ಪಂಚವರ್ಣ ಸಂಸ್ಥೆಯ 171ನೇ ಪರಿಸರಸ್ನೇಹಿ ಅಭಿಯಾನ ರಾಷ್ಟ್ರೀಯ ಹೆದ್ದಾರಿ ಬ್ಯ್ಲಾಕ್ ಸ್ಪಾಟ್ ಸ್ಥಳ ಸೇರಿದಂತೆ ವಿವಿಧ ಕಡೆಗಳಲ್ಲಿ ವನಮಹೋತ್ಸವ

0
243

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಸಂಯುಕ್ತ ಆಶ್ರಯದಲ್ಲಿ ಪರಿಸರಸ್ನೇಹಿ ಅಭಿಯಾನಕ್ಕೆ 171ನೇ ವಾರದ ಸಂಭ್ರಮ ಆ ಪ್ರಯುಕ್ತ ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಗೀತಾನಂದ ಫೌಂಡೇಶನ್ ಮಣೂರು ಕೊಡಮಾಡಿದ ಗಿಡಗಳನ್ನು ಕೋಟ ಹರ್ತಟ್ಟು ,ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯ್ಲಾಕ್ ಸ್ಪಾಟ್ ಸ್ಥಳದಲ್ಲಿ ಗಿಡ ನೆಟ್ಟು ತಮ್ಮ ಪರಿಸರ ಸಂರಕ್ಷಿಸುವ ಮಹತ್ಕಾರ್ಯವನ್ನು ಆಯೋಜಿಸಿಕೊಂಡಿತು.

Click Here

ಕೋಟ ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಚಾಲನೆ ನೀಡಿದರು.ಸ್ಥಳೀಯ ಹಿರಿಯ ನಾಗರಿಕರಾದ ವಿಠ್ಠಲ್ ದೇವಾಡಿಗ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್,ಸಂಚಾಲಕ ಅಮೃತ್ ಜೋಗಿ,ಕಾರ್ಯದರ್ಶಿ ಸುಧೀಂದ್ರ ಜೋಗಿ,ಸಂಘಟನಾಕಾರ್ಯದರ್ಶಿ ಗಿರೀಶ್ ಆಚಾರ್,ಸದಸ್ಯರಾದ ಭಾಸ್ಕರ್ ದೇವಾಡಿಗ,ಶಶಿಧರ ತಿಂಗಳಾಯ,ಕೃಷ್ಣ ಕಾಂಚನ್,ಕಾರ್ತಿಕ್ ಎನ್,ಅಶ್ವಿನ್ ಮಟಪಾಡಿ,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್,ಸದಸ್ಯೆ ಸಾನಿಕಾ,ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ಲಲಿತಾ ಗಿಳಿಯಾರು ಮತ್ತಿತರರು ಉಪಸ್ಥಿತರಿದ್ದರು.ಪಂಚವರ್ಣ ಸಂಸ್ಥೆಯ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Click Here

LEAVE A REPLY

Please enter your comment!
Please enter your name here