ಕೋಟತಟ್ಟು ಪಡುಕರೆ – ಮತದಾನ ಜಾಗೃತಿ, ಪ್ರತಿಜ್ಞೆ

ಕುಂದಾಪುರ ಮಿರರ್ ಸುದ್ದಿ…

ಕೋಟ: ಪ್ರತಿಯೊಬ್ಬರು ಮತದಾನ ಮಾಡಬೇಕು ಮತದಾನದ ಹಕ್ಕಿನಿಂದ ವಿಮುಖರಾಗಬಾರದು ಆಗಮಾತ್ರ ನಾವು ನಮ್ಮ ದೇಶದಲ್ಲಿ ಹುಟ್ಟು ಸಾರ್ಥಕ್ಯ ಕಾಣಬಹುದು ಎಂದು ಕೋಟತಟ್ಟು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಹೇಳಿದರು.

ಕೋಟ ಪಂಚವರ್ಣ ಯುವಕ ಮಂಡಲ ಹಾಗೂ ಕೋಟತಟ್ಟು ಗ್ರಾಮಪಂಚಾಯತ್ ಸಂಯುಕ್ತ ಸಹಯೋಗದೊಂದಿಗೆ ಕೋಟತಟ್ಟು ಪಡುಕರೆಯಲ್ಲಿ ಹಮ್ಮಿಕೊಂಡ ಮತದಾನದ ಜಾಗೃತಿ ಹಾಗೂ ಪ್ರತಿಜ್ಞಾ ವಿಧಿ ನೆರವೆರಿಸಿ ಮಾತನಾಡಿ ನಿಮ್ಮ ಒಂದೊಂದು ಮತಗಳು ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಅದನ್ನು ಹಣಕ್ಕಾಗಿ ಮಾರಾಟ ಮಾಡದೆ ಸಭ್ಯ ಅಭ್ಯರ್ಥಿಗೆ ಚಲಾಯಿಸಿ ಸದೃಢ ದೇಶ ಕಟುವ ಕಾರ್ಯಕ್ಕೆ ಮುನ್ನುಡಿ ಬರೆಯಿರಿ ಎಂದು ಆಶಿಸಿ ಪ್ರತಿಜ್ಞಾ ವಿಧಿ ನೆರವೆರಿಸಿದರು.

ಈ ಸಂದರ್ಭದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್,ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್,ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್, ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಕೋಟ ಪಡುಕರೆ ಲ.ಸೋ ಬಂ.ಸ.ಪ್ರ.ಕಾಲೇಜಿನ ಪ್ರಾಂಶುಪಾಲ ಡಾ.ಸುನೀತಾ,ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ.ಜಗದೀಶ ನಾವಡ,ಕೋಟತಟ್ಟು ಗ್ರಾ.ಪಂ ಕಾರ್ಯದರ್ಶಿ ಸುಮತಿ ಅಂಚನ್,ಜನತಾ ಸಂಸ್ಥೆಯ ನಿರ್ದೇಶಕ ಪ್ರಶಾಂತ್ ಎ ಕುಂದರ್,ಸಂಜೀವಿ ಒಕ್ಕೂಟದ ಸುಜಾತ ಯು ತಿಂಗಳಾಯ,ಪಂಚವರ್ಣ ಮಹಿಳಾ ಮಂಡಲದ ಸುಜಾತ ಬಾಯರಿ ಮತ್ತಿತರರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *

More posts