ಆನೆಗುಡ್ಡೆ ದೇಗುಲದಲ್ಲಿ 21ಸಾವಿರ ತೆಂಗಿನ ಕಾಯಿ ಮೂಡು ಗಣಪತಿ ಸೇವೆ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವರ ಸನ್ನಿಧಿಯಲ್ಲಿ ಜ. 2ರಂದು 21 ಸಾವಿರ ತೆಂಗಿನ ಕಾಯಿ ಮೂಡು ಗಣಪತಿ ಸೇವೆ ನಡೆಯಿತು.

ಬ್ರಹ್ಮಾವರದ ನಿವಾಸಿ ಪ್ರಸ್ತುತ ಅಮೆರಿಕಾದಲ್ಲಿ ನೆಲೆಸಿರುವ ಡಾ.ಮೇಜರ್ ವಂದನ ಬಿರ್ತಿ ಮತ್ತು ಡಾ. ಮೇಜರ್ ಪ್ರವರ್ಧನ ಬಿರ್ತಿ ಇವರಿಂದ ಹರಕೆಯ ಸೇವೆಯಾಗಿತ್ತು.

ದೇವಳದ ಆಡಳಿತ ಧರ್ಮದರ್ಶಿ ಕೆ.ರಮಣ ಉಪಾಧ್ಯಾಯ, ವಿಶ್ರಾಂತ ಧರ್ಮದರ್ಶಿ, ಸೂರ್ಯನಾರಾಯಣ ಉಪಾಧ್ಯಾಯ, ಕೆ.ನಿರಂಜನ ಉಪಾಧ್ಯಾಯ, ಕೆ. ವಿಠಲ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಶ್ರೀಶ ಉಪಾಧ್ಯಾಯ, ಮ್ಯಾನೇಜರ್ ನಟೇಶ್ ಕಾರಂತ್, ಹಾಗೂ ದೇವಳದ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗದವರು, ಅರ್ಚಕರು ಉಪಸ್ಥಿತರಿದ್ದರು. ರವಿರಾಜ್ ಉಪಾಧ್ಯಾಯ, ಸುಬ್ರಹ್ಮಣ್ಯ ಉಪಾಧ್ಯಾಯ, ಶ್ರೀಧರ್ ಉಪಾಧ್ಯಾಯ ಅವರು ವಿಶೇಷ ಪೂಜಾ ಕೈಂಕರ್ಯದಲ್ಲಿ ಸಹಕರಿಸಿದ್ದರು.

Comments

Leave a Reply

Your email address will not be published. Required fields are marked *

More posts