ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಭಾರತೀಯ ಆಟೋರಿಕ್ಷ ಮಜ್ದೂರ್ ಸಂಘ ಕುಂದಾಪುರ ತಾಲೂಕು ಇದರ 19 ನೇ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ ಕುಂದಾಪುರ ಲಕ್ಷ್ಮೀನರಸಿಂಹ ಕಲಾಮಂದಿರ ಜೂನಿಯರ್ ಕಾಲೇಜು ಇಲ್ಲಿ ನಡೆಯಿತು.
ಕುಂದಾಪುರ ಸಂಚಾರಿ ಪೊಲೀಸ್ ಠಾಣಾಧಿಕಾರಿ ನೂತನ್ ಡಿ ಇ ಮಾಹಿತಿ ಕಾರ್ಯಗಾರವನ್ನು ನಡೆಸಿ ಕೊಡುದರ ಮೂಲಕ ಅತ್ಯುತ್ತಮವಾದ ಮಾಹಿತಿಗಳನ್ನು ನೀಡಿದರು.
ಅನಾರೋಗ್ಯದ ಸಮಸ್ಯೆಯಲ್ಲಿರುವ ಸಂಘದ ಸದಸ್ಯರಿಗೆ ಆರ್ಥಿಕ ಸಹಕಾರ ನೀಡಲಾಯಿತು.
ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎ ಮೊಗವೀರ ಇವರು ವರದಿ ಮಂಡನೆ ಮಾಡಿದರು. ಸಂಘಟನೆಯ ಅಧ್ಯಕ್ಷ ಅಶೋಕ್ ಕೆರೆಕಟ್ಟೆ ಅಧ್ಯಕ್ಷೀಯ ಭಾಷಣವನ್ನು ಮಾಡಿ ಸಂಘಟನೆಯನ್ನು ಬೆಳೆಸಲು ತಮ್ಮೆಲ್ಲರ ಉತ್ತಮ ರೀತಿಯ ಸಹಕಾರವನ್ನು ನೀಡಬೇಕು. ಸದಸ್ಯರು ಪ್ರತಿ ಸಭೆಯಲ್ಲಿ ಭಾಗವಹಿಸಬೇಕು ಹಾಗೂ ಇನ್ನಿತರ ವಿಷಯಗಳನ್ನು ತಿಳಿಸಿದರು.
2026- 27ರ ಹೊಸ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಪುತ್ರನ್ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷರಾದ ರವಿ ಪುತ್ರನ್ ಸ್ವಾಗತಿಸಿ ಕಾರ್ಯಕ್ರಮದ ನಿರೂಪಣೆ ಮಾಡಿದರು. ಬಿಎಂಎಸ್ ಸದಸ್ಯ ಸುರೇಂದ್ರ ಕಾಂಚನ್ ಇವರು ವಂದನಾರ್ಪಣೆ ಮಾಡಿದರು.

Leave a Reply