ಸಹಕಾರಿ ಹಾಗೂ ಕೃಷಿ ಕ್ಷೇತ್ರ, ಮೂರ್ತೇದಾರಿಕೆ ಹೋರಾಟಗಾರ ಕೋಡಿ ಕೊರಗ ಪೂಜಾರಿಯವರಿಗೆ ಪಂಚವರ್ಣ ರಜತ ಗೌರವಕ್ಕೆ ಆಯ್ಕೆ

0
448

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ಬೆಳ್ಳಿ ಹಬ್ಬದ ವರ್ಷಾಚರಣೆಯ ಅಂಗವಾಗಿ ಸಾಧಕರಿಗೆ ರಜತ ಗೌರವಾರ್ಪಣೆ ನೀಡುತ್ತಿದ್ದು ಈ ಹಿನ್ನಲ್ಲೆಯಲ್ಲಿ ಈ ತಿಂಗಳು ಸಹಕಾರ ಕ್ಷೇತ್ರ ಹಾಗೂ ಕೃಷಿ ಕ್ಷೇತ್ರ,ಮೂರ್ತೇದಾರಿಕೆ ಹೋರಾಟಗಾರ ಕೋಡಿ ಕೊರಗ ಪೂಜಾರಿ ಇವರನ್ನು ಆಯ್ಕೆಗೊಳಿಸಲಾಗಿದೆ.

Click Here

ಪಂಚವರ್ಣ ಸಂಸ್ಥೆ ನೀಡುತ್ತಿರುವ ಐದನೇ ಸಾಧಕ ಶಕ್ತಿಯಾಗಿದ್ದು ಈ ಹಿಂದೆ ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಸಹಕಾರಿ ಕ್ಷೇತ್ರದ ಸಾಧಕ ಜಿ.ತಿಮ್ಮ ಪೂಜಾರಿ,ಸಮಾಜಸೇವಕ ಈಶ್ವರ್ ಮಲ್ಪೆ, ಅನಾಥರ ಬದುಕಿನ ಆಶಾಕಿರಣ ಹೊಸಬೆಳಕು ವಿನಯಚಂದ್ರ ಸಾಸ್ತಾನ, ವಿಶೇಷಚೇತನ ಸಾಧಕಿ ಲಲಿತಾ ಪೂಜಾರಿ,ಸಾಲಿಗ್ರಾಮದ ಹಿರಿಯ ವೈದ್ಯರಾದ ಡಾ.ವಿಶ್ವೇಶ್ವರ ತುಂಗ ಇವರುಗಳನ್ನು ಗುರುತಿಸಿದ್ದು ಇಲ್ಲಿ ಸ್ಮರಿಸಬಹುದಾಗಿದೆ. ಇದೇ ಮೇ.29ರಂದು ಕೋಡಿ ಅವರ ಸ್ವಗೃಹದಲ್ಲಿ ಈ ಗೌರವ ಕಾರ್ಯಕ್ರಮ ನಡೆಯಲಿದೆ ಎಂದು ಪಂಚವರ್ಣ ಸಂಸ್ಥೆಯ ಅಧ್ಯಕ್ಷ ಅಜಿತ್ ಆಚಾರ್ಯ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here