ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ – ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

0
467

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿ.ಎ. ಫೌಂಡೇಶನ್ ಹಾಗೂ ಇಂಟರ್ ಮೀಡಿಯೇಟ್ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಜುಲೈ10ರಂದು ಸನ್ಮಾನಿಸಲಾಯಿತು.

Click Here

ಮೇ 2023ರಲ್ಲಿ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯ ಗ್ರೂಪ್ ಎರಡರಲ್ಲಿ ತೇರ್ಗಡೆ ಹೊಂದಿದ ಶ್ರಾವ್ಯ, ರೋಹನ್, ಚೇತನಾ, ಮಂದಾರ್ ಮತ್ತು ಗ್ರೂಪ್ ಒಂದರಲ್ಲಿ ತೇರ್ಗಡೆ ಹೊಂದಿದ ನಾದಶ್ರೀ, ರಂಜನ್, ಶಾಂಭವಿ, ಅನುಷಾ ಹಾಗೂ ಡಿಸೆಂಬರ್ 2022ರಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಂಕಿತ ಮೊಗವೀರ, ಸುಜನರಾಣಿ, ಸುಚಿ ಸಿ. ಶೆಟ್ಟಿ, ಪನ್ನಗ, ಗಣೇಶ್ ಭಟ್ ಇವರೆಲ್ಲರನ್ನು ಸಂಸ್ಥೆಯ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿಯವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ಪ್ರೀತಿ ಹೆಗ್ಡೆ, ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಹಾಗೂ ಕಾಲೇಜಿನ ಸಿ.ಎ. ಮತ್ತು ಸಿ.ಎಸ್. ಸಂಯೋಜಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರ್ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here