ಕುಂದಾಪುರ: ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ- ಬಿಜೆಪಿಯಿಂದ ಅಚ್ಚರಿಯನಿರ್ಧಾರ

ಕುಂದಾಪುರ ಮಿರರ್ ಸುದ್ದಿ…

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜೀ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.

ಪಂಚಾಯತ್ ರಾಜ್ ಕ್ಷೇತ್ರದ ಚುನಾವಣೆಯ ಮೂಲಕ ವಿಧಾನಪರಿಷತ್ ಪ್ರವೇಶಿಸಿದ್ದ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಮಾಜೀ ಸ್ಪೀಕರ್ ಆಗಿದ್ದಾರೆ, ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆಯನ್ನು ನಿರ್ವಹಿಸಿದ್ದಾರೆ. ಪಂಚಾಯತ್ ಸದಸ್ಯರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೋಟಾ, ಇದೀಗ ರಾಜ್ಯ ರಾಜಕಾರಣದಿಂದ ಕೇಂದ್ರದತ್ತ ನಡೆಯಲು ಸಿದ್ಧತೆ ನಡೆಸಿದಂತಾಗಿದೆ.

Comments

Leave a Reply

Your email address will not be published. Required fields are marked *

More posts