ಕುಂದಾಪುರ :ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಕುಂದಾಪುರ ಕನ್ನಡ ಸಂಭ್ರಮ

0
347

Click Here

Click Here

“ಅಬ್ಬಿ ಭಾಷೆ ಮಾತಾಡುಕೆ ಚಂದ, ಅದನ್ನು ಮರೆತ್ರೆ ನಾವು ನಮ್ಮನ್ನ ಮರೆತಂತೆ ” – ಪ್ರೋ . ಎಂ.ಬಾಲಕೃಷ್ಣ ಶೆಟ್ಟಿ

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ನಮ್ಮ ಬದುಕಿನಲ್ಲಿ ಜ್ಞಾನ, ಮೌಲ್ಯ, ಶಿಸ್ತು-ಸಂಯಮದ ಭಾಗವಾಗಿ ಕುಂದಾಪುರ ಕನ್ನಡ ಭಾಷೆಯಿದೆ. ಹಳ್ಳಿಯ ಭಾಷೆ ಜನಪದ ಸೊಗಡಿನಿಂದ ಕೂಡಿದೆ. ಹಾದಿ ಮೇಲೆ ಹೋಪರ್ ಹಾಡೆಂದು ಕಾಣ್ಬೇಡಿ.. ಹಾಡಲ್ಲ ನನ್ನ ಒಡಲೂರಿ.. ಎಂದು ಹೇಳಿದ ಮಾತಿನ ಶೈಲಿಯನ್ನು ವರ್ಣಿಸಿದರು.

ಅವರು ಜುಲೈ 17 ರಂದು ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ತಿರಿಗೆ ಭತ್ತವನ್ನು ತುಂಬುವ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿ ಮಾತನಾಡಿದರು.

Click Here

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಅವರು ಮಾತನಾಡಿ “ಮಕ್ಕಳಿಗೆ ತಮ್ಮ ನೆಲದ ಸಂಸ್ಕೃತಿ ‘ಮೌಲ್ಯ ಅರಿವಾಗಬೇಕು ಆ ನಿಟ್ಟಿನಲ್ಲಿ ಇಂತಹ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳುತ್ತಿದ್ದೇವೆ. ಇವು ಮಕ್ಕಳ ಬದುಕಿಗೆ ಮಾರ್ಗದರ್ಶನವಾಗಬೇಕೆಂದರು.

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಖಜಾಂಚಿಯಾದ ಭರತ್ ಶೆಟ್ಟಿಯವರು ಸಭೆಯನ್ನು ಉದ್ದೇಶಿಸಿ “ಕುಂದಾಪುರ ಕನ್ನಡ ಕೆಂಬುಕ್ ಚಂದ . ಈ ಭಾಷೆ ಬಳಸುದರ ಮೂಲಕ ಇನ್ನಷ್ಟು ಬೆಳೆಸಬೇಕು. ಭಾಷೆ ನಶಿಸಿ ಹೋದರೆ ಒಂದು ಸಂತತಿ ನಾಶವಾದಂತೆ ” ಎಂದರು.

ವಿಶ್ವ ಕುಂದಾಪುರ ಕನ್ನಡ ದಿನದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪರ್ಣಿಕ ಸ್ವಾಗತಿಸಿ , ಶಾಧನ ದೇವಾಡಿಗ ನಿರೂಪಿಸಿ , ಪ್ರಾರ್ಥನ ವಂದಿಸಿದರು. ವೇದಿಕೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಅಗಸ್ಟಿನ್ ಕೆ. ಎ ಉಪಸ್ಥಿತರಿದ್ದರು. ಹಾಗೂ ಕಾಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.

Click Here

LEAVE A REPLY

Please enter your comment!
Please enter your name here