ಕುಂದಾಪುರ ಮಿರರ್ ಸುದ್ದಿ…
ಕೋಟ: ಯಕ್ಷಾಂತರಂಗ ವ್ಯವಸಾಯೀ ಯಕ್ಷತಂಡ ಡಾ.ಕೋಟ ಶಿವರಾಮ ಕಾರಂತ ಥೀಂ ಪಾರ್ಕ ಇವರ ಆಶ್ರಯದಲ್ಲಿ ಯಕ್ಷ ವಿಭೂಷಣ ನೂತನ ಯಕ್ಷಾಭರಣ ಹಾಗೂ ಸಪ್ತಮ ವಾರ್ಷಿಕೋತ್ಸವ ಸಂಭ್ರಮ,ಕಾರಂತ ಯಕ್ಷಾಂತರಂಗ ಪ್ರಶಸ್ತಿ ಪ್ರದಾನ ಸಮಾರಂಭ ಜು.1ರಂದು ಹಯಗ್ರೀವ ಕಲ್ಯಾಣ ಮಂಟಪ ತೆಕ್ಕಟ್ಟೆ ಇಲ್ಲಿ ನಡೆಯಲಿದೆ.
ಕಾರಂತ ಯಕ್ಷಾಂತರಂಗ ಪ್ರಶಸ್ತಿಗೆ ಹಿರಿಯ ಹಾಸ್ಯ ಯಕ್ಷ ಕಲಾವಿದ ಕಮಲಶಿಲೆ ಮಹಾಬಲ ದೇವಾಡಿಗ ಆಯ್ಕೆಯಾಗಿದ್ದಾರೆ. ಅಲ್ಲದೆ ಸಂಸ್ಥೆಯ ಕಲಾವಿದರಿಂದ ಕನಕಾಂಗಿ ಕಲ್ಯಾಣ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಯಕ್ಷಾಂತರಂಗದ ಕೃಷ್ಣಮೂರ್ತಿ ಉರಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












