ಪಂಚವರ್ಣ ಸಂಸ್ಥೆಯ ರಜತ ಗೌರವ ಪ್ರದಾನ ಸಮಾರಂಭ ಸೇವೆಯೇ ಉರಾಳರನ್ನು ಬಹು ಎತ್ತರಕ್ಕೆ ಕೊಂಡ್ಯೊಯ್ದಿದೆ – ನರೇಂದ್ರ ಕುಮಾರ್ ಕೋಟ

0
397

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಉರಾಳರ ವ್ಯಕ್ತಿತವೇ ಸಾಧಕರಿಗೆ ದಾರಿ ದೀಪ ಎಂದು ಸಾಹಿತಿ ,ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು.
ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ರಜತ ಗೌರವಾರ್ಪಣೆ ಎಂಟನೇ ಸಾಧಕ ಶಕ್ತಿ ರಾಜ್ಯದ ಪ್ರಸಿದ್ಧ ಆಯುರ್ವೇದ ವೈದ್ಯ ವೆರಿಕೋಸ್ ತಜ್ಞ ಡಾ.ಎಂ.ವಿ ಉರಾಳರಿಗೆ ಪಂಚವರ್ಣ ರಜತ ಗೌರವ ಕಾರ್ಯಕ್ರಮದಲ್ಲಿ ಅಭಿನಂದನಾ ಮಾತುಗಳನ್ನಾಡಿ ವೆರಿಕೋಸ್ ಎನ್ನುವ ರೋಗವನ್ನು ಗುಣಪಡಿಸುವ ಜೊತೆಗೆ ರಾಜ್ಯಾದ್ಯಂತ ತನ್ನ ಶಾಖೆಗಳನ್ನು ತೆರೆದು ಅದೆಷ್ಟೊ ಬಡ ರೋಗಿಗಳ ಕಣ್ಣಿರೊರೆಸುವ ಕಾಯಕ ಮಾಡುತ್ತಿದ್ದಾರೆ. ಇದು ಉರಾಳರನ್ನು ಬಹು ಎತ್ತರಕ್ಕೆ ಬೆಳೆಯಲು ಸಹಕಾರಿಯಾಗಿದೆ. ಜೀವನದಲ್ಲಿ ಭರವಸೆ ಇಟ್ಟುಕೊಂಡು ಜೀವನ ಸಾಗಿಸಬೇಕು ಅದು ನಮ್ಮ ಬದುಕಿಗೆ ದಿಕ್ಸೂಚಿಯಾಗಿ ಕಾಣಬೇಕು ಎಂದರಲ್ಲದೆ ಗ್ರಾಮೀಣ ಭಾಗದಲ್ಲಿ ಹುಟ್ಟಿ ವೈದ್ಯಕೀಯ ಲೋಕದಲ್ಲಿ ಹೊಸ ಭಾಷ್ಯ ಬರೆಯುವ ಉರಾಳರ ಬದುಕಿನ ಆಯಾಮ ಇಂದಿನ ಹಾಗೂ ಮುಂದಿನ ಜನಾಂಗಕ್ಕೆ ಮಾದರಿಯಾಗಿದೆ.ಇಂಥಹ ಸಾಧಕರಿಗೆ ಒಂದು ಶ್ರೇಷ್ಠ ಸಂಸ್ಥೆ ರಜತ ಗೌರವ ನೀಡುವುದು ಅರ್ಥಪೂರ್ಣ ವ್ಯವಸ್ಥೆಗೆ ಹಿಡಿದಕೈಗನ್ನಡಿ ಎಂದು ಅಭಿಪ್ರಾಯಪಟ್ಟರು.

Click Here

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಎಂ.ಎನ್ ಮಧ್ಯಸ್ಥರು ಡಾ.ಎಂ ವಿ ಉರಾಳರಿಗೆ ಪಂಚವರ್ಣ ರಜತ ಗೌರವ ಪ್ರದಾನಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕ ಸೀತಾರಾಮ ಶೆಟ್ಟಿ ಕೊಯ್ಕೂರು, ಸ್ನೇಹಕೂಟ ಮಣೂರು ಅಧ್ಯಕ್ಷೆ ಭಾರತಿ ವಿ ಮಯ್ಯ,ಪಂಚವರ್ಣ ಯುವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್,ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು.ಪಂಚವರ್ಣ ಯುವಕ ಮಂಡಲದ ಕಾರ್ಯದರ್ಶಿ ಸುಧೀಂದ್ರ ಜೋಗಿ ಸ್ವಾಗತಿಸಿದರು.ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿ ಕಾರ್ಯಕ್ರಮ ಸಂಯೋಜಿಸಿದರು.ಶಶಿಧರ ತಿಂಗಳಾಯ ಸಹಕರಿಸಿದರು.ಈ ಸಂದರ್ಭದಲ್ಲಿ ಉರಾಳಸ್ ವತಿಂದ ಅಶ್ವಥ ಗೀಡ ನಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

Click Here

LEAVE A REPLY

Please enter your comment!
Please enter your name here