ಕುಂದಾಪುರ ಮಿರರ್ ಸುದ್ದಿ…
ಕೋಟ: ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಕೆ.ಜಿ.ಎಫ್ ಚಲನಚಿತ್ರದ ಸಂಗೀತ ನಿರ್ದೇಶಕ ಕುಂದಕನ್ನಡದ ರವಿ ಬಸ್ರೂರ್ ಗುರುವಾರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪಕ ಗಣೇಶ್ ಹೊಳ್ಳ ಶಾಲು ಹೊದಿಸಿ ಗೌರವಿಸಿ ಪ್ರಸಾದ ವಿತರಿಸಿದರು.ಶ್ರೀ ದೇವಳದ ಅರ್ಚಕ ಪ್ರತಿನಿಧಿ ಸಂತೋಷ್ ಎನ್ ಜೋಗಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅರ್ಚಕ ವಿಜಯ ಜೋಗಿ ಮತ್ತಿತರರು ಉಪಸ್ಥಿತರಿದ್ದರು.











