ಕುಂದಾಪುರ :ರೈತರೆಡೆಗೆ ನಮ್ಮ ನಡಿಗೆ 26ನೇ ಸರಣಿ ಕಾರ್ಯಕ್ರಮ – ಹಿರಿಯ ಕೃಷಿಕ. ಶ್ರೀಧರ(ಸಿದ್ಧ) ದೇವಾಡಿಗ ಆಯ್ಕೆ

0
401

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಕೋಟ ಹೋಬಳಿ ವ್ಯಾಪ್ತಿಯಲ್ಲಿ ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 26ರ ಸಂಭ್ರಮ ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಬರುವ ಜೂ.11ರ ಬೆಳಿಗ್ಗೆ 10.ಗ ನಡೆಯಲಿದೆ. ಈ ಬಾರಿ ಕೋಟ ಹರ್ತಟ್ಟು ಪರಿಸರದ ಹಿರಿಯ ಕೃಷಿ ಕಾಯಕ ಜೀವಿ ಶ್ರೀಧರ (ಸಿದ್ಧ) ದೇವಾಡಿಗ ಇವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಗುವುದು ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here