಸರ್ವಿಸ್ ರಸ್ತೆ ಸಮೀಪ ಬಾರಿ ಪ್ರಮಾಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು.

    ಈ ಸಂದರ್ಭದಲ್ಲಿ ಕದ್ರಿ ಮಂಜುನಾಥೇಶ್ವರ ದೇವಳ ಮಂಗಳೂರು ಇದರ ಟ್ರಸ್ಟಿ ಕುಸುಮಾ ದೇವಾಡಿಗ,ಕೋಟ ಗ್ರಾಮಪಂಚಾಯತ್ ಆಧ್ಯಕ್ಷ ಅಜಿತ್ ದೇವಾಡಿಗ,ಪಂಚವರ್ಣ ಹಾಗೂ ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

     

  • ಕಲಾವಿದ ಬಿಜೂರು ಚಂದ್ರ ಶೆಟ್ಟಿ ಅವರಿಗೆ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ ಪ್ರದಾನ

    ಕಲಾವಿದ ಬಿಜೂರು ಚಂದ್ರ ಶೆಟ್ಟಿ ಅವರಿಗೆ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ ಪ್ರದಾನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ವಂಡ್ಸೆಯ ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವದ ಸಂದರ್ಭದಲ್ಲಿ ದೇವಸ್ಥಾನದ ಆಶ್ರಯದಲ್ಲಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ವಂಡ್ಸೆ ನಾರಾಯಣ ಗಾಣಿಗರ ಸ್ಮರಣಾರ್ಥ ಅವರ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ‘ವಂಡ್ಸೆ ನಾರಾಯಣ ಪ್ರಶಸ್ತಿ-2023’ ಪ್ರಶಸ್ತಿ ಪ್ರದಾನ ನಡೆಯಿತು.

    ಬಡಗುತಿಟ್ಟಿನ ಪ್ರತಿಭಾನ್ವಿತ ಸ್ತ್ರೀ ವೇಷ ಕಲಾವಿದ, ಪ್ರಸ್ತುತ ಮಾರಣಕಟ್ಟೆ ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಬಿಜೂರು ಚಂದ್ರ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
    ಮುಂಬೈಯ ಹಿರಿಯ ಯಕ್ಷಗಾನ ಕಲಾಪೋಷಕರು ಹಾಗೂ ಯಕ್ಷಗುರುಗಳಾದ ದೇವಲ್ಕುಂದ ಭಾಸ್ಕರ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಿಳಿಯಾರು ಶ್ರೀಧರ ಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯಕುಮಾರ ಶೆಟ್ಟಿ, ಉದ್ಯಮಿ ಆನಂದ ಶೆಟ್ಟಿ ಸಬ್ಲಾಡಿ, ದಿ|ನಾರಾಯಣ ಗಾಣಿಗರ ಪುತ್ರರಾದ ಚಂದ್ರ ಗಾಣಿಗ, ಉದಯ ಗಾಣಿಗ ಉಪಸ್ಥಿತರಿದ್ದರು

    ಆಲೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಧರ ಶೆಟ್ಟಿ ವಂಡ್ಸೆ ಕಾರ್ಯಕ್ರಮ ನಿರ್ವಹಿಸಿದರು.

  • ಉಡುಪಿ :ಸರಕಾರಿ ನೌಕರರಿಂದ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ

    ಉಡುಪಿ :ಸರಕಾರಿ ನೌಕರರಿಂದ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ :ಫೆ.21 ರಂದು ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ “ತುರ್ತುರಾಜ್ಯಕಾರ್ಯಕಾರಿಣಿ ಸಭೆ” ಯಲ್ಲಿರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮಾ.1 ರಿಂದ ‘ಅನಿರ್ದಿಷ್ಟಾವಧಿ ಮುಷ್ಕರ’ಕ್ಕೆ ಕರೆ ನೀಡಲು 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.

    ರಾಜ್ಯದ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನಆಯೋಗದ ಸೌಲಭ್ಯಗಳನ್ನು ಜುಲೈ 1, 2022 ರಿಂದ ಜಾರಿಗೊಳಿಸಬೇಕಾಗಿತ್ತು.

    ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್‍ರಾವ್‍ಅವರಅಧ್ಯಕ್ಷತೆಯಲ್ಲಿ 7ನೇ ವೇತನಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ಸಿದ್ದಪಡಿಸಿ ಸಲ್ಲಿಸಿತ್ತು.

    ರಾಜ್ಯ ಸರ್ಕಾರದಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದುಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದಜವಾಬ್ದಾರಿಯಾಗಿದ್ದಾಗ್ಯೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯುಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿ ಮಾ.1 ರಿಂದರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ‘ಅನಿರ್ದಿಷ್ಟಾವಧಿ ಮುಷ್ಕರ’ ಕ್ಕೆ ಕರೆ ನೀಡಲು ನಿರ್ಣಯಕೈಗೊಂಡಿದೆ.

    ಸಂಘದ ಪ್ರಮುಖ ಬೇಡಿಕೆಗಳು : ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ಜುಲೈ 1ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆಜಾರಿಗೆ ಮೊದಲು ಶೇ. 40% ಫಿಟ್‍ಮೆಂಟ್ ಸೌಲಭ್ಯವನ್ನು ಜುಲೈ1ರಿಂದ ಜಾರಿಗೆ ಬರುವಂತೆ ಸರ್ಕಾರಿಆದೇಶ ಹೊರಡಿಸುವುದು.

    ರಾಜ್ಯದಎನ್.ಪಿ.ಎಸ್. ನೌಕರರಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತಿಸ್‍ಘಡ, ಜಾಖರ್ಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿಕರ್ನಾಟಕದಲ್ಲೂ ಸಹ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿಯೋಜನೆಯನ್ನು ಜಾರಿಗೊಳಿಸುವುದು.

    ಆದ್ದರಿಂದ ಮಾ.1ರಿಂದ ರಿಂದ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ‘ಅನಿರ್ದಿಷ್ಟಾವಧಿ ಮುಷ್ಕರ’ವನ್ನು ಬೆಂಬಲಿಸುವುದೊಂದರಿಗೆ ಯಶಸ್ವಿಗೊಳಿಸಲು ಜಿಲ್ಲಾ, ತಾಲ್ಲೂಕು, ಯೋಜನಾ ಶಾಖೆಯ ಎಲ್ಲಾ ಸರ್ಕಾರಿ ಅಧಿಕಾರಿ-ನೌಕರರಲ್ಲಿ ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

  • ಕುಂದಾಪ್ರ ಕನ್ನಡ ಭಾಷಾ ಅಕಾಡೆಮಿ ಬಗ್ಗೆ ಸಚಿವ ಸುನಿಲ್ ಕುಮಾರ್ ಹೇಳಿಕೆ ಖಂಡನಾರ್ಹ- ಅಪ್ಪಣ್ಣ ಹೆಗ್ಡೆ

    ಕುಂದಾಪ್ರ ಕನ್ನಡ ಭಾಷಾ ಅಕಾಡೆಮಿ ಬಗ್ಗೆ ಸಚಿವ ಸುನಿಲ್ ಕುಮಾರ್ ಹೇಳಿಕೆ ಖಂಡನಾರ್ಹ- ಅಪ್ಪಣ್ಣ ಹೆಗ್ಡೆ

    ಕುಂದಾಪುರ ಮಿರರ್ ‌ಸುದ್ದಿ…
    ಕುಂದಾಪುರ: ಕುಂದಾಪ್ರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ ಬಗ್ಗೆ ವಿಧಾನ ಪರಿಷತ್‍ನಲ್ಲಿ ಮಂಜುನಾಥ ಭಂಡಾರಿಯವರು ಪ್ರಸ್ತಾಪ ಮಾಡಿ ಸರಕಾರದಿಂದ ಉತ್ತರ ಬಯಸಿದ್ದಕ್ಕೆ  ಕನ್ನಡ ಮತ್ತು ಸಂಸ್ಕøತಿ ಸಚಿವರಾದ ಸುನಿಲ್ ಕುಮಾರ್ ಅವರು ಈ ಬಗ್ಗೆ ನಿರಾಶಾದಾಯಕ ಉತ್ತರ ನೀಡಿ ಕುಂದಾಪ್ರ ಕನ್ನಡ ಅಕಾಡೆಮಿ ಪ್ರಸ್ತಾಪವನ್ನು ತಳ್ಳಿ ಹಾಕಿರುವುದು  ಖಂಡನೀಯ ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.
    ಅವರು ಕುಂದಾಪುರದ ಹೋಟೆಲ್ ಹರಿಪ್ರಸಾದ್‍ನ ಅಕ್ಷತಾ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.
    ಕರ್ನಾಟಕದಲ್ಲಿ ವಿವಿಧ ರೀತಿಯ ಕನ್ನಡ ಮಾತನಾಡುವುದು ಸಾಮಾನ್ಯ ಎಂಬಂತೆ ಉತ್ತರ ನೀಡಿರುವುದು ತಿಳುವಳಿಕೆ ಇಲ್ಲದವರ ಉತ್ತರ ಎಂದೇ ತಿಳಿಯಬೇಕಾಗುತ್ತದೆ. ಧಾರವಾಡ ಕನ್ನಡದ ಮೇಲೆ ಮರಾಠಿ ಪ್ರಭಾವ, ಗುಲ್ಬರ್ಗ ಕನ್ನಡದ ಮೇಲೆ ತೆಲುಗಿನ ಪ್ರಭಾವ, ಕೋಲಾರ ಕನ್ನಡದ ಮೇಲೆ ತಮಿಳು ಪ್ರಭಾವ, ಮಂಗಳೂರು ಕನ್ನಡದ ಮೇಲೆ ಮಲೆಯಾಳ ಪ್ರಭಾವ ಕಾಣಬಹುದು. ಆದರೆ ಕುಂದಾಪ್ರ ಕನ್ನಡದ ಮೇಲೆ ಯಾವುದೇ ಭಾಷೆಯ ಪ್ರಭಾವ ಬೀರಿಲ್ಲ. ಕುಂದಾಪ್ರ ಕನ್ನಡ ಈ ಭಾಗದ ಬದುಕು. ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪನೆ ಹಾಗೂ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕುಂದಾಪ್ರ ಕನ್ನಡ ಪೀಠಕ್ಕೆ ಅನುದಾನ ಮಂಜೂರಾತಿ ಬಗ್ಗೆ  ಮುಖ್ಯಮಂತ್ರಿಗಳನ್ನು ಒತ್ತಾಯಿಸುವ ಹೋರಾಟ ಅನಿವಾರ್ಯವಾಗಿದೆ ಎಂದರು.
    ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷ ಡಾ.ಉಮೇಶ ಪುತ್ರನ್ ಮಾತನಾಡಿ, ಕುಂದಾಪ್ರ ಕನ್ನಡ ವನ್ನು ಸುಮಾರು 30ಲಕ್ಷಕ್ಕೂ ಅಧಿಕ ಮಂದಿ ಕುಂದಾಪ್ರ ಕನ್ನಡ ಭಾಷೆ ಮಾತನಾಡುತ್ತಾರೆ. ಸಾಕಷ್ಟು ಸಂಶೋಧಕರು ಈ ಭಾಷೆಯ ಆಳದ ಬಗ್ಗೆ ಅಧ್ಯಯನ ಮಾಡಿದರೂ ಇನ್ನೂ ಅದು ಪರಿಪೂರ್ಣವಾಗಿಲ್ಲ. ಕುಂದಾಪ್ರ ಕನ್ನಡ ಅಕಾಡೆಮಿ ಆದರೆ ಸಮಗ್ರ ಅಧ್ಯಯನ ಸಾಧ್ಯವಾಗುತ್ತದೆ. ಈ ಬಗ್ಗೆ ಮಂಜುನಾಥ ಭಂಡಾರಿಯವರು ಅಧ್ಯಯನ ಮಾಡಿ ತನ್ನ ವರದಿಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಆದರೆ ಸಚಿವರು ನೀಡಿದ ಉತ್ತರ ಕುಂದಾಪ್ರ ಕನ್ನಡ ಭಾಷಿಗರಿಗೆ ಅಚ್ಛರಿಯಾಗಿದೆ. ಸಚಿವರು ತಕ್ಷಣ ಈ ಬಗ್ಗೆ ಮರು ಪರಿಶೀಲನೆ ನಡೆಸಬೇಕು. ಕುಂದಾಪ್ರ ಕನ್ನಡ ಭಾಷೆಯ ಸಮಗ್ರ ಅಧ್ಯಯನ, ಸಂಶೋಧನೆಗೆ ಪೂರಕವಾಗುವ ನಿಟ್ಟಿನಲ್ಲಿ ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದರು.
    ಈ ಸಂದರ್ಭದಲ್ಲಿ ಕುಂದಾಪುರ ಜಿಲ್ಲಾ ಹೋರಾಟ ಸಮಿತಿ ಸಂಚಾಲಕ ದಿನಕರ ಶೆಟ್ಟಿ ಮುಂಬಾರು, ಪ್ರಧಾನ ಕಾರ್ಯದರ್ಶಿ ಗಣಪತಿ ಶ್ರೀಯಾನ್,ಪತ್ರಕರ್ತ ಯು.ಎಸ್ ಶೆಣೈ, ಸುಧಾಕರ ಶೆಟ್ಟಿ ಆವರ್ಸೆ, ಆವರ್ಸೆ ರತ್ನಾಕರ ಶೆಟ್ಟಿ,  ವೆಂಕಟೇಶ್ ಪೈ ಮೊದಲಾದವರು ಉಪಸ್ಥಿತರಿದ್ದರು.
  • ಕೋಡಿ ಕನ್ಯಾಣ- ಮೀನುಗಾರಿಕೆ ಮತ್ತು ಉದ್ಯಮಶೀಲತೆ ಹಾಗೂ ಬೆಳವಣಿಗೆ ಅವಕಾಶಗಳು ಕುರಿತು ಕಾರ್ಯಾಗಾರ

    ಕೋಡಿ ಕನ್ಯಾಣ- ಮೀನುಗಾರಿಕೆ ಮತ್ತು ಉದ್ಯಮಶೀಲತೆ ಹಾಗೂ ಬೆಳವಣಿಗೆ ಅವಕಾಶಗಳು ಕುರಿತು ಕಾರ್ಯಾಗಾರ

    ಪಚ್ಚಿಲೆ ಕೃಷಿಯ ಮೂಲಕ ಯಶಸ್ಸು ಸಾಧಿಸಿ – ಡಾ.ಪ್ರೇಮಾನಂದ

    ಕುಂದಾಪುರ ಮಿರರ್ ಸುದ್ದಿ…
    ಕೋಟ : ಕರಾವಳಿ ಭಾಗದಲ್ಲಿ ಪಚ್ಚಲೆ ಕೃಷಿ ಯಶಸ್ವಿ ಉದ್ಯಮವಾಗಿಸಿ ಕೊಂಡಿದ್ದಾರೆ. ಇದರ ಆಯಾಮ ತಿಳಿದು ತೊಡಗಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಉಡುಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ.ಪ್ರೇಮಾನಂದ.ಕೆ ಹೇಳಿದರು.

    ಕೋಡಿ ಕನ್ಯಾಣದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ ,ಮೀನುಗಾರಿಕಾ ಇಲಾಖೆ,ಸ್ಕೋಡೈ ಸಂಸ್ಥೆ ಶಿರಸಿ ,ಉಡುಪಿ ಮೀನುಗಾರರ ಉತ್ಪಾದಕ ಕಂಪನಿ ಜಂಟಿ ಆಶ್ರಯದಲ್ಲಿ ಮೀನುಗಾರಿಕೆ ಮತ್ತು ಉದ್ಯಮಶೀಲತೆ ಹಾಗೂ ಬೆಳವಣಿಗೆ ಅವಕಾಶಗಳು ಕುರಿತು ಕಾರ್ಯಾಗಾರದಲ್ಲಿ ಮಾತನಾಡಿ ಕೋಡಿ ಭಾಗದಲ್ಲಿ ಸಾಕಷ್ಟು ಜನರು ಪಚ್ಚಿಲೆ ಕೃಷಿಯನ್ನು ಆಯ್ದುಕೊಂಡು ಅದರ ಅನುಷ್ಠಾನಗೊಳಿಸಿದ್ದಾರೆ.ಆ ಕ್ಷೇತ್ರದ ಮೂಲಕ ಹಲವು ಪ್ರಶಸ್ತಿಗೂ ಕೂಡಾ ಭಾಜನರಾಗಿದ್ದಾರೆ.ಆಹಾರ ಸುರಕ್ಷತೆ ಅನುಸಾರ ಅದರ ಗುಣಮಟ್ಟವನ್ನು ಗಮನದಲ್ಲಿಇರಿಸಿಕೊಂಡು ಈ ಕ್ಷೇತ್ರದಲ್ಲಿ ಇನ್ನಷ್ಟು ತೊಡಗಿಕೊಳ್ಳುವಂತಾಗಿ ಎಂದು ಕರೆ ಇತ್ತರು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಮುಖ್ಯಸ್ಥ ಲೋಹಿತ್ ಕಾರ್ವಿ ವಹಿಸಿದ್ದರು.

    ಕಾರ್ಯಕ್ರಮವನ್ನು ಮಂಗಳೂರಿನ ರಿಜನಲ್ ಸೆಂಟರ್ ಆಫ್ ಐಸಿಆರ್ ಸಿಎಂಎಫಾರ್‍ಐ ಕರ್ನಾಟಕ ಇದರ ಪ್ರಾಂಶುಪಾಲೆ, ವಿಜ್ಞಾನಿ ಡಾ.ಗೀತಾ ಶೆಶಿಕುಮಾರ್ ಉದ್ಘಾಟಿಸಿದರು.

    ಮುಖ್ಯ ಅಭ್ಯಾಗತರಾಗಿ ಉಡುಪಿ ಮೀನುಗಾರಿಕಾ ಇಲಾಖೆ ಉಪನಿರ್ದೇಶಕ ಜಿ.ಎಮ್ ಶಿವ ಕುಮಾರ್,ಉದ್ಯಮಿ ಶಂಕರ್ ಕುಂದರ್,ಕೋಟದ ತೋಳಾರ್ ಓಷಿಯನ್ ಪ್ರಾಡಕ್ಟ್ ಇದರ ಪ್ರದಾನವ್ಯವಸ್ಥಾಪಕ ಯೋಗಿಶ್ ,ಕೋಡಿ ಗ್ರಾಮಪಂಚಾಯತ್ ಸದಸ್ಯೆ ಜಯಶ್ರೀ ,ಸ್ಕೋಡೈ ಸಂಸ್ಥೆ ಶಿರಸಿ ಇದರ ಸಂಯೋಜಕ ಗಂಗಾಧರ್ ನಾಯ್ಕ್,ಕಿನಾರ ಮೀನುಗಾರರ ಉತ್ಪಾದಕ ಕಂಪನಿಯ ಮುಖ್ಯ ಕಾರ್ಯವಾಹಕ ರಘು ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು. ಮಾಲತಿ ಸ್ವಾಗತಿಸಿದರೆ ಸ್ಕೋಡೈ ಸಂಸ್ಥೆಯ ಸಿಬ್ಬಂದಿ ಭೂಮಿಕಾ ಕಾರ್ಯಕ್ರಮ ನಿರೂಪಿಸಿದರು. ಕಿನಾರ ಮೀನುಗಾರರ ಉತ್ಪಾದಕ ಕಂಪನಿಯ ನಿರ್ದೇಶಕ ಸುದಿನ ಕೋಡಿ ಸಹಕರಿಸಿದರು.

     

  • ಹಂದಟ್ಟು- ಅಭಿಮಾನ ಫ್ರೆಂಡ್ಸ್ ವಾರ್ಷಿಕೋತ್ಸವ

    ಹಂದಟ್ಟು- ಅಭಿಮಾನ ಫ್ರೆಂಡ್ಸ್ ವಾರ್ಷಿಕೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಅಭಿಮಾನ್ ಫ್ರೆಂಡ್ಸ್, ನಾಗಬನ ಹಂದಟ್ಟು ಕೋಟ ಇವರ 11ನೇ ವರ್ಷದ ಸಾರ್ವಜನಿಕ ಶಿವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಇತ್ತೀಚಿಗೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ದಾನಗುಂದ ಅಂಗನವಾಡಿ ಕಾರ್ಯಕರ್ತೆ ಸುಶೀಲ ಹಾಗೂ ಸ್ಥಳೀಯ ಸಮಾಜಸೇವಕರು, ಕೃಷಿಕರು ಹಾಗೂ ಯಕ್ಷಗಾನ ನೈಪತ್ಯ ಕಲಾವಿದರಾದ ನಾಗರಾಜ ಪೂಜಾರಿ ಮತ್ತು ರಾಜು ಪೂಜಾರಿಯವರನ್ನು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಆನೆಗುಡ್ಡೆ ವಿನಾಯಕ ದೇವಸ್ಥಾನದ ಮೆನೇಜರ್ ಆನಂದರಾಮ ಉರಾಳ್, ಯಕ್ಷದೇಗುಲದ ಸುದರ್ಶನ ಉರಾಳ, ಮಂಜುನಾಥ ಉರಾಳ,ಕೋಟತಟ್ಟು ಪಂಚಾಯತ್ ಸದಸ್ಯೆ ಪೂಜಾ ಹಾಗೂ ಅಭಿಮಾನ್ ಫ್ರೆಂಡ್ಸ್‍ನ ಅಧ್ಯಕ್ಷ ರಮೇಶ ಪೂಜಾರಿ, ಉಪಾಧ್ಯಕ್ಷ ಸತೀಶ್ ಎಸ್., ಕಾರ್ಯದರ್ಶಿ ಸುಧೀರ, ಜೊತೆಕಾರ್ಯದರ್ಶಿ ದೇವರಾಜ್, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

  • ಗುಂಡ್ಮಿ- ಅನಾರೋಗ್ಯ ಪೀಡಿತರಿಗೆ ಸಹಾಯಹಸ್ತ

    ಗುಂಡ್ಮಿ- ಅನಾರೋಗ್ಯ ಪೀಡಿತರಿಗೆ ಸಹಾಯಹಸ್ತ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಅನಾರೋಗ್ಯ ಪೀಡಿತರಾಗಿ, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಐರೋಡಿ ಚನ್ನಕೇಶವ ಭಟ್ಟ ಇವರಿಗೆ ಗುಂಡ್ಮಿ ಶ್ರೀ ಮಹಾ ವಿಷ್ಣು ವೈದಿಕ ಮಂದಿರ ಇದರ ಆಡಳಿತ ಮಂಡಳಿಯ ವತಿಯಿಂದ ಸಹಾಯಧನ ವಿತರಿಸಲಾಯಿತು. ಶ್ರೀ ಮಹಾವಿಷ್ಣು ವೈದಿಕ ಮಂದಿರದಿಂದ ರೂಪಾಯಿ 10,000, ದಾನಿಗಳಾದ ವಾಣಿ ಶುಭಚಂದ್ರ ಹತ್ವಾರ್ ಕುಟುಂಬದಿಂದ 20,000, ಮಂಜುನಾಥ ನಾವಡ ಕೊರವಾಡಿ ಕುಂದಾಪುರ 30,000 ನೀಡಿ ಸಹಕರಿಸಿದರು.

    ಈ ಸಂದರ್ಭದಲ್ಲಿ ವೈದಿಕ ಮಂದಿರದ ಕಾರ್ಯದರ್ಶಿ ಜಿ ರಾಮಚಂದ್ರ ಐತಾಳ, ಕೋಶಾಧಿಕಾರಿ ಜಿ ಉದಯಮಯ್ಯ ಇದ್ದರು.