ಕೋಟ ಪಂಚವರ್ಣ ರೈತರೆಡೆಗೆ ನಮ್ಮ ನಡಿಗೆ – 34ನೇ ಸಾಧಕ ಕೃಷಿಕರಾಗಿ ಪ್ರವೀಣ್ ಕುಲಾಲ್ ಆಯ್ಕೆ

ಕುಂದಾಪುರ ಮಿರರ್ ಸುದ್ದಿ…

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 34ರ ಸಂಭ್ರಮ ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಮಾ.29ರ ಪೂರ್ವಾಹ್ನ.10.30ಗ ನಡೆಯಲಿದ್ದು ಕೃಷಿ ಮತ್ತು ಹೈನುಗಾರಿಕೆ ಕೃಷಿ ಕಾಯಕದಲ್ಲಿ ವಿವಿಧ ಬಗೆಯ ವಿಶಿಷ್ಟ ಸಾಧನೆಗೈದ ಕುಂದಾಪುರ ತಾಲೂಕಿನ ಮೊಳಹಳ್ಳಿ ಪ್ರವೀಣ್ ಕುಲಾಲ್ ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿದ್ದಾರೆ.

Comments

Leave a Reply

Your email address will not be published. Required fields are marked *

More posts