ನಾಳೆ ಕುಂದಾಪುರದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

0
418

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಬಿಜೆಪಿಯ ಕುಟಿಲ ರಾಜನೀತಿ ಹಾಗೂ ರಾಹುಲ್ ಗಾಂಧಿಯವರ ತೇಜೋವಧೆ ನಡೆಸುತ್ತಿರುವುದರ ವಿರುದ್ಧ ನಾಳೆ ಕುಂದಾಪುರದಲ್ಲಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸಲಿದೆ.

Click Here

ರಾಹುಲ್ ಗಾಂಧಿಯವರು ವಿವಿಧ ವೇದಿಕೆಯಲ್ಲಿ ಮೋದಿ ಹಾಗೂ ಅದಾನಿ ನಡುವಿನ ಸಂಬಂಧವನ್ನು ನಿರಂತರವಾಗಿ ಬಹಿರಂಗಪಡಿಸುತ್ತಿದ್ದಾರೆ. ಈ ನಿರ್ಭೀತಿ ನಡೆಯನ್ನು ಸಹಿಸಿಕೊಳ್ಳದೆ ಮೋದಿ ಪದನಾಮ ಬಳಕೆಯನ್ನೇ ನೆಪವಾಗಿರಿಸಿಕೊಂಡು ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಕೇಂದ್ರ ಸರಕಾರ ಹಾಗೂ ಬಿಜೆಪಿಯ ಸೇಡಿನ ಹುನ್ನಾರವನ್ನು ಪ್ರತಿಭಟಿಸಿ ಈ ಪ್ರತಿಭಟನೆ ನಡೆಯಲಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

Click Here

LEAVE A REPLY

Please enter your comment!
Please enter your name here