ಕುಂದಾಪುರ :ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿಯಲ್ಲಿ ಬೀಳ್ಕೊಡುಗೆ ಸಮಾರಂಭ

0
319

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಮೌಲ್ಯಯುತ, ಪಠ್ಯ ಪಠ್ಯೇತರ ರಂಗದಲ್ಲಿಯೂ ಶಿಸ್ತುಬದ್ದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪವಾಗಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗುವಂತಹ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ನೆರವೇರಿತು.

ಸುಜ್ಞಾನ ಎಜುಕೇಶನ್ ಟ್ರಸ್ಟನ ಅಧ್ಯಕ್ಷರಾದ ರಮೇಶ್ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ “ವಿದ್ಯಾರ್ಥಿಗಳು ಪರೀಕ್ಷೆಯ ಸಂದರ್ಭದಲ್ಲಿ ಹೆಚ್ಚಿನ ಸಮಯ ಹಾಳು ಮಾಡದೇ ಅದನ್ನು ಓದಲು ಮೀಸಲಿಟ್ಟು ಸಾಧಕರಾಗಬೇಕು ಎಂದರು. ನಮ್ಮ ಶಿಕ್ಷಣ ಸಂಸ್ಥೆಯು ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾಕ್ಷೇತ್ರದಲ್ಲಿ ಹೆಸರು ಮಾಡಿದ್ದು ಎಕ್ಸಲೆಂಟ್ ಎಂದರೆ ಶೈಕ್ಷಣಿಕ ಪ್ರಗತಿಯ ಜ್ಞಾನ ದೇಗುಲವಾಗಿದೆ” ಎಂದು ಹೇಳಿದರು.

ಸುಜ್ಞಾನ ಎಜುಕೇಶನ್ ಟ್ರಸ್ಟನ ಖಜಾಂಚಿಯಾದ ಭರತ್ ಶೆಟ್ಟಿಯವರು ಪ್ರಸ್ತಾವಿಕ ನುಡಿಗೈಯುತ್ತಾ “ವಿದ್ಯಾರ್ಥಿಗಳು ತಮ್ಮ ಬೀಳ್ಕೊಡುಗೆ ಸಮಾರಂಭವನ್ನು ಸಂಭ್ರಮಿಸುವಂತೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸಂಭ್ರಮಿಸಬೇಕು ಅವರ ಮುಂದಿನ ಜೀವನದ ಗುರಿ ಸ್ಪಷ್ಟವಾಗಿದ್ದಾಗ ಏಕಾಗ್ರತೆಯು ಸಾಧ್ಯವಾಗುತ್ತದೆ ಎಂದರು.”

Click Here

ಎಕ್ಸಲೆಂಟ್‍ನ ಪ್ರಾಂಶುಪಾಲರಾದ ಅಗಸ್ಟಿನ್ ರವರು “ವಿದ್ಯಾರ್ಥಿಗಳ ಜೀವನದಲ್ಲಿ 10ನೇತರಗತಿ ಮಹತ್ತರವಾದ ಘಟ್ಟವಾಗಿದೆ. ಶಿಸ್ತು ಬದ್ಧವಾದ ಅಧ್ಯಯನದಿಂದ ಯಶಸ್ಸು ಸಾಧ್ಯವೆಂದು ವಿದ್ಯಾರ್ಥಿಗಳನ್ನು ಹರಸಿದರು”. ಶಿಕ್ಷಕರ ಪರವಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇಮಾ ಮತ್ತು ಸುದಕ್ಷಿಣಾ ಆರ್. ಉಡುಪ ರವರು ಶುಭ ಹಾರೈಸಿದರು. ಕನ್ನಡ ಉಪನ್ಯಾಸಕರಾದ ಗುರುಪ್ರಸಾದ್ ರವರು ವಿದ್ಯಾರ್ಥಿಗಳಿಗೆ ಪರೀಕ್ಷೆಯ ಪೂರ್ವತಯಾರಿ ಹೇಗಿರಬೇಕು ಎಂದು ತಮ್ಮ ದಿಕ್ಸೂಚಿ ಭಾಷಣದಲ್ಲಿ ತಿಳಿಸಿದರು.

10ನೇ ತರಗತಿ ವಿದ್ಯಾರ್ಥಿಗಳಾದ ಶಮನ, ಸ್ವಸ್ತಿಕ್ ರವರು ವಿದ್ಯಾರ್ಥಿ ಜೀವನದ ಅನುಭವವನ್ನು ಹಂಚಿಕೊಂಡರು ಆದ್ಯಾ, ತೃಪ್ತಿಕ್ ಇಂಪಾದ ಗಾನದೊಂದಿಗೆ ಸಭಿಕರನ್ನು ರಂಜಿಸಿದರು.

ಸರೋಜಿನಿ ಆಚಾರ್ಯ ರವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಚಿತ್ರಕಲಾ ಶಿಕ್ಷಕ ಗಿರೀಶ್ ರವರು ಉತ್ತಮ ವೇದಿಕೆ ನಿರ್ಮಿಸಿ ಕೊಟ್ಟರು ವೇದಿಕೆಯಲ್ಲಿ ಮುಖ್ಯ ಶಿಕ್ಷಕಿಯಾದ ಸುರೇಖಾ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here