ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಅಧ್ಯಕ್ಷರಾದ ಜಯಕರ್ ಶೆಟ್ಟಿ ಅವರನ್ನು ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ ವತಿಯಿಂದ ಗೌರವಿಸಲಾಯಿತು.
ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಗಣನೀಯ ಸೇವೆಗಾಗಿ ಲಯನ್ಸ್ ಕ್ಲಬ್ ಪರವಾಗಿ ಮಾಜಿ ಜಿಲ್ಲಾ ಗವರ್ನರ್ ನೀಲಕಾಂತ ಎಂ ಹೆಗ್ಡೆಯವರು ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಿ, ಸಂಸ್ಥೆಯಿಂದ ಮತ್ತಷ್ಟು ಸೇವಾ ಕಾರ್ಯಗಳು ಸಮಾಜಕ್ಕೆ ರೆಡ್ ಕ್ರಾಸ್ ಸಂಸ್ಥೆಯಿಂದ ಆಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷೆ ಆಶಾ ಶಿವರಾಮ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷೆ ಸರಸ್ವತಿ ಪುತ್ರನ್ , ಕಾರ್ಯದರ್ಶಿ ಅಧಿಕಾರಿ ಕಲ್ಪನಾ ಭಾಸ್ಕರ್ ನಿಕಟಪೂರ್ವ ಕಾರ್ಯದರ್ಶಿ ಜಯಶೀಲ ಕಾಮತ್, ಲಯನ್ಸ್ ಹಿರಿಯರಾದ ಅರುಣ್ ಕುಮಾರ್ ಹೆಗ್ಡೆ, ರವಿರಾಜ್ ನಾಯಕ್, ಏಕನಾಥ ಬೋಳಾರ್, ಭೋಜರಾಜ್ ಶೆಟ್ಟಿ, ನವೀನ್ ಶೆಟ್ಟಿ , ಅಕ್ಷಯ ಹೆಗಡೆ, ಭಾರತೀಯ ರೆಡ್ ಕ್ರಾಸ್ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳಾದ ಗಣೇಶ್ ಆಚಾರ್ಯ, ವೈ ಸೀತಾರಾಮ್ ಶೆಟ್ಟಿ, ಶಿವರಾಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಡಾ.ವಾಣಿಶ್ರೀ ಐತಾಳ್ ಸ್ವಾಗತಿಸಿ, ಡಾ. ಮೈತ್ರಿ ಪ್ರಸ್ತಾಪಿಸಿದರು, ಶ್ರೀವಿದ್ಯಾ, ಡಾ. ಶಿಲ್ಪಾ ಸಹಕರಿಸಿದರು. ದೀಪಿಕಾ ಸಾಮಗ ವಂದಿಸಿದರು. ಚಂದ್ರಿಕಾ ಧನ್ಯ ಕಾರ್ಯಕ್ರಮ ನಿರೂಪಿಸಿದರು.











