ಕುಂದಾಪುರ :ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮತದಾನ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಲೋಕಸಭಾ ಸಭಾ ಚುನಾವಣೆಯ ಎರಡನೇ ಹಂತದ‌ ಮತದಾನ ಇಂದು ಆರಂಭಗೊಂಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ‌ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ತಮ್ಮ ಸ್ವಗೃಹದ ಸಮೀಪದ ಕೊರ್ಗಿ ಶ್ರೀಮತಿ ಗಿರಿಜಾ ಚಂದ್ರಶೇಖರ ಹೆಗ್ಡೆ ಸರ್ಕಾರಿ ಹಿರಿಯ ಪ್ರ ಮತಗಟ್ಟೆ ಸಂಖ್ಯೆ 97ರಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು.

ಸರತಿ ಸಾಲಿನಲ್ಲಿ ಮೊದಲ ಸರತಿಯಲ್ಲಿ‌ನಿಂತು ಮತದಾನ ಮಾಡಿದ ಕೆ. ಜಯಪ್ರಕಾಶ್ ಹೆಗ್ಡೆಯವರು ಮತಗಟ್ಟೆ ಸಂಖ್ಯೆ ರಲ್ಲಿ ಸಹೋದರಿಯರಾದ ಸರೋಜಿನಿ ಹೆಗ್ಡೆ ಹಾಗೂ ಶಶಿಕಲಾ ಹೆಗ್ಡೆ ಜೊತೆಗೆ ಬಂದು ಮತದಾನ ಮಾಡಿದರು.

ಈ‌ ಸಂದರ್ಭ ಅವರು ಈ ಬಾರಿ ಉತ್ತಮ ವಾತಾವರಣವಿದ್ದು, ಮತದಾರರು ಕ್ಷೇತ್ರದಿಂದಡೆ ಬೆಂಬಲ ವ್ಯಕ್ತಪಡಿಸಿರುವುದು ಸಂತೋಷದೊಂದಿಗೆ ಅಲ್ಲದೆ ಈ ಚುನಾವಣೆಯಲ್ಲಿ ನಾನು ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದರು.

Comments

Leave a Reply

Your email address will not be published. Required fields are marked *

More posts