ಕುಂದಾಪುರ ಮಿರರ್ ಸುದ್ದಿ…
ಕೋಟ: ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದ, ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ (ಸಿ ಸಿ ಆರ್ ಟಿ) ನಡೆಸಿದ , 2020-2021,ಭಾರತದ ಯುವ ಪ್ರತಿಭಾ ಶೋಧದಲ್ಲಿ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಯುವ ಪ್ರತಿಭೆ, ವಿದ್ಯಾರ್ಥಿವೇತನ ಪ್ರಶಸ್ತಿಗೆ, ಉಡುಪಿ ಜಿಲ್ಲೆಯಿಂದ ಏಕೈಕ ಅಭ್ಯರ್ಥಿಯಾಗಿ ಮಣೂರು ಗ್ರಾಮದ ನೇಹಾ ಹೊಳ್ಳ ಆಯ್ಕೆಯಾಗಿದ್ದಾರೆ. ಇವರು ಮಣೂರು ಡಾ.ಎಂ.ವಿ ಹೊಳ್ಳ , ಶಾರದಾ ಹೊಳ್ಳ ಇವರ ಪುತ್ರಿ. ಇವರು ಕಳೆದ 9 ವರ್ಷಗಳಿಂದ ವಿದ್ವಾನ್ ಸತೀಶ್ ಭಟ್ ಮಾಳಕೊಪ್ಪ ಇವರ ಬಳಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸಗೈಯುತ್ತಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ 2023 ಮಾರ್ಚ್ನಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ವಿಭಾಗದ ಸೀನಿಯರ್ ಪರೀಕ್ಷೆಯನ್ನು ಉನ್ನತ ಶ್ರೇಣಿಯಲ್ಲಿ ಮುಗಿಸಿದ್ದಾರೆ.











