ಮಣೂರು- ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ – ಪ್ರಣಾಳಿಕಾ ಸಲಹಾ ಸಂಗ್ರಹ ಅಭಿಯಾನ

ಕುಂದಾಪುರ ಮಿರರ್ ಸುದ್ದಿ…

ಕೋಟ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಅಂಗವಾಗಿ ಬಿಜೆಪಿ ಪ್ರಣಾಳಿಕಾ ಸಲಹಾ ಸಂಗ್ರಹ ಅಭಿಯಾನ ಸಭೆಯು ಶನಿವಾರ ಕೋಟದ ರಾಜಲಕ್ಷ್ಮೀಸಭಾಭವನದಲ್ಲಿ ಜರುಗಿತು.

ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಹಿತೈಷಿಗಳು ಪ್ರಣಾಳಿಕೆಗಾಗಿ ಸಲಹೆಯನ್ನು ಪತ್ರದ ಮೂಲಕ ತಿಳಿಸಿದರು, ಕಾರ್ಯಕ್ರಮದ ವೇದಿಕೆಯಲ್ಲಿ ಸಲಹಾ ಪತ್ರಗಳನ್ನು ಸಂಗ್ರಹಿಸಲಾಯಿತು.

ಕಾರ್ಯಕ್ರಮದಲ್ಲಿ ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ರಾಜ್ಯ ಆಹಾರ ನಿಗಮ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ, ಅಭಿಯಾನದ ಜಿಲ್ಲಾ ಸಂಚಾಲಕ ಅಂಡಾರು ದೇವಿಪ್ರಸಾದ್ ಶೆಟ್ಟಿ, ಸಹ ಸಂಚಾಲಕ ಶ್ಯಾಮ ಸುಂದರ ನಾಯರಿ, ನೀತಾ ಪ್ರಭು, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಅಭಿಯಾನದ ಮಂಡಲ ಸಂಚಾಲಕ ಶ್ರೀನಿಧಿ ಉಪಾಧ್ಯ, ಸಹ ಸಂಚಾಲಕ ಸುಧೀರ ಪೂಜಾರಿ ಕೋಟ ಕದ್ರಿಕಟ್ಟು ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪ ಪೈ ವಂದೇ ಮಾತರಂ ಹಾಡಿದರು, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಸ್ವಾಗತಿಸಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸತೀಶ್ ಬಾರಿಕೆರೆ ವಂದಿಸಿದರು, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್ ಕಾರ್ಯಕ್ರಮ ನಿರೂಪಿಸಿದರು.

Comments

Leave a Reply

Your email address will not be published. Required fields are marked *

More posts