ಕುಂದಾಪುರ :ಜಿಲ್ಲಾ ಕೆಡಿಪಿ ಸದಸ್ಯ ಗಂಗಾಧರ ಹೆಗ್ಡೆ ಆನಗಳ್ಳಿ ನಿಧನ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕುಂದಾಪುರ ತಾಲೂಕಿನ ಆನಗಳ್ಳಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ, ಉಡುಪಿ ಜಿಲ್ಲಾ ಕೆಡಿಪಿ ಸದಸ್ಯ, ಹೇರಿಕುದ್ರು ಗಂಗಾಧರ ಶೆಟ್ಟಿ ಅವರು ಶುಕ್ರವಾರ ರಾತ್ರಿ ನಿಧನರಾದರು.

ಕೆಲವು ದಿನಗಳ ಹಿಂದೆ ಗಂಗಾಧರ ಶೆಟ್ಟಿಯವರಿಗೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ರಾತ್ರಿ 9:57 ಸುಮಾರಿಗೆ ಚಿಕಿತ್ಸೆ ಪದಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಶನಿವಾರ ಬೆಳಿಗ್ಗೆ ಅವರ ಹೇರಿಕುದ್ರು ಸ್ವಗೃಹದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗುವುದು ಇಂದು ಕುಟುಂಬ ಮೂಲಗಳು ತಿಳಿಸಿವೆ.

Comments

Leave a Reply

Your email address will not be published. Required fields are marked *

More posts