ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘ: ಪಕ್ಷೇತರರಿಗೆ ಒಲಿದ ಅಧ್ಯಕ್ಷ ಗಾದಿ :ನೂತನ ಅಧ್ಯಕ್ಷರಾಗಿ ಸುರೇಶ ಅಡಿಗ ಆಯ್ಕೆ

0
514

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸಾಸ್ತಾನ ಸಹಕಾರಿ ವ್ಯವಸಾಯಿಕ ಸಂಘದ ನೂತನ ಅಧ್ಯಕ್ಷರಾಗಿ ಸುರೇಶ ಅಡಿಗ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗೋವಿಂದ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು ಉಪಾಧ್ಯಕ್ಷರ ಆಯ್ಕೆ ಪಕ್ರಿಯೆ ಗುರುವಾರ ಮಧ್ಯಾಹ್ನ ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು.

ಸಹಕಾರಿ ಇಲಾಖೆಯ ರೋಹಿತ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

Click Here

ಈ ಸಂದರ್ಭದಲ್ಲಿ ನಿರ್ದೇಶಕರಾದ ಚಂದ್ರಮೋಹನ್, ಶ್ರೀಧರ ಪಿ.ಎಸ್., ಆನಂದ ಗಾಣಿಗ, ಎ ರಮೇಶ್ ಕಾರಂತ್, ವಿಜಯ ಪೂಜಾರಿ, ಅರುಣ ಪೂಜಾರಿ ವೈ. ಕಿರಣ್ ಥಾಮಸ್ ಡಯಾಸ್, ಲೀಲಾವತಿ ಗಂಗಾಧರ ಪೂಜಾರಿ, ಕಮಲ ಆಚಾರ್, ಶೇಖರ ಗದ್ದೆಮನೆ, ಪ್ರೀತಿ ಉಪಸ್ಥಿತರಿದ್ದರು.

ಕಳೆದ ರವಿವಾರ ಆಡಳಿತ ಮಂಡಳಿಗೆ ಚುನಾವಣೆ ನಡೆದಿತ್ತು. ಒಟ್ಟು 13 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿತ್ತು. ಉಳಿದ 12 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ತಲಾ ಆರು ಸ್ಥಾನಗಳನ್ನು ಕಾಂಗ್ರೆಸ್, ಬಿಜೆಪಿ ಬೆಂಬಲಿತರು ಗೆದ್ದುಕೊಂಡಿದ್ದರು. ಒಂದು ಸ್ಥಾನ ಪಕ್ಷೇತರ ಪಾಲಾಗಿತ್ತು.

ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಸುರೇಶ ಅಡಿಗರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ಗೋವಿಂದ ಪೂಜಾರಿ ಉಪಾಧ್ಯಕ್ಷಾಗಿ ಆಯ್ಕೆಗೊಂಡಿದ್ದಾರೆ.

Click Here

LEAVE A REPLY

Please enter your comment!
Please enter your name here