ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ ಆಚರಣೆ, ಸಂವಾದ, ಗೌರವ

0
842

ಕುಂದಾಪುರ ಮಿರರ್ ಸುದ್ದಿ…

ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನದ ಅಂಗವಾಗಿ ಸಾಸ್ತಾನ ರೋಟರಿ ಭವನದಲ್ಲಿ ಪತ್ರಕರ್ತರೊಂದಿಗೆ ಸಂವಾದ ಹಾಗೂ ಸನ್ಮಾನ ಕಾರ್ಯಕ್ರಮ ಸೋಮವಾರ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಸೇರಿದಂತೆ ಪತ್ರಕರ್ತ ಪ್ರತಿನಿಧಿಗಳಾದ ಶೇಷಗಿರಿ ಭಟ್,ಚಂದ್ರಶೇಖರ ಬೀಜಾಡಿ ,ರವೀಂದ್ರ ಕೋಟ ಇವರುಗಳನ್ನು ಗೌರವಿಸಲಾಯಿತು.

 

ಈ ಸಂದರ್ಭದಲ್ಲಿ ರೋಟರಿ ವಲಯ 3ರ ಸಹಾಯಕ ಗವರ್ನರ್ ಕೆ.ಪದ್ಮನಾಭ ಕಾಂಚನ್,ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇದರ ಉಪಾಧ್ಯಕ್ಷೆ ಸುಲತಾ ಹೆಗ್ಡೆ,ರೋಟರಿ ವೃತ್ತಿಪರ ಸೇವಾ ನಿರ್ದೇಶಕ ಆನಂದ್ ಎಂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರೋಟರಿ ಕ್ಲಬ್ ಕಾರ್ಯದರ್ಶಿ ವಿಘ್ನೇಶ್ವರ ಅಡಿಗ ಸ್ವಾಗತಿಸಿ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here