ಕುಂದಾಪುರ ಮಿರರ್ ಸುದ್ದಿ…
ಕೋಟ: ಮಣೂರು ಫ್ರೆಂಡ್ಸ್ ಮಣೂರು ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಇದೇ ಬರುವ ಎ.4ರಂದು ಶ್ರೀ ಮಣೂರು ಹೇರಂಬ ಮಹಾಗಣಪತಿ ಶ್ರೀ ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಹಮ್ಮಿಕೊಂಡಿದೆ.
ಮಣೂರು ಫ್ರೆಂಡ್ಸ್ ಮಣೂರು ಇದರ ಗೌರವಾಧ್ಯಕ್ಷ ಸುರೇಶ್ ಆಚಾರ್ಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಸತೀಶ್ ಹೆಚ್ ಕುಂದರ್, ಟ್ರಸ್ಟಿ ಕೃಷ್ಣ ದೇವಾಡಿಗ, ದೇವಳದ ಜೀರ್ಣೋದ್ಧಾರ ಸಮಿತಿ ಪ್ರಮುಖರಾದ ಅರುಣಾಚಲ ಮಯ್ಯ, ಭಾರತಿ ವಿ ಮಯ್ಯ, ಎಂ.ಎನ್ ಮಧ್ಯಸ್ಥ, ಶಿವರಾಮ್ ಶೆಟ್ಟಿ, ನಾಗರಾಜ್ ಅಮೀನ್ ,ಮಣೂರು ಫ್ರೆಂಡ್ಸ್ ಗೌರವ ಸಲಹೆಗಾರರಾದ ಸುಧಾಕರ್ ಆಚಾರ್ಯ, ಗಣೇಶ್ ಆಚಾರ್ಯ, ರವಿಚಂದ್ರ ಆಚಾರ್ಯ, ರಾಘವೇಂದ್ರ ಆಚಾರ್ಯ ಇದ್ದರು.











