ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ – ಕಾರ್ಗಿಲ್ ವಿಜಯ ದಿವಸ

0
330

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ ದೇಶದ ಐತಿಹಾಸಿಕ ಗೆಲುವಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ಅಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ಅಪ್ರತಿಮ ಯಶಸ್ಸಿನ ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತು ಭಾರತೀಯ ಸೈನ್ಯದ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

Click Here

ಈ ಸಂದರ್ಭದಲ್ಲಿ ಗ್ರಂಥಪಾಲಕರಾದ ಮಹೇಶ್ ನಾಯ್ಕ್ ಪ್ರಾರ್ಥಿಸಿದರು. ವಾಣಿಜ್ಯ ಉಪನ್ಯಾಸಕ ಹಾಗೂ ಎನ್.ಸಿ.ಸಿ. ಕೇರ್ ಟೇಕರ್ ಶರತ್ ಕುಮಾರ್ ವಂದಿಸಿದರು. ನಿರ್ವಹಣಾ ವಿಭಾಗದ ಉಪನ್ಯಾಸಕಿ ಅವಿತಾ ಕೊರೆಯಾ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here