ಕುಂದಾಪುರ :ಕೊಂಡಳ್ಳಿಯಲ್ಲಿ ವರ್ಗಾವಣೆ ಹೊಂದಿದ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ

0
315

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕಳೆದ ಐದು ವರ್ಷಗಳಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಳ್ಳಿಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ಮೊಳಹಳ್ಳಿ ಶಾಲೆಗೆ ವರ್ಗಾವಣೆ ಹೊಂದಿದ ಗೋವಿಂದ ಎಸ್ ರನ್ನು ಶಾಲಾಭಿವೃದ್ಧಿ ಮತ್ತು ಮೇಲು ಉಸ್ತುವಾರಿ ಸಮಿತಿ, ಪೋಷಕರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳ ಪರವಾಗಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರನಾರಾಯಣ ಭಟ್ ಕೊಂಡಳ್ಳಿಯವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

Click Here

ಈ ಸಂದರ್ಭದಲ್ಲಿಎಸ್.ಡಿ.ಎಂ.ಸಿ ಅಧ್ಯಕ್ಷರಾದ ಭಾಸ್ಕರ ನಾಯ್ಕ , ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಲಾಲ, ಗ್ರಾಮ ಪಂಚಾಯತ್ ಸದಸ್ಯ ಗುರುದತ್ ಶೇಟ್, ಶಂಕರನಾರಾಯಣ ರೋಟರಿ ಕ್ಲಬ್ ಅಧ್ಯಕ್ಷ ಶರತ್ ಹೆಗ್ಡೆ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಆರ್ ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆ ವಿನೋದಾ ಶೆಟ್ಟಿ ಉಪಸ್ಥಿತರಿದ್ದರು.

ಪ್ರಭಾರ ಮುಖ್ಯ ಶಿಕ್ಷಕ ರಾಮ ಮೊಗವೀರ ಸ್ವಾಗತಿಸಿ, ಪ್ರಸ್ಥಾವನೆಗೈದರು. ಸಹಶಿಕ್ಷಕಿ ಸುಜಾತ ಎಚ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here