ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ.

ಕುಂದಾಪುರ ಮಿರರ್ ಸುದ್ದಿ…

ಕೋಟ: ಲೋಕಸಭಾ ಚುನಾವಣೆಯಲ್ಲಿ ಬಾರಿ ಅಂತರದಲ್ಲಿ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಸಾಸ್ತಾನದ ಮಾಬುಕಳದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹಾರ ತೊಡಿಸಿ ಪಟಾಕಿ ಸಿಡಿಸಿ ಬರಮಾಡಿಕೊಂಡರು.

ಇದೇ ವೇಳೆ ಸಾಸ್ತಾನ ಬಸ್ ತಂಗುದಾಣ, ಸಾಲಿಗ್ರಾಮ, ಸೇರಿದಂತೆ ಹುಟ್ಟೂರು ಕೋಟದವರೆಗೆ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು.

ಈ ವೇಳೆ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ರಾಜ್ಯ ಮುಖಂಡ ಐರೋಡಿ ವಿಠ್ಠಲ್ ಪೂಜಾರಿ, ಕುಂದಾಪುರ ಕ್ಷೇತ್ರ ಅಧ್ಯಕ್ಷ ಸುರೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ, ಮಾಜಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ, ಮುಖಂಡರುಗಳಾದ ರಾಜೇಶ್ ಕಾವೇರಿ, ಶ್ಯಾಮಸುಂದರ್ ನಾಯರಿ, ಸುರೇಶ್ ಕುಂದರ್, ರಾಜು ಪೂಜಾರಿ, ಅಜಿತ್ ಶೆಟ್ಟಿ ಕೊತ್ತಾಡಿ, ಗೋವಿಂದ ಪೂಜಾರಿ,ರವೀಂದ್ರ ತಿಂಗಳಾಯ,ರಮೇಶ್ ಕಾರಂತ,ಶಂಕರ್ ಕುಲಾಲ್, ವಿಜಯ್ ಪೂಜಾರಿ, ನಟರಾಜ ಗಾಣಿಗ, ಪ್ರತಾಪ್ ಶೆಟ್ಟಿ, ಸುರೇಶ್ ಪೂಜಾರಿ, ಸುಲತಾ ಹೆಗ್ಡೆ, ಸುದಿನಾ ಕೋಡಿ, ರಾಜು ಶ್ರೀಯಾನ್, ಕಿರಣ್ ಅಚ್ಲಾಡಿ, ಕೃಷ್ಣ ಪೂಜಾರಿ, ಮತ್ತಿತರರು ಇದ್ದರು.

Comments

Leave a Reply

Your email address will not be published. Required fields are marked *

More posts